Updated News From Kaup

ಉಚ್ಚಿಲ : ಬಹುಭಾಷಾ ನಟ ಸುಮನ್ ತಲ್ವಾರ್ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳ ಭೇಟಿ

Posted On: 31-10-2023 07:51PM

ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಖ್ಯಾತ ಬಹುಭಾಷಾ ನಟ ಸುಮನ್ ತಲ್ವಾರ್ ಭೇಟಿ ನೀಡಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಪ್ರಸಾದ ವಿತರಿಸಿದರು. ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಅವರು ದೇವಳದ ವತಿಯಿಂದ ಸುಮನ್ ತಲ್ವಾರ್ ರವರನ್ನು ಅಭಿನಂದಿಸಿದರು.

ಈ ಸಂದರ್ಭ ದೇವಳದ ಸಿಬ್ಬಂದಿ ವರ್ಗ, ಅರ್ಚಕ ವರ್ಗ ಉಪಸ್ಥಿತರಿದ್ದರು.

ಶಿರ್ವ : ಹಿಂದೂ ಜೂನಿಯರ್ ಕಾಲೇಜು - ಜೇಸಿ ಇಂಡಿಯಾ ವಿದ್ಯಾರ್ಥಿವೇತನ ವಿತರಣೆ

Posted On: 30-10-2023 09:34PM

ಶಿರ್ವ : ಹಿಂದೂ ಜೂನಿಯರ್ ಕಾಲೇಜು ಶಿರ್ವ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಮನವಿಯ ಮೇರೆಗೆ ಜೇಸಿ ಇಂಡಿಯಾ ವಿದ್ಯಾರ್ಥಿವೇತನ ಕಾರ್ಯಕ್ರಮ 2023ರ ಯೋಜನೆಯಡಿಯಲ್ಲಿ, ಜೇಸಿ ಮಂಗಳೂರು ಲಾಲ್ ಬಾಗ್ ಇವರು ಕೊಡಮಾಡಲ್ಪಟ್ಟ ವಿದ್ಯಾರ್ಥಿವೇತನವನ್ನು ಸೋಮವಾರ ಹಿಂದೂ ಜೂನಿಯರ್ ಕಾಲೇಜು ಶಿರ್ವ ಕಾಲೇಜಿನ ಪ್ರಾಂಶುಪಾಲರಾದ ಭಾಸ್ಕರ್ ಎ. ಇವರಿಗೆ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ಸಂಯೋಜಕರಾದ ಕುತ್ಯಾರು ಕಿಶೋರ್ ಶೆಟ್ಟಿಯವರು ಹಸ್ತಾಂತರಿಸಿದರು.

ಸದ್ರಿ ಯೋಜನೆಯಲ್ಲಿ ಕಾಲೇಜಿನ ಒಟ್ಟು ಹತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜೇಸಿ ಮಂಗಳೂರು ಲಾಲ್ ಬಾಗ್ ಅಧ್ಯಕ್ಷೆ ಜೆಎಫ್ಎಂ ಶಿಲ್ಪಾ ಮುಲ್ಕಿ, ಸಂಘದ ಅಧ್ಯಕ್ಷರಾದ ರಮಾನಂದ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಮಾರ್ಗದರ್ಶಕರಾದ ರಾಜಗೋಪಾಲ್ ಕೆ, ಪ್ರಶಾಂತ್ ಬಿ ಶೆಟ್ಟಿ, ಖಜಾಂಚಿ ಉಮೇಶ್ ಆಚಾರ್ಯ, ಕ್ರಿಕೆಟ್ ತರಬೇತುದಾರರಾದ ಸದಾನಂದ ಎಸ್ ಹಾಗೂ ಶಿಕ್ಷಕ - ಶಿಕ್ಷಕೇತರ ವೃಂದದವರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಡಿಸೆಂಬರ್ 17 : ಕುಲಾಲ ಸಮಾಜ ಬಾಂಧವರಿಗಾಗಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ - ಕುಲಾಲ ಟ್ರೋಫಿ : 2023

Posted On: 30-10-2023 09:27PM

ಕಾಪು : ಕುಲಾಲ ಸಂಘ ಪೆರ್ಡೂರು ಹಾಗೂ ಕುಲಾಲ ಸೇವಾದಳ ಇವರ ಆಶ್ರಯದಲ್ಲಿ ಕುಲಾಲ ಟ್ರೋಫಿ -2023 ಕ್ರಿಕೆಟ್ ಪಂದ್ಯಾಟವು ಪೆರ್ಡೂರು ಪ್ರೌಢಶಾಲಾ ಮೈದಾನದಲ್ಲಿ ಡಿಸೆಂಬರ್ 17, ಭಾನುವಾರ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ಎಂದು ಪಂದ್ಯಾಟ ಆಯೋಜನೆಯ ಪ್ರಮುಖರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 9844616085 9902205793 9844552875

ಉಡುಪಿ : ಮತ್ಸ್ಯ ಮೇಳ - 2023 ಕಾರ್ಯಕ್ರಮ

Posted On: 28-10-2023 08:05PM

ಉಡುಪಿ : ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾಲಕ ಇಲಾಖೆ, ಸ್ಕೊಡ್ ವೆಸ್ ಸಂಸ್ಥೆ-ಶಿರಸಿ ಮತ್ತು ಉಡುಪಿ, ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಅಮಿಟೆಡ್ ಇವರ ಜಂಟಿ ಆಶ್ರಯದಲ್ಲಿ ಶನಿವಾರ ಲಕ್ಷ್ಮೀ ಸೋಮ ಬಂಗೇರ ಸಹಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಇಲ್ಲಿ ಮತ್ಸ್ಯ ಮೇಳ - 2023 ಕಾರ್ಯಕ್ರಮ ಜರಗಿತು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಕಡಲನ್ನು ನಂಬಿಕೊಂಡು ಬದುಕು ಕಟ್ಟಿಕೊಂಡವರು ಮೊಗವೀರ ಸಮಾಜದವರು. ದೋಣಿಯ ಮೂಲಕ ಆರಂಭವಾದ ಮೀನುಗಾರಿಕಾ ಚಟುವಟಿಕೆ ಇಂದು ದೋಣಿಯ ಜೊತೆಯಲ್ಲಿ ಯಂತ್ರೋಪಕರಣಗಳ ಸಹಾಯದಿಂದ ಮುಂದುವರೆಯುತ್ತದೆ ಜೊತೆಗೆ ಅನೇಕರಿಗೆ ಉದ್ಯೋಗಾವಕಾಶ ಮಾಡಿಕೊಟ್ಟಿದೆ ಎಂದರು.

ಈ ಸಂದರ್ಭ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಗೀತಾಂನದ ಫೌಂಡೇಶನ್ ಕೋಟ ಪಡುಕೆರೆ ಪ್ರವರ್ತಕರಾದ ಆನಂದ್ ಸಿ ಕುಂದರ್, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಲಿಮಿಟೆಡ್ ಅಧ್ಯಕ್ಷರಾದ ಲೋಹಿತ್ ಖಾರ್ವಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್, ಸ್ಕೊಡ್ ವೆಸ್ ಸಂಸ್ಥೆ ಕಾರ್ಯ ನಿರ್ವಾಹಕರಾದ ಡಾ. ವೆಂಕಟೇಶ ಎಲ್. ನಾಯ್ಕ್, ಹನುಮಂತಪ್ಪ, ಮೀನುಗಾರಿಕಾ ಜಂಟಿ ನಿರ್ದೇಶಕರಾದ ವಿವೇಕ್ ಉಪಸ್ಥಿತರಿದ್ದರು.

ಓಮನ್ ಬಿಲ್ಲವಾಸ್ : ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಸಂಪನ್ನ

Posted On: 28-10-2023 03:22PM

ಗಲ್ಫ್ ರಾಷ್ಟ್ರದ ರಾಜಧಾನಿ ಮಸ್ಕಟ್ ನಲ್ಲಿ ಓಮನ್ ಬಿಲ್ಲವಾಸ್ ಸಂಘಟನೆಯ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಬಹಳ ವಿಜೃಂಭಣೆಯಿಂದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

ಪುರೋಹಿತರಾದ ಶ್ರೀ ಚರಣ್ ಶಾಂತಿ ಕಟಪಾಡಿ ಯವರ ನೇತೃತ್ವದಲ್ಲಿ ದೇವರ ವಿಸ್ತಾರವಾದ ಕಥೆ, ಭಕ್ತಿಯ ಪೂಜಾ ಕೈಂಕರ್ಯ, ಭಜನೆ, ಚೆಂಡೆ, ಮಹಿಳೆಯರಿಂದ ಕಳಸ ಪ್ರದಾನ ನೃತ್ಯ ಹಾಗೂ ಸೇರಿದ ಜನರ ಭಕ್ತಿ ಭಾವದೊಂದಿಗೆ ಕಾರ್ಯಕ್ರಮವು ಬಹಳ ಸುಸೂತ್ರವಾಗಿ ನೆರವೇರಿಸಲ್ಪಟ್ಟಿತು.

ಈ ಸಂಧರ್ಭ ಓಮನ್ ಬಿಲ್ಲವಾಸ್ ಸಂಘಟನೆಯ ಅಧ್ಯಕ್ಷ ಸುಜಿತ್ ಅಂಚನ್, ಮಾಜಿ ಅಧ್ಯಕ್ಷ ಹಾಗೂ ಸ್ಥಾಪಕ ಸದಸ್ಯ ಎಸ್. ಕೆ. ಪೂಜಾರಿ, ಕಾರ್ಯಕಾರಿ ಸಮಿತಿ, ಸದಸ್ಯರು, ವಿವಿಧ ಸಂಘಟನೆಗಳ ಮುಖ್ಯಸ್ಥರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. B

ಉಡುಪಿ : ಎಬಿವಿಪಿ ವತಿಯಿಂದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ

Posted On: 28-10-2023 02:47PM

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು. ನಗರ ಕಾರ್ಯದರ್ಶಿ ಶ್ರೀವತ್ಸ ಅವರು ಮಾತನಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ವಿಶೇಷವಾಗಿ ಉಡುಪಿ ದಕ್ಷಿಣ ಕನ್ನಡ ಭಾಗದ ಮನೆಗಳಲ್ಲಿ ಬೀಡಿ ಕಟ್ಟಿ ಜೀವನ ನಡೆಸುವವರ ಬಡ ಮಕ್ಕಳಿಗೆ ಬರುವ ವಿದ್ಯಾರ್ಥಿ ವೇತನ ಬಾರದೆ ಇರುವುದು ಅವಶ್ಯಕ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆ ಆಗುತ್ತಿದೆ.

ನಗರ ಕಾರ್ಯಕಾರಿಣಿ ಸದಸ್ಯರಾದ ಮಂಗಳಗೌರಿ ಅವರು ಮಾತನಾಡಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಹಾಗೂ ಇತರೆ ಇಲಾಖೆಯಡಿಯಲ್ಲಿ ಬರುವ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾರದೆ ಉಡುಪಿಯು ಸೇರಿದಂತೆ ರಾಜ್ಯಾದ್ಯಂತ ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ವಂಚಿರಾಗುತ್ತಿರುವುದು ಖಂಡನಿಯವೆಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಮಾತನಾಡಿ ರಾಜ್ಯ ಸರ್ಕಾರ ತನ್ನ ಗ್ಯಾರಂಟೀ ಮೂಲಕ ನಿರುದ್ಯೋಗಿಗಳಿಗೆ ಬತ್ತೆ ನೀಡುವುದರ ಬದಲು ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಬರುವಂತಹ ವಿದ್ಯಾರ್ಥಿ ವೇತನವನ್ನು ನೀಡಿದರೆ ನಿರುದ್ಯೋಗದ ಸಮಸ್ಯೆ ಉಲ್ಬಣವಾಗುವ ಮಾತೇ ಇರುವುದಿಲ್ಲ. ಕೊನೆಯಲ್ಲಿ ಅವರು ಮಾತನಾಡಿ, ಒಂದು ವೇಳೆ ನಾಳೆ ಉಡುಪಿಗೆ ಬರಲಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಒಂದು ವಾರದೊಳಗಾಗಿ ಸಮಸ್ಯೆಗೆ ಪರಿಹಾರ ವದಗಿಸದೇ ಹೋದಲ್ಲಿ ಉಡುಪಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಈ‌ ಸಂದರ್ಭ ಎಬಿವಿಪಿ ಪ್ರಮುಖರು ಉಪಸ್ಥಿತರಿದ್ದರು.

ಹೆಜಮಾಡಿ ಗಡಿಭಾಗದಲ್ಲಿ ಸಿ.ಎಂ.ಗೆ ಸ್ವಾಗತ

Posted On: 28-10-2023 02:39PM

ಹೆಜಮಾಡಿ : ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಶನಿವಾರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸ್ವಾಗತಿಸಲಾಯಿತು.

ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು.

ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ ಸಹಿತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿ ವರ್ಗ ಉಪಸ್ಥಿತರಿದ್ದರು.

ಕಾಪು : ಯುವ ನ್ಯಾಯವಾದಿ ನಾಗಾರ್ಜುನ ಕಾಪುರವರ ನೂತನ ಕಚೇರಿ ಉದ್ಘಾಟನೆ

Posted On: 26-10-2023 07:32PM

ಕಾಪು : ಇಲ್ಲಿನ ತೃಪ್ತಿ ಹೊಟೇಲ್ ನ ಜನಾರ್ಧನ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಯುವ ನ್ಯಾಯವಾದಿ ನಾಗಾರ್ಜುನ ಕಾಪು ತಮ್ಮ ನೂತನ ಕಚೇರಿಯನ್ನು ಆದಿತ್ಯವಾರದಂದು ಶುಭಾರಂಭಗೊಳಿಸಿದರು.

ಕಚೇರಿಯ ಉದ್ಘಾಟನೆಯನ್ನು ಉಡುಪಿ ಅಂಬಲಪಾಡಿ ಮತ್ತು ಕಾಪು ಮೂರನೇ ಮಾರಿಗುಡಿ ದೇವಳದ ‌ಪಾತ್ರಿಗಳಾದ ಗಿರೀಶ್ ಮತ್ತು ಕಾಪು‌ ಪುರಸಭೆ ಸದಸ್ಯೆ ಮೋಹಿನಿ ಗುಜ್ಜಿ ಮನೆ, ಶೇಖರ್ ಕಲ್ಯಾ, ಕಿಶೋರ್ ಪೊಲಿಪು,‌ ರಾಜು‌ ಶೆಟ್ಟಿ ‌ಮಂಡೇಡಿ, ಕೋಟೆ ಹಳೇ ಮಾರಿಯಮ್ಮ ದೇವಸ್ಥಾನ ಮೊಕ್ತೇಸರರಾದ ಜಯರಾಣ್ಯ, ಕಾಪು ಮೂರನೇ ಮಾರಿಯಮ್ಮ ದೇವಳದ ಉಚ್ಚಂಗಿ ಅರ್ಚಕರಾದ ಸದಾನಂದ‌ ರಾಣ್ಯ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಕಾರ್ಯಕ್ರಮಕ್ಕೆ ಪುತ್ತೂರಿನ ಎರಡನೇ ಜೆ.ಎಮ್ ಎಪ್.ಸಿ ನ್ಯಾಯಮೂರ್ತಿ ಯೋಗೆಂದ್ರ ಶೆಟ್ಟಿ, ಉಡುಪಿ ಬಾರ್ ಅಸೋಸಿಯೇಷನ್ ನೂತನ ಅಧಕ್ಷರಾದ ರೆನೊಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೇಶ್‌ ಆರ್, ಖಜಾಂಚಿ ಗಂಗಾಧರ ಎಚ್ ಎಮ್, ಹಿರಿಯ ವಕೀಲರಾದ‌ ನಾಗರಾಜ್ ಬಿ, ಮಧ್ವಾಚಾರ್ಯ, ಅಖಿಲ್ ಬಿ ಹೆಗ್ಡೆ, ಆರೂರು ಸುಕೇಶ್ ಶೆಟ್ಟಿ, ಸಹನಾ ಕುಂದರ್‌ ಸೂಡ, ಅನಂತ ನಾಯ್ಕ, ಅಶೋಕ್ ಎಸ್ ಭಟ್, ಕಿರಣ್ ಎಸ್ ಬಿ, ಭರತ್ ಪೈ, ಜಯಚಂದ್ರ ಕುಂದಾಪುರ, ಸಂತೋಷ್ ಹೇರೂರು, ಶಿವಪ್ರಸಾದ್, ರಾಘವೇಂದ್ರ ಶುಭಹಾರೈಸಿದರು.

ಕಾಪು : ತಾಲೂಕಿನ 16 ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸಾ ಅಭಿಯಾನ

Posted On: 25-10-2023 07:48PM

ಕಾಪು : ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾಪು ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕಾಪು ಇವರುಗಳ ಜಂಟಿ ಆಶ್ರಯದಲ್ಲಿ ಗ್ರೀನ್ ಪುಟ್ ಪ್ರಿಂಟ್ ಸಂಸ್ಥೆ ಚಿಕ್ಕಮಗಳೂರು ಇವರ ನೇತ್ರತ್ವದಲ್ಲಿ ಕಾಪು ತಾಲೂಕಿನ ಎಲ್ಲಾ 16 ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸ್ಥಳೀಯ ಪಂಚಾಯತ್ ಗಳ ಅನುದಾನದಿಂದ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸಾ ಅಭಿಯಾನ ಹಮ್ಮಿಕೊಳ್ಳಲಾಗದೆ.

ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರವಾಗಿ ಅವುಗಳ ಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವುದು ಮತ್ತು ಬೀದಿನಾಯಿಗಳಿಂದ ರೇಬಿಸ್ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಅವುಗಳಿಗೆ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮವೂ ಏಕಕಾಲದಲ್ಲಿ ನಡೆಯಲಿದೆ. ಈ ಅಭಿಯಾನ ಅಕ್ಟೋಬರ್ 25 ರಿಂದ ಪ್ರಾರಂಭವಾಗಿ ಒಂದು ತಿಂಗಳವರೆಗೆ ನಡೆಯಲಿದ್ದು ಸಾರ್ವಜನಿಕರು ಸಾಕುನಾಯಿಗಳನ್ನು ಬೀದಿಗೆ ಬಿಡಬಾರದಾಗಿ ವಿನಂತಿಸಲಾಗಿದೆ. ಹಾಗೆಯೇ ಗ್ರೀನ್ ಪುಟ್ ಪ್ರಿಂಟ್ ಸಂಸ್ಥೆಯ ಸಿಬ್ಬಂದಿಯವರು ಬೀದಿನಾಯಿಗಳನ್ನು ಹಿಡಿಯಲು ತಮ್ಮ ಗ್ರಾಮಗಳಿಗೆ ಬಂದಾಗ ಅವರಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

ಸದ್ರಿ ಸಂಸ್ಥೆಯವರು ಬೀದಿನಾಯಿಗಳನ್ನು ಹಿಡಿದು ತಂದು ಅವುಗಳಿಗೆ ಸಂತಾನಹರಣಶಸ್ತ್ರಚಿಕಿತ್ಸೆ ನಡೆಸಿ, ರೇಬಿಸ್ ಲಸಿಕೆ ನೀಡಿ, 3 ದಿನಗಳ ಕಾಲ ಅವುಗಳ ಅರೈಕೆ ಮಾಡಿ ನಂತರ ಯಾವ ಬೀದಿಯಲ್ಲಿ ಹಿಡಿದಿದ್ದಾರೊ ಅದೇ ಜಾಗದಲ್ಲಿ ಬಿಡಲಿದ್ದಾರೆ.

ಈ ಅಭಿಯಾನದ ಯಶಸ್ಸಿಗೆ ಕಾಪು ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ಅಧ್ಯಕ್ಷರು, ಸರ್ವ ಸದಸ್ಯರುಗಳು, ಪಂ. ಅ. ಅಧಿಕಾರಿಗಳು / ಸಿಬ್ಬಂದಿ ವರ್ಗ, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಲಾಗಿದೆ ಎಂದು ತಾಲೂಕು ಪಶು ವೈದ್ಯಾಧಿಕಾರಿ ಡಾ.ಅರುಣ್ ಹೆಗ್ಡೆ ತಿಳಿಸಿದ್ದಾರೆ.

ಕಾರ್ಕಳ ಶಾಸಕ ಸುನೀಲ್ ಕುಮಾರ್ : ಕಾಪು ಮಾರಿಗುಡಿ ಭೇಟಿ - ಕಾಮಗಾರಿ ವೀಕ್ಷಣೆ

Posted On: 25-10-2023 07:35PM

ಕಾಪು : ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.

ನಂತರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭ ಅವರು ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ, ಪ್ರಶಂಶಿಸಿ, ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆಯನ್ನು ನೀಡಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ದೇವಿಪಾತ್ರಿ ಗುರುಮೂರ್ತಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಜಗದೀಶ್ ಬಂಗೇರ, ಬಾಬು ಮಲ್ಲಾರ್, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ. ಶೆಟ್ಟಿ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.