Updated News From Kaup

ಕಾಪು : ಬಿ.ಜೆ.ಎಂ ಆಡಳಿತ ಸಮಿತಿ - ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಸನ್ಮಾನ

Posted On: 18-12-2023 07:08AM

ಕಾಪು : ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು-ಮಲ್ಲಾರು ಆಡಳಿತ ಸಮಿತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಉಡುಪಿ : ಬನ್ನಂಜೆ ಬಾಬು ಅಮೀನ್ 80 - ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ

Posted On: 17-12-2023 11:05AM

ಉಡುಪಿ : ಜಾನಪದ ಸಾಹಿತ್ಯ ಲೋಕದಲ್ಲಿ 21 ಕೃತಿಗಳನ್ನು ನೀಡಿದ ಬನ್ನಂಜೆ ಬಾಬು ಅಮೀನ್ ರವರಿಂದ ಮತ್ತಷ್ಟು ಕೃತಿಗಳು ಮೂಡಿ ಬರಲಿ. ಅವರ ಸಾರ್ವಕಾಲಿಕ ಚಿಂತನೆಯ ಕೃತಿಗಳು ನಮಗೆಲ್ಲರಿಗೂ ಆದರ್ಶ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ. ಶಂಕರ್ ಹೇಳಿದರು. ಅವರು ರವಿವಾರ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಜರಗಿದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಯನ್ನು ತುಳಸಿ ಕಟ್ಟೆಯ ತುಳಸಿ ಗಿಡಕ್ಕೆ ತೆನೆ ಕಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಡಿಸೆಂಬರ್ 17 : ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ 80 ; ಅಭಿನಂದನೆ ಕಾರ್ಯಕ್ರಮ - 'ಸಿರಿ ತುಪ್ಪೆ'

Posted On: 16-12-2023 06:28PM

ಉಡುಪಿ : ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಡಿಸೆಂಬರ್ 17 ರಂದು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 8.45ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವ ಅವರಿಂದ ತುಳು ಪಾಡ್ಡನ ನಡೆಯಲಿದೆ. ಬೆಳಗ್ಗೆ 11.45 ಕ್ಕೆ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪ್ರಬುದ್ಧ ಕಲಾವಿದರಿಂದ 'ಸುದರ್ಶನ ವಿಜಯ' ಯಕ್ಷಗಾನ ಪ್ರದರ್ಶನ ನಡೆಯಲಿದೆ. ಬನ್ನಂಜೆಯವರ ಜೀವನಗಾಥೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಮದ್ಯಾಹ್ನ 2.45 ಕ್ಕೆ ಪ್ರದರ್ಶನಗೊಳ್ಳಲಿದೆ. ಈ ಸಂದರ್ಭ ಅಳಿವಿನಂಚಿನಲ್ಲಿರುವ ತುಳುನಾಡಿನ ಪರಿಕರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಜನಪದದ ಇತರ ಪ್ರಕಾರಗಳ ಪ್ರಾತಕ್ಷಿತೆಯೂ ನಡೆಯಲಿದ್ದು, ಜನಪದ ನೃತ್ಯ ಆಯೋಜಿಸಲಾಗಿದೆ.

ಡಿಸೆಂಬರ್ 24 : ಕಿನಾರ ವರ್ಣೋತ್ಸವ - ಕಾಪು ತಾಲೂಕಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ

Posted On: 16-12-2023 05:54PM

ಎರ್ಮಾಳು : ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕಾಪು ತಾಲೂಕು ವ್ಯಾಪ್ತಿಯ ಮಕ್ಕಳಿಗೆ ಕಿನಾರ ವರ್ಣೋತ್ಸವ ಚಿತ್ರಕಲಾ ಸ್ಪರ್ಧೆ 24 ಡಿಸೆಂಬರ್ 2023 ನೇ ಅದಿತ್ಯವಾರ ಬೆಳಿಗ್ಗೆ ಗಂಟೆ 9.30ಕ್ಕೆ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.

ಎರ್ಮಾಳು : ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ರಥೋತ್ಸವ ಪ್ರಯುಕ್ತ ಧ್ವಜಾರೋಹಣ ಸಂಪನ್ನ

Posted On: 16-12-2023 05:29PM

ಎರ್ಮಾಳು : ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಗ್ಗೆ ಧ್ವಜಾರೋಹಣ ಸಂಪನ್ನಗೊಂಡಿತು.

ಫಾರೂಕ್ ಚಂದ್ರನಗರ ಇವರಿಗೆ ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Posted On: 16-12-2023 11:23AM

ಕಾಪು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಯು.ಎ.ಇ ದುಬೈ ಇವರ ವತಿಯಿಂದ ಕಾಪುವಿನ ಸಮಾಜ ಸೇವಕರು ಉದ್ಯಮಿಗಳಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಯನ್ನು ಗುರುತಿಸಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ದುಬೈನ ಉಡ್ಲಮ್ ಪಾರ್ಕ್ ಶಾಲಾ ಸಭಾಂಗಣದಲ್ಲಿ ನಡೆದ 2023-ದುಬೈ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.

ಕಾಪು ಲೀಲಾಧರ ಶೆಟ್ಟಿ ಸಾರ್ವಜನಿಕ ಶ್ರದ್ಧಾಂಜಲಿ ಸಂತಾಪ ಸಭೆ : ಪೂರ್ವಭಾವಿ ಸಭೆ

Posted On: 15-12-2023 11:05PM

ಕಾಪು : ಸಮಾಜರತ್ನ ಕಾಪು ಲೀಲಾಧರ ಶೆಟ್ಟಿಯವರ ಸಾರ್ವಜನಿಕ ಶ್ರದ್ಧಾಂಜಲಿ ಸಂತಾಪ ಸಭೆ ಡಿಸೆಂಬರ್ 18 ರಂದು ನಡೆಸುವ ಬಗ್ಗೆ ಪೂರ್ವಭಾವಿ ಸಭೆಯು ಶುಕ್ರವಾರ ಕಾಪು ಹೊಸ ಮಾರಿಗುಡಿ ದೇವಳದ ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ಕಾಪು ಬಂಟರ ಸಂಘದ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ ಮತ್ತು ಉದ್ಯಮಿ ಮನೋಹರ ಎಸ್. ಶೆಟ್ಟಿಯವರ ಉಪಸ್ಥಿತಿಯಲ್ಲಿ ವಿವಿಧ ಸಮುದಾಯದ ಮುಖಂಡರ ಸಮ್ಮುಖದಲ್ಲಿ ನಡೆಯಿತು.

ಕಾಪು : ಬಿರುವೆರ್ ಕಾಪು ಟ್ರೋಫಿ - 2023 ಕ್ರಿಕೆಟ್ ಪಂದ್ಯಾಕೂಟದ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆ

Posted On: 15-12-2023 06:32PM

ಕಾಪು : ಬಿರುವೆರ್ ಕಾಪು ಸೇವಾ ಸಮಿತಿ (ರಿ.) ಕಾಪು ಇದರ ಆಶ್ರಯದಲ್ಲಿ ಬಿಲ್ಲವ ಸಮಾಜ ಭಾಂದವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಬಿರುವೆರ್ ಕಾಪು ಟ್ರೋಫಿ - 2023 ಕ್ರಿಕೆಟ್ ಪಂದ್ಯಾಕೂಟ ಇದರ ಅಂಗವಾಗಿ ಆಟಗಾರರ (ಬಿಡ್ಡಿಂಗ್) ಹರಾಜು ಪ್ರಕ್ರಿಯೆಯು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇದರ ಶ್ರೀ ನಾರಾಯಣಗುರು ಸಭಾಭಾವನದಲ್ಲಿ ಸಮಾಜ ಸೇವಕಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು. ಬಿರುವೆರ್ ಕಾಪು ಸೇವಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಆರ್ ಕೋಟ್ಯಾನ್ ಕಾಪು ಅಧ್ಯಕ್ಷತೆ ವಹಿಸಿದ್ದರು.

ಜನಪದ ಸ್ವಾಭಿಮಾನದ ಅಭಿವ್ಯಕ್ತಿ : ಡಾ| ಗಣೇಶ ಗಂಗೊಳ್ಳಿ

Posted On: 14-12-2023 07:58PM

ಶಿರ್ವ : ಗ್ರಾಮೀಣ ಜನರು ತಮ್ಮ ಸುಖ, ದು:ಖಗಳ ಸಮ್ಮಿಳಿತ ಬದುಕಿನಲ್ಲಿ ಸ್ವಾಭಿಮಾನದಿಂದ ಜೀವಿಸಿದ ಹಾಗೂ ಸಮಾಜದ ಎಲ್ಲರನ್ನೂ, ಎಲ್ಲವನ್ನೂ ಒಳಗೊಳ್ಳುವ ಮನೋಭಾವದ ಅಭಿವ್ಯಕ್ತಿಯೇ ಜನಪದ ಎಂದು ಖ್ಯಾತ ಗಾಯಕ ಡಾ| ಗಣೇಶ ಗಂಗೊಳ್ಳಿ ಹೇಳಿದರು. ಅವರು ಗುರುವಾರ ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ 'ಜನಪದ: ಪರಿಶುದ್ಧ ಮನಸ್ಸುಗಳ ಭಾವಪದ' ಕಾರ್ಯಕ್ರಮದಲ್ಲಿ ವಿಚಾರ ಮಂಡಿಸಿ, ಜನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಪಕ್ಕವಾದ್ಯದಲ್ಲಿ ಚಂದ್ರ ಬೈಂದೂರು, ಗುರುಪ್ರಸಾದ್ ಹಾವಂಜೆ ಸಹಕರಿಸಿದರು.

ಕಾಪು ಲೀಗಲ್ ಚೇಂಬರ್ಸ್ ಉದ್ಘಾಟನೆ, ಕೋಟಿ ಗೀತಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಚಾಲನೆ

Posted On: 14-12-2023 07:44PM

ಕಾಪು : ಶ್ರೀ ಕೃಷ್ಣನಿಗೆ ಅತಿಪ್ರಿಯವಾದ ಭಗವದ್ಗೀತೆಯು ಜಾಗತಿಕ ಶಾಂತಿಗೆ ಪೂರಕವಾಗಿದೆ. ಭಗವದ್ಗೀತೆ ಪ್ರತೀಯೊಬ್ಬರಿಗೂ ಮಾರ್ಗದರ್ಶನ ನೀಡುವ ಮಹಾನ್ ಗ್ರಂಥವಾಗಿದ್ದು ಅದರ ಉಪಯುಕ್ತತೆಯನ್ನು ಅರಿತುಕೊಂಡು ತಮ್ಮ ಮುಂದಿನ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯವೆಂದು ಆಚರಿಸಲಾಗುತ್ತದೆ ಎಂದು ಭಾವೀ ಪರ್ಯಾಯ ಪೀಠಾಧಿಪತಿ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಸೋಮವಾರ ಕಾಪು ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿಯ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ಲೀಗಲ್ ಚೇಂಬರ್ಸ್ ಕಾಪು ಸಂಸ್ಥೆಯನ್ನು ಉದ್ಘಾಟಿಸಿ, ಕಾಪು ತಾಲೂಕಿನಲ್ಲಿ ಕೋಟಿ ಗೀತಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.