Updated News From Kaup
ಡಿಸೆಂಬರ್ 16 : ವರ್ತೆಕಲ್ಕುಡ ದೈವಸ್ಥಾನ, ಬಜೆ ತಂಗಾಣ - ಕಾಲಾವಧಿ ಸಿರಿಸಿಂಗಾರದ ಕೋಲ
Posted On: 14-12-2023 07:39PM
ಉಡುಪಿ : ವರ್ತೆಕಲ್ಕುಡ ದೈವಸ್ಥಾನ, ಬಜೆ ತಂಗಾಣ ಇಲ್ಲಿ ಡಿಸೆಂಬರ್ 16, ಶನಿವಾರ ಕಾಲಾವಧಿ ಸಿರಿಸಿಂಗಾರದ ಕೋಲ ನಡೆಯಲಿದೆ.
ಉಡುಪಿ : ಹಾವಂಜೆ ಕೊಳಲುಗಿರಿ ಕಾತಿಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಹರಕೆ ಸೇವೆ ಸಂಪನ್ನ
Posted On: 14-12-2023 07:30PM
ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾವಂಜೆ ಕೊಳಲುಗಿರಿ ಕಾತಿಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನ ಇಲ್ಲಿಯ ವಾರ್ಷಿಕ ಹರಕೆ ಸೇವೆ ಜರಗಿತು. ಈ ಒಂದು ಸಂದರ್ಭದಲ್ಲಿ ಪರಿವಾರ ದೈವಗಳ ದರ್ಶನ ಸೇವೆ ಜರಗಿತು.
ಡಿಸೆಂಬರ್ 18 : ಮಾತೃಜ ಸೇವಾ ಸಿಂಧು ನಿಟ್ಟೆ ವತಿಯಿಂದ ಭವತಿ ಭಿಕ್ಷಾoದೇಹಿ
Posted On: 14-12-2023 07:06PM
ಕಾರ್ಕಳ : ಇಲ್ಲಿನ ನಿಟ್ಟೆಯ ಮಾತೃಜ ಸೇವಾ ಸಿಂಧು ನಿಟ್ಟೆ ಇವರ ವತಿಯಿಂದ ಶ್ರೀ ಕ್ಷೇತ್ರ ಕಡಂದಲೆ ಹಾಗೂ ಶ್ರೀ ಕ್ಷೇತ್ರ ಸೂಡದಲ್ಲಿ ಷಷ್ಟಿ ಮಹೋತ್ಸವದಂದು ಎರಡು ಅನಾರೋಗ್ಯ ಮಕ್ಕಳಿಗೆ ಭವತಿ ಭಿಕ್ಷಾಂದೇಹಿ ಮುಖೇನ ಧನ ಸಂಗ್ರಹ ತಂಡದ ಸದಸ್ಯರು ಮಾಡಲಿರುವರು ಎಂದು ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.
ಪ್ರತಿಷ್ಠಿತ ಹೊಯ್ಸಳ ಪ್ರಶಸ್ತಿಗೆ ಆಯ್ಕೆಯಾದ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು
Posted On: 13-12-2023 08:23PM
ಮಂಗಳೂರು : ಮೈಸೂರಿನ ಹೊಯ್ಸಳ ಕನ್ನಡ ಸಂಘ ಮತ್ತು ಸಿರಿಗನ್ನಡ ಪತ್ರಿಕಾ ಬಳಗ ನೀಡುತ್ತಿರುವ ಪ್ರತಿಷ್ಟಿತ ಹೊಯ್ಸಳ ಪ್ರಶಸ್ತಿಗೆ ಹಿರಿಯ ಸಮಾಜವಿಜ್ಞಾನಿ ಡಾ. ಎಂ ಅಣ್ಣಯ್ಯ ಕುಲಾಲ್ ಉಲ್ತೂರ್ ಆಯ್ಕೆ ಆಗಿದ್ದಾರೆ.
ಕಾಪು : ಸಮಾಜ ಸೇವಕ ಲೀಲಾಧರ್ ಶೆಟ್ಟಿ ಮತ್ತು ವಸುಂದರ ದಂಪತಿಗಳ ಅಂತ್ಯಕ್ರಿಯೆ
Posted On: 13-12-2023 08:05PM
ಕಾಪು : ಇಲ್ಲಿನ ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಧರಣಿ ಸಮಾಜ ಸಂಸ್ಥೆ ಸ್ಥಾಪಿಸಿದ್ದ ಕರಂದಾಡಿ ಲೀಲಾಧರ್ ಶೆಟ್ಟಿ ಮತ್ತು ಮಡದಿ ವಸುಂದರ ದಂಪತಿಗಳು ಆತ್ಮಹತ್ಯೆ ಶರಣಾಗಿದ್ದಾರೆ.
ಉಡುಪಿ : ಮೆಡಿಕಲ್ ಶಾಪ್ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ - ಜಿಲ್ಲಾಧಿಕಾರಿ
Posted On: 13-12-2023 12:28PM
ಉಡುಪಿ : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್ 1973 ಕಾಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ “X” ಮತ್ತು “H” ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಬಂಟ್ಸ್ ಕತಾರ್ : ವಾರ್ಷಿಕ ಸಾಮಾನ್ಯ ಸಭೆ ; ಅಧ್ಯಕ್ಷರಾಗಿ ನವೀನ್ ಶೆಟ್ಟಿ ಇರುವೈಲ್ ಅವಿರೋಧ ಆಯ್ಕೆ
Posted On: 13-12-2023 12:14PM
ಭಾರತದ ರಾಯಭಾರ ಕಚೇರಿಯ ಅಧೀನದಲ್ಲಿ ಇಂಡಿಯನ್ ಕಲ್ಚರಲ್ ಸೆಂಟರ್ ಸಹವರ್ತಿ ಸಂಘಗಳಲ್ಲಿ ಒಂದಾದ ಬಂಟ್ಸ್ ಕತಾರ್ ತನ್ನ ಸದಸ್ಯರಿಗೆ ವೇದಿಕೆಯನ್ನು ಒದಗಿಸುವ ಮತ್ತು ಉತ್ತೇಜಿಸುವ ಮತ್ತು ರವಾನಿಸುವ ಮುಖ್ಯ ಉದ್ದೇಶದೊಂದಿಗೆ 2011 ರಲ್ಲಿ ಸ್ಥಾಪನೆಯಾದಾಗಿನಿಂದ ಯುವ ಪೀಳಿಗೆಗೆ ಸ್ಥಳೀಯ ಸಂಸ್ಕೃತಿ, ವಿವಿಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇದರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಶೆಟ್ಟಿ ಇರುವೈಲ್ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಾಪು : ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸುವುದೇ ಪುಣ್ಯದ ಕಾರ್ಯ - ಸುಬ್ರಹ್ಮಣ್ಯ ಶೆಟ್ಟಿ
Posted On: 13-12-2023 11:02AM
ಕಾಪು : ಮಹಾತ್ಮಗಾಂಧೀಜಿಯವರ ಕರೆಗೆ ಓಗೊಟ್ಟು ತಮ್ಮ ಸರ್ವಸ್ವವನ್ನು ತ್ಯಾಗಮಾಡಿ ಸಮರ್ಪಣಾಭಾವದಿಂದ ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಹೋರಾಡಿ, ಲಾಠಿಏಟು, ಸೆರೆಮನೆ ವಾಸ, ವಿವಿಧ ಚಿತ್ರಹಿಂಸೆಗಳನ್ನು ಅನುಭವಿಸಿ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ನಮಗೆ ಪ್ರಾತ:ಸ್ಮರಣೀಯರು, ಅವರನ್ನು ಸ್ಮರಿಸುವುದೇ ಜೀವನದ ಅವಿಸ್ಮರಣೀಯ ಕ್ಷಣ ಹಾಗೂ ಪುಣ್ಯದ ಕಾರ್ಯ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ನುಡಿದರು. ಅವರು ಸೋಮವಾರ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ಕಾಪು ಪಡುಗ್ರಾಮ ಕೊಪ್ಪಲಂಗಡಿ ಸಾಲ್ಯಾನ್ ತೋಟ "ಶ್ರೀಪ್ರಭಾ"ನಿವಾಸದಲ್ಲಿ ಏರ್ಪಡಿಸಿದ ಸ್ವಾತಂತ್ರ್ಯ ವೀರ ಸಹೋದರರಾದ ಕಾಪು ವೀರಪ್ಪ ಎಂ.ಸಾಲಿಯಾನ್ ಕಾಪು ಹರೇಂದ್ರ ಸಾಲಿಯಾನ್ರವರ ಸಂಸ್ಮರಣೆ "ಅಮೃತಭಾರತಿಗೆ ಕನ್ನಡದ ಆರತಿ" ಸ್ವಾತಂತ್ರ್ಯ ಸೇನಾನಿಗಳ ನೆನಪಿನಲ್ಲಿ ಏರ್ಪಡಿಸಿದ "ಅಮೃತಾಂಜಲಿ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಕಾಪು ತಾಲೂಕು ಕಸಾಪ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ತಾಲೂಕಿನ ಹೋರಾಟಗಾರರನ್ನು ಗುರುತಿಸಿ ಅವರ ಮನೆಯಂಗಳದಲ್ಲಿ ಕುಟುಂಬದ ಸದಸ್ಯರನ್ನೊಳಗೊಂಡು ಹಿರಿಯ ಹೋರಾಟಗಾರರನ್ನು ಸ್ಮರಿಸುವ ಇಂತಹ ಸ್ತುತ್ಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಡಿಸೆಂಬರ್ 15 : ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್
Posted On: 13-12-2023 08:52AM
ಕಾಪು : ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾಪು ತಾಲೂಕಿಗೆ ಸಂಬಂಧಿಸಿದ ಗ್ರಾಮಗಳ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಡಿಸೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಕಾಪು ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಓಮನ್ ಬಿಲ್ಲವಾಸ್ : ವ್ಯವಹಾರ ಸಂಪರ್ಕ - ತರಬೇತಿ ಕಾರ್ಯಾಗಾರ ಸಂಪನ್ನ
Posted On: 13-12-2023 08:30AM
ಓಮನ್ ಬಿಲ್ಲವಾಸ್ ಮುಖೇನ 'ವ್ಯವಹಾರ ಸಂಪರ್ಕ' ಶೀರ್ಷಿಕೆಯಡಿಯಲ್ಲಿ ಬಿಲ್ಲವ ಬಾಂಧವರನ್ನು ಆರ್ಥಿಕವಾಗಿ ಸ್ವಾವಲಂಬಿತರನ್ನಾಗಿಸುವ ಹಾಗೂ ಪರಸ್ಪರ ವ್ಯಾವಹಾರಿಕ ಬೆಂಬಲವನ್ನು ವೃದ್ಧಿಪಡಿಸುವ ತರಬೇತಿ ಕಾರ್ಯಾಗಾರ ಡಿಸೆಂಬರ್ 8ರಂದು ಮಸ್ಕತ್ ನ ಅಜ್ಹೈಭ ಗಾರ್ಡನ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.
