Updated News From Kaup

ಶ್ರೀ ಬ್ರಹ್ಮಲಿಂಗೇಶ್ವರ ಆಲಡೆ ಪಾಂಗಾಳ - ಮಂಡೇಡಿ : ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Thumbnail
Posted On: 23 Feb 2024, 03:20 PM

ಪಾಂಗಾಳ : ವೇದಮೂರ್ತಿ ಪಾಂಗಾಳ ವಿಷ್ಣು ಭಟ್ಟರ ನೇತೃತ್ವದಲ್ಲಿ ಪಾಂಗಾಳ-ಮಂಡೇಡಿ ಶ್ರೀ ಬ್ರಹ್ಮಲಿಂಗೇಶ್ವರ ಆಲಡೆ ಪುನರ್ ನಿರ್ಮಿತ ಶ್ರೀ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ, ಶ್ರೀ ನಾಗಬ್ರಹ್ಮ ದೇವರು, ಶ್ರೀ ವೀರಭದ್ರ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರಾ ಮಹೋತ್ಸವದ ಗುರುವಾರ ಸಂಪನ್ನಗೊಂಡಿತು. ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ಘಂಟೆ 9ರಿಂದ ಪೂಜಾದಿ ಸಕಲ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭ ಪಾಂಗಾಲಣ್ಣ ಬಂಟ ಕುಟುಂಬಸ್ಥರು, ಕ್ಷೇತ್ರದ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ, ಭಕ್ತರು ಉಪಸ್ಥಿತರಿದ್ದರು.

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Thumbnail
Posted On: 23 Feb 2024, 03:01 PM

ಕಾಪು: ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ನಟ ರಕ್ಷಿತ್ ಶೆಟ್ಟಿಯವರು ಫೆಬ್ರವರಿ 22ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು, ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ಅವರು ನಾನು ಬಾಲ್ಯದಲ್ಲಿ ಪ್ರತಿವರ್ಷ ತಂದೆಯೊಂದಿಗೆ ಕಾಪುವಿನಲ್ಲಿ ಭಾವನ ಮನೆಗೆ ಬರುವಾಗ ಮಾರಿಗುಡಿಗೆ ಬಂದು ಹೋಗುತ್ತಿದ್ದೆ, ಈಗ ಇದರ ಸಂಪೂರ್ಣ ಚಿತ್ರಣವೆ ಬದಲಾಗಿದೆ, ನನ್ನ ಭಾವ ವಾಸುದೇವ ಶೆಟ್ರ ಮುಂದಾಳತ್ವದಲ್ಲಿ ಈ ಕೆಲಸ ನಡೆಯುತ್ತಿದೆ, ಸುಮಾರು ವರ್ಷಗಳಿಂದ ಅವರು ಈ ದೇವಸ್ಥಾನವನ್ನು ಹೇಗೆ ಅಭಿವೃದ್ಧಿಪಡಿಸುವುದು ಎಂಬ ಚಿಂತನೆಯಲ್ಲಿದ್ದರು. ಪುರಾತನ ಕಾಲದಲ್ಲಿ ಈ ರೀತಿಯಾಗಿ ಕಲ್ಲಿನ ದೇವಸ್ಥಾನಗಳನ್ನು ಕಟ್ಟುತ್ತಿದ್ದರು. ಈಗಿನ ಕಾಲದಲ್ಲಿ ಅನೇಕ ಕಡೆ ಕಾಂಕ್ರೀಟ್ ನಲ್ಲೆ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ, ದೇವಸ್ಥಾನ ಇದ್ದರೆ ಹೀಗಿರಬೇಕು, ಇಳಕಲ್ಲ್ ಕೆಂಪು ಶಿಲೆಯಲ್ಲಿ ಗರ್ಭಗುಡಿ ಬಹಳಷ್ಟು ಅದ್ಭುತವಾಗಿ ಮೂಡಿಬಂದಿದೆ. ಇದು ಮೂರ್ನಾಲ್ಕು ಜನ ಸೇರಿ ಮಾಡುತ್ತಿರುವ ಕೆಲಸವಲ್ಲ, ಪ್ರತಿಯೊಬ್ಬ ಭಕ್ತನು ಇದರಲ್ಲಿ ತೊಡಗಿಸಿಕೊಳ್ಳಬೇಕೆಂದು ಸಮಿತಿಯ ಮಹದಾಸೆ. ಈ ಪುಣ್ಯ ಕಾರ್ಯಕ್ಕೆ ಬಹಳಷ್ಟು ದಾನಿಗಳು ಸಹಕರಿಸಿದ್ದಾರೆ, ಇದು ಅಮ್ಮನ ಪ್ರೇರಣೆಯೆಂದು ಅನಿಸುತ್ತಿದೆ. ಕೆಲಸಗಳು ಪೂರ್ಣಗೊಂಡಾಗ ಇನ್ನೆಷ್ಟು ಅದ್ಭುತವಾಗಿ ಕಾಣಬಹುದು, ಕರ್ನಾಟಕದ ಜನತೆ ಎಲ್ಲರೂ ಬಂದು ಕಣ್ತುಂಬಿಕೊಳ್ಳಿ. ಇಲ್ಲಿನ ಭಕ್ತಾದಿಗಳಿಗೆ ಒಂದು ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ 9 ಶಿಲೆ ಅಂದರೆ 9,999 ರೂಪಾಯಿ ಮೇಲ್ಪಟ್ಟು ನೀಡಿದರೆ "ಕಾಪುವಿನ ಅಮ್ಮನ ಮಕ್ಕಳು" ತಂಡದ ಸದಸ್ಯರಾಗಬಹುದು. ಈ ತಂಡಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಪುಣೆ ಸಮಿತಿಯ ಕಾರ್ಯಾಧ್ಯಕ್ಷರಾದ ಮಾಧವ ಆರ್. ಶೆಟ್ಟಿ ಪಾದೂರು ಹೊಸಮನೆ, ಆರ್ಥಿಕ ಸಮಿತಿಯ ಚಂದ್ರಘಂಟಾ ತಂಡದ ಮುಖ್ಯ ಸಂಚಾಲಕರಾದ ಬಿ. ಕೆ. ಶ್ರೀನಿವಾಸ್, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ. ಶೆಟ್ಟಿ, ಸಂಚಾಲಕರುಗಳಾದ ಅನುರಾಧ ಮನೋಹರ್ ಶೆಟ್ಟಿ, ಅರ್ಚನಾ ಶೆಟ್ಟಿ, ಕವಿತಾ ಶೆಟ್ಟಿ, ಅನಿತಾ ಹೆಗ್ಡೆ, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಫೆಬ್ರವರಿ 26 : ಶ್ರೀ ಹಳೆ ಮಾರಿಯಮ್ಮ ಸಭಾಗೃಹದಲ್ಲಿ ಗ್ಯಾರಂಟಿ ಸಮಾವೇಶ

Thumbnail
Posted On: 23 Feb 2024, 02:55 PM

ಕಾಪು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿರುವ ಹಿನ್ನೆಲೆಯಲ್ಲಿ ಫೆಬ್ರವರಿ 26 ರಂದು ಪೂರ್ವಾಹ್ನ 10.30ಕ್ಕೆ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಗೃಹ ಇಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿರುತ್ತದೆ. ಗ್ಯಾರಂಟಿ ಸಮಾವೇಶಕ್ಕೆ ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳು, ಸಾರ್ವಜನಿಕರು ಭಾಗಿಯಾಗಿ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯುವ ಕುರಿತಾದ ಮಾಹಿತಿಯನ್ನು ಸಹ ಸಮಾವೇಶದ ಮೂಲಕ ಪಡೆಯಬಹುದೆಂದು ಕಾಪು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ. 23 : ಬ್ರಹ್ಮರಪಾಡಿ, ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ

Thumbnail
Posted On: 22 Feb 2024, 08:56 PM

ಪಾಂಗಾಳ : ಕಟಪಾಡಿ ಪೇಟೆ ಶ್ರೀ ವೆಂಕಟರಮಣ ದೇವಳದ ಆಡಳಿತಕ್ಕೆ ಒಳಪಟ್ಟ ಬ್ರಹ್ಮರಪಾಡಿ ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ ಫೆಬ್ರವರಿ 23, ಶುಕ್ರವಾರ ಧ್ವಜಾರೋಹಣದಿಂದ ಮೊದಲ್ಗೊಂಡು ಫೆಬ್ರವರಿ 26, ಸೋಮವಾರ ಸಂಪ್ರೋಕ್ಷಣೆಯವರೆಗೆ ಜರಗಲಿದೆ. ಫೆಬ್ರವರಿ 23 ರಂದು ಮಧ್ಯಾಹ್ನ ಗಂಟೆ 12.05ಕ್ಕೆ ನಡೆಯುವ ಧ್ವಜಾರೋಹಣ, ಪಲ್ಲಪೂಜೆ, ಬ್ರಾಹ್ಮಣ ಸಂತರ್ಪಣೆ ಮತ್ತು ಮಹಾಭೂರಿ ಅನ್ನಸಂಪರ್ಪಣೆ ಹಾಗೂ ಸಾಯಂಕಾಲ ಆಯನೋತ್ಸವ, ರಂಗ ಪೂಜೆ, ಢಕ್ಕೆ ಬಲಿ, ಬ್ರಹ್ಮಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಕ್ಷೇತ್ರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಯನೋತ್ಸವದ ನೇರಪ್ರಸಾರ ನಮ್ಮ ಕಾಪು ವಾಹಿನಿಯಲ್ಲಿ ವೀಕ್ಷಿಸಬಹುದು.

ಫೆಬ್ರವರಿ 23 : ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ

Thumbnail
Posted On: 22 Feb 2024, 07:07 AM

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಫೆಬ್ರವರಿ 23, ಶುಕ್ರವಾರದಂದು ಜರಗಲಿದೆ. ಫೆ.23, ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ , ರಾತ್ರಿ 2:30 ಕ್ಕೆ ಬ್ರಹ್ಮಮಂಡಲ ,ರಾತ್ರಿ 3:30 ಕ್ಕೆ ಭೂತಬಲಿ , ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ. ಫೆ. 24, ಶನಿವಾರ ಬೆಳಿಗ್ಗೆ 11 ಕ್ಕೆ ಮಹಾಪೂಜೆ ,ಸಂಜೆ 7 ಕ್ಕೆ ತಪ್ಪಂಗಾಯಿ ಬಲಿ , ರಾತ್ರಿ 8:30 ಕ್ಕೆ ದೂಳು ಮಂಡಲ ,ನಂತರ ಭೂತಬಲಿ , ಕವಾಟಬಂಧನ ,ಶಯನೋತ್ಸವ ಫೆ. 25, ಗುರುವಾರ ಬೆಳಿಗ್ಗೆ 07 ಕ್ಕೆ ಕವಾಟೋದ್ಘಾಟನೆ , ನಂತರ ಮಹಾಪೂಜೆ ,ಸಾಯಂಕಾಲ 05 ಕ್ಕೆ ಬಲಿ ಹೊರಟು ಕಟ್ಟೆಪೂಜೆ , ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ. ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ , ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕೆಂದು ದೇವಸ್ಥಾನದ ಪ್ರಕಟಣೆಯು ತಿಳಿಸಿದೆ.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ

Thumbnail
Posted On: 20 Feb 2024, 09:09 PM

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸೈoಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅವರು ಚೆಂಡೆವಾದನದ ಮೂಲಕ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಯನ್ನು ದಾಖಲೀಕರಣ ಮಾಡಬೇಕಾದ ತುರ್ತು ಅವಶ್ಯಕತೆ ಇದೆ ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ. ನಮ್ಮಕನ್ನಡ ಜನಪದ ಪರಿಷತ್ತಿನಿಂದ ಇದಕ್ಕೆ ಪೂರಕವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಕ ಮಾತ ಚರ್ಚಿನ ಸಹಾಯಕ ಧರ್ಮಗುರು ಮೇಲ್ವಿನ್ ರೋಯ್ ಲೋಬೋ ವಹಿಸಿದ್ದರು. ಮೂಡು ಸಗ್ರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ ಗುಂಡಿಬೈಲು ಶುಭ ಹಾರೈಸಿದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ವಿಜಯ್,ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಮುಂತಾದವರಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು,ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕಲಾವಿದ ಗಂಗಾಧರ ಕಿದಿಯೂರು, ಸುರಭಿ ಮಹಿಳಾ ಚೆಂಡೆ ವಾದನ ಬಳಗದ ಸುನಂದ ಗೋಪಾಲ ಗಾಣಿಗ ಬೈoದೂರು ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ ರಾಜ್ಯ ಅಧ್ಯಕ್ಷ ಡಾ.ಎಸ್ ಬಾಲಾಜಿ ಮತ್ತು ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಕುಮಾರ್ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು. ಈ ಸಂದಭ೯ದಲ್ಲಿ ಡಾ.ಗಣೇಶ್ ಗಂಗೊಳ್ಳಿ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಉದಯ ಕುಮಾರ್ ಹೈಕಾಡಿ ಸ್ವಾಗತಿಸಿದರು. ಚಂದ್ರ ಹಂಗಾರಕಟ್ಟೆ, ಫಾರೂಕ್ ಚಂದ್ರನಗರ ಪರಿಚಯಿಸಿದರು. ಜಿಲ್ಲಾ ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾಯ೯ದಶಿ೯ ಪ್ರಕಾಶ ಸುವಣ೯ ಕಟಪಾಡಿ ವoದಿಸಿದರು. ಸುರಭಿ ಮಹಿಳಾ ಚೆಂಡೆ ವಾದನ ಬಳಗದಿಂದ ಚೆಂಡೆ ವಾದನ ಪ್ರದಶ೯ನ ಮತ್ತು ಜಾನಪದ ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ, ಅಶ್ವಿನಿ ಸುವರ್ಣ ಪಡುಬಿದ್ರೆ, ವಸಂತಿ ಕಡಂಬಳ ಕಾರ್ಕಳ, ರಮಣಿ ರವಿ ಬೈಂದೂರು ಅವರಿಂದ ಜಾನಪದ ಗಾಯನ ನಡೆಯಿತು. ಹಿಮ್ಮೇಳದಲ್ಲಿ ರೋಹಿತ್ ಕುಮಾರ್ ಮಲ್ಪೆ, ಸುರೇಶ್ ಲಕ್ಷ್ಮೀನಗರ ಸಹಕರಿಸಿದರು.

ಕಾಪು : ಅಸಂಖ್ಯ ಭಕ್ತರ ಸಮ್ಮುಖ ನೆರವೇರಿದ ದಿವ್ಯ ಸತ್ಸಂಗ

Thumbnail
Posted On: 20 Feb 2024, 09:03 PM

ಕಾಪು : ಕರಾವಳಿಯ ಸೊಬಗಿಗೆ ಮನಸೋತವರಿಲ್ಲ. ಕಾಪು ಬೀಚ್ ಅತ್ಯಂತ ಸುಂದರವಾಗಿದೆ. ಭಾರತದ ಆಧ್ಯಾತ್ಮ, ವಸುದೈವ ಕುಟುಂಬಕಂ ಎಂಬ ನುಡಿ, ಭಾರತದ ಐಟಿ ವಲಯ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ನಮಗೆ ಹೆಮ್ಮೆ. ಸತ್ಸಂಗದೊಂದಿಗೆ ಸತ್ ಚಿಂತನೆ, ಆತ್ಮ ಚಿಂತನೆಯಾಗಲಿ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್‌ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕ‌ರ್ ಗುರೂಜಿ ಹೇಳಿದರು. ಅವರು ಮಂಗಳವಾರ ಕಾಪು ಬೀಚ್ ನ ಮಂಥನ್ ರೆಸಾಟ್೯ ಬಳಿ ಕಡಲ ಕಿನಾರೆಯಲ್ಲಿ ನಡೆದ ಸತ್ಸಂಗದಲ್ಲಿ ಜ್ಞಾನ, ಧ್ಯಾನ ಹಾಗೂ ಭಜನೆಯನ್ನೊಳಗೊಂಡ ದಿವ್ಯ ಸತ್ಸಂಗ ಆನಂದ ಲಹರಿಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಆಯೋಜಕರಾಗಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸನ್ಯಾಸ ಪ್ರದರ್ಶನವಾಗಬಾರದು, ನಿದರ್ಶನವಾಗಬೇಕು ಎನ್ನುವಂತಿರುವ ಮಹನೀಯ ಸಂತ ಶ್ರೀ ರವಿಶಂಕರ್ ಗುರೂಜಿ. ವಿವಿಧ ದೇಶಗಳ ಜನರು ಅನುಯಾಯಿಯಾಗಿರುವ ಅಂತರಾಷ್ಟ್ರೀಯ ಖ್ಯಾತಿಯ ಗುರೂಜಿ ಕಾಪುವಿಗೆ ಆಗಮಿಸಿರುವುದು ಬದುಕಿನ ಅವಿಸ್ಮರಣೀಯ ಘಳಿಗೆ ಎಂದರು. ಕಿರಿಯರಿಂದ ಹಿರಿಯರಾದಿಯಾಗಿ ಇಳಿ ಸಂಜೆಯಲಿ‌ ಕಡಲ ಕಿನಾರೆಯ ಸೊಬಗಿನ ಜೊತೆಗೆ ಸತ್ಸಂಗ, ಧ್ಯಾನ, ಭಜನೆಯಲಿ ಸಮಯ ಕಳೆದರು. ಈ ಸಂದರ್ಭ ಗುರ್ಮೆ ಸುರೇಶ್ ಶೆಟ್ಟಿ ಕುಟುಂಬ ವರ್ಗ, ಎಂ. ಆರ್. ಜಿ ಗ್ರೂಪ್‌ ಮುಖ್ಯಸ್ಥ ಪ್ರಕಾಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ‌ ಆರ್ ಮೆಂಡನ್, ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಮತ್ತಿತರರು ‌ಉಪಸ್ಥಿತರಿದ್ದರು.

ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು - ಜೀರ್ಣೋದ್ಧಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ

Thumbnail
Posted On: 19 Feb 2024, 01:25 PM

ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮಟ್ಟಾರು ಬಯಲು ರಂಗಮಂದಿರದಲ್ಲಿ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ ನಡೆಯಿತು. ಶಂಕರ್ ಶೆಟ್ಟಿ ದರ್ಮೆಟ್ಟು ದೀಪ ಬೆಳಗಿಸುವ ಮುಖಾಂತರ ಜೀರ್ಣೋದ್ದಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆಗೆ ಚಾಲನೆ ನೀಡಿದರು. ಹೊರೆ ಕಾಣಿಕೆಯ ಉಸ್ತುವಾರಿ ಸಂದೀಪ್ ಪೂಜಾರಿ ಹೊರೆಕಾಣಿಕೆಯ ರೂಪುರೇಷೆಗಳು, ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಹಲವಾರು ವಲಯದಲ್ಲಿ ಹೊರೆಕಾಣಿಕೆಯ ಕೇಂದ್ರಗಳನ್ನು ಮಾಡಿ ಆದರ ಜವಾಬ್ದಾರಿಗಳನ್ನು ನೀಡಿದರು. ಈ ಸಂದರ್ಭ ಶ್ರೀ ಬಬ್ಬರ್ಯ ಆಡಳಿತ ಸಮಿತಿಯ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ಚಂದ್ರ ಶೆಟ್ಟಿ, ದಿನರಾಜ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ದೇವಸ್ಥಾನಗಳ ಆಡಳಿತ ಮೊಕ್ತೇಸರರು, ಅಧ್ಯಕ್ಷರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು ಪ್ರಿತೇಶ್ ಶೆಟ್ಟಿ ಸ್ವಾಗತಿಸಿದರು. ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಕಾಪು : ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ

Thumbnail
Posted On: 18 Feb 2024, 04:38 PM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಕ್ಷೇತ್ರಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್‌ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆಯಾಗಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪದ ಪ್ರಧಾನ ಸಮಾರಂಭ

Thumbnail
Posted On: 18 Feb 2024, 03:04 PM

ಬ್ರಹ್ಮಾವರ : ನಮ್ಮ ಆದಾಯದ ಒಂದಂಶವನ್ನು ಸಮಾಜಕ್ಕೆ ನೀಡಿದಾಗ ನಮ್ಮ ಜೀವನದಲ್ಲಿ ಸಾಥ೯ಕತೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಜಯಂಟ್ಸ್ ಸಂಸ್ಥೆಯ ಸೇವೆ ಅನುಪಮ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹೇಳಿದರು. ಅವರು ಶನಿವಾರ ಸಿಟಿ ಸೆಂಟರ್ ನಲ್ಲಿ ನಡೆದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ನ ಪದಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜಯಂಟ್ಸ್ ಫೆಡರೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಮಾತನಾಡಿ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದೆ. ಜನ ಔಷಧಿ ಸಂಸ್ಥೆ ಪ್ರಾರಂಭ ಮಾಡಿ ಸಾವಿರಾರು ಜನರಿಗೆ ಸಹಾಯ ಮಾಡಿದೆ ಎಂದರು. ಜಯಂಟ್ಸ್ ಫೆಡರೇಶನ್ ಉಪಾಧ್ಯಕ್ಷ ತೇಜೇಶ್ವರ ರಾವ್, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು ಶುಭ ಹಾರೈಸಿದರು. ಈ ಸಂದಭ೯ದಲ್ಲಿ ನೂತನ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಮತ್ತು ಅವರ ತಂಡದ ಪದ ಪ್ರಧಾನ ನಡೆಯಿತು. ಕಾಯ೯ಕ್ರಮದಲ್ಲಿ ಪೋಲಿಸ್ ಉಪ ನಿರೀಕ್ಷಕ ಕೃಷ್ಣಪ್ಪ ಮತ್ತು ಹಿರಿಯ ವಿಭಾಗದ ಕ್ರೀಡಾಪಟು ಗೀತಾ ಎ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸ್ಪಂದನ ವಿಶೇಷ ಚೇತನ ಶಾಲೆಗೆ 2.5 ಲಕ್ಷ ವೆಚ್ಚದ ಸೋಲಾರ್, ಟಿವಿ, ವಿವಿಧ ಪರಿಕರಗಳನ್ನು ನೀಡಲಾಯಿತು. ಬಡ ರೋಗಿಗೆ ಸಹಾಯಧನ ವಿತರಿಸಲಾಯಿತು. ಸಮಾರಂಭದಲ್ಲಿ ನೂತನ ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್ ಮತ್ತು ನೂತನ 4 ಜನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ವಿವೇಕ್ ಕಾಮತ್ ಸ್ವಾಗತಿಸಿದರು. ಕಾಯ೯ದಶಿ೯ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ರಾಘವೇಂದ್ರ ಕವಾ೯ಲು ನಿರೂಪಿಸಿದರು.