Updated News From Kaup

ಪಡು ಕುತ್ಯಾರು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆ

Posted On: 05-12-2023 11:48AM

ಪಡುಕುತ್ಯಾರು : ಇಲ್ಲಿನ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆಯು ಆದಿತ್ಯವಾರ ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಶ್ರೀ ದುರ್ಗಾ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘವು ಉತ್ತಮ ರೀತಿಯಲ್ಲಿಕಾರ್ಯನಿರ್ವಹಿಸುತ್ತಿದ್ದು, ಸಂಘವು ಉತ್ತರೋತ್ತರ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು.

ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ

Posted On: 04-12-2023 06:15PM

ಉದ್ಯಾವರ : 150ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಾರ್ಷಿಕ ಮಹೋತ್ಸವವು ಡಿಸೆಂಬರ್ ಐದು ಮತ್ತು ಆರರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಡಿಸೆಂಬರ್ 3 ರಂದು ಭಾತೃತ್ವ ಮತ್ತು ಐಕ್ಯತೆಯ ಭಾನುವಾರವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಂಕರಪುರ :ಸಂತ ಆಶ್ರಯಧಾಮ ನಿರ್ಮಾಣಕ್ಕೆ ಭೂಮಿ ಪೂಜೆ, ಭಗವಧ್ವಜ ಸ್ಥಾಪನೆ

Posted On: 03-12-2023 10:29PM

ಶಂಕರಪುರ : ಶಿರ್ವ ಮಟ್ಟಾರಿನ ಪಾಂಜಗುಡ್ಡೆಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಯೋಜನೆಯಾದ ಸಂತ ಆಶ್ರಯಧಾಮ ನಿರ್ಮಾಣದ ಭೂಮಿಯಲ್ಲಿ ರವಿವಾರ 54 ಸಾಧು-ಸಂತರಿಂದ ದೀಪ ಬೆಳಗಿಸಿ, ಭಗವಧ್ವಜ ಸ್ಥಾಪಿಸಿ ಪ್ರಾರ್ಥನೆ ಸಲ್ಲಿಸಿ ಚಾಲನೆಯನ್ನು ನೀಡಲಾಯಿತು.

ಡಿಸೆಂಬರ್ 3 : ಶ್ರೀ ಸಿರಿ ಕುಮಾರ ದೈವಳ ಕಂಬಳ

Posted On: 02-12-2023 02:35PM

ಉಡುಪಿ : ಶ್ರೀ ಸಿರಿಕುಮಾರ ದೈವಸ್ಥಾನ ಕಂಬಳ ಮನೆ, ಕಂಬಳಕಟ್ಟ-ಕೊಡವೂರು ಇಲ್ಲಿಯ ಶ್ರೀ ಸಿರಿ ಕುಮಾರ ದೈವಳ ಕಂಬಳವು ಡಿಸೆಂಬರ್ 3, ರವಿವಾರ ಕಂಬಳಕಟ್ಟ ಇಲ್ಲಿ ಜರಗಲಿದೆ.

ಕಾರ್ಕಳ : ಕ್ರಿಯೇಟಿವ್‌ ಆವಿರ್ಭವ-2023 ಕಾಲೇಜು ವಾರ್ಷಿಕೋತ್ಸವ

Posted On: 02-12-2023 01:44PM

ಕಾರ್ಕಳ : ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಮೂಡಿಬಂದಿತು. ಸಮಾರಂಭದಲ್ಲಿ ಮಿಲಾಗ್ರಿಸ್‌ ಚರ್ಚ್‌ನ ಧರ್ಮಗುರುಗಳಾದ ವಲೇರಿಯನ್‌ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್‌ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ ಯಶಸ್ಸು ಕೀರ್ತಿ ಲಭಿಸಲಿ ಎಂದು ಹಾರೈಸಿದರು.

ಯು.ಎ.ಇ ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ

Posted On: 02-12-2023 11:03AM

ಕಾಪು : ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮಾಲಕರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರಾದ ಯುವ ನಾಯಕ, ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಯು.ಎ.ಇ ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾಪು : ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ

Posted On: 01-12-2023 08:38PM

ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಶುಕ್ರವಾರ ಜರಗಿತು.

ಪಡುಬಿದ್ರಿ : ಎ ಎಸ್ ಐ ದಿವಾಕರ ಜೆ. ಸುವರ್ಣರಿಗೆ ಬೀಳ್ಕೊಡುಗೆ

Posted On: 01-12-2023 07:45AM

ಪಡುಬಿದ್ರಿ : 31 ವರ್ಷಗಳ ಕಾಲ ಪೋಲಿಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆಗೈದು ವಯೋ ನಿವೃತ್ತಿ ಹೊಂದಿದ ಎ ಎಸ್ ಐ ದಿವಾಕರ ಜೆ. ಸುವರ್ಣರ ಬೀಳ್ಕೊಡುಗೆ ಸಮಾರಂಭ ಗುರುವಾರ ಪಡುಬಿದ್ರಿ ಮಾರ್ಕೆಟ್ ರಸ್ತೆಯ ಸಾಯಿ ಆರ್ಕೇಡ್ ನಲ್ಲಿ ಜರಗಿತು.

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

Posted On: 30-11-2023 06:03PM

ಬಂಟಕಲ್ಲು : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಲ್ಲಿ ಅವಕಾಶವನ್ನು ನೀಡುತ್ತದೆ ಮತ್ತು ಶಿಕ್ಷಣ ಹೊರತುಪಡಿಸಿ ಹೊರಗಿನ ಜೀವನದ ಬಗ್ಗೆ ಅನುಭವವನ್ನು ಪಡೆಯಲು ಅವಕಾಶ ಕಲ್ಪಸುತ್ತದೆ. ಅಲ್ಲದೆ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಕೌಶಲ್ಯವನ್ನು ತಿಳಿಸಿಕೊಡುತ್ತದೆ ಎಂದು ಉಡುಪಿಯ ಎಂಜಿಎಮ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮತ್ತು ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾದ ಸುಚಿತ್ ಕೋಟ್ಯಾನ್ ಹೇಳಿದರು. ಅವರು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ನವೆಂಬರ್ 27 ರಂದು ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ : ವಿಕಸಿತ ಭಾರತ ಸಂಕಲ್ಪ ಯಾತ್ರೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

Posted On: 30-11-2023 03:13PM

ಉಡುಪಿ : ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಗುರುವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.