Updated News From Kaup

ಉದ್ಯಾವರ : ಗ್ರಾಮ ಪಂಚಾಯತ್ ಅಧ್ಯಕ್ಷೆ ಸಹಿತ ಇಬ್ಬರು ಕಾಂಗ್ರೆಸ್ ಸೇರ್ಪಡೆ

Posted On: 30-11-2023 02:56PM

ಉದ್ಯಾವರ : ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಕಾಪು : ವಿಶ್ವೇಶತೀರ್ಥ ವಿದ್ಯಾಲಯದ ನೂತನ ಶಾಲಾ ಕಟ್ಟಡ ಉದ್ಘಾಟನೆ

Posted On: 30-11-2023 02:51PM

ಕಾಪು : ಊರು ಉದ್ಧಾರವಾಗಲು ಮಂದಿರ, ಶಾಲೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಇರಬೇಕು. ಊರೊಳಗೆ ಈ ಎಲ್ಲಾ ವ್ಯವಸ್ಥೆಗಳು ಇದ್ದಲ್ಲಿ ಸಮಗ್ರ ಬೆಳವಣಿಗೆ ಕಾಣಲು ಸಾಧ್ಯ. ಉತ್ತಮ ಶಿಕ್ಷಣ ಬದುಕಿನಲ್ಲಿ ಸಾರ್ಥಕತೆ ಗಳಿಸಲು ಸಾಧ್ಯ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ವಿದ್ಯಾಸಾಗರ ಎಜಕೇಶನ್ ಟ್ರಸ್ಟ್ ಇದರ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆ ಕೈಪುಂಜಾಲು ಚೆನ್ನಪ್ಪ ಸಾಹುಕಾರ್ ರವರ ಸ್ಮರಣಾರ್ಥ ವಿಶ್ವೇಶತೀರ್ಥ ವಿದ್ಯಾಲಯದ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕಾಪು ಮಾರಿಯಮ್ಮನ ಪ್ರಸಾದದಿಂದ ಬೆಂಗಳೂರು ಕಂಬಳ ಗೆಲ್ಲುವಂತಾಯಿತು : ನಂದಳಿಕೆ ಶ್ರೀಕಾಂತ್ ಭಟ್

Posted On: 29-11-2023 07:04PM

ಕಾಪು : ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪು ಮಾರಿಯಮ್ಮನ ದಿವ್ಯ ಸಾನಿಧ್ಯವಾದ ಕಾಪು ಹೊಸ ಮಾರಿಗುಡಿ ದೇವಳದಲ್ಲಿ ನವೆಂಬರ್ 28 ಮತ್ತು 29 ರಂದು ಕಾಲಾವಧಿ ಜಾರ್ದೆ ಮಾರಿ ಪೂಜೆಯು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ನಡೆಯಿತು.

ಪಲಿಮಾರು : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ : ಸಂಪದ - ೨೦೨೩ ತಿಂಗಳ ಸಡಗರ ಶಾಲೆಯತ್ತ ಸಾಹಿತ್ಯ ಸಂಪನ್ನ

Posted On: 29-11-2023 06:35PM

ಪಲಿಮಾರು : ನಾಡು, ನುಡಿ, ಸಾಹಿತ್ಯ, ಜನಪದ, ಕನ್ನಡ, ಕನ್ನಡಿಗ, ಕರ್ನಾಟಕ ಎಂಬ ಸದ್ವಿಚಾರದ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯನಿರ್ವಹಿಸುತ್ತಿದೆ. ಉಡುಪಿ ಜಿಲ್ಲಾ ತಾಲೂಕು ಪರಿಷತ್ತಿನ ತಾಲೂಕು ಘಟಕಗಳಿಂದ ಸಾಹಿತ್ಯ ವಿಚಾರದ ಕಾರ್ಯಕ್ರಮಗಳ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರನ್ನೂ ಗುರುತಿಸುವಂತಹ ಕಾರ್ಯ ನಡೆದಿದೆ. ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜಿಲ್ಲೆಯಲ್ಲಿ ೪೮ ಕಾರ್ಯಕ್ರಮಗಳು ಜರಗಿದೆ. ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ೫ ಸಾಹಿತ್ಯ ಸಮ್ಮೇಳನಗಳನ್ನು ನಡೆಸಿದ ಕಾಪು ತಾಲೂಕು ಘಟಕದ ಕಾರ್ಯ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು‌ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ಬುಧವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದಿಂದ ಕನ್ನಡ ರಾಜ್ಯೋತ್ಸವ ಮಾಸಾಚಾರಣೆ ಸಂಪದ - ೨೦೨೩ ತಿಂಗಳ ಸಡಗರ ಶಾಲೆಯತ್ತ ಸಾಹಿತ್ಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುತ್ಯಾರು : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ - ಇಂಗ್ಲೀಷ್ ಭಾಷಾ ಶಿಕ್ಷಕರ ಕಾರ್ಯಾಗಾರ

Posted On: 29-11-2023 01:34PM

ಕುತ್ಯಾರು : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಾಗಾರ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ನಡೆಯಿತು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಸದಸ್ಯರಾದ ಶ್ರೀಕಾಂತ ಪ್ರಭು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತರಬೇತಿ ಶಿಕ್ಷಕರಿಗೆ ಅನಿವಾರ್ಯವಾಗಿದೆ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಂತೋಷವನ್ನುಂಟು ಮಾಡಲು ವಿದ್ಯಾರ್ಥಿಗಳು ಸಂತೋಷದಾಯಕವಾಗಿ ಇರಲು ಶಿಕ್ಷಕರು ಸಂಪತ್ಭರಿತವಾಗಿರಬೇಕು ಎಂದರು.

ಕ್ರಿಯೇಟಿವ್‌ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವ್‌-2023

Posted On: 27-11-2023 04:49PM

ಕಾರ್ಕಳ : ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನವೆಂಬರ್ 25 ರಂದು ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನೆರವೇರಿತು.

ಕಾರ್ಕಳ : ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿಟ್ಟೆಯ ಧನುಷ್ ಕುಲಾಲ್ ಗೆ ಚಿನ್ನದ ಪದಕ

Posted On: 27-11-2023 04:39PM

ಕಾರ್ಕಳ : ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿಟ್ಟೆಯ ಧನುಷ್ ಕುಲಾಲ್ ಚಿನ್ನದ ಪದಕ ಪಡೆದಿದ್ದಾರೆ.

ಕಾಪು : ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ವಾರ್ಷಿಕ ಭಜನಾ ಮಂಗಲೋತ್ಸವ

Posted On: 25-11-2023 10:11PM

ಕಾಪು : ಶ್ರೀ ಲಕ್ಷ್ಮಿಜನಾರ್ದನ ದೇವಳದ ಆಡಳಿತಕ್ಕೊಳಪಟ್ಟಿರುವ ಕೊಪ್ಪಲಂಗಡಿ ಶ್ರೀ ವಾಸುದೇವ ದೇವಸ್ಥಾನದ ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ವಾರ್ಷಿಕ ಭಜನಾ ಮಂಗಲೋತ್ಸವದ ದೀಪ ಪ್ರಜ್ವಲನೆಯನ್ನು ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೆ ಪಿ ಆಚಾರ್ಯ ಮಾಡಿದರು.

ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಸೌಹಾರ್ದತೆಯ ತುಳುವರೆ ತುಳಸಿ ಪರ್ಬ ಆಚರಣೆ

Posted On: 25-11-2023 06:17PM

ಹೆಜಮಾಡಿ : ಹಬ್ಬಗಳು ದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಂತಹ ಅಚರಣೆಗಳು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ರವಾನಿಸಲು ವೇದಿಕೆಯಾಗಿದೆ. ಈ ಹಬ್ಬಗಳ ಮೂಲಕ ಯುವಕರು ತಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ವಿವಿಧ ಪದ್ದತಿಗಳು ಹಾಗು ಆಚರಣೆಗಳ ಮಹತ್ವವನ್ನು ತಿಳಿದುಕೊಳ್ಳುತ್ತಾರೆ. ಕೂಡು ಕುಟುಂಬ ಒಡೆದು ಹೋಗಿರುವುದರಿಂದ ಹಬ್ಬಗಳ ಮಹತ್ವ ಕಳೆದು ಹೋಗಿದೆ. ಪುರಾಣದ‌ ಹಿನ್ನೆಲೆಯುಳ್ಳ ಇಂತಹ ಹಬ್ಬಗಳನ್ನು ವಿವಿಧ ಧರ್ಮದ ಜನರನ್ನು ಸೇರಿಸಿ ಸೌಹಾರ್ದತೆಯ ರೀತಿಯಲ್ಲಿ ಅಚರಿಸುತಿರುವ ಹೆಜಮಾಡಿ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಪ್ರವಚನಕಾರ, ಯಕ್ಷಗಾನ ಕಲಾವಿದ ಭಾಸ್ಕರ್ ಪಡುಬಿದ್ರಿ ಹೇಳಿದರು. ಅವರು ಹೆಜಮಾಡಿ ಬಿಲ್ಲವ ಸಂಘದಲ್ಲಿ ಹೆಜಮಾಡಿ ಯುವವಾಹಿನಿ (ರಿ.) ವತಿಯಿಂದ ನಡೆದ ಸೌಹಾರ್ದತೆಯ ತುಳುವರೆ ತುಳಸಿ ಪರ್ಬ ಕಾರ್ಯಕ್ರಮದಲ್ಲಿ ತುಡರ್ ದೀಪ ಬೆಳಗಿಸಿ ಮಾತಾನಾಡಿದರು.

ಡಿಸೆಂಬರ್ 3, 4 : ಶಂಕರಪುರ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶಿಲಾಮಯ ಗರ್ಭಗುಡಿಯಲ್ಲಿ ಕಾಲಭೈರವ ಸ್ವಾಮಿ ಪ್ರತಿಷ್ಠೆ ; ಗುರು ವಂದನೆ ಕಾರ್ಯಕ್ರಮ

Posted On: 25-11-2023 06:04PM

ಶಂಕರಪುರ : ಕಾಪು ತಾಲೂಕಿನ ಶಂಕರಪುರ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇಲ್ಲಿ ಶಿಲಾಮಯ ಗರ್ಭಗುಡಿಯಲ್ಲಿ ಕಾಲಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರು ವಂದನೆ ಕಾರ್ಯಕ್ರಮ ಡಿಸೆಂಬರ್ 3 ಮತ್ತು 4 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಮಾತನಾಡಿದ ದ್ವಾರಕಾಮಾಯಿ ಮಠದ ಧರ್ಮದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ, ದಾನಿಗಳು, ಭಕ್ತರ ಸಹಾಯದಿಂದ 3 ವರ್ಷದ ಮೊದಲು ಜೀರ್ಣೋದ್ದಾರಗೊಂಡ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನವು ಧಾರ್ಮಿಕ, ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಬರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಹೊರ ರಾಜ್ಯ, ಹೊರ ದೇಶದ ಭಕ್ತರನ್ನು ಆಕರ್ಷಿಸುವ ಈ ಪುಣ್ಯ ಕ್ಷೇತ್ರವಾಗಿದೆ.