Updated News From Kaup
ಕಾಪು : ಧಾರ್ಮಿಕ ಪರಿಷತ್ ಸದಸ್ಯರಾಗಿ ಸದಾನಂದ ಪೂಜಾರಿ ಆಯ್ಕೆ
Posted On: 15 Mar 2024, 05:24 PM
ಕಾಪು : ಕರ್ನಾಟಕ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಸದಾನಂದ ಪೂಜಾರಿ ಆಯ್ಕೆಗೊಂಡಿರುತ್ತಾರೆ.
ಬೆಳಪು ಸ್ಪೋರ್ಟ್ಸ್ ಕ್ಲಬ್ : 30 ನೇ ವರ್ಷದ ಸಂಭ್ರಮ
Posted On: 14 Mar 2024, 10:06 AM
ಬೆಳಪು : ಇಲ್ಲಿನ ಸ್ಪೋರ್ಟ್ಸ್ ಕ್ಲಬ್ ಇದರ 30ನೇ ವರ್ಷದ ಸಂಭ್ರಮದ ಅಂಗವಾಗಿ 2024ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಯ ಭಾಗವಾಗಿ ಬೆಳಪು ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರಿನ ಘಟಕ ಮತ್ತು ಕಪಾಟನ್ನು ಹಸ್ತಾಂತರಿಸಲಾಯಿತು. ಬೆಳಪು ಗ್ರಾಮ ಪಂಚಾಯತ್ನ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರು ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಬೆಳಪು ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಸಾಮಾಜಿಕ, ಶಿಕ್ಷಣ, ಕ್ರೀಡೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಮುಂದೆಯೂ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು. ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ಶಾನಾವಾಝ್ ಫಝಲುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಾಹೀದ್ ನವಾಜ್, ಕಾರ್ಯದರ್ಶಿ ರಿಯಾನ್ ಅನ್ಸಾರ್, ಜೊತೆ ಕಾರ್ಯದರ್ಶಿ ಸಕ್ಲೆನ್ ಅಹಮ್ಮದ್, ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಹಿರಿಯ ಸದಸ್ಯರುಗಳಾದ ಅಲ್ತಾಫ್ ಅಬ್ದುಲ್ ಘನಿ, ಸಹೀದ್ ಅಹ್ಮದ್, ಅಕ್ರಮ್ ಮಹತಾಬ್ ಉಪಸ್ಥಿತರಿದ್ದರು. ಅಂಗನವಾಡಿಯ ಶಿಕ್ಷಕಿಯರಾದ ಪ್ರಿಯ, ಆಶಾಲತಾ ಭಾಗವಹಿಸಿದ್ದರು. ಖಾಲಿದ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.
ಈದು : ಸಾಮೂಹಿಕ ಶನೈಶ್ಚರ ಪೂಜೆ, ಕುಣಿತ ಭಜನಾ ಕಾರ್ಯಕ್ರಮ, ಹಿಂದೂ ಧರ್ಮ ಜಾಗೃತಿ ಸಭೆ
Posted On: 12 Mar 2024, 09:53 PM
ಕಾರ್ಕಳ : ಶ್ರೀ ರಾಮಾಂಜನೇಯ ಚಾರಿಟೇಬಲ್ ಟ್ರಸ್ಟ್ ಈದು, ಹಿಂದೂ ಜಾಗರಣ ವೇದಿಕೆ, ಹಿಂದೂ ಮಹಿಳಾ ಜಾಗರಣ, ಭಗತ್ ಸಿಂಗ್ ಘಟಕ ಈದು ಇದರ ಆಶ್ರಯದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ, ಕುಣಿತ ಭಜನಾ ಕಾರ್ಯಕ್ರಮ ಮತ್ತು ಹಿಂದೂ ಧರ್ಮ ಜಾಗೃತಿ ಸಭೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಶ್ರೀ ಗುರುದೇವ ದತ್ತ ಸಂಸ್ಥಾನ ಶ್ರೀ ಕ್ಷೇತ್ರ ಒಡಿಯೂರುರವರು ಆಶೀರ್ವಚನಗೈದರು. ಉಪನ್ಯಾಸಕರೂ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಂಗಳೂರು ವಿಭಾಗದ ಪ್ರಮುಖ್ ಆಗಿರುವ ಕೇಶವ ಬಂಗೇರ ಪ್ರಧಾನ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಆಂಡ್ ಸ್ಟೋನ್ ಕ್ರಷರ್ ಮಾಲಕರ ಸಂಘ ಹಾಗೂ ಈದು ರಾಮಾಂಜನೇಯ ಚಾರಿಟೇಬಲ್ ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ.ರವೀಂದ್ರ ಶೆಟ್ಟಿ ಬಜಗೋಳಿಯವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ಸಂಚಾಲಕರಾದ ಗುರುಪ್ರಸಾದ್ ನಾರಾವಿ, ಉದ್ಯಮಿ ಅರುಣ್ ಕುಮಾರ್ ನಿಟ್ಟೆ, ಭಜನಾ ತರಬೇತುದಾರ ಅಶೋಕ್ ಕಳಸಬೈಲು, ಜೈ ತುಳುನಾಡು ವೇದಿಕೆಯ ಅಧ್ಯಕ್ಷರಾದ ವಿಶು ಶ್ರೀಕೇರ, ವಸಂತ ಪಡ್ಡಾಯಿ ಪಾಪು, ಎಸ್ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಸುದರ್ಶನ್, ಈದು ಮೂಕಾಂಬಿಕಾ ಯುವಕ ಸಂಘದ ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಈದು ಹಿಂದೂ ಜಾಗರಣ ವೇದಿಕೆ ಭಗತ್ ಸಿಂಗ್ ಘಟಕದ ಅಧ್ಯಕ್ಷರಾದ ಪ್ರಸಾದ್ ಶರ್ಮ, ಈದು ಮಹಿಳಾ ಜಾಗರಣ ವೇದಿಕೆ ಘಟಕದ ಅಧ್ಯಕ್ಷೆ ಪ್ರೇಮಾ, ಹಿಂದೂ ಮಹಿಳಾ ಜಾಗರಣ ವೇದಿಕೆ ಭಗತ್ ಸಿಂಗ್ ಘಟಕ ಈದು ಇದರ ಸಹಸಂಚಾಲಕರಾದ ಲಾವಣ್ಯ ಈದು ರಾಮಾಂಜನೇಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಭಜನಾ ತರಬೇತುದಾರ ದೀನ್ ರಾಜ್ ಕಳವಾರ್ ಉಪಸ್ಥಿತರಿದ್ದರು.
ಕಾಪು : ಎ.ಆರ್.ಕೆ ಡೆವಲಪರ್ಸ್ ವತಿಯಿಂದ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ರಂಜಾನ್ ಕಿಟ್ ವಿತರಣೆ
Posted On: 12 Mar 2024, 10:03 AM
ಕಾಪು : ಎ.ಆರ್.ಕೆ ಡೆವಲಪರ್ಸ್ ಮತ್ತು ಕನ್ಸ್ಟ್ರಕ್ಷನ್ ಕಂಪನಿ ಕಾಪು ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಂಜಾನ್ ಕಿಟ್ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ರಂಜಾನ್ ಉಪವಾಸದಲ್ಲಿರುವ ಅತೀ ಬಡತನದ 100 ಮನೆಯನ್ನು ಗುರುತಿಸಿ ಅವರ ಮನೆಗೆ ಸುಮಾರು ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ ಮತ್ತು ಪಡಿತರ ಕಿಟ್ ನ್ನು ಕಾಪುವಿನ ಆಸು ಪಾಸಿನ ಕುಟುಂಬದ ಮನೆಗಳಿಗೆ ಒದಗಿಸಲಾಯಿತು. ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು ಮಲ್ಲಾರು ಗುರುಗಳಾದ ಅಶ್ರಫ್ ಮದನಿ ಮಜೂರು ದುವಾವನ್ನು ನೆರವೇರಿಸಿದರು. ನಂತರ ಮಾತನಾಡಿದ ಎ.ಆರ್.ಕೆ ಡೆವಲಪರ್ಸ್ ಕನ್ಸ್ಟ್ರಕ್ಷನ್ ಕಂಪನಿ ಮಾಲಕರಾದ ಅಸ್ಲಾಂ ಪರ್ಕಳ ನಾನು ನನ್ನ ದಿವಂಗತ ತಂದೆಯ ಸವಿನೆನಪಿಗಾಗಿ ಸುಮಾರು 5 ವರ್ಷಗಳಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರರವರ ಮಾರ್ಗದರ್ಶನದಲ್ಲಿ ಆಯ್ದ 100 ಅತಿ ಬಡತನ ಕುಟುಂಬಕ್ಕೆ ರಂಜಾನ್ ಕಿಟ್ ನೀಡುತ್ತಿದ್ದೇನೆ ಎಂದು ತಿಳಿಸಿದರು ದೇವರು ರಂಜಾನ್ ತಿಂಗಳು ಎಲ್ಲಾ ಜನರಿಗೆ ಸುಖ ಸಂಪತ್ತು ನೀಡಲಿ ಎಂದು ಶುಭ ಹಾರೈಸಿದರು. ಫಾರೂಕ್ ಚಂದ್ರನಗರ ಮಾತನಾಡಿ ಅಸ್ಲಾಂ ಪರ್ಕಳ ಹಾಗೂ ರಿಯಾಜ್ ಸೌದಿ ಅರೇಬಿಯಾ ಹಾಗೂ ಅವರ ಸಹೋದರರು ಅನಿವಾಸಿ ಭಾರತೀಯರಗಿದ್ದು ಇಲ್ಲಿಯೂ ಡೆವಲಪರ್ಸ್ ಕನ್ಸ್ಟ್ರಕ್ಷನ್ ಕೆಲಸ ಮಾಡಿಕೊಂಡು ರಂಜಾನ್ ಕಿಟ್ ಅಂತೆಯೇ ನಾನು ಮಾಡುವ ಹಲವಾರು ಸಮಾಜ ಸೇವೆಗೆ ಅವರು ನನಗೆ ಬೆನ್ನುಲುಬಾಗಿ ನಿಂತು ಬಡವರ ಸೇವೆ ಮಾಡುವುದರಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಉಸ್ಮಾನ್ ಶಿರ್ವ, ಆರಿಫ್ ಕಾಪು, ನಾಸಿರ್ ಅಬ್ದುಲ್ ಉಸ್ಮಾನ್, ಶಂಶುದ್ದಿನ್ ಇಸ್ಮಾಯಿಲ್ ಕರಂದಾಡಿ, ಅರಫ್ ಮಣಿಪಾಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ : ಸಾರ್ವಜನಿಕ ಪ್ರದೇಶ, ವಾಣಿಜ್ಯ ಮಳಿಗೆಗಳಲ್ಲಿ ತುಳು ಭಾಷೆಯ ನಾಮಫಲಕ ಅಳವಡಿಸಲು ಮನವಿ
Posted On: 11 Mar 2024, 02:41 PM
ಉಡುಪಿ : ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಯಿತು. ಉಡುಪಿ ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿದರು. ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ 2024 ರಲ್ಲಿ ತಿಳಿಸಿರುವಂತೆ ಕನ್ನಡ ಭಾಷೆಯನ್ನು ಶೇಕಡ 60 ರ ಬದಲಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗೌರವಾನ್ವಿತ ನ್ಯಾಯಾಲಯದ ಕನ್ನಡ ನಾಮಫಲಕಗಳಿಗೆ ಕನಿಷ್ಠ ಶೇಕಡ 50 ನ್ನು ನಮೂದಿಸಿ ಹಾಗೂ 2500 ವರ್ಷಗಳ ಇತಿಹಾಸ ಹೊಂದಿರುವ ಸ್ವಂತ ಲಿಪಿ ಹೊಂದಿರುವ ತುಳು ಲಿಪಿಯ ಅಕ್ಷರಗಳಿಗೆ ಶೇಕಡ 30 ರಷ್ಟು ಅವಕಾಶ ನೀಡಬೇಕು ಮತ್ತು ಉಳಿದ ವ್ಯಾವಹಾರಿಕ ಭಾಷೆಗಳಿಗೆ ಶೇಕಡ 20 ರಷ್ಟನ್ನು ತುಳುನಾಡಿನ 2 ಜಿಲ್ಲೆಗಳಿಗೆ ಅನ್ವಯವಾಗುವಂತೆ ಕೂಡಲೇ ವಿಶೇಷ ಆದೇಶ ಹೊರಡಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಆಕಾಶ್ ರಾಜ್ ಜೈನ್, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ತುಳು ಪರ ಹೋರಾಟಗಾರರಾದ ರೋಷನ್ ರೆನೋಲ್ಡ್, ಜೈ ತುಳುನಾಡು ಸಂಘಟನೆ ಅಧ್ಯಕ್ಷರಾದ ವಿಷು ಶ್ರೀಕೆರಾ, ತುಳುನಾಡು ಒಕ್ಕೂಟದ ಪ್ರಮುಖ ಮುಖಂಡರುಗಳು, ಉಡುಪಿ ರಾಜಕೀಯ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ ಅವರು, ಸೇರಿದಂತೆ ಎಲ್ಲಾ ತುಳು ಪರ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.
ಮಾಚ್೯ 11 : ಕಾಪು ಪುರಸಭಾ ವ್ಯಾಪ್ತಿಯಲ್ಲಿ ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ
Posted On: 10 Mar 2024, 08:39 PM
ಕಾಪು : ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾಪು, ಕಾಪು ಪುರಸಭೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಾಪು, ಜೆಸಿಐ ಕಾಪು ಮತ್ತು ಯಾರ್ಡ್ ಫ್ರೆಂಡ್ಸ್ ಉಳಿಯಾರಗೋಳಿ ಇವರ ಜಂಟಿ ಆಶ್ರಯದಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಗ್ರಾಮಗಳಲ್ಲಿ ಮಾ. 11 ರಂದು ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ನಾಯಿಗಳಿಂದ ರೇಬಿಸ್ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಪು ಪುರಸಭೆ ಆವರಣ, ಉಳಿಯಾರಗೋಳಿ ಯಾರ್ಡ್ ಬೀಚ್, ಮಲ್ಲಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಆವರಣ ಹಾಗೂ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ಆವರಣದಲ್ಲಿ ಬೆಳಿಗ್ಗೆ 10.30 ರಿಂದ 12.00ಗಂಟೆಯ ವರೆಗೆ ಏಕಕಾಲದಲ್ಲಿ ಲಸಿಕೆ ವಿತರಣೆ ನಡೆಯಲಿದೆ. ಕಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕರು ಲಸಿಕಾ ಅಭಿಯಾನಕ್ಕಾಗಿ ಸಾಕು ನಾಯಿಗಳನ್ನು ನಿಗದಿತ ಸಮಯದಲ್ಲಿ ನಿಗದಿತ ಸ್ಥಳಕ್ಕೆ ತಂದು ಲಸಿಕೆ ಹಾಕಿಸಿಕೊಳ್ಳ ಬಹುದಾಗಿದೆ. ಈ ಅಭಿಯಾನದ ಯಶಸ್ಸಿಗೆ ಕಾಪು ಪುರಸಭೆ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಕಾರ್ಯಕ್ರಮ ಸಂಯೋಜಕರು ವಿನಂತಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್ಎಸ್ಎಸ್ ಮುಖಂಡ ಪಾಂಡುರಂಗ ಶಾನುಭಾಗ್
Posted On: 10 Mar 2024, 08:34 PM
ಅಯೋಧ್ಯೆ: ಆರ್ಎಸ್ಎಸ್ನ ಉಡುಪಿಯ ಹಿರಿಯ ಸಕ್ರಿಯ ಸದಸ್ಯ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಶ್ರೀ ರಾಮನ ದರ್ಶನ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು. ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರಿಗೆ ಹೃದಯಾಘಾತವಾಗಿದೆ. ಸಮೀಪವರ್ತಿಗಳು ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ದೈಹಿಕ ಅಂಧತ್ವವಿದ್ದರೂ, ಆರ್ಎಸ್ಎಸ್ನಲ್ಲಿ ಅತ್ಯಂತ ಸಕ್ರಿಯರಾಗಿದ್ದ ಶಾನುಭಾಗರು ಅಪೂರ್ವ ಚಿಂತಕರೂ, ರಾಷ್ಟ್ರ ಭಕ್ತರೂ ಆಗಿದ್ದರು.
ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಚಿಕಿತ್ಸೆಗೆ ನೆರವು
Posted On: 09 Mar 2024, 02:09 PM
ಪಡುಬಿದ್ರಿ : ಪದವಿ ಶಿಕ್ಷಣ ಪಡೆಯುತ್ತಿರುವ ಶಿರ್ವದ ಜಿಗಿಷಾ ದೇವಾಡಿಗ ಎಂಬ ಹೆಣ್ಣು ಮಗಳ ಬೋನ್ ಟ್ಯೂಮರ್ ಚಿಕಿತ್ಸೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ, ಗಣಪತಿ ದೇವಸ್ಥಾನ ಪಡುಬಿದ್ರಿ ಇಲ್ಲಿ 45,000 ರೂಪಾಯಿಗಳ ಧನಸಹಾಯದ ಚೆಕ್ ಹಸ್ತಾಂತರಿಸಿ ಜಿಗಿಷಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಆಸ್ಪೆನ್ ಎಸ್ ಇ ಝಡ್ ಮುಖ್ಯಸ್ಥ ಅಶೋಕ್ ಕುಮಾರ್ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷರಾದ ನವೀನಚಂದ್ರ ಶೆಟ್ಟಿ, ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಫಲಿಮಾರು, ಕಾರ್ಯಕಾರಿ ಸಮಿತಿ ಸದಸ್ಯರಾದ ರವಿ ಶೆಟ್ಟಿ ಶಾರದೆ, ಸದಸ್ಯರಾದ ಮಹೇಶ್ ದೇವಾಡಿಗ ಸ್ಮೈಲ್ ಫೋಟೊಗ್ರಫಿ ಮುಕ್ಕ ಮತ್ತು ಜಗನ್ನಾಥ್ ಶೆಟ್ಟಿ, ರಮಣಿ ಐಸ್ಕ್ರೀಂ ಪಡುಬಿದ್ರಿ ಮುಂತಾದವರು ಉಪಸ್ಥಿತರಿದ್ದರು.
ಉಚ್ಚಿಲ : ನಟೇಶ ನೃತ್ಯ ನಿಕೇತನ - ವಿಂಶತಿ ಸಂಭ್ರಮ ; ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
Posted On: 09 Mar 2024, 07:44 AM
ಉಚ್ಚಿಲ : ಭಾರತವು ಹಲವು ಸಂಸ್ಕೃತಿಗಳ ತವರು. ಬಹು ಬದುಕುಗಳ ಕಥನ ಎಂಬ ಮಾತಿನಂತೆ ವಿವಿಧ ಅಭಿವೃದ್ಧಿಯ ಜೊತೆಗೆ ಸಂಸ್ಕಾರಯುತ ಮಾನವ ಸಂಪನ್ಮೂಲ ದೇಶದ ಆಸ್ತಿ. ಪಾಶ್ಚಿಮಾತ್ಯದೆಡೆಗೆ ಮಕ್ಕಳು ವಾಲುತ್ತಿರುವ ಸಂದರ್ಭ ನಮ್ಮ ನೆಲದ ಸಂಸ್ಕೃತಿ, ಸಂಗೀತದ ಅಭಿರುಚಿ ಬೆಳೆಸುವುದು ಅನಿವಾರ್ಯ. ಐತಿಹಾಸಿಕ ಸಾಂಸ್ಕೃತಿಕ ನೃತ್ಯ ಪ್ರಾಕಾರವಾದ ಭರತನಾಟ್ಯವನ್ನು ನೂರಾರು ಮಕ್ಕಳಿಗೆ ಕಲಿಸಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಕೀರ್ತಿ ನಟೇಶ ನೃತ್ಯ ನಿಕೇತನ ಸಂಸ್ಥೆಗಿದೆ. ವೃತ್ತಿ ಮತ್ತು ಲೌಕಿಕ ಬದುಕಿನಲ್ಲಿ ಲಯ ಕಂಡುಕೊಂಡ ಮಂಗಳ ಕಿಶೋರ್ ದೇವಾಡಿಗ ಅವರ ನಾಟ್ಯ ಕೇಂದ್ರದಿಂದ ಭರತನಾಟ್ಯದ ಕಲಿಕೆಯ ಜೊತೆಗೆ ಸಾಧಕರನ್ನು ಗುರುತಿಸುವ ಕಾಯಕ ಮುಂದೆಯೂ ನಡೆಯಲಿ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಉಚ್ಚಿಲದಲ್ಲಿ ನಟೇಶ ನೃತ್ಯ ನಿಕೇತನ ಉಚ್ಚಿಲದ ವಿಂಶತಿ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಉಚ್ಚಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಅರ್ಚಕರಾದ ಗೋವಿಂದ ರಾಜ್ ಭಟ್ ಉದ್ಘಾಟಿಸಿ, ಶುಭಹಾರೈಸಿದರು. ಪ್ರಶಸ್ತಿ ಪ್ರದಾನ : ಪತ್ರಿಕಾರಂಗದಲ್ಲಿ ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಸಂಗೀತ ಕ್ಷೇತ್ರದಲ್ಲಿ ಶರತ್ ಉಚ್ಚಿಲ, ಭರತನಾಟ್ಯ ಕ್ಷೇತ್ರದಲ್ಲಿ ಡಾ| ರಶ್ಮಿ ಕಲ್ಕೂರ, ಯಕ್ಷಗಾನ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ವೈ.ಎಲ್.ವಿಶ್ವರೂಪ ಮಧ್ಯಸ್ಥ ನೀಲಾವರ, ಶಿಕ್ಷಣ ಕ್ಷೇತ್ರದಲ್ಲಿ ವನಿತಾ, ನಾಟ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಪ್ರಕಾಶ್ ಕಾರ್ಕಳರಿಗೆ ನಟೇಶ ಪ್ರಶಸ್ತಿಯನ್ನು ನೀಡಲಾಯಿತು. ಪ್ರಸಾದನ ಕ್ಷೇತ್ರದಲ್ಲಿ ರಮೇಶ್ ಉಡುಪಿ, ವೇಷಭೂಷಣ ಸಂಸ್ಥೆ ಕಲಾನಿಕೇತನ ಸುರತ್ಕಲ್ ಇದರ ಸ್ವರ್ಣ ಎಲ್ ಶೆಟ್ಟಿ ಇವರಿಗೆ ವರ್ಣಾರ್ಪಣ ಪ್ರಶಸ್ತಿ, ಭರತನಾಟ್ಯ ಕಲಾವಿದೆ ವಿದುಷಿ ವೀಣಾ ಎಂ ಸಾಮಗ ಇವರಿಗೆ ನಾಟ್ಯ ಕಲಾಂಜಲಿ ಪ್ರಶಸ್ತಿಯನ್ನು ಅತಿಥಿಗಳ ಸಮ್ಮುಖ ಪ್ರದಾನಿಸಲಾಯಿತು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಾಲೂಕು ತಹಶೀಲ್ದಾರ್ ಡಾ| ಪ್ರತಿಭ ಆರ್., ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಲಕ್ಷ್ಮಿ ದೇವಳದ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯ, ನಾದಶ್ರೀ ಸೊಸೈಟಿ ಕುಕ್ಕಿಕಟ್ಟೆ ಉಡುಪಿ ಇದರ ಅಧ್ಯಕ್ಷ ಶ್ರೀಧರ ದೇವಾಡಿಗ, ಭರತನಾಟ್ಯ ಕಲಾವಿದೆ ವಿದುಷಿ ವೀಣಾ ಎಂ ಸಾಮಗ, ನೃತ್ಯ ಗುರು ಮಂಗಳ ಕಿಶೋರ್, ಸಂಚಾಲಕರಾದ ಪ್ರಕಾಶ್ ದೇವಾಡಿಗ, ಕಿಶೋರ್ ದೇವಾಡಿಗ ಮುಖ್ಯ ಅತಿಥಿಗಳಾಗಿದ್ದರು. ಭರತನಾಟ್ಯ ಕಲಾವಿದೆ ವಿದುಷಿ ವೀಣಾ ಎಂ ಸಾಮಗ ಅಧ್ಯಕ್ಷತೆ ವಹಿಸಿದ್ದರು. ಪಂಚಮಿ ಪ್ರಾರ್ಥಿಸಿದರು. ನೃತ್ಯ ಗುರು ಮಂಗಳ ಕಿಶೋರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಆಯ್ಕೆ
Posted On: 09 Mar 2024, 07:31 AM
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಇವರು ಆಯ್ಕೆಯಾಗಿರುತ್ತಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುತ್ತಾರೆ.
