Updated News From Kaup
ಕಾಪು : ದಿವಾಕರ ಶೆಟ್ಟಿಗೆ ಸಹಕಾರಿ ಕ್ಷೇತ್ರದ ಸಹಕಾರ ರತ್ನ ಪ್ರಶಸ್ತಿ
Posted On: 19-11-2023 12:13PM
ಕಾಪು : ಕರ್ನಾಟಕ ರಾಜ್ಯ ಹಾಲು ಮಹಾ ಮಂಡಳಿಯ ರಾಜ್ಯ ನಿರ್ದೇಶಕ, ಕೃಷಿ, ಸಹಕಾರಿ ಮತ್ತು ಉದ್ಯಮ ಕ್ಷೇತ್ರದ ಸಾಧಕ ಕಾಪು ದಿವಾಕರ ಶೆಟ್ಟಿ ಅವರಿಗೆ ಸಹಕಾರಿ ಕ್ಷೇತ್ರದ ರಾಜ್ಯಮಟ್ಟದ ಅತ್ಯುನ್ನತ ಸಹಕಾರ ರತ್ನ ಪ್ರಶಸ್ತಿ ದೊರೆತಿದೆ.
ಪಡುಬಿದ್ರಿ : ಪಂಚಾಯತ್ ಸದಸ್ಯನಿಂದ ಅಧಿಕಾರಿಗೆ ಬೆದರಿಕೆ
Posted On: 19-11-2023 11:18AM
ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರಿಗೆ ಪಂಚಾಯತ್ ಸದಸ್ಯರೋರ್ವರು ಬೆದರಿಕೆ ಹಾಕಿರುವ ಘಟನೆ ನವೆಂಬರ್ 17ರಂದು ಪಡುಬಿದ್ರಿ ಪಂಚಾಯತ್ ನಲ್ಲಿ ನಡೆದಿದೆ.
ನವೆಂಬರ್ 20 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
Posted On: 18-11-2023 06:36PM
ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿಯ ಕೇಂದ್ರ ಕಚೇರಿ ಸಹಕಾರ ಸಂಗಮದ ವೈ ಲಕ್ಷ್ಮಣ ಸಭಾಂಗಣದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ ಹಾಗೂ ಸಹಕಾರ ಶಿಕ್ಷಣ, ತರಬೇತಿ ಪರಿಷ್ಕರಣೆ ದಿನ, ಸೊಸೈಟಿಯ ನವೀಕೃತ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ, ಸನ್ಮಾನ, ಕೃಷಿ ಸಹಾಯ ಧನ ವಿತರಣಾ ಸಮಾರಂಭ ಜರಗಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಹೇಳಿದರು. ಅವರು ಶನಿವಾರ ಪಡುಬಿದ್ರಿ ಸೊಸೈಟಿಯ ಸಭಾಂಗಣದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನವೆಂಬರ್ ೧೮ : ಎರ್ಮಾಳುವಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ದಿ. ರಾಮಪ್ಪ ಜಿ. ಸಾಲಿಯಾನ್ ಸಂಸ್ಮರಣೆ
Posted On: 17-11-2023 11:06AM
ಎರ್ಮಾಳು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ "ಅಮೃತ ಭಾರತಿಗೆ ಕನ್ನಡದ ಆರತಿ" ಕಾರ್ಯಕ್ರಮದಡಿಯಲ್ಲಿ ಸ್ವಾತಂತ್ರ್ಯ ಸೇನಾನಿಗಳ ನೆನಪಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ದಿ.ರಾಮಪ್ಪ ಜಿ. ಸಾಲಿಯಾನ್ರವರ ಸಂಸ್ಮರಣೆ "ಅಮೃತಾಂಜಲಿ" ಕಾರ್ಯಕ್ರಮ ನವೆಂಬರ್ ೧೮ ಶನಿವಾರ ಸಾಯಂ ಗಂಟೆ ೪ ಕ್ಕೆ ಬಡ ಗ್ರಾ.ಪಂ.ವ್ಯಾಪ್ತಿಯ ಎರ್ಮಾಳುವಿನಲ್ಲಿ ಹೋರಾಟಗಾರರ ಹಿರಿಯ ಮಗಳು ಶಾರದಾ ಆರ್ ಸಾಲಿಯಾನ್ ಇವರ ನಿವಾಸ "ಸಿದ್ಧಿವಿನಾಯಕ"ದಲ್ಲಿ ಜರುಗಲಿದೆ.
ಉಡುಪಿ : ಕೆ.ಪಿ.ಸಿ.ಸಿ ವಕ್ತಾರರಾಗಿ ನೂತನವಾಗಿ ಆಯ್ಕೆಯಾದ ಇರ್ಷಾದ್ ಅಹ್ಮದ್ ಶೇಖ್ ರಿಗೆ ಸನ್ಮಾನ
Posted On: 17-11-2023 11:03AM
ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಗೆ ವಕ್ತಾರರಾಗಿ ನೂತನವಾಗಿ ಆಯ್ಕೆಯಾದ ಇರ್ಷಾದ್ ಅಹ್ಮದ್ ಶೇಖ್ ರಿಗೆ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಮಣಿಪುರ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಉಡುಪಿ : ನೇಜಾರು ಪ್ರಕರಣ - ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಿಂದ ಮನವಿ
Posted On: 16-11-2023 09:13PM
ಉಡುಪಿ : ನೆಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಅಬ್ದುಲ್ ಜಬ್ಬಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಉಡುಪಿಯ ಕಾಂಗ್ರೆಸ್ ಮುಖಂಡರು, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಶೇಕ್ ಮಣಿಪುರ ನಿನ್ನೆ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ಸಭೆಯಲ್ಲಿ ಮನವಿ ನೀಡಿದರು.
ಕಾರ್ಕಳ : ಅತ್ತೂರು ಬಾಸಿಲಿಕ ವಠಾರದಲ್ಲಿ ಹಣತೆ ಬೆಳಗಿಸಿದ ಕ್ರೈಸ್ತ ಬಾಂಧವರು
Posted On: 16-11-2023 12:54PM
ಕಾರ್ಕಳ : ಅತ್ತೂರಿನ ಪ್ರತಿಷ್ಠಿತ ಸಂತ ಲಾರೆನ್ಸರ ಬಾಸಿಲಿಕದ ಆವರಣ ಮತ್ತು ಮುಂಭಾಗದಲ್ಲಿ ಐಸಿವೈಎಂ ಯುವಕರು ಹಣತೆ ಹಚ್ಚುವ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಅಂಡರ್ - 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ
Posted On: 16-11-2023 11:55AM
ಕಟಪಾಡಿ : ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ.ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ.
ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ ಸೂಡ - 9 ನೇ ವರ್ಷದ ಅಶ್ವತ್ಥ ಪೂಜೆ, ಸಾಮೂಹಿಕ ಗೋ ಪೂಜೆ
Posted On: 14-11-2023 05:37PM
ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ (ರಿ.) ಸೂಡ ಇವರ ವತಿಯಿಂದ ಒಂಬತ್ತನೇ ವರ್ಷದ ಅಶ್ವತ್ಥ ಪೂಜೆ, ಸಾಮೂಹಿಕ ಗೋ ಪೂಜೆಯು ಸೂಡ ಸುಬ್ರಹ್ಮಣ್ಯ ಅನುದಾನಿತ ಶಾಲಾ ಬಳಿಯ ಅಶ್ವತ್ಥ ವೃಕ್ಷದ ಬಳಿ, ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಶ್ರೀಶ ಭಟ್ ರವರ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಮತ್ತಿತರ ಧಾರ್ಮಿಕ ಕಾರ್ಯಗಳೊಂದಿಗೆ ನೆರವೇರಿತು.
ಕಾಪು ಮಾರಿಗುಡಿ ಜೀರ್ಣೋದ್ಧಾರ : ಕೋಟೆ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ
Posted On: 14-11-2023 03:10PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಶನಿವಾರ ಸಂಜೆ ಕೋಟೆ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ, ಮಂಜ ಶ್ರೀ ನಾಗ ಬ್ರಹ್ಮಾದಿ ಪಂಚದೈವಿಕ ಸನ್ನಿಧಿಯಲ್ಲಿ ಜರಗಿತು. ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ಶಾರದಾ ಡಿ. ಕೆ, ಸ್ಮಿತಾ ಪ್ರವೀಣ್ ಕಾಂಚನ್, ಗೀತಾ ಲಕ್ಷ್ಮಣ್, ಚಂದ್ರಿಕಾ ಚಂದ್ರಹಾಸ್, ಶಶಿಪ್ರಕಾಶ್, ವನಿತಾ ನಾಗೇಶ್, ಬೇಬಿ ಜಿ. ಕರ್ಕೇರ, ಅಶ್ವಿನಿ ಸುನೀಲ್ ಮತ್ತು ಮಾಲತಿ ಶಂಕರ್ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
