Updated News From Kaup

ಉಡುಪಿ : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ - ಮಹಿಳಾ ಘಟಕದ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಆಯ್ಕೆ

Thumbnail
Posted On: 22 Dec 2023, 04:55 PM

ಉಡುಪಿ : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಎಸ್ಎಎಸ್ಎಸ್) ಇದರ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹಾಗೂ ರಾಜ್ಯಾಧ್ಯಕ್ಷ ಡಾ.ಜಯರಾಂ ಅವರ ನಿರ್ದೇಶನದ ಮೇರೆಗೆ, ಉಡುಪಿ ಜಿಲ್ಲಾ ಎಸ್ಎಎಸ್ಎಸ್ ಮಹಿಳಾ ಘಟಕವನ್ನು ರಚಿಸಲಾಗಿದ್ದು, ಇದರ ಜಿಲ್ಲಾ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಇವರನ್ನು ನಿಯೋಜಿಸಲಾಗಿದೆ. ಎಸ್ಎಎಸ್ಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ರವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಇದೇ ತಿಂಗಳ ಡಿಸೆಂಬರ್ 31 ನೇ ತಾರೀಕಿನಂದು ಭಾನುವಾರ, ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ, ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ ಮತ್ತು ತಾಲೂಕು ,ಹಾಗೂ ಶ್ರೀ ಅಯ್ಯಪ್ಪ ಮಂದಿರ (ರಿ) ಮಲ್ಪೆ ಇದರ ಜಂಟಿ ಆಶ್ರಯದೊಂದಿಗೆ ಮಲ್ಪೆಯ ಅಯ್ಯಪ್ಪ ಮಂದಿರ ವಠಾರದಲ್ಲಿ ನಡೆಯಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಸಮಾವೇಶ ಮತ್ತು ಹರಿವರಾಸನಂ ಶತಮಾನೋತ್ಸವ ಆಚರಣೆಯ ಸಮಾರಂಭದ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಹಿಳಾ ಎಸ್ಎಎಸ್ಎಸ್ ನ ಪದಗ್ರಹಣ ಕಾರ್ಯಕ್ರಮವು ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪಡು ಕುತ್ಯಾರು : ಆನೆಗುಂದಿ ಮಠ - ಡಿಸೆಂಬರ್ 25ರಿಂದ ಯಕ್ಷಗಾನ ತಾಳಮದ್ದಲೆ ಸಪ್ತಾಹ 2023

Thumbnail
Posted On: 21 Dec 2023, 05:31 PM

ಪಡುಕುತ್ಯಾರು : ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ 2023 ದಶಂಬರ 25ರಿಂದ ದಶಂಬರ 31ರವರೆಗೆ ತೃತೀಯ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ 2023 ನಡೆಯಲಿದೆ. ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯುವ ಯಕ್ಷಗಾನ ಸಪ್ತಾಹದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ ಮತ್ತು ಪೂರ್ಣಾನುಗ್ರಹದೊಂದಿಗೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುವ 2023ರ ಡಿಸೆಂಬರ್ 25 ರಂದು ಅಪರಾಹ್ನ 2.30ಕ್ಕೆ ಯಕ್ಷಗಾನ ಸಪ್ತಾಹ 2023 ರ ಉದ್ಘಾಟನೆಯನ್ನು ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನದ ಮೂಲಕ ನೆರವೇರಿಸುವರು. ಆನೆಗುಂದಿ ಪ್ರತಿಷ್ಠಾನ ಮುಂಬಯಿ ವಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಟಿ. ಆಚಾರ್ಯ ಮುಂಬೈ ದಿಕ್ಸೂಚಿ ಭಾಷಣ ಮಾಡುವರು. ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾಪು ವಿಧಾನ ಸಭಾ ಕ್ಷೇತ್ರ ಶಾಸಕ ಹಾಗೂ ಯಕ್ಷಗಾನ ಕಲಾ ಪೋಷಕರಾದ ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸುವರು. ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕಳಿ ಚಂದ್ರಯ್ಯ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಕೆ. ಉಪಸ್ಥಿತರಿರುವರು. ಡಿಸೆಂಬರ್ 31 ಅಪರಾಹ್ನ 2.30ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ ವಾಸುದೇವ ರಾವ್ ಸುರತ್ಕಲ್, ರುದ್ರಯ್ಯ ಆಚಾರ್ಯ ಕೋಟ, ಸದಾಶಿವ ಆಚಾರ್ಯ ಬೈಲೂರು, ಶಂಕರ ಆಚಾರ್ಯ ಕೊಳ್ಯೂರು, ಭಾಸ್ಕರ್ ಜಿ. ಪೂಜಾರಿ ಕಟಪಾಡಿ, ರಾಘು ಎಸ್., ಗುಜರನ್ ಉಚ್ಚಿಲ, ವಾಮನ ಆಚಾರ್ಯ ಬೋವಿಕ್ಕಾನ ಕಾಸರಗೋಡು ಎಂಬೀ 7 ಮಂದಿ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಸಂಪನಗೊಳ್ಳುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ, ವಡೇರಹೋಬಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರು, ಹಾಗೂ ಯಕ್ಷಗಾನ ಕಲಾ ಪೋಷಕರಾದ ಎಂ. ಮಿಥುನ್ ರೈ, ಮಂಗಳೂರು ಭಾಗವಹಿಸುವರು. ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ , ಸರಸ್ವತೀ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಬೆಳುವಾಯಿ ಸುಂದರ ಆಚಾರ್ಯ, ಮಂಗಳೂರು, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಆನೆಗುಂದಿ ಪ್ರತಿಷ್ಠಾನದ ಹಿರಿಯ ವಿಶ್ವಸ್ಥರಾದ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಆನೆಗುಂದಿ ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ನಾಗಧರ್ಮೇಂದ್ರ ಸರಸ್ವತೀ ಸಂಸ್ಕ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ಸರಸ್ವತೀ ಪೂರ್ವ ವಿದ್ಯಾರ್ಥಿ ವೃಂದದ ಅಧ್ಯಕ್ಷ ಕೇಶವ ಶರ್ಮಾ ಇರುವೈಲು ಉಪಸ್ಥಿತರಿರುವರು. ಯಕ್ಷಗಾನ ತಾಳಮದ್ದಲೆ ಸಪ್ತಾಹ 2023 ಸಂಯೋಜಕ ಜನಾರ್ಧನ ಆಚಾರ್ಯ ಕನ್ಯಾನ, ಆನೆಗುಂದಿ ಸರಸ್ವತೀ ಗೋವು -ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ (ರಿ) ಪ್ರಧಾನ ಕಾರ್ಯದರ್ಶಿ, ಡಿ. ಸುರೇಶ್ ಆಚಾರ್ಯ, ಕಟಪಾಡಿ , ಅಸೆಟ್ ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಕೆ.ಜೆ, ನಾಗಧರ್ಮೇಂದ್ರ ಸರಸ್ವತೀ ಸಂಸ್ಕ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ಸರಸ್ವತೀ ಪೂರ್ವ ವಿದ್ಯಾರ್ಥಿ ವೃಂದದ ಸಹ ಕಾರ್ಯದರ್ಶಿ ಮನೋಜ್ ಶರ್ಮಾ, ಪಡುಕುತ್ಯಾರು , ರಮಾ ನವೀನ್ ಆಚಾರ್ಯ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಸರಸ್ವತೀ ಮಾತೃಮಂಡಳಿ ಪಡುಕುತ್ಯಾರು, ಐ. ಲೋಲಾಕ್ಷ ಶರ್ಮಾ ಪ್ರಧಾನ ಕಾರ್ಯದರ್ಶಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ, ಪಡುಕುತ್ಯಾರು ಇವರು ಪ್ರತಿ ದಿನಗಳ ಕಾರ್ಯಕ್ರಮದ ವ್ಯವಸ್ಥೆಯ ನೇತೃತ್ವವಹಿಸಲಿದ್ದಾರೆ ಎಂದು ಆನೆಗುಂದಿ ಪ್ರತಿಷ್ಠಾನ ಕಟಪಾಡಿ ಪಡುಕುತ್ಯಾರು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು : ಅಭಿನಂದನ ಸಮಿತಿಯಿಂದ ಚಂದ್ರನಗರದಲ್ಲಿ ಸಮಾಜ ಸೇವೆಯ ಸಾಧಕತ್ರಯರಿಗೆ ಸನ್ಮಾನ

Thumbnail
Posted On: 21 Dec 2023, 05:10 PM

ಕಾಪು : ಔದ್ಯೋಗಿಕ ನೆಲೆಯಲ್ಲಿ ಕ್ರಿಯಾಶೀಲತೆಯನ್ನು ಹೊಂದಿ ಅದರಿಂದ ಬಂದ ಒಂದಷ್ಟು ಅಂಶವನ್ನು ಸಮಾಜ ಸೇವೆಗೆ ಬಳಸುವ ಮನಸ್ಸು ಎಲ್ಲರಿಗೂ ಬರುವುದಿಲ್ಲ ಅಂತಹ ನಿಸ್ವಾರ್ಥ ಉದ್ದೇಶದ ಸಾಧಕರನ್ನು ಗುರುತಿಸುವುದು ಸಂತಸ ತಂದಿದೆ ಎಂದು ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಹೇಳಿದರು. ಅವರು ಗುರುವಾರ ಕಾಪು ಚಂದ್ರನಗರ ಬಟರ್ ಫ್ಲೈ ಅತಿಥಿ ಗೃಹದ ಸಭಾಂಗಣದಲ್ಲಿ ಕಾಪು ಅಭಿನಂದನ ಸಮಿತಿಯಿಂದ ನಡೆದ ಸಾಧಕರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸನ್ಮಾನ : ಯುಎಇ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ವತಿಯಿಂದ ಸಮಾಜ ಸೇವೆಗಾಗಿ ಕೊಡಮಾಡುವ 2023 ಸಾಲಿನ ದುಬೈ ಗಡಿನಾಡು ಉತ್ಸವದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಸಮಾಜ ಸೇವಕ ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರ ಹಾಗೂ ಸಮಾಜ ಬಂಧು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕಲಿಮ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸಿಬ್ಗತ್ ಉಲ್ಲಾ ಶರೀಫ್‌ ಹಾಗೂ ಕೇರಳ ರಾಜ್ಯದ ಗಡಿನಾಡ ಸಾಹಿತ್ಯ ಅಕಾಡೆಮಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಪುವಿನ ಸಮಾಜ ಸೇವಕ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರನ್ನು ಗಣ್ಯರು, ಅಭಿಮಾನಿಗಳು ಸನ್ಮಾನಿಸಿದರು. ಈ ಸಂದರ್ಭ ಅಬೂಬಕ್ಕರ್ ಪರ್ಕಳ, ವಿಶ್ವನಾಥ ಪೂಜಾರಿ ಗರಡಿಮನೆ, ಶೇಖರ್ ಬಿ‌. ಶೆಟ್ಟಿ ಕಳತ್ತೂರು, ಅರುಣಾಕರ ಶೆಟ್ಟಿ ಕಳತ್ತೂರು, ಚಂದ್ರನಗರ ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್ ನ ಸ್ಥಾಪಕ ಅಧ್ಯಕ್ಷ ಸಂಶುದ್ದೀನ್ ಯೂಸುಫ್, ಕೆಪಿಸಿಸಿ ಎನ್.ಆರ್.ಐ ವಿಂಗ್ ಅಧ್ಯಕ್ಷ ಶೇಖ್ ವಾಹಿದ್ ದಾವೂದ್, ಉಮ್ಮರಬ್ಬ ಚಂದ್ರನಗರ ಉಪಸ್ಥಿತರಿದ್ದರು. ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ದಿವಾಕರ್ ಡಿ. ಶೆಟ್ಟಿ ಸ್ವಾಗತಿಸಿದರು. ದಿನೇಶ್ ಆಚಾರ್ಯ ಶಿರ್ವ ಅಭಿನಂದನಾ ಪತ್ರ ವಾಚಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಡಿಸೆಂಬರ್ 23 : ಶ್ರೀ ಧೂಮಾವತಿ ದೈವಸ್ಥಾನ ಎರ್ಮಾಳು ಬಡಾ - ನೇಮೋತ್ಸವ

Thumbnail
Posted On: 21 Dec 2023, 08:25 AM

ಎರ್ಮಾಳು : ಬಡಾ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಡಿಸೆಂಬರ್ 23 ರಂದು ವಾರ್ಷಿಕ ನೇಮೋತ್ಸವ ಜರಗಲಿದೆ. ಡಿಸೆಂಬರ್ 22, ಶುಕ್ರವಾರ ಮಧ್ಯಾಹ್ನ ಗಂಟೆ 3 ಕ್ಕೆ ನೂತನ ಬೆಳ್ಳಿಯ ನಗ, ನಾಣ್ಯಗಳನ್ನು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ದೈವಸ್ಥಾನಕ್ಕೆ ಸಮರ್ಪಿಸಲಾಗುವುದು. ಸಂಜೆ ಶ್ರೀ ಧೂಮಾವತಿ ದೈವದ ದರ್ಶನ, ಧ್ವಜಾರೋಹಣ ಜರಗಲಿದ್ದು, ಡಿಸೆಂಬರ್ 23, ಶನಿವಾರ ನೇಮೋತ್ಸವದಂದು ಭಂಡಾರ ಇಳಿದ ನಂತರ ರಾತ್ರಿ ಘಂಟೆ 8 ಕ್ಕೆ ಸುರೇಶ ಗೋಪಾಲ ಶೆಟ್ಟಿ ಮತ್ತು ಕುಟುಂಬಿಕರು, ಮಾತೋಶ್ರೀ, ಎರ್ಮಾಳು ಬಡಾ ಇವರ ವತಿಯಿಂದ ಅನ್ನಸಂತರ್ಪಣೆ ಹಾಗೂ ಕುಮಾರ ಜಿ.ಶೆಟ್ಟಿ ಮಾತೋಶ್ರೀ, ಎರ್ಮಾಳು ಬಡಾ ಮತ್ತು ಎರ್ಮಾಳು ನೈಮಾಡಿ ಶ್ರೀ ನಾರಾಯಣ ಕೆ. ಶೆಟ್ಟಿ ಇವರ ವತಿಯಿಂದ ಹೂವಿನ ಅಲಂಕಾರ ಸೇವೆ ಜರಗಲಿರುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ ವೈದ್ಯಕೀಯ ಪ್ರತಿನಿಧಿಗಳ ಮುಷ್ಕರ : ಕೇಂದ್ರ ಸಕಾ೯ರಕ್ಕೆ ಮನವಿ ಸಲ್ಲಿಕೆ

Thumbnail
Posted On: 21 Dec 2023, 08:12 AM

ಉಡುಪಿ : ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (KSM&SRA), ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (FMRAI) ಯ ಅಂಗಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿಯವರಿಗೆ ಅಪರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಎಲ್ಲಾ ವೈದ್ಯಕೀಯ ಪ್ರತಿನಿಧಿಗಳು ಮುಷ್ಕರ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರವು ಮಾರಾಟ ಪ್ರಚಾರ ನೌಕರರನ್ನು ರಕ್ಷಿಸಬೇಕು.(ಸೇವೆಗಳ ಷರತ್ತುಗಳು) ಕಾಯಿದೆ, 1976.,ಮಾರಾಟ ಪ್ರಚಾರದ ಉದ್ಯೋಗಿಗಳಿಗೆ ಶಾಸನಬದ್ಧ ಕೆಲಸದ ನಿಯಮಗಳನ್ನು ರೂಪಿಸಬೇಕು,ಸರ್ಕಾರಿ ಆಸ್ಪತ್ರೆಗಳು, ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರತಿನಿಧಿಗಳ ಪ್ರವೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಿ ಕೆಲಸ ಮಾಡುವ ಹಕ್ಕನ್ನು ಖಾತ್ರಿಪಡಿಸಿಕೊಳ್ಳಬೇಕು, ಬೆಲೆಗಳನ್ನು ಕಡಿಮೆ ಮಾಡಿ ಮತ್ತು ಔಷಧಿಗಳು ಮತ್ತು ವೈದ್ಯಕೀಯ ಸಾಧನಗಳ GST ಅನ್ನು ತೆಗೆದುಹಾಕಬೇಕು.,ಡೇಟಾ ಗೌಪ್ಯತೆಯನ್ನು ರಕ್ಷಿಸಬೇಕು. ಅದೇ ರೀತಿ ಉದ್ಯೋಗದಾತರು ಮಾರಾಟಕ್ಕೆ ಸಂಬಂಧಿಸಿದ ಕಿರುಕುಳ ನಿಲ್ಲಿಸಬೇಕು,.ಟ್ರ್ಯಾಕಿಂಗ್ ಮತ್ತು ಕಣ್ಗಾವಲು ಮೂಲಕ ಗೌಪ್ಯತೆಗೆ ಇರುವ ಕ್ರಮ ತೆಗೆಯಬೇಕು,ಕೆಲಸದ ಸ್ಥಳಗಳಿಗೆ ಅಡೆತಡೆಯಿಲ್ಲದ ಪ್ರವೇಶವನ್ನು ಖಚಿತಪಡಿಸಿಕೊಳ್ಳಬೇಕು, ಎಂಬ ವಿಷಯಗಳನ್ನು ಮನವಿಯಲ್ಲಿ ತಿಳಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮನವಿ ಸ್ವೀಕರಿಸಿದರು. ಈ ಸಂದಭ೯ದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಕಾಯ೯ದಶಿ೯ ಪ್ರಸನ್ನ ಕಾರಂತ್, ಅಶೋಕ ಡಿ'ಸೋಜ, ಅನಂತ್ ಹೊಳ್ಳ, ಅಶೋಕ್ ಶೆಟ್ಟಿ ಮತ್ತು ಹೆಚ್ಚಿನ ಸಂಖ್ಯೆಯ ವೈದ್ಯಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾಪು : ಶಂಕರಪುರ ಜಾಸ್ಮಿನ್ ಜೆಸಿಐಯ 2024ನೇ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ

Thumbnail
Posted On: 21 Dec 2023, 08:07 AM

ಕಾಪು : ಅಂತರರಾಷ್ಟ್ರೀಯ ಸಂಸ್ಥೆಯಾದ ಜೆಸಿಐ ಇದರ ಘಟಕವಾದ ಶಂಕರಪುರ ಜಾಸ್ಮಿನ್ ಜೆಸಿಐಯ 2024 ನೇ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿಯವರು ಆಯ್ಕೆಯಾಗಿದ್ದಾರೆ. ಈ

ಕಾರ್ಕಳ : ಕ್ರಿಯೇಟಿವ್‌ ಕಾಲೇಜಿನಲ್ಲಿ ನಿನಾದ-ಸಂಚಿಕೆ 5 ಬಿಡುಗಡೆ

Thumbnail
Posted On: 19 Dec 2023, 06:22 PM

ಕಾರ್ಕಳ : ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ “ನಿನಾದ” ಸಂಚಿಕೆ-5 ನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಲಿಂಗಪ್ಪ ಮತ್ತು ರತ್ನಾ ಲಿಂಗಪ್ಪ ದಂಪತಿಗಳು ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಅಶ್ವತ್‌ ಎಸ್‌. ಎಲ್‌ ಮಾತನಾಡಿ ನಿನಾದ ಪತ್ರಿಕೆ ವಿದ್ಯಾರ್ಥಿಗಳಿಗೆ, ಯುವ ಬರಹಗಾರರಿಗೆ ಉತ್ತಮವಾದ ವೇದಿಕೆ ಒದಗಿಸುತ್ತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಒಳ್ಳೆಯ, ಚಿಂತನಾತ್ಮಕ ಅಂಶಗಳನ್ನು ಬೆಳೆಸಲು ಹಾಗೂ ಕ್ರಿಯಾಶೀಲ ಮನಸ್ಸುಗಳ ಕಟ್ಟಲು ಕ್ರಿಯೇಟಿವ್‌ ಎಂದಿಗೂ ಸಿದ್ಧವಾಗಿದೆ. ಈಗಾಗಲೇ ನಾಲ್ಕು ಸಂಚಿಕೆಗಳನ್ನು ಪೂರೈಸಿ ಐದನೇ ಸಂಚಿಕೆ ಸಿದ್ಧವಾಗಿ ಲೋಕಮುಖಕ್ಕೆ ಪ್ರಕಟಗೊಳ್ಳುತ್ತಿದೆ. ಹೊಸತನದ ಬರಹಗಳು ಓದುಗರನ್ನು ಖಂಡಿತವಾಗಿಯೂ ತಲುಪುತ್ತವೆ. ಓದುಗರೂ ಸಾಕಷ್ಟು ಇದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಎಳವೆಯಲ್ಲಿಯೇ ಸಾಹಿತ್ಯದ ಕುರಿತು ಆಸಕ್ತಿ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು. “ನಿನಾದ” ಸಂಚಿಕೆಯಲ್ಲಿ ಪ್ರಕಟಗೊಂಡ ಲೇಖನಗಳನ್ನು ಬರೆದ ವಿದ್ಯಾರ್ಥಿಗಳನ್ನು “ಪುಸ್ತಕ” ಬಹುಮಾನದೊಂದಿಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ, ಉಪನ್ಯಾಸಕ ವರ್ಗದವರು, ನ್ಯೂಸ್‌ ಕಾರ್ಕಳದ ಜ್ಯೋತಿ ರಮೇಶ್‌, ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕ ಲೋಹಿತ್‌ ಎಸ್‌.ಕೆ ನಿರೂಪಿಸಿ, ವಂದಿಸಿದರು.

ಡಿಸೆಂಬರ್ 24 : ಕುಲಾಲ ಸಂಘ ಹೆಬ್ರಿ ತಾಲೂಕು - ಪ್ರಥಮ ವರ್ಷದ ಕ್ರೀಡಾಕೂಟ

Thumbnail
Posted On: 19 Dec 2023, 06:16 PM

ಹೆಬ್ರಿ : ತಾಲೂಕು ಕುಲಾಲ ಬಾಂಧವರಿಗಾಗಿ ಡಿಸೆಂಬರ್ 24 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಬ್ರಿಯ ಮೈದಾನದಲ್ಲಿ ಪ್ರಥಮ ವರ್ಷದ ಕ್ರೀಡಾಕೂಟ ನಡೆಯಲಿದೆ. ಅಂದು ಬೆಳಿಗ್ಗೆ 8.30 ರಿಂದ ಕ್ರೀಡಾ ಕೂಟವು ಉದ್ಘಾಟನೆಗೊಂಡು ಸಂಜೆ 5 ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದು ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರ್ಮಾಳು : ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ

Thumbnail
Posted On: 18 Dec 2023, 08:03 PM

ಎರ್ಮಾಳು : ಇಲ್ಲಿನ ಶ್ರೀನಿಧಿ ಮಹಿಳಾ ಮಂಡಳಿಯ 39 ನೇ ವಾರ್ಷಿಕೋತ್ಸವವು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಮಾಜಿ ಅಧ್ಯಕ್ಷೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಮಾತನಾಡಿ, ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯು ಕಲೆ, ಸಂಸ್ಕೃತಿಯ ರಾಯಭಾರಿಯಂತೆ ಕಾರ್ಯ ಚಟುವಟಿಕೆಯನ್ನು ನಡೆಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮನೆ ಮಾತಾಗಿ ಬೆಳೆದು ನಿಂತ ಸಂಸ್ಥೆಯಾಗಿದೆ. ಸಮಾಜಮುಖಿ ಚಟುವಟಿಕೆ, ಸಂಸ್ಕಾರ, ಸಂಸ್ಕೃತಿ, ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಇನ್ನಷ್ಟು ಪ್ರಭಾವಶಾಲಿಯಾಗಿ ಕಾರ್ಯೋನ್ಮುಖವಾಗಲಿ ಎಂದರು. ಕ.ಸಾ.ಪ. ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮಾತನಾಡಿ, ಸಮಾಜದ ಸಂಸ್ಕಾರಯುತ ಬೆಳವಣಿಗೆಗೆ ಮಾತೃಸ್ಥಾನವು ಮತ್ತಷ್ಟು ಜಾಗ್ರತಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಮಾತೆಯರೇ ಒಗ್ಗೂಡಿ ಬೆಳೆದು ನಿಂತ ಸಂಸ್ಥೆಯು ಸಮಾಜಕ್ಕೆ ಮಾತೃಸ್ಥಾನದಲ್ಲಿ ನಿಂತು ಮಾರ್ಗದರ್ಶ ಮಾಡಬೇಕಿದೆ ಎಂದರು. ಜಿ.ಪಂ. ಮಾಜಿ ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ ಮಾತನಾಡಿ, ಪ್ರತಿಭೆಗಳಿಗೆ ಉತ್ತಮ ಅವಕಾಶವನ್ನು ನೀಡುವ ಜೊತೆಗೆ ಸಮಾಜಕ್ಕೆ ಅತ್ಯುತ್ತಮ ಸಂದೇಶವನ್ನು ನೀಡುವ ಮಹಿಳಾ ಶಕ್ತಿಯಾಗಿ ಶ್ರೀನಿಧಿ ಮಹಿಳಾ ಮಂಡಳಿಯು ಸಮಾಜವನ್ನು ಉತ್ತಮವಾಗಿ ಕಟ್ಟುವಲ್ಲಿ ಮಹತ್ತರ ಕೊಡುಗೆಯನ್ನು ನೀಡಿರುವುದು ಶ್ಲಾಘನೀಯ ಎಂದರು. ಸಾಧಕರಾದ ಉಪನ್ಯಾಸಕಿ, ಮಂಗಳೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಎನ್‌ಎಸ್‌ಎಸ್‌ವಿಭಾಗಾಧಿಕಾರಿ ಸವಿತಾ ಎರ್ಮಾಳು, ಶೈಕ್ಷಣಿಕ ಸಾಧಕಿ ಹರ್ಷಾ ಜಿ. ರಾವ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ಚಂದ್ರಶೇಖರ್, ಶ್ರೀನಿಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ಅಮಣಿ ಕುಂದರ್, ಕಾರ್ಯದರ್ಶಿ ವಿಮಲಾ ಕೆ. ಸಾಲ್ಯಾನ್, ಕೋಶಾಧಿಕಾರಿ ಶಕುಂತಲಾ, ಜೊತೆ ಕಾರ್ಯದರ್ಶಿ ರೇಖಾ ಶೆಟ್ಟಿ, ಉಪಾಧ್ಯಕ್ಷೆ ಮಾಲತಿ ಜೆ. ಶೆಟ್ಟಿ ಇದ್ದರು. ಅಮಣಿ ಕುಂದರ್ ಸ್ವಾಗತಿಸಿದರು. ಶಕುಂತಲಾ ವಂದಿಸಿದರು. ಶಶಿಕಲಾ ನವೀನ್ ಬಹುಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಸುಪ್ರೀತಾ ಕಿಶೋರ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ ಮಾಜಿ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ ಸಮಾರಂಭವನ್ನು ನಿರೂಪಿಸಿದರು. ಶ್ರೀನಿಧಿ ಮಹಿಳಾ ಮಂಡಳಿಯ ಸದಸ್ಯೆಯರಿಂದ ಬಳಿಕ ನೃತ್ಯ ವೈಭವ ಮತ್ತು ಶೀಲಾ ಕೆ. ಶೆಟ್ಟಿ ವಿರಚಿತ ತುಳುವ ಬೀರೆರ್ ಕೋಟಿ ಚೆನ್ನಯೆರ್ ತುಳು ಐತಿಹಾಸಿಕ ನಾಟಕ ಪ್ರದರ್ಶನಗೊಂಡಿತು.

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ ಎಲ್ಲೂರು ಪಣಿಯೂರು - ವಾರ್ಷಿಕೋತ್ಸವ, ಶ್ರೀ ವಿಶ್ವಕರ್ಮ ಪೂಜೆ ಸಂಪನ್ನ

Thumbnail
Posted On: 18 Dec 2023, 06:02 PM

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಎಲ್ಲೂರು ಪಣಿಯೂರು ಇದರ ವಾರ್ಷಿಕೋತ್ಸವ ಮತ್ತು ಶ್ರೀ ವಿಶ್ವಕರ್ಮ ಪೂಜೆಯು ಆದಿತ್ಯವಾರದಂದು ಸಂಘದಲ್ಲಿ ನೆರವೇರಿತು. ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಮಾತನಾಡಿ ಸಂಘವು ಕೊಡುತ್ತಿರುವ ವಿದ್ಯಾರ್ಥಿ ವೇತನವು ಉತ್ತಮವಾದ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವಕರ್ಮ ಒಕ್ಕೂಟ (ರಿ.) ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಇದರ ಅಧ್ಯಕ್ಷ ಮಧು ಆಚಾರ್ಯ ಮಾತನಾಡಿ ಸಂಘದ ಸ್ವಂತ ಕಟ್ಟಡ ನಿರ್ಮಾಣದ ಯೋಜನೆಯಲ್ಲಿ ವಿಶ್ವಕರ್ಮ ಒಕ್ಕೂಟದ ಸಂಪೂರ್ಣ ಸಹಕಾರವು ಸಿಗಲಿದೆ ಎನ್ನುವ ಭರವಸೆ ನೀಡಿದರು. ಸಂಘದ ಅಧ್ಯಕ್ಷರಾದ ವೈ.ಕಿಶೋರ್ ಆಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಸಂಘದ ವ್ಯಾಪ್ತಿಯೊಳಗೆ ಬರುವ ಶಾಲೆಗಳಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ಮೂವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.