Updated News From Kaup

ಕಾಪು : ಯುವಸೇನೆ ಮಡುಂಬು ಇದರ 2026 - 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿತೇಶ್ ಸಾಲ್ಯಾನ್ ಮಡುಂಬು ಆಯ್ಕೆ

Thumbnail
Posted On: 24 Mar 2026, 06:53 AM

ಕಾಪು : ಯುವಸೇನೆ ಮಡುಂಬು ಇದರ 2026-2027 ನೇ ಸಾಲಿನ ನೂತನ ಅಧ್ಯಕ್ಷರಾಗಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಮತ್ತು ಜೆಸಿಐ ಕಾಪು ಘಟಕದ ಸದಸ್ಯರಾದ ಜೆಸಿ ನಿತೇಶ್ ಸಾಲ್ಯಾನ್ ಮಡುಂಬು ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಪೂಜಾರಿ ಕಲ್ಯಾಲು, ಕೋಶಾಧಿಕಾರಿಯಾಗಿ ಸಚಿನ್ ಸಾಲ್ಯಾನ್ ಮಡುಂಬು ಮತ್ತು ಜೊತೆ ಕೋಶಾಧಿಕಾರಿಯಾಗಿ ಪೃಥ್ವಿರಾಜ್ ಶೆಟ್ಟಿ ಮಡುಂಬು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

ವಾಯ್ಸ್ ಆಫ್ ಪಡುಬಿದ್ರಿ - 2026 ಕರೋಕೆ ಗಾಯನ ಸ್ಪರ್ಧೆಯ ಕರಪತ್ರ ಬಿಡುಗಡೆ

Thumbnail
Posted On: 24 Mar 2026, 06:48 AM

ಪಡುಬಿದ್ರಿ : ಸಂಗೀತವು ವಿಶ್ವವ್ಯಾಪಿ ಭಾಷೆ,  ಸಂಗೀತ ಪ್ರತಿಭೆ ಎಂದರೆ ಕೇವಲ ಹಾಡುವುದಲ್ಲ, ಅದು ಶಬ್ದಗಳ ಸೂಕ್ಷ್ಮತೆಯನ್ನು ಗ್ರಹಿಸುವ ರಾಗ- ಲಯಗಳನ್ನು ಸರಿಯಾಗಿ ಆಳವಡಿಸಿ ಕೊಳ್ಳುವ ಜನ್ಮಜಾತ ಕೌಶಲ್ಯವಾಗಿದೆ. ಇದು ಕೆಲವರಿಗೆ ಹುಟ್ಟಿನಿಂದಲೇ ಬಂದರೆ ಇನ್ನು ಕೆಲವರಲ್ಲಿ ತೀವ್ರ ಆಸಕ್ತಿಯಿಂದ ಬೆಳೆಯುತ್ತಿದೆ.‌ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ  ಎಂದು ಓಂಕಾರ ಕಾಸ್ಟ್ಯೂಮ್ಸ್ ಮತ್ತು ಕಲಾ ಸಂಗಮದ ಆಡಳಿತ ನಿರ್ದೇಶಕಿ ಗೀತಾ ಅರುಣ್ ಹೇಳಿದರು.
ಅವರು ಪಡುಬಿದ್ರಿ ಬಂಟರ ಭವನದಲ್ಲಿ ಜರಗಲಿರುವ ಮೂರು  ದಿನಗಳ  ಬೃಹತ್ ಆಹಾರ ಮತ್ತು  ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಅಂಗವಾಗಿ ಮಾರ್ಚ್ 29 ರಂದು ಪಡುಬಿದ್ರಿ ಬಂಟರ ಭವನದಲ್ಲಿ  ನಡೆಯುವ ವಾಯ್ಸ್ ಆಫ್ ಪಡುಬಿದ್ರಿ -2026 ಕರೋಕೆ ಗಾಯನ ಸ್ಪರ್ಧೆಯ ಕರಪತ್ರವನ್ನು   ಬಿಡುಗಡೆಗೊಳಿಸಿ ಮಾತನಾಡಿದರು.

  ಈ ಸಂದರ್ಭದಲ್ಲಿ ತುಳುನಾಡ ಕಲಾವಿದರು ಸಂಸ್ಥೆಯ ಅಧ್ಯಕ್ಷ  ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯ ರಾಜ್ಯಾಧ್ಯಕ್ಷ  ರಚನ್ ಸಾಲ್ಯಾನ್ ಹೆಜಮಾಡಿ,  ಸಾಹಿತಿ, ಚಿತ್ರಕಲಾವಿದ ಸುರೇಶ್ ಪಡುಬಿದ್ರಿ, ರಿದಮ್ ಸಂಗೀತ ಕಲಾವಿದ ದಿನೇಶ್ ಪಡುಬಿದ್ರಿ ಉಪಸ್ಥಿತರಿದ್ದರು.

ಪಡುಬಿದ್ರಿ ಬಿಲ್ಲವ ಸಂಘ, ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆ

Thumbnail
Posted On: 21 Mar 2026, 05:35 PM

ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ನಾರಾಯಣ ಗುರು ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದ ಸದಸ್ಯರು ಗುರುವಾರ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು.

ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ವಾಸಿಗಳಿಗೆ ಹಣ್ಣು ಹಂಪಲುಗಳನ್ನು  ವಿತರಿಸಿ, ಊಟೋಪಚಾರಕ್ಕಾಗಿ ರೂ. 10,000 ಧನ ಸಹಾಯ ನೀಡಲಾಯಿತು.

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ರವರು ವ್ಯವಸ್ಥಿತವಾಗಿ ವೃದ್ಧರನ್ನು ಪಾಲನೆ ಪೋಷಣೆ ಮಾಡುತ್ತಿರುವ ಆಶ್ರಮದ ಸಂಚಾಲಕರಿಗೆ ಅಭಿನಂದನೆ ತಿಳಿಸಿದರು.
ಕಲ್ಯಾಣಿ ರವಿ ಅಂಚನ್ ರವರು ಆಶ್ರಮದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ ಹರೀಶ್, ಕಾರ್ಯದರ್ಶಿ ನೀತಾ ಗುರುರಾಜ್ ಉಪಸ್ಥಿತರಿದ್ದರು.

ಉಪಸ್ಥಿತರಿದ್ದ ಎಲ್ಲಾ ಸದಸ್ಯರು ಆಶ್ರಮ ವಾಸಿಗಳೊಂದಿಗೆ ಕಾಲಕಳೆದು, ಅವರ ಪ್ರೀತಿ, ಆಶೀರ್ವಾದ ಪಡೆದರು.

ಮಾ. 28 : ಬೊಲ್ಲೆಟ್ಟು ಆದಿ ಅಲಡೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Thumbnail
Posted On: 21 Mar 2026, 05:29 PM

ಕಾಪು : ಇತಿಹಾಸ ಪ್ರಸಿದ್ದ ಬೊಲ್ಲೆಟ್ಟು ಆದಿ ಅಲಡೆ ಜೀರ್ಣೋದ್ಧಾರ  ಸಮಿತಿಯ ಅಶ್ರಯದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಮಾರ್ಚ್ 28 ರ ಬೆಳಿಗ್ಗೆ 8.30 ಕ್ಕೆ ಬೊಲ್ಲೆಟ್ಟು ಆಲಡೆಯಲ್ಲಿ ನಡೆಯಲಿದೆ.

 ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀ ವಿಶ್ವಪ್ರಿಯ  ತೀರ್ಥ ಶ್ರೀಪಾದರು  ಶಿಲಾನ್ಯಾಸ ಹಾಗೂ ಆಶೀರ್ವಚನ  ನೀಡಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅಭ್ಯಾಗತರಾಗಿ  ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕ್ಷೇತ್ರದ ಶಾಸಕ ಸುನಿಲ್ ಕುಮಾರ್, ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಹಾರಾಷ್ಟ್ರದ ಮಾಜಿ ಸಂಸದ ಗೋಪಾಲ್ ಎಂ. ಶೆಟ್ಟಿ, ಕುತ್ಯಾರು ಆರಮನೆ ಜಿನೇಶ್ ಬಲ್ಲಾಳ್, ಜಾನಪದ ಸಂಶೋಧಕ  ಕೆ.ಎಲ್. ಕುಂಡಂತ್ತಾಯ, ಎಲ್ಲೂರು ಗುತ್ತು ವೈ. ಪ್ರಭಾಕರ್ ಶೆಟ್ಟಿ ಹಾಗೂ ವೈ. ಪ್ರಪುಲ್ಲ ಶೆಟ್ಟಿ, ನ್ಯಾಯವಾದಿ ಪ್ರದೀಪ್ ಕುಮಾರ್, ಅದಾನಿ ಗ್ರೂಪ್ ಸಿ. ಇ. ಒ. ಕಿಶೋರ್ ಆಳ್ವ ಭಾಗವಹಿಸಲಿದ್ದಾರೆ.

ಬೊಲ್ಲೆಟ್ಟು ಆದಿ ಅಲಡೆ ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು, ತಂತ್ರಿಗಳಾದ ಸಜೆ ಹರೀಶ್ ಜೋಯಿಸ, ಪ್ರಧಾನ ಅರ್ಚಕ ಗಣೇಶ್ ಜಿ. ಭಟ್ ಹಾಗೂ ಪವಿತ್ರಪಾಣಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.24 - 25 : ಕಾಪುವಿನಲ್ಲಿ ಪ್ರಸಿದ್ಧ ಸುಗ್ಗಿ ಮಾರಿಪೂಜೆ

Thumbnail
Posted On: 21 Mar 2026, 05:25 PM

ಕಾಪು : ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಇದೇ ಬರುವ ಮಾರ್ಚ್ 24ರ ಮಂಗಳವಾರ ಮತ್ತು 25 ರ ಬುಧವಾರ ನಡೆಯಲಿದೆ.

 ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವಿಯ ದರುಶನಕ್ಕೆ ಸರತಿ ಸಾಲಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಹಣ್ಣುಕಾಯಿ, ಕುರಿ - ಕೋಳಿ ಹರಕೆ ಸಮರ್ಪಣೆಗೆ ವ್ಯವಸ್ಥೆ ಮತ್ತು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಕಾರ್ಯನಿರ್ವಹಣಾಧಿಕಾರಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಮಾತೃ ವೈಭವ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್

Thumbnail
Posted On: 13 Mar 2026, 06:35 AM

ಪಡುಬಿದ್ರಿ : ಇಲ್ಲಿನ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾ‌ರ್ ಅವರು ರಮೀಝ್ ರವರನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ ಅವರು ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರೂ ಆಗಿದ್ದಾರೆ. 

ರಮೀಝ್ ಹುಸೈನ್ ಅವರು ಈ ಮೊದಲು ಎನ್ ಎಸ್ ಯು ಐ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಪು ಕ್ಷೇತ್ರದಲ್ಲಿ ಉತ್ತಮ ಪಕ್ಷ ಸಂಘಟನೆ ನಡೆಸಿದ ಅನುಭವ ಹೊಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಚುನಾವಣಾ ವೀಕ್ಷಕರಾಗಿ ಅನುಭವ ಹೊಂದಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿರುವ ಅವರು ಯುವಕರ ನೆಚ್ಚಿನ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಚಲನಚಿತ್ರ ನಟಿ ಶಾನ್ವಿ ಶ್ರೀವಸ್ತವ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ

Thumbnail
Posted On: 12 Mar 2026, 07:08 PM

ಕಾಪು : ಕನ್ನಡ ಮತ್ತು ತೆಲುಗು ಚಿತ್ರರಂಗದ ನಟಿ ಶಾನ್ವಿ ಶ್ರೀವಸ್ತವ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿಕೊಟ್ಟು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಅಮ್ಮನ ಸ್ವರ್ಣ ಗದ್ದುಗೆಯನ್ನು ಮತ್ತು ದೇವಳದ ಕೆತ್ತನೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರೀಕರಣ ಸಂದರ್ಭ ಇಲ್ಲಿಗೆ ಬರುವ ಅವಕಾಶ ಸಿಕ್ಕಿತು. ಇನ್ನೊಮ್ಮೆ ಬಿಡುವು ಮಾಡಿಕೊಂಡು ಬರುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಶಂಕರಪುರ : ಮಾ. 31 ರಿಂದ ಎ. 2 ರವರೆಗೆ ಶ್ರೀ ಮುಖ್ಯಪ್ರಾಣನ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ

Thumbnail
Posted On: 12 Mar 2026, 05:44 PM

ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು.
ಅವರು ಕಾಪು ಪತ್ರಿಕಾ ಭವನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರದಲ್ಲಿ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರ ಆವರಣದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ 19 ಅಡಿ ಎತ್ತರದ ಏಕ ಶಿಲಾ ಶ್ರೀ ಮುಖ್ಯಪ್ರಾಣನ ಮೂರ್ತಿ ಸ್ಥಾಪನೆಯನ್ನು 2026 ಎಪ್ರಿಲ್ 02 ರಂದು ಮಾಡಲಾಗುವುದು. 

 ಶ್ರೀ ಮುಖ್ಯಪ್ರಾಣನ ಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. 
  ಮಾರ್ಚ್ 26 ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200 ಕೆಜಿ ತೂಕದ ಪಂಚಲೋಹ ಮೂರ್ತಿಯು ಶ್ರೀ ಕ್ಷೇತ್ರಕ್ಕೆ ತರಲಾಗುವುದು.

  ಮಾರ್ಚ್ 31 ರಿಂದ ಎಪ್ರಿಲ್ 2ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೂರ್ತಿ ಸ್ಥಾಪನೆ ಹಾಗೂ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು.

   ಪತ್ರಿಕಾಗೋಷ್ಠಿಯಲ್ಲಿ ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ಸುನಿಲ್ ಕೆ.ಆರ್., ವಿಜಯ ಕೊಡವೂರು, ವೀಣಾ ಎಸ್. ಶೆಟ್ಟಿ, ಸತೀಶ್ ದೇವಾಡಿಗ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Thumbnail
Posted On: 10 Mar 2026, 07:51 PM

ಪಡುಬಿದ್ರಿ : ಮಹಿಳೆಯರು ಸಮಾಜಕ್ಕೆ ಭೂಷಣಪ್ರಾಯಳಾಗಿ ಸಮಾಜದ ಸ್ವಾಸ್ಥ್ಯಕ್ಕೆ ಮೆಟ್ಟಿಲಾಗಬೇಕು. ಭಾರತೀಯ ಮಹಿಳೆಯರಿಗೆ ಪ್ರಾಪಂಚಿಕವಾಗಿ ವಿಶೇಷವಾದ ಗೌರವ, ಸ್ಥಾನಮಾನ ಇದೆ ಎಂದು ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿಎರ್ಮಾಳು ಹೇಳಿದರು.
ಅವರು ಮಂಗಳವಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ (ರಿ.) ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಡಾ. ಚೈತ್ರ ಗುರುಪ್ರಸಾದ್‌ ಶೆಟ್ಟಿ ಪಡುಬಿದ್ರಿ ಮಾತನಾಡಿ, ಶರೀರ-ಭಾವನೆ-ಮನಸ್ಸು  ಇದ್ದಲ್ಲಿ ಮಾತ್ರ ಅದು ನಿಜವಾದ ಆರೋಗ್ಯವಾಗಿದೆ. ಸಾಧನೆಯ ಹಾದಿಯಲ್ಲಿರುವ ಹೆಣ್ಣು ಮಕ್ಕಳು ನೈಜ ನೆಮ್ಮದಿಯ ಜೊತೆಗೆ ಆರೋಗ್ಯದಾಯಕರಾಗಿದ್ದು, ಸಮಾಜದ ಆಗು ಹೋಗುಗಳ ಜೊತೆ ಉತ್ತಮ ಬಾಂಧವ್ಯವನ್ನು ವೃದ್ಧಿಸಿಕೊಳ್ಳುವಂತೆ ಕರೆ ನೀಡಿದರು. ಬಂಜೆತನ, ಥೈರಾಯ್ಡ್, ಹಾರ್ಮೋನ್ಸ್‌  ಸಹಿತ ಮಹಿಳೆಯರ ಆರೋಗ್ಯದ ವಿಚಾರದಲ್ಲಿ ಮಾಹಿತಿಯನ್ನು ನೀಡಿ ಸಮಾಲೋಚನೆ ನಡೆಸಿದರು.

ಸಮಾರಂಭದಲ್ಲಿ  ಮಹಿಳಾ ರಿಕ್ಷಾ ಚಾಲಕಿ ಶಶಿಕಲಾ ನಂಬಿಯಾರ್‌ ಪಡುಬಿದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸದಸ್ಯೆಯರಿಗೆ ಏರ್ಪಡಿಸಲಾದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎರ್ಮಾಳು ಶ್ರೀನಿಧಿ  ಮಹಿಳಾ ಮಂಡಳಿಯ ಅಧ್ಯಕ್ಷೆ ರೇಖಾ ಶೆಟ್ಟಿ ಸ್ವಾಗತಿಸಿದರು.

ವೇದಿಕೆಯಲ್ಲಿ  ಕೋಶಾಧಿಕಾರಿ ವಿಮಲ ಕೆ. ಸಾಲ್ಯಾನ್‌ ಉಪಸ್ಥಿತರಿದ್ದರು.

ರಶ್ಮಿತಾ ಪ್ರಾರ್ಥಿಸಿದರು. ಉಪಾಧ್ಯಕ್ಷೆ ವಾಣಿಶ್ರೀ ಗಣೇಶ್‌ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಅಮಣಿ ಕುಂದರ್‌ ವಂದಿಸಿದರು. ಮಾಜಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

Thumbnail
Posted On: 10 Mar 2026, 12:00 PM

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವು ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್, ಚೆನ್ನಯ ಕುದುರು ಮುಲ್ಕಿ ಇಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಭಾಗವಹಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯು ಸಂಘಟನಾತ್ಮಕವಾಗಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ. ವಿದ್ಯೆ ಉದ್ಯೋಗ ಸಂಪರ್ಕದ ಧ್ಯೇಯದ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದರು.

ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷೆ, ನಿವೃತ್ತ ಮುಖ್ಯ ಶಿಕ್ಷಕಿ ಚಿತ್ರಾಕ್ಷಿ ಕೆ ಕೋಟ್ಯಾನ್ ಅವರು ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು.

ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕರಾದ ಮಮತಾ ಅಂಚನ್, ಪಡುಬಿದ್ರಿ ಘಟಕದ ಕಾರ್ಯದರ್ಶಿ ಭಾಸ್ಕರ್ ಎನ್ ಅಂಚನ್, ಕೋಶಾಧಿಕಾರಿ ತುಳಸಿ ಕರುಣಾಕರ್, ಮಹಿಳಾ ನಿರ್ದೇಶಕರಾದ ಲತಾ ವಸಂತ್, ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಮಂಡಳಿ ಪಡುಬಿದ್ರಿ ಇದರ ಅಧ್ಯಕ್ಷರಾದ ಸುಜಾತಾ ಹರೀಶ್  ಉಪಸ್ಥಿತರಿದ್ದರು.

ಹರೀಶ್ ಕೋಟ್ಯಾನ್ ಉಳ್ಳೂರು ಮತ್ತು ರವಿರಾಜ್ ಎನ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.