Updated News From Kaup

ಕೆ ಕೆ ಫ್ರೆಂಡ್ಸ್ ಕಡಂಬು, ಶಿರ್ವ : ದೀಪಾವಳಿ ಸಂಭ್ರಮ ; ಕಣ್ಮನ ಸೆಳೆದ ಬೃಹತ್ ಗೂಡುದೀಪ

Thumbnail
Posted On: 21 Oct 2025, 09:39 AM

ಶಿರ್ವ : ಇಲ್ಲಿನ ಕೆ ಕೆ ಫ್ರೆಂಡ್ಸ್ ಕಡಂಬು ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ಬೃಹತ್ ಗಾತ್ರದ ಗೂಡುದೀಪವನ್ನು ಕಡಂಬು ಮೈದಾನದಲ್ಲಿ ಅಳವಡಿಸಿ ದೀಪಾವಳಿ ಆಚರಿಸಲಾಯಿತು. ಗೂಡುದೀಪವು ಸುಮಾರು 9 ಫೀಟ್ ಎತ್ತರ ಮತ್ತು 5 ಫೀಟ್ ಅಗಲದೊಂದಿಗೆ ಕಡಂಬು ಮೈದಾನದಲ್ಲಿ ರಾರಾಜಿಸುತ್ತಿದೆ. ಮೈದಾನದಲ್ಲಿ ಮಾಡಿದ ವಿದ್ಯುದೀಪಾಲಂಕಾರವು ನೋಡಗರನ್ನು ಸೆಳೆಯುತ್ತಿದೆ. ಕೆ ಕೆ ಫ್ರೆಂಡ್ಸ್ ಇದರ ಎಲ್ಲಾ ಸದಸ್ಯರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಎಸ್ ಡಿ ಎಂ ಆಯುರ್ವೇದ ಆಸ್ಪತ್ರೆಗೆ ಕೊಡುಗೆಗಳ ಹಸ್ತಾಂತರ

Thumbnail
Posted On: 18 Oct 2025, 10:16 PM

ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಎಸ್ ಡಿ ಎಮ್ ಆಯುರ್ವೇದ ಆಸ್ಪತ್ರೆ ಉದ್ಯಾವರ ಇಲ್ಲಿಗೆ ರೋಗಿಗಳ ಅನುಕೂಲಕ್ಕಾಗಿ ಎರಡು ವೀಲ್ ಚೇರ್ ಮತ್ತು ವಾಕರ್ ಗಳನ್ನು ನೀಡಲಾಯಿತು. ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಎಸ್.ಎಂ ರವರು ಈ ಕೊಡುಗೆಗಳನ್ನು ಸ್ವೀಕರಿಸಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ ನಿಶಾಂತ್ ಪೈ, ಡಾ.ಸದಾನಂದ ಭಟ್, ರಮಾನಂದ ಕಾರಂತ್, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಅಂತರಾಷ್ಟ್ರೀಯ ಖ್ಯಾತಿಯ ಪತ್ರಿಕಾ ಛಾಯಾಗ್ರಹ ಅಸ್ಟ್ರೋ ಮೋಹನ್, ಕಸಾಪ ಪದಾಧಿಕಾರಿಗಳಾದ ರಂಜನಿ ವಸಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ, ವಸಂತ್, ರಾಘವೇಂದ್ರ ಪ್ರಭು ಕವಾ೯ಲು, ಉದ್ಯಮಿ ಪ್ರಶಾಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಕಾಪು : ರಾ.ಹೆ. 66 ರಲ್ಲಿ ಸರ್ವಿಸ್ ರಸ್ತೆ ನಿಮಾಣಕ್ಕೆ ಸಮಾಜ ಸೇವಕ ಜಯರಾಮ ಆಚಾರ್ಯ ಕಾಪು‌ ಆಗ್ರಹ

Thumbnail
Posted On: 18 Oct 2025, 10:11 PM

ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿಯಿಂದ ಬೈಂದೂರುವರೆಗೆ ಎರಡು ಬದಿಗಳಲ್ಲೂ ಸರ್ವಿಸ್ ರಸ್ತೆ ನಿರ್ಮಾಣ ಮಾಡಲು ಸಮಾಜ ಸೇವಕ ಜಯರಾಮ ಆಚಾರ್ಯ ಕಾಪು ಇವರು ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪುನರ್ಮನವಿ ನೀಡಿ ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಕೆಲವು ಪ್ರದೇಶದಲ್ಲಿ ಸ್ಕೈವಾಕ್ ನಿರ್ಮಾಣ ಒಪ್ಪಿಗೆ, ಕೋಟೇಶ್ವರ, ಹೆಜಮಾಡಿ ಮದ್ದೆ 26 ಕಿ.ಮೀ ಸರ್ವಿಸ್ ರಸ್ತೆಗೆ ಅನುಮೋದನೆ ವಿಚಾರ ಕೇಳಿ ಸಂತೋಷವಾಯಿತು. ಆದರೆ ಎಲ್ಲೆಲ್ಲಿ ಅತೀ ಅವಶ್ಯಕತೆ ಇದೆ ಅಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡದೆ ಯಾದೃಚ್ಛಿಕ ಸರ್ವಿಸ್ ರಸ್ತೆ ನಿರ್ಮಾಣ ಮತ್ತು ಸ್ಕೈ ವಾಕ್ ವ್ಯವಸ್ಥೆ ಸರಿಯಲ್ಲ. ಉಡುಪಿ ಜಿಲ್ಲೆಯ ಎರಡು ಬದಿಗಳಲ್ಲಿ ಸರ್ವಿಸ್ ರಸ್ತೆ ಅತಿ ಅಗತ್ಯವಿದೆ. ಸಾದಾರಣ ಒಟ್ಟು 70 ರಿಂದ 75 ಕಿ.ಮೀ. ಅಗತ್ಯವಾಗಿ ನಿರ್ಮಾಣವಾಗಬೇಕು, ಅಂತೆಯೇ ಪುರಸಭೆ, ತಾಲೂಕು ವ್ಯಾಪ್ತಿ ಮತ್ತು ಹೆಜಮಾಡಿಯಿಂದ ಬೈಂದೂರು ತನಕ ಸರ್ವಿಸ್ ರಸ್ತೆ ನಿರ್ಮಾಣವಾಗಲೇ ಬೇಕು. ಹಲವಾರು ಕಡೆ ಸರ್ವಿಸ್ ರಸ್ತೆ ಇಲ್ಲದೆ ಹಲವಾರು ಅಪಘಾತಗಳು ಈಗಾಗಲೇ ನಡೆದು ಹೋಗಿರುತ್ತದೆ. ಉಡುಪಿ ಜಿಲ್ಲೆಯ ಮಾನ್ಯ ಸಂಸದರು ಈ ಬಗ್ಗೆ ಪುನರ್ ಪರಿಶೀಲಿಸಿ ಎಲ್ಲಾ ಶಾಸಕರೊಂದಿಗೆ ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿ ಉಡುಪಿ ಜಿಲ್ಲೆಯ ಎನ್ ಎಚ್ 66 ರ ಎರಡು ಬದಿಗಳಲ್ಲಿ ಸರ್ವಿಸ್ ರಸ್ತೆ ಮತ್ತು ಚರಂಡಿ ವ್ಯವಸ್ಥೆ ನಿರ್ಮಿಸಲು ಆಗ್ರಹಿಸಲಾಗಿತ್ತು. ಆದರೆ ಈ ಮನವಿಗೆ ಯಾವುದೇ ಸ್ಪಂದನೆ, ವ್ಯವಸ್ಥೆ ಆಗಲಿಲ್ಲ, ಉಡುಪಿ ಜಿಲ್ಲೆಯಲ್ಲಿ 2 ತಿಂಗಳಲ್ಲಿ 25ಕ್ಕೂ ಮಿಕ್ಕಿ ಅಪಘಾತಗಳು ಆಗಿ 9 ಹದಿಹರೆಯದ ಯುವಕರು ಪ್ರಾಣ ಕಳೆದುಕೊಂಡು ಅವರ ಕುಟುಂಬವು ಸಂಕಷ್ಟವನ್ನು ಅನುಭವಿಸುವಂಥಾಗಿರುತ್ತದೆ ಇದಕ್ಕೆ ಕಾರಣ ನಮ್ಮ ವ್ಯವಸ್ಥೆ ಹಾಗೂ ಸರಿಯಾದ ರೀತಿಯಲ್ಲಿ ಜಿಲ್ಲಾಡಳಿತ ಮತ್ತು ಪಾರ್ಲಿಮೆಂಟ್ ಸದಸ್ಯರು ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರದೊಂದಿಗೆ ಸ್ಪಂದಿಸದಿರುವುದು ಮುಖ್ಯ ಕಾರಣವಾಗಿರುತ್ತದೆ, ಇನ್ನಾದರೂ ಎಚ್ಚೆತ್ತುಕೊಂಡು ಉಡುಪಿ ಜಿಲ್ಲೆಯ ಎರಡು ಬದಿಗಳಲ್ಲೂ ಸರ್ವಿಸ್ ರಸ್ತೆ ಮತ್ತು ಡ್ರೈನೇಜ್ ಗಳನ್ನು ಕೂಡಲೇ ನಿರ್ಮಿಸಿ ಕೊಡಬೇಕು ಎಂದು ಪಾರ್ಲಿಮೆಂಟ್ ಸದಸ್ಯರನ್ನು ಕಾಪು ಜಯರಾಮ ಆಚಾರ್ಯರವರು ವಿನಂತಿಸಿದ್ದಾರೆ.

ಕಾಪು : ಇಗ್ನೇಷಿಯಸ್ ಮೆಂಡೋನ್ಸ ಇವರಿಗೆ ಸಂತಾಪ ಸೂಚಕ ಸಭೆ

Thumbnail
Posted On: 17 Oct 2025, 12:08 PM

ಕಾಪು : ಮಲಂಗೋಳಿ ನಿವಾಸಿ ಕಳತ್ತೂರು ವಿನ್ಸೆಂಟ್ ಪಾವಲೇ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಇಗ್ನೇಷಿಯಸ್ ಮೆಂಡೋನ್ಸ ನಿಧನರಾಗಿದ್ದು, ಇವರ ಸಂತಾಪ ಸೂಚಕ ಸಭೆಯನ್ನು ಕಳತ್ತೂರು ಇಗರ್ಜಿ ವಠಾರದಲ್ಲಿ ನಡೆಯಿತು. ಹಲವಾರು ನಾಗರಿಕರು ಇವರ ಗುಣಗಾನ ಮಾಡಿದರು. ಈಗರ್ಜಿಯ ಧರ್ಮಗುರು ಪ್ರಾನ್ಸಿಸ್ ಲುವಿಸ್, ಜನಸಂಪರ್ಕ ಜನ ಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ರಾಜೇಶ್ ಕುಲಾಲ್, ಕಾಂಗ್ರೆಸ್ ನಾಯಕರಾದ ಮೊಹಮದ್ ಫಾರೂಕ್ ಚಂದ್ರನಗರ, ಕಾಂಗ್ರೆಸ್ ನಾಯಕರಾದ ಜಾನ್ಸನ್ ಕರ್ಕಡ, ಪಂಚಾಯತ್ ಸದಸ್ಯರಾದ ಕೃಷ್ಣ ಕುಲಾಲ್ ರೋಷನ್ ಕ್ಯಾಸ್ಟಾಲಿನ್, ಐರಿನ್ ತಾವ್ರೋ ,ಆಲ್ಬರ್ಟ್ ಮೆಂಡೋನ್ಸ, ಫೆಡ್ರಿಕ್ ತೌರೋ ಗಿಳ್ಬೇರ್ಟ್ ನಜರಾತ್, ರಿಚಾರ್ಡ್ ಲೋಬೋ, ಸಾಹಿತಿ ದಯಾನಂದ ಶೆಟ್ಟಿ ದೆಂದೂರು, ಕಳತ್ತೂರು ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ವಳದೂರು ನಾರಾಯಣ ಶೆಟ್ಟಿ ನಿಧನ

Thumbnail
Posted On: 17 Oct 2025, 12:03 PM

ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿಗಳು, ದೈವ ಭಕ್ತರೂ, ಪರೋಪಕಾರಿಗಳು, ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ವಿಶೇಷ ಆರಾಧಕರೂ ಆದ ವಳದೂರು ನಾರಾಯಣ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಸ್ವರ್ಗಸ್ಥರಾಗಿರುತ್ತಾರೆ. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

ಕಾಪು : ಸಾಧನಾ ಶಿಖರವೇರಿದ ಸಾಹಿತಿ ಎಸ್.ಎಲ್.ಭೈರಪ್ಪ - ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

Thumbnail
Posted On: 15 Oct 2025, 05:15 AM

ಕಾಪು : ಬದುಕಿನ ಸಮಸ್ಯೆಗಳನ್ನು ಲೆಕ್ಕಿಸದೆ ಸಾಧನಾ ಶಿಖರವನ್ನು ಏರಿದ ಸಾಹಿತಿ ಭೈರಪ್ಪ ನಮಗೆ ಸ್ಪೂರ್ತಿ ಆಗಬೇಕು. ಇವರ ಕೃತಿಗಳು ಚರ್ಚೆಗೆ ಒಳಗಾದ್ದರಿಂದ ಎಡ ಬಲ ಚಿಂತಕರೂ ಕೊಂಡು ಓದಿದವರಿದ್ದಾರೆ. ಕೃತಿಗಳ ಮೂಲಕ ಚಿರಾಯುವಾದ ಸಾಹಿತಿ ಎಸ್.ಎಲ್.ಭೈರಪ್ಪ ಎಂದು ಉಡುಪಿ ಎಮ್.ಜಿ.ಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ನುಡಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ನೇತೃತ್ವದಲ್ಲಿ ಸಾಹಿತ್ಯ ಸಂಘ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಹಭಾಗಿತ್ವದಲ್ಲಿ ಕಾಲೇಜಿನ ಡಾ.ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಏರ್ಪಡಿಸಿದ "ಡಾ.ಎಸ್.ಎಲ್.ಭೈರಪ್ಪ ಸಂಸ್ಮರಣೆ" ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರು ಎಲ್ಲಿ ? ಎನ್ನುವವರಿಗೆ ದೇವರು ಇಲ್ಲಿ ಎಂದು ತೋರಿಸಿ ಕೊಟ್ಟ ಭೈರಪ್ಪರವರನ್ನು ಹೊಗಳುವವರೂ ತೆಗಳುವವರೂ ಇದ್ದಾರೆ. ಇವರ ಕೃತಿಗಳಲ್ಲಿ ವಾಸ್ತವತೆ ಮತ್ತು ಬದುಕಿನ ಚಿಂತೆನೆಯೂ ಇದೆ ಎಂದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಗೋಪಾಲೃಷ್ಣ ಎಂ.ಗಾಂವ್ಕರ್ ಮಾತನಾಡಿ, ಹಲವಾರು ಸಾಹಿತ್ಯ ಕೃತಿಗಳಲ್ಲಿ ಅತೀ ಹೆಚ್ಚು ಆಸಕ್ತಿಯನ್ನು ಮೂಡಿಸಿದ ಕೃತಿಗಳಿದ್ದರೆ ಅದು ಭೈರಪ್ಪರವರದ್ದು, ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಓದುಗರಾಬೇಕು. ಸಾಹಿತ್ಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ದಿನ ನಿತ್ಯದ ವಾಸ್ತವಿಕತೆ ಅರಿಯಲು ಕಾದಂಬರಿಗಳನ್ನು ಓದಬೇಕು ಎಂದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಭೈರಪ್ಪನವರು ಕಾದಂಬರಿ ಬರೆಯುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡು ನಿಖರವಾದ ಮಾಹಿತಿಯನ್ನು ಓದುಗರಿಗೆ ತಿಳಿಯುವಂತೆ ಅಭಿವ್ಯಕ್ತಿಗೊಳಿಸುತ್ತಿದ್ದರು. ಹಾಗಾಗಿ ಅವರ ಕಾದಂಬರಿಗಳಲ್ಲಿ ನಿತ್ಯ ಸತ್ಯವನ್ನು ಕಾಣಬಹುದಾಗಿದೆ ಎಂದರು. ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರೂ, ಸಾಹಿತ್ಯ ಸಂಘದ ನಿರ್ದೇಶಕರಾದ ಡಾ.ರವಿರಾಜ್ ಶೆಟ್ಟಿ ಭೈರಪ್ಪರವರ ಸಾಹಿತ್ಯ ಸೇವೆಯ ಬಗ್ಗೆ ಅನುಭವ ಹಂಚಿಕೊಂಡರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಹಿತ ವೇದಿಕೆಯಲ್ಲಿರುವ ಗಣ್ಯರು ಭೈರಪ್ಪರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕಾಪು ಕಸಾಪ ಸಹಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸದಸ್ಯರಾದ ಮಧುಕರ್ ಎಸ್.ಕಲ್ಯಾ, ರಾಕೇಶ್ ಕುಂಜೂರು, ಜಿಲ್ಲಾ ಸಮಿತಿಯ ನರಸಿಂಹಮೂರ್ತಿ ರಾವ್, ಕಾಲೇಜಿನ ಸಹ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಘಟಕದ ಕೋಶಾಧ್ಯಕ್ಷರು, ಕಾರ್ಯಕ್ರಮ ಸಂಯೋಜಕರಾದ ವಿದ್ಯಾಧರ್ ಪುರಾಣಿಕ್ ನಿರೂಪಿಸಿದರು. ಆಂಗ್ಲ ಭಾಷಾ ವಿಭಾಗದ ಸಹ ಪ್ರಾಧ್ಯಾಪಕಿ ದೀಪಿಕಾ ಸುವರ್ಣ ವಂದಿಸಿದರು.

ಕಾಪು : ನಾಯ್ಕ್ ಟ್ರೋಫಿ ಪಯ್ಯಾರು -2025 ಕ್ರಿಕೆಟ್ ಪಂದ್ಯಕೂಟದ ಸಮಾರೋಪ

Thumbnail
Posted On: 15 Oct 2025, 05:04 AM

ಕಾಪು : ಗಣೇಶ್ ನಾಯ್ಕ್ ಪೈಯಾರು ಹಾಗೂ ಆರ್ಯನ್ ನಾಯ್ಕ್ ಬೆಳಪು ಪ್ರಾಯೋಜಕತ್ವದ ನಾಯ್ಕ್ ಟ್ರೋಫಿ -2025 ಇದರ ಕ್ರಿಕೆಟ್ ಪಂದ್ಯಕೂಟ ಸಮಾರೋಪಗೊಂಡಿತು. ಪಂದ್ಯಾಕೂಟದಲ್ಲಿ ಗುರುಗಣೇಶ್, ನೇಜಾರು ತಂಡ ಪ್ರಥಮ ಮತ್ತು ಸಹನಾ, ಮಲ್ಲಾರು, ಕಾಪು ದ್ವೀತಿಯ ಹಾಗೂ ಕಟೀಲ್ ಪ್ರೆಂಡ್ಸ್ ತಂಡ ತೃತೀಯ ಬಹುಮಾನವನ್ನು ತನ್ನದಾಗಿಸಿಕೊಂಡರು. ಈ ಸಮಾರಂಭದಲ್ಲಿ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಕಾಪು ತಾಲೂಕು ನಾಯಕ ಸಮಾಜದ ಅಧ್ಯಕ್ಷರಾದ ಎಂ.ನೀಲಾನಂದ ನಾಯಕ ಕಲ್ಯಾ, ಯೋಗೀಶ್ ಶೆಟ್ಟಿ ಬಾಲಾಜಿ ಕಾಪು, ಶ್ರೀ ಮಾಸ್ತಿ ಅಮ್ಮ ದೇವಸ್ಥಾನ ಪೈಯಾರು ಇದರ ಪ್ರದಾನ ಅರ್ಚಕರಾದ ಮಾಧವ ನಾಯ್ಕ್, ಪೈಯಾರು, ಧೂಮವತಿ ದೈವಸ್ಥಾನ ಪೈಯಾರು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ರೋಹಿತ್ ನಾಯ್ಕ್, ಮಲ್ಲಾರ್, ಮುಸ್ತಾಕ್ ಬೆಳಪು, ಜಾಹೀರ್ ಅಹಮ್ಮದ್ ಬೆಳಪು, ರವಿ ನಾಯ್ಕ್, ನಿತಿನ್ ನಾಯ್ಕ್, ಮಟ್ಟಾರ್. ವಸಂತ ನಾಯ್ಕ್, ಪೈಯಾರು, ಚಂದ್ರಶೇಖರ ನಾಯ್ಕ್, ಬೆಳಪು, ನಿತ್ಯಾನಂದ ಆರ್ ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಿವಾಕರ ಡಿ ಶೆಟ್ಟಿ ಕಳತೂರು, ಶಶಿಕಾಂತ್ ಆಚಾರ್ಯ, ಕಳತೂರು, ರಾಜೇಶ್ ನಾಯ್ಕ್ ಮಟ್ಟಾರ್, ದಿನೇಶ್ ನಾಯ್ಕ್ ಮಟ್ಟಾರ್, ದೇವೇಂದ್ರ ನಾಯ್ಕ್ ಮಲ್ಲಾರ್, ಸ್ಟಾನ್ಲಿ ಕೊಡ್ದ ಸದಸ್ಯರು ಗ್ರಾಮ ಪಂಚಾಯತ್ ಕುತ್ಯಾರ್, ರವಿ ನಾಯ್ಕ್, ಮಜೂರು, ಕಮಲಾಕ್ಷ ಹಾಗೂ ಸದಾನಂದ ನಾಯ್ಕ್ ಉಪಸ್ಥಿತರಿದ್ದರು.

ಬ್ರಹ್ಮಾವರ : ರುಡ್ ಸೆಟ್ ಆಸರೆಯ ಬಸ್ಸು ತಂಗುದಾಣ ಲೋಕಾರ್ಪಣೆ

Thumbnail
Posted On: 15 Oct 2025, 04:58 AM

ಉಡುಪಿ : ಬ್ರಹ್ಮಾವರ ರುಡ್ ಸೆಟ್ ಆಸರೆ ಸಂಘಟನೆ ಇದರ 20ನೇ ವರ್ಷದ ಸವಿ ನೆನಪಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ರುಡ್ ಸೆಟ್ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಬಸ್ಸು ತಂಗುದಾಣದ ಲೋಕಾರ್ಪಣೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಎ ಸುವರ್ಣ ಅವರು ಉದ್ಘಾಟಿಸಿ, ಶುಭ ಹಾರೈಸಿದರು. ಉಡುಪಿ ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ ಗಂಗಾಧರ್ ಎಚ್ ಕೆ ಅವರು ಬಸ್ಸು ತಂಗುದಾಣದ ಶಿಲಾಫಲಕ ಅನಾವರಣಗೊಳಿಸಿದರು. ನಂತರ ನಡೆದ ಸಭೆಯಲ್ಲಿ ಮಾತನಾಡಿದ ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ ಗಂಗಾಧರ್ ಎಚ್ ಕೆ, ಆಸರೆ ಸಂಘಟನೆಯ ಈ ಸಮಾಜಮುಖಿ ಕಾರ್ಯ ಮಾದರಿಯಾಗಿದೆ. ಇದೇ ರೀತಿ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಸಂಘಟನೆಯಿಂದ ನಡೆಸುವಂತಾಗಲಿ. ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೆನರಾ ಬ್ಯಾಂಕ್ ಸದಾ ನಿಮ್ಮ ಜೊತೆಗೆ ಇರುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸರೆ ಸಂಘಟನೆ ಅಧ್ಯಕ್ಷರಾದ ಹರಿಣಿ ಅಜಯ್ ರಾವ್ ವಹಿಸಿದ್ದರು. ಈ ಸಂದರ್ಭ ಉಪ ಮಹಾ ಪ್ರಬಂಧಕರಾಗಿರುವ ಮಹಾಮಾಯ ಪ್ರಸಾದ್ ರಾಯ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾಗಿರುವ ಡಾ. ಬೊಮಯ್ಯ ಎಂ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ಕ್ಷೇತ್ರ ಯೋಜನಾಧಿಕಾರಿಯವರಾಗಿರುವ ರಮೇಶ್ , ಕರುಣಾಕರ ಜೈನ್ ಹಿರಿಯ ಉಪನ್ಯಾಸಕರು ರುಡ್ ಸೆಟ್ ಸಂಸ್ಥೆ ಸಿದ್ದವನ ಉಜಿರೆ, ಸ್ಥಳದಾನಿಗಳಾದ ಮಂದಾರ ಶೆಟ್ಟಿ, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕರಾಗಿರುವ ಸಂತೋಷ್ ಶೆಟ್ಟಿ ಹಾಗೂ ಚೈತ್ರ , ಕೆನರಾ ಬ್ಯಾಂಕ್ ವಾರಂಬಳ್ಳಿ ಶಾಖೆಯ ಅಮೀತ್, ಕೆನರಾ ಬ್ಯಾಂಕಿನ ಅಜೇಯ್, ಆಸರೆಯ ಕೋಶಾಧಿಕಾರಿ ವೆಂಕಟೇಶ್ ನಾಯ್ಕ , ಉಪಾಧ್ಯಕ್ಷರಾದ ರಾಜಲಕ್ಷ್ಮಿ, ಸಂಘಟನಾ ಕಾರ್ಯದರ್ಶಿ ಉಮೇಶ್ ನಾಯಿರಿ, ಕಮಲ ಕೆ.ಸಿ ಅಮಿನ್, ಗೌರವ ಶಿಕ್ಷಕಿ ಸುಮತಿ ಸುವರ್ಣ, ಮಾಜಿ ಅಧ್ಯಕ್ಷರಾದ ಕಿಶ್ವರಿ ಜಹಾನ್ ಹಾಗೂ ಶಕೀಲಾ ಹೆಗ್ಡೆ, ಪಧಾಧಿಕಾರಿಗಳಾದ ಉಮೇಶ್ ಆಲ್ತಾರು, ಪ್ರಶಾಂತ್ ಕಟಪಾಡಿ, ನಾಗರತ್ನ ಆಚಾರ್ಯ, ಸುಮಂಗಲ ಅಂಬಾಗಿಲು, ಗಂಗಾಧರ ಆಚಾರ್ಯ, ರಾಮಚಂದ್ರ ಆಚಾರ್ಯ, ಕಚೇರಿ ಸಹಾಯಕರಾದ ರವಿ ಸಾಲಿಯಾನ್, ಶಾಂತಪ್ಪ, ಪೃಥ್ವಿರಾಜ್, ಅರುಣ್, ಸಂತೋಷ್, ಆಸರೆ ಸದಸ್ಯರಾದ ಪ್ರವೀಣ್ ಮಲ್ಪೆ, ರಾಗಿಣಿ ಚೆರ್ಕಾಡಿ, ವಿಶ್ವಾಸ್ ಕಾಂಚನ್, ಶಶಿಕಲಾ ದೇವಾಡಿಗ, ಸುಗುಣ ಆಚಾರ್ಯ, ಲೇಖಾರಾಜ್, ಶಿಕ್ಷಕಿ ವೀಣಾ, ವಿದ್ಯಾ, ಪ್ರಕಾಶ್ ಆಚಾರ್ಯ, ಸುಜ್ಯೋತಿ ಅಂಬಲಪಾಡಿ, ಮನೋರಮ ಶೆಟ್ಟಿ, ಯೋಗ ಶಿಕ್ಷಕಿ ಪ್ರಿಯಾಂಕ, ವಿಜಯ ಲಕ್ಷ್ಮಿ, ಭರತ್ ಅಚಾರ್ಯ ಪಂದುಬೆಟ್ಟು, ದಿವ್ಯಜ್ಯೋತಿ ರಾಧಾಕೃಷ್ಣ ಆಚಾರ್ಯ, ಆಶಾ ಪ್ರಾಣೇಶ್, ಸುಮತಿ, ಮಹೇಶ್ ಅಲ್ತಾರು, ರತ್ನಾಕರ ಮೊಗವೀರ, ಹಾಗೂ ರುಡ್ ಸೆಟ್ ನ ವಿದ್ಯಾರ್ಥಿಗಳು, ಆಸರೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಆಸರೆಯ ಮಾಜಿ ಅಧ್ಯಕ್ಷರಾದ ಕೆ.ಸಿ ಅಮಿನ್ ಸ್ವಾಗತಿಸಿದರು ಹಾಗೂ ಆಸರೆ ಸಂಘಟನೆಯ ಗೌರವಾಧ್ಯಕ್ಷರಾದ ರಾಜೇಶ್ ಡಿ ಬ್ರಹ್ಮಾವರ ಪ್ರಸ್ತಾವನೆಗೈದರು. ಸೂರಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕುಶಕುಮಾರ್ ಬನ್ನಾಡಿ ವಂದಿಸಿದರು

ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳ ಪೂರ್ವಭಾವಿ ಪ್ರಥಮ ಸಭೆ ; ಫೆ. 28ರಂದು ಕಂಬಳ

Thumbnail
Posted On: 12 Oct 2025, 04:59 PM

ಪಡುಬಿದ್ರಿ : ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳದ ಪೂರ್ವಭಾವಿ ಪ್ರಥಮ ಸಭೆಯು ಎರ್ಮಾಳು ಜನಾರ್ಧನ ದೇವಳದ ಆವರಣದಲ್ಲಿ ಭಾನುವಾರ ಜರಗಿತು. ಕಂಬಳ ಸಮಿತಿಯ ಗೌರವಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಮಾತನಾಡಿ, ಬಡಗೊಟ್ಟು ಬಾಕ್ಯಾರು ಕಂಬಳಕ್ಕೆ ಮಾತ್ರ ಉಪಯೋಗಿಸಬಹುದಾದ 12ಎಕರೆ ಜಾಗದಲ್ಲಿ ನಾವು ಈ ಬಾರಿ ಪ್ರಥಮವಾಗಿ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳಕ್ಕಾಗಿ ನಿಗದಿ ಪಡಿಸಿದ್ದೇವೆ. ಹಿಂದೆ ಜೈನ ಮತದವರು ಕಂಬಳ ಮಾಡುತ್ತಿದ್ದ ಜಾಗ ಇದಾಗಿತ್ತು. ಊರ ಜನರಿಗೆ ಯಾವುದೇ ತೊಂದರೆ ಬರದಂತೆ ನಾವು ವ್ಯಾಘ್ರ ಚಾಮುಂಡಿ ದೈವಕ್ಕೆ ಸೂಕ್ತ ನೆಲೆ ಕಲ್ಪಿಸಿ, ಇದೀಗ ಕಂಬಳ ಮಾಡಲು ಉದ್ದೇಶಿಸಿದ್ದೇವೆ. ಅ.22ರಂದು ಕಂಬಳ ಕರೆಗೆ ಭೂಮಿ ಪೂಜೆ, ಫೆ.28ರಂದು ಕಂಬಳ ಜರಗಲಿದೆ ಎಂದರು. ಕಂಬಳ ಜಾತ್ಯಾತೀತ ಜನಪದ ಕ್ರೀಡೆ. ಇದು ಕಂಬಳದ ಮೊದಲ ಸಭೆ. ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವರ ಉತ್ಸವದಂತೆ ಎರ್ಮಾಳು ತೆಂಕ - ಬಡ ಕಂಬಳವನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಮಾಡೋಣ ಎಂದರು. ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು ಬೀಡು ಮಾತನಾಡಿ, ಎರ್ಮಾಳು ಬೀಡು ನೇತೃತ್ವದಲ್ಲಿ ಎರ್ಮಾಳಿನಲ್ಲಿ 1978 ರಲ್ಲಿ ಕೊನೆಯ ಕಂಬಳವಾಗಿತ್ತು. ನಮ್ಮ ಕಂಬಳ ಎಂಬ ಭಾವನೆಯಿಂದ ಇದನ್ನು ಯಶಸ್ವಿಗೊಳಿಸೋಣ ಎಂದರು. ಎರ್ಮಾಳು ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು, ಎರ್ಮಾಳು ಜನಾರ್ಧನ ಜನಕಲ್ಯಾಣ ಸಮಿತಿ ಅಧ್ಯಕ್ಷ ಸುರೇಶ್ ಜಿ ಶೆಟ್ಟಿ, ಎರ್ಮಾಳು ಮಸೀದಿ ಅಧ್ಯಕ್ಷ ಸುಲೇಮಾನ್, ಜಿನರಾಜ್ ಎರ್ಮಾಳು, ವೈ. ಶಶಿಧರ ಶೆಟ್ಟಿ, ಯಶೋಧರ ಶೆಟ್ಟಿ ಮತ್ತಿತರರು ಅಭಿಪ್ರಾಯ ಮಂಡಿಸಿದರು. ಈ ಸಂದರ್ಭ ವೆಂಕಟೇಶ ನಾವಡ, ಬಾಲಚಂದ್ರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಜಗಜೀವನ್ ಚೌಟ, ಭರತ್ ಕುಮಾರ್, ಗೋಪಾಲ ಶೆಟ್ಟಿ, ಜಯರಾಜ್ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಶಶಿಧರ ಶೆಟ್ಟಿ, ವಿವಿಧ ಜಾತಿ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಸ್ವಾಗತಿಸಿ, ನಿರೂಪಿಸಿದರು.

ಬ್ರಹ್ಮಾವರ : ಜಯಂಟ್ಸ್ ಕೇರ್ ಫೌಂಡೇಶನ್ ಮತ್ತು ಜಯಂಟ್ಸ್ ಗ್ರೇಟ್ ಡೇ ಸಮಾರಂಭ

Thumbnail
Posted On: 12 Oct 2025, 12:50 PM

ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಜಯಂಟ್ಸ್ ಕೇರ್ ಫೌಂಡೇಶನ್ ನ ಉದ್ಘಾಟನೆ ಮತ್ತು ಗ್ರೇಟ್ ಡೇ ಸೆಲೆಬ್ರೇಶನ್ ಕಾರ್ಯಕ್ರಮ ಬ್ರಹ್ಮಾವರ ಸಿಟಿ ಸೆಂಟರ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಸ್ ಡಿ ಎಂ ಆಯುರ್ವೇದಿಕ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ, ಕರ್ಮ ಯೋಗವು ಅತ್ಯಂತ ಶ್ರೇಷ್ಠವಾಗಿದೆ ಸಮಾಜದಲ್ಲಿ ಸಂಘಟಿತರಾಗಿ ಉತ್ತಮ ಕಾರ್ಯವನ್ನು ಮಾಡಿದಾಗ ಅದು ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಇಂದು ಸಮಾಜದಲ್ಲಿ ನಡೆಯುತ್ತಿರುವ ಅನೇಕ ರೀತಿಯ ಸಮಸ್ಯೆಗಳಿಗೆ ನಾವೇ ಕಾರಣ ಎಲ್ಲರೂ ಕೂಡ ವಿಶಾಲ ಮನೋಭಾವನೆಯಿಂದ ಕಾರ್ಯಮಾಡಿದಾಗ ಎಲ್ಲ ಸಮಸ್ಯೆಗಳು ನಿವಾರಣೆಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಕಳೆದ ಹಲವಾರು ವರ್ಷಗಳಿಂದ ಉತ್ತಮ ಕಾರ್ಯ ಮಾಡುತ್ತಿರುವುದು ಅಭಿನಂದನನಿಯ ಎಂದರು. ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡು ಕುಕ್ಕುಡೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ರಂಗ ನಟ ಮತ್ತು ಚಲನಚಿತ್ರ ನಟ ಪ್ರಭಾಕರ್ ಕುಂದರ್, ಪೌರಕಾರ್ಮಿಕ ಶೇಖರ್, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸತೀಶ್ ಕುಮಾರ್ ಶೆಟ್ಟಿ, ಡಾ. ರೇಖಾ ನವೀನ್ ಮತ್ತು ನವೀನ್ ಚಂದ್ರ ಎನ್.ಎಚ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ಗಾಯತ್ರಿ, ವನಜಾಕ್ಷಿ, ರೊನಾಲ್ಡ್ ಡಯಸ್, ವಿವೇಕಾನಂದ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ದೀತ್ಯಾ, ಆದ್ಯಾ ಅವರಿಂದ ನೃತ್ಯ ಮತ್ತು ರೊನಾಲ್ಡ್ ಡಯಸ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.