Updated News From Kaup
ಕಾಪು : ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ - ನಾಪತ್ತೆಯಾಗಿದ್ದ ಸಾಕು ಮಗಳು ಪತ್ತೆ ; ನಾಲ್ವರು ಆರೋಪಿಗಳು ಪೋಲಿಸ್ ವಶಕ್ಕೆ
Posted On: 18 Dec 2023, 04:11 PM
ಕಾಪು : ಆತ್ಮಹತ್ಯೆ ಮಾಡಿಕೊಂಡಿದ್ದ ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿಗಳ ನಾಪತ್ತೆಯಾಗಿದ್ದ ಸಾಕು ಮಗಳನ್ನು, ನಾಲ್ವರು ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಕಾಪು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯ ಮಲಗುವ ಕೋಣೆಯಲ್ಲಿನ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರೋಪಿ ಗಿರೀಶ್ ವಿರುದ್ಧ ಫೋಕ್ಸೊ, ಅತ್ಯಾಚಾರ ಹಾಗೂ ಕಿಡ್ನಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.
ಉಡುಪಿ : ಇತಿಹಾಸ ಪ್ರಸಿದ್ಧ ವರ್ತೆ ಕಲ್ಕುಡ ದೈವಸ್ಥಾನ, ಬಜೆ ತಂಗಾಣ : ಕಾಲಾವಧಿ ಸಿರಿ ಸಿಂಗಾರದ ನೇಮ ಸಂಪನ್ನ
Posted On: 18 Dec 2023, 03:47 PM
ಉಡುಪಿ : ಇತಿಹಾಸ ಪ್ರಸಿದ್ಧ 110 ವರ್ಷಗಳ ಇತಿಹಾಸವಿರುವ ವರ್ತೆ ಕಲ್ಕುಡ ದೈವಸ್ಥಾನ, ಬಜೆ ತಂಗಾಣ ಇಲ್ಲಿಯ ಕಾಲಾವಧಿ ಸಿರಿಸಿಂಗಾರದ ನೇಮ ಶನಿವಾರ ಜರಗಿತು. ಸಂಜೆ ಭಜನೆ ಕಾರ್ಯಕ್ರಮ ಹಾಗೂ ರಾತ್ರಿ ಹೂವಿನ ಪೂಜೆ ದೈವದ ದರ್ಶನ ಸೇವೆ ಮಹಾ ಅನ್ನ ಸಂತರ್ಪಣೆ ತದನಂತರ ದೈವಗಳ ನೇಮ ಸೇವೆ ಜರಗಿತು. ಸನ್ಮಾನ : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಅನುಭವಿ ದೈವ ನರ್ತಕರಾದ ಬೀರು ಪಾಣರ, ಸಮಾಜ ಸೇವಕ, ದೈವಾರಾಧನೆ, ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿನೋದ್ ಶೆಟ್ಟಿ, ದೈವಾರಾಧನೆ ಕ್ಷೇತ್ರ ಹಾಗೂ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿರುವ ಹಿರಿಯರಾದ ಬಾಲಕೃಷ್ಣ ಶೆಟ್ಟಿ ಪೆರ್ಡೂರನ್ನು ತಂಗಾಣ ಕುಟುಂಬಸ್ಥರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮುಖ್ಯಸ್ಥರಾದ ಸುಧಾಕರ್ ಶೆಟ್ಟಿ ಕುಟುಂಬದ ಹಿರಿಯರಾದ ಸುಂದರ ಶೆಟ್ಟಿ ಹಾಗೂ ಕೃಷ್ಣ ಶೆಟ್ಟಿ, ಮೋಹನ ಶೆಟ್ಟಿ, ಸುರೇಶ್ ಶೆಟ್ಟಿ, ಗಣೇಶ ಶೆಟ್ಟಿ, ವಿಜಯ್ ಶೆಟ್ಟಿ, ಕೃಷ್ಣ ಪೂಜಾರಿ ಹಾಗೂ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೆಜಮಾಡಿ : ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ - ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಪನ್ನ
Posted On: 18 Dec 2023, 02:56 PM
ಹೆಜಮಾಡಿ : ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಮೆಂಡನ್ ಉದ್ಘಾಟಿಸಿದರು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲೆ ಎಂಬ ರಥ ನಡೆಸಲು ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯದವರ ಪಾತ್ರ ಬಹುಮುಖ್ಯ ಎಂದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ದಾನಿಗಳಾದ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶೇಷಗಿರಿ ರಾವ್, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಹೆಜಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸತೀಶ್ ಕೆ .ನಾಯಕ್, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉದ್ಯಮಿ ರಾಲ್ಫಿ ಡಿ'ಕೋಸ್ತ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರಾದ ಈಶ್ವರ್ ಎ. ಸ್ವಾಗತಿಸಿದರು. ಪ್ರೌಢಶಾಲಾ ಹಿರಿಯ ಶಿಕ್ಷಕಿ ಸಂಪಾವತಿ, ಕಾಲೇಜು ಪ್ರಾಂಶುಪಾಲ ಈಶ್ವರ್ ಎ. ವರದಿ ವಾಚಿಸಿದರು. ಸಹ ಶಿಕ್ಷಕರಾದ ಮಂಜುನಾಥ ಪಿ, ಅನಿತಾ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಸಹ ಶಿಕ್ಷಕಿ ಸರೋಜಾ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ದೀಪಾ ಎನ್ ಉಡುಪ ವಂದಿಸಿದರು. ಉಪನ್ಯಾಸಕ ವಿನ್ಸೆಂಟ್ ಡಿಸೋಜರವರ ಹಿನ್ನೆಲೆ ಸಂಗೀತದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ - 14 ನೇ ವಾರ್ಷಿಕೋತ್ಸವ ಸಂಪನ್ನ
Posted On: 18 Dec 2023, 02:17 PM
ಪಡುಬಿದ್ರಿ : ಇಲ್ಲಿನ ಕರಾವಳಿ ಸ್ಟಾರ್ಸ್ ನಡಿಪಟ್ನ ಸಂಸ್ಥೆಯ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ಸಾಗರ್ ದರ್ಶಿನಿ ವೇದಿಕೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಕಾಡಿಪಟ್ನ ನಡಿಪಟ್ನ ವಿದ್ಯಾಪ್ರಚಾರಕ ಸಂಘದ ಅಧ್ಯಕ್ಷರಾದ ಸುಕುಮಾರ್ ಶ್ರೀಯನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನಡಿಪಟ್ನ ಮೊಗವೀರ ಸಭಾದ ಅಧ್ಯಕ್ಷ ಗಂಗಾಧರ ಕರ್ಕೇರ, ಕಾಡಿಪಟ್ನ ಮೊಗವೀರ ಸಭಾದ ಅಧ್ಯಕ್ಷ ಅಶೋಕ್ ಸಾಲಿಯಾನ್, ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಶರತ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ ಅಮೀನ್, ಬಂಟರ ಸಂಘ ಪಡುಬಿದ್ರಿ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಮಿಥುನ್ ಆರ್ ಹೆಗ್ಡೆ, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯ ಶರಣ್ ಕುಮಾರ್ ಮಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾಶ್ರೀ ಯತಿನ್ ಬಂಗೇರ, ಪಡುಬಿದ್ರಿ ಕಾಡಿಪಟ್ನ ನಡಿಪಟ್ನ ವಿದ್ಯಾ ಪ್ರಚಾರಕ ಸಂಘದ ಕಾರ್ಯದರ್ಶಿ ಹರೀಶ್ ಪುತ್ರನ್, ಮಂಗಳೂರಿನ ಅಮೃತ ವಿದ್ಯಾಲಯಂ ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಶನ್ ಕಾರ್ನಾಡ್ ಕಾರ್ಯದರ್ಶಿ ಪ್ರಶಾಂತ್ ಕಾಂಚನ್, ಎಂ ಎಸ್ ಗ್ರೂಪ್ ಪಡುಬಿದ್ರಿ ಮಾಲಿಕ ಮನ್ಸೂರ್ ಎಂ ಎಸ್, ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿ ಮುಖ್ಯ ಶಿಕ್ಷಕಿ ಪದ್ಮಶ್ರೀ, ಹಳ್ಳಿ ಮನೆ ರೆಸ್ಟೋರೆಂಟ್ ಮೂಳೂರು ಮಾಲಿಕರಾದ ನಯೇಶ್ ಶೆಟ್ಟಿ ಉಪಸ್ಥಿತರಿದ್ದರು. ಕರಾವಳಿ ಸ್ಟಾರ್ಸ್ ನಡಿಪಟ್ನದ ಸಂಸ್ಥಾಪಕ ಕಿರಣ್ ರಾಜ್ ಕರ್ಕೇರ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿಯಾದ ಸಂತೋಷ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷರಾದ ವಿಘ್ನೇಶ್ ರಾವ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸರಸ್ವತಿ ಕಲಾ ಕೇಂದ್ರದ ಸದಸ್ಯರಿಂದ ಶ್ರೀ ಕೊಲ್ಲೂರು ಮೂಕಾಂಬಿಕಾ ಮಹಾತ್ಮೆ ನೃತ್ಯ ವೈಭವ, ಅರುಣ್ ಕಾಪು ಅವರಿಂದ ಸಂಗೀತ ಸಂಜೆ, ಸಂಸ್ಥೆಯ ಸದಸ್ಯರಿಂದ ನೃತ್ಯ ವೈವಿಧ್ಯ ಮತ್ತು ಹರೀಶ್ ಪಡುಬಿದ್ರಿಯವರ ತೊಟ್ಟಿಲ್ ನಾಟಕ ಪ್ರದರ್ಶನಗೊಂಡಿತು.
ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನ - 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ; ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 18 Dec 2023, 07:11 AM
ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7, ಆದಿತ್ಯವಾರದಂದು ನಡೆಯಲಿರುವ 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಕಾಪು ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಉದ್ಯಮಿ ಶ್ರೀಧರ ಆಚಾರ್ಯ ಚಂದ್ರನಗರ ಬಿಡುಗಡೆಗೊಳಿಸಿದರು. ಜನವರಿ 7, ಆದಿತ್ಯವಾರದಂದು ಬೆಳಗ್ಗೆ 10 ಗಂಟೆಗೆ ಮಾಣಿಯೂರು ಶ್ರೀ ಸೂರ್ಯಕಾಂತ ಆಚಾರ್ಯ ನೇತೃತ್ವದಲ್ಲಿ ಕಾಪು ಬಂಗ್ಲೆ ಮೈದಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯ ನಡೆಯಲಿದ್ದು, ಮಧ್ಯಾಹ್ನ ಗಂಟೆ 12:30 ರಿಂದ ಶ್ರೀ ಲಕ್ಷ್ಮೀಜನಾರ್ದನ ಮಹಿಳಾ ಭಜನಾ ಮಂಡಳಿ ಕಾಪು ಇವರಿಂದ ಭಜನಾ ಕಾರ್ಯಕ್ರಮವೂ ಜರಗಲಿದೆ. ತದನಂತರ ಅನ್ನಸಂತರ್ಪಣೆ ಜರಗಲಿದೆ. ಈ ಸಂದರ್ಭ ಬಳಗದ ಅಧ್ಯಕ್ಷ ಜಯ ಶೆಟ್ಟಿ, ಸದಸ್ಯರಾದ ರವೀಂದ್ರ ಎಂ ಸತೀಶ್ ಕಲ್ಯಾ, ನಾಗರಾಜ್ ಹೆಚ್ ಕೆ., ರಾಘು ಕಲ್ಯಾಲು, ಸುನಿಲ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ, ಲವ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಬಿ.ಜೆ.ಎಂ ಆಡಳಿತ ಸಮಿತಿ - ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಸನ್ಮಾನ
Posted On: 18 Dec 2023, 07:08 AM
ಕಾಪು : ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು-ಮಲ್ಲಾರು ಆಡಳಿತ ಸಮಿತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಎಂ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಅಲ್-ಖಾಮಿಲ್, ಫಾರೂಕ್ ಚಂದ್ರನಗರ ನಮ್ಮ ಜಮಾತ್ ಕಮಿಟಿಯಲ್ಲಿ ಹಲವು ಹುದ್ದೆ ಪಡೆದು ಉತ್ತಮ ಕೆಲಸ ಮಾಡಿದ್ದಾರೆ ಇದೀಗ ಸಮಾಜ ಸೇವೆಯಲ್ಲಿ ಉತ್ತಮ ಸೇವೆ ನೀಡಿ ವಿದೇಶದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರಿಯ ಅವಾರ್ಡ್ ಪಡೆದದ್ದು ನಮ್ಮ ಜಮಾತಿಗೆ ಹೆಮ್ಮೆ ಎಂದರು. ಈ ಸಂದರ್ಭದಲ್ಲಿ ಬಿಜೆಎಂ ಅಧ್ಯಕ್ಷರಾದ ಶಾಬನ್ ಕರಂದಾಡಿ,ಉಪಾಧ್ಯಕ್ಷರಾದ ಅಬ್ದುಲ್ಲ ಪೊಲಿಪು ,ಪ್ರದಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಲ್ಲಾರು,ಕಾರ್ಯದರ್ಶಿ ಎಂ.ಕೆ ಇಬ್ರಾಹಿಂ ಮಜೂರು,ಸಹ ಕಾರ್ಯದರ್ಶಿ ಶರ್ಫುದ್ದಿನ್ ಕೊಂಬಗುಡ್ಡೆ, ಕೋಶಾಧಿಕಾರಿ ರಫೀಕ್ ಪಕೀರಣಕಟ್ಟೆ, ಜಮಾತ್ ಸದಸ್ಯರಾದ ಶರ್ಫುದ್ದಿನ್ ಶೇಕ್ ಮಜೂರು,ಶಾಬಾನ್ ಮಜೂರು,ಅಬ್ದುಲ್ಲ ಚಂದ್ರನಗರ, ಮಾಜಿ ಅಧ್ಯಕ್ಷರಾದ ಹಾಜಬ್ಬ ಮೊಯಿದಿನ್ ಶಿರ್ವ, ಮೊಯಿದಿನ್ ,ರಝಕ್ ಕರಂದಾಡಿ, ಹಸನಬ್ಬ ಮಜೂರು, ಮಾಜಿ ಪ್ರ.ಕಾರ್ಯದರ್ಶಿ ಶಂಶುದ್ಧಿನ್ ಕರಂದಾಡಿ, ರಝಕ್ ಮಲ್ಲಾರು, ನಜಿರ್ ಮಜೂರು,ಜಮಾತ್ ಸಮಿತಿಯ ಉಸ್ತಾದರುಗಳು, ತಕ್ವಿಯತುಲ್ ಯಂಗ್ ಮೆನ್ಸ್ ಸಮಿತಿಯವರು, ಸಿರಾಜುಲ್ ಹುದಾ ದಫ್ ಸಮಿತಿಯವರು, ಸ್ವಲಾತ್ ಸಮಿತಿ ಕೊಂಬಗುಡ್ಡೆ ಸಮಿತಿಯವರು, ಹಾಗೂ ಜಮಾತಿಗರು ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ : ಬನ್ನಂಜೆ ಬಾಬು ಅಮೀನ್ 80 - ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ
Posted On: 17 Dec 2023, 11:05 AM
ಉಡುಪಿ : ಜಾನಪದ ಸಾಹಿತ್ಯ ಲೋಕದಲ್ಲಿ 21 ಕೃತಿಗಳನ್ನು ನೀಡಿದ ಬನ್ನಂಜೆ ಬಾಬು ಅಮೀನ್ ರವರಿಂದ ಮತ್ತಷ್ಟು ಕೃತಿಗಳು ಮೂಡಿ ಬರಲಿ. ಅವರ ಸಾರ್ವಕಾಲಿಕ ಚಿಂತನೆಯ ಕೃತಿಗಳು ನಮಗೆಲ್ಲರಿಗೂ ಆದರ್ಶ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ.ಜಿ. ಶಂಕರ್ ಹೇಳಿದರು. ಅವರು ರವಿವಾರ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಜರಗಿದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಯನ್ನು ತುಳಸಿ ಕಟ್ಟೆಯ ತುಳಸಿ ಗಿಡಕ್ಕೆ ತೆನೆ ಕಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬನ್ನಂಜೆಯವರ 'ತುಳುನಾಡ ಸುತ್ತಮುತ್ತ' ಹಾಗೂ 'ಗರೋಡಿ ಒಂದು ಚಿಂತನೆ' ಎಂಬ ಎರಡು ಪುಸ್ತಕಗಳ ಅನಾವರಣವನ್ನು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ರೋಹಿಣಿ ಬಿಡುಗಡೆಗೊಳಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವರಿಂದ ಪಾಡ್ದನ ನೆರವೇರಿತು. ಸಭಾಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ, ವಿವಿಧ ಗೋಷ್ಠಿ, ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಮುಂದುವರಿಯಿತು. ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್, ಸಾಹಿತಿ ಬಿ.ಎಂ.ರೋಹಿಣಿ, ಅಕ್ಷಯ ಮಾಸ ಪತ್ರಿಕೆ ಸಂಪಾದಕ ಹರೀಶ್ ಹೆಜಮಾಡಿ, ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಘುನಾಥ ಮಾಬಿಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಭಾಸ್ಕರ್ ಸ್ವಾಗತಿಸಿದರು.
ಡಿಸೆಂಬರ್ 17 : ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ 80 ; ಅಭಿನಂದನೆ ಕಾರ್ಯಕ್ರಮ - 'ಸಿರಿ ತುಪ್ಪೆ'
Posted On: 16 Dec 2023, 06:28 PM
ಉಡುಪಿ : ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಡಿಸೆಂಬರ್ 17 ರಂದು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 8.45ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವ ಅವರಿಂದ ತುಳು ಪಾಡ್ಡನ ನಡೆಯಲಿದೆ. ಬೆಳಗ್ಗೆ 11.45 ಕ್ಕೆ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪ್ರಬುದ್ಧ ಕಲಾವಿದರಿಂದ 'ಸುದರ್ಶನ ವಿಜಯ' ಯಕ್ಷಗಾನ ಪ್ರದರ್ಶನ ನಡೆಯಲಿದೆ. ಬನ್ನಂಜೆಯವರ ಜೀವನಗಾಥೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಮದ್ಯಾಹ್ನ 2.45 ಕ್ಕೆ ಪ್ರದರ್ಶನಗೊಳ್ಳಲಿದೆ. ಈ ಸಂದರ್ಭ ಅಳಿವಿನಂಚಿನಲ್ಲಿರುವ ತುಳುನಾಡಿನ ಪರಿಕರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಜನಪದದ ಇತರ ಪ್ರಕಾರಗಳ ಪ್ರಾತಕ್ಷಿತೆಯೂ ನಡೆಯಲಿದ್ದು, ಜನಪದ ನೃತ್ಯ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ.ಜಿ. ಶಂಕರ್ ಉದ್ಘಾಟಿಸಲಿದ್ದು, ಬನ್ನಂಜೆಯವರ 'ತುಳುನಾಡ ಸುತ್ತಮುತ್ತ' ಹಾಗೂ 'ಗರೋಡಿ ಒಂದು ಚಿಂತನೆ' ಎಂಬ ಎರಡು ಪುಸ್ತಕಗಳ ಅನಾವರಣವನ್ನು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ಮಾಡಲಿದ್ದಾರೆ. ಅಕ್ಷಯ ಪತ್ರಿಕೆ ಸಂಪಾದಕ ಹರೀಶ್ ಹೆಜ್ಮಾಡಿ ಉಪಸ್ಥಿತರಿರುವರು. ಬೆಳಗ್ಗೆ 10.30ಕ್ಕೆ ನಡೆಯುವ ವಿಚಾರಗೋಷ್ಠಿಯಲ್ಲಿ ಬನ್ನಂಜೆವರ ಸಮಗ್ರ ಸಾಹಿತ್ಯ ಹಾಗೂ ಜನಪದ ಆಚರಣೆ ಸಂಕಥನಗಳ ಬಗ್ಗೆ ವಿದ್ವಾಂಸರಾದ ಡಾ.ದುಗ್ಗಪ್ಪ ಕಜೆಕಾರ್, ಡಾ.ಯೋಗಿಶ್ ಕೈರೋಡಿ, ಡಾ.ಭರತ್ ಕುಮಾರ್ ಪೊಲಿಪು ವಿಚಾರ ಮಂಡನೆ ಮಾಡಲಿದ್ದಾರೆ. ಡಾ. ಮಹಾಲಿಂಗು ಕಲ್ಕುಂದ ಹಾಗೂ ಡಾ.ಗಣನಾಥ ಎಕ್ಕಾರ್ ಉಪಸ್ಥಿತರಿರುವರು. ಮಧ್ಯಾಹ್ನ 1.30 ಕ್ಕೆ ಮುದ್ದು ಮೂಡುಬೆಳ್ಳೆ ಅಧ್ಯಕ್ಷತೆಯಲ್ಲಿ ನಡೆಯುವ ಆರಾಧನಗೋಷ್ಠಿಯಲ್ಲಿ ಚಿಂತಕರಾದ ಪರಮಾನಂದ ಸಾಲ್ಯಾನ್ ಮತ್ತು ಶ್ರೀಕಾಂತ ಶೆಟ್ಟಿ ಕಾರ್ಕಳ ವಿಚಾರ ಮಂಡನೆ ಮಾಡಲಿದ್ದು, ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ಉಪಸ್ಥಿತರಿರುವರು. ಸಂಜೆ 3 ಗಂಟೆಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ಚಿನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿನಂದನಾ ನುಡಿಯನ್ನಾಡಲಿದ್ದಾರೆ. ಅಭಿನಂದನಾ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಕಾರ್ಯಾಧ್ಯಕ್ಷ ರಘುನಾಥ ಮಾಬಿಯಾನ್ ಜಂಟಿಯಾಗಿ ಅಭಿನಂದನೆ ಮಾಡಲಿದ್ದಾರೆ. ಕುದ್ರೋಳಿ ದೇಗುಲದ ಕೋಶಾಧಿಕಾರಿ ಪದ್ಮರಾಜ್ ಆರ್. 'ಸಿರಿ ಕುರಲ್' ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಲಿದ್ದು, ಮೇನಾಳಗುತ್ತು ಕಿಶನ್ ಜೆ.ಶೆಟ್ಟಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಜಾನಪದ ವಿದ್ವಾಂಸ ಡಾ. ವೈ.ಎನ್.ಶೆಟ್ಟಿ ಉಪಸ್ಥಿತರಿರುವರು.
ಡಿಸೆಂಬರ್ 24 : ಕಿನಾರ ವರ್ಣೋತ್ಸವ - ಕಾಪು ತಾಲೂಕಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ
Posted On: 16 Dec 2023, 05:54 PM
ಎರ್ಮಾಳು : ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕಾಪು ತಾಲೂಕು ವ್ಯಾಪ್ತಿಯ ಮಕ್ಕಳಿಗೆ ಕಿನಾರ ವರ್ಣೋತ್ಸವ ಚಿತ್ರಕಲಾ ಸ್ಪರ್ಧೆ 24 ಡಿಸೆಂಬರ್ 2023 ನೇ ಅದಿತ್ಯವಾರ ಬೆಳಿಗ್ಗೆ ಗಂಟೆ 9.30ಕ್ಕೆ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. 3 ರಿಂದ 5 ವರ್ಷದ ಒಳಗಿನ ಮಕ್ಕಳಿಗೆ ರಾಷ್ಟ್ರ ಪಕ್ಷಿಯ ಚಿತ್ರಕ್ಕೆ ಬಣ್ಣ ಹಚ್ಚುವುದು, 1 ರಿಂದ 4 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಾಡು ಪ್ರಾಣಿ, 5 ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ನಮ್ಮ ಸುಂದರ ಗ್ರಾಮ, 8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದಲ್ಲಿ ಭಾರತ ವಿಷಯವಾಗಿದೆ. ಈ ಮೇಲಿನ ವಿಷಯಗಳಲ್ಲಿ ಸ್ಪರ್ಧೆಗಳು ನಡೆಯಲ್ಲಿದ್ದು ಎಲ್ಲಾ ವಿಭಾಗದಲ್ಲಿ ಪ್ರತ್ಯೇಕ ನಗದು ಬಹುಮಾನ ಪ್ರಥಮ ರೂ. 3,000/- ದ್ವಿತೀಯ ರೂ 2,000/- ತೃತೀಯ ರೂ.1,000/-ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ನೀಡಿ ಗೌರವಿಸಲಾಗುವುದು. ಚಿತ್ರ ಬಿಡಿಸಲು 1.30 ಗಂಟೆಗಳ ಸಮಯವಕಾಶವಿದ್ದು, ಬೇಕಾದ ಪರಿಕರಗಳನ್ನು ವಿದ್ಯಾರ್ಥಿಗಳೇ ತರುವುದು. ಡ್ರಾಯಿಂಗ್ ಶೀಟನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧೆಗೆ ಹೆಸರು ನೋಂದಾಯಿಸಲು 2023 ನೇ ಡಿಸೆಂಬರ್ 20 ಕೊನೆಯ ದಿನಾಂಕವಾಗಿದ್ದು, ಮಕ್ಕಳ ಮಾಹಿತಿಯನ್ನು 9632033191, 8105866637 ಗೆ ವಾಟ್ಸ್ ಆಪ್ ( Watsapp ) ಮುಖಾಂತರ ಕಳುಹಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎರ್ಮಾಳು : ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ರಥೋತ್ಸವ ಪ್ರಯುಕ್ತ ಧ್ವಜಾರೋಹಣ ಸಂಪನ್ನ
Posted On: 16 Dec 2023, 05:29 PM
ಎರ್ಮಾಳು : ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಗ್ಗೆ ಧ್ವಜಾರೋಹಣ ಸಂಪನ್ನಗೊಂಡಿತು. ದೇವಳದಲ್ಲಿ ಬಯನ ಬಲಿ, ರಂಗ ಪೂಜೆ, ಆಯನೋತ್ಸವ ನೆರವೇರಿತು. ದೇವಳದ ತಂತ್ರಿವರ್ಯರಾದ ರಾಧಾಕೃಷ್ಣ ತಂತ್ರಿ, ಪವಿತ್ರ ಪಾಣಿ ಪೂರ್ಣೇಶ್ ರಾವ್, ಅರ್ಚಕರಾದ ವಿಷ್ಣು ಮೂರ್ತಿ ಉಪಾಧ್ಯಾಯ ಹಾಗೂ ಕೃಷ್ಣಮೂರ್ತಿ ಭಟ್ರವರು ಪೂಜಾ ವಿಧಿ ವಿಧಾನ ಪೂರೈಸಿದರು. ಈ ಸಂದರ್ಭ ಅನುವಂಶೀಯ ಮೊಕ್ತೇಸರ ಅಶೋಕ್ ರಾಜ್, ನೈಮಾಡಿ ನಾರಾಯಣ ಶೆಟ್ಟಿ , ಉದಯ ಕೆ. ಶೆಟ್ಟಿ , ಕಿಶೋರ್ ಶೆಟ್ಟಿ , ಅಣ್ಣಾವರ ಕುಟುಂಬಿಕರು, ಪುಚ್ಚೊಟ್ಟು ಬೀಡು ಕುಟುಂಬಿಕರು, ನೈಮಾಡಿ ವಸಂತ ಶೆಟ್ಟಿ, ರೋಹಿತ್ ಹೆಗ್ಡೆ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಸಹಿತ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
