Updated News From Kaup

ಮಕ್ಕಳ ಕರ್ನಾಟಕ ರಾಜ್ಯೋತ್ಸವ-2023 ಬಾಲ ಪ್ರಶಸ್ತಿಗೆ ಅರ್ಜಿ ಆಹ್ವಾನ

Posted On: 13-11-2023 09:53AM

ಕಟಪಾಡಿ : ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ದೀಪದ ಹಬ್ಬ : ನಿಸರ್ಗ ನೀರೆಗೆ ನೀರಾಜನ ಬೆಳಗುವ ಮುನ್ನ....!

Posted On: 12-11-2023 10:43PM

ಕತ್ತಲಲ್ಲಿ ಬೆಳಕಿನ ವಿಜ್ರಂಭಣೆ. ಹೊಲ-ಗದ್ದೆಗಳಲ್ಲಿ ಸೊಡರ ಸೊಂಪು. ಧಾನ್ಯದ ರಾಶಿಗೆ ಮನದುಂಬಿದ ಮಂಗಳಾರತಿ. ಹಟ್ಟಿ-ಕೊಟ್ಟಿಗೆಗಳೆಲ್ಲ ದೀಪಮಯ. ದೈವ-ದೇವ ಸನ್ನಿಗಳಲ್ಲಿ ದೀಪಾರಾಧನೆ. ಬಯಲು ಬೆಳ್ಳಂಬೆಳಕಾಗಿದೆ; ಆಲಯಗಳಲ್ಲಿ ಆನಂದ ತುಂಬಿದೆ. ಭೂರಮೆಗೆ ಕೃತಜ್ಞತಾರ್ಪಣೆ. ಬಲೀಂದ್ರನಿಗೆ ’ಬಲಿ’ ಸಮರ್ಪಣೆ. ’ಪೊಲಿ’ ಎಂಬ ಆಶಯದ ಸಮೃದ್ಧಿಯನ್ನು ಬೇಡುತ್ತಾ ನೆರವೇರುವ ಆಚರಣೆ. ಇದು ದೀಪಾವಳಿ. ಎಲ್ಲ ಹಬ್ಬಗಳಿಗಿಂತಲೂ ಹೆಚ್ಚಿನ ಸಡಗರದಿಂದ, ಮುತುವರ್ಜಿಯಿಂದ, ಶ್ರದ್ಧೆಯಿಂದ ನಡೆಸಲ್ಪಡುವ ಈ ಪರ್ವ ನಿಜ ಅರ್ಥದ ಹಬ್ಬ, ಆದುದರಿಂದಲೆ ನಮಗಿದು ’ಪರ್ಬ'. ಮನೆ ತುಂಬಿರುತ್ತದೆ - ಕೃಷಿಯ ಶ್ರಮದ ಪ್ರತಿಫಲವಾಗಿ ಧಾನ್ಯ ರಾಶಿ ಬಿದ್ದಿದೆ. ಕೃಷಿ ಆಧರಿತ ಸಂಸ್ಕೃತಿಯಲ್ಲಿ ಭೂಮಿ, ಕೃಷಿ ಉತ್ಪನ್ನಗಳೇ ಪ್ರಧಾನ. ಆದುದರಿಂದ ಧಾನ್ಯ ದೇವತೆಗೆ ಆರಾಧನೆ. ನಿಸರ್ಗ ’ನೀರೆ’ಗೆ ನೀರಾಜನ. ಈ ನಡುವೆ ಪ್ರತಿದಿನವೂ ಹಬ್ಬದ ಸಮೃದ್ಧಿಯನ್ನು ಸ್ಥಾಪಿಸಿ ಪ್ರಜೆಗಳನ್ನು ಪಾಲಿಸಿದ್ದ ಪುರಾತನ ಭೂನಾಥ ಬಲೀಂದ್ರನನ್ನು ಕೃತಜ್ಞತಾ ಭಾವದೊಂದಿಗೆ ಸ್ಮರಿಸುವುದು. ಆತನಿಂದಲೇ ಪೊಲಿ (ಹೊಲಿ) ಎಂಬ ಅತಿಶಯ ಸಮೃದ್ಧಿಯನ್ನು ಬೇಡುವುದು ನಡೆದು ಬಂದ ಪದ್ಧತಿ. ಇದು ಶತಮಾನಗಳಿಂದ ಸಾಗಿಬಂದಿದೆ. ಈ ಶ್ರದ್ಧೆ ಪ್ರಾಚೀನ, ಈ ಆಚರಣೆ ಇಂದಿಗೂ ಪ್ರಸ್ತುತವೆನಿಸುತ್ತದೆ. ಬಲಗುಂದದೆ, ಮೌಲ್ಯ ಕಳೆದುಕೊಳ್ಳದೆ ಆಚರಿಸಲ್ಪಡುತ್ತಿದೆ.

ಇನ್ನಂಜೆ : ನಿಸರ್ಗ ಫ್ರೆಂಡ್ಸ್ ಪಾದೆಕೆರೆ - ಗೂಡುದೀಪ

Posted On: 12-11-2023 06:11PM

ಇನ್ನಂಜೆ : ಎಲ್ಲೆಲ್ಲೂ ದೀಪದ ಹಬ್ಬ ದೀಪಾವಳಿಯ ಸಂಭ್ರಮ. ಅದರಲ್ಲೂ ಮನೆ, ಬೀದಿಗಳಲ್ಲಿ ಗೂಡುದೀಪಗಳನ್ನು ನೋಡುವುದೇ ಚಂದ.

ಪಲಿಮಾರು ಹೊೖಗೆ ಫ್ರೆಂಡ್ಸ್ ವತಿಯಿಂದ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳ ವಿತರಣೆ

Posted On: 12-11-2023 06:01PM

ಕಟಪಾಡಿ : ದೀಪಾವಳಿ ಹಬ್ಬದ ಪ್ರಯುಕ್ತ ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಇವರು ಕಟಪಾಡಿಯ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು.

ಪಡುಬಿದ್ರಿ ರೋಟರಿ ಕ್ಲಬ್ ‌: ವರ್ಣ ವಿಹಾರ-2023

Posted On: 12-11-2023 03:38PM

ಪಡುಬಿದ್ರಿ : ಬಲ್ಲವನೇ ಬಲ್ಲ ಬೆಲ್ಲದ ರುಚಿಯ ಎನ್ನುವ ಹಾಗೆ ಚಿತ್ರ ಕಲೆಯ ಸವಿಯು ಸವಿದವನಿಗೆ ಗೊತ್ತು ಚಿತ್ರಕಲೆಯ ಬಗ್ಗೆ ತಿಳಿಯುವ ಮುನ್ನ ನಾವು ಕಲೆಯ ಬಗ್ಗೆ ಅರಿತು ಕೊಳ್ಳಲೇಬೇಕು. ಚಿತ್ರಕಲೆಯು ಮಗುವಿನ ಮಾನಸಿಕ ಬೆಳವಣಿಗೆಗೆ ಸ್ವಾಭಾವಿಕ ಸಾಧನ. ಪ್ರತಿಯೊಂದು ಮಗುವು‌ ಶ್ರೇಷ್ಠ ಕಲಾವಿದ. ಪ್ರತಿಶತ ಶೇ.80 ರಷ್ಟು ಮಕ್ಕಳು ತಾವು ಇಷ್ಟ ಪಡುವ‌ ಆಟಕ್ಕಿಂತಲು ಹೆಚ್ಚು ಸಮಯವನ್ನು ಚಿತ್ರಕಲೆಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಾರೆ. ಏಕಾಗ್ರತೆ ಹಾಗು ತಾಳ್ಮೆ ಇದ್ದರೆ ಎಷ್ಟೇ ಕಷ್ಟಕರವಾದ ಚಿತ್ರವನ್ನು ಬಿಡಿಸಬಹುದು" ಎಂದು ಖ್ಯಾತ ಚಿತ್ರ ಕಲಾವಿದ ಸೂರಾಜ್ ಮಂಗಳೂರು ನುಡಿದರು. ಅವರು ಪಡುಬಿದ್ರಿ ಸುಜಾತ ಆಡಿಟೋರಿಯಮ್ ನಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಉಜ್ವಲ್ ಡಿಸೈನ್ಸ್ ಮತ್ತು ಪ್ರಿಂಟಿಂಗ್ ಇದರ ವತಿಯಿಂದ ನಡೆದ ವರ್ಣ ವಿಹಾರ-2023 ಉಡುಪಿ ಜಿಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಹೆಜಮಾಡಿ : ಕುಣಿತ ಭಜನಾ ತರಬೇತಿಗೆ ಚಾಲನೆ

Posted On: 12-11-2023 11:21AM

ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದೆಬೆಟ್ಟುಶ್ರೀಧರ್ ಆಚಾರ್ಯ ಇವರ ನೇತೃತ್ವದಲ್ಲಿ ಕುಣಿತ ಭಜನಾ ತರಬೇತಿಗೆ ಚಾಲನೆ ನೀಡಲಾಯಿತು.

ಬಂಟಕಲ್ಲು : ಕೆ ಆರ್ ಪಾಟ್ಕರ್ ರಿಂದ ರಚಿಸಲ್ಪಟ್ಟ ಕನ್ನಡದ ಗೂಡುದೀಪ

Posted On: 12-11-2023 11:15AM

ಬಂಟಕಲ್ಲು : ದೀಪಾವಳಿ ಸಂಭ್ರಮದಲ್ಲಿ ಗೂಡುದೀಪಕ್ಕೂ ಪಾಲಿದೆ. ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ತಯಾರಿಸಿದ ಗೂಡುದೀಪಗಳು ರಾರಾಜಿಸಿದರೆ ಇಂದು ಅಂಗಡಿಗಳಲ್ಲಿ ತಯಾರಿಸಲ್ಪಟ್ಟ ಗೂಡುದೀಪಗಳು ಮನೆಯ ಎದುರಿಗೆ ರಾರಾಜಿಸುತ್ತಿದೆ.

ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ : ಡಾ. ಪ್ರತಿಭ ಆರ್.

Posted On: 11-11-2023 11:20PM

ಕಾಪು : ಇಲ್ಲಿನ‌ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ - ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ

Posted On: 11-11-2023 11:02PM

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ ಕಾಪು ಪಡು ಇಲ್ಲಿಯ ಶ್ರೀ ಬ್ರಹ್ಮರ ಮೂರ್ತಿಗೆ ಹಾಗೂ ಕೋಟಿ ಚೆನ್ನಯ್ಯರ ಸುರಿಯಕ್ಕೆ ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ ನವೆಂಬರ್ 9ರಂದು ಶ್ರೀ ಬ್ರಹ್ಮ ಬೈದೇರುಗಳ ದಿವ್ಯ ಸನ್ನಿಧಾನದಲ್ಲಿ ನಡೆಯಿತು.

ಕಾಪು‌ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದೀಪಾವಳಿ ಹಬ್ಬದ ಆಚರಣೆ

Posted On: 11-11-2023 10:26PM

ಕಾಪು : ಮಾಧ್ಯಮ ಕ್ಷೇತ್ರ ಇಂದು‌ ಕ್ರಿಯಾಶೀಲವಾಗಿದೆ. ಸಮಾಜದ ಒಳಿತು ಕೆಡುಕುಗಳ ಬಗೆಗೆ ಬೆಳಕು ಚೆಲ್ಲುವ ಕಾರ್ಯ ಮಾಧ್ಯಮದ ಮೂಲಕ ಆಗಬೇಕಾಗಿದೆ. ಪತ್ರಕರ್ತರು ಅವರ ಕುಟುಂಬ ವರ್ಗದೊಂದಿಗೆ ದೀಪಾವಳಿ‌ ಆಚರಿಸುತ್ತಿರುವುದು ಖುಷಿಯ ವಿಷಯ. ದೀಪಾವಳಿಯು ನಮ್ಮಲ್ಲಿ ಸಂಭ್ರಮ ಉಂಟುಮಾಡಿ ಎಲ್ಲರಿಗೂ ಒಳಿತಾಗಲಿ‌ ಎಂದು ಕಾಪು ತಹಶೀಲ್ದಾರರಾದ ಡಾ. ಪ್ರತಿಭ ಆರ್ ಶುಭ ಹಾರೈಸಿದರು. ಅವರು‌ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಶನಿವಾರ ಸಂಜೆ ನಡೆದ ದೀಪಾವಳಿ ಹಬ್ಬದ ಆಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.