Updated News From Kaup

ಪಲಿಮಾರು : ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ

Thumbnail
Posted On: 24 Dec 2023, 06:47 PM

ಪಲಿಮಾರು : ಹೊಯಿಗೆ ಫ್ರೆಂಡ್ಸ್ (ರಿ.) ಹೊಯಿಗೆ ಪಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶ್ರೀ ಮಹಾಲಿಂಗೇಶ್ವರ ಪಲಿಮಾರು ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇದರ ಅಧ್ಯಕ್ಷ, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್‌ ಮಣಿಪಾಲ ರನ್ನು ಸನ್ಮಾನಿಸಲಾಯಿತು. ಕಳೆದ 6 ವರ್ಷಗಳಿಂದ ಪಲಿಮಾರು ಭಾಗದಲ್ಲಿ ಸತತವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಹಲವು ರೋಗಿಗಳ ಜೀವ ಉಳಿವಿಗೆ ಕಾರಣವಾದ ಹೊಯಿಗೆ ಫ್ರೆಂಡ್ಸ್ ಪಲಿಮಾರು ಹಾಗೂ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಅವರ ಕಾರ್ಯ ಶ್ಲಾಘನೀಯವಾದುದೆಂದು ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಪ್ರಾಂಶುಪಾಲರಾದ ಗ್ರೆಟ್ಟ ಮೋರಸ್, ಹೊಯಿಗೆ ಫ್ರೆಂಡ್ಸ್ ಪಲಿಮಾರು ಅಧ್ಯಕ್ಷ ರಿತೇಶ್ ದೇವಾಡಿಗ, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು‌ ಮಟ್ಟು ಅಧ್ಯಕ್ಷ ಹರೀಶ್, ಕೆಎಂಸಿ ಮಣಿಪಾಲ ವೈದ್ಯ ಡಾ.ಅಕ್ಷಯ್, ಪಲಿಮಾರು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿಮಾರು, ಪಲಿಮಾರು ಪ್ರೌಢಶಾಲಾ ವಿಭಾಗ ಸರಕಾರಿ ಪದವಿ ಪೂರ್ವ ಕಾಲೇಜು ಮುಖ್ಯ ಶಿಕ್ಷಕಿ ಸುನಿತಾ, ಜಿತೇಂದ್ರ ಫುರ್ಟಾಡೋ, ಗಾಯತ್ರಿ ಡಿ ಪ್ರಭು, ಗುರುರಾಜ್ ರಾವ್, ಯೋಗೀಶ್ ಸುವರ್ಣ, ಶಿಕ್ಷಕ ಪಿಲಾರು ಸುಧಾಕರ ಶೆಣೈ ಮತ್ತಿತರರು ಉಪಸ್ಥಿತರಿದ್ದರು. ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿಯಾದ ಪ್ರತಾಪ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ರಕ್ತದಾನ ಶಿಬಿರದಲ್ಲಿ 90 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಉಡುಪಿ : ನಾಯಕತ್ವ ಎಂಬುದು ಒಂದು ಅವಕಾಶ - ಡಾ| ಗೀತಾಮಯ್ಯ

Thumbnail
Posted On: 24 Dec 2023, 06:27 PM

ಉಡುಪಿ : ನಾಯಕತ್ವ ಎಂಬುದು ಒಂದು ಅವಕಾಶ ಅದನ್ನು ಬಳಸಿಕೊಂಡು ಸಮಾಜದ ವಿವಿಧ ಸ್ಥರದಲ್ಲಿರುವ ಜನರ ಸೇವೆ ಮಾಡುವ ಮೂಲಕ ನಮ್ಮ ಜೀವನವನ್ನು ಸಾರ್ಥಕಗೊಳಿಸಬಹುದು ಎಂದು ಮಾಹೆ ಮಣಿಪಾಲ ವಿ.ವಿಯ ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ| ಗೀತಾಮಯ್ಯ ಹೇಳಿದರು. ಅವರು ಡಿಸೆಂಬರ್ 23 ರಂದು ಬಡಗು ಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಜಗನ್ನಾಥ ಸಭಾಭವನದಲ್ಲಿ ನಡೆದ ಜೆಸಿಐ ಉಡುಪಿ ಸಿಟಿ ಇದರ 2024 ನೇ ಸಾಲಿನ ಪದ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಗರಸಭಾ ಸದಸ್ಯ ವಿಜಯ್ ಕೊಡವೂರು, ಸಮಾಜದಲ್ಲಿ ನಾವು ವಿವಿಧ ಋಣಗಳಿಂದ ಬದುಕುತ್ತಿದ್ದೇವೆ ಈ ಋಣವನ್ನು ತೀರಿಸಬೇಕಾದರೆ ನಾವು ಬಡವರ ಸೇವೆ ಮಾಡಬೇಕೆಂದರು. ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡಿ, ಅಂತರಾಷ್ಟ್ರೀಯ ಸಂಸ್ಥೆಗಳು ಶತಮಾನ ಕಂಡಿವೆ ಲಯನ್ಸ್ ರೋಟರಿ ಮತ್ತು ಜೀಸಿಗಳು ಮಾಡುತ್ತಿರುವ ಕಾಯ೯ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರಧಾನ ಮತ್ತು 18 ಜನ ನೂತನ ಸದಸ್ಯರ ಪ್ರಮಾಣವಚನ ನಡೆಯಿತು. ಪೂರ್ವ ಅಧ್ಯಕ್ಷರಾದ ಸಂದೀಪ್ ಕುಮಾರ್ -ತನುಜಾ ಮಾಬೇನ್ ಅವರನ್ನು ಗೌರವಿಸಲಾಯಿತು. ವಲಯ ಉಪಾಧ್ಯಕ್ಷ ದೀಪಕ್ ರಾಜ್ ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಪೂರ್ವ ಅಧ್ಯಕ್ಷ ವಕೀಲರಾದ ವಿನಯ್ ಆಚಾರ್ಯ ಮುಡ್ಕೂರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಖ್ಯಾತ ಸಮಾಜ ಸೇವಕ ಈಶ್ವರ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ನೂತನ ಅಧ್ಯಕ್ಷೆ ಡಾ| ಹರಿಣಾಕ್ಷಿ ಕರ್ಕೇರ ವಹಿಸಿದ್ದರು. ಪದಾಧಿಕಾರಿಗಳಾದ ಕಿರಣ್ ಭಟ್, ಸಂಧ್ಯಾ ಕುಂದರ್, ನಯನ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

ಕಾಪು : ಮಹಾರಾಷ್ಟ್ರ ಸ್ವಿಮ್ಮಿಂಗ್ ಅಸೋಸಿಯೇಷನ್ ​​13 ನೇ ರಾಜ್ಯ ಮಟ್ಟದ ಓಪನ್ ಸೀ ಈಜು ಸ್ಪರ್ಧೆ - ದಿಶಿತಾ ಚಂದ್ರಶೇಖರ್ ಪೂಜಾರಿಗೆ ಫಿನಿಶರ್ ಪದಕ

Thumbnail
Posted On: 24 Dec 2023, 10:09 AM

ಕಾಪು : ಸಿಂಧುದುರ್ಗ ಜಿಲ್ಲಾ ಈಜು ಸಂಘ ಮತ್ತು ಮಾಲ್ವನ್ ನಗರ ಪರಿಷತ್, ಮಹಾರಾಷ್ಟ್ರ ಸ್ವಿಮ್ಮಿಂಗ್ ಅಸೋಸಿಯೇಷನ್ ​​13 ನೇ ರಾಜ್ಯ ಮಟ್ಟದ ಓಪನ್ ಸೀ ಈಜು ಸ್ಪರ್ಧೆಯು ಡಿಸೆಂಬರ್ 16 ಮತ್ತು 17 ರಂದು ಚಿವ್ಲೆ ಸಮುದ್ರದಲ್ಲಿ ಜರಗಿದ್ದು ಈ ಸ್ಪರ್ಧೆಯಲ್ಲಿ ಕಾಪು ತಾಲೂಕಿನ ಇನ್ನಂಜೆ ಮೂಲದ ದಿಶಿತಾ ಚಂದ್ರಶೇಖರ್ ಪೂಜಾರಿ 2 ಕಿ.ಮೀ ಈಜನ್ನು ಯಶಸ್ವಿಯಾಗಿ ಮುಗಿಸಿ ಫಿನಿಶರ್ ಪದಕ ಪಡೆದಿರುತ್ತಾರೆ. ಈಕೆ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಮಡುಂಬು ಶಾಂತ ಪೂಜಾರಿ ಮತ್ತು ಸಂಜೀವ ಪೂಜಾರಿ ದಂಪತಿಗಳ ಮೊಮ್ಮಗಳು.

ಬಂಟಕಲ್ಲು ಇಂಜಿನಿಯರಿಂಗ್‌ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

Thumbnail
Posted On: 22 Dec 2023, 05:41 PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗವು ಐಎಸ್‌ಟಿಇ ಘಟಕ ಸಹಯೋಗದೊಂದಿಗೆ ಡಿಸೆಂಬರ್ 20 ರಂದು ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ 136 ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಎನ್‌ಐಟಿಕೆ, ಸುರತ್ಕಲ್‌ ನ ಎಮ್‌ಎಸಿಎಸ್ ವಿಭಾಗ ಪ್ರಾಧ್ಯಾಪಕರಾದ ಡಾ. ಎಸ್ ಎಮ್ ಹೆಗ್ಡೆ, ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಗಣಿತವನ್ನು ವಿಜ್ಞಾನದ ತಾಯಿ ಎಂದು ಏಕೆ ಕರೆಯುತ್ತಾರೆ ಮತ್ತು ಪ್ರಕೃತಿಯಲ್ಲಿ ಗಣಿತವನ್ನು ಹೇಗೆ ಕಂಡುಹಿಡಿಯ ಬಹುದೆಂದು ವಿವರಿಸಿದರು. ವೈದ್ಯಕೀಯ ವಿಜ್ಞಾನ, ನೆಟ್ ವರ್ಕ್ ವಿಜ್ಞಾನ ಮುಂತಾದವುಗಳಲ್ಲಿ ಗಣಿತವನ್ನು ಹೇಗೆ ಬಳಸಬಹುದು ಎಂಬುದನ್ನು ನಿಜ ಜೀವನದ ಉದಾಹರಣೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದುದ್ದಕ್ಕೂ ಗಣಿತದ ಕಲಿಕೆಯನ್ನು ಮುಂದುವರಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಳೆದ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ಗಣಿತದಲ್ಲಿ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ವಿವಿಧ ಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕಾತ್ಯಾಯಿನಿ ಮತ್ತು ದೀಕ್ಷಾ ಪೈ ನಿರೂಪಿಸಿದರು.

ಉಡುಪಿ : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ - ಮಹಿಳಾ ಘಟಕದ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಆಯ್ಕೆ

Thumbnail
Posted On: 22 Dec 2023, 04:55 PM

ಉಡುಪಿ : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಎಸ್ಎಎಸ್ಎಸ್) ಇದರ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹಾಗೂ ರಾಜ್ಯಾಧ್ಯಕ್ಷ ಡಾ.ಜಯರಾಂ ಅವರ ನಿರ್ದೇಶನದ ಮೇರೆಗೆ, ಉಡುಪಿ ಜಿಲ್ಲಾ ಎಸ್ಎಎಸ್ಎಸ್ ಮಹಿಳಾ ಘಟಕವನ್ನು ರಚಿಸಲಾಗಿದ್ದು, ಇದರ ಜಿಲ್ಲಾ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಇವರನ್ನು ನಿಯೋಜಿಸಲಾಗಿದೆ. ಎಸ್ಎಎಸ್ಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ರವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಇದೇ ತಿಂಗಳ ಡಿಸೆಂಬರ್ 31 ನೇ ತಾರೀಕಿನಂದು ಭಾನುವಾರ, ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ, ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ ಮತ್ತು ತಾಲೂಕು ,ಹಾಗೂ ಶ್ರೀ ಅಯ್ಯಪ್ಪ ಮಂದಿರ (ರಿ) ಮಲ್ಪೆ ಇದರ ಜಂಟಿ ಆಶ್ರಯದೊಂದಿಗೆ ಮಲ್ಪೆಯ ಅಯ್ಯಪ್ಪ ಮಂದಿರ ವಠಾರದಲ್ಲಿ ನಡೆಯಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಸಮಾವೇಶ ಮತ್ತು ಹರಿವರಾಸನಂ ಶತಮಾನೋತ್ಸವ ಆಚರಣೆಯ ಸಮಾರಂಭದ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಹಿಳಾ ಎಸ್ಎಎಸ್ಎಸ್ ನ ಪದಗ್ರಹಣ ಕಾರ್ಯಕ್ರಮವು ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪಡು ಕುತ್ಯಾರು : ಆನೆಗುಂದಿ ಮಠ - ಡಿಸೆಂಬರ್ 25ರಿಂದ ಯಕ್ಷಗಾನ ತಾಳಮದ್ದಲೆ ಸಪ್ತಾಹ 2023

Thumbnail
Posted On: 21 Dec 2023, 05:31 PM

ಪಡುಕುತ್ಯಾರು : ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ 2023 ದಶಂಬರ 25ರಿಂದ ದಶಂಬರ 31ರವರೆಗೆ ತೃತೀಯ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ 2023 ನಡೆಯಲಿದೆ. ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯುವ ಯಕ್ಷಗಾನ ಸಪ್ತಾಹದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ ಮತ್ತು ಪೂರ್ಣಾನುಗ್ರಹದೊಂದಿಗೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುವ 2023ರ ಡಿಸೆಂಬರ್ 25 ರಂದು ಅಪರಾಹ್ನ 2.30ಕ್ಕೆ ಯಕ್ಷಗಾನ ಸಪ್ತಾಹ 2023 ರ ಉದ್ಘಾಟನೆಯನ್ನು ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನದ ಮೂಲಕ ನೆರವೇರಿಸುವರು. ಆನೆಗುಂದಿ ಪ್ರತಿಷ್ಠಾನ ಮುಂಬಯಿ ವಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಟಿ. ಆಚಾರ್ಯ ಮುಂಬೈ ದಿಕ್ಸೂಚಿ ಭಾಷಣ ಮಾಡುವರು. ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾಪು ವಿಧಾನ ಸಭಾ ಕ್ಷೇತ್ರ ಶಾಸಕ ಹಾಗೂ ಯಕ್ಷಗಾನ ಕಲಾ ಪೋಷಕರಾದ ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸುವರು. ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕಳಿ ಚಂದ್ರಯ್ಯ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಕೆ. ಉಪಸ್ಥಿತರಿರುವರು. ಡಿಸೆಂಬರ್ 31 ಅಪರಾಹ್ನ 2.30ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ ವಾಸುದೇವ ರಾವ್ ಸುರತ್ಕಲ್, ರುದ್ರಯ್ಯ ಆಚಾರ್ಯ ಕೋಟ, ಸದಾಶಿವ ಆಚಾರ್ಯ ಬೈಲೂರು, ಶಂಕರ ಆಚಾರ್ಯ ಕೊಳ್ಯೂರು, ಭಾಸ್ಕರ್ ಜಿ. ಪೂಜಾರಿ ಕಟಪಾಡಿ, ರಾಘು ಎಸ್., ಗುಜರನ್ ಉಚ್ಚಿಲ, ವಾಮನ ಆಚಾರ್ಯ ಬೋವಿಕ್ಕಾನ ಕಾಸರಗೋಡು ಎಂಬೀ 7 ಮಂದಿ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಸಂಪನಗೊಳ್ಳುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ, ವಡೇರಹೋಬಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರು, ಹಾಗೂ ಯಕ್ಷಗಾನ ಕಲಾ ಪೋಷಕರಾದ ಎಂ. ಮಿಥುನ್ ರೈ, ಮಂಗಳೂರು ಭಾಗವಹಿಸುವರು. ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ , ಸರಸ್ವತೀ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಬೆಳುವಾಯಿ ಸುಂದರ ಆಚಾರ್ಯ, ಮಂಗಳೂರು, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಆನೆಗುಂದಿ ಪ್ರತಿಷ್ಠಾನದ ಹಿರಿಯ ವಿಶ್ವಸ್ಥರಾದ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಆನೆಗುಂದಿ ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ನಾಗಧರ್ಮೇಂದ್ರ ಸರಸ್ವತೀ ಸಂಸ್ಕ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ಸರಸ್ವತೀ ಪೂರ್ವ ವಿದ್ಯಾರ್ಥಿ ವೃಂದದ ಅಧ್ಯಕ್ಷ ಕೇಶವ ಶರ್ಮಾ ಇರುವೈಲು ಉಪಸ್ಥಿತರಿರುವರು. ಯಕ್ಷಗಾನ ತಾಳಮದ್ದಲೆ ಸಪ್ತಾಹ 2023 ಸಂಯೋಜಕ ಜನಾರ್ಧನ ಆಚಾರ್ಯ ಕನ್ಯಾನ, ಆನೆಗುಂದಿ ಸರಸ್ವತೀ ಗೋವು -ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ (ರಿ) ಪ್ರಧಾನ ಕಾರ್ಯದರ್ಶಿ, ಡಿ. ಸುರೇಶ್ ಆಚಾರ್ಯ, ಕಟಪಾಡಿ , ಅಸೆಟ್ ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಕೆ.ಜೆ, ನಾಗಧರ್ಮೇಂದ್ರ ಸರಸ್ವತೀ ಸಂಸ್ಕ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ಸರಸ್ವತೀ ಪೂರ್ವ ವಿದ್ಯಾರ್ಥಿ ವೃಂದದ ಸಹ ಕಾರ್ಯದರ್ಶಿ ಮನೋಜ್ ಶರ್ಮಾ, ಪಡುಕುತ್ಯಾರು , ರಮಾ ನವೀನ್ ಆಚಾರ್ಯ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಸರಸ್ವತೀ ಮಾತೃಮಂಡಳಿ ಪಡುಕುತ್ಯಾರು, ಐ. ಲೋಲಾಕ್ಷ ಶರ್ಮಾ ಪ್ರಧಾನ ಕಾರ್ಯದರ್ಶಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ, ಪಡುಕುತ್ಯಾರು ಇವರು ಪ್ರತಿ ದಿನಗಳ ಕಾರ್ಯಕ್ರಮದ ವ್ಯವಸ್ಥೆಯ ನೇತೃತ್ವವಹಿಸಲಿದ್ದಾರೆ ಎಂದು ಆನೆಗುಂದಿ ಪ್ರತಿಷ್ಠಾನ ಕಟಪಾಡಿ ಪಡುಕುತ್ಯಾರು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು : ಅಭಿನಂದನ ಸಮಿತಿಯಿಂದ ಚಂದ್ರನಗರದಲ್ಲಿ ಸಮಾಜ ಸೇವೆಯ ಸಾಧಕತ್ರಯರಿಗೆ ಸನ್ಮಾನ

Thumbnail
Posted On: 21 Dec 2023, 05:10 PM

ಕಾಪು : ಔದ್ಯೋಗಿಕ ನೆಲೆಯಲ್ಲಿ ಕ್ರಿಯಾಶೀಲತೆಯನ್ನು ಹೊಂದಿ ಅದರಿಂದ ಬಂದ ಒಂದಷ್ಟು ಅಂಶವನ್ನು ಸಮಾಜ ಸೇವೆಗೆ ಬಳಸುವ ಮನಸ್ಸು ಎಲ್ಲರಿಗೂ ಬರುವುದಿಲ್ಲ ಅಂತಹ ನಿಸ್ವಾರ್ಥ ಉದ್ದೇಶದ ಸಾಧಕರನ್ನು ಗುರುತಿಸುವುದು ಸಂತಸ ತಂದಿದೆ ಎಂದು ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಹೇಳಿದರು. ಅವರು ಗುರುವಾರ ಕಾಪು ಚಂದ್ರನಗರ ಬಟರ್ ಫ್ಲೈ ಅತಿಥಿ ಗೃಹದ ಸಭಾಂಗಣದಲ್ಲಿ ಕಾಪು ಅಭಿನಂದನ ಸಮಿತಿಯಿಂದ ನಡೆದ ಸಾಧಕರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸನ್ಮಾನ : ಯುಎಇ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ವತಿಯಿಂದ ಸಮಾಜ ಸೇವೆಗಾಗಿ ಕೊಡಮಾಡುವ 2023 ಸಾಲಿನ ದುಬೈ ಗಡಿನಾಡು ಉತ್ಸವದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಸಮಾಜ ಸೇವಕ ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರ ಹಾಗೂ ಸಮಾಜ ಬಂಧು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕಲಿಮ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸಿಬ್ಗತ್ ಉಲ್ಲಾ ಶರೀಫ್‌ ಹಾಗೂ ಕೇರಳ ರಾಜ್ಯದ ಗಡಿನಾಡ ಸಾಹಿತ್ಯ ಅಕಾಡೆಮಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಪುವಿನ ಸಮಾಜ ಸೇವಕ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರನ್ನು ಗಣ್ಯರು, ಅಭಿಮಾನಿಗಳು ಸನ್ಮಾನಿಸಿದರು. ಈ ಸಂದರ್ಭ ಅಬೂಬಕ್ಕರ್ ಪರ್ಕಳ, ವಿಶ್ವನಾಥ ಪೂಜಾರಿ ಗರಡಿಮನೆ, ಶೇಖರ್ ಬಿ‌. ಶೆಟ್ಟಿ ಕಳತ್ತೂರು, ಅರುಣಾಕರ ಶೆಟ್ಟಿ ಕಳತ್ತೂರು, ಚಂದ್ರನಗರ ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್ ನ ಸ್ಥಾಪಕ ಅಧ್ಯಕ್ಷ ಸಂಶುದ್ದೀನ್ ಯೂಸುಫ್, ಕೆಪಿಸಿಸಿ ಎನ್.ಆರ್.ಐ ವಿಂಗ್ ಅಧ್ಯಕ್ಷ ಶೇಖ್ ವಾಹಿದ್ ದಾವೂದ್, ಉಮ್ಮರಬ್ಬ ಚಂದ್ರನಗರ ಉಪಸ್ಥಿತರಿದ್ದರು. ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ದಿವಾಕರ್ ಡಿ. ಶೆಟ್ಟಿ ಸ್ವಾಗತಿಸಿದರು. ದಿನೇಶ್ ಆಚಾರ್ಯ ಶಿರ್ವ ಅಭಿನಂದನಾ ಪತ್ರ ವಾಚಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಡಿಸೆಂಬರ್ 23 : ಶ್ರೀ ಧೂಮಾವತಿ ದೈವಸ್ಥಾನ ಎರ್ಮಾಳು ಬಡಾ - ನೇಮೋತ್ಸವ

Thumbnail
Posted On: 21 Dec 2023, 08:25 AM

ಎರ್ಮಾಳು : ಬಡಾ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಡಿಸೆಂಬರ್ 23 ರಂದು ವಾರ್ಷಿಕ ನೇಮೋತ್ಸವ ಜರಗಲಿದೆ. ಡಿಸೆಂಬರ್ 22, ಶುಕ್ರವಾರ ಮಧ್ಯಾಹ್ನ ಗಂಟೆ 3 ಕ್ಕೆ ನೂತನ ಬೆಳ್ಳಿಯ ನಗ, ನಾಣ್ಯಗಳನ್ನು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ದೈವಸ್ಥಾನಕ್ಕೆ ಸಮರ್ಪಿಸಲಾಗುವುದು. ಸಂಜೆ ಶ್ರೀ ಧೂಮಾವತಿ ದೈವದ ದರ್ಶನ, ಧ್ವಜಾರೋಹಣ ಜರಗಲಿದ್ದು, ಡಿಸೆಂಬರ್ 23, ಶನಿವಾರ ನೇಮೋತ್ಸವದಂದು ಭಂಡಾರ ಇಳಿದ ನಂತರ ರಾತ್ರಿ ಘಂಟೆ 8 ಕ್ಕೆ ಸುರೇಶ ಗೋಪಾಲ ಶೆಟ್ಟಿ ಮತ್ತು ಕುಟುಂಬಿಕರು, ಮಾತೋಶ್ರೀ, ಎರ್ಮಾಳು ಬಡಾ ಇವರ ವತಿಯಿಂದ ಅನ್ನಸಂತರ್ಪಣೆ ಹಾಗೂ ಕುಮಾರ ಜಿ.ಶೆಟ್ಟಿ ಮಾತೋಶ್ರೀ, ಎರ್ಮಾಳು ಬಡಾ ಮತ್ತು ಎರ್ಮಾಳು ನೈಮಾಡಿ ಶ್ರೀ ನಾರಾಯಣ ಕೆ. ಶೆಟ್ಟಿ ಇವರ ವತಿಯಿಂದ ಹೂವಿನ ಅಲಂಕಾರ ಸೇವೆ ಜರಗಲಿರುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ ವೈದ್ಯಕೀಯ ಪ್ರತಿನಿಧಿಗಳ ಮುಷ್ಕರ : ಕೇಂದ್ರ ಸಕಾ೯ರಕ್ಕೆ ಮನವಿ ಸಲ್ಲಿಕೆ

Thumbnail
Posted On: 21 Dec 2023, 08:12 AM

ಉಡುಪಿ : ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (KSM&SRA), ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (FMRAI) ಯ ಅಂಗಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿಯವರಿಗೆ ಅಪರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಎಲ್ಲಾ ವೈದ್ಯಕೀಯ ಪ್ರತಿನಿಧಿಗಳು ಮುಷ್ಕರ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರವು ಮಾರಾಟ ಪ್ರಚಾರ ನೌಕರರನ್ನು ರಕ್ಷಿಸಬೇಕು.(ಸೇವೆಗಳ ಷರತ್ತುಗಳು) ಕಾಯಿದೆ, 1976.,ಮಾರಾಟ ಪ್ರಚಾರದ ಉದ್ಯೋಗಿಗಳಿಗೆ ಶಾಸನಬದ್ಧ ಕೆಲಸದ ನಿಯಮಗಳನ್ನು ರೂಪಿಸಬೇಕು,ಸರ್ಕಾರಿ ಆಸ್ಪತ್ರೆಗಳು, ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರತಿನಿಧಿಗಳ ಪ್ರವೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಿ ಕೆಲಸ ಮಾಡುವ ಹಕ್ಕನ್ನು ಖಾತ್ರಿಪಡಿಸಿಕೊಳ್ಳಬೇಕು, ಬೆಲೆಗಳನ್ನು ಕಡಿಮೆ ಮಾಡಿ ಮತ್ತು ಔಷಧಿಗಳು ಮತ್ತು ವೈದ್ಯಕೀಯ ಸಾಧನಗಳ GST ಅನ್ನು ತೆಗೆದುಹಾಕಬೇಕು.,ಡೇಟಾ ಗೌಪ್ಯತೆಯನ್ನು ರಕ್ಷಿಸಬೇಕು. ಅದೇ ರೀತಿ ಉದ್ಯೋಗದಾತರು ಮಾರಾಟಕ್ಕೆ ಸಂಬಂಧಿಸಿದ ಕಿರುಕುಳ ನಿಲ್ಲಿಸಬೇಕು,.ಟ್ರ್ಯಾಕಿಂಗ್ ಮತ್ತು ಕಣ್ಗಾವಲು ಮೂಲಕ ಗೌಪ್ಯತೆಗೆ ಇರುವ ಕ್ರಮ ತೆಗೆಯಬೇಕು,ಕೆಲಸದ ಸ್ಥಳಗಳಿಗೆ ಅಡೆತಡೆಯಿಲ್ಲದ ಪ್ರವೇಶವನ್ನು ಖಚಿತಪಡಿಸಿಕೊಳ್ಳಬೇಕು, ಎಂಬ ವಿಷಯಗಳನ್ನು ಮನವಿಯಲ್ಲಿ ತಿಳಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮನವಿ ಸ್ವೀಕರಿಸಿದರು. ಈ ಸಂದಭ೯ದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಕಾಯ೯ದಶಿ೯ ಪ್ರಸನ್ನ ಕಾರಂತ್, ಅಶೋಕ ಡಿ'ಸೋಜ, ಅನಂತ್ ಹೊಳ್ಳ, ಅಶೋಕ್ ಶೆಟ್ಟಿ ಮತ್ತು ಹೆಚ್ಚಿನ ಸಂಖ್ಯೆಯ ವೈದ್ಯಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾಪು : ಶಂಕರಪುರ ಜಾಸ್ಮಿನ್ ಜೆಸಿಐಯ 2024ನೇ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ

Thumbnail
Posted On: 21 Dec 2023, 08:07 AM

ಕಾಪು : ಅಂತರರಾಷ್ಟ್ರೀಯ ಸಂಸ್ಥೆಯಾದ ಜೆಸಿಐ ಇದರ ಘಟಕವಾದ ಶಂಕರಪುರ ಜಾಸ್ಮಿನ್ ಜೆಸಿಐಯ 2024 ನೇ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿಯವರು ಆಯ್ಕೆಯಾಗಿದ್ದಾರೆ. ಈ