Updated News From Kaup

ಮುಲ್ಕಿ : ಶಿವಾಯ ಫೌಂಡೇಶನ್ ಮುಂಬಯಿ ವತಿಯಿಂದ ಕುಟುಂಬವೊಂದಕ್ಕೆ ದೀಪಾವಳಿಗೆ ಹೊಸ ಬಟ್ಟೆ, ದಿನಸಿ ಹಸ್ತಾಂತರ

Posted On: 11-11-2023 09:49PM

ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬಯಿ ವತಿಯಿಂದ ಕಾರ್ನಾಡು ಅಮೃತಾಮಯಿ ನಗರ ನಿವಾಸಿ ಗೀತಾ ಅವರ ಮನೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಯಿತು.

ಕಾಪು : ಗ್ರಾಹಕರ ಸೇವೆಗಾಗಿ ಹೋಟೆಲ್ ಮಯೂರ - ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಇನ್ನಿತರ ಖಾದ್ಯಗಳು

Posted On: 11-11-2023 04:02PM

ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಹಾಗೂ ಇನ್ನಿತರ ಖಾದ್ಯಗಳನ್ನು ಉಣ ಬಡಿಸುತ್ತಿದೆ ಕಾಪುವಿನ ಹೋಟೆಲ್ ಮಯೂರ.

ಕಾಪು : ಪಡುಬಿದ್ರಿ - ಕನ್ನಂಗಾರ್ ಬೈಪಾಸ್ ರಸ್ತೆ ಶೀಘ್ರ ಕಾಮಗಾರಿಗೆ ಹೋರಾಟ ಸಮಿತಿ ಆಗ್ರಹ

Posted On: 11-11-2023 12:37PM

ಕಾಪು : ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಸುಮಾರು 350 ಮೀಟರ್ ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಭರವಸೆ ನೀಡಿ 6 ವರ್ಷ ಸಂದರೂ ಈವರೆಗೆ ಸರ್ವಿಸ್ ರಸ್ತೆ ನಿರ್ಮಾಣಗೊಂಡಿಲ್ಲ. ಈ ಕಾರಣದಿಂದಾಗಿ ಈ ಭಾಗದಲ್ಲಿ 54 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 8 ಮಂದಿ ಯುವಜನತೆ ಪ್ರಾಣವನ್ನು ಕಳೆದುಕೊಂಡಿರುತ್ತಾರೆ. ಪಡುಬಿದ್ರಿ ಹಾಗೂ ಹೆಜಮಾಡಿಯಲ್ಲಿ ಸುಮಾರು ನಾಲ್ಕು ನೂರು ಅಟೋ-ರಿಕ್ಷಾಗಳಿದ್ದು, ಸಾರ್ವಜನಿಕರು ದ್ವಿಚಕ್ರ ವಾಹನ ಹಾಗೂ ಕಾರು, ಬಸ್ಸುಗಳಲ್ಲಿ ಸಂಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ರಾಣವನ್ನು ಒತ್ತೆ ಇಟ್ಟು ಭಯದಿಂದಲೇ ಇಲ್ಲಿ ಸಂಚರಿಸಬೇಕಾಗಿದೆ ಎಂದು ಪಡುಬಿದ್ರಿ, ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ಅಧ್ಯಕ್ಷ ಪೌವ್ಲ್ ರೊಲ್ಪಿ ಡಿ ಕೋಸ್ತ ಹೇಳಿದರು. ಅವರು ಪಡುಬಿದ್ರಿ - ಹೆಜಮಾಡಿ ಕನ್ನಂಗಾರ್ ಬೈಪಾಸ್‌ ಬಳಿ ಸರ್ವಿಸ್ ರಸ್ತೆ ನಿರ್ಮಾಣದ ಕುರಿತಂತೆ ಶನಿವಾರ ಕಾಪು ಪತ್ರಿಕಾ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರೂಪಶ್ರೀ ಕುಲಾಲ್ ಕಾರು ಅಪಘಾತ ಪ್ರಕರಣ : ಕಾಪು ಕುಲಾಲ ಯುವ ವೇದಿಕೆ ಸೂಕ್ತ ತನಿಖೆಗೆ ಆಗ್ರಹ

Posted On: 11-11-2023 10:07AM

ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.

ಕಾಪು : ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಆಯ್ಕೆ

Posted On: 10-11-2023 06:20PM

ಕಾಪು : ಪತ್ರಿಕೋದ್ಯಮ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕಾಪುವಿನ ಸಮಾಜ ಸೇವಕ ದ್ವಾದಶಿ ಪಬ್ಲಿಸಿಟಿಯ ಮಾಲಕರಾದ ದಿವಾಕರ ಬಿ ಶೆಟ್ಟಿ ಇವರು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ಕೇರಳ ಇದರ ಗಡಿನಾಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಪತ್ರಿಕೋದ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಕಾಪು ತಾಲೂಕು ಪರಿಸರದಲ್ಲಿ ಸಮಾಜ ಸೇವಕರಾಗಿ ಜನಸಂಪರ್ಕ ಜನಸೇವಾ ವೇದಿಕೆ ಮೂಲಕ ಮದ್ಯವರ್ಜನ ಶಿಬಿರ, ನಾಯಿಗಳಿಗೆ ಉಚಿತ ರೇಬಿಸ್ ಲಿಸಿಕಾ ಶಿಬಿರ, ಆರೋಗ್ಯ ಶಿಬಿರ, 1000 ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸುಮಾರು 20 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಏರ್ಪಡಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುತ್ತಾ ಬಂದಿದ್ದಾರೆ ಅಲ್ಲದೆ ಸರಕಾರದಿಂದ ಸಿಗುವ ವೃದ್ಯಾಪ್ಯ ವೇತನ, ವಿಧವೆ ವೇತನ, ಅಂಗವಿಕಲರ ವೇತನ, ಸುಮಾರು 500ಕ್ಕೂ ಮಿಕ್ಕಿ ಫಲಾನುಭವಿಗಳಿಗೆ ದೊರಕಿಸಿ ಕೊಟ್ಟಿರುತ್ತಾರೆ ವಿವಿಧ ಸಂಘ ಸಂಸ್ಥೆಗಳಿಂದ ಬಡವರಿಗೆ ಮನೆ ಕಟ್ಟಿಸಿ ಕೊಟ್ಟ ಆಶ್ರಯದಾತರಾಗಿದ್ದಾರೆ.

ಉಡುಪಿ : ಸುಳ್ಳಿಗೆ ಬೆಂಬಲವಾಗಿ ನಿಲ್ಲುವ ಸಂಘಟನೆ ನ್ಯಾಯದ ಘೋರಿ ಕಟ್ಟಲು ಹೊರಟಿದೆಯಾ ?

Posted On: 09-11-2023 10:48PM

ಉಡುಪಿ : ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯುರ್ವೇದ ವೈದ್ಯರುಗಳ ಸಂಘಟನೆ ಎಂಬ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ತನ್ನ ವೈದ್ಯಕೀಯ ವೃತ್ತಿಗೆ ಪತ್ರಕರ್ತ ಓರ್ವನಿಂದ ತೊಂದರೆಯಾಗುತ್ತಿದೆ ಎಂದು ಹೇಳಿ ತುಳುನಾಡ ರಕ್ಷಣಾ ವೇದಿಕೆ ಎಂಬ ಸಂಘಟನೆಗೆ ದೂರು ಸಲ್ಲಿಸಿದ್ದಾರೆ ಆಯುರ್ವೇದ ವೈದ್ಯರುಗಳೆಂಬ ವ್ಯಕ್ತಿಗಳ ಬೆಂಬಲಕ್ಕೆ ನಿಂತು ಆಯುರ್ವೇದ ವೈದ್ಯರ ಪರವಾಗಿ ಉಡುಪಿ ಜಿಲ್ಲಾ ಎಸ್.ಪಿಯವರಿಗೆ ಮನವಿ ನೀಡಿದ್ದಾರೆ ಎಂದು ಅದೇ ಸಂಘಟನೆಯ ಹೆಸರನ್ನು ಹೋಲುವ ವೆಬ್ ಸೈಟ್ ನಲ್ಲಿ ವರದಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ, ಅಸಲಿಗೆ ಆಯುರ್ವೇದ ವೈದ್ಯರುಗಳು ಎನ್ನುವರಿಗೆ ಅನ್ಯಾಯ ಆಗಿದೆ, ಬೆದರಿಕೆ ಇದೆ ಎಂದಾದರೆ ಕಾನೂನಿನ ಸಾಮಾನ್ಯ ಅರಿವು ಇದ್ದವರು ಕೂಡ ನೇರವಾಗಿ ಸಮೀಪದ ಪೊಲೀಸ್ ಠಾಣೆಯಲ್ಲಿ, ದೂರನ್ನು ಸಲ್ಲಿಸುತ್ತಾರೆ. ಈ ಪ್ರಕರಣದಲ್ಲಿ ಆಯುರ್ವೇದ ವೈದ್ಯರು ಎಂದು ಹೇಳುವವರು ಕನಿಷ್ಠ ಪೊಲೀಸರಿಗೆ ದೂರು ನೀಡದೆ ಸಂಘಟನೆ ಒಂದಕ್ಕೆ ದೂರು ನೀಡಿರುವುದು ವಿಪರ್ಯಾಸ ಅಲ್ಲದೆ, ಅಹಿತಕರ ಬೆಳವಣಿಗೆ ಆಗಿದೆ.

ಉಡುಪಿ : ಕೊಳಲಗಿರಿ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

Posted On: 08-11-2023 05:58PM

ಉಡುಪಿ : ಜಿಲ್ಲೆಯ ಪ್ರಮುಖ ಸೇವಾ ಸಂಸ್ಥೆಯಾದ ಹೋಮ್ ಡಾಕ್ಟರ್ ಫೌಂಡೇಶನ್ ಇದರ ವತಿಯಿಂದ ವಿಶಿಷ್ಟ ರೀತಿಯಲ್ಲಿ ಸಾಮೂಹಿಕ ದೀಪ ಬೆಳಗಿಸುವುದರೊಂದಿಗೆ ದೀಪಾವಳಿ ಹಬ್ಬವನ್ನು ನವೆಂಬರ್ 7 ರಂದು ಆಚರಿಸಲಾಯಿತು. ಕೊಳಲಗಿರಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಮಾಜ ಸೇವಕರಾದ ಗೀತಾ ಶೆಟ್ಟಿ, ರಾಜೇಶ್ ರೈ, ಸಚ್ಚಿದಾನಂದ ಹೆಗ್ಡೆ, ಉದ್ಯಮಿಗಳಾದ ಯದುನಾಥ್, ಸದಾನಂದ ಶೆಟ್ಟಿ ಇವರು ಭಾಗವಹಿಸಿ ಶುಭ ಹಾರೈಸಿದರು.

ಕುತ್ಯಾರು ಯುವಕ ಮಂಡಲಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Posted On: 08-11-2023 05:49PM

ಕಾಪು : ಕುತ್ಯಾರು ಯುವಕ ಮಂಡಲ ( ರಿ.) ಕುತ್ಯಾರು 1963 ರಲ್ಲಿ ಸ್ಥಾಪನೆ ಗೊಂಡು 60 ವರ್ಷಗಳಿಂದ ಸ್ಥಳೀಯವಾಗಿ ಶೈಕ್ಷಣಿಕ ಕ್ಷೇತ್ರ, ಕ್ರೀಡಾ ಕ್ಷೇತ್ರ, ಕೃಷಿ ಕ್ಷೇತ್ರ, ಕಲಾ ಕ್ಷೇತ್ರ, ಉದ್ಯೋಗ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬ, ಪರಿಸರ ಸಂರಕ್ಷಣೆ, ರಕ್ತದಾನ ಇನ್ನಿತರ ಸಮಾಜ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತದೆ.

ಪಡುಬಿದ್ರಿ ಆರೋಗ್ಯ ಕೇಂದ್ರ : ಆರೋಗ್ಯ ರಕ್ಷಾ ಸಮಿತಿ ಸಭೆ

Posted On: 08-11-2023 05:45PM

ಪಡುಬಿದ್ರಿ : ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ಜರಗಿತು.

ನವೆಂಬರ್ 9 : ಕಟಪಾಡಿಯಲ್ಲಿ ಆಯುಷ್ ಆರೋಗ್ಯ ಶಿಬಿರ

Posted On: 08-11-2023 11:58AM

ಕಟಪಾಡಿ : ಆಯುಷ್‌ ಇಲಾಖೆ, ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಪತಂಜಲಿ ಯೋಗ ಸಮಿತಿ ಉಡುಪಿ ಕಟಪಾಡಿ ಕಕ್ಷೆ, ಕಟಪಾಡಿ ಗ್ರಾಮ ಪಂಚಾಯತ್, ಎಸ್.ವಿ.ಎಸ್. ಹಳೆವಿದ್ಯಾರ್ಥಿ ಸಂಘ ಕಟಪಾಡಿ, ಮಹಿಳಾ ಮಂಡಲ ಕಟಪಾಡಿ, ಕೋಟೆ ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಕಟಪಾಡಿ, ಸೃಷ್ಠಿ ಫೌಂಡೇಶನ್ ಕಟಪಾಡಿ, ಎಸ್.ವಿ.ಎಸ್.ವಿದ್ಯಾವರ್ಧಕ ಸಂಘ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಆಯುರ್ವೇದ ಆಸ್ಪತ್ರೆ ಉಡುಪಿ ಇದರ ರಾಷ್ಟ್ರೀಯ ಅಯುಷ್‌ ಅಭಿಯಾನದ ಯೋಜನೆಯಡಿ ನವೆಂಬರ್ 9ರಂದು ಬೆಳಗ್ಗೆ 9.30ರಿಂದ 12.30ರ ವರೆಗೆ ಕಟಪಾಡಿ ಮಹಿಳಾ ಮಂಡಲ ಸಭಾ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರ ನಡೆಯಲಿದೆ.