Updated News From Kaup

ಪಲಿಮಾರು : ನಿರಂತರ ಪರಿಶ್ರಮ ಮಾತ್ರ ಯಶಸ್ಸನ್ನು ದೊರಕಿಸಿಕೊಡಬಲ್ಲುದು - ಸುಧಾಕರ್ ಶೆಣೈ

Posted On: 07-11-2023 06:23PM

ಪಲಿಮಾರು : ಹಿರಿಯರು ಕಟ್ಟಿ ಬೆಳೆಸಿದ ಸುಂದರ ಸಂಸ್ಥೆ ಪಲಿಮಾರಿನ ಸರಕಾರಿ ವಿದ್ಯಾ ಸಂಸ್ಥೆ. ಎಲ್ಲಾ ರೀತಿಯ ಸೌಕರ್ಯಗಳಿರುವ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು, ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಈ ವಿದ್ಯಾಸಂಸ್ಥೆಗೆ ಸೇರಿಸಲು ಮುಂದೆ ಬರಬೇಕು ಎಂಬುದಾಗಿ ಸರಕಾರಿ ಪ್ರೌಢಶಾಲೆಯ ಪಲಿಮಾರು ಇಲ್ಲಿಯ ಕನ್ನಡ ಶಿಕ್ಷಕರಾದ ಸುಧಾಕರ್ ಶೆಣೈ ಹೇಳಿದರು. ಅವರು ನವೆಂಬರ್ 7ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ನಡೆದ ಪೋಷಕರ ಮತ್ತು ವಿದ್ಯಾರ್ಥಿಗಳ ಸಭೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಅವರಿಗಿಂತ ನಿಮ್ಮ ಜೀವನ ಮಟ್ಟ ಒಳ್ಳೆಯದಾಗಬೇಕು ಎನ್ನುವುದು ನಿಮ್ಮ ಪೋಷಕರ ಅಭಿಲಾಷೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡಿ, ಜೀವನದಲ್ಲಿ ಯಶಸ್ವಿಗಳಾಗಬೇಕು. ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ. ನಿರಂತರ ಪರಿಶ್ರಮ ಮಾತ್ರ ಯಶಸ್ಸನ್ನು ದೊರಕಿಸಿಕೊಡಬಲ್ಲುದು ಎಂಬುದಾಗಿ ಅವರು ತಿಳಿಸಿದರು.

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮದ ಮಹಾಸಭೆ ; ಮಹಿಳಾ ಬಳಗದ ಪದಗ್ರಹಣ

Posted On: 06-11-2023 09:25PM

ಶಿರ್ವ : ಇಲ್ಲಿನ ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಇದರ ಮಹಾಸಭೆ ಮತ್ತು ಮಹಿಳಾ ಬಳಗದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಪು ಶ್ರೀ ಕಾಳಿಕಾ ಭಜನಾ ಮಂಡಳಿಯ ಅಧ್ಯಕ್ಷರಾದ ರೇಖಾ ಶ್ರೀಕಾಂತ್ ಆಚಾರ್ಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆ ಮುಂದುವರಿಸಿಕೊಂಡು ಹೋಗುವಲ್ಲಿ ನಮ್ಮ ಪಾತ್ರ ಗಣನೀಯವಾಗಿದೆ ಎಂದರು.

ಶಿರ್ವ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

Posted On: 06-11-2023 09:15PM

ಶಿರ್ವ : ವಿಶ್ವಹಿಂದು ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ವಿಷ್ಣುಮೂರ್ತಿ ಘಟಕದ ಆಶ್ರಯದಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನಾ ಸಮಾರಂಭ ಶಿರ್ವ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಕಾಪು : ಇನ್ನಂಜೆ ಬಿಲ್ಲವ ಸಂಘ - ಅಧ್ಯಕ್ಷರಾಗಿ ಜಗದೀಶ್ ಅಮೀನ್, ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಆಯ್ಕೆ

Posted On: 06-11-2023 06:30PM

ಕಾಪು : ಇನ್ನಂಜೆ ಬಿಲ್ಲವ ಸಂಘದ ಮಹಾಸಭೆ ನವೆಂಬರ್ 5 ರಂದು ಜರಗಿತು.

ಉಚ್ಚಿಲ : ಯುವವಾಹಿನಿ ಪಡುಬಿದ್ರಿ ಘಟಕ - ಸರಸ್ವತಿ ಮಂದಿರ ಶಾಲೆಯಲ್ಲಿ ಮಕ್ಕಳ ಹಬ್ಬ

Posted On: 05-11-2023 07:45PM

ಉಚ್ಚಿಲ : ಶಾಲಾ ಹಂತದಲ್ಲಿ ಪಠ್ಯದ ಜೊತೆಗೆ ಪಠ್ಯ ಪೂರಕ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಪೂರಕವಾಗಿದೆ. ಜೀವನದಲ್ಲಿ ಮಾಧ್ಯಮ ಮುಖ್ಯವಾಗದು. ಕನ್ನಡ ಮಾಧ್ಯಮದಲ್ಲಿಯೂ ಕಲಿತವರು ಸಾಧನೆಯ ಹಂತ ತಲುಪಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಬರತ್ತಿರುವ ಪಡುಬಿದ್ರಿ ಯುವವಾಹಿನಿ ಘಟಕದ ಕಾರ್ಯ ಶ್ಲಾಘನೀಯ ಎಂದು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಹೆಜಮಾಡಿ ಹೇಳಿದರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ರವಿವಾರ ಜರಗಿದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಹೆಜಮಾಡಿ : ಯುನೈಟೆಡ್ ಕನ್ನಂಗಾರ್ ಫುಟ್ಬಾಲ್ ಕ್ಲಬ್ - ಸಮಾಜ ಸೇವಕ ಫಾರೂಕ್ ಚಂದ್ರನಗರಗೆ ಸನ್ಮಾನ

Posted On: 05-11-2023 05:11PM

ಹೆಜಮಾಡಿ : ಇಲ್ಲಿನ ರಾಜೀವ ಗಾಂಧಿ ಕ್ರಿಡಾಂಗಣದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್ ಕ್ರೀಡಾ ವೇದಿಕೆಯಲ್ಲಿ ಯುನೈಟೆಡ್ ಕನ್ನಂಗಾರ್ ಫುಟ್ಬಾಲ್ ಕ್ಲಬ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಕ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು.

ಉದ್ಯಾವರ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನ

Posted On: 04-11-2023 12:40PM

ಉದ್ಯಾವರ : ಗುರ್ಮೆ ಫೌಂಡೇಶನ್, ಗುರ್ಮೆ ಕಳತ್ತೂರು, ಬಿಜೆಪಿ ಮಹಾಶಕ್ತಿ ಕೇಂದ್ರ, ಉದ್ಯಾವರ, ಶ್ರೀನಿವಾಸ ಆಸ್ಪತ್ರೆ ಮುಕ್ಕಾ, ಸುರತ್ಕಲ್, ಮಂಗಳೂರು ಇವರ ಆಶ್ರಯದಲ್ಲಿ ಶನಿವಾರ ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಆಯೋಜಿಸಲಾದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಬಂಟಕಲ್ಲು : ೫ನೇ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Posted On: 04-11-2023 12:26PM

ಬಂಟಕಲ್ಲು : ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೫ನೇ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮ್ಮೇಳನಾಧ್ಯಕ್ಷರಾದ ಕೆ ಎಸ್ ಶ್ರೀಧರ ಮೂರ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಜೊತೆಗೂಡಿ ಉದ್ಘಾಟಿಸಿದರು.

ಪಡುಬಿದ್ರಿ : ಟ್ಯಾಂಕರ್ ಹರಿದು ಯುವಕ ಸಾವು

Posted On: 03-11-2023 08:46PM

ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ.

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ‌ ಕರಾವಳಿ ಸ್ಟಾರ್ಸ್ ನಡಿಪಟ್ಣ ವತಿಯಿಂದ ಧ್ವಜಾರೋಹಣ, ಸ್ವಚ್ಛತಾ ಕಾರ್ಯಕ್ರಮ

Posted On: 01-11-2023 06:12PM

ಪಡುಬಿದ್ರಿ‌ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರಾವಳಿ ಸ್ಟಾರ್ಸ್ ನಡಿಪಟ್ಣ ಪಡುಬಿದ್ರಿ ಸಂಸ್ಥೆಯ ವತಿಯಿಂದ ಬುಧವಾರ ಧ್ವಜಾರೋಹಣ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.