Updated News From Kaup
ಉಡುಪಿ : ಬನ್ನಂಜೆ ಬಾಬು ಅಮೀನ್ 80 - ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ
Posted On: 17 Dec 2023, 11:05 AM
ಉಡುಪಿ : ಜಾನಪದ ಸಾಹಿತ್ಯ ಲೋಕದಲ್ಲಿ 21 ಕೃತಿಗಳನ್ನು ನೀಡಿದ ಬನ್ನಂಜೆ ಬಾಬು ಅಮೀನ್ ರವರಿಂದ ಮತ್ತಷ್ಟು ಕೃತಿಗಳು ಮೂಡಿ ಬರಲಿ. ಅವರ ಸಾರ್ವಕಾಲಿಕ ಚಿಂತನೆಯ ಕೃತಿಗಳು ನಮಗೆಲ್ಲರಿಗೂ ಆದರ್ಶ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ.ಜಿ. ಶಂಕರ್ ಹೇಳಿದರು. ಅವರು ರವಿವಾರ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಜರಗಿದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಯನ್ನು ತುಳಸಿ ಕಟ್ಟೆಯ ತುಳಸಿ ಗಿಡಕ್ಕೆ ತೆನೆ ಕಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬನ್ನಂಜೆಯವರ 'ತುಳುನಾಡ ಸುತ್ತಮುತ್ತ' ಹಾಗೂ 'ಗರೋಡಿ ಒಂದು ಚಿಂತನೆ' ಎಂಬ ಎರಡು ಪುಸ್ತಕಗಳ ಅನಾವರಣವನ್ನು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ರೋಹಿಣಿ ಬಿಡುಗಡೆಗೊಳಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವರಿಂದ ಪಾಡ್ದನ ನೆರವೇರಿತು. ಸಭಾಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ, ವಿವಿಧ ಗೋಷ್ಠಿ, ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಮುಂದುವರಿಯಿತು. ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್, ಸಾಹಿತಿ ಬಿ.ಎಂ.ರೋಹಿಣಿ, ಅಕ್ಷಯ ಮಾಸ ಪತ್ರಿಕೆ ಸಂಪಾದಕ ಹರೀಶ್ ಹೆಜಮಾಡಿ, ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಘುನಾಥ ಮಾಬಿಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಭಾಸ್ಕರ್ ಸ್ವಾಗತಿಸಿದರು.
ಡಿಸೆಂಬರ್ 17 : ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ 80 ; ಅಭಿನಂದನೆ ಕಾರ್ಯಕ್ರಮ - 'ಸಿರಿ ತುಪ್ಪೆ'
Posted On: 16 Dec 2023, 06:28 PM
ಉಡುಪಿ : ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಡಿಸೆಂಬರ್ 17 ರಂದು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 8.45ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವ ಅವರಿಂದ ತುಳು ಪಾಡ್ಡನ ನಡೆಯಲಿದೆ. ಬೆಳಗ್ಗೆ 11.45 ಕ್ಕೆ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪ್ರಬುದ್ಧ ಕಲಾವಿದರಿಂದ 'ಸುದರ್ಶನ ವಿಜಯ' ಯಕ್ಷಗಾನ ಪ್ರದರ್ಶನ ನಡೆಯಲಿದೆ. ಬನ್ನಂಜೆಯವರ ಜೀವನಗಾಥೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಮದ್ಯಾಹ್ನ 2.45 ಕ್ಕೆ ಪ್ರದರ್ಶನಗೊಳ್ಳಲಿದೆ. ಈ ಸಂದರ್ಭ ಅಳಿವಿನಂಚಿನಲ್ಲಿರುವ ತುಳುನಾಡಿನ ಪರಿಕರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಜನಪದದ ಇತರ ಪ್ರಕಾರಗಳ ಪ್ರಾತಕ್ಷಿತೆಯೂ ನಡೆಯಲಿದ್ದು, ಜನಪದ ನೃತ್ಯ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ.ಜಿ. ಶಂಕರ್ ಉದ್ಘಾಟಿಸಲಿದ್ದು, ಬನ್ನಂಜೆಯವರ 'ತುಳುನಾಡ ಸುತ್ತಮುತ್ತ' ಹಾಗೂ 'ಗರೋಡಿ ಒಂದು ಚಿಂತನೆ' ಎಂಬ ಎರಡು ಪುಸ್ತಕಗಳ ಅನಾವರಣವನ್ನು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ಮಾಡಲಿದ್ದಾರೆ. ಅಕ್ಷಯ ಪತ್ರಿಕೆ ಸಂಪಾದಕ ಹರೀಶ್ ಹೆಜ್ಮಾಡಿ ಉಪಸ್ಥಿತರಿರುವರು. ಬೆಳಗ್ಗೆ 10.30ಕ್ಕೆ ನಡೆಯುವ ವಿಚಾರಗೋಷ್ಠಿಯಲ್ಲಿ ಬನ್ನಂಜೆವರ ಸಮಗ್ರ ಸಾಹಿತ್ಯ ಹಾಗೂ ಜನಪದ ಆಚರಣೆ ಸಂಕಥನಗಳ ಬಗ್ಗೆ ವಿದ್ವಾಂಸರಾದ ಡಾ.ದುಗ್ಗಪ್ಪ ಕಜೆಕಾರ್, ಡಾ.ಯೋಗಿಶ್ ಕೈರೋಡಿ, ಡಾ.ಭರತ್ ಕುಮಾರ್ ಪೊಲಿಪು ವಿಚಾರ ಮಂಡನೆ ಮಾಡಲಿದ್ದಾರೆ. ಡಾ. ಮಹಾಲಿಂಗು ಕಲ್ಕುಂದ ಹಾಗೂ ಡಾ.ಗಣನಾಥ ಎಕ್ಕಾರ್ ಉಪಸ್ಥಿತರಿರುವರು. ಮಧ್ಯಾಹ್ನ 1.30 ಕ್ಕೆ ಮುದ್ದು ಮೂಡುಬೆಳ್ಳೆ ಅಧ್ಯಕ್ಷತೆಯಲ್ಲಿ ನಡೆಯುವ ಆರಾಧನಗೋಷ್ಠಿಯಲ್ಲಿ ಚಿಂತಕರಾದ ಪರಮಾನಂದ ಸಾಲ್ಯಾನ್ ಮತ್ತು ಶ್ರೀಕಾಂತ ಶೆಟ್ಟಿ ಕಾರ್ಕಳ ವಿಚಾರ ಮಂಡನೆ ಮಾಡಲಿದ್ದು, ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ಉಪಸ್ಥಿತರಿರುವರು. ಸಂಜೆ 3 ಗಂಟೆಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ಚಿನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿನಂದನಾ ನುಡಿಯನ್ನಾಡಲಿದ್ದಾರೆ. ಅಭಿನಂದನಾ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಕಾರ್ಯಾಧ್ಯಕ್ಷ ರಘುನಾಥ ಮಾಬಿಯಾನ್ ಜಂಟಿಯಾಗಿ ಅಭಿನಂದನೆ ಮಾಡಲಿದ್ದಾರೆ. ಕುದ್ರೋಳಿ ದೇಗುಲದ ಕೋಶಾಧಿಕಾರಿ ಪದ್ಮರಾಜ್ ಆರ್. 'ಸಿರಿ ಕುರಲ್' ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಲಿದ್ದು, ಮೇನಾಳಗುತ್ತು ಕಿಶನ್ ಜೆ.ಶೆಟ್ಟಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಜಾನಪದ ವಿದ್ವಾಂಸ ಡಾ. ವೈ.ಎನ್.ಶೆಟ್ಟಿ ಉಪಸ್ಥಿತರಿರುವರು.
ಡಿಸೆಂಬರ್ 24 : ಕಿನಾರ ವರ್ಣೋತ್ಸವ - ಕಾಪು ತಾಲೂಕಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ
Posted On: 16 Dec 2023, 05:54 PM
ಎರ್ಮಾಳು : ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕಾಪು ತಾಲೂಕು ವ್ಯಾಪ್ತಿಯ ಮಕ್ಕಳಿಗೆ ಕಿನಾರ ವರ್ಣೋತ್ಸವ ಚಿತ್ರಕಲಾ ಸ್ಪರ್ಧೆ 24 ಡಿಸೆಂಬರ್ 2023 ನೇ ಅದಿತ್ಯವಾರ ಬೆಳಿಗ್ಗೆ ಗಂಟೆ 9.30ಕ್ಕೆ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. 3 ರಿಂದ 5 ವರ್ಷದ ಒಳಗಿನ ಮಕ್ಕಳಿಗೆ ರಾಷ್ಟ್ರ ಪಕ್ಷಿಯ ಚಿತ್ರಕ್ಕೆ ಬಣ್ಣ ಹಚ್ಚುವುದು, 1 ರಿಂದ 4 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಾಡು ಪ್ರಾಣಿ, 5 ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ನಮ್ಮ ಸುಂದರ ಗ್ರಾಮ, 8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದಲ್ಲಿ ಭಾರತ ವಿಷಯವಾಗಿದೆ. ಈ ಮೇಲಿನ ವಿಷಯಗಳಲ್ಲಿ ಸ್ಪರ್ಧೆಗಳು ನಡೆಯಲ್ಲಿದ್ದು ಎಲ್ಲಾ ವಿಭಾಗದಲ್ಲಿ ಪ್ರತ್ಯೇಕ ನಗದು ಬಹುಮಾನ ಪ್ರಥಮ ರೂ. 3,000/- ದ್ವಿತೀಯ ರೂ 2,000/- ತೃತೀಯ ರೂ.1,000/-ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ನೀಡಿ ಗೌರವಿಸಲಾಗುವುದು. ಚಿತ್ರ ಬಿಡಿಸಲು 1.30 ಗಂಟೆಗಳ ಸಮಯವಕಾಶವಿದ್ದು, ಬೇಕಾದ ಪರಿಕರಗಳನ್ನು ವಿದ್ಯಾರ್ಥಿಗಳೇ ತರುವುದು. ಡ್ರಾಯಿಂಗ್ ಶೀಟನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧೆಗೆ ಹೆಸರು ನೋಂದಾಯಿಸಲು 2023 ನೇ ಡಿಸೆಂಬರ್ 20 ಕೊನೆಯ ದಿನಾಂಕವಾಗಿದ್ದು, ಮಕ್ಕಳ ಮಾಹಿತಿಯನ್ನು 9632033191, 8105866637 ಗೆ ವಾಟ್ಸ್ ಆಪ್ ( Watsapp ) ಮುಖಾಂತರ ಕಳುಹಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎರ್ಮಾಳು : ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ರಥೋತ್ಸವ ಪ್ರಯುಕ್ತ ಧ್ವಜಾರೋಹಣ ಸಂಪನ್ನ
Posted On: 16 Dec 2023, 05:29 PM
ಎರ್ಮಾಳು : ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಗ್ಗೆ ಧ್ವಜಾರೋಹಣ ಸಂಪನ್ನಗೊಂಡಿತು. ದೇವಳದಲ್ಲಿ ಬಯನ ಬಲಿ, ರಂಗ ಪೂಜೆ, ಆಯನೋತ್ಸವ ನೆರವೇರಿತು. ದೇವಳದ ತಂತ್ರಿವರ್ಯರಾದ ರಾಧಾಕೃಷ್ಣ ತಂತ್ರಿ, ಪವಿತ್ರ ಪಾಣಿ ಪೂರ್ಣೇಶ್ ರಾವ್, ಅರ್ಚಕರಾದ ವಿಷ್ಣು ಮೂರ್ತಿ ಉಪಾಧ್ಯಾಯ ಹಾಗೂ ಕೃಷ್ಣಮೂರ್ತಿ ಭಟ್ರವರು ಪೂಜಾ ವಿಧಿ ವಿಧಾನ ಪೂರೈಸಿದರು. ಈ ಸಂದರ್ಭ ಅನುವಂಶೀಯ ಮೊಕ್ತೇಸರ ಅಶೋಕ್ ರಾಜ್, ನೈಮಾಡಿ ನಾರಾಯಣ ಶೆಟ್ಟಿ , ಉದಯ ಕೆ. ಶೆಟ್ಟಿ , ಕಿಶೋರ್ ಶೆಟ್ಟಿ , ಅಣ್ಣಾವರ ಕುಟುಂಬಿಕರು, ಪುಚ್ಚೊಟ್ಟು ಬೀಡು ಕುಟುಂಬಿಕರು, ನೈಮಾಡಿ ವಸಂತ ಶೆಟ್ಟಿ, ರೋಹಿತ್ ಹೆಗ್ಡೆ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಸಹಿತ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ಫಾರೂಕ್ ಚಂದ್ರನಗರ ಇವರಿಗೆ ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
Posted On: 16 Dec 2023, 11:23 AM
ಕಾಪು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಯು.ಎ.ಇ ದುಬೈ ಇವರ ವತಿಯಿಂದ ಕಾಪುವಿನ ಸಮಾಜ ಸೇವಕರು ಉದ್ಯಮಿಗಳಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಯನ್ನು ಗುರುತಿಸಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ದುಬೈನ ಉಡ್ಲಮ್ ಪಾರ್ಕ್ ಶಾಲಾ ಸಭಾಂಗಣದಲ್ಲಿ ನಡೆದ 2023-ದುಬೈ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು. ಕರ್ನಾಟಕ ಸರಕಾರದ ವಿಧಾನ ಪರಿಷತ್ ಸಭಾಪತಿಯವರಾದ ಬಸವರಾಜ ಹೊರಟ್ಟಿ ಹಾಗೂ ಕೇಂದ್ರ ರಾಜ್ಯಸಭಾ ಸದಸ್ಯರಾದ ಡಾ. ಎಲ್ ಹನುಮಂತಯ್ಯ, ದುಬೈ ಉದ್ಯಮಿ ಸರ್ವೋತ್ತಮ ಶೆಟ್ಟಿ ಅಬುಧಾಬಿ ಹಾಗೂ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಅಧ್ಯಕ್ಷರಾದ ಇಬ್ರಾಹಿಂ ಖಲೀಲ್, ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಹಾಗೂ ಅನೇಕ ದೇಶ ವಿದೇಶದ ಗಣ್ಯರು ರಾಜಕೀಯ ನೇತಾರರು ಉಪಸ್ಥಿತರಿದ್ದರು.
ಕಾಪು ಲೀಲಾಧರ ಶೆಟ್ಟಿ ಸಾರ್ವಜನಿಕ ಶ್ರದ್ಧಾಂಜಲಿ ಸಂತಾಪ ಸಭೆ : ಪೂರ್ವಭಾವಿ ಸಭೆ
Posted On: 15 Dec 2023, 11:05 PM
ಕಾಪು : ಸಮಾಜರತ್ನ ಕಾಪು ಲೀಲಾಧರ ಶೆಟ್ಟಿಯವರ ಸಾರ್ವಜನಿಕ ಶ್ರದ್ಧಾಂಜಲಿ ಸಂತಾಪ ಸಭೆ ಡಿಸೆಂಬರ್ 18 ರಂದು ನಡೆಸುವ ಬಗ್ಗೆ ಪೂರ್ವಭಾವಿ ಸಭೆಯು ಶುಕ್ರವಾರ ಕಾಪು ಹೊಸ ಮಾರಿಗುಡಿ ದೇವಳದ ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ಕಾಪು ಬಂಟರ ಸಂಘದ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ ಮತ್ತು ಉದ್ಯಮಿ ಮನೋಹರ ಎಸ್. ಶೆಟ್ಟಿಯವರ ಉಪಸ್ಥಿತಿಯಲ್ಲಿ ವಿವಿಧ ಸಮುದಾಯದ ಮುಖಂಡರ ಸಮ್ಮುಖದಲ್ಲಿ ನಡೆಯಿತು. ಡಿಸೆಂಬರ್ 18, ಸೋಮವಾರ ಸಂಜೆ ಗಂಟೆ 3.30ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮುಂಭಾಗ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಂತಾಪ ಸಭೆಯು ಸರ್ವ ಜಾತಿ, ಸರ್ವ ಧರ್ಮಿಯರ ಸಹಕಾರದೊಂದಿಗೆ ನಡೆಯಲಿದೆ ಎಂದು ಬಂಟರ ಸಂಘದ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ತಿಳಿಸಿದರು.
ಕಾಪು : ಬಿರುವೆರ್ ಕಾಪು ಟ್ರೋಫಿ - 2023 ಕ್ರಿಕೆಟ್ ಪಂದ್ಯಾಕೂಟದ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆ
Posted On: 15 Dec 2023, 06:32 PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ (ರಿ.) ಕಾಪು ಇದರ ಆಶ್ರಯದಲ್ಲಿ ಬಿಲ್ಲವ ಸಮಾಜ ಭಾಂದವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಬಿರುವೆರ್ ಕಾಪು ಟ್ರೋಫಿ - 2023 ಕ್ರಿಕೆಟ್ ಪಂದ್ಯಾಕೂಟ ಇದರ ಅಂಗವಾಗಿ ಆಟಗಾರರ (ಬಿಡ್ಡಿಂಗ್) ಹರಾಜು ಪ್ರಕ್ರಿಯೆಯು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇದರ ಶ್ರೀ ನಾರಾಯಣಗುರು ಸಭಾಭಾವನದಲ್ಲಿ ಸಮಾಜ ಸೇವಕಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು. ಬಿರುವೆರ್ ಕಾಪು ಸೇವಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಆರ್ ಕೋಟ್ಯಾನ್ ಕಾಪು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಹನುಮಾನ್ ಕೇಸರಿ ಕಾಪು , ಗೆಳೆಯರ ಬಳಗ ಪಾಂಗಳ ಗುಡ್ಡೆ, ಬಿರುವೆರ್ ಬ್ರದರ್ಸ್ ಹೆಜಮಾಡಿ ,ರೋಯಲ್ ಬಿರುವೆರ್ ಉಡುಪಿ, ಬಿರುವೆರ್ ಅಪೂರ್ವ ಪುತ್ತೂರು, ಪ್ರೇಂಡ್ಸ್ ಬ್ರಹ್ಮಾವರ ಕುಂಜಾಲು, ಆರ್.ಕೆ.ಬ್ರದರ್ಸ್ ಮುದರಂಗಡಿ ,ಸಾಯಿ ಪ್ರೀತಿ ಸ್ಟ್ರೈ ಕರ್ಸ್ ಕಾಪು , ಬಿರುವೆರ್ ಪೊಲಿಪು (ಚಿತ್ರಾಪುರ), ಟೀಮ್ ಗರಡಿ ಜವನೆರ್ ಕಟಪಾಡಿ ಒಟ್ಟು ಹತ್ತು ತಂಡಗಳು ಮತ್ತು ಅದರ ಮಾಲಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸುಮಾರು 150 ಆಟಗಾರರ ಹರಾಜು ನಡೆಯಿತು. ಬಿರುವೆರ್ ಕಾಪು ಟ್ರೋಫಿಯ ಗೌರವಾಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳು ತಂಡಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು, ಚಂದ್ರಶೇಖರ ಪೂಜಾರಿ ಅಧ್ಯಕ್ಷರು ಆರ್ಯ ಈಡಿಗ ಮಹಾಮಂಡಲ ಉಡುಪಿ ಜಿಲ್ಲೆ, ಸೂರ್ಯನಾರಾಯಣ ಅಧ್ಯಕ್ಷರು ಯುವವಾಹಿನಿ ಕಾಪು ಘಟಕ , ಪ್ರೇಮಾ ಮಹಿಳಾ ಪ್ರತಿನಿಧಿ ಬಿಲ್ಲವರ ಸಹಾಯಕ ಸಂಘ ಕಾಪು , ಪ್ರವೀಣ್ ಪೂಜಾರಿ ಕಾಪು, ವಾಸು ಪೂಜಾರಿ ಇನ್ನಂಜೆ ರವಿರಾಜ್ ಶಂಕರಪುರ, ಯಾದವ್ ಪೂಜಾರಿ ಕಾಪು, ಮಾಧವ ಫೂಜಾರಿ ಕಾಪು ,ಅಶ್ವಿನಿ ನವೀನ್ ಕಾಪು, ಯೋಗೀಶ್ ಪೂಜಾರಿ ಕಾಪು, ಸಂಧ್ಯಾ ಬಾಲಕೃಷ್ಣ ಮಡುಂಬು, ಕಾರ್ತಿಕ್ ವಿ ಸುವರ್ಣ, ವರುಣ್ ಬಿ ಕೋಟ್ಯಾನ್ ಮಡುಂಬು , ಸ್ವರಾಜ್ ಬಂಗೇರ ಕಾಪು , ಸುಜನ್ ಎಲ್ ಸುವರ್ಣ ಶಿರ್ವ, ರಾಕೇಶ್ ಕುಂಜೂರು, ದೇವಿ ಪ್ರಸಾದ್ ಶಿರ್ವ, ಅನಿಲ್ ಅಮಿನ್ ಕಾಪು , ವಿಕ್ಕಿ ಮಡುಂಬು , ಸುಧಾಕರ ಸಾಲ್ಯಾನ್ ಕಾಪು ಉಪಸ್ಥಿತರಿದ್ದರು. ಅತಿಥಿ ಸುವರ್ಣ ಪಾಲಮೆ ನಿರೂಪಿಸಿ ವಂದಿಸಿದರು.
ಜನಪದ ಸ್ವಾಭಿಮಾನದ ಅಭಿವ್ಯಕ್ತಿ : ಡಾ| ಗಣೇಶ ಗಂಗೊಳ್ಳಿ
Posted On: 14 Dec 2023, 07:58 PM
ಶಿರ್ವ : ಗ್ರಾಮೀಣ ಜನರು ತಮ್ಮ ಸುಖ, ದು:ಖಗಳ ಸಮ್ಮಿಳಿತ ಬದುಕಿನಲ್ಲಿ ಸ್ವಾಭಿಮಾನದಿಂದ ಜೀವಿಸಿದ ಹಾಗೂ ಸಮಾಜದ ಎಲ್ಲರನ್ನೂ, ಎಲ್ಲವನ್ನೂ ಒಳಗೊಳ್ಳುವ ಮನೋಭಾವದ ಅಭಿವ್ಯಕ್ತಿಯೇ ಜನಪದ ಎಂದು ಖ್ಯಾತ ಗಾಯಕ ಡಾ| ಗಣೇಶ ಗಂಗೊಳ್ಳಿ ಹೇಳಿದರು. ಅವರು ಗುರುವಾರ ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ 'ಜನಪದ: ಪರಿಶುದ್ಧ ಮನಸ್ಸುಗಳ ಭಾವಪದ' ಕಾರ್ಯಕ್ರಮದಲ್ಲಿ ವಿಚಾರ ಮಂಡಿಸಿ, ಜನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಪಕ್ಕವಾದ್ಯದಲ್ಲಿ ಚಂದ್ರ ಬೈಂದೂರು, ಗುರುಪ್ರಸಾದ್ ಹಾವಂಜೆ ಸಹಕರಿಸಿದರು. ಬೆಳ್ಳೆ ಗ್ರಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಅಶೋಕ್ ತಿರ್ಲಪಲ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮಾತನಾಡಿ, ಸರಳ ಹಾಗೂ ನೇರ ಸಂಭಾಷಣೆಯ ಜನಪದರ ರಚನೆಗಳು ಯಾವುದೇ ಕೃತಕ ಇಲ್ಲದೆ ಮನಸ್ಸನ್ನು ಮುಟ್ಟುತ್ತವೆ ಎಂದು ಹೇಳಿದರು. ಉದ್ಯಮಿ ಪ್ರಶಾಂತ್ ಶೆಟ್ಟಿ ಪಡುಬೆಟ್ಟು ಪ್ರಧಾನ ಪ್ರಾಯೋಜಕತ್ವ ವಹಿಸಿದ್ದ ಕಾರ್ಯಕ್ರಮದಲ್ಲಿ, ಆಯೋಜಕರಾದ ಕರ್ನಾಟಕ ಸರಕಾರದ ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬೆಳ್ಳೆ ಗ್ರಾಪಂ ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳೆ ಗ್ರಾಪಂ ಮಾಜಿ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಸದಸ್ಯ ಗುರುರಾಜ ಭಟ್ ಎಡ್ಮೇರು, ಸಾಹಿತಿ ರಿಚ್ಚಾರ್ಡ್ ದಾಂತಿ ಪಾಂಬೂರು, ಕೆನರಾ ಬ್ಯಾಂಕ್ ಮೂಡುಬೆಳ್ಳೆ ಹಿರಿಯ ಪ್ರಬಂಧಕ ಡಾ| ಬೊಮ್ಮಾಯಿ, ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿ ಕೆ. ದೇವದಾಸ್ ಹೆಬ್ಬಾರ್, ಹಿರಿಯ ದೈವಾರಾಧಕ ಸುಧಾಕರ ಪಾಣಾರ, ನಿವೃತ್ತ ಪ್ರಾಚಾರ್ಯ ಅನಂತ ಮೂಡಿತ್ತಾಯ ಶಿರ್ವಾ, ಹಿರಿಯ ಶಿಕ್ಷಕಿ ಸುನೀತಾ ಕಾಮತ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಸಂಧ್ಯಾ ಎಂ. ಶೆಟ್ಟಿ, ಸದಸ್ಯೆ ರಕ್ಷಿತಾ ಉಪಸ್ಥಿತರಿದ್ದರು. ಕ.ಸಾ.ಪ. ಗೌರವ ಕಾರ್ಯದರ್ಶಿ ಅಶ್ವಿನಿ ಲಾರೆನ್ಸ್ ಮೂಡುಬೆಳ್ಳೆ ನಿರೂಪಿಸಿ, ಕಾರ್ಯಕ್ರಮ ಸಂಯೋಜಿಸಿದರು. ಸಂತಾಪ : ಕಾರ್ಯಕ್ರಮದ ಆರಂಭದಲ್ಲಿ ಡಿಸೆಂಬರ್ 12 ರಂದು ನಿಧನ ಹೊಂದಿದ ಕಾಪು ಕರಂದಾಡಿಯ ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಗೆ ಸಂತಾಪ ಸೂಚಿಸಲಾಯಿತು.
ಕಾಪು ಲೀಗಲ್ ಚೇಂಬರ್ಸ್ ಉದ್ಘಾಟನೆ, ಕೋಟಿ ಗೀತಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಚಾಲನೆ
Posted On: 14 Dec 2023, 07:44 PM
ಕಾಪು : ಶ್ರೀ ಕೃಷ್ಣನಿಗೆ ಅತಿಪ್ರಿಯವಾದ ಭಗವದ್ಗೀತೆಯು ಜಾಗತಿಕ ಶಾಂತಿಗೆ ಪೂರಕವಾಗಿದೆ. ಭಗವದ್ಗೀತೆ ಪ್ರತೀಯೊಬ್ಬರಿಗೂ ಮಾರ್ಗದರ್ಶನ ನೀಡುವ ಮಹಾನ್ ಗ್ರಂಥವಾಗಿದ್ದು ಅದರ ಉಪಯುಕ್ತತೆಯನ್ನು ಅರಿತುಕೊಂಡು ತಮ್ಮ ಮುಂದಿನ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯವೆಂದು ಆಚರಿಸಲಾಗುತ್ತದೆ ಎಂದು ಭಾವೀ ಪರ್ಯಾಯ ಪೀಠಾಧಿಪತಿ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಸೋಮವಾರ ಕಾಪು ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿಯ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ಲೀಗಲ್ ಚೇಂಬರ್ಸ್ ಕಾಪು ಸಂಸ್ಥೆಯನ್ನು ಉದ್ಘಾಟಿಸಿ, ಕಾಪು ತಾಲೂಕಿನಲ್ಲಿ ಕೋಟಿ ಗೀತಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಪು ತಾಲೂಕು ಬೆಳೆಯುತ್ತಿದೆ. ಬೆಳೆಯುತ್ತಿರುವ ಪಟ್ಟಣಕ್ಕೆ ನ್ಯಾಯಾಲಯ ಬರಬೇಕಿದೆ. ಕಾಪು ತಾಲೂಕಿನ ಜನತೆ ತಾಲೂಕು ನ್ಯಾಯಾಲಯ ಬರುವ ನಿರೀಕ್ಷೆಯಲ್ಲಿರುವಾಗಲೇ ಲೀಗಲ್ ಚೇಂಬರ್ಸ್ ಸಂಸ್ಥೆ ಉದ್ಘಾಟನೆಗೊಂಡಿರುವುದು ಸ್ವಾಗತಾರ್ಹವಾಗಿದೆ. ಇವರಿಂದ ಜನತೆಗೆ ನ್ಯಾಯ - ಸಹಕಾರ ಎರಡೂ ದೊರಕುವಂತಾಗಲಿ ಎಂದು ಶುಭ ಹಾರೈಸಿದರು. ಕೋಟಿ ಗೀತಾ ಯಜ್ಞ ಲೇಖನದ ದೀಕ್ಷೆ ಸ್ವೀಕರಿಸಿದ ಕಾಪು ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಮಾತನಾಡಿ, ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಜನತೆ ಕಾತರದಿಂದ ಕಾಯುತ್ತಿದ್ದಾರೆ. ಶ್ರೀಗಳ ಪರ್ಯಾಯ ಯೋಜನೆಗಳಿಗೆ ತಾಲೂಕು ಆಡಳಿತ ವತಿಯಿಂದಲೂ ಅವಶ್ಯಕ ಸಹಕಾರ ನೀಡಲಾಗುವುದು ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ ಶುಭಾಶಂಸನೆಗೈದರು. ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್, ಉದ್ಯಮಿ ಹರೀಶ್ ಶೆಟ್ಟಿ ಗುರ್ಮೆ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ., ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಮರ ಶೆಟ್ಟಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ, ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ಕಟ್ಟಡದ ಮಾಲಕ ವಿಶ್ವನಾಥ್ ಶೆಟ್ಟಿ, ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶ ಕಾಪು ದಿವಾಕರ ಶೆಟ್ಟಿ, ಕಳತ್ತೂರು ಗರಡಿ ಅರ್ಚಕ ವಿಶ್ವನಾಥ ಅಮೀನ್ ಕಳತ್ತೂರು, ಸಮಾಜ ಸೇವಕಿ ಗೀತಾಂಜಲಿ ಎಂ. ಸುವರ್ಣ, ಮೋಹನ್ ಬಂಗೇರ ಕಾಪು ಅತಿಥಿಗಳಾಗಿ ಭಾಗವಹಿಸಿದ್ದರು. ಕಾಪು ಲೀಗಲ್ ಚೇಂಬರ್ಸ್ ನ ಪ್ರವರ್ತಕರಾದ ಗಿರೀಶ್ ಎಸ್.ಪಿ. ಸ್ವಾಗತಿಸಿದರು. ಜೇಸಿಐ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಪ್ರಸ್ತಾವನೆಗೈದರು. ದಂಡತೀರ್ಥ ಪ. ಪೂ. ಕಾಲೇಜಿನ ಉಪನ್ಯಾಸಕ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ರಾಕೇಶ್ ವಂದಿಸಿದರು.
ಡಿಸೆಂಬರ್ 16 : ವರ್ತೆಕಲ್ಕುಡ ದೈವಸ್ಥಾನ, ಬಜೆ ತಂಗಾಣ - ಕಾಲಾವಧಿ ಸಿರಿಸಿಂಗಾರದ ಕೋಲ
Posted On: 14 Dec 2023, 07:39 PM
ಉಡುಪಿ : ವರ್ತೆಕಲ್ಕುಡ ದೈವಸ್ಥಾನ, ಬಜೆ ತಂಗಾಣ ಇಲ್ಲಿ ಡಿಸೆಂಬರ್ 16, ಶನಿವಾರ ಕಾಲಾವಧಿ ಸಿರಿಸಿಂಗಾರದ ಕೋಲ ನಡೆಯಲಿದೆ. ಈ ನಿಮಿತ್ತ ರಾತ್ರಿ 7ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಅನ್ನಸಂತರ್ಪಣೆ, ರಾತ್ರಿ 9 ಕ್ಕೆ ಹೂವಿನ ಪೂಜೆ ಜರಗಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಭಿಮಾನಿಗಳು ಆಗಮಿಸಿ, ಶ್ರೀ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಸುಧಾಕರ ಶೆಟ್ಟಿ ಬಜೆ, ತಂಗಾಣ ತಂಗಾಣ ಕುಟುಂಬಸ್ಥರು, ಬಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
