Updated News From Kaup

ಅಕ್ಟೊಬರ್ 21 : ಉಡುಪಿಯ ಬೊಬ್ಬರ್ಯಕಟ್ಟೆಯಲ್ಲಿ ಹೂವಿನ ಪೂಜೆ, ಕಲ್ಕುಡ ದೈವದ ದರ್ಶನ ಸೇವೆ

Posted On: 20-10-2023 02:09PM

ಉಡುಪಿ : ವುಡ್ ಲ್ಯಾಂಡ್ಸ್ ಹೋಟೆಲ್ ಹತ್ತಿರದ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ್ಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನ ಬೊಬ್ಬರ್ಯಕಟ್ಟೆಯಲ್ಲಿ ಅಕ್ಟೋಬರ್ 21, ಶನಿವಾರ ಹೂವಿನ ಪೂಜೆ, ಕಲ್ಕುಡ ದರ್ಶನ ಸೇವೆ ನಡೆಯಲಿದೆ.

ವಿಶ್ವಕರ್ಮ ಯುವ ಮಿಲನ್ ಸಂಘದ ಘಟಕಗಳ ಉದ್ಘಾಟನೆ

Posted On: 20-10-2023 01:52PM

ಉಡುಪಿ : ವಿಶ್ವಕರ್ಮ ಯುವ ಮಿಲನ್(ರಿ.)ಕರ್ನಾಟಕ ರಾಜ್ಯ, ಕೇಂದ್ರ ಕಚೇರಿ ಮಂಗಳೂರು, ಇದರ ರಾಜ್ಯಾಧ್ಯಕ್ಷರಾದ ವಿಕ್ರಮ್ ಐ. ಆಚಾರ್ಯರು ಸಂಘದ ವಿವಿಧ ಘಟಕಗಳನ್ನು ಉದ್ಘಾಟಿಸಿದರು.

ಕಾಪು‌ : ಗಾಲಿ ಕುರ್ಚಿಯ ಮೂಲಕ ಕೇರಳ - ಕೊಲ್ಲೂರು ದೇವಳ ಭೇಟಿ

Posted On: 20-10-2023 01:44PM

ಕಾಪು : ಜೀವನದಲ್ಲಿ ಭಯ,ಭಕ್ತಿ, ನಂಬಿಕೆಗಳು ಮನುಷ್ಯನನ್ನು ರೂಪಿಸಲು ಇರುವ ಮಾರ್ಗಗಳು. ನ್ಯೂನತೆಗಳಿದ್ದರೂ ದೇವರ ಮೇಲಿನ ಭಕ್ತಿ ವ್ಯಕ್ತಿಗೆ ಶಕ್ತಿ ನೀಡುವುದರಲ್ಲಿ ಎರಡು ಮಾತಿಲ್ಲ. ಅಂತೆಯೇ ಇಲ್ಲೋರ್ವ ಅಂಗವಿಕಲತೆ ಇದ್ದರೂ ದೇವರ ಮೇಲಿನ ಭಕ್ತಿಯಿಂದ ಗಾಲಿ ಕುರ್ಚಿಯ ಮೂಲಕ ದೇವಾಲಯ ಭೇಟಿ ನೀಡುತ್ತಿದ್ದಾರೆ.

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಾರ್ವಜನಿಕರ ಮನಸೂರೆಗೊಂಡ ವೀಣಾವಾದನ

Posted On: 20-10-2023 01:33PM

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲದಲ್ಲಿ ಗುರುವಾರ ಸಂಜೆ ನವದುರ್ಗೆಯರ ಸಮ್ಮುಖದಲ್ಲಿ ವೀಣಾವಾದನ ಜರಗಿತು. 9 ಜನ ಪಕ್ಕ ವಾದ್ಯ ಸಹಿತ ಕಿರಿಯರಿಂದ ಹಿರಿಯರಾದಿಯಾಗಿ 151 ವೀಣಾವಾದಕರು ವೀಣಾವಾದನ ನಡೆಸಿಕೊಟ್ಟರು. ಸುಮಾರು ಒಂದು ಗಂಟೆಗಳ ಕಾಲ ನಡೆದ ವೀಣಾವಾದನ ಸಾರ್ವಜನಿಕರ ಮನಸೂರೆಗೊಂಡಿತು.

ಪಡುಕುತ್ಯಾರು : ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ

Posted On: 19-10-2023 04:24PM

ಪಡುಕುತ್ಯಾರು : ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸನ್ ಕಾರ್ಡ್ ಅತಿ ಅಗತ್ಯ, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ ಮತ್ತು ನಿಖರತೆಯನ್ನು ಪರಿಶೀಲಿಸಲು ಇತ್ತೀಚೆಗಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಪ್ಟ್ಸ್ ಸರ್ವಿಸ್ ಸೆಂಟರ್ ಅಸಿಸ್ಟೆಂಟ್ ಡೈರೆಕ್ಟರ್ ವೀಣಾ ಅವರು ನುಡಿದರು. ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ನೇತೃತ್ವದಲ್ಲಿ ಇಲ್ಲಿನ ಶ್ರೀ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ ಪ್ರಾತ್ಯಕ್ಷಿಕೆ ಪರೀಕ್ಷೆಗೆ ಹಾಜರಾದ ಕುಶಲಕರ್ಮಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು.

ಅಕ್ಟೋಬರ್ 21 : ಮೆನ್ಕಿನ ತುಡರ್ ವೀರಾಂಜನೇಯ ಭಕ್ತಿ ಗೀತೆ ಬಿಡುಗಡೆ

Posted On: 18-10-2023 03:02PM

ಕಾಪು : ಸಚೇಂದ್ರ ಅಂಬಾಗಿಲು ಸಾಹಿತ್ಯ, ಪರಿಕಲ್ಪನೆ, ನಿರ್ದೇಶನ, ಸಹ ನಿರ್ಮಾಣದಲ್ಲಿ ಮೆನ್ಕಿನ ತುಡರ್ ವೀರಾಂಜನೇಯ ಭಕ್ತಿ ಗೀತೆಯು ಅಕ್ಟೋಬರ್ 21, ಶನಿವಾರ ಬಿಡುಗಡೆಗೊಳ್ಳಲಿದೆ.

ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ

Posted On: 18-10-2023 02:39PM

ಉಡುಪಿ : ಜಿಲ್ಲೆಯ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು.

ಬಂಟಕಲ್ಲು : ಇ-ಸ್ಟಾಂಪಿಂಗ್ ಸೇವೆ ಲೋಕಾರ್ಪಣೆ

Posted On: 17-10-2023 05:27PM

ಬಂಟಕಲ್ಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ (ಲಿ.) ಶಾಖೆಯಲ್ಲಿ ಮಂಗಳವಾರ ಇ-ಸ್ಟಾಂಪಿಂಗ್ ಸೇವೆ ಲೋಕಾರ್ಪಣೆಗೊಂಡಿತು.

ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಆವಿಷ್ಕಾರ ದಿನ ಆಚರಣೆ

Posted On: 17-10-2023 05:20PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಇನ್ನೊವೇಶನ್ ಕೌನ್ಸಿಲ್‌ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕೋಶದ ಸಹಯೋಗದೊಂದಿಗೆ ರಾಷ್ಟ್ರೀಯ ಆವಿಷ್ಕಾರ ದಿನವನ್ನು ಅಕ್ಟೋಬರ್ 16ರಂದು ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.

ಶರನ್ನವರಾತ್ರಿ : ಮಾತೃ - ಪ್ರಕೃತಿ - ಶಕ್ತಿ ಉಪಾಸನಾ ಪರ್ವ

Posted On: 17-10-2023 05:06PM

ನಾವೆಲ್ಲರೂ ಒಬ್ಬಳು ’ತಾಯಿ’ಯಿಂದ ಜನಿಸಿದವರು. ನಮ್ಮೆಲ್ಲರನ್ನು ಒಳಗೊಂಡಿರುವ ಜಗತ್ತು ಒಬ್ಬಳೇ ಮಾತೆಯಿಂದ ಉಂಟಾಯಿತು ಎಂಬುದು ಆಶ್ಚರ್ಯದ ವಿಷಯವಲ್ಲ, ಅಸಂಬದ್ಧ ವಿವರಣೆಯಲ್ಲ.ಮಾನವನ ಬದುಕು-ಪ್ರಕೃತಿ- ಹವಾಮಾನ ಇವು ಪರಸ್ಪರ ಸಂಬಂಧಿ. ಪ್ರಕೃತಿಯ ಬದಲಾವಣೆಗೆ ತನ್ನನ್ನು ರೂಢಿಸಿಕೊಂಡು, ಅವಲಂಬಿಯಾಗಿ ತನ್ನ ನೆಲೆಯಾದ ಪ್ರಕೃತಿಯ ನಿಗ್ರಹ, ಅನುಗ್ರಹಗಳೆರಡನ್ನೂ ಸಹಜವಾಗಿ ಸ್ವೀಕರಿಸಿ ’ಬದುಕು ಕಟ್ಟಿಕೊಂಡ ಆದಿ ಮನುಷ್ಯ’ ಎಂಬ ತಿಳಿವಳಿಕೆಯಲ್ಲೂ ಸತ್ಯವಿಲ್ಲವೇ? ಜನ್ಮ ನೀಡಿದ ತಾಯಿಯನ್ನು, ಬದುಕಲು ಅವಕಾಶ ನೀಡಿದ ಪ್ರಕೃತಿಯನ್ನು ಕೃತಜ್ಞತಾ ಭಾವದಿಂದ ಕಂಡು ಪರಸ್ಪರ ಸಮೀಕರಿಸಿ, ಕೊನೆಗೆ ನಾಗರಿಕತೆಯ ಒಂದು ಪೂರ್ಣ ಹಂತದಲ್ಲಿ ನಿಲುಮೆಗೆ ನಿಲುಕದ, ಕಲ್ಪನೆಗೆ ಸಿಗದ ನಿಯಾಮಕ ಶಕ್ತಿಯಾಗಿ ಸ್ವೀಕರಿಸಿದ್ದು, ನಾವು ಸಂಶೋಧನಾ ಸಂಗ್ರಹಗಳಿಂದ ತಿಳಿಯಬಹುದಾದ ವಿಶ್ಲೇಷಣೆ. ಬಹುಶಃ ಇದೇ ಇರಬೇಕು ಮಾತೃ-ಪ್ರಕೃತಿ-ಶಕ್ತಿ ಉಪಾಸನಾ ಪ್ರಕಾರದ ಮೂಲ.