Updated News From Kaup

ಉಡುಪಿ : ಎನ್ ಎ ಐ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ

Thumbnail
Posted On: 10 Dec 2023, 09:09 PM

ಉಡುಪಿ : ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ನಾಡಿನ ಸುದ್ದಿ ಪತ್ರಿಕೆ ಉಪಸಂಪಾದಕರಾದ ಕಿರಣ್ ಪೂಜಾರಿ ಆಯ್ಕೆಯಾಗಿದ್ದಾರೆ. 1998ರಲ್ಲಿ "ಜನ ಈದಿನ" ಪತ್ರಿಕೆ ಮೂಲಕ ಪತ್ರಿಕಾರಂಗಕ್ಕೆ ಪಾದಾರ್ಪಣೆ ಮಾಡಿದರು. ಸ್ಟಿಂಗ್ ರಿಪೋರ್ಟರ್ ಆಗಿ ಭ್ರಷ್ಟಚಾರ, ಅಕ್ರಮ, ಕಾನೂನು ಬಾಹಿರ ಚಟುವಟಿಕೆಗಳನ್ನು ಬಯಲಿಗೆ ಎಳೆದು ಪತ್ರಿಕಾ ಲೋಕದಲ್ಲಿ ಪ್ರಾಮಾಣಿಕ, ನೇರ ನುಡಿ, ರಾಜಿ ಆಗದ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತನನ್ನು ಗುರುತಿಸಿ ರಾಷ್ಟ್ರೀಯ ಸಂಘದ ಕಾರ್ಯದರ್ಶಿ ವಿಪಿನ್ ಗೌರ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತದ ಎಲ್ಲ ರಾಜ್ಯ ಗಳಲ್ಲಿ ಶಾಖೆಯನ್ನು ಹೊಂದಿದ್ದು, ಭಾರತ ಸರಕಾರದಿಂದ ಮಾನ್ಯತೆ ಪಡೆದಿದೆ.

ಕಾಪು ಹೊಸ ಮಾರಿಗುಡಿ : ಕುದಿ - ಕೋಡಿಬೆಟ್ಟು ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ

Thumbnail
Posted On: 10 Dec 2023, 09:05 PM

ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಶನಿವಾರ ಕುದಿ - ಕೋಡಿಬೆಟ್ಟು ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಕುದಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಿತು. ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ಲತಾ ವಿ. ಶೆಟ್ಟಿ, ಹೇಮಲತಾ ಶೆಟ್ಟಿ, ಸುಧಾ, ದೇವಕಿ ಐತಾಳ್, ಉಮಾ ಶೆಟ್ಟಿ, ಸಂಧ್ಯಾ ಶೆಟ್ಟಿ, ಶಕುಂತಲಾ, ರಂಜಿತಾ ಮತ್ತು ದಿಶಾ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು ಮಾತನಾಡಿ ಗ್ರಾಮದ ಪ್ರತೀ ಮನೆಯಿಂದಲೂ ಕನಿಷ್ಠ ಒಂಬತ್ತು ಶಿಲಾಸೇವೆಯನ್ನು (ರೂಪಾಯಿ 9,999) ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕು ಎಂದು ವಿನಂತಿಸಿದರು ಮತ್ತು ಗ್ರಾಮ ಸಮಿತಿಯ ದ್ಯೇಯೋದ್ದೇಶಗಳನ್ನು ತಿಳಿಸಿದರು. ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ ಇವರ ಉಪಸ್ಥಿತಿಯಲ್ಲಿ ಗ್ರಾಮ ಸಮಿತಿಯನ್ನು ರಚನೆ ಮಾಡಿ ಕುದಿ ಮತ್ತು ಕೋಡಿಬೆಟ್ಟು ಗ್ರಾಮದ 9 ಜನ ಪುರುಷರ ಮತ್ತು ಮಹಿಳೆಯರ 5 ತಂಡಗಳನ್ನು ಮಾಡಲಾಯಿತು, ಗ್ರಾಮದ ಜವಾಬ್ದಾರಿಯನ್ನು ಕುದಿ ವಸಂತ್ ಶೆಟ್ಟಿ, ಶಿವರಾಮ್ ಶೆಟ್ಟಿ, ಗುರುರಾಜ್ ಭಟ್ ಮತ್ತು ಸುಧಾಕರ್ ಶೆಟ್ಟಿ ವಹಿಸಿಕೊಂಡರು. ಸಮಿತಿಗೆ ಆಯ್ಕೆಯಾದವರು ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರದ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ಸುದ್ದಿ ತಲುಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು. ಗ್ರಾಮದ ಪ್ರತಿ ಮನೆ ಮನೆಗೆ ತಲುಪಿಸುವ ಮನವಿ ಪತ್ರವನ್ನು ಮತ್ತು ಸ್ಟಿಕ್ಕರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ದೇವಳದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ಪ್ರಭಾತ್ ಶೆಟ್ಟಿ ಮೂಳೂರು, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಎಂ.ಸುವರ್ಣ, ಗ್ರಾಮಸ್ಥರಾದ ರಾಘವೇಂದ್ರ ಪಾಟ್ಕರ್, ಪ್ರಸನ್ನ ಹೆಗ್ಡೆ, ಸಂಧ್ಯಾ ಶೆಟ್ಟಿ, ಸತೀಶ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಧಾಕರ ಶೆಟ್ಟಿ ಗುಂಡಿಬೈಲು ಸ್ವಾಗತಿಸಿದರು. ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಸ್ತಾವನೆಗೈದರು.

ಪಡುಬಿದ್ರಿ : ಕೃಷಿ ಮೇಳ ಸಮಾರೋಪ

Thumbnail
Posted On: 10 Dec 2023, 08:51 PM

ಪಡುಬಿದ್ರಿ : ಅಂದಿನ ಕಾಲದಲ್ಲಿ ಯಾವುದೇ ಯಂತ್ರದ ಸಹಾಯವಿಲ್ಲದೆ ಬಹಳ ಕಷ್ಟದಿಂದ ನಮ್ಮ ಹಿರಿಯರು ಕೃಷಿಯನ್ನು ನಿರ್ವಹಿಸುತ್ತಿದ್ದರು. ಕೃಷಿ ತೋ ನಾಸ್ತಿ ದುರ್ಭೀಕ್ಷಮ್ ಎಂಬ ಮಾತಿನಂತೆ ಕೃಷಿಯು ಇಂದು ಕಷ್ಟಕರವಾದರೂ ಇಷ್ಟಪಟ್ಟು ನಿರ್ವಹಿಸಿದ್ದಲ್ಲಿ ಲಾಭದಾಯಕವಾಗಿದೆ. ಅಂದು ನಮ್ಮ ಮನೆಯ ಹಿರಿಯರೇ ಕೃಷಿ ತಜ್ಞರಾಗಿರುತ್ತಿದ್ದರು. ಈಗ ಹಿರಿಯರ ಅನುಭವದ ಮಾತು ಕೃಷಿಗೆ ಅನಿವಾರ್ಯವಾಗಿದೆ. ಹಿರಿದಾಗಿ ಎಕರೆಗಟ್ಟಲೆಯಲ್ಲಿದ್ದ ಕೃಷಿ ಭೂಮಿಗಳು ಕೈಗಾರಿಕೆ, ವಸತಿ ಸಮುಚ್ಚಯಗಳಾಗಿ ಕಿರಿದಾದ ಪ್ರದೇಶಗಳಾಗಿ ಮಾರ್ಪಾಡುಗೊಂಡಿದೆ. ಕೃಷಿಯ ಬಗೆಗಿನ ಜಾಗೃತಿಗೆ ಕೃಷಿ ಮೇಳಗಳು ಸಹಾಯಕವಾಗಿದೆ ಎಂದು ಕಟೀಲು ಕ್ಷೇತ್ರದ ಅರ್ಚಕರಾದ ವೇ.ಮೂ. ಶ್ರೀ ಹರಿನಾರಾಯಣದಾಸ ಅಸ್ರಣ್ಣ ಹೇಳಿದರು. ಅವರು ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಆದಿತ್ಯವಾರ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ಜರಗಿದ ಕೃಷಿ ಮೇಳದ ಸಮಾರೋಪದಲ್ಲಿ ಮಂಗಳ ಮಂತ್ರಕ್ಷತೆಯ ನುಡಿಗಳನ್ನಿತ್ತರು. ಎಸ್ ಇ ಝಡ್ ಮುಖ್ಯಸ್ಥ ಅಶೋಕ್ ಶೆಟ್ಟಿ ಮಾತನಾಡಿ ಕೃಷಿ ಮೇಳದ ಮೂಲಕ ರೈತರ ಸಬಲೀಕರಣ ಆಗಬೇಕಾಗಿದೆ. ಇದರ ಮೂಲಕ ನಮ್ಮ ಪ್ರದೇಶ, ರಾಜ್ಯ, ದೇಶದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ರೈತರಿಗೆ ಬೇಕಾದ ಮಾಹಿತಿ ಮುಖ್ಯ. ಆಧುನೀಕರಣಕ್ಕೆ ಒತ್ತು ನೀಡಿ ಲಾಭದಾಯಕದತ್ತ ಕೃಷಿ ಸಾಗುವಲ್ಲಿ ಶ್ರಮಿಸಬೇಕಾಗಿದೆ ಎಂದರು. ಸನ್ಮಾನ : ಕೃಷಿಯಲ್ಲಿ ಸಾಧನೆಗೈದ ಪಿ ಕೆ ಸದಾನಂದ, ಅಪ್ಪು ಪೂಜಾರಿ, ಪೂವಪ್ಪ ಪೂಜಾರಿ, ಪ್ರಭಾಕರ ಎನ್ ಶೆಟ್ಟಿ, ಬಿ ಕೆ ದೇವರಾವ್, ಕೊಳಚೂರು ಜಗನ್ನಾಥ ಮೂಲ್ಯರನ್ನು ಸನ್ಮಾನಿಸಲಾಯಿತು. ಕೃಷಿ ಮೇಳದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆಪಿಸಿಸಿ ಸಂಯೋಜಕರಾದ ನವೀನ್ ಚಂದ್ರ ಜೆ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರವಿ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಎನ್ ಶೆಟ್ಟಿ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಎರ್ಮಾಳು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಕಸ್ತೂರಿ ಪ್ರವೀಣ್, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿರಾಜ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ ಅರ್ಚಕ ಜಗದಾಭಿರಾಮ, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಎರ್ಮಾಳು, ಕಾರ್ಯಕ್ರಮ ಸಂಚಾಲಕ ದೇವಾನಂದ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕುಮಾರಿ ಶರಣ್ಯ ಪ್ರಾರ್ಥಿಸಿದರು. ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಎರ್ಮಾಳು ಸ್ವಾಗತಿಸಿದರು. ರವಿರಾಜ್ ಎನ್ ಕೋಟ್ಯಾನ್ ಮತ್ತು ಯಶೋಧ ಕಾರ್ಯಕ್ರಮ ನಿರೂಪಿಸಿದರು. ದೇವಾನಂದ್ ಭಟ್ ವಂದಿಸಿದರು. ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಚಾಲನೆ

Thumbnail
Posted On: 09 Dec 2023, 03:15 PM

ಪಡುಬಿದ್ರಿ : ಇಲ್ಲಿನ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ಜರಗಿದ  ಕೃಷಿ ಮೇಳವನ್ನು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಹಿಂದೆ ನಮ್ಮ ದೇಶ ಕೃಷಿ ಪ್ರಧಾನ ದೇಶವಾಗಿತ್ತು. ಕಾಲ ಬದಲಾದಂತೆ ನಾವು ಕೂಡಾ ಬದಲಾಗಿದ್ದೇವೆ. ಇತ್ತೀಚಿನ ದಿನಗಳಲ್ಲಿಯುವಕರು ಕೃಷಿಯತ್ತ ಮುಖ ಮಾಡಿರುವುದು ಸಂತಸದ ಸಂಗತಿ. ಇಂತಹ ಕೃಷಿ ಮೇಳವು  ಕೃಷಿಕರ ಬಾಳಿಗೆ ನಂದಾದೀಪವಾಗಲಿ ಎಂದು ಹಾರೈಸಿದರು. ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು. ಈ ಸಂದರ್ಭ ಸ್ಥಳೀಯ ಐವರು ಸಾಧಕ ಕೃಷಿಕರಿಗೆ ಕೃಷಿ ಋಷಿ ಸಮ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು. ಕೃಷಿ ಮೇಳದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಕಾರ್ಯನಿರ್ವಾಹಕ  ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

Thumbnail
Posted On: 07 Dec 2023, 12:16 PM

ಕಾಪು : ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಗುರುವಾರ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು. ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು. ಈ ವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು. ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೆನರಾ ಬ್ಯಾಂಕ್ ನ ಹಿರಿಯಡಕ ಶಾಖೆಯ ಪ್ರಬಂಧಕರಾದ ಅವಿನಾಶ್ ಕಿಣಿ, ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ : ನಕಲಿ ಅಲೋಪತಿ ಡಾಕ್ಟರ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ

Thumbnail
Posted On: 07 Dec 2023, 12:05 PM

ಕುಂದಾಪುರ : ಆಯುರ್ವೇದಿಕ್ ವೈದ್ಯ ಅಲೋಪತಿ ಪ್ರಾಕ್ಟೀಸ್ ಮಾಡುತ್ತಿದ್ದರು ಎನ್ನುವ ಸಾರ್ವಜನಿಕರ ದೂರಿನ ಮೇರೆಗೆ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಕ್ಲಿನಿಕ್ ಒಂದರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ನಕಲಿ ಅಲೋಪತಿ ಡಾಕ್ಟರ್ ಪರ್ಜಿತ್ ನಂಬಿಯಾರ್ ಕ್ಲಿನಿಕ್ ಮೇಲೆ ಹಠಾತ್ ದಾಳಿ ನಡೆಸಿ ಕುಂದಾಪುರ ತಾಲೂಕು ಆರೋಗ್ಯಧಿಕಾರಿ ಡಾ. ಪ್ರೇಮಾನಂದ್ ಮತ್ತು ತಂಡ ಪರಿಶೀಲಿಸಿದಾಗ ಇವರ ಕ್ರಾಸ್ ಪ್ರಾಕ್ಟೀಸ್ ಸಾಬೀತಾಗಿದೆ ಇವರ ಮೇಲೆ FIR ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಕಳೆದ ಒಂದು ವರ್ಷದ ಹಿಂದೆಯೂ ಸ್ಟಿಂಗ್ ಪತ್ರಕರ್ತ ಕಿರಣ್ ಪೂಜಾರಿಯವರು ಈತನ ಕ್ರಾಸ್ ಪ್ರಾಕ್ಟೀಸ್ ಅನ್ನು ಸಾಬೀತುಪಡಿಸಿ ದಾಖಲೆ ನೀಡಿದರು ಸಹ ಅಂದಿನ ತಾಲೂಕು ಆರೊಗ್ಯಾಧಿಕಾರಿ ಡಾ. ರಾಜೇಶ್ವರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ ಹಾಗೂ ರಾಜಕೀಯದವರ ಶ್ರೀರಕ್ಷೆಯಿಂದ ಈತನ ಕೃತ್ಯವನ್ನು ಮುಚ್ಚಿ ಹಾಕಲಾಗಿತ್ತು. ತದನಂತರ ಸಹ ಈತ ರಾಜಾರೋಷವಾಗಿ ಅಲೋಪತಿ ಮೆಡಿಸಿನ್ ಅನ್ನು ನೀಡುತ್ತಿದ್ದ ಕಾರಣ ಸಾರ್ವಜನಿಕರು ಈಗಿನ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ರವರ ಗಮನಕ್ಕೆ ತಂದಿದ್ದರು. ಕುಂದಾಪುರ ಮತ್ತು ಬೈಂದೂರಿಗೆ ಒಬ್ಬ ದಕ್ಷ ಅಧಿಕಾರಿಯ ಅಗತ್ಯ ಇತ್ತು. ಮುಂದಿನ ದಿನಗಳಲ್ಲಿ ನಕಲಿ ಅಲೋಪತಿ ಡಾಕ್ಟರ್ ಗಳ ಹಾವಳಿಯನ್ನು ತಪ್ಪಿಸುವ ಸೂಚನೆ ದೊರೆತಿದೆ. ಸಾರ್ವಜನಿಕ ವಲಯದಲ್ಲಿ ಡಾ. ಪ್ರೇಮಾನಂದ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.

ಡಿಸೆಂಬರ್ 9, 10 : ಪಡುಬಿದ್ರಿಯಲ್ಲಿ ಕೃಷಿ ಮೇಳ

Thumbnail
Posted On: 07 Dec 2023, 11:42 AM

ಪಡುಬಿದ್ರಿ : ಇಲ್ಲಿನ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ಡಿಸೆಂಬರ್ 9 ಮತ್ತು 10 ರಂದು ಬೆಳಿಗ್ಗೆ 8ರಿಂದ ರಾತ್ರಿ 8 ರವರೆಗೆ ವಿಶೇಷ ಆಕರ್ಷಣೆಗಳೊಂದಿಗೆ ಕೃಷಿ ಮೇಳ ಜರಗಲಿದೆ ಎಂದು ಕೃಷಿ ಮೇಳದ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ ಹೇಳಿದರು. ಅವರು ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಗುರುವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೃಷಿ ಮೇಳದ ಉದ್ಘಾಟನೆಯನ್ನು ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ನೆರವೇರಿಸಲಿದ್ದು, ಜೈನ ಮಠ ಮೂಡಬಿದಿರೆಯ ಭಾರತ ಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಎರಡು ದಿನಗಳ ಕಾಲ ಕೃಷಿ ಸಂಬಂಧಿ ಗೋಷ್ಠಿಗಳ ಜೊತೆಗೆ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಪಡುಬಿದ್ರಿ ಆಸುಪಾಸಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿವಿಧ ಬಗೆಯ ಮನೋರಂಜನಾ ಕಾರ್ಯಕ್ರಮಗಳ ಜೊತೆಗೆ ವಿಶೇಷ ಆಕರ್ಷಣೆಯಾಗಿ ಯಕ್ಷಗಾನ, ನಾಟ್ಯ ವೈಭವ, ವಿಟ್ಲ ಶ್ರೀ ವಿಠಲ ನಾಯ್ಕ ಅವರಿಂದ ಗೀತಾ ಸಾಹಿತ್ಯ ಸಂಭ್ರಮ, ಜನಪದ ನೃತ್ಯ ವೈಭವ, ಭರತನಾಟ್ಯ ವೈವಿಧ್ಯ ಮೊದಲಾದ ಕಾರ್ಯಕ್ರಮಗಳು ಕೃಷಿ ಮೇಳಕ್ಕೆ ಮೆರುಗು ನೀಡಲಿದೆ. ಆದಿತ್ಯವಾರ ಸಂಜೆ ಸಮಾರೋಪ ಸಮಾರಂಭದೊಂದಿಗೆ ಕೃಷಿ ಮೇಳ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಮಿಕ್ಕಿ ಜನರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸುಮಾರು 80ಕ್ಕೂ ಮಿಕ್ಕಿ ಕೃಷಿ ಸಂಬಂಧಿ ಮಳಿಗೆಗಳು ವಿಶೇಷ ಉತ್ಸಾಹದಿಂದ ಬಂದು ಭಾಗವಹಿಸಲು ನೋಂದಣಿ ಮಾಡಿಕೊಂಡಿರುತ್ತಾರೆ. ಈ ಸಮಾರಂಭದಲ್ಲಿ ಅನೇಕ ಕೃಷಿ ಸಾಧಕರನ್ನು ಕೃಷಿ ಋಷಿ ಸಂಮ್ಮಾನ್ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಕೃಷಿ ಮೇಳದ ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಶಿವಪ್ರಸಾದ್ ಎಲ್ಲದಡಿ, ಜಗದಭಿರಾಮ, ನವೀನ್ ಚಂದ್ರ ಶೆಟ್ಟಿ, ಶರಾವತಿ, ನೀತಾ ಗುರುರಾಜ್, ನಯನಭಿರಾಮ, ದಿನಕರ ರಾವ್, ಶೇಖರ ರಾವ್, ಜನಾರ್ಧನ ರಾವ್, ಅಶೋಕ್ ಪೂಜಾರಿ, ರವಿ ಶೆಟ್ಟಿ, ಸತೀಶ್ ರಾವ್, ಅಮರಭಿರಾಮ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ : ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ

Thumbnail
Posted On: 07 Dec 2023, 09:42 AM

ಪಡುಬಿದ್ರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಶಾಖೆ ವತಿಯಿಂದ ನಡೆದ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಗ್ರಾಮಶಾಖೆ ಸಂಚಾಲಕರಾದ ಕೀರ್ತಿಕುಮಾರ್ ಅವರು ಮಾತಾಡಿ ದಲಿತರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತೆ ಬೌದ್ಧ ಧರ್ಮವನ್ನು ಸ್ವೀಕಾರ ಮಾಡಬೇಕು ಎಂದು ಹೇಳಿದರು. ಹಿಂದೂವಾಗಿ ಹುಟ್ಟಿದ್ದೇನೆ ಹಿಂದೂವಾಗಿ ಸಾಯೋದಿಲ್ಲ ಅಂತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದಲಿತರನ್ನು ಶೂದ್ರತ್ವದಿಂದ ಹೊರತರಲು ದೇಶದ ದಲಿತರನ್ನು ಎಚ್ಚರಿಸುವ ಉದ್ದೇಶದಿಂದ ಭಾರತದಲ್ಲಿ ಹುಟ್ಟಿದ ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮವನ್ನು ಸ್ವೀಕರಿಸುವುದರ ಮೂಲಕ ದಲಿತರಿಗೆ ಬುದ್ಧರ ಧಮ್ಮವನ್ನು ಪರಿಚಯಿಸಿದ್ದಾರೆ. ಲಕ್ಷಾಂತರ ಅನುಯಾಯಿಗಳೊಂದಿಗೆ ಧಮ್ಮ ದೀಕ್ಷೆಯನ್ನು ಪಡೆದುಕೊಂಡರು. ಬಾಬಾ ಸಾಹೇಬರಂತೆ ನಾವೂ ಬೌದ್ಧರಾಗಿ ನಮ್ಮಲ್ಲಿನ ಬದಲಾವಣೆಯನ್ನು ಕಂಡುಕೊಳ್ಳಬೇಕು ಎಂದರು. ಶಿವಾನಂದ್ ಪಡುಬಿದ್ರಿ ಅವರು ಮಾತಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಜೀವನದ ಕಷ್ಟದ ದಿನಗಳಲ್ಲೂ ಹೋರಾಟ ಮಾಡಿ ನಮಗೆಲ್ಲ ಸ್ವತಂತ್ರವಾಗಿ ಬದುಕುವ ಹಾಗೆ ಈ ದೇಶಕ್ಕೆ ಸಂವಿಧಾನದಾನ ಮೂಲಕ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದರು. ಈ ಸಂಧರ್ಭ ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ವಸಂತಿ ಕಲ್ಲಟ್ಟೆ , ಕಾರ್ಯದರ್ಶಿ ಸುರೇಶ್ ಎರ್ಮಾಳ್, ಉಷಾ, ನಯನ, ಹರಿಶ್ಚಂದ್ರ, ವಿಠ್ಠಲ್ ನಂದಿಕೂರ್, ಸುಕೇಶ್, ರಮೇಶ್ ಮುಂತಾದವರು ಉಪಸ್ಥಿತರಿದ್ದರು. ಕೋಶಾಧಿಕಾರಿ ವಿಠ್ಠಲ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

ಹೊಸ ಮಾರಿಗುಡಿ ಜೀರ್ಣೋದ್ಧಾರದ ಅಂಗವಾಗಿ ಬಡಾ (ಉಚ್ಚಿಲ) ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ

Thumbnail
Posted On: 06 Dec 2023, 07:12 PM

ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಸೋಮವಾರ ಬಡಾ (ಉಚ್ಚಿಲ) ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ರಂಜಿತಾ ಗೋವಿಂದರಾಜ್ ಭಟ್, ಇಂದಿರಾ ಶೆಟ್ಟಿ, ರೇಣುಕಾ, ಮೋಹಿನಿ ಮಾಧವ, ಮಮತಾ, ಜಯಂತಿ, ಸುಲೋಚನಾ, ಸುನಿತಾ ಮತ್ತು ಮೋಹಿನಿ ರಮೇಶ್ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಾಸ್ತಾವಿಕವಾಗಿ ಮಾತನಾಡಿ ದೇವಳ ನಿರ್ಮಾಣದ ಜೊತೆಗಿರುವ ಯೋಜನೆಗಳು, ಶಿಲಾಸೇವೆಯ ಮಹತ್ವ ಹಾಗೂ ಇತರ ವಿಷಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು ಮಾತನಾಡಿ ಗ್ರಾಮದ ಪ್ರತೀ ಮನೆಯಿಂದಲೂ ಕನಿಷ್ಠ ಒಂಬತ್ತು ಶಿಲಾಸೇವೆಯನ್ನು (ರೂಪಾಯಿ 9,999) ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕು ಎಂದು ವಿನಂತಿಸಿದರು ಮತ್ತು ಗ್ರಾಮ ಸಮಿತಿಯ ದ್ಯೇಯೋದ್ದೇಶಗಳನ್ನು ತಿಳಿಸಿದರು. ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ ಇವರ ಉಪಸ್ಥಿತಿಯಲ್ಲಿ ಗ್ರಾಮ ಸಮಿತಿಯನ್ನು ರಚನೆ ಮಾಡಿ ಬಡಾ (ಉಚ್ಚಿಲ) ಗ್ರಾಮದ 9 ಜನ ಪುರುಷರ 1 ತಂಡ ಮುಖ್ಯ ಸಂಚಾಲಕರಾಗಿ ಚಂದ್ರಶೇಖರ್ ಶೆಟ್ಟಿ ಮತ್ತು 9 ಜನ ಮಹಿಳೆಯರ 2 ತಂಡ ಮುಖ್ಯ ಸಂಚಾಲಕರಾಗಿ ಇಂದಿರಾ ಶೆಟ್ಟಿ, ಶಶಿಕಲಾ ನವೀನ್ ರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದವರು ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರದ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ಸುದ್ದಿ ತಲುಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು. ಗ್ರಾಮದ ಪ್ರತಿ ಮನೆ ಮನೆಗೆ ತಲುಪಿಸುವ ಮನವಿ ಪತ್ರವನ್ನು ಮತ್ತು ಸ್ಟಿಕ್ಕರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ಪ್ರಭಾತ್ ಶೆಟ್ಟಿ ಮೂಳೂರು, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಮಾಜಿ ಸದಸ್ಯರಾದ ವಸಂತ ದೇವಾಡಿಗ, ಮಾಜಿ ಉಪಾಧ್ಯಕ್ಷರಾದ ಶಕುಂತಲಾ ಮತ್ತು ಇಂದಿರಾ ಶೆಟ್ಟಿ ಉಪಸ್ಥಿತರಿದ್ದರು. ವಕೀಲರಾದ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು.

ಪಡು ಕುತ್ಯಾರು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆ

Thumbnail
Posted On: 05 Dec 2023, 11:48 AM

ಪಡುಕುತ್ಯಾರು : ಇಲ್ಲಿನ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆಯು ಆದಿತ್ಯವಾರ ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಶ್ರೀ ದುರ್ಗಾ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘವು ಉತ್ತಮ ರೀತಿಯಲ್ಲಿಕಾರ್ಯನಿರ್ವಹಿಸುತ್ತಿದ್ದು, ಸಂಘವು ಉತ್ತರೋತ್ತರ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು. ಸನ್ಮಾನ, ಪ್ರೋತ್ಸಾಹ ಧನ, ಬಹುಮಾನ ವಿತರಣೆ : ಮುಖ್ಯ ಅತಿಥಿ ಜನಾರ್ಧನ ಆಚಾರ್ಯ, ಹಿರಿಯ ಸದಸ್ಯರಾದ ರಾಮಚಂದ್ರ ಆಚಾರ್ಯ, ಯೋಗೀಶ್ ಆಚಾರ್ಯರನ್ನು ಸನ್ಮಾನಿಸಲಾಯಿತು. ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಜಯರಾಮ ಆಚಾರ್ಯ, ಗೌರವ ಸಲಹೆಗಾರರು, ಮೊಕ್ತೇಸರರಾದ ಪ್ರಕಾಶ್ ಎಸ್ ಆಚಾರ್ಯ ಮತ್ತು ಚಂದ್ರಯ್ಯ ಪಿ ಆಚಾರ್ಯ, ಉಪಾಧ್ಯಕ್ಷರಾದ ಕೆ ವಿವೇಕಾನಂದ ಆಚಾರ್ಯ, ಪದಾಧಿಕಾರಿಗಳಾದ, ಪ್ರವೀಣ ಎಸ್ ಆಚಾರ್ಯ, ಪ್ರಕಾಶ್ ಎಸ್ ಆಚಾರ್ಯ, ಉದಯಕುಮಾರ್, ಶಶಿರಾಜ ಪಿ ಆಚಾರ್ಯ, ಹೇಮಾವತಿ ಪಿ ಆಚಾರ್ಯ, ಪ್ರಸನ್ನ ಎಸ್ ಆಚಾರ್ಯ, ಸುರೇಂದ್ರ ಎ ಆಚಾರ್ಯ ಉಪಸ್ಥಿತರಿದ್ದರು. ಸುರೇಶ್ ಆರ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ ವರದಿ ಮಂಡಿಸಿದರು. ಕೋಶಾಧಿಕಾರಿಯಾದ ಗಂಗಾಧರ ಎಸ್ ಆಚಾರ್ಯರವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಾಸ್ತಾವಿಕವಾಗಿ ಗೌರವಾಧ್ಯಕ್ಷರಾದ ಹರಿಶ್ಚಂದ್ರ ಎಚ್ ಆಚಾರ್ಯ ಉಪಾಧ್ಯಕ್ಷರಾದ ಸದಾಶಿವ ಎ ಆಚಾರ್ಯ ಮಾತನಾಡಿದರು. ಲತಾ ಪ್ರಸಾದ್ ಆಚಾರ್ಯ ಮತ್ತು ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಶಾಲಿನಿ ಜಿ ಆಚಾರ್ಯ ವಂದಿಸಿದರು.