Updated News From Kaup

ಪಡು ಕುತ್ಯಾರು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆ

Thumbnail
Posted On: 05 Dec 2023, 11:48 AM

ಪಡುಕುತ್ಯಾರು : ಇಲ್ಲಿನ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಚತುರ್ಥ ವಾರ್ಷಿಕ ಮಹಾಸಭೆಯು ಆದಿತ್ಯವಾರ ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಶ್ರೀ ದುರ್ಗಾ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘವು ಉತ್ತಮ ರೀತಿಯಲ್ಲಿಕಾರ್ಯನಿರ್ವಹಿಸುತ್ತಿದ್ದು, ಸಂಘವು ಉತ್ತರೋತ್ತರ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು. ಸನ್ಮಾನ, ಪ್ರೋತ್ಸಾಹ ಧನ, ಬಹುಮಾನ ವಿತರಣೆ : ಮುಖ್ಯ ಅತಿಥಿ ಜನಾರ್ಧನ ಆಚಾರ್ಯ, ಹಿರಿಯ ಸದಸ್ಯರಾದ ರಾಮಚಂದ್ರ ಆಚಾರ್ಯ, ಯೋಗೀಶ್ ಆಚಾರ್ಯರನ್ನು ಸನ್ಮಾನಿಸಲಾಯಿತು. ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಜಯರಾಮ ಆಚಾರ್ಯ, ಗೌರವ ಸಲಹೆಗಾರರು, ಮೊಕ್ತೇಸರರಾದ ಪ್ರಕಾಶ್ ಎಸ್ ಆಚಾರ್ಯ ಮತ್ತು ಚಂದ್ರಯ್ಯ ಪಿ ಆಚಾರ್ಯ, ಉಪಾಧ್ಯಕ್ಷರಾದ ಕೆ ವಿವೇಕಾನಂದ ಆಚಾರ್ಯ, ಪದಾಧಿಕಾರಿಗಳಾದ, ಪ್ರವೀಣ ಎಸ್ ಆಚಾರ್ಯ, ಪ್ರಕಾಶ್ ಎಸ್ ಆಚಾರ್ಯ, ಉದಯಕುಮಾರ್, ಶಶಿರಾಜ ಪಿ ಆಚಾರ್ಯ, ಹೇಮಾವತಿ ಪಿ ಆಚಾರ್ಯ, ಪ್ರಸನ್ನ ಎಸ್ ಆಚಾರ್ಯ, ಸುರೇಂದ್ರ ಎ ಆಚಾರ್ಯ ಉಪಸ್ಥಿತರಿದ್ದರು. ಸುರೇಶ್ ಆರ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ ವರದಿ ಮಂಡಿಸಿದರು. ಕೋಶಾಧಿಕಾರಿಯಾದ ಗಂಗಾಧರ ಎಸ್ ಆಚಾರ್ಯರವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಾಸ್ತಾವಿಕವಾಗಿ ಗೌರವಾಧ್ಯಕ್ಷರಾದ ಹರಿಶ್ಚಂದ್ರ ಎಚ್ ಆಚಾರ್ಯ ಉಪಾಧ್ಯಕ್ಷರಾದ ಸದಾಶಿವ ಎ ಆಚಾರ್ಯ ಮಾತನಾಡಿದರು. ಲತಾ ಪ್ರಸಾದ್ ಆಚಾರ್ಯ ಮತ್ತು ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಶಾಲಿನಿ ಜಿ ಆಚಾರ್ಯ ವಂದಿಸಿದರು.

ಉದ್ಯಾವರ : ಭಾತೃತ್ವ ಮತ್ತು ಐಕ್ಯತೆಯ ಭಾನುವಾರ ಆಚರಣೆ

Thumbnail
Posted On: 04 Dec 2023, 06:15 PM

ಉದ್ಯಾವರ : 150ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಾರ್ಷಿಕ ಮಹೋತ್ಸವವು ಡಿಸೆಂಬರ್ ಐದು ಮತ್ತು ಆರರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಡಿಸೆಂಬರ್ 3 ರಂದು ಭಾತೃತ್ವ ಮತ್ತು ಐಕ್ಯತೆಯ ಭಾನುವಾರವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಧಾನ ಬಲಿ ಪೂಜೆಯ ನೇತೃತ್ವ ವಹಿಸಿದ್ದ ಜೆಪ್ಪು ಸೆಮಿನರಿಯ ಪ್ರಾಧ್ಯಾಪಕರಾದ ವo. ಫಾ. ಡಾ. ರಾಜೇಶ್ ರೊಜಾರಿಯೋ ಪವಿತ್ರ ಬಲಿ ಪೂಜೆಯನ್ನು ನೆರವೇರಿಸಿ, ಭಕ್ತರಿಗೆ 'ಪರಮ ಪ್ರಸಾದದಲ್ಲಿ ನಮ್ಮ ಹೃದಯಗಳನ್ನು ಪ್ರಜ್ವಲಿಸಿ, ಸಮಾಜದಲ್ಲಿ ಕ್ರಿಸ್ತನ ಪ್ರತಿರೂಪಗಳಾಗಿ ಬಾಳೋಣ' ಎಂಬ ಸಂದೇಶವನ್ನು ನೀಡಿದರು. ಈ ಸಂದೇಶದಲ್ಲಿ 'ಕ್ರಿಸ್ತರು ಮನುಷ್ಯ ಜನ್ಮ ತಾಳಿ ಭೂಲೋಕಕ್ಕೆ ಬಂದು ಮನುಷ್ಯತ್ವ ಕಾಪಾಡಿಕೊಂಡು ದೇವರ ಪ್ರತಿಬಿಂಬವಾಗಿ ಜೀವಿಸಿದರು. ಅವರಂತೆಯೇ ನಾವು ಕೂಡ ದೇವರ ಪ್ರತಿಬಿಂಬವಾಗಿ ಬಾಳಿ ತೋರಿಸಬೇಕು. ಇದೇ ನಾವು ಕ್ರಿಸ್ತನಿಗೆ ಕೊಡುವ ಅತ್ಯುನ್ನತ ಕೊಡುಗೆ' ಎಂದರು. ಪವಿತ್ರ ಬಲಿಪೂಜೆಯ ಬಳಿಕ ಪರಮ ಪ್ರಸಾದದ ಆರಾಧನೆಯನ್ನು ಪ್ರಧಾನ ಧರ್ಮ ಗುರುಗಳು ನೆರವೇರಿಸಿದರು. ವಿಶೇಷ ಅಲಂಕೃತ ವಾಹನದಲ್ಲಿ ಪರಮ ಪ್ರಸಾದದ ಭವ್ಯ ಮತ್ತು ಭಕ್ತಿಪೂರ್ವಕ ಮೆರವಣಿಗೆ ನಡೆಯಿತು. 'ಪರಮ ಪ್ರಸಾದದಲ್ಲಿ ನಮ್ಮ ಹೃದಯಗಳನ್ನು ಪ್ರಜ್ವಲಿಸಿ, ಸಮಾಜದಲ್ಲಿ ಕ್ರಿಸ್ತನ ಪ್ರತಿರೂಪಗಳಾಗಿ ಬಾಳೋಣ' ಎಂಬ ಸಂದೇಶದೊಂದಿಗೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ದೇವಾಲಯದ ಪ್ರಧಾನ ಧರ್ಮಗುರುಗಳಾದ ವo. ಫಾ. ಸ್ಟ್ಯಾನಿ ಬಿ ಲೋಬೊ ಮತ್ತು ಸಹಾಯಕ ಧರ್ಮ ಗುರುಗಳಾದ ವo. ಲಿಯೋ ಪ್ರವೀಣ್ ಡಿಸೋಜ, ಧರ್ಮಭಗಿನಿಯರು ಮತ್ತು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸಿದ್ದರು.

ಶಂಕರಪುರ :ಸಂತ ಆಶ್ರಯಧಾಮ ನಿರ್ಮಾಣಕ್ಕೆ ಭೂಮಿ ಪೂಜೆ, ಭಗವಧ್ವಜ ಸ್ಥಾಪನೆ

Thumbnail
Posted On: 03 Dec 2023, 10:29 PM

ಶಂಕರಪುರ : ಶಿರ್ವ ಮಟ್ಟಾರಿನ ಪಾಂಜಗುಡ್ಡೆಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಯೋಜನೆಯಾದ ಸಂತ ಆಶ್ರಯಧಾಮ ನಿರ್ಮಾಣದ ಭೂಮಿಯಲ್ಲಿ ರವಿವಾರ 54 ಸಾಧು-ಸಂತರಿಂದ ದೀಪ ಬೆಳಗಿಸಿ, ಭಗವಧ್ವಜ ಸ್ಥಾಪಿಸಿ ಪ್ರಾರ್ಥನೆ ಸಲ್ಲಿಸಿ ಚಾಲನೆಯನ್ನು ನೀಡಲಾಯಿತು. ಶಂಕರಪುರ ದ್ವಾರಕಾಮಾಯಿ ಮಠ ಶ್ರೀಸಾಯಿ ಮುಖ್ಯಪ್ರಾಣ  ದೇವಸ್ಥಾನದ ಧರ್ಮದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ, ಭಾರ್ಗವ ಮುನಿಗಳು ಸಾಧು ಸಂತರು ತಪಸ್ಸನ್ನುಗೈದಂತಹ ಪುಣ್ಯಕ್ಷೇತ್ರ ಇದಾಗಿದೆ. ಸಾಧು ಸಂತರು ಅನಾಥರಾಗಬಾರದು ಎಂಬ ಯೋಚನೆಯೊಂದಿಗೆ ಸಂತ ಆಶ್ರಯಧಾಮ ನಿರ್ಮಾಣದ ಯೋಜನೆಯೊಂದಿಗೆ ಭೂಮಿಯು ಅಭಿವೃದ್ಧಿಗೊಳ್ಳಲಿದ್ದು, ಗುರುಕುಲವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭ ಮಂಗಳೂರು ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಪೀಠದ ಶ್ರೀ ಪ್ರವೀಣ್‌ರಾಜ್ ಮಚ್ಚೇಂದ್ರನಾಥ ಬಾಬಾ ಸಹಿತ ದೇಶದ ನಾನಾ ರಾಜ್ಯಗಳ ಸಾಧು ಸಂತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಟ್ರಸ್ಟಿ ವಿಶ್ವನಾಥ ಸುವರ್ಣ, ಅಧ್ಯಕ್ಷರಾದ ಸುಧಾಕರ್ ಶೆಟ್ಟಿ, ಮಾರ್ಗದರ್ಶಕರಾದ ಗೀತಾಂಜಲಿ ಎಂ. ಸುವರ್ಣ, ಕೋಟ ಆನಂದ ಸಿ. ಕುಂದರ್, ವಿ.ಹಿಂ.ಪ. ಕಾಪು ತಾಲೂಕು ಅಧ್ಯಕ್ಷ ಜಯಪ್ರಕಾಶ್ ಮತ್ತು ಸ್ಥಳದಾನಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

ಡಿಸೆಂಬರ್ 3 : ಶ್ರೀ ಸಿರಿ ಕುಮಾರ ದೈವಳ ಕಂಬಳ

Thumbnail
Posted On: 02 Dec 2023, 02:35 PM

ಉಡುಪಿ : ಶ್ರೀ ಸಿರಿಕುಮಾರ ದೈವಸ್ಥಾನ ಕಂಬಳ ಮನೆ, ಕಂಬಳಕಟ್ಟ-ಕೊಡವೂರು ಇಲ್ಲಿಯ ಶ್ರೀ ಸಿರಿ ಕುಮಾರ ದೈವಳ ಕಂಬಳವು ಡಿಸೆಂಬರ್ 3, ರವಿವಾರ ಕಂಬಳಕಟ್ಟ ಇಲ್ಲಿ ಜರಗಲಿದೆ. ಸಂಜೆ 3 ಗಂಟೆಗೆ ಸಿರಿ ಕುಮಾರ ದರ್ಶನ ಸೇವೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ : ಕ್ರಿಯೇಟಿವ್‌ ಆವಿರ್ಭವ-2023 ಕಾಲೇಜು ವಾರ್ಷಿಕೋತ್ಸವ

Thumbnail
Posted On: 02 Dec 2023, 01:44 PM

ಕಾರ್ಕಳ : ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಮೂಡಿಬಂದಿತು. ಸಮಾರಂಭದಲ್ಲಿ ಮಿಲಾಗ್ರಿಸ್‌ ಚರ್ಚ್‌ನ ಧರ್ಮಗುರುಗಳಾದ ವಲೇರಿಯನ್‌ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್‌ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ ಯಶಸ್ಸು ಕೀರ್ತಿ ಲಭಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳ ವಿಶೇಷವಾದ ಬೆಳವಣಿಗೆಗಳಿಗೆ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲಿ ಎಂದು ಆಶಿಸಿದರು. ಸಹ ಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಸ್ಥಾಪಕರಾದ ವಿದ್ವಾನ್‌ ಗಣಪತಿ ಭಟ್‌, ಅಮೃತ್‌ ರೈ, ಆದರ್ಶ ಎಂ.ಕೆ, ವಿಮಲ್‌ ರಾಜ್‌ ಜಿ, ಗಣಪತಿ ಕೆ.ಎಸ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅನೇಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಪ್ರಾಂಶುಪಾಲರಾದ ಸ್ಟಾನಿ ಲೋಬೋ ವಾರ್ಷಿಕ ವರದಿ ವಾಚಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರ ಜೋಯೆಲ್‌ ಸ್ವಾಗತಿಸಿದರು. ಸೋನಾಲ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಶಿಲ್ಪಾ ಕ್ರಾಸ್ತಾ ವಂದಿಸಿದರು.

ಯು.ಎ.ಇ ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ

Thumbnail
Posted On: 02 Dec 2023, 11:03 AM

ಕಾಪು : ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮಾಲಕರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರಾದ ಯುವ ನಾಯಕ, ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಯು.ಎ.ಇ ದುಬೈನಲ್ಲಿ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ಎಲ್ಲಾ ಜಾತಿಯವರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದು ಗ್ರಾಮ ಮಟ್ಟದ ಜನರಿಗೆ ತನ್ನಿಂದ ಆಗುವ ಸಹಾಯ ಮಾಡುತ್ತ ಕುಡಿಯುವ ನೀರು, ರಸ್ತೆ ನಿರ್ಮಾಣ, ಕೊರೋನದಂತ ಮಹಾಮಾರಿ ಬಂದಾಗ ಸಂತ್ರಸ್ತರಿಗೆ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾಗಿ ಅದರ ಮುಖಾಂತರ ಸುಮಾರು 6000 ಕ್ಕೂ ಮಿಕ್ಕಿ ಮನೆಗೆ ಅಕ್ಕಿ ಪಡಿತರ ಕಿಟ್ ನೀಡಿದ್ದು ,ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ,ಪೊಲೀಸ್ ಇಲಾಖೆಯವರ ಸಹಕಾರದಿಂದ ಹಲವಾರು ಮೆಡಿಕಲ್ ಕ್ಯಾಂಪ್, ಬ್ಲಡ್ ಕ್ಯಾಂಪ್, ವಿದ್ಯಾರ್ಥಿವೇತನದಂತ ನೂರಾರು ಸಾಮಾಜಿಕ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಸಿ ಸರಕಾರದಿಂದ ಸಿಗುವ ಸವಲತ್ತುಗಳನ್ನು ಜನರಿಗೆ ಸುಲಭ ರೀತಿಯಲ್ಲಿ ಸಿಗಲು ಹಲವಾರು ಮಾಹಿತಿ ಕಾರ್ಯಕ್ರಮ ಮಾಡಿರುತ್ತಾರೆ. ಹತ್ತಾರು ಸಾಮಾಜಿಕ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿ ಕರ್ನಾಟಕ ಸರಕಾರದ ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಏಷ್ಯಾ ಫೇಸಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ದೆಹಲಿ, ಜನಸೇವಾ ಸದ್ಭಾವನ್ ಪುರಸ್ಕಾರ್ ಅವಾರ್ಡ್ ಗೋವಾ, ಕೈರಲಿ ಪ್ರಕಾಶನ ಕೊಡಲ್ಪಟ್ಟ ಸಮಾಜ ರತ್ನ ಕೇರಳ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಸಾಧಕ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ವತಿಯಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಪಡೆದು ನೂರಾರು ಸಂಘ ಸಂಸ್ಥೆಗಳಿಂದ ಸನ್ಮಾನ ಅಭಿನಂದನೆ ಪಡೆದಿರುತ್ತಾರೆ. ಇದೀಗ ಡಿಸೆಂಬರ್ 10 ದುಬೈ ಅಲ್ ಖುಷಿಸ್ ಉಡ್ಲಮ್ ಪಾರ್ಕ್ ದುಬೈ ಶಾಲಾ ಸಭಾಂಗಣದಲ್ಲಿ ನಡೆಯುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಹಲವಾರು ದೇಶ ಹಾಗೂ ವಿದೇಶದ ಗಣ್ಯತಿಗಣ್ಯರ ಸಮ್ಮುಖದಲ್ಲಿ 2023 ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಯೂತ್ ಐಕಾನ್ ಪಡೆಯಲಿದ್ದಾರೆಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ದುಬೈ ಘಟಕದ ಅಧ್ಯಕ್ಷರಾದ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ, ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು : ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ

Thumbnail
Posted On: 01 Dec 2023, 08:38 PM

ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಶುಕ್ರವಾರ ಜರಗಿತು. ಈ ಸಂದರ್ಭ ಕ್ಷೇತ್ರದ ದೇವರಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಗಿತ್ತು. ಶ್ರೀದೇವಿಯ ಮಹಾಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದು ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ನಡೆಯಿತು. ಮುಕ್ತೇಶ್ವರ ಪ್ರಕಾಶ ಎಸ್ ಆಚಾರ್ಯ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ, ನಾಗೇಶ್ ಆರ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಕಾಪು ಜಯರಾಮ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಡುಬಿದ್ರಿ : ಎ ಎಸ್ ಐ ದಿವಾಕರ ಜೆ. ಸುವರ್ಣರಿಗೆ ಬೀಳ್ಕೊಡುಗೆ

Thumbnail
Posted On: 01 Dec 2023, 07:45 AM

ಪಡುಬಿದ್ರಿ : 31 ವರ್ಷಗಳ ಕಾಲ ಪೋಲಿಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆಗೈದು ವಯೋ ನಿವೃತ್ತಿ ಹೊಂದಿದ ಎ ಎಸ್ ಐ ದಿವಾಕರ ಜೆ. ಸುವರ್ಣರ ಬೀಳ್ಕೊಡುಗೆ ಸಮಾರಂಭ ಗುರುವಾರ ಪಡುಬಿದ್ರಿ ಮಾರ್ಕೆಟ್ ರಸ್ತೆಯ ಸಾಯಿ ಆರ್ಕೇಡ್ ನಲ್ಲಿ ಜರಗಿತು. ಈ ಸಂದರ್ಭ ಪಡುಬಿದ್ರಿ ಠಾಣೆಯ ಎ ಎಸ್ ಐ ಸುರೇಶ್ ಭಟ್, ಹೆಡ್ ಕಾನ್ ಸ್ಟೇಬಲ್ ಚಂದ್ರ ಬಿಲ್ಲವ, ಮಣಿಪಾಲ ಠಾಣೆಯ ಎ ಎಸ್ ಐ ನಾಗೇಶ್, ಸಿಬ್ಬಂದಿಗಳಾದ ಶಶಿಕುಮಾರ್, ಸುಕೇಶ್, ಶ್ರೀಧರ್, ಸಾಮಾಜಿಕ ಕಾರ್ಯಕರ್ತರಾದ ಲೋಕೇಶ್ ಕಂಚಿನಡ್ಕ, ಶೇಖರ ಹೆಜಮಾಡಿ, ಲೋಕೇಶ್ ಹೆಜಮಾಡಿ, ಪತ್ರಕರ್ತ ರಾಮಚಂದ್ರ ಆಚಾರ್ಯ ನಿವೃತ್ತರ ಬಗ್ಗೆ ತಮ್ಮ ‌ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸನ್ಮಾನ : ಪಡುಬಿದ್ರಿ ಠಾಣಾ ಸಿಬ್ಬಂದಿಗಳು, ಹೋಮ್ ಗಾಡ್ಸ್೯, ಹೆಜಮಾಡಿ ಬಿಲ್ಲವ ಸಂಘ, ಅಂಬೇಡ್ಕರ್ ಯುವಸೇನೆ ವತಿಯಿಂದ ದಿವಾಕರ ಜೆ. ಸುವರ್ಣರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ದಿವಾಕರ ಜೆ. ಸುವರ್ಣ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರ ಸಹಕಾರದಿಂದ ಪೋಲಿಸ್ ಇಲಾಖೆಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು. ಮಾಡುವ ಕೆಲಸದಲ್ಲಿ ನಿಷ್ಠೆಯಿದ್ದಾಗ ಮಾತ್ರ ‌ಉತ್ತಮ ಫಲ‌ ದೊರಕುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಮಾತನಾಡಿ ದಿವಾಕರ ಜೆ. ಸುವರ್ಣರು ಪೋಲಿಸ್ ಇಲಾಖೆಯಲ್ಲಿ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಅವರು ವಯೋ ನಿವೃತ್ತಿ ಹೊಂದಿರಬಹುದು. ಆದರೆ ಅವರ ಸಲಹೆ ಸಹಕಾರ ಮುಂದೆಯೂ ಇರಲಿ‌. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಈ‌‌ ಸಂದರ್ಭ ವೇದಿಕೆಯಲ್ಲಿ ಎ ಎಸ್ ಐ ದಿವಾಕರ ಜೆ. ಸುವರ್ಣರ ಪತ್ನಿ ಹರಿಣಾಕ್ಷಿ, ಪಡುಬಿದ್ರಿ ಠಾಣೆಯ ಅಪರಾಧ ವಿಭಾಗದ ಪಿ ಎಸ್ ಐ ಸುದರ್ಶನ ದೊಡ್ಡಮಣಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿ ವೆಂಕಟೇಶ ಸ್ವಾಗತಿಸಿದರು. ಸಿಬ್ಬಂದಿ ಯೋಗೀಶ್ ನಿರೂಪಿಸಿ, ವಂದಿಸಿದರು.

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

Thumbnail
Posted On: 30 Nov 2023, 06:03 PM

ಬಂಟಕಲ್ಲು : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಲ್ಲಿ ಅವಕಾಶವನ್ನು ನೀಡುತ್ತದೆ ಮತ್ತು ಶಿಕ್ಷಣ ಹೊರತುಪಡಿಸಿ ಹೊರಗಿನ ಜೀವನದ ಬಗ್ಗೆ ಅನುಭವವನ್ನು ಪಡೆಯಲು ಅವಕಾಶ ಕಲ್ಪಸುತ್ತದೆ. ಅಲ್ಲದೆ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಕೌಶಲ್ಯವನ್ನು ತಿಳಿಸಿಕೊಡುತ್ತದೆ ಎಂದು ಉಡುಪಿಯ ಎಂಜಿಎಮ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮತ್ತು ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾದ ಸುಚಿತ್ ಕೋಟ್ಯಾನ್ ಹೇಳಿದರು. ಅವರು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ನವೆಂಬರ್ 27 ರಂದು ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಈ ಶಿಬಿರವನ್ನು ಆಯೋಜಿಸಿದಕ್ಕಾಗಿ ಹರ್ಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳು ಈ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಆಯೋಜಿಸಲಾಗಿತ್ತು. ಅತಿಥಿಗಳಾದ ಸುಚಿತ್ ಕೋಟ್ಯಾನ್ ಪ್ರಮಾಣ ವಚನವನ್ನು ವಾಚಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಡೀನ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಿಧಿ ಪಾಟ್ಕರ್ ಸ್ವಾಗತಿಸಿದರು. ಸುರಭಿ ಪ್ರಾರ್ಥಿಸಿದರು. ಅಕ್ಷತಾ ಅತಿಥಿಗಳನ್ನು ಪರಿಚಯಿಸಿದರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು. ಧನುಷ್ ಶಾಸ್ತ್ರಿ ವಂದಿಸಿದರು.

ಉಡುಪಿ : ವಿಕಸಿತ ಭಾರತ ಸಂಕಲ್ಪ ಯಾತ್ರೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

Thumbnail
Posted On: 30 Nov 2023, 03:13 PM

ಉಡುಪಿ : ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಗುರುವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ಇದೇ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ವೀಕ್ಷಿಸಲಾಯಿತು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು. ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು. ಈ‌ ಸಂದರ್ಭ ಉಡುಪಿ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಮಹಾ ಪ್ರಬಂಧಕರಾದ ಪಂಡಿತ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.