Updated News From Kaup

ಡಿಸೆಂಬರ್ 24 : ಕುಲಾಲ ಸಂಘ ಹೆಬ್ರಿ ತಾಲೂಕು - ಪ್ರಥಮ ವರ್ಷದ ಕ್ರೀಡಾಕೂಟ

Thumbnail
Posted On: 19 Dec 2023, 06:16 PM

ಹೆಬ್ರಿ : ತಾಲೂಕು ಕುಲಾಲ ಬಾಂಧವರಿಗಾಗಿ ಡಿಸೆಂಬರ್ 24 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಬ್ರಿಯ ಮೈದಾನದಲ್ಲಿ ಪ್ರಥಮ ವರ್ಷದ ಕ್ರೀಡಾಕೂಟ ನಡೆಯಲಿದೆ. ಅಂದು ಬೆಳಿಗ್ಗೆ 8.30 ರಿಂದ ಕ್ರೀಡಾ ಕೂಟವು ಉದ್ಘಾಟನೆಗೊಂಡು ಸಂಜೆ 5 ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದು ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರ್ಮಾಳು : ಶ್ರೀನಿಧಿ ಮಹಿಳಾ ಮಂಡಳಿಯ 39ನೇ ವಾರ್ಷಿಕೋತ್ಸವ

Thumbnail
Posted On: 18 Dec 2023, 08:03 PM

ಎರ್ಮಾಳು : ಇಲ್ಲಿನ ಶ್ರೀನಿಧಿ ಮಹಿಳಾ ಮಂಡಳಿಯ 39 ನೇ ವಾರ್ಷಿಕೋತ್ಸವವು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಮಾಜಿ ಅಧ್ಯಕ್ಷೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಮಾತನಾಡಿ, ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯು ಕಲೆ, ಸಂಸ್ಕೃತಿಯ ರಾಯಭಾರಿಯಂತೆ ಕಾರ್ಯ ಚಟುವಟಿಕೆಯನ್ನು ನಡೆಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮನೆ ಮಾತಾಗಿ ಬೆಳೆದು ನಿಂತ ಸಂಸ್ಥೆಯಾಗಿದೆ. ಸಮಾಜಮುಖಿ ಚಟುವಟಿಕೆ, ಸಂಸ್ಕಾರ, ಸಂಸ್ಕೃತಿ, ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಇನ್ನಷ್ಟು ಪ್ರಭಾವಶಾಲಿಯಾಗಿ ಕಾರ್ಯೋನ್ಮುಖವಾಗಲಿ ಎಂದರು. ಕ.ಸಾ.ಪ. ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮಾತನಾಡಿ, ಸಮಾಜದ ಸಂಸ್ಕಾರಯುತ ಬೆಳವಣಿಗೆಗೆ ಮಾತೃಸ್ಥಾನವು ಮತ್ತಷ್ಟು ಜಾಗ್ರತಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಮಾತೆಯರೇ ಒಗ್ಗೂಡಿ ಬೆಳೆದು ನಿಂತ ಸಂಸ್ಥೆಯು ಸಮಾಜಕ್ಕೆ ಮಾತೃಸ್ಥಾನದಲ್ಲಿ ನಿಂತು ಮಾರ್ಗದರ್ಶ ಮಾಡಬೇಕಿದೆ ಎಂದರು. ಜಿ.ಪಂ. ಮಾಜಿ ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ ಮಾತನಾಡಿ, ಪ್ರತಿಭೆಗಳಿಗೆ ಉತ್ತಮ ಅವಕಾಶವನ್ನು ನೀಡುವ ಜೊತೆಗೆ ಸಮಾಜಕ್ಕೆ ಅತ್ಯುತ್ತಮ ಸಂದೇಶವನ್ನು ನೀಡುವ ಮಹಿಳಾ ಶಕ್ತಿಯಾಗಿ ಶ್ರೀನಿಧಿ ಮಹಿಳಾ ಮಂಡಳಿಯು ಸಮಾಜವನ್ನು ಉತ್ತಮವಾಗಿ ಕಟ್ಟುವಲ್ಲಿ ಮಹತ್ತರ ಕೊಡುಗೆಯನ್ನು ನೀಡಿರುವುದು ಶ್ಲಾಘನೀಯ ಎಂದರು. ಸಾಧಕರಾದ ಉಪನ್ಯಾಸಕಿ, ಮಂಗಳೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಎನ್‌ಎಸ್‌ಎಸ್‌ವಿಭಾಗಾಧಿಕಾರಿ ಸವಿತಾ ಎರ್ಮಾಳು, ಶೈಕ್ಷಣಿಕ ಸಾಧಕಿ ಹರ್ಷಾ ಜಿ. ರಾವ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ಚಂದ್ರಶೇಖರ್, ಶ್ರೀನಿಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ಅಮಣಿ ಕುಂದರ್, ಕಾರ್ಯದರ್ಶಿ ವಿಮಲಾ ಕೆ. ಸಾಲ್ಯಾನ್, ಕೋಶಾಧಿಕಾರಿ ಶಕುಂತಲಾ, ಜೊತೆ ಕಾರ್ಯದರ್ಶಿ ರೇಖಾ ಶೆಟ್ಟಿ, ಉಪಾಧ್ಯಕ್ಷೆ ಮಾಲತಿ ಜೆ. ಶೆಟ್ಟಿ ಇದ್ದರು. ಅಮಣಿ ಕುಂದರ್ ಸ್ವಾಗತಿಸಿದರು. ಶಕುಂತಲಾ ವಂದಿಸಿದರು. ಶಶಿಕಲಾ ನವೀನ್ ಬಹುಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಸುಪ್ರೀತಾ ಕಿಶೋರ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ ಮಾಜಿ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ ಸಮಾರಂಭವನ್ನು ನಿರೂಪಿಸಿದರು. ಶ್ರೀನಿಧಿ ಮಹಿಳಾ ಮಂಡಳಿಯ ಸದಸ್ಯೆಯರಿಂದ ಬಳಿಕ ನೃತ್ಯ ವೈಭವ ಮತ್ತು ಶೀಲಾ ಕೆ. ಶೆಟ್ಟಿ ವಿರಚಿತ ತುಳುವ ಬೀರೆರ್ ಕೋಟಿ ಚೆನ್ನಯೆರ್ ತುಳು ಐತಿಹಾಸಿಕ ನಾಟಕ ಪ್ರದರ್ಶನಗೊಂಡಿತು.

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ ಎಲ್ಲೂರು ಪಣಿಯೂರು - ವಾರ್ಷಿಕೋತ್ಸವ, ಶ್ರೀ ವಿಶ್ವಕರ್ಮ ಪೂಜೆ ಸಂಪನ್ನ

Thumbnail
Posted On: 18 Dec 2023, 06:02 PM

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಎಲ್ಲೂರು ಪಣಿಯೂರು ಇದರ ವಾರ್ಷಿಕೋತ್ಸವ ಮತ್ತು ಶ್ರೀ ವಿಶ್ವಕರ್ಮ ಪೂಜೆಯು ಆದಿತ್ಯವಾರದಂದು ಸಂಘದಲ್ಲಿ ನೆರವೇರಿತು. ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಮಾತನಾಡಿ ಸಂಘವು ಕೊಡುತ್ತಿರುವ ವಿದ್ಯಾರ್ಥಿ ವೇತನವು ಉತ್ತಮವಾದ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವಕರ್ಮ ಒಕ್ಕೂಟ (ರಿ.) ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಇದರ ಅಧ್ಯಕ್ಷ ಮಧು ಆಚಾರ್ಯ ಮಾತನಾಡಿ ಸಂಘದ ಸ್ವಂತ ಕಟ್ಟಡ ನಿರ್ಮಾಣದ ಯೋಜನೆಯಲ್ಲಿ ವಿಶ್ವಕರ್ಮ ಒಕ್ಕೂಟದ ಸಂಪೂರ್ಣ ಸಹಕಾರವು ಸಿಗಲಿದೆ ಎನ್ನುವ ಭರವಸೆ ನೀಡಿದರು. ಸಂಘದ ಅಧ್ಯಕ್ಷರಾದ ವೈ.ಕಿಶೋರ್ ಆಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಸಂಘದ ವ್ಯಾಪ್ತಿಯೊಳಗೆ ಬರುವ ಶಾಲೆಗಳಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ಮೂವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕಾಪು : ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ - ನಾಪತ್ತೆಯಾಗಿದ್ದ ಸಾಕು ಮಗಳು ಪತ್ತೆ ; ನಾಲ್ವರು ಆರೋಪಿಗಳು ಪೋಲಿಸ್ ವಶಕ್ಕೆ

Thumbnail
Posted On: 18 Dec 2023, 04:11 PM

ಕಾಪು : ಆತ್ಮಹತ್ಯೆ ಮಾಡಿಕೊಂಡಿದ್ದ ಕಾಪುವಿನ ಸಮಾಜ ಸೇವಕ‌ ಲೀಲಾಧರ ಶೆಟ್ಟಿ ದಂಪತಿಗಳ ನಾಪತ್ತೆಯಾಗಿದ್ದ ಸಾಕು‌ ಮಗಳನ್ನು, ನಾಲ್ವರು ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಕಾಪು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯ ಮಲಗುವ ಕೋಣೆಯಲ್ಲಿನ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರೋಪಿ ಗಿರೀಶ್ ವಿರುದ್ಧ ಫೋಕ್ಸೊ, ಅತ್ಯಾಚಾರ ಹಾಗೂ ಕಿಡ್ನಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್‌ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.

ಉಡುಪಿ : ಇತಿಹಾಸ ಪ್ರಸಿದ್ಧ ವರ್ತೆ ಕಲ್ಕುಡ ದೈವಸ್ಥಾನ, ಬಜೆ ತಂಗಾಣ : ಕಾಲಾವಧಿ ಸಿರಿ ಸಿಂಗಾರದ ನೇಮ ಸಂಪನ್ನ

Thumbnail
Posted On: 18 Dec 2023, 03:47 PM

ಉಡುಪಿ : ಇತಿಹಾಸ ಪ್ರಸಿದ್ಧ 110 ವರ್ಷಗಳ ಇತಿಹಾಸವಿರುವ ವರ್ತೆ ಕಲ್ಕುಡ ದೈವಸ್ಥಾನ, ಬಜೆ ತಂಗಾಣ ಇಲ್ಲಿಯ ಕಾಲಾವಧಿ ಸಿರಿಸಿಂಗಾರದ ನೇಮ ಶನಿವಾರ ಜರಗಿತು. ಸಂಜೆ ಭಜನೆ ಕಾರ್ಯಕ್ರಮ ಹಾಗೂ ರಾತ್ರಿ ಹೂವಿನ ಪೂಜೆ ದೈವದ ದರ್ಶನ ಸೇವೆ ಮಹಾ ಅನ್ನ ಸಂತರ್ಪಣೆ ತದನಂತರ ದೈವಗಳ ನೇಮ ಸೇವೆ ಜರಗಿತು. ಸನ್ಮಾನ : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಅನುಭವಿ ದೈವ ನರ್ತಕರಾದ ಬೀರು ಪಾಣರ, ಸಮಾಜ ಸೇವಕ, ದೈವಾರಾಧನೆ, ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿನೋದ್ ಶೆಟ್ಟಿ, ದೈವಾರಾಧನೆ ಕ್ಷೇತ್ರ ಹಾಗೂ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿರುವ ಹಿರಿಯರಾದ ಬಾಲಕೃಷ್ಣ ಶೆಟ್ಟಿ ಪೆರ್ಡೂರನ್ನು ತಂಗಾಣ ಕುಟುಂಬಸ್ಥರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮುಖ್ಯಸ್ಥರಾದ ಸುಧಾಕರ್ ಶೆಟ್ಟಿ ಕುಟುಂಬದ ಹಿರಿಯರಾದ ಸುಂದರ ಶೆಟ್ಟಿ ಹಾಗೂ ಕೃಷ್ಣ ಶೆಟ್ಟಿ, ಮೋಹನ ಶೆಟ್ಟಿ, ಸುರೇಶ್ ಶೆಟ್ಟಿ, ಗಣೇಶ ಶೆಟ್ಟಿ, ವಿಜಯ್ ಶೆಟ್ಟಿ, ಕೃಷ್ಣ ಪೂಜಾರಿ ಹಾಗೂ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆಜಮಾಡಿ : ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ - ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಪನ್ನ

Thumbnail
Posted On: 18 Dec 2023, 02:56 PM

ಹೆಜಮಾಡಿ : ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಮೆಂಡನ್ ಉದ್ಘಾಟಿಸಿದರು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲೆ ಎಂಬ ರಥ ನಡೆಸಲು ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯದವರ ಪಾತ್ರ ಬಹುಮುಖ್ಯ ಎಂದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ದಾನಿಗಳಾದ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶೇಷಗಿರಿ ರಾವ್, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಹೆಜಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸತೀಶ್ ಕೆ .ನಾಯಕ್, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉದ್ಯಮಿ ರಾಲ್ಫಿ ಡಿ'ಕೋಸ್ತ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರಾದ ಈಶ್ವರ್ ಎ. ಸ್ವಾಗತಿಸಿದರು. ಪ್ರೌಢಶಾಲಾ ಹಿರಿಯ ಶಿಕ್ಷಕಿ ಸಂಪಾವತಿ, ಕಾಲೇಜು ಪ್ರಾಂಶುಪಾಲ ಈಶ್ವರ್ ಎ. ವರದಿ ವಾಚಿಸಿದರು. ಸಹ ಶಿಕ್ಷಕರಾದ ಮಂಜುನಾಥ ಪಿ, ಅನಿತಾ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಸಹ ಶಿಕ್ಷಕಿ ಸರೋಜಾ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ದೀಪಾ ಎನ್ ಉಡುಪ ವಂದಿಸಿದರು. ಉಪನ್ಯಾಸಕ ವಿನ್ಸೆಂಟ್ ಡಿಸೋಜರವರ ಹಿನ್ನೆಲೆ ಸಂಗೀತದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ - 14 ನೇ ವಾರ್ಷಿಕೋತ್ಸವ ಸಂಪನ್ನ

Thumbnail
Posted On: 18 Dec 2023, 02:17 PM

ಪಡುಬಿದ್ರಿ : ಇಲ್ಲಿನ ಕರಾವಳಿ ಸ್ಟಾರ್ಸ್ ನಡಿಪಟ್ನ ಸಂಸ್ಥೆಯ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ಸಾಗರ್ ದರ್ಶಿನಿ ವೇದಿಕೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಕಾಡಿಪಟ್ನ ನಡಿಪಟ್ನ ವಿದ್ಯಾಪ್ರಚಾರಕ ಸಂಘದ ಅಧ್ಯಕ್ಷರಾದ ಸುಕುಮಾರ್ ಶ್ರೀಯನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನಡಿಪಟ್ನ ಮೊಗವೀರ ಸಭಾದ ಅಧ್ಯಕ್ಷ ಗಂಗಾಧರ ಕರ್ಕೇರ, ಕಾಡಿಪಟ್ನ ಮೊಗವೀರ ಸಭಾದ ಅಧ್ಯಕ್ಷ ಅಶೋಕ್ ಸಾಲಿಯಾನ್, ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಶರತ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ ಅಮೀನ್, ಬಂಟರ ಸಂಘ ಪಡುಬಿದ್ರಿ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಮಿಥುನ್ ಆರ್ ಹೆಗ್ಡೆ, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯ ಶರಣ್ ಕುಮಾರ್ ಮಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾಶ್ರೀ ಯತಿನ್ ಬಂಗೇರ, ಪಡುಬಿದ್ರಿ ಕಾಡಿಪಟ್ನ ನಡಿಪಟ್ನ ವಿದ್ಯಾ ಪ್ರಚಾರಕ ಸಂಘದ ಕಾರ್ಯದರ್ಶಿ ಹರೀಶ್ ಪುತ್ರನ್, ಮಂಗಳೂರಿನ ಅಮೃತ ವಿದ್ಯಾಲಯಂ ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಶನ್ ಕಾರ್ನಾಡ್ ಕಾರ್ಯದರ್ಶಿ ಪ್ರಶಾಂತ್ ಕಾಂಚನ್, ಎಂ ಎಸ್ ಗ್ರೂಪ್ ಪಡುಬಿದ್ರಿ ಮಾಲಿಕ ಮನ್ಸೂರ್ ಎಂ ಎಸ್, ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿ ಮುಖ್ಯ ಶಿಕ್ಷಕಿ ಪದ್ಮಶ್ರೀ, ಹಳ್ಳಿ ಮನೆ ರೆಸ್ಟೋರೆಂಟ್ ಮೂಳೂರು ಮಾಲಿಕರಾದ ನಯೇಶ್ ಶೆಟ್ಟಿ ಉಪಸ್ಥಿತರಿದ್ದರು. ಕರಾವಳಿ ಸ್ಟಾರ್ಸ್ ನಡಿಪಟ್ನದ ಸಂಸ್ಥಾಪಕ ಕಿರಣ್ ರಾಜ್ ಕರ್ಕೇರ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿಯಾದ ಸಂತೋಷ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷರಾದ ವಿಘ್ನೇಶ್ ರಾವ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ‌ ಸರಸ್ವತಿ ಕಲಾ ಕೇಂದ್ರದ ಸದಸ್ಯರಿಂದ ಶ್ರೀ ಕೊಲ್ಲೂರು ಮೂಕಾಂಬಿಕಾ ಮಹಾತ್ಮೆ ನೃತ್ಯ ವೈಭವ, ಅರುಣ್ ಕಾಪು ಅವರಿಂದ ಸಂಗೀತ ಸಂಜೆ, ಸಂಸ್ಥೆಯ ಸದಸ್ಯರಿಂದ ನೃತ್ಯ ವೈವಿಧ್ಯ ಮತ್ತು ಹರೀಶ್ ಪಡುಬಿದ್ರಿಯವರ ತೊಟ್ಟಿಲ್ ನಾಟಕ ಪ್ರದರ್ಶನಗೊಂಡಿತು.

ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನ - 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ; ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 18 Dec 2023, 07:11 AM

ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7, ಆದಿತ್ಯವಾರದಂದು ನಡೆಯಲಿರುವ 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಕಾಪು ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಉದ್ಯಮಿ ಶ್ರೀಧರ ಆಚಾರ್ಯ ಚಂದ್ರನಗರ ಬಿಡುಗಡೆಗೊಳಿಸಿದರು. ಜನವರಿ 7, ಆದಿತ್ಯವಾರದಂದು ಬೆಳಗ್ಗೆ 10 ಗಂಟೆಗೆ ಮಾಣಿಯೂರು ಶ್ರೀ ಸೂರ್ಯಕಾಂತ ಆಚಾರ್ಯ ನೇತೃತ್ವದಲ್ಲಿ ಕಾಪು ಬಂಗ್ಲೆ ಮೈದಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯ ನಡೆಯಲಿದ್ದು, ಮಧ್ಯಾಹ್ನ ಗಂಟೆ 12:30 ರಿಂದ ಶ್ರೀ ಲಕ್ಷ್ಮೀಜನಾರ್ದನ ಮಹಿಳಾ ಭಜನಾ ಮಂಡಳಿ ಕಾಪು ಇವರಿಂದ ಭಜನಾ ಕಾರ್ಯಕ್ರಮವೂ ಜರಗಲಿದೆ. ತದನಂತರ ಅನ್ನಸಂತರ್ಪಣೆ ಜರಗಲಿದೆ. ಈ ಸಂದರ್ಭ ಬಳಗದ ಅಧ್ಯಕ್ಷ ಜಯ ಶೆಟ್ಟಿ, ಸದಸ್ಯರಾದ ರವೀಂದ್ರ ಎಂ ಸತೀಶ್ ಕಲ್ಯಾ, ನಾಗರಾಜ್ ಹೆಚ್ ಕೆ., ರಾಘು ಕಲ್ಯಾಲು, ಸುನಿಲ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ, ಲವ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಬಿ.ಜೆ.ಎಂ ಆಡಳಿತ ಸಮಿತಿ - ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಸನ್ಮಾನ

Thumbnail
Posted On: 18 Dec 2023, 07:08 AM

ಕಾಪು : ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರಿಗೆ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು-ಮಲ್ಲಾರು ಆಡಳಿತ ಸಮಿತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಎಂ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಅಲ್-ಖಾಮಿಲ್, ಫಾರೂಕ್ ಚಂದ್ರನಗರ ನಮ್ಮ ಜಮಾತ್ ಕಮಿಟಿಯಲ್ಲಿ ಹಲವು ಹುದ್ದೆ ಪಡೆದು ಉತ್ತಮ ಕೆಲಸ ಮಾಡಿದ್ದಾರೆ ಇದೀಗ ಸಮಾಜ ಸೇವೆಯಲ್ಲಿ ಉತ್ತಮ ಸೇವೆ ನೀಡಿ ವಿದೇಶದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರಿಯ ಅವಾರ್ಡ್ ಪಡೆದದ್ದು ನಮ್ಮ ಜಮಾತಿಗೆ ಹೆಮ್ಮೆ ಎಂದರು. ಈ ಸಂದರ್ಭದಲ್ಲಿ ಬಿಜೆಎಂ ಅಧ್ಯಕ್ಷರಾದ ಶಾಬನ್ ಕರಂದಾಡಿ,ಉಪಾಧ್ಯಕ್ಷರಾದ ಅಬ್ದುಲ್ಲ ಪೊಲಿಪು ,ಪ್ರದಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಲ್ಲಾರು,ಕಾರ್ಯದರ್ಶಿ ಎಂ.ಕೆ ಇಬ್ರಾಹಿಂ ಮಜೂರು,ಸಹ ಕಾರ್ಯದರ್ಶಿ ಶರ್ಫುದ್ದಿನ್ ಕೊಂಬಗುಡ್ಡೆ, ಕೋಶಾಧಿಕಾರಿ ರಫೀಕ್ ಪಕೀರಣಕಟ್ಟೆ, ಜಮಾತ್ ಸದಸ್ಯರಾದ ಶರ್ಫುದ್ದಿನ್ ಶೇಕ್ ಮಜೂರು,ಶಾಬಾನ್ ಮಜೂರು,ಅಬ್ದುಲ್ಲ ಚಂದ್ರನಗರ, ಮಾಜಿ ಅಧ್ಯಕ್ಷರಾದ ಹಾಜಬ್ಬ ಮೊಯಿದಿನ್ ಶಿರ್ವ, ಮೊಯಿದಿನ್ ,ರಝಕ್ ಕರಂದಾಡಿ, ಹಸನಬ್ಬ ಮಜೂರು, ಮಾಜಿ ಪ್ರ.ಕಾರ್ಯದರ್ಶಿ ಶಂಶುದ್ಧಿನ್ ಕರಂದಾಡಿ, ರಝಕ್ ಮಲ್ಲಾರು, ನಜಿರ್ ಮಜೂರು,ಜಮಾತ್ ಸಮಿತಿಯ ಉಸ್ತಾದರುಗಳು, ತಕ್ವಿಯತುಲ್ ಯಂಗ್ ಮೆನ್ಸ್ ಸಮಿತಿಯವರು, ಸಿರಾಜುಲ್ ಹುದಾ ದಫ್ ಸಮಿತಿಯವರು, ಸ್ವಲಾತ್ ಸಮಿತಿ ಕೊಂಬಗುಡ್ಡೆ ಸಮಿತಿಯವರು, ಹಾಗೂ ಜಮಾತಿಗರು ಇನ್ನಿತರರು ಉಪಸ್ಥಿತರಿದ್ದರು.

ಉಡುಪಿ : ಬನ್ನಂಜೆ ಬಾಬು ಅಮೀನ್ 80 - ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ

Thumbnail
Posted On: 17 Dec 2023, 11:05 AM

ಉಡುಪಿ : ಜಾನಪದ ಸಾಹಿತ್ಯ ಲೋಕದಲ್ಲಿ 21 ಕೃತಿಗಳನ್ನು ನೀಡಿದ ಬನ್ನಂಜೆ ಬಾಬು ಅಮೀನ್ ರವರಿಂದ ಮತ್ತಷ್ಟು ಕೃತಿಗಳು ಮೂಡಿ ಬರಲಿ. ಅವರ ಸಾರ್ವಕಾಲಿಕ ಚಿಂತನೆಯ ಕೃತಿಗಳು ನಮಗೆಲ್ಲರಿಗೂ ಆದರ್ಶ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ. ಶಂಕರ್ ಹೇಳಿದರು. ಅವರು ರವಿವಾರ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಖ್ಯಾತ ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ 80 ತುಂಬುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ವತಿಯಿಂದ ಜರಗಿದ ಅಭಿನಂದನೆ ಕಾರ್ಯಕ್ರಮ 'ಸಿರಿ ತುಪ್ಪೆ' ಯನ್ನು ತುಳಸಿ ಕಟ್ಟೆಯ ತುಳಸಿ ಗಿಡಕ್ಕೆ ತೆನೆ ಕಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬನ್ನಂಜೆಯವರ 'ತುಳುನಾಡ ಸುತ್ತಮುತ್ತ' ಹಾಗೂ 'ಗರೋಡಿ ಒಂದು ಚಿಂತನೆ' ಎಂಬ ಎರಡು ಪುಸ್ತಕಗಳ ಅನಾವರಣವನ್ನು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ರೋಹಿಣಿ ಬಿಡುಗಡೆಗೊಳಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟು ಅವರ ಡೋಲು ವಾದನ, ಎಡ್ಮೇರಿನ ಬೊಗ್ಗು ಪರವರಿಂದ ಪಾಡ್ದನ ನೆರವೇರಿತು. ಸಭಾಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ, ವಿವಿಧ ಗೋಷ್ಠಿ, ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಮುಂದುವರಿಯಿತು. ಜಾನಪದ ವಿದ್ವಾಂಸ, ಸಾಹಿತಿ ಬನ್ನಂಜೆ ಬಾಬು ಅಮೀನ್, ಸಾಹಿತಿ ಬಿ.ಎಂ.ರೋಹಿಣಿ, ಅಕ್ಷಯ ಮಾಸ ಪತ್ರಿಕೆ ಸಂಪಾದಕ ಹರೀಶ್ ಹೆಜಮಾಡಿ, ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಘುನಾಥ ಮಾಬಿಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಭಾಸ್ಕರ್ ಸ್ವಾಗತಿಸಿದರು.