Updated News From Kaup
ಕಟಪಾಡಿ : ಅಕ್ಟೋಬರ್ 15 ರಿಂದ 24ರ ವರೆಗೆ ಉಚಿತ ಪ್ರಾಣ ಯೋಗ ಶಿಬಿರ
Posted On: 14-10-2023 07:50AM
ಕಟಪಾಡಿ : ಪತಂಜಲಿ ಯೋಗ ಸಮಿತಿ ಉಡುಪಿ, ಕಟಪಾಡಿ ಕಕ್ಷೆ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅಕ್ಟೋಬರ್ 15 ರಿಂದ 24ರ ವರೆಗೆ 10 ದಿನಗಳ ಕಾಲ ಬೆಳಿಗ್ಗೆ 5.30ರಿಂದ 6.45 ರತನಕ ಉಚಿತ ಪ್ರಾಣ ಯೋಗ ಶಿಬಿರವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಹೆಜಮಾಡಿ : ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿ - ತಪ್ಪಿದ ಅನಾಹುತ
Posted On: 13-10-2023 11:38PM
ಹೆಜಮಾಡಿ : ದಾರಿಯಲ್ಲಿ ಏನೇ ಆದರು ನಮಗ್ಯಾಕೆ ಎನ್ನುವ ಈ ಕಾಲದಲ್ಲಿ ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿಯನ್ನು ನೋಡಿದ ಕೂಡಲೇ ಸಾಮಾಜಿಕ ಕಾರ್ಯಕರ್ತನೋರ್ವ ಮೆಸ್ಕಾಂಗೆ ಮಾಹಿತಿ ನೀಡಿ, ತಕ್ಷಣ ಕಾರ್ಯಪ್ರವೃತ್ತನಾದ ಇಲಾಖೆ ಸಿಬ್ಬಂದಿ ಆಗಬಹುದಾದ ಅನಾಹುತ ತಪ್ಪಿಸಿದ ಘಟನೆ ಶುಕ್ರವಾರ ತಡರಾತ್ರಿ ಹೆಜಮಾಡಿಯಲ್ಲಿ ನಡೆದಿದೆ.
ಉಡುಪಿ : ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದೆಂದು ಮನವಿ
Posted On: 13-10-2023 09:06PM
ಉಡುಪಿ : ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಲಿಮಾರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Posted On: 13-10-2023 07:20PM
ಪಲಿಮಾರು : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ತಂದೆ ತಾಯಿಯ ಪ್ರೀತಿ ಹಾಗೂ ತ್ಯಾಗವನ್ನು ಅರ್ಥ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಶಿರ್ವ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಕ್ಟೋಬರ್ 15 - 24 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
Posted On: 13-10-2023 06:30PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.15ರಂದು ಭಾನುವಾರ ಬೆಳಿಗ್ಗೆ ಗಂಟೆ 09:09ಕ್ಕೆ ಸರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ನವಶಕ್ತಿ ವೈಭವ ವೇಷ ಭೂಷಣ/ ನೃತ್ಯರೂಪಕ ಸ್ಪರ್ಧೆಯೊಂದಿಗೆ ಮೊದಲ್ಗೊಂಡು ಅ. 24 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವವು ಜರಗಲಿದೆ. ಇದರೊಂದಿಗೆ ಅ. 17ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸಂಪನ್ನಗೊಳ್ಳಲಿದೆ.
ಶಿರ್ವ : ಮೂಡುಬೆಳ್ಳೆ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ
Posted On: 13-10-2023 05:09PM
ಶಿರ್ವ : ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಡುಬೆಳ್ಳೆ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಅ.13ರ ಶುಕ್ರವಾರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಅಕ್ಟೋಬರ್ 16 : ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ
Posted On: 13-10-2023 07:30AM
ಕಾಪು : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅಕ್ಟೋಬರ್ 16 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬಂಟಕಲ್ಲು : ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ
Posted On: 12-10-2023 05:58PM
ಬಂಟಕಲ್ಲು : ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದೇವಿಯ ಸನ್ನಿಧಿಯಲ್ಲಿ ಬಂಟಕಲ್ಲಿನಲ್ಲಿ ನಡೆಯಲಿರುವ ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆಗೊಳಿಸುವುದು ಸಂತಸ ತಂದಿದೆ. ಸಮ್ಮೇಳನವು ನಿರ್ವಿಘ್ನವಾಗಿ ಜರುಗಲಿ ಎಂದು ಶ್ರೀದುರ್ಗಾಪರಮೇಶ್ವರೀ ದೇವಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಲೆ ನುಡಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನವೆಂಬರ್ ೪, ಶನಿವಾರ ಜರುಗಲಿರುವ "ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ"ದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಉಚ್ಚಿಲ ದಸರಾ ವೈಭವ : ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 - ಪೋಸ್ಟರ್ ಬಿಡುಗಡೆ
Posted On: 12-10-2023 05:01PM
ಉಚ್ಚಿಲ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ ಆಶ್ರಯದಲ್ಲಿ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ ಸಹಯೋಗದೊಂದಿಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಉಚ್ಚಿಲ ದಸರಾ ವೈಭವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 ಪೋಸ್ಟರನ್ನು ಗುರುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬಿಡುಗಡೆಗೊಳಿಸಿದರು.
ಶಿರ್ವ : ಮೂಡುಬೆಳ್ಳೆ ಯುವತಿ ನಾಪತ್ತೆ
Posted On: 12-10-2023 02:21PM
ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
