Updated News From Kaup

ಪಲಿಮಾರು : ಸುವರ್ಣ ಪ್ರತಿಷ್ಠಾನ ಕರ್ನಿರೆ - ಶೈಕ್ಷಣಿಕ ನೆರವು ; ಯಕ್ಷ ಕಲಾರಾಧನೆ ; ಸನ್ಮಾನ

Thumbnail
Posted On: 27 Jan 2024, 06:53 AM

ಪಲಿಮಾರು : ಸುವರ್ಣ ಪ್ರತಿಷ್ಠಾನ ಕರ್ನಿರೆ ಇವರಿಂದ 11ನೇ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ನೆರವು, ಯಕ್ಷ ಕಲಾರಾಧನೆ ಮತ್ತು ಹಿರಿಯ ಕಲಾವಿದರ ಸನ್ಮಾನ ಕಾರ್ಯಕ್ರಮ ಜರಗಿತು. ಕರ್ನಿರೆ ಜಾರಂದಾಯ ದೈವದ ಗಡುವಾಡು ಬಳಿ ಕೊಪ್ಪಳ ತೋಟದಲ್ಲಿ ದುಬೈ ನಿವಾಸಿ- ಹವ್ಯಾಸಿ ಯಕ್ಷಗಾನ ವೇಷಧಾರಿ ಪ್ರಭಾಕರ ಡಿ. ಸುವರ್ಣ ಮತ್ತು ಕುಟುಂಬಿಕರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಸನ್ಮಾನ/ಶೈಕ್ಷಣಿಕ ನೆರವು : ಯಕ್ಷಗಾನ ವಿದ್ವಾಂಸರಾದ ಡಾ.ಎಂ. ಪ್ರಭಾಕರ ಜೋಶಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಅರ್ಥಧಾರಿ, ಸಂಘಟಕರಾದ ಅಶೋಕ ಭಟ್‌, ಜಬ್ಬಾರ್ ಸಮೋ ಸಂಪಾಜೆ, ವೇಷಧಾರಿಗಳಾದ ಸರಪಾಡಿ ಅಶೋಕ ಶೆಟ್ಟಿ, ಡಿ.ಮನೋಹರ ಕುಮಾ‌ರ್, ಶಶಿಕಾಂತ ಶೆಟ್ಟಿ ಕಾರ್ಕಳ ಹಾಗೂ ಯಕ್ಷಗಾನ, ನೃತ್ಯ ಕಲಾವಿದೆ ಸುಮಂಗಲಾ ರತ್ನಾಕರ್ ರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ ನಿಧಿಯನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ತೆಂಕುತಿಟ್ಟಿನ ವಿವಿಧ ಮೇಳಗಳ ಹೆಸರಾಂತ ಕಲಾವಿದರಿಂದ 'ಶ್ರೀಮತಿ ಪರಿಣಯ - ಸಮಗ್ರ ಭೀಷ್ಮ' ಯಕ್ಷಗಾನ ಬಯಲಾಟ ನಡೆಯಿತು. ಈ ಸಂದರ್ಭ ಸುವರ್ಣ ಪ್ರತಿಷ್ಠಾನ ಕರ್ನಿರೆ ಅಧ್ಯಕ್ಷ ಪ್ರಭಾಕರ ಡಿ.ಸುವರ್ಣ ಮತ್ತು ಕುಟುಂಬ ವರ್ಗ, ಸಂಯೋಜಕರಾದ ಬಿ. ಜನಾರ್ದನ ಅಮ್ಮುಂಜೆ ಮತ್ತಿತರರು ಉಪಸ್ಥಿತರಿದ್ದರು.

ಬಂಟಕಲ್ಲು : ಸನ್ ಶೈನ್ ಸೀನಿಯರ್ ಚೇಂಬರ್ ಉದ್ಘಾಟನೆ

Thumbnail
Posted On: 26 Jan 2024, 10:30 PM

ಬಂಟಕಲ್ಲು : ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್ ನಿಂದ ಪ್ರವರ್ತಿಸಲ್ಪಟ್ಟ ಬಂಟಕಲ್ ಸನ್ ಶೈನ್ ಸೀನಿಯರ್ ಚೇಂಬರ್ ನ್ನು ಸೀನಿಯರ್ ಚೇಂಬರ್ ನ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ವರ್ಗಿಸ್ ವೈದನ್ ರವರು ಉದ್ಘಾಟಿಸಿದರು. ಸ್ಥಾಪಕ ಅಧ್ಯಕ್ಷರಾಗಿ ಸಂದೀಪ್ ಬಂಗೇರ, ಸ್ಥಾಪಕ ಕಾರ್ಯದರ್ಶಿಯಾಗಿ ರಮೇಶ್ ಬಂಟಕಲ್, ಸ್ಥಾಪಕ ಕೋಶಾಧಿಕಾರಿಯಾಗಿ ವಿಗ್ನೇಶ್ ಶೆಟ್ಟಿ ಮತ್ತು 20 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಉಡುಪಿ ಟೆಂಪಲ್ ಸಿಟಿಯ ಅಧ್ಯಕ್ಷರಾದ ಸೀನಿಯರ್ ಆಲ್ವಿನ್ ಮೆನೆಜಸ್, ರಾಷ್ಟ್ರೀಯ ಉಪಾಧ್ಯಕ್ಷರಾದ ಸೀನಿಯರ್ ನವೀನ್ ಅಮೀನ್, ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಸೀನಿಯರ್ ಚಿತ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಎರ್ಮಾಳು ಬಡಾ ಓಂ ಸಾಯಿ ಫ್ರೆಂಡ್ಸ್ : ಭಜನೆ, ಕರ ಸೇವಕರಿಗೆ ಸನ್ಮಾನ, ಅನ್ನಸಂತರ್ಪಣೆ

Thumbnail
Posted On: 23 Jan 2024, 06:40 PM

ಎರ್ಮಾಳು : ಓಂ ಸಾಯಿ ಫ್ರೆಂಡ್ಸ್ ಎರ್ಮಾಳು ಬಡಾ ವತಿಯಿಂದ ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ಕಾಯ೯ದ ನಿಮಿತ್ತ ಭಜನೆ, ಕರ ಸೇವಕರಿಗೆ ಸನ್ಮಾನ, ಅನ್ನಸಂತರ್ಪಣೆ ಜರಗಿತು. ಎರ್ಮಾಳು ಗರೋಡಿ ಅರ್ಚಕರಾದ ಸದಾನಂದ ನಾಯ್ಗರು ಪೂಜಾ ಕೈಂಕರ್ಯ ನೆರವೇರಿಸಿದರು. ಸನ್ಮಾನ : ಕರ ಸೇವಕರಾದ ವಸಂತ್ ದೇವಾಡಿಗ, ಸದಾನಂದ ಶ್ರೀಗಾರ್, ದಿವಂಗತ ಸುರೇಶ್ ಪರವಾಗಿ ಅವರ ತಾಯಿ ಪುಟ್ಟಮ್ಮರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಓಂ ಸಾಯಿ ಫ್ರೆಂಡ್ಸ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ : ಸುಂದರ್ ಪೂಜಾರಿ ಮೂಡುಕುಕ್ಕುಡೆಯವರಿಗೆ ವಲ್ಡ್೯ ಪ್ರೆಸಿಡೆಂಟ್ ಎಪ್ರಿಸಿಯೇಶನ್ ಪ್ರಶಸ್ತಿ

Thumbnail
Posted On: 23 Jan 2024, 06:35 PM

ಉಡುಪಿ : ತಿರುವನಂತಪುರದ ಅಲ್ಸಾಜ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 3 ದಿನದ ಅಂತರಾಷ್ಟ್ರೀಯ ಜಯಂಟ್ಸ್ ಸಮ್ಮೇಳನದಲ್ಲಿ ಕಳೆದ 2023ರ ಸಾಲಿನಲ್ಲಿ ನಡೆಸಿದ ಸಮಾಜಮುಖಿ ಕಾರ್ಯಕ್ರಮಗಳಿಗಾಗಿ ಬ್ರಹ್ಮಾವರ ಜಯಂಟ್ಸ್ ನ ಮಾಜಿ ಅಧ್ಯಕ್ಷರಾದ ಸುಂದರ್ ಪೂಜಾರಿ ಮೂಡುಕುಕ್ಕುಡೆ ಯವರಿಗೆ ರಾಷ್ಟ್ರಮತ್ತು ರಾಜ್ಯ ಮಟ್ಟದ ವಲ್ಡ್೯ ಪ್ರೆಸಿಡೆoಟ್ ಎಪ್ರಿಸಿಯೇಶನ್ ಪ್ರಶಸ್ತಿಯನ್ನು ನೀಡಲಾಯಿತು. ಈ ಕಾಯ೯ಕ್ರಮದಲ್ಲಿ ಜಯಂಟ್ಸ್ ಅಂತರಾಷ್ಟ್ರೀಯ ಅಧ್ಯಕ್ಷೆ ಶೈನಾ, ಉಪಾಧ್ಯಕ್ಷ ನೂರುದ್ದೀನ್, ಕೇಂದ್ರ ಸಮಿತಿ ಸದಸ್ಯ ದಿನಕರ್ ಅಮೀನ್ ಮುಂತಾದವರಿದ್ದರು.

ಜ.24-25: ಸಾಸ್ತಾನ ಶ್ರೀ ನಾಲ್ಕು ಪಾದ ಹ್ಯಾಗೂಳಿ, ಕೋಳೆರಾಯ, ಪರಿವಾರ ದೈವಗಳ ದೈವಸ್ಥಾನದ ವಾರ್ಷಿಕ ಗೆಂಡೆ ಸೇವೆ, ಕೋಲಸೇವೆ

Thumbnail
Posted On: 23 Jan 2024, 06:24 PM

ಸಾಸ್ತಾನ : ಉಡುಪಿ ಜಿಲ್ಲೆಯ ಸಾಸ್ತಾನ ಕೋಡಿತಲೆಯ ಶ್ರೀ ನಾಲ್ಕುಪಾದ ಹ್ಯಾಗೂಳಿ ಹಾಗೂ ಕೋಳೆರಾಯ ಮತ್ತು ಪರಿವಾರ ದೈವಗಳ ದೈವಸ್ಥಾನದ ವಾರ್ಷಿಕ ಜಾತ್ರೆಯ ಗೆಂಡ ಸೇವೆ ಹಾಗೂ ಕೋಲವು ಜ. 24 ಮತ್ತು ಜ. 25 ರಂದು ನಡೆಯಲಿದೆ. ಜ.23 ರಿಂದ ಪಂಚ ವಿಂಶತಿ ಕಲಶ ಸ್ಥಾಪನೆ, ಅಧಿವಾಸ ಹೋಮ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡು ಜ.24 ರಂದು ರಾತ್ರಿ 8 ಗಂಟೆಗೆ ‘ಗೆಂಡಸೇವೆ’ ಮತ್ತು ಸೇವಾ ಕರ್ತರಿಂದ ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಮತ್ತು ಕೋಲ ಸೇವೆ ನಡೆಯಲಿದೆ. ಜ.25 ರಂದು ಮಧ್ಯಾಹ್ನ ಹರಕೆಯ ರೂಪದಲ್ಲಿ ‘ತುಲಾಭಾರ ಸೇವೆ’ ಹಾಗೂ ದೇವಸ್ಥಾನದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ. ಜ.21ರಂದು ಹ್ಯಾಗೂಳಿ, ಪಂಜುರ್ಲಿ ದೈವಗಳಿಗೆ ಸಮರ್ಪಣೆ ಮಾಡಲಿರುವ ಚಿನ್ನದ ಮುಖವಾಡದ ಮೆರವಣಿಗೆ ಜರಗಿತ್ತು.

ಕುತ್ಯಾರು : ಶ್ರೀ ರಾಮಾಯಣ ಕಥಾ ಮಾಲಿಕೆ ಸಮಾರೋಪ

Thumbnail
Posted On: 23 Jan 2024, 06:12 PM

ಕುತ್ಯಾರು : ಆನೆಗೊಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು ಇಲ್ಲಿ ಜನವರಿ 10 ರಿಂದ 23ರವರೆಗೆ ರಾಮಾಯಣದ ಏಳು ಕಾಂಡಗಳ ಕಥೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಶ್ರೀ ರಾಮಾಯಣ ಕಥಾ ಮಾಲಿಕೆಯನ್ನು ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ಕಥಾ ನಿರೂಪಣೆ ಮಾಡಿದ ಪಾಂಡುರಂಗ ಶಾನುಬಾಗ್ ಇವರನ್ನು ಆಡಳಿತ ಮಂಡಳಿ ಉಪಾಧ್ಯಕ್ಷ ವಿವೇಕ ಆಚಾರ್ಯ ಮಂಚಕಲ್ ಮತ್ತು ಶಾಲಾ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶಿಕ್ಷಕ ವೃಂದದವರು ಮತ್ತು ಆಡಳಿತ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸತೀಶ್ ಕುತ್ಯಾರು ಸ್ವಾಗತಿಸಿ ಸಂಸ್ಥೆಯ ಪ್ರಾಂಶುಪಾಲರಾದ ಸಂಗೀತ ರಾವ್ ವಂದಿಸಿದರು.

ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ : ಕಾಪು ಮಾರಿಯಮ್ಮ ಸನ್ನಿದಾನದಲ್ಲಿ ವಿಶೇಷ ಪೂಜೆ

Thumbnail
Posted On: 23 Jan 2024, 05:36 PM

ಕಾಪು : ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆ ಸಂದರ್ಭ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ (ಶ್ರೀ ಹೊಸ ಮಾರಿಗುಡಿ ದೇವಸ್ಥಾನ) ಇಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬೈದಶ್ರೀ ಭಜನಾ ತಂಡ ಬಡಾ ಎರ್ಮಾಳು ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ರವೀಂದ್ರ ಎಮ್, ಬಾಬು ಮಲ್ಲಾರ್, ಶೈಲಜಾ ಪುರುಷೋತ್ತಮ್, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ : ಶ್ರೀ ವೆಂಕಟರಮಣ ದೇವಳ - ವಿವಿಧ ಧಾರ್ಮಿಕ ಕಾರ್ಯ ; ನಗರ ಸಂಕೀರ್ತನೆ

Thumbnail
Posted On: 22 Jan 2024, 10:25 PM

ಪಡುಬಿದ್ರಿ : ಇಲ್ಲಿನ ಶ್ರೀ ವೆಂಕಟರಮಣ ದೇವಳದಲ್ಲಿ ಅಯೋಧ್ಯಾ ಮಂದಿರ ಉದ್ಘಾಟನಾ ಉತ್ಸವ ಪ್ರಯುಕ್ತ ಜರಗಿದ ಶ್ರೀ ರಾಮೋತ್ಸವ - ರಾಮನಾಮ ತಾರಕ ಹವನ, ಉತ್ಸವ ಭಜನೆ ಪ್ರಾಥ:ಕಾಲದಿಂದಲೇ ಪ್ರಾರಂಭವಾಗಿ ಸಂಪನ್ನಗೊಂಡಿತು. ಸಾಯಂಕಾಲ ದೇವಳದಿಂದ ರಾಮನ ಪಲ್ಲಕ್ಕಿಯೊಂದಿಗೆ ನಗರ ಸಂಕೀರ್ತನೆ ಜರಗಿತು. ಈ‌ ಕಾರ್ಯದಲ್ಲಿ ನೂರಾರು ಭಜಕರು, ದೇವಳದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ : ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ಕಾಯ೯ - ಉಚಿತ ವೈದ್ಯಕೀಯ ಶಿಬಿರ

Thumbnail
Posted On: 22 Jan 2024, 10:09 PM

ಉಡುಪಿ : ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ಕಾಯ೯ದ ನಿಮಿತ್ತ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನ್ ಔಷಧಿ ಕೇಂದ್ರದ ವತಿಯಿಂದ ಸೋಮವಾರ ಉಚಿತ ವೈದ್ಯಕೀಯ ಶಿಬಿರ ಜನ ಔಷಧಿ ಕೇಂದ್ರದ ವಠಾರದಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ ಲೋoಬಾಡ್೯ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಇದರ ವೈದ್ಯಾಧಿಕಾರಿ ಡಾ| ಗಣೇಶ್ ಕಾಮತ್, ಮತ್ತು ಇತರ ವೈದ್ಯರು ಭಾಗವಹಿಸಿದ್ದರು. ಮಾಹೆ ಮಣಿಪಾಲದ ಡಾI ಸವಿತಾ ಬಾಸ್ರಿ, ಡಾI ಆದಿತ್ಯ ಶೆಟ್ವಿ, ಡಾ| ಶ್ರೀಧರ ಡಿ, ಡಾ| ಅಂಕಿತಾ ಶೆಟ್ಟಿ ಮಾಹಿತಿ ನೀಡಿದರು. ಜಯಂಟ್ಸ್ ಪದಾಧಿಕಾರಿಗಳಾದ ಸುಂದರ ಪೂಜಾರಿ, ವಿವೇಕಾನಂದ ಕಾಮತ್, ಶ್ರೀನಾಥ್, ವೈದ್ಯಕೀಯ ಪ್ರತಿನಿಧಿ ಸಂಘದ ಕಾಯ೯ದಶಿ೯ ಪ್ರಸನ್ನ ಕಾರಂತ, ಮಿಲ್ಟನ್, ಅಣ್ಣಯ್ಯದಾಸ್, ರೋಹಿ ರತ್ನಾಕರ ಉಪಸ್ಥಿತರಿದ್ದರು.

ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ - ವಿಶೇಷ ಪೂಜಾ ಕಾರ್ಯಕ್ರಮ

Thumbnail
Posted On: 22 Jan 2024, 10:04 PM

ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ ಇವರಿಂದ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಜರಗಿತು. ಈ ಸಂದರ್ಭ ‌ಸಂಸ್ಥೆಯ ಪ್ರಮುಖರಾದ ಕಿರಣ್ ರಾಜ್ ಕರ್ಕೇರ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.