Updated News From Kaup

ಅಕ್ಟೋಬರ್ 15 ರಿಂದ 24 : ಉಚ್ಚಿಲ ದಸರಾ - 2023

Posted On: 09-10-2023 06:51PM

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಬಾರಿಯೂ ಉಚ್ಚಿಲ ದಸರಾವು ಅಕ್ಟೋಬರ್ 15 ರಿಂದ 24 ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ಹೇಳಿದರು. ಅವರು ಸೋಮವಾರ ಉಚ್ಚಿಲ ಮೊಗವೀರ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ ನಿಧನ

Posted On: 09-10-2023 03:02PM

ಉಡುಪಿ : ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ (51) ಅವರು ಅಲ್ಪ ಕಾಲದ ಅಸೌಖ್ಯದಿಂದ ಅಕ್ಟೋಬರ್ 8 ರಂದು ನಿಧನರಾದರು.

ಉಡುಪಿ : ತುಳು ಲಿಪಿ ನಾಮ ಫಲಕ ಅನಾವರಣ

Posted On: 09-10-2023 02:43PM

ಉಡುಪಿ : ಜೈ ತುಲುನಾಡ್(ರಿ.) ಉಡುಪಿ ವಲಯದ ವತಿಯಿಂದ ಮಣಿಪಾಲದ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಲಾದ ತುಳುನಾಡಿನ ನೆಲದ ಭಾಷೆಯಾದ ತುಳು ಲಿಪಿಯ ನಾಮಫಲಕ ವನ್ನು ತುಳುಕೂಟ(ರಿ.) ಉಡುಪಿ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಇವರು ಅನಾವರಣಗೊಳಿಸಿದರು.

ಕಾಪು : ಮಲ್ಲಾರು ಶಾಲೆಯ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Posted On: 09-10-2023 02:17PM

ಕಾಪು : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ನಡೆದ ಇನ್‌ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಪು ತಾಲೂಕಿನ ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಬೇಬಿ ರಿಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಭೆ

Posted On: 08-10-2023 06:25PM

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಇಂದು ಸಾರ್ವಜನಿಕ ಸಭೆಯು ಜರಗಿತು.

ಪಡುಬಿದ್ರಿ : ಸಾಂತೂರು ವ್ಯಕ್ತಿ ನಾಪತ್ತೆ

Posted On: 08-10-2023 12:34PM

ಪಡುಬಿದ್ರಿ : ಇಲ್ಲಿನ ಸಾಂತೂರು ಗ್ರಾಮದ ನಿವಾಸಿ ಸುರೇಶ್ ಮೂಲ್ಯ ರವರು ಅಕ್ಟೋಬರ್ 5 ರಿಂದ ನಾಪತ್ತೆಯಾಗಿರುವರು,ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿದು ಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಲು ಕೊರಲಾಗಿದೆ.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಜನಪರ ಕಾರ್ಯ ಶ್ಲಾಘನೀಯ - ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು

Posted On: 08-10-2023 11:40AM

ಪಡುಬಿದ್ರಿ : ಈ ಭಾಗದಲ್ಲಿ ಯಶಸ್ಸು ಕಂಡ ಸಹಕಾರಿ‌ ಸಂಸ್ಥೆ ಪಡುಬಿದ್ರಿ ಸೊಸೈಟಿಯು ಲಾಭದ ಉದ್ದೇಶ ಹೊಂದದೆ ಜನಪರ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಕಂಡಿದೆ. ಅದರಲ್ಲೂ ಗ್ರಾಮದ ಜನರ ಆರೋಗ್ಯದ ಬಗೆಯೂ ಕಾಳಜಿ ಹೊಂದಿದೆ. ಅದರಂತೆ ಗ್ರಾಮದ ಜನರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಭಾನುವಾರ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ), ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಹಾಗೂ ಶ್ರೀನಿವಾಸ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾಪು : ಚಿರತೆ ಕಳೇಬರ ಪತ್ತೆ ; ದಹನ

Posted On: 07-10-2023 10:37PM

ಕಾಪು : ಬೆಳೆ ಸಮೀಕ್ಷೆಗೆ ತೆರಳಿದ್ದ ತಂಡಕ್ಕೆ ಚಿರತೆಯೊಂದರ ಕಳೇಬರ ಸಿಕ್ಕಿದ ಘಟನೆ ಶುಕ್ರವಾರ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಕಲ್ಲುಗುಡ್ಡೆ - ಕುಂಜಾರ್ಗ ಬಳಿಯ ಕಾಡಿನಲ್ಲಿ ಸಂಭವಿಸಿದೆ.

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ಸಮಾಲೋಚನಾ ಸಭೆ

Posted On: 05-10-2023 09:46PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಶಾಸಕರು, ಉದ್ಯಮಿಗಳು, ಗಣ್ಯರ ಸಮಾಲೋಚನಾ ಸಭೆಯು ಅಕ್ಟೋಬರ್ 3 ರಂದು ಮಾರಿಗುಡಿಯ ನವದುರ್ಗಾ ಮಂಟಪದಲ್ಲಿ ನಡೆಯಿತು. ಗಣ್ಯ ಮಹಿಳೆಯರಾದ ನಿರುಪಮಾ ಪ್ರಸಾದ್, ಸ್ವಪ್ನ ಸುರೇಶ್, ವಿಜಯ ಗೋಪಾಲ ಬಂಗೇರ, ಕವಿತ ಹರೀಶ್, ಬೇಬಿ ಕುಂದರ್, ಅಮೃತಾ ಕೃಷ್ಣ ಮೂರ್ತಿ, ಸ್ವರೂಪ ಶೆಟ್ಟಿ, ಮೀನಾ ಅಡ್ಯಂತಾಯ, ರೂಪಾ ಶೋಧನ್ ಶೆಟ್ಟಿ ಸಮಾಲೋಚನಾ ಸಭೆಯನ್ನು ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಉದ್ಘಾಟಿಸಿದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ - ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನಾ ಸಭೆ

Posted On: 05-10-2023 09:30PM

ಕಾಪು : ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ಬ್ರಹ್ಮಾವರ ಇದರ ಹಳೆ ಸಾಮಾಗ್ರಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುವುದರ ಮೂಲಕ ಅವ್ಯವಹಾರ ನಡೆಸಿ ಕಾರ್ಖಾನೆಯ ಸದಸ್ಯರಿಗೆ ಮತ್ತು ರೈತರಿಗೆ ವಂಚಿಸಿರುವ ಆಡಳಿತ ಮಂಡಳಿಯ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಎಲ್ಲಾ ಬ್ಲಾಕ್ ಸಮಿತಿಗಳ ಸಹಭಾಗಿತ್ವದಲ್ಲಿ ಅಕ್ಟೋಬರ್ 9, ಸೋಮವಾರ ಬೆಳಿಗ್ಗೆ 10 ಗಂಟೆಗೆ, ಬ್ರಹ್ಮಾವರ - ಸಕ್ಕರೆ ಕಾರ್ಖಾನೆಯ ಎದುರು ಬೃಹತ್ ಪ್ರತಿಭಟನಾ ಸಭೆ ಯನ್ನು ಹಮ್ಮಿಕೊಳ್ಳಲಾಗಿದೆ.