Updated News From Kaup

ಪಡುಬಿದ್ರಿ : ಆಟಿದ ಲೇಸ್ ಕಾರ್ಯಕ್ರಮ

Posted On: 20-07-2025 04:28PM

ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಆಶ್ರಯದಲ್ಲಿ ಪಡುಬಿದ್ರಿ ಬಿಲ್ಲವ ಸಂಘದ ಸಭಾಂಗಣದಲ್ಲಿ ಜರಗಿದ ಆಟಿದ ಲೇಸ್ ಕಾರ್ಯಕ್ರಮವನ್ನು ಜಾನಪದ ಚಿಂತಕ ವಾಮನ ಕೋಟ್ಯಾನ್ ನಡಿಕುದ್ರುರವರು ಕಳಸಕ್ಕೆ ಭತ್ತ ತುಂಬುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಅಂದು ಆಟಿಯು ಕಷ್ಟದ ಕಾಲವಾಗಿತ್ತು. ಅವಿಭಕ್ತ ಕುಟುಂಬದಲ್ಲಿಯ ಒಡನಾಟದ ಜೊತೆಗೆ ಕೃಷಿ ಬದುಕಿನ ಅನಾವರಣದ ನೆನಪು ಅಜರಾಮರ. ಇಂದು ಆಟಿಯು ವೈಭವೀಕರಣವಾಗಿದೆ. ಹಾಳೆಯ ಮುಟ್ಟಾಲೆಯಿಂದ ಹಿಡಿದು ಬಳಸುವ ಪರಿಕರಗಳಿಗೆ ವೈಜ್ಞಾನಿಕ ಹಿನ್ನೆಲೆಯಿದೆ. ಆಟಿಯ ಆಹಾರಗಳು ದೈಹಿಕ ವ್ಯವಸ್ಥೆಗೆ ಶಕ್ತಿದಾಯಕವಾಗಿತ್ತು ಎಂದರು.

ರೋಟರಿ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ಸುನಿಲ್ ಕುಮಾರ್, ತಂಡದ ಪದಗ್ರಹಣ

Posted On: 20-07-2025 04:21PM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಇದರ 25ನೇ ವರ್ಷದ 2025-26 ರ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಹಾಗೂ ತಂಡದ ಪದಗ್ರಹಣ ಸಮಾರಂಭ ಪಡುಬಿದ್ರಿಯ ಸುಜಾತ ಅಡಿಟೋರಿಯಂನಲ್ಲಿ ಶನಿವಾರ ಜರಗಿತು. ಪದಪ್ರಧಾನ ಅಧಿಕಾರಿಯಾಗಿದ್ದ ರೋ. ಎಮ್ ಜೆ ಡಿ, ಪಿಡಿಜಿ ಅಭಿನಂದನ್ ಎ. ಶೆಟ್ಟಿ ಪದಪ್ರಧಾನ ನಡೆಸಿ, ರೋಟರಿ ಸಂಸ್ಥೆಯು ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಪ್ರತೀಕವಾದ ಸಂಸ್ಥೆ. ಆಹಾರ, ಆರೋಗ್ಯ, ಶಿಕ್ಷಣದ ಬಗೆಗೂ ನಾವೆಲ್ಲ ಗಮನಹರಿಸಬೇಕು. ರೋಟರಿಯು ಸಮಾಜಮುಖಿ ಚಿಂತನೆಯನ್ನು ಮಾಡುವ ಸಂಸ್ಥೆಯಾಗಿದೆ ಎಂದರು. 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನೀಲ್ ಕುಮಾರ್, ಪವನ್ ಸಾಲ್ಯಾನ್ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.

ಕಾಪು ತಾಲ್ಲೂಕು ಕ.ಸಾ.ಪ. : ವಿದ್ಯಾರ್ಥಿಗಳಿಗೆ ಅಭಿನಂದನೆ, ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Posted On: 14-07-2025 07:54PM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕ ವತಿಯಿಂದ 2024-25 ಸಾಲಿನ ಎಸ್ಎಸ್ಎಲ್ ಸಿ ಮತ್ತು ಪದವಿ ಪೂರ್ವ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಕಾಪು ತಾಲ್ಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಅಭಿನಂದನೆ ಹಾಗೂ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಕಾಪು ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.100ಫಲಿತಾಂಶ ದಾಖಲಿಸಿದ ಪಲಿಮಾರು ಸ.ಪ.ಪೂ.ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್ ಇವರಿಗೆ ಅಭಿನಂದನೆ ಕಾರ್ಯಕ್ರಮ ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಇಲ್ಲಿ ಜರಗಿತು.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂಟಕಲ್ ಸನ್ ಶೈನ್ ಲೀ ಜನ್, ಏರಿಯಾ- ಜಿ ಪದಗ್ರಹಣ

Posted On: 14-07-2025 07:25PM

ಕಾಪು : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂಟಕಲ್ ಸನ್ ಶೈನ್ ಲೀ ಜನ್, ಏರಿಯಾ- ಜಿ ಇದರ ಪದಗ್ರಹಣ ಸಮಾರಂಭ ನೆರವೇರಿತು. ಎಸ್ಎನ್‌ಆರ್. ಪಿಪಿಎಫ್ ರೇಖಾ ಮರಳಿಧರನ್, ಎನ್ ವಿ ಪಿ ಏರಿಯಾ ಜಿ ಸಿಎಸ್ಐಯವರು ನೂತನ ಅಧ್ಯಕ್ಷ ಎಸ್ಎನ್‌ಆರ್. ರಮೇಶ್ ಬಂಟಕಲ್ ಅವರಿಗೆ ಪ್ರಮಾಣ ವಚನ ನೀಡಿದರು ಮುಖ್ಯ ಅತಿಥಿ ಎಸ್ಎನ್‌ಆರ್, ಸಿ ಎಸ್ ಎಲ್., ಪಿ. ಪಿ. ಎಫ್ ಚಿತ್ರ ಕುಮಾರ್ ಸಮಾಜಮುಖಿ ಕೆಲಸಗಳನ್ನು ಮಾಡಿರಿ ಎಂದು ತಿಳಿಸಿದರು.

ಇನ್ನಂಜೆ ಎಸ್ ವಿ ಎಸ್, ಎಸ್ ವಿ ಎಚ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

Posted On: 14-07-2025 07:09PM

ಕಾಪು : ಇಲ್ಲಿನ ಇನ್ನಂಜೆ ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಪಡುಬಿದ್ರಿ : ಕಾಪು ಶಾಸಕರಿಂದ ಕಂಚಿನಡ್ಕದಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ; ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

Posted On: 14-07-2025 06:51PM

ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿನಡ್ಕ ಮಿಂಚಿನ ಬಾವಿ ಸಂಪರ್ಕ ರಸ್ತೆ ಕಾಂಕ್ರಿಟೀಕರಣಕ್ಕೆ 6 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕಾಪು : ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ

Posted On: 14-07-2025 06:43PM

ಕಾಪು : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಗು ಮುನ್ನ ಕಾಪು ರಾಜೀವ ಭವನದಿಂದ ತಹಶಿಲ್ದಾರ್‌ ಕಛೇರಿವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಮೆರವಣಿಗೆಯಲ್ಲಿ ಸಾಗಿ ಬಂದರು.

ISPRL ಪಾದೂರು ಘಟಕದಿಂದ : ಪ್ರಕೃತಿ ರಮಣೀಯವಾಗಿರುವ ಧನಸ್ಸು ತೀರ್ಥ ಸ್ವಚ್ಛತೆ

Posted On: 13-07-2025 05:30PM

ಕಾಪು : ಇನ್ನಂಜೆ ಗ್ರಾಮದ ಮಡುಂಬು ಧನಸ್ಸು ತೀರ್ಥ, ರೆಂಜಾಲ ಪಾದೆ ಇಲ್ಲಿ ISPRL ಪಾದೂರು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Posted On: 13-07-2025 04:57PM

ಕಾಪು : ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ : ಅಶೋಕ್ ಸಾಲ್ಯಾನ್

Posted On: 06-07-2025 09:33PM

ಪಡುಬಿದ್ರಿ: ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು. ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ ಮಹಾಸಭಾ ಮುಂಬೈ ಇವರ ಸಹಕಾರದೊಂದಿಗೆ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.