Updated News From Kaup
ಉಡುಪಿ : ಲಯನ್ಸ್, ಲಿಯೋ ಕ್ಲಬ್ ಮಲ್ಪೆ - ವಿಶ್ವ ಓಜೋನ್ ದಿನಾಚರಣೆ ; ಸಾಧಕರಿಗೆ ಅಭಿನಂದನೆ
Posted On: 25-09-2023 09:59PM
ಉಡುಪಿ : ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ ವತಿಯಿಂದ ವಿಶ್ವ ಓಜೋನ್ ದಿನಾಚರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ರವಿವಾರ ಮಲ್ಪೆ ಗೋಪಾಲ್ ಸಿ ಬಂಗೇರ ಇವರ ಮನೆಯ ಆವರಣದಲ್ಲಿ ನಡೆಯಿತು.
ಕಾಪು : ರಾಜೇಶ್ ಕುಲಾಲ್ ಗೆ ಆರ್ಥಿಕ ನೆರವು : ಕಾಪು ಕುಲಾಲ ಯುವ ವೇದಿಕೆ , ಕಾಪು ಕುಲಾಲ ಸಂಘದಿಂದ ಸಹಾಯಹಸ್ತ
Posted On: 25-09-2023 09:51PM
ಕಾಪು : ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳ ಬೆಂಬಲದಿಂದ ಒಟ್ಟುಗೂಡಿದ ರೂ.75,000 ಸಹಾಯಧನವನ್ನು ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.
ಪೆರಂಪಳ್ಳಿಯ ಶರೀನಾರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ
Posted On: 25-09-2023 04:52PM
ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ 'ಮಿಸ್ಟರ್ & ಮಿಸ್ ಟೀನ್ ಕರ್ನಾಟಕ' ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ ದೊರಕಿದೆ.
ಪಡುಬಿದ್ರಿ : ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ
Posted On: 25-09-2023 04:34PM
ಪಡುಬಿದ್ರಿ : ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೋಮವಾರ ಪಡುಬಿದ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ ಅವರ ನಿವಾಸದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ನಡೆಯಿತು.
ಪಡುಕುತ್ಯಾರು : ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ
Posted On: 24-09-2023 06:40PM
ಪಡುಕುತ್ಯಾರು : ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಸಮಾಜದಲ್ಲಿ ಶಕ್ತಿ ಸಂಸ್ಕಾರವನ್ನು ಕೊಡುವ ಮೂಲಕ ಸಮಾಜವನ್ನು ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಆ ಕಾರಣದಿಂದಾಗಿ ನಮ್ಮ ಮಠ ಮಂದಿರಗಳು, ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ಗುರುಗಳು, ನಮ್ಮ ಸಂಸ್ಕಾರದ ಕಾರಣದಿಂದ ಉನ್ನತಿಯನ್ನು ಸಾಸುತ್ತಿರುವ ನಮ್ಮ ದೇಶಕ್ಕೆ ಪ್ರಾಪಂಚಿಕವಾಗಿ ಗೌರವ ಸಲ್ಲುತ್ತಿದೆ. ಹಾಗಾಗಿ ಮಕ್ಕಳಲ್ಲೂ ಧಾರ್ಮಿಕ ಶ್ರದ್ಧೆ, ಸಂಸ್ಕಾರ, ಸಂಸ್ಕೃತಿಯನ್ನು ತುಂಬುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಭದ್ರ ಧಾರ್ಮಿಕ ತಳಹದಿಯನ್ನು ಹಾಕಿ ಕೊಡೋಣ ಎಂದು ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಹೇಳಿದರು. ಅವರು ಭಾನುವಾರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ವೀಕ್ಷಣೆ ನಡೆಸಿ ಬಳಿಕ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆಯನ್ನು ಪಡೆದು ಮಾತನಾಡಿದರು.
ಉಡುಪಿ : ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತ ಸಾಧನಾ ಸಲಕರಣೆಗಳ ಸಮರ್ಪಣೆ
Posted On: 24-09-2023 02:22PM
ಉಡುಪಿ : ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವನ್ನು ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಅಟಲ್ ಬಿಹಾರಿ ವಾಜಪೇಯಿ ಆಡಿಟೋರಿಯಂನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಸೆಪ್ಟೆಂಬರ್ 25 : ಜನತಾ ದರ್ಶನ ಕಾರ್ಯಕ್ರಮ
Posted On: 24-09-2023 10:34AM
ಉಡುಪಿ : ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ನೀಡಿ, ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದ್ರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತೀ ತಿಂಗಳು "ಜನತಾದರ್ಶನ" ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ "ಜನತಾದರ್ಶನ" ಕಾರ್ಯಕ್ರಮವನ್ನು ನಡೆಸಲು ನಿರ್ದೇಶನ ನೀಡಿರುತ್ತಾರೆ.
ಸೆಪ್ಟೆಂಬರ್ 25 : ಕಾಪು ಕುಲಾಲ ಯುವ ವೇದಿಕೆ, ಕುಲಾಲ ಸಂಘದಿಂದ ರಾಜೇಶ್ ಕುಲಾಲ್ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ ಕಾರ್ಯಕ್ರಮ
Posted On: 23-09-2023 05:18PM
ಕಾಪು : ಗ್ಯಾಂಗ್ರಿನ್ ಕಾಯಿಲೆಯಿಂದ ತನ್ನ ಒಂದು ಕಾಲು ಕಳೆದು, ಇನ್ನೊಂದು ಕಾಲು ಉಳಿಸಲು ಪ್ರಯತ್ನ ಮಾಡುತ್ತಲಿರುವ ಕಾಪು ಅದಮಾರು ನಿವಾಸಿ ರಾಜೇಶ್ ಕುಲಾಲ್ ಕುಟುಂಬಕ್ಕೆ ಕಾಪು ಕುಲಾಲ ಯುವ ವೇದಿಕೆ ಹಾಗೂ ಕುಲಾಲ ಸಂಘ (ರಿ.) ಕಾಪು ವಲಯದ ವತಿಯಿಂದ ಸಂಗ್ರಹ ಗೊಂಡ ಧನಸಹಾಯವನ್ನು 25, ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ದಾನಿಗಳು, ಹಿತೈಷಿಗಳ ಸಹಭಾಗಿತ್ವದಲ್ಲಿ ರಾಜೇಶ್ ಕುಲಾಲ್ ಕುಟುಂಬಕ್ಕೆ ಹಸ್ತಾಂತರ ಮಾಡಲಿದ್ದಾರೆ.
ಶಂಕರಪುರ : ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ
Posted On: 22-09-2023 08:31PM
ಶಂಕರಪುರ : ದ್ವಾರಕಾಮಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಗುರುವಾರ ಜಯಂಟ್ಸ್ ಸಪ್ತಾಹದ ಅಂಗವಾಗಿ ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ ಕಾಯ೯ಕ್ರಮವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಬಿಲ್ವಪತ್ರ ಗಿಡದಿಂದ ನಮ್ಮ ಆರೋಗ್ಯಕ್ಕೆ ಮತ್ತು ಪರಿಸರಕ್ಕೆ ವಿಶೇಷವಾದ ಲಾಭವಿದೆ. ಈ ಗಿಡವನ್ನು ನೆಟ್ಟು ನಮ್ಮ ಆರೋಗ್ಯವನ್ನು ಮತ್ತು ಆಧ್ಯಾತ್ಮಿಕವಾಗಿ ನಮ್ಮ ಸಮಾಜವನ್ನು ಕೂಡ ಕಾಪಾಡಬಹುದು ಎಂದು ಕರೆ ನೀಡಿದರು.
ಉಚ್ಚಿಲ ದಸರಾ-2023: ಯುವ ನೃತ್ಯೋತ್ಸವಕ್ಕಾಗಿ ಸಾರ್ವಜನಿಕರಿಂದ ಆಡಿಶನ್ ರೌಂಡ್ಗೆ ಆಹ್ವಾನ
Posted On: 22-09-2023 12:33PM
ಉಚ್ಚಿಲ : ದ.ಕ.ಮೊಗವೀರ ಮಹಾಜನ ಸಂಘ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ಯುವ ದಸರಾ -2023ರ ಅಂಗವಾಗಿ ಹಮ್ಮಿಕೊಂಡಿರುವ ನೃತ್ಯೋತ್ಸವ ಸಲುವಾಗಿ ಸಾರ್ವಜನಿಕರಿಂದ ನೃತ್ಯ ಸ್ಪರ್ಧೆಯ ಆಡಿಶನ್ ರೌಂಡ್ಗಾಗಿ ಸ್ಪರ್ಧಿಗಳನ್ನು ಆಹ್ವಾನಿಸಲಾಗಿದೆ.
