Updated News From Kaup
ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಂಘಕ್ಕೆ 2022 - 23ನೇ ಸಾಲಿನ ಪ್ರಥಮ ಅತ್ಯುತ್ತಮ ಸಂಘ ಪ್ರಶಸ್ತಿ

Posted On: 05-09-2023 06:12PM
ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಂಘವು 2022 - 23ನೇ ಸಾಲಿನಲ್ಲಿ ಉಡುಪಿ ತಾಲೂಕಿಗೆ ಪ್ರಥಮ ಅತ್ಯುತ್ತಮ ಸಂಘವೆಂದು ಪ್ರಶಸ್ತಿ ಪಡೆದಿರುತ್ತದೆ.
ಮಂಗಳೂರಿನ ಕೊರ್ಡೆಲ್ ಹಾಲ್, ಚಚ್೯ಗೇಟ್ ಕುಲಶೇಖರದಲ್ಲಿ ನಡೆದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.) ಮಂಗಳೂರು ಇದರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಇನ್ನಂಜೆ, ಹಾಲು ಉತ್ಪಾದಕರ ಸಹಕಾರ ಸಂಘವನ್ನು 2022-2023ನೇ ಸಾಲಿನ ಅತ್ಯುತ್ತಮ ಸಂಘವೆಂದು ಘೋಷಿಸಿ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿಯವರಿಂದ ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೆ.ಶೆಟ್ಟಿ ಮಂಡೇಡಿ ಹಾಗೂ ಸಂಘದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಪ್ರಶಸ್ತಿ ಪತ್ರ ದೊಂದಿಗೆ ಸನ್ಮಾನವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷರಾದ ಎಸ್. ಬಿ.ಜಯರಾಮ್ ರೈ, ಕೆ ಎಂ ಎಫ್ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಕೆ. ರವಿರಾಜ್ ಹೆಗ್ಡೆ, ವ್ಯವಸ್ಥಾಪಕ ನಿರ್ದೇಶಕರಾದ ಡಿ. ಅಶೋಕ, ಪ್ರಬಂಧಕರಾದ ರಾಮಚಂದ್ರ ಭಟ್ , ಮಾಜಿ ಅಧ್ಯಕ್ಷರು, ನಿರ್ದೇಶಕರು, ಉಪ ವ್ಯವಸ್ಥಾಪಕರು, ಒಕ್ಕೂಟದ ಅಧಿಕಾರಿ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪು ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಶಿಕ್ಷಕ ರಾಧಾಕೃಷ್ಣ ಪ್ರಭುರವರಿಗೆ ಸನ್ಮಾನ

Posted On: 05-09-2023 06:02PM
ಕಾಪು : ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿಯ ನಿವೃತ್ತ ಶಿಕ್ಷಕರು, ತಾಲೂಕು ಪ್ರಶಸ್ತಿ ವಿಜೇತರು, ಯೋಗ ಶಿಕ್ಷಕರಾದಂತಹ ರಾಧಾಕೃಷ್ಣ ಪ್ರಭು ಕಾಪು ಇವರನ್ನ ಮಾಜಿ ಜಿಲ್ಲಾ ಗವರ್ನರ್ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸವಿನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಪ್ರತಿ ವರ್ಷ ಕೂಡ ಕಾಪು ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ದೇಶದ ಭವಿಷ್ಯವನ್ನು ಕಟ್ಟುವಂತಹ ಶಿಕ್ಷಕರು ಮುಂದಿನ ಯುವ ಪೀಳಿಗೆಗೆ ಒಳ್ಳೆಯ ಮಾರ್ಗದರ್ಶನವನ್ನು ನೀಡಿ ಮುಂದಿನ ಪೀಳಿಗೆಗೆ ಅನುವು ಮಾಡಿ ಕೊಟ್ಟ ಶಿಕ್ಷಕರು ಶ್ರೇಷ್ಠರು ಎಂದು ಹೇಳಿದರು.
ವಲಯ ಅಧ್ಯಕ್ಷ ವರುಣ್ ಶೆಟ್ಟಿ, ಕೋಶಾಧಿಕಾರಿ ನಡಿಕೆರೆ ರತ್ನಾಕರ್ ಶೆಟ್ಟಿ, ಜಿಲ್ಲಾ ಸಂಯೋಜಕ ವಿಟಿ ಹೆಗಡೆ ಉಪಸ್ಥಿತರಿದ್ದರು.
ಕಾಪು ಲಯನ್ಸ್ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿ, ಲಯನ್ಸ್ ನಿರ್ದೇಶಕ ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನಮ್ಮೆಲ್ಲರ ಬದುಕಿಗೆ ಹೊಸ ಅಥ೯ ನೀಡಿದ ಗುರುವಿಗೆ ವಂದನೆ

Posted On: 05-09-2023 07:47AM
ಅಂದು ಹಿಂದಕ್ಕೆ ಗುರುವಿದ್ದ, ಮುಂದಕ್ಕೆ ಗುರಿಯಿತ್ತು; ಮುಂದೆ ನಡೆಯುತ್ತಿತ್ತು ಧೀರದಂಡು! ಇಂದೋ? ಹಿಂದಕ್ಕೆ ಗುರುವಿಲ್ಲ, ಮುಂದಕ್ಕೆ ಗುರಿಯಿಲ್ಲ;ಮುನ್ನುಗುತ್ತಿದೆ ಕುರಿಗಳ ಹಿಂಡು! ಇದು ರಾಷ್ಟ್ರಕವಿ ಕುವೆಂಪುರವರ ಮಾತುಗಳು. ಇದು ನೂರಕ್ಕೆ ನೂರರಷ್ಟು ಸತ್ಯ. ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ, ಗುರು ಬಹುಮುಖ್ಯ ಹಲವರ ಜೀವನಗಳಲ್ಲಿ ತಮ್ಮ ಗುರುಗಳು ಬೀರಿದ ಪ್ರಭಾವದಿಂದ ತಾವು ತಮ್ಮ ಜೀವನದ ದಿಕ್ಕನ್ನೇ ಬದಲಿಸಿ ಯಶಸ್ವಿಯಾದ ಹಲವಾರು ಉದಾಹರಣೆಗಳಿವೆ. ಪ್ರತಿಯೊಬ್ಬರ ಜೀವನದಲ್ಲಿ ಗುರಿ ಎಷ್ಟು ಮುಖ್ಯವೋ, ಅಷ್ಟೇ ಗುರುಗಳೂ ಮುಖ್ಯ ಏಕೆಂದರೆ, ಆ ಗುರಿ ಮುಟ್ಟಲು ಬದುಕಿಗೆ.ದಾರಿ ದೀಪವಾದ ಉತ್ತಮ ಗುರುಗಳು.
ಶಿಕ್ಷಕರಿಗೆ ಶಿಕ್ಷಕರಾದ ಮಹಾ ಗುರುವಿಗೆ ನಮೋ ನಮ: : ಡಾII ಸವ೯ಪಳ್ಳಿ ರಾಧಾಕೃಷ್ಣನ್ 1888 ಸೆಪ್ಟೆಂಬರ್ 5 ರಂದು ಚಿತ್ತೂರ್ ಜಿಲ್ಲೆಯ ತಿರುತನಿ ಪವಿತ್ರ ಕ್ಷೇತ್ರದಲ್ಲಿ ಹುಟ್ಟಿದರು. ಸರ್ವಪಲ್ಲಿ ಇದು ಇವರ ಮನೆತನದ ಹೆಸರು. ಬಾಲ್ಯದಿಂದಲೂ ದೈವರಾಧನೆಯಲ್ಲಿ, ಅಧ್ಯಾತ್ಮದಲ್ಲಿ ರಾಧಾಕೃಷ್ಣರಿಗೆ ಒಲವು. ಎಂಟು ವರ್ಷಗಳ ಕಾಲ ಕ್ರೈಸ್ತ ಸೇವಾ ಸಂಘದ ಶಾಲೆಯಲ್ಲಿ ಕಲಿತು ಅನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜನ್ನು ಸೇರಿದರು. ಎಂ.ಎ ಪದವಿಧರರಾದ ಮೇಲೆ ಮೈಸೂರು, ಕಲ್ಕತ್ತಾ ವಿಶ್ವವಿದ್ಯಾನಿಲಯಗಳಲ್ಲಿ ತತ್ವ ಶಾಸ್ತ್ರದ ಪ್ರಾಧ್ಯಾಪಕರಾದರು. ಆಂದ್ರ ಪ್ರದೇಶ ವಿಶ್ವವಿದ್ಯಾನಿಲಯದಲ್ಲಿ 1931-1936ರ ಅವಧಿಯಲ್ಲಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ 1939-1948ರ ಅವಧಿಯಲ್ಲಿ ಉಪಕುಲಪತಿಯಾಗಿದ್ದರು. ದೆಹಲಿ ವಿಶ್ವವಿದ್ಯಾನಿಲಯದಲ್ಲಿ 1953-1962ರ ಅವಧಿಯಲ್ಲಿ ಕುಲಪತಿಯಾಗಿದ್ದರು. . ಪಾಶ್ಚಾತ್ಯ ಜಗತ್ತಿನ ಹಿಯ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಆಕ್ಸಫರ್ಡನಲ್ಲಿ ಅವರು ಪೌರಸ್ತ್ಯ ಧರ್ಮಗಳು ಮತ್ತು ನೀತಿ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು, 1946 ರಿಂದ 1952ರ ವರೆಗೆ ಯುನೆಸ್ಕೋದಲ್ಲಿ ಭಾರತ ನಿಯೋಗದ ಮುಖಂಡರಾಗಿದ್ದರು. 1949 ರಿಂದ 1952ರ ವರೆಗೆ ಸೋವಿಯತ್ ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿದ್ದರು. 1952ರಲ್ಲಿ ಭಾರತಕ್ಕೆ ಹಿಂದುರುಗಿದಾಗ ಭಾರತದ ಉಪ-ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾದರು. 1962 ಮೇ 11 ರಂದು ರಾಷ್ಟ್ರಾಧ್ಯಕ್ಷರಾಗಿ ಚುನಾಯಿತರಾಗಿ ಐದು ವರ್ಷಗಳ ನಂತರ 1967ರಲ್ಲಿ ನಿವೃತ್ತಿಯಾದರು. 1967ರಲ್ಲಿ “ಭಾರತ ರತ್ನ” ಎಂಬ ಗೌರವವನ್ನು ತಮ್ಮದಾಗಿಸಿಕೊಂಡರು. 86ರ ವಯಸ್ಸಿನಲ್ಲಿ 1975 ಏಪ್ರಿಲ್ 17 ರಂದು ನಿಧನರಾದರು. ಶ್ರೇಷ್ಠ ಶಿಕ್ಷಣ ಚಿಂತಕರು ಡಾ. ರಾಧಾಕೃಷ್ಣನ್ ಇವರ ಪ್ರಕಾರ ಶಿಕ್ಷಣದ ಅರ್ಥ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸುವುದು. ಶಿಕ್ಷಣ ಇದು ಬೌದ್ಧಿಕ ಶಕ್ತಿಯನ್ನು ಉಧೀಪನಗೊಳಿಸುವುದು,ಮಾತ್ರವಲ್ಲದೇ ಮಕ್ಕಳ ಮನಸ್ಸನ್ನು ಶುದ್ಧಗೊಳಿಸಿ, ಆಧ್ಯಾತ್ಮ ಭಾವನೆಯನ್ನು ಪ್ರಚೋದಿಸಬೇಕು.
ಡಾ. ರಾಧಾಕೃಷ್ಣನ್ ಅವರ ಶಿಕ್ಷಣದ ಗುರಿಗಳು : ಬೌದ್ಧಿಕ, ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಬೆಳವಣ ಗೆ, ಶಿಕ್ಷಣವು ವ್ಯಕ್ತಿ ತನ್ನನ್ನು ಮತ್ತು ಸಹಚರರನ್ನು ಪ್ರೀತಿಸಲು ಪ್ರೇರೇಪಿಸಬೇಕು. ಶಿಕ್ಷಣವು ವೈಜ್ಞಾನಿಕ ಮನೋವಿಜ್ಞಾನವನ್ನು ವೃದ್ಧಿಸಬೇಕು. ಮಾನವನ ನೆಮ್ಮದಿಯ ಜೀವನಕ್ಕೆ ಅವಶ್ಯವಾದುದು. ಮಕ್ಕಳಲ್ಲಿ ಆಲೋಚನಾ ಶಕ್ತಿ ಶಿಕ್ಷಣವು ಅಭಿವೃದ್ಧಿ ಪಡಿಸಬೇಕು. ಶಿಕ್ಷಣವು ಮಕ್ಕಳಲ್ಲಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಸಿದ್ಧತೆಯ ಸಲಹೆ ನೀಡಬೇಕು. ಪಠ್ಯಕ್ರಮವು ನಮ್ಮ ಚರ್ಚೆಯಲ್ಲಿ ಕಾರ್ಯ ಆಧಾರ, ತೀರ್ಮಾನಗಳನ್ನು ಕಂಡು ಕೊಳ್ಳಲು ಪೂರಕವಾಗುವಂತಹ ವಿಷಯಗಳಿರಬೇಕು. ವಿಜ್ಞಾನವು ಕೂಡಾ ಶಿಕ್ಷಣದ ಒಂದು ಅಂಗವಾಗಿರಬೇಕು. ಪ್ರಜಾಪ್ರಭುತ್ವದ ಗುಣಗಳನ್ನು ಅರಿಯುವ, ವೃದ್ಧಿಸುವ ವಿಷಯಗಳು ಪಠ್ಯವಸ್ತುವಿನಲ್ಲಿರಬೇಕು. ಹೀಗಾಗಿ ನೃತ್ಯ ಸಂಗೀತ ಇವುಗಳಿಗೆ ಶಿಕ್ಷಣದಲ್ಲಿ ಉನ್ನತ ಸ್ಥಾನವಿರಬೇಕು. ಪಠ್ಯವಸ್ತುವಿನ ವಿಷಯಗಳು ಮಕ್ಕಳಲ್ಲಿ ಆಲಸ್ಯವನ್ನು ಹೋಗಲಾಡಿಸಿ ಆಂತರಿಕ ಒಲವನ್ನು ವೃದ್ಧಿಸಬೇಕು. ಸಂಸ್ಕøತಿಯ ಅಭ್ಯಾಸಕ್ಕೆ ವಿಶೇಷ ಸೌಲಭ್ಯವಿರಬೇಕು. ಬೋಧನಾ ಪದ್ಧತಿ : ಮಗುವಿನಲ್ಲಿ ವೈಚಾರಿಕ ಆಶಯಗಳನ್ನು ಸೃಷ್ಠಿಸಬೇಕು. ಮುಕ್ತ ಪರಿಸರದಲ್ಲಿ ಶಿಕ್ಷಣ ಕೋಡಬೇಕು. ಸ್ವ-ಕಲಿಕೆಗೆ ಸೌಲಭ್ಯವಿರಬೇಕು. ಶಿಕ್ಷಣ ಕೇವಲ ವಿಷಯವನ್ನು ರವಾನಿಸಿದೆ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆಗೆ ಒಳಪಡಿಸಬೇಕು. ರಾಧಾಕೃಷ್ಣನರ ಶೈಕ್ಷಣಿಕ ವಿಚಾರಗಳು : ಮನಸ್ಸು ಮತ್ತು ಆತ್ಮಗಳ ತರಬೇತಿಯೇ ಶಿಕ್ಷಣ, ವೈಜ್ಞಾನಿಕ ಪ್ರವೃತ್ತಿಯ ವಿಕಾಸವೇ ಶಿಕ್ಷಣ, ಪ್ರಜಾಪ್ರಭುತ್ವಕ್ಕಾಗಿ ಶಿಕ್ಷಣ ಮತ್ತು ಸ್ವಯಂ ಶಿಸ್ತು, ಸ್ತ್ರೀ-ಪುರುಷರಿಗೆ ಸಮಾನ ಶಿಕ್ಷಣ, ಮುಕ್ತ ಮನಸ್ಸಿನ ರಚನೆಗಾಗಿ ಶಿಕ್ಷಣವಿರಬೇಕು.
ಶಿಕ್ಷಕ ಒಬ್ಬ ಶಿಲ್ಪಿ ಇದ್ದ ಹಾಗೆ. ಅವರಿಗೆ ಕೊಟ್ಟಿರುವ ವಿದ್ಯಾರ್ಥಿ ಎಂಬ ಕಲ್ಲನ್ನು, ಅಚ್ಚುಕಟ್ಟಾಗಿ ಕೆತ್ತಿ, ಅದರಿಂದ ಒಂದು ಹೊಸ ರೂಪವನ್ನು ಹೊರತಂದಾಗ ಮಾತ್ರ ಅವರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಆದ್ದರಿಂದ ಅವರ ವಿದ್ಯಾರ್ಜನೆ ನೀಡುವ ಮಕ್ಕಳಿಗೆ ಪ್ರೀತಿತೋರಿ ಅವರನ್ನು ಗೌರವಿಸುವುದು ಒಳಿತಾಗಿದೆ. ಹೀಗೆ ಮುಂದೊಂದು ದಿನ ಅವರು ನವ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುವಾಗ ಅವರ ಮನಸ್ಸಿನಲ್ಲಿ “ಇವನು ನನ್ನ ವಿದ್ಯಾರ್ಥಿ” ಎಂಬ ಸಾರ್ಥಕತೆಯ ಮನೋಭಾವನೆ ಅವರ ಮನಗಳಲ್ಲಿ ಮೂಡಿದರೆ ಅದು ಅವರ ಶಿಕ್ಷಕ ವೃತ್ತಿಯ ಸಾರ್ಥಕತೆಯಾಗುತ್ತದೆ ವಿನಹಾ.ದೊಡ್ಡ ದೊಡ್ದ ಪ್ರಶಸ್ತಿ ಪಡೆಯುದರಿಂದಲ್ಲ. ಪ್ರತಿ ಶಿಕ್ಷಕರನ್ನು ಗೌರವಿಸುವುದು ಪ್ರತೀ ವಿದ್ಯಾರ್ಥಿಯ ಆದ್ಯ ಕರ್ತವ್ಯ : ಗುರುಗಳಿಲ್ಲದೆ ನಮ್ಮ ಜೀವನವನ್ನು ಊಹಿಸಿಕೊಳ್ಳುವುದೂ ಅಸಾಧ್ಯವಾಗಿದೆ. ಇಂದು ಶಿಕ್ಷಕರ ದಿನ ನಾವೆಲ್ಲರೂ, ನಮ್ಮ ಜೀವನದ ಮೇಲೆ ಒಳ್ಳೆಯ ಪ್ರಭಾವ ಬೀರಿದ ಶಿಕ್ಷಕರನ್ನು ಜ್ಞಾಪಿಸಿಕೊಳ್ಳುತ್ತಾ, ಇಂದು ಮಾತ್ರವಲ್ಲ ಪ್ರತಿದಿನ ವಂದನೆಗಳನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿರೋಣ. ಗುರು ಎಂದರೆ ಶಾಲಾ ಕಾಲೇಜುಗಳಲ್ಲಿ ಕಲಿಸುವ ಗುರು ಮಾತ್ರವಲ್ಲದೆ, ನಮ್ಮ ಜೀವನಕ್ಕೆ ದಾರಿ ತೋರಿದ ಜೀವನಕ್ಕೆ ಆಧಾರದ ವಾದ ವ್ಯಕ್ತಿಗಳು ಕೂಡ ಗುರು ಸಮಾನರು. “ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೆ ಗುರು”. ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ದಿನಾಚರಣೆಯ ಶುಭಾಷಯಗಳು. ಗುರುವೇ ನಮೊ ನಮ: ✍ ರಾಘವೇಂದ್ರ ಪ್ರಭು, ಕವಾ೯ಲು ಸಂ.ಕಾಯ೯ದಶಿ೯ ಕಸಾಪ ಉಡುಪಿ
ಅನಾರೋಗ್ಯ ಪೀಡಿತ ಮಗುವಿಗೆ ಧನಸಹಾಯ : ಈ ಬಾರಿ ಸೀ ಪೋಕ್ ವೇಷದಲ್ಲಿ ಬರಲಿದ್ದಾರೆ ರವಿ ಕಟಪಾಡಿ
.jpg)
Posted On: 05-09-2023 07:27AM
ಉಡುಪಿ : ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕೃಷ್ಣ ಜನ್ಮಾಷ್ಟಮಿಯಂದು ಪ್ರತಿವರ್ಷ ವಿಶಿಷ್ಟ ವೇಷ ಧರಿಸಿ ಜನರನ್ನು ರಂಜಿಸುತ್ತಿದ್ದ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿಯೂ ಸಜ್ಜಾಗಿದ್ದಾರೆ.
ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಹಾಕಿ ತಿರುಗಾಟ ನಡೆಸಲಿದ್ದಾರೆ.
ಈ ಬಾರಿ ಕುಂದಾಪುರದ 2 ವರ್ಷದ ಮಗುವಿನ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಲು ನಿರ್ಧರಿಸಿದ್ದಾರೆ. ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಹಣವನ್ನು ಸಂಗ್ರಹ ಮಾಡದೆ, ಇಚ್ಛಾನುಸಾರ ಜನರೇ ವಾಹನದ ಬಳಿ ಬಂದು ಧನಸಹಾಯ ಮಾಡಬಹುದಾಗಿದೆ.
ಉದ್ಯಾವರ, ಉಡುಪಿ, ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ತಿರುಗಾಟ ನಡೆಸಲಿದೆ.
ಸೌಜನ್ಯ ಪ್ರಕರಣ : ಮರು ತನಿಖೆಗೆ ಒಳಪಡಿಸುವಂತೆ ದ.ಕ, ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿಗೆ ಮನವಿ

Posted On: 05-09-2023 07:24AM
ಉಡುಪಿ : ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಮ್ಮ ಮನವಿಯಂತೆ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದರು.
ಹೆಜಮಾಡಿ : ಪತ್ರಕರ್ತ ಹರೀಶ್ ಹೆಜಮಾಡಿಗೆ ಹುಟ್ಟೂರ ಸನ್ಮಾನ

Posted On: 03-09-2023 06:42AM
ಹೆಜಮಾಡಿ : ಇಂದಿನ ಕಾಲದಲ್ಲಿ ದೇವಾಲಯಗಳೆಂದರೆ ಸರಕಾರಿ ಪ್ರಾಥಮಿಕ ಶಾಲೆಗಳು. ಇದೊಂದು ಪವಿತ್ರ ಕ್ಷೇತ್ರ. ಇಂತಹ ಶಾಲೆಯಲ್ಲಿ ಕಲಿತು ಇಲ್ಲಿಯೇ ಪತ್ರಕರ್ತ ಹರೀಶ್ ಹೆಜಮಾಡಿಯವರಿಗೆ ಊರವರು ಸನ್ಮಾನಗೈಯುತ್ತಿರುವುದು ಅಭಿನಂದನೀಯ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ಕಮಲ ದೇವಿ ಪ್ರಸಾದ ಅಸ್ರಣ್ಣ ಹೇಳಿದರು. ಅವರು ಹೆಜಮಾಡಿ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಹರೀಶ್ ಹೆಜಮಾಡಿ ಇವರ ಹುಟ್ಟೂರ ಸನ್ಮಾನ ಸಮಿತಿ ಹೆಜಮಾಡಿ ಇವರ ಸಹಯೋಗದಲ್ಲಿ ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪತ್ರಕರ್ತ ಹರೀಶ್ ಹೆಜಮಾಡಿ ಇವರ ಹುಟ್ಟೂರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಂಗಾರ್ ಜುಮ್ಮಾ ಮಸೀದಿಯ ಖತೀಬರಾದ ಜವಾಬ್ ಅಶ್ರಫ್ ಸಖಾಫಿ ಕಿನ್ಯ ಮಾತನಾಡಿ ಧರ್ಮ, ಅನಾಚಾರದ ಸುದ್ದಿಗಳಿಗೆ ಕಡಿವಾಣ ಹಾಕಬೇಕಾಗಿದೆ. ಸಮನ್ವಯ ಸಾಧಿಸುವ ಮೂಲಕ ಸಮಾಜದ ಹಿತಚಿಂತನೆಯ ಕಾರ್ಯ ಪತ್ರಿಕೆಗಳಿಂದ ಆಗಬೇಕಾಗಿದೆ ಎಂದರು. ಕಾರ್ನಾಡು ಮುಲ್ಕಿ, ಅಮಲೋದ್ಭವ ಮಾತಾ ಚರ್ಚ್ ನ ಧರ್ಮ ಗುರು ವಂ| ಫಾ| ಸಿಲ್ವೆಸ್ಟರ್ ಡಿ ಕೋಸ್ತ ಮಾತನಾಡಿ ಇಂದು ಊರ ಸಂಘ ಸಂಸ್ಥೆಗಳಿಂದ ತಮ್ಮ ಊರಿನ ವ್ಯಕ್ತಿ ಎಂಬ ಪ್ರೀತಿ, ಆತ್ಮೀಯಯೆಯಿಂದ ಪಡೆಯುವ ಸನ್ಮಾನ ಅತ್ಯಂತ ಮಹತ್ವದ್ದಾಗಿದೆ ಎಂದರು.

ಸನ್ಮಾನ : ಹೆಜಮಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮದ ನಾಗರಿಕರು ಸೇರಿ ಪತ್ರಕರ್ತ ಹರೀಶ್ ಹೆಜಮಾಡಿಯವರನ್ನು ಸನ್ಮಾನಿಸಿದರು. ಇದೇ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಹೆಜಮಾಡಿ ಗ್ರಾಮಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಹೆಜಮಾಡಿ ಗ್ರಾಮಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಅಧ್ಯಕ್ಷರಾದ ಪಾಂಡುರಂಗ ಸಿ ಕರ್ಕೇರ, ಅಲ್ ಅಝಾರ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಹಾಜಿ ಶೇಖಬ್ಬ ಕೋಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸನ್ಮಾನ ಸಮಿತಿಯ ಅಧ್ಯಕ್ಷರಾದ ಪೌಲ್ ರೋಲ್ಫಿ ಡಿ ಕೋಸ್ತ ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಶಿಕ್ಷಕ ಸಂಜೀವ ಟಿ ಪ್ರಾರ್ಥಿಸಿದರು. ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾಮನ್ ಕೋಟ್ಯಾನ್ ಸ್ವಾಗತಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶೇಖರ ಹೆಜಮಾಡಿ ಪ್ರಸ್ತಾವನೆಗೈದರು. ಸನಾ ಇಬ್ರಾಹಿಂ ವಂದಿಸಿದರು.
ಸನ್ಮಾನ ಕಾರ್ಯಕ್ರಮದ ಮುನ್ನ ಗಣ್ಯರ ಸಹಿತ ಸನ್ಮಾನಿತರನ್ನು ಹೆಜಮಾಡಿ ಜಂಕ್ಷನ್ ನಿಂದ ವೇದಿಕೆಗೆ ಚಿಣ್ಣರ ಸ್ವಾಗತದ ಜೊತೆಗೆ ಚಂಡೆಯ ನಿನಾದದೊಂದಿಗೆ ಬರಮಾಡಿಕೊಳ್ಳಲಾಯಿತು. ನಂತರ ಸ.ಮಾ.ಹಿ.ಪ್ರಾ. ಶಾಲೆ ಹಾಗೂ ವಿದ್ಯಾಪ್ರಸಾರ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿನಿಯರಿಂದ ನೃತ್ಯ ಕಾರ್ಯಕ್ರಮ ಜರಗಿತು.
ಯುವಕ ಮಂಡಲ ಪೆರಂಪಳ್ಳಿ : 15ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ

Posted On: 02-09-2023 11:01PM
ಉಡುಪಿ : ನಗರಸಭಾ ವ್ಯಾಪ್ತಿಯ ಪೆರಂಪಳ್ಳಿಯ ಸಾಮಾಜಿಕ ಸಂಸ್ಥೆಯಾಗಿರುವ ಯುವಕ ಮಂಡಲ ಪೆರಂಪಳ್ಳಿ ಇದರ ಆಶ್ರಯದಲ್ಲಿ 15ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆಯು ಸಪ್ಟೆಂಬರ್ 3, ಆದಿತ್ಯವಾರ ಮಧ್ಯಾಹ್ನ 3:30ಕ್ಕೆ ದಿ. ಮಂಜುನಾಥ ಶಿವತ್ತಾಯ ರಂಗಮಂದಿರ ಪೆರಂಪಳ್ಳಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಭಾಗ ಒಂದರಲ್ಲಿ ಮೂರು ವರ್ಷದವರೆಗಿನ ಚಿಣ್ಣಾರಿಗಾಗಿ ಮೂರು ನಿಮಿಷ ಮತ್ತು ಮೂರು ವರ್ಷಕ್ಕೆ ಮೇಲ್ಪಟ್ಟು 6 ವರ್ಷದವರೆಗಿನ ಪುಟಾಣಿಗಳಿಗಾಗಿ ಮೂರು ನಿಮಿಷದ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ. ಎರಡು ವಿಭಾಗಗಳಲ್ಲಿ ನಗದು ಬಹುಮಾನವಿದ್ದು, ಆಸಕ್ತ ಮಕ್ಕಳು ಹೆಸರು ನೋಂದಾಯಿಸಲು ಅವಕಾಶವಿದೆಯೆಂದು ಸಂಘಟಕರು ತಿಳಿಸಿದ್ದಾರೆ.
ಬಂಟಕಲ್ಲು : ಬೀಳುವ ಮನೆಗೆ ಆಸರೆಯಾಗಿ ನಿಂತ ಹೇರೂರು ಫ್ರೆಂಡ್ಸ್ ಕ್ಲಬ್

Posted On: 01-09-2023 06:38PM
ಬಂಟಕಲ್ಲು : 92ನೇ ಹೇರೂರು ಶ್ರೀಮತಿ ಆಶಾಲತಾ ಆಚಾರ್ಯರವರ ಮನೆ ಬೀಳುವ ಹಂತದಲ್ಲಿದ್ದ ಸಂದರ್ಭದಲ್ಲಿ 92ನೇ ಹೇರೂರು ಫ್ರೆಂಡ್ಸ್ ಕ್ಲಬ್ಬಿನ ಸದಸ್ಯರು ಕ್ರಿಕೆಟ್ ಪಂದ್ಯಾಟ ನಡೆಸಿ ಅದರ ಉಳಿಕೆಯ ಹಣದೊಂದಿಗೆ ಮತ್ತು ದಾನಿಗಳ ಸಹಕಾರದಿಂದ ಬೀಳುವ ಹಂತದಲ್ಲಿದ್ದ ಮನೆಯನ್ನು ಸಮಗ್ರ ರೀತಿಯಲ್ಲಿ ದುರಸ್ತಿಗೊಳಿಸಿ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ರಾಜೇಶ್ ಜೋಗಿ, ಕಾರ್ಯದರ್ಶಿ ಕುಮಾರಿ ದೀಕ್ಷಾ ಮತ್ತು ಎಲ್ಲಾ ಸದಸ್ಯರು ಭಾಗವಹಿಸಿದ್ದರು.
ಸುಧೀರ್ ಹೇರೂರು ಇವರ ಮಾರ್ಗದರ್ಶನದಲ್ಲಿ ಈ ದುರಸ್ತಿ ಕಾರ್ಯ ನಡೆದಿದ್ದು ಪ್ರಾಸ್ತಾವಿಕ ಮಾತು ಶ್ರೀ ವಿಜಯ ಧೀರಜ್ ರವರು ನೀಡಿದರು. ಕಾರ್ಯಕ್ರಮವನ್ನು ದೀಪಕ್ ನಿರೂಪಿಸಿದರು.
ನೂತನವಾಗಿ ಉದ್ಘಾಟನೆಗೊಂಡ ಹೇರೂರು ಫ್ರೆಂಡ್ ಕ್ಲಬ್ ನ ಕನಸಿನ ಕಾರ್ಯಕ್ರಮ ಇದಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಹೆಜಮಾಡಿ : ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ

Posted On: 01-09-2023 07:05AM
ಹೆಜಮಾಡಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಆಶ್ರಯದಲ್ಲಿ ರಾಜೀವ ಗಾಂಧಿ ಕ್ರೀಡಾಂಗಣ ಹೆಜಮಾಡಿ ಇಲ್ಲಿ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಜರಗಿತು.

ಹೆಜಮಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ರೇಷ್ಮಾ ಮೆಂಡನ್ ರವರ ಅಧ್ಯಕ್ಷತೆಯಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಪಾಂಡುರಂಗ ಕರ್ಕೇರಾ ಉದ್ಘಾಟಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಶೇಕ್ ಸಿರಾಜ್ ಹೆಜಮಾಡಿ, ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಸತೀಶ್ ನಾಯಕ್, ರಿತೇಶ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಈಶ್ವರ್ ಉಪಸ್ಥಿತರಿದ್ದರು.
ಸಂಸ್ಥೆಯ ಹಿರಿಯ ಶಿಕ್ಷಕಿ ಸಂಪಾವತಿ ಸ್ವಾಗತಿಸಿದರು. ಸಹ ಶಿಕ್ಷಕಿ ದೀಪ ಉಡುಪ ಹಾಗೂ ಅನಿತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ಮಂಜುನಾಥ ಪಿ ವಂದಿಸಿದರು.
ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಪಂಚ ಪವಿತ್ರ ಗಿಡ ವಿತರಣಾ ಅಭಿಯಾನ

Posted On: 31-08-2023 06:06PM
ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಭಾರತೀಯ ಜನ ಔಷಧಿ ಕೇಂದ್ರ ಮತ್ತು ಸುವರ್ಣ ಎಂಟರ್ಪ್ರೈಸಸ್ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಅಜ್ಜರಕಾಡು ಜನ ಔಷಧಿ ಕೇಂದ್ರದಲ್ಲಿ ಪಂಚ ಪವಿತ್ರ ಗಿಡಗಳ ವಿತರಣಾ ಅಭಿಯಾನ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಂಕರಪುರ ದ್ವಾರಕಾಮಯಿ ಸಾಯಿ ಮುಖ್ಯಪ್ರಾಣ ದೇವಾಲಯದ ಮುಖ್ಯಸ್ಥರಾದ ಸಾಯಿ ಈಶ್ವರ ಗುರೂಜಿ, ನಾರಾಯಣ ಗುರುಗಳು ಸಮಾಜದ ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆ ನೀಡಿದವರು ಪ್ರಕೃತಿಗೆ ಹೆಚ್ಚಿನ ಒತ್ತನ್ನು ನೀಡಿದ ಅವರು ಬಹಳಷ್ಟು ಸಾಮಾಜಿಕ ಸುಧಾರಣಾ ಕಾರ್ಯವನ್ನು ಮಾಡಿದವರು ಅವರ ಜಯಂತಿಯನ್ನು ಈ ಮೂಲಕ ಆಚರಣೆ ಮಾಡಿದ್ದು, ಅಭಿನಂದನಾಹ೯ ಎಂದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಸರ್ಜನ್ ಡಾ. ವೀಣಾ ಮಾತನಾಡಿ ನಾವೆಲ್ಲರೂ ಪ್ರಕೃತಿಗೆ ನಾವು ಗಿಡವನ್ನು ನೆಡುವ ಮೂಲಕ ಕೊಡುಗೆ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಜಯಂಟ್ಸ್ ಗ್ರೂಪ್ ಅಧ್ಯಕ್ಷರಾದ ವಿವೇಕಾನಂದ ಕಾಮತ್, ಪೂರ್ವ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಘಟಕರಾದ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ಈ ಸಂದಭ೯ದಲ್ಲಿ ವಿವಿಧ ಧಾಮಿ೯ಕ ಸ್ಥಳಗಳಲ್ಲಿ ನೆಡಲು ಧಾಮಿ೯ಕ ಮುಖಂಡರುಗಳಿಗೆ ಪಂಚ ಪವಿತ್ರ ಗಿಡಗಳನ್ನು ವಿತರಿಸಲಾಯಿತು. ಜಯಂಟ್ಸ್ ಪದಾಧಿಕಾರಿಗಳಾದ ಮಿಲ್ಟನ್ ಒಲಿವೇರಾ, ಶ್ರೀನಾಥ್ ಕೋಟ, ರೊನಾಲ್ಡ್ ಡಯಾಸ್, ರವಿರಾಜ್ ಹೆಚ್.ಪಿ, ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.