Updated News From Kaup
ಪಡುಬಿದ್ರಿ ಗ್ರಾಮ ಪಂಚಾಯತ್ ಗೆ ಶಾಸಕರ ಭೇಟಿ ; ವಿವಿಧ ಸವಲತ್ತು ವಿತರಣೆ ; ಸಾರ್ವಜನಿಕರ ಅಹವಾಲು ಸ್ವೀಕಾರ

Posted On: 14-08-2023 09:25PM
ಪಡುಬಿದ್ರಿ : ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.

ಶಾಸಕರು ಪಂಚಾಯತ್ ನ 25 ಶೇಕಡಾ ನಿಧಿಯಿಂದ ಪರಿಶಿಷ್ಟ ಜಾತಿ ಅವರಿಗೆ ಮಂಜೂರಾದ ಮನೆ ರಿಪೇರಿಯ ಸಹಾಯಧನ ಹಾಗೂ ಶೇಕಡಾ 5 ನಿಧಿಯಿಂದ ಅಂಗವಿಕಲರಿಗೆ ಸಹಾಯಧನ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಪಡುಬಿದ್ರಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದಾ, ಪಡುಬಿದ್ರಿ ಪೋಲಿಸ್ ಉಪ ನಿರೀಕ್ಷಕರಾದ ಪ್ರಸನ್ನ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರಾಜಶ್ರೀ ಕಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪಂಚಾಕ್ಷರಿ, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿರ್ವ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿರ್ವ ವಲಯದ ಬೃಹತ್ ಪಂಜಿನ ಮೆರವಣಿಗೆ ಸಂಪನ್ನ

Posted On: 14-08-2023 09:05PM
ಶಿರ್ವ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿರ್ವ ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆಯು ಆಗಸ್ಟ್ 13ರಂದು ಶಿರ್ವ ಸಿದ್ಧಿವಿನಾಯಕ ದೇವಸ್ಥಾನದಿಂದ ಆರಂಭಗೊಂಡು ಶಿರ್ವಪೇಟೆವರೆಗೆ ಸಾಗಿ ಬಂತು.

ನಂತರ ಶಿರ್ವ ಗಣೇಶೋತ್ಸವ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ನುಡಿಗಳನ್ನು ಜಿಲ್ಲಾ ಸೇವಾಪ್ರಮುಖ್ ರಾದ ವಿಖ್ಯಾತ ಭಟ್ ಮಾಡಿದರು.

ದಿಕ್ಸೂಚಿ ಭಾಷಣವನ್ನು ಬಜರಂಗದಳ ರಾಜ್ಯಸಂಚಾಲಕರಾದ ಸುನಿಲ್ ಕೆ ಆರ್ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿ. ಹಿಂ. ಪ. ತಾಲೂಕು ಅಧ್ಯಕ್ಷ ಜಯಪ್ರಕಾಶ್ ಪ್ರಭು, ತಾಲೂಕು ಕಾರ್ಯದರ್ಶಿ ರಾಜೇಂದ್ರ ಶೆಣೈ, ಸಹ ಸಂಚಾಲಕ್ ಆನಂದ ಶಿರ್ವ, ತಾಲೂಕು ದುರ್ಗಾವಾಹಿನಿ ಪ್ರಮುಖ್ ನಿಕ್ಷಿತಾ , ಪ್ರಕಾಶ್ ಕೋಟ್ಯಾನ್ ವಲಯ ಅಧ್ಯಕ್ಷರು, ಕಾರ್ಯದರ್ಶಿ ನೀರಜ್, ಸಂಚಾಲಕ್ ವಿಶ್ವನಾಥ್, ಸಂಘದ ಹಿರಿಯರು , ಶ್ರೀಕಾಂತ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ,ಶಿ ಲ್ಪಾಸುವರ್ಣ, ರವೀಂದ್ರ ಪಾಟ್ಕರ್, ಪ್ರಸಾದ್ ಕುತ್ಯಾರ್, ಭಾಜಪದ ಪ್ರಮುಖರು ಉಪಸ್ಥಿತರಿದ್ದರು.
ಬೆಳಪುವಿನಲ್ಲಿ ಅತ್ಯಾಧುನಿಕ ಕ್ರಿಕೆಟ್ ಕ್ರೀಡಾಂಗಣಕ್ಕೆ ಸ್ಥಳ ಪರಿಶೀಲನೆ

Posted On: 14-08-2023 08:58PM
ಬೆಳಪು : ಇಲ್ಲಿ ನಿರ್ಮಾಣಗೊಳ್ಳಲಿರುವ ಐ.ಪಿ.ಎಲ್ ಮಾದರಿಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ರಜನೀಶ್ ರವರ ತಂಡ ಸ್ಥಳ ಪರಿಶೀಲನೆ ನಡೆಯಿತು.
ಗ್ರಾಮ ಅಭಿವೃದ್ಧಿಯ ರುವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಮುತುವರ್ಜಿಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೆ ಅಧಿಕಾರಿಗಳು, ತಾಲೂಕು ಸರ್ವೆ ಅಧಿಕಾರಿಗಳು, ಗ್ರಾಮ ಕರಣಿಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾಳೆ : ನಾನಿಲ್ತಾರು ಅಭಿಮಾನಿ ಬಳಗ ಮುಂಬೈ - 15ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Posted On: 14-08-2023 08:53PM
ಕಾರ್ಕಳ : ಇಲ್ಲಿನ ನಾನಿಲ್ತಾರು ಅಭಿಮಾನಿ ಬಳಗ ಮುಂಬಯಿ( ಮುಂಡ್ಕೂರು) ಇವರ ವತಿಯಿಂದ 15 ನೇ ವರ್ಷದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮೀ ಪೂಜೆ ನಾಳೆ (ಆಗಸ್ಟ್ 15) ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1 ರವರೆಗೆ ವಿವಿಧ ಕಾರ್ಯಕ್ರಮದೊಂದಿಗೆ ಮುಂಬೈ ಜೋಗೆಶ್ವರಿ ರೈಲ್ವೆ ನಿಲ್ದಾಣದ ಬಳಿಯ ಮಾಂಗಲ್ಯ ಮಂಗಳ್ ಕಾರ್ಯಾಲಯದಲ್ಲಿ ನಡೆಯಲಿದೆ. ಮುಂಬೈ ಭಾಗದವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.
ಕಟಪಾಡಿ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ - ವಾರ್ಷಿಕ ಕೆಸರುಗದ್ದೆ ಕ್ರೀಡಾಕೂಟ

Posted On: 14-08-2023 06:33AM
ಕಟಪಾಡಿ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಹಾಗೂ ಉಡುಪಿ ವಲಯದ ಅತಿಥ್ಯದಲ್ಲಿ 14 ವಲಯಗಳ ಸದಸ್ಯರ ಜಿಲ್ಲಾಮಟ್ಟದ ಕೆಸರು ಗದ್ದೆ ಕ್ರೀಡಾಕೂಟವು ಕಟಪಾಡಿ ಬೀಡು ಕಂಬಳ ಗದ್ದೆಯ ಸಮೀಪದಲ್ಲಿ ಭಾನುವಾರ ನಡೆಯಿತು.
ಕಟಪಾಡಿಬೀಡು ಗೋವಿಂದ ರಾಜ್ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಭಾಗವಹಿಸಿದ್ದರು. ಅವರು ಈ ಸಂದರ್ಭ ಮಾತನಾಡಿ, ಜಗತ್ತಿನಲ್ಲಿ ಛಾಯಾಗ್ರಾಹಕರನ್ನು ಮೀರಿಸುವ ವ್ಯಕ್ತಿ ಯಾರಿಲ್ಲ. ದೇಶದಲ್ಲಿ ಅತೀ ಹೆಚ್ಚು ಭವಿಷ್ಯ ಇರುವ ವೃತ್ತಿನಿರತರು ಛಾಯಾಗ್ರಾಹಕರಾಗಿದ್ದಾರೆ. ಪ್ರಸ್ತುತ ಸರಕಾರವನ್ನು ಗುರುತಿಸಿ, ಎಚ್ಚರಿಸುವಂತಹ ಕೆಲಸ ಮಾಡುತ್ತಿರುವ ಛಾಯಾಗ್ರಾಹಕರನ್ನು ಸರಕಾರ ಗುರುತಿಸುತ್ತಿಲ್ಲ ಎಂಬ ಕೂಗು ಕೇಳುತ್ತಿದೆ. ಛಾಯಾಗ್ರಾಹಕರಿಗೂ ಸೂಕ್ತ ಸ್ಥಾನಮಾನ ದೊರೆಯಬೇಕಿದೆ ಎಂದರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಡಿಜಿಟಲ್ ಕ್ರಾಂತಿಯಿಂದಾಗಿ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಛಾಯಾಗ್ರಾಹಕರು ನಮ್ಮ ನೆನಪುಗಳನ್ನು ಜೀವಂತವಾಗಿಸುವ ವ್ಯಕ್ತಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಧಾವಂತದಿಂದಾಗಿ ಛಾಯಾಗ್ರಾಹಕರು ಪ್ರತಿನಿತ್ಯ ಅಪ್ ಡೇಟ್ ಆಗಬೇಕಿದೆ ಎಂದರು.
ಸಭಾಧ್ಯಕ್ಷತೆಯನ್ನು ಎಸ್ ಕೆ ಪಿಎ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಉಡುಪಿಯ ಸಮಾಜಸೇವಕ ವಿಶ್ವನಾಥ ಶೆಣೈ , ಅಶ್ವಿನ್ ಬಲ್ಲಾಳ್, ಶ್ರೀನಿವಾಸ್ ಬಲ್ಲಾಳ್ , ವಿನಯ ಬಲ್ಲಾಳ್, ಸುಭಾಸ್ ಬಲ್ಲಾಳ್, ನವೀನ್ ಬಲ್ಲಾಳ್, ಲಯನ್ಸ್ ಜಿಲ್ಲಾ ರೀಜನಲ್ ಚೇರ್ಮನ್ ವಿ. ಪ್ರಸಾದ್ ಶೆಟ್ಟಿ, ಕೆ. ವಾಸುದೇವ ರಾವ್, ನವೀನ್ ಕುದ್ರೋಳಿ, ಎಸ್ ಕೆಪಿಎ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್.ಕೆ.ಪಿ.ಎ ಉಡುಪಿ ವಲಯಾಧ್ಯಕ್ಷ ಜನಾರ್ಧನ ಕೊಡವೂರು, ರಾಜೇಶ್ ತೊಕ್ಕೊಟ್ಟು ಉಪಸ್ಥಿತರಿದ್ದರು. ಎಸ್ ಕೆಪಿಎ ಉಡುಪಿ ವಲಯದ ಅಧ್ಯಕ್ಷ ಜನಾರ್ಧನ ಕೊಡವೂರು ಸ್ವಾಗತಿಸಿದರು. ರಾಘವೇಂದ್ರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ ಐತಾಳ್ ಕಾಪು ವಂದಿಸಿದರು.
ಮಟ್ಟಾರು : ಹರ್ ಘರ್ ತಿರಂಗಾ ಅಭಿಯಾನ

Posted On: 13-08-2023 05:59PM
ಮಟ್ಟಾರು : ಇಲ್ಲಿನ ಅಂಚೆ ಕಚೇರಿ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನವು ನಡೆಯಿತು.
ಸಾಂಕೇತಿಕವಾಗಿ ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ ಪ್ರಭು ಇವರು ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಸ್ಥಳೀಯ ಪಂಚಾಯತ್ ಸದಸ್ಯರಾದ ಸುರೇಶ ನಾಯ್ಕ, ಗೋಪಾಲ ನಾಯ್ಕ, ವಿಶ್ವಹಿಂದು ಪರಿಷತ್ ಪದಾಧಿಕಾರಿಗಳು, ಅಂಚೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೇವದಾಸ ಪ್ರಭು ಇವರಿಂದ ಕೊಡುಗೆಯಾಗಿ ಸುಮಾರು 35 ಜನರಿಗೆ ರಾಷ್ಟ್ರ ಧ್ವಜವನ್ನು ನೀಡಲಾಯಿತು.
ಅಂಚೆ ಪಾಲಕ ದಿನೇಶ ಪಾಟ್ಕರ್ ಸ್ವಾಗತಿಸಿದರು, ಸಿಬ್ಬಂದಿ ಧೀರಜ್ ಸಹಕರಿಸಿದರು.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Posted On: 13-08-2023 05:50PM
ಪಲಿಮಾರು : ಇಲ್ಲಿನ ಹೊೖಗೆ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಫಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಡಿ ಪ್ರಭು, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್, ಉಪನ್ಯಾಸಕಿ ವಿಜಯಲಕ್ಷ್ಮಿ , ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಸುನಿತಾ, ಕನ್ನಡ ಭಾಷಾ ಶಿಕ್ಷಕರಾದ ಸುಧಾಕರ್ ಶೆಣೈ, ದೈಹಿಕ ಶಿಕ್ಷಣ ಶಿಕ್ಷಕಿ ಅಮೃತಾ, ಹೊೖಗೆ ಫ್ರೆಂಡ್ಸ್ ನ ಅಧ್ಯಕ್ಷ ರಿತೇಶ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ಸದಸ್ಯರಾದ ದಿನೇಶ್, ಅಂಕಿತ್, ಜ್ಞಾನೇಶ್, ಅರುಣ್, ನಿಕೇಶ್ ಪುತ್ರನ್, ಪುರುಷೋತ್ತಮ, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಸಾದ್ ಪಲಿಮಾರು ಉಪಸ್ಥಿತರಿದ್ದರು.
ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ

Posted On: 13-08-2023 05:26PM
ಕಾಪು : ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಜರಗಿತು.

ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರನ್ನು ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಡುಬಿದ್ರಿ ರೋಟರಿ ಕ್ಲಬ್ : ಆಟಿದ ಗಮ್ಮತ್ತ್

Posted On: 13-08-2023 05:11PM
ಪಡುಬಿದ್ರಿ : ತುಳುವ ಜನರು ಹೆಣ್ಣು, ಹೊನ್ನು, ಮಣ್ಣು ಮಾಯೆ ಎನ್ನುವವರಲ್ಲ. ಹೆಣ್ಣು ಸತ್ಯ, ಮಣ್ಣು ಸತ್ಯ ಎನ್ನುವವರು ತುಳುನಾಡಿನವರು. ಇಲ್ಲಿಯ ಆಹಾರಪದ್ಧತಿ, ಕೆಲಸ ಕಾರ್ಯಗಳು, ಕಣ್ಣೀರಿನ ಕತೆಗಳು ನಮಗೆ ಇಂದು ಮಾದರಿಯಾಗಬೇಕಿದೆ. ತುಳುವರ ಆಟಿ ಮತ್ತು ಮಾಯಿ ತಿಂಗಳು ತುಳುವರಿಗೆ ಕೃಷಿ ಬದುಕು ಕಟ್ಟಿಕೊಡುವ ತಿಂಗಳಾಗಿದೆ ಎಂದು ಮೂಡಬಿದ್ರಿಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು. ಅವರು ರೋಟರಿ ಕ್ಲಬ್, ಇನ್ನರ್ವೀಲ್ ಕ್ಲಬ್, ರೋಟರಿ ಸಮುದಾಯದಳ, ರೋಟರ್ಯಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಸುಜಾತಾ ಆಡಿಟೋರಿಯಂನಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕಿ ಡಾ. ಸುಧಾರಾಣಿ ಅವರನ್ನು ಸನ್ಮಾನಿಸಲಾಯಿತು. ಪಡುಬಿದ್ರಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನವೀನ್ಚಂದ್ರ ಜೆ. ಶೆಟ್ಟಿ, ರೋಟರಿ ಕ್ಲಬ್ ಸಹಾಯಕ ಗವರ್ನರ್ ಶೈಲೇಂದ್ರ ರಾವ್ ಮಾತನಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ನಮೃತಾ ಮಹೇಶ್, ರೋಟರ್ಯಾಕ್ಟ್ ಕ್ಲಬ್ನ ಪ್ರತಿನಿಧಿ ಶೃತಿ ಶೆಣೈ, ರೋಟರಿ ಸಮುದಾಯ ದಳದ ಅಧ್ಯಕ್ಷ ರಚನ್ ಸಾಲ್ಯಾನ್, ರೋರ್ಯಾಕ್ಟ್ ಕ್ಲಬ್ ಅಧ್ಯಕ್ಷ ತನಿಷಾ ಜಿ. ಕುಕ್ಯಾನ್, ರೋಟರಿ ಕ್ಲಬ್ ಕಾರ್ಯದರ್ಶಿ ಪವನ್ ಸಾಲ್ಯಾನ್, ಇನ್ನರ್ವೀಲ್ ಕ್ಲಬ್ ಕಾರ್ಯದರ್ಶಿ ಮನೋರಮ ಮೇಘನಾಥ್, ರೋಟರಿ ಸಮುದಾಯ ದಳದ ಕಾರ್ಯದರ್ಶಿ ಪ್ರತೀಕ್ ಶೆಟ್ಟಿ, ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಪ್ರತೀಕ್ ಆಚಾರ್ಯ, ಕಾರ್ಯಕ್ರಮ ನಿರ್ದೇಶಕರಾದ ಪಿ.ಕೃಷ್ಣ ಬಂಗೇರ, ಶುಭ ದಿನೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಇನ್ನರ್ವೀಲ್ ಕ್ಲಬ್ನ ಸದಸ್ಯರಿಂದ ಹಾಗೂ ಮಕ್ಕಳಿಂದ ತುಳುನಾಡಿನ ಸಂಸ್ಕೃತಿ ಬಿಂಬಿಸುವ ನೃತ್ಯಗಳು, ಮನೆಗಳಲ್ಲಿ ತಯಾರಿಸಿದ ವಿವಿಧ ಬಗೆಯ ಆಹಾರಗಳು ವಿಶೇಷವಾಗಿತ್ತು. ಶಿಕ್ಷಕ ಬಿ.ಎಸ್. ಆಚಾರ್ಯ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಕಾರ್ಯಕ್ರಮದಲ್ಲಿ ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪವನ್ ಸಾಲ್ಯಾನ್ ವಂದಿಸಿದರು. ರಾಜೇಶ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.
ಉಚ್ಚಿಲ ರೋಟರಿ ಕ್ಲಬ್ : 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Posted On: 13-08-2023 03:25PM
ಉಚ್ಚಿಲ : ಇಲ್ಲಿನ ರೋಟರಿ ಕ್ಲಬ್ ನ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಉಚ್ಚಿಲದ ರಾಧ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಝೋನ್ 5 ರ ಮಾಜಿ ಗವರ್ನರ್ ಡಾ| ಶಶಿಕಾಂತ ಕಾರಿಂಕ ರೋಟರಿ ಉಚ್ಚಿಲದ ನೂತನ ನಿಯೋಜಿತ ಅಧ್ಯಕ್ಷರಾದ ಶೇಖಬ್ಬ ಯು ಸಿ ಮತ್ತು ನಿಯೋಜಿತ ಕಾರ್ಯದರ್ಶಿ ಅಚ್ಯುತ ಶೆಣೈಯವರಿಗೆ ಪದಪ್ರದಾನಿಸಿದರು. ಈ ಸಂದರ್ಭ ಮಾತನಾಡಿದ ಅವರು ರೋಟರಿ ಸಾಮಾಜಿಕ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇಲ್ಲಿ ಯಾವುದೇ ಬೇಧಭಾವವಿಲ್ಲ. ಮುಂದಿನ ನೂತನ ತಂಡಕ್ಕೆ ಶುಭಹಾರೈಸಿದರು.
ರೋಟರಿ ಉಚ್ಚಿಲದ ಪ್ರೇರಣ ಗೃಹ ಪತ್ರಿಕೆಯನ್ನು ಝೋನ್ 5ರ ಅಸಿಸ್ಟೆಂಟ್ ಗವರ್ನರ್ ಶೈಲೇಂದ್ರ ರಾವ್ ಕೆ. ಬಿಡುಗಡೆಗೊಳಿಸಿದರು. ಈ ಸಂದರ್ಭ ಉಚ್ಚಿಲ ವ್ಯಾಪ್ತಿಯ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ನೂತನ ಸದಸ್ಯರನ್ನು ಕ್ಲಬ್ ಗೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭ ಝೋನ್ 5 ರ ಝೋನಲ್ ಲೆಫ್ಟಿನೆಂಟ್ ಚಂದ್ರ ಪೂಜಾರಿ, ರೋಟರಿ ಉಚ್ಚಿಲದ ಅಧ್ಯಕ್ಷರಾದ ಸತೀಶ್ ಕುಲಾಲ್, ಕಾರ್ಯದರ್ಶಿ ಸುಜಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.