Updated News From Kaup

ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

Posted On: 17-09-2023 01:11PM

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ರವಿವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಗೌರಿ-ಗಣೇಶ : ವಿಲಕ್ಷಣ ತಾಯಿ-ಮಗ

Posted On: 17-09-2023 12:19PM

ಸ್ತ್ರೀ ತನ್ನ ಬಯಕೆಯನ್ನು ಪುರುಷ ಸಂಬಂಧವಿಲ್ಲದೆ ನೆರವೇರಿಸಿಕೊಳ್ಳುತ್ತಾಳೆ, ಮಗುವನ್ನು ಪಡೆಯುತ್ತಾಳೆ. ಇದನ್ನು ಗಮನಿಸಿದ ಪುರುಷ ಸಿಟ್ಟಾಗುತ್ತಾನೆ,ಅಸೂಯೆಗೊಳ್ಳುತ್ತಾನೆ, ಚಿತ್ತಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಜನಿಸಿದ ಮಗು - ಪುರುಷ ಸಂಘರ್ಷವೇರ್ಪಡುತ್ತದೆ. ಪ್ರಕರಣ ಸುಖಾಂತ್ಯವಾಗುತ್ತದೆ. ಸ್ತ್ರೀಯ ನಿರ್ಬಂಧಕ್ಕೆ ಪುರುಷನು ಮಗುವನ್ನು ಒಪ್ಪಿಕೊಳ್ಳುತ್ತಾನೆ. ಇದು ಅನಿವಾರ್ಯವಾಗಿಯಲ್ಲ, ಪ್ರೀತಿಪೂರ್ವಕವಾಗಿ. ಗೌರಿ-ಗಣೇಶ ಇವರ ತಾಯಿ-ಮಗ ಸಂಬಂಧ ಇದು ಸ್ವಾರಸ್ಯಕರವಾದುದು, ಅಪ್ರಾಕೃತವಾದುದು. ಅಂತೂ ದಂಪತಿಗಳ ಸಹಜ ಸಂಬಂಧದಿಂದ ಒದಗಿ ಬಂದವನಲ್ಲ 'ಗಣೇಶ'. ಪ್ರಕೃತಿ - ಪುರುಷ ಸಮಾಗಮವಿಲ್ಲದೆಯೂ ಪ್ರಕೃತಿಯೊಂದಿಗೆ ಎಷ್ಟು ಆಳವಾದ ದೇಹ ಸಂಬಂಧದ ಅವಿನಾಭಾವವಿರುತ್ತದೊ ಅಷ್ಟೇ ಪ್ರಮಾಣದ ಭಾವ ತೀವ್ರತೆಯನ್ನು ಅಥವಾ ಅನುರಾಗವನ್ನು ಪುರುಷನೊಂದಿಗೆ ಹೊಂದಿ 'ಗಣನಾಥ'ನಾದದ್ದು, ವಿಘ್ನೇಶನಾದದ್ದು ಆದಿಪೂಜಿತನಾದದ್ದು. ನಿಗ್ರಹಿಲ್ಪಟ್ಟರೂ ಶಿವನ ಪ್ರಸನ್ನತೆಗೆ ಪ್ರಕೃತಿ ಕಾರಣವಾಗಿ ಗಣಪ ಏರಿದ ಎತ್ತರ, ಪಡೆದ ಸ್ಥಾನಮಾನ ಪುರಾಣಗಳೇ ವಿವರಿಸುವಂತೆ ಅದು ವಿಸ್ತಾರವಾದುದು.ಎಷ್ಟು ಮುನಿದರೂ ಕೊನೆಗೊಮ್ಮೆ ಪ್ರಕೃತಿಯನ್ನು ಪುರುಷ ಸಮೀಪಿಸಲೇ ಬೇಕಾಗುತ್ತದೆ. ಅನುಗ್ರಹಿಸುವುದು ಅನಿವಾರ್ಯವಾಗುತ್ತದೆ. ಈ ಪ್ರಪಂಚ ನಿಯಮ ಗಣೇಶನ ಜನನದಲ್ಲಿ ಸಹಜವಾಗಿ ಪಡಿಮೂಡಿದೆ.

ಭಾರತದ ನವ ನಿಮಾ೯ಣದ ಕೆಲಸ ಮಾಡುವ ಕನಸುಗಾರ ಮೋದಿ

Posted On: 17-09-2023 07:05AM

ಮೋದಿ ಅವರು ಪ್ರಧಾನಿಯಾಗಿ ಸಾಥ೯ಕ ಒಂಬತ್ತು ವರ್ಷ ಪೂರ್ಣಗೊಳಿಸಿದ್ದಾರೆ. ಅವರಿಗೆ ಸಿಕ್ಕಿರುವ ಪ್ರಶಂಸೆಯ ಮಾತುಗಳು, ಅವರ ಮಾತುಗಳಿಗೆ ಇರುವ ವಿಶೇಷ ಮನ್ನಣೆ ಜಗತ್ತಿನ ವಿವಿಧ ದೇಶಗಳೊಂದಿಗೆ ಇರುವ ರಾಜತಾಂತ್ರಿಕ ಸಂಬಂಧಗಳು ರಾಷ್ಟ್ರನಾಯಕರಾಗಿದ್ದ ಅವರನ್ನು ವಿಶ್ವನಾಯಕ ಆಗಿ ಪರಿವರ್ತನೆ ಮಾಡಿವೆ. ಮೋದಿ ಅವರ ಜನಪ್ರಿಯತೆ ಎಷ್ಟಿದೆಯೆಂದರೆ, ತಮಗೆ ಮೋದಿ ಅವರ ಹಸ್ತಾಕ್ಷರ ಕೇಳಬೇಕು ಅನ್ನಿಸುತ್ತಿದೆ ಎಂದು ಅಮೇರಿಕಾ ಅಧ್ಯಕ್ಷ ಬೈಡನ್ ಇತ್ತಿಚೆಗೆ ಸಭೆಯಲ್ಲಿ ಹೇಳಿದ್ದರು ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಅಮೆರಿಕದ ಗಾಯಕ ಬ್ರೂಸ್ ಸ್ಪ್ರಿಂಗ್‌ಸ್ಟೀನ್‌ ಅವರಿಗೂ ಸಿಡ್ನಿ ಕ್ರೀಡಾಂಗಣದಲ್ಲಿ ಮೋದಿ ಅವರಿಗೆ ಸಿಕ್ಕಂತಹ ಸ್ವಾಗತ ದೊರೆತಿರಲಿಲ್ಲ ಎಂದು ಆಸ್ಟೇಲೀಯಾ ಪ್ರಧಾನಿ ಆಲ್ಬನೀಸ್ ಹೇಳಿದರು. ಕ್ರೀಡಾಂಗಣದಲ್ಲಿ ಸೇರಿದ್ದ 20 ಸಾವಿರ ಜನರ ಎದುರು ಆಲ್ಬನೀಸ್ ಅವರು ಮೋದಿ ಅವರನ್ನು ‘ದಿ ಬಾಸ್’ ಎಂದು ಕರೆದಿದ್ದರು ಇದು ಮೋದಿಯವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿ ಯಾಗಿದೆ.

ಗಣೇಶ ಚತುರ್ಥಿ : ಉಡುಪಿ, ದ.ಕ ಜಿಲ್ಲೆಯಲ್ಲಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ

Posted On: 16-09-2023 04:25PM

ಗಣೇಶ ಚತುರ್ಥಿ : ಉಡುಪಿ, ದ.ಕ ಜಿಲ್ಲೆಯಲ್ಲಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ

ಪಡುಬಿದ್ರಿ : ಹಕ್ಕುಪತ್ರ ಸಮಸ್ಯೆ - ಜಿಲ್ಲಾಧಿಕಾರಿ, ಶಾಸಕರ ಭೇಟಿ

Posted On: 16-09-2023 04:02PM

ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು ಭಾಗದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ ಜನರಿಗೆ ಹಕ್ಕುಪತ್ರ ನೀಡುವಲ್ಲಿ ಸಮಸ್ಯೆ ಉಂಟಾಗುತ್ತಿದ್ದು, ಈ ಸಂಬಂಧ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಿ.ಎಂ ವಿಶ್ವಕರ್ಮ ಯೋಜನೆ : ವಿಶ್ವಕರ್ಮ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಲು ಆನೆಗುಂದಿ ಪ್ರತಿಷ್ಠಾನದಿಂದ ಪ್ರಧಾನ ಮಂತ್ರಿಗೆ ಮನವಿ

Posted On: 16-09-2023 03:57PM

ಪಡುಕುತ್ಯಾರು : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಪಂಚ ಕುಲವೃತ್ತಿ ನಡೆಸುತ್ತಿರುವ ವಿಶ್ವಕರ್ಮ ಸಮುದಾಯಕ್ಕೆ ಸೂಕ್ತ ಪರಿಗಣನೆಯೊಂದಿಗೆ ಅರ್ಹ ಪ್ರಾತಿನಿಧ್ಯ ನೀಡಬೇಕೆಂದು ಪಡುಕುತ್ಯಾರಿನ ಕಟಪಾಡಿ ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದೆ. ಪ್ರಧಾನ ಮಂತ್ರಿಯವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಘೋಷಿಸಿದ ಪಿ.ಎಂ ವಿಶ್ವಕರ್ಮ ಯೋಜನೆಯು ಸೆ.೧೭ರ ವಿಶ್ವಕರ್ಮ ಜಯಂತಿಯಂದು ದೇಶದ ೭೦ ಕೇಂದ್ರಗಳಲ್ಲಿ ಉದ್ಘಾಟನೆಗೊಳ್ಳುತ್ತಿದೆ.

ಕಾಪು : ಕನ್ನಡ ಬಳಕೆ, ಅಭಿರುಚಿಯನ್ನು ಬೆಳೆಸುವ ಕಾರ್ಯ ಕನ್ನಡ ಭಾಷೆ ಕಲಿಸುವ ಶಿಕ್ಷಕರಿಂದ ಆಗಲಿ - ನೀಲಾವರ ಸುರೇಂದ್ರ ಅಡಿಗ

Posted On: 16-09-2023 12:31PM

ಕಾಪು : ಬೋಧಿಸುವ ಭಾಷೆಗೆ ನ್ಯಾಯ ಒದಗಿಸುವ ಕಾರ್ಯ ಶಿಕ್ಷಕರು ಮಾಡಬೇಕಾಗಿದೆ. ಕನ್ನಡ ಭಾಷೆಯ ಮೇಲೆ ಆಂಗ್ಲ ಭಾಷೆಯ ಪ್ರಭಾವ ಅಷ್ಟೇನು ಪ್ರಭಾವ ಬೀರದು. ಕನ್ನಡ ಎಲ್ಲೆಲ್ಲೂ ಅದರದೇ ಆದ ಮಹತ್ವ ಹೊಂದಿದೆ. ಪದವಿಯಲ್ಲಿ ಕಲಾ ವಿಷಯದಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯಸಿಸುವವರ ಸಂಖ್ಯೆಗೆ ಕೊರತೆಯಿಲ್ಲ. ಕನ್ನಡ ಬಳಕೆ ಮತ್ತು ಅಭಿರುಚಿಯನ್ನು ಬೆಳೆಸುವ ಕಾರ್ಯ ಕನ್ನಡ ಭಾಷೆ ಕಲಿಸುವ ಶಿಕ್ಷಕರಿಂದ ಆಗಲಿ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ ವತಿಯಿಂದ ಕಾಪು ತಾಲೂಕು ವ್ಯಾಪ್ತಿಯ ಪಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಕನ್ನಡ ಭಾಷಾ ಶಿಕ್ಷಕರು, ಉಪನ್ಯಾಸಕರಿಗೆ ವಿದ್ಯಾರ್ಥಿಗಳಲ್ಲಿ ಕನ್ನಡ ಕಲಿಕೆ, ಶುದ್ಧ ಕನ್ನಡದ ಬಳಕೆ ಮತ್ತು ಕನ್ನಡ ನಾಡಿನ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸುವ ಕುರಿತು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶನಿವಾರ ಜರಗಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಉಡುಪಿ : ಮಲ್ಪೆಯ ತೊಟ್ಟಂ ನಲ್ಲಿ ಗ್ರಾನೈಟ್ ಬಿದ್ದು ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪರಿಹಾರ ನೀಡಲು SDTU ಆಗ್ರಹ

Posted On: 16-09-2023 07:21AM

ಉಡುಪಿ : ಮಲ್ಪೆಯ ತೊಟ್ಟಂನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ. ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ.

ಶಿರ್ವ ಸಂತಮೇರಿ ಕಾಲೇಜು - ಕೊಂಕಣಿ ಅಧ್ಯಯನ ಪೀಠದಿಂದ ವಿಶೇಷ ಉಪನ್ಯಾಸ

Posted On: 15-09-2023 09:49PM

ಶಿರ್ವ : ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ವತಿಯಿಂದ ಸಂತ ಮೇರಿ ಕಾಲೇಜಿನ ಸಹಯೋಗದಲ್ಲಿ " ಕೊಂಕಣಿ ಮಾತೃಭಾಷೆ -ಒಂದು ಚಿಂತನೆ" ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.

ಕಾಪು : ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ

Posted On: 15-09-2023 06:40PM

ಕಾಪು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ಇಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಜರುಗಿತು.