Updated News From Kaup

ಶಿರ್ವ : ವಿಶ್ವಕರ್ಮ ಧ್ವಜವು ಸರ್ವರ ಒಮ್ಮತ ಅಭಿಪ್ರಾಯ ಪ್ರಕಾರ ಮೂಡಿಬರಲಿದೆ - ಆನೆಗುಂದಿಶ್ರೀ

Posted On: 28-08-2023 09:29PM

ಶಿರ್ವ : ವಿಶ್ವ ಬ್ರಾಹ್ಮಣ ಸಮಾಜದ ಐಕ್ಯತೆಯ ದ್ಯೋತಕವಾಗಿ ಸರ್ವರ ಒಮ್ಮತ ಅಭಿಪ್ರಾಯದ ಪ್ರಕಾರ ವಿಶ್ವಕರ್ಮ ಧ್ವಜವು ಮೂಡಿಬರಲಿದೆ. ಇದೀಗ ಆರಂಭಿಕ ಹಂತದ ಚಿಂತನಾ ಸಭೆಗಳನ್ನು ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು. ಅವರು ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಜರುಗಿದ ವಿಶ್ವಕರ್ಮ ಧ್ವಜದ ಎರಡನೇ ಚಿಂತನಾ ಸಭೆಯಲ್ಲಿ ಮಾತನಾಡುತ್ತಿದ್ದರು.

ಧ್ವಜದ ವಿಷಯದಲ್ಲಿ ಬಣ್ಣ, ಪ್ರಮಾಣ, ಆಕಾರ, ಲಾಂಛನ, ವಿನ್ಯಾಸದ ಬಗ್ಗೆ ಸಮಾಜದ ಎಲ್ಲಾ ಸಂಘಟನೆಗಳ ಅಭಿಪ್ರಾಯ ಪಡೆಯಲಾಗುವುದು. ಇದಕ್ಕಾಗಿ ಸಮಾಜದ ದೇವಸ್ಥಾನಗಳಲ್ಲಿ, ಆನೆಗುಂದಿ ಗುರು ಸೇವಾ ಪರಿಷತ್ ನ ವಿಧಾನ ಸಭಾ ಕೇಂದ್ರಗಳಲ್ಲಿ ಸೇರಿದಂತೆ ಸಮಾಜದ ಸಂಘ ಸಂಸ್ಥೆಗಳಿರುವ ಪ್ರದೇಶಗಳಲ್ಲಿ ವಿವಿಧ ಹಂತಗಳಲ್ಲಿ ಚಿಂತನಾ ಸಭೆಗಳನ್ನು ನಡೆಸಲಾಗುವುದು. ಎರಡನೇ ಚಿಂತನಾ ಸಭೆಯಲ್ಲಿ ಬೆಂಗಳೂರಿನ ವೇದ ಆಗಮ ಸಂಸ್ಕೃತ ಮಹಾಪಾಠ ಶಾಲೆಯ ಸಂಸ್ಕೃತ ಶಿಕ್ಷಕರಾದ ಕೆ ರಾಘವೇಂದ್ರ ಸ್ತಪತಿ ಬೆಂಗಳೂರು ಇವರು ವಿಶ್ವಕರ್ಮ ಧ್ವಜದ ಬಗ್ಗೆ ಪುರಾಣ ಹಿನ್ನೆಲೆ ಮತ್ತು ವಿವಿಧ ಮಾದರಿಯ ಧ್ವಜಗಳೊಂದಿಗೆ ತಮ್ಮ ಅಭಿಪ್ರಾಯ ಮಂಡಿಸಿದರು.

ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ಇಲಾಖೆಯ ವಿಶ್ರಾಂತ ಹೆಚ್ಚುವರಿ ಕಾರ್ಯದರ್ಶಿ ಬಿ. ಬಿ ಪತ್ತಾರ ಬೆಂಗಳೂರು, ಆನೆಗುಂದಿ ಮಠದ ಅಧ್ಯಕ್ಷ ಹರಿಶ್ಚಂದ್ರ ಎನ್ ಆಚಾರ್ಯ ಬೆಂಗಳೂರು, ದಕ್ಷಿಣ ಕನ್ನಡ ವಿಶ್ವ ಬ್ರಾಹ್ಮಣ ಸಂಘ ಬೆಂಗಳೂರು ಅಧ್ಯಕ್ಷ ತುಕಾರಾಮ್ ಆಚಾರ್ಯ ಬೆಂಗಳೂರು, ಗುರು ಸೇವಾ ಪರಿಷತ್ ಬೆಂಗಳೂರು ಸಮಿತಿ ಅಧ್ಯಕ್ಷ ಎಂ.ಜಿ ನಾಗೇಶ್ ಆಚಾರ್ಯ ಬೆಂಗಳೂರು, ಕನಕಪುರ ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಶಿವರಾಮ ಆಚಾರ್ಯ ಕನಕಪುರ. ರವಿ ಆಚಾರ್ಯ ಬೆಂಗಳೂರು, ಪಾಂಗಾಳ ಜನಾರ್ಧನ ಆಚಾರ್ಯ ಬೆಂಗಳೂರು, ಅರುಣೋದಯ ಆಚಾರ್ಯ ಬೆಂಗಳೂರು, ಮಹಾಬಲೇಶ್ವರ ಆಚಾರ್ಯ ಬೆಂಗಳೂರು, ಗಿರೀಶ ಆಚಾರ್ಯ ಏಳಂದೂರು, ಪ್ರತಾಪ್ ಆಚಾರ್ಯ ಬೆಂಗಳೂರು, ಮಂಜುನಾಥ ಆಚಾರ್ಯ ರಾಮನಗರ ಬೆಂಗಳೂರು, ಸೋಹನ್ ಆದಿತ್ಯ ಆಚಾರ್ಯ ಬೆಂಗಳೂರು, ಮನೋಹರ ಕೆ ಗುಡೂರು, ಆರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಜನಾರ್ದನ ಆಚಾರ್ಯ ಆರಿಕ್ಕಾಡಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಪುರುಷೋತ್ತಮ ಆಚಾರ್ಯ ಪುತ್ತೂರು,ಕೋಟ ಗಣೇಶ ಆಚಾರ್ಯ, ರೂಪೇಶ್ ಆಚಾರ್ಯ ಶಿರ್ವ, ಪೆರ್ಣೆ ಮಧುಸೂದನ ಆಚಾರ್ಯ ಕಾಸರಗೋಡು, ಗಣೇಶ್ ಆಚಾರ್ಯ ಕೆಮ್ಮಣ್ಣು, ವಿಘ್ನೇಶ್ ಕುಮಾರ್ ಕಾಸರಗೋಡು ಅಭಿಪ್ರಾಯ ಮಂಡಿಸಿದರು.

ಧ್ವಜ ಸಮಿತಿಯ ಸಂಚಾಲಕರಾದ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು ಪ್ರಾಸ್ತಾವಿಕ ಮಾತುಗಳಾಡಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು

ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ

Posted On: 28-08-2023 09:21PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕ, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷ, ಕಟಪಾಡಿ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ‌ಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡು ಶುಭ ಹಾರೈಸಿದರು.

ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅಶೋಕ್ ರಾವ್ ಕಟಪಾಡಿಯಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಗೆ ಶಕ್ತಿತುಂಬುವ ಕೆಲಸ ಮಾಡಿ ಪಕ್ಷದ ಗೌರವ ಹೆಚ್ಚಿಸುವ ಕೆಲಸ ಮಾಡುವೆ ಎಂದರು.

ಈ ಸಂದರ್ಭ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ, ಕಟಪಾಡಿಯ ಪ್ರಮುಖರಾದ ಗಂಗಾಧರ್ ಸುವರ್ಣ, ಮುರಳೀಧರ ಪೈ, ಶಿಲ್ಪಾ ಜಿ ಸುವರ್ಣ, ಸುಭಾಸ್ ಬಲ್ಲಾಳ್, ಗುರುಕ್ರಪಾ ರಾವ್, ಕವಿತಾ ಸುವರ್ಣ, ಶ್ರೀನಿವಾಸ ಕಿಣಿ, ಪವಿತ್ರ ಶೆಟ್ಟಿ, ರಘುಪತಿ‌ ಆಚಾರ್ಯ, ಬೂತ್ ಅಧ್ಯಕ್ಷ ಕರುಣಾಕರ ಪೂಜಾರಿ, ನಿತೇಶ್ ದೇವಾಡಿಗ, ಕಟಪಾಡಿ‌ ಪಂಚಾಯತ್ ಸದಸ್ಯರುಗಳು, ಅರುಣ್ ಶೆಟ್ಟಿ ‌ಪಾದೂರು, ಅನಿಲ್ ಕುಮಾರ್, ನವೀನ್ ಎಸ್ ಕೆ, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ಸಂದೀಪ್ ಶೆಟ್ಟಿ, ಸಂದೀಪ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ವಿದ್ಯಾರ್ಥಿವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ

Posted On: 27-08-2023 08:12PM

ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಮತ್ತು ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಗುರಿಕಾರರಿಗೆ ಗೌರವಧನ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಭಾನುವಾರ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಜಿ. ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮೊಗವೀರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಸರಕಾರವನ್ನು ಒತ್ತಾಯಿಸುವ ಪ್ರಥಮ ಹಂತದ ಹೋರಾಟ ನಡೆಯುತ್ತಿದೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಕೋರಿ ಲೋಕಸಭಾ ಚುನಾವಣೆಗೆ ಮೊದಲು ಬೃಹತ್ ಮಟ್ಟದ ಹೋರಾಟ ನಡೆಸಲಾಗುವುದು ಎಂದರು. ರಾಜ್ಯದಲ್ಲಿರುವ ಫಿಶರೀಸ್ ಕಾಲೇಜಿನಲ್ಲಿ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗುತ್ತಿಲ್ಲದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತುಕತೆ ನಡೆಸಲಾಗಿದೆ ಎಂದರು.

2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 524 ವಿದ್ಯಾರ್ಥಿಗಳಿಗೆ 18.90 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ಮತ್ತು ಬಗ್ವಾಡಿ, ಬಾರ್ಕೂರು, ಉಚ್ಚಿಲ ಮತ್ತು ಮಂಗಳೂರು ಹೋಬಳಿ ವ್ಯಾಪ್ತಿಯ 342 ಮಂದಿ ಗುರಿಕಾರರಿಗೆ 17.10 ಲಕ್ಷ ರೂ. ಗೌರವಧನ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕ್ಷೇತ್ರದಲ್ಲಿ ನಡೆಯುತ್ತಿರುವ ನಿತ್ಯ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಸಹಕರಿಸುತ್ತಿರುವ ಮೋಹನ್ ಬಂಗೇರ ಕಾಪು ಮತ್ತು ಬಡಾ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳ್, ಮೊಗವೀರ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಬಗ್ವಾಡಿ ಹೋಬಳಿ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಬಾರ್ಕೂರು ಹೋಬಳಿ ಶಾಖೆ ಅಧ್ಯಕ್ಷ ಸತೀಶ್ ಅಮೀನ್, ಮೊಗವೀರ ಯುವ ಸಂಘಟನೆ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸ್ವಾಗತಿಸಿ, ಪ್ರಸ್ತಾವನೆಗೈದರು. ದೇಗುಲದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್ ವಂದಿಸಿದರು.

ಶಿರ್ವ : ಬಂಟಕಲ್ಲು ಶ್ರೀದುರ್ಗಾ ಮಹಿಳಾ ಚಂಡೆ ಬಳಗ - ಶ್ರಾವಣ ಸಂಭ್ರಮ ಸಂಪನ್ನ

Posted On: 27-08-2023 07:42PM

ಶಿರ್ವ : ಶ್ರೀದುರ್ಗಾ ಮಹಿಳಾ ಚಂಡೆ ಬಳಗ ಬಂಟಕಲ್ಲು ಇದರ ವತಿಯಿಂದ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಸಭಾಂಗಣದಲ್ಲಿ ರವಿವಾರ ಜರುಗಿದ "ಶ್ರಾವಣ ಸಂಭ್ರಮ" ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಬೇಬಿ ಪ್ರಭು ಬೆಳಂಜಾಲೆ ಇವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಮ್ಮ ಹಿರಿಯರು ಆಚರಣೆ ಮಾಡಿಕೊಂಡು ಬರುತ್ತಿದ್ದ ಸತ್‌ಸಂಪ್ರದಾಯಗಳನ್ನು ಉಳಿಸಿ ನವಪೀಳಿಗೆಗೆ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಮಹಿಳಾ ಚಂಡೆ ಬಳಗದವರು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಸಂಗೀತಾ ದಯಾನಂದ ನಾಯಕ್ ಮಾತನಾಡಿ ಬಾಲ್ಯದಿಂದಲೇ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿಯೇ ವಿವಿಧ ಕಲಾಪ್ರಕಾರಗಳಾದ ಭಜನೆ, ಸಂಗೀತ, ನಾಟ್ಯ, ಉಪಕರಣಗಳ ನುಡಿಸುವಿಕೆ, ಕಲಿಸುವುದರಿಂದ ಉತ್ತಮ ಸಂಸ್ಕಾರ ಬೆಳೆಯುತ್ತದೆ. ಈ ಬಗ್ಗೆ ತಾಯಂದಿರು ಗಮನ ಹರಿಸುವಂತೆ ಕರೆ ನೀಡಿ, ತಮ್ಮ ಇಲಾಖೆಯಿಂದ ಮಹಿಳೆಯರಿಗೆ ಸಿಗುವ ಸೌಲಭ್ಯಗಳಾದ ಉದ್ಯೋಗಿನಿ, ಧನಶ್ರೀ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಈ ವಿಷಯವನ್ನು ಪ್ರಚಾರ ಮಾಡಿ ಸಮಾಜದ ಅರ್ಹ ಮಹಿಳೆಯರಿಗೂ ಸಿಗುವಂತೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ರಘುರಾಮ ನಾಯಕ್ ಸಡಂಬೈಲು ತೊಟ್ಟಿಲುಮನೆ, ಯುನಿವರ್ಸಿಟಿ ಚಿನ್ನದ ಪದಕ ವಿಜೇತ ಪುನೀತ್ ತೆಂಡುಲ್ಕರ್, ಯಕ್ಷಗಾನ ಯುವ ಪ್ರತಿಭೆ ಸಂಧ್ಯಾ ನಾಯಕ್ ಇವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಕ್ಷೇತ್ರ ಬಂಟಕಲ್ಲು ದೇವಳದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಲೆ, ಆರ್‌ಎಸ್‌ಬಿ ಯುವವೃಂದದ ಗೌರವ ಅಧ್ಯಕ್ಷ ಕೆ.ಆರ್.ಪಾಟ್ಕರ್ ಮಹಿಳಾ ಚಂಡೆ ಬಳಗದ ನೇತೃತ್ವದಲ್ಲಿ ನಿರಂತರವಾಗಿ ನಡೆಯುತ್ತಿರುವ ಧಾರ್ಮಿಕ, ಸಾಸ್ಕೃತಿಕ, ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿ ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಚಂಡೆಬಳಗದ ಅಧ್ಯಕ್ಷೆ ಗೀತಾ ವಾಗ್ಲೆ ವಹಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭವಾನಿ ನಾಯಕ್ ವರದಿ ಓದಿದರು. ಶೈಲಜಾ ಪಾಟ್ಕರ್, ಸಂಗೀತಾ ಪಾಟ್ಕರ್, ನಾಗವೇಣಿ ಪ್ರಭು, ಆಶಾ ನಾಯಕ್, ವಿದ್ಯಾ ಪರಿಚಯಿಸಿದರು. ಕುಸುಮಾ ಕಾಮತ್ ಕರ್ವಾಲು ಧನ್ಯವಾದವಿತ್ತರು. ಭವಾನಿ ನಾಯಕ್ ನಿರೂಪಿಸಿದರು. ಖ್ಯಾತ ಗಾಯಕರಾದ ರವೀಂದ್ರ ಪ್ರಭು ಮುಲ್ಕಿ ಇವರಿಂದ "ಭಕ್ತಿ ಸಿಂಚನ" ಕಾರ್ಯಕ್ರಮ ಜರುಗಿತು.

33 ನೇ ವರ್ಷದ ಕಳತ್ತೂರು ಗಣೇಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 27-08-2023 12:46PM

ಕಾಪು : ಇಲ್ಲಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ ಕಳತ್ತೂರು ವತಿಯಿಂದ ಸೆಪ್ಟೆಂಬರ್ ತಿಂಗಳ 19 ರಂದು ನಡೆಯುವ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಹಿರಿಯ ಸಂಶೋಧಕ ಬಾಬು ಶಿವಪೂಜಾರಿ ಪ್ರಧಾನ ಸಂಪಾದಕತ್ವದ 'ಬಿಲ್ಲವರ ಗುತ್ತು ಬರ್ಕೆಗಳು' ಸಂಶೋಧನಾ ಗ್ರಂಥ ಲೋಕಾರ್ಪಣೆ

Posted On: 27-08-2023 11:14AM

ಮಂಗಳೂರು : ಹಿರಿಯ ಸಂಶೋಧಕ ಬಾಬು ಶಿವಪೂಜಾರಿ ಪ್ರಧಾನ ಸಂಪಾದಕತ್ವದ 'ಬಿಲ್ಲವರ ಗುತ್ತು ಬರ್ಕೆಗಳು' ಸಂಶೋಧನಾ ಗ್ರಂಥವನ್ನು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕುದ್ರೋಳಿ ಕ್ಷೇತ್ರದಲ್ಲಿ ಲೋಕಾರ್ಪಣೆಗೊಳಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶ್ರೀ ವಿಖ್ಯಾತನಂದ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್, ಊರ್ಮಿಳಾ ರಮೇಶ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್‌., ಚಿತ್ತರಂಜನ್ ಬೋಳಾರ್, ಗಣೇಶ್ ಅಮೀನ್ ಸಂಕಮಾರ್, ಸಾಹಿತಿ ಬಿ.ಎಂ.ರೋಹಿಣಿ, ಪಿತಾಂಬರ ಹೆರಾಜೆ, ಕಟಪಾಡಿ ಶಂಕರ ಪೂಜಾರಿ, ನವೀನ್‌ಚಂದ್ರ ಸುವರ್ಣ, ವೇದಕುಮಾರ್‌, ಹರೀಶ್ ಪೂಜಾರಿ, ಸುನೀಲ್ ಪೂಜಾರಿ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಪೊಲಿಪುವಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ

Posted On: 27-08-2023 10:34AM

ಕಾಪು : ಗುರ್ಮೆ ಫೌಂಡೇಶನ್ ಗುರ್ಮೆ, ಕಳತ್ತೂರು, ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಪೊಲಿಪು, ಮುಂಬೈ ಇವರ ಆಶ್ರಯದಲ್ಲಿ ಪೊಲಿಪು ಮೊಗವೀರ ಮಹಾಸಭಾ, ಪೊಲಿಪು, ಮುಂಬೈ ಪೊಲಿಪು ಹಳೆ ವಿದ್ಯಾರ್ಥಿ ಸಂಘ, ಪೊಲಿಪು, ಮುಂಬೈ, ಶ್ರೀ ಗಣೇಶೋತ್ಸವ ಸಮಿತಿ, ಪೊಲಿಪು ಇವರ ಸಹಭಾಗಿತ್ವದಲ್ಲಿ ಶ್ರೀನಿವಾಸ ವೈದ್ಯಕೀಯ ಕಾಲೇಜು ಮುಕ್ಕ, ಸುರತ್ಕಲ್, ಮಂಗಳೂರು ಇವರಿಂದ ಇಂದು ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸರ್ವೊತ್ತಮ್ ಕುಂದರ್, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜು ಉಪಾಧ್ಯಕ್ಷರಾದ ಡಾl ಎ. ಶ್ರೀನಿವಾಸ್ ರಾವ್, ಜಿಲ್ಲಾ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಮುಂಬೈ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸುರೇಂದ್ರ ಎಸ್, ಸುವರ್ಣ, ಪೊಲಿಪು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಧನಂಜಯ್ ಸಾಲ್ಯಾನ್, ಪೊಲಿಪು ಮೊಗವೀರ ಮಹಿಳಾ ಮಂಡಳಿ ಅಧ್ಯಕ್ಷರಾದ ಕವಿತಾ ಸುವರ್ಣ, ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಕಿರಣ್ ಆಳ್ವ, ಲತಾ ದೇವಾಡಿಗ, ಅನಿಲ್ ಕುಮಾರ್, ಡಾl ಶಶಿರಾಜ್ ಶೆಟ್ಟಿ, ಡಾl ಡಿ. ಬಿ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸಂಘದ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Posted On: 27-08-2023 10:25AM

ಕಾಪು : ಬ್ರಹ್ಮಶ್ರೀ ನಾರಾಯಣಗುರು ಸಂಘ ಮೂಳೂರು ಇದರ ಮಹಿಳಾ ಮಂಡಲದ ನೂತನ ಅಧ್ಯಕ್ಷರನ್ನಾಗಿ ದೀಪಾ ಆರ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸುಲೋಚನ ಆರ್ ಬಂಗೇರ, ಉಪಾಧ್ಯಕ್ಷರಾಗಿ ಸವಿತಾ ವೈ ಅಮೀನ್, ಕಾರ್ಯದರ್ಶಿಯಾಗಿ ಸ್ವರ್ಣಜಾ ಭೋಜರಾಜ್, ಜೊತೆ ಕಾರ್ಯದರ್ಶಿಯಾಗಿ ಮಮತಾ ವಾಸು, ಕೋಶಾಧಿಕಾರಿಯಾಗಿ ದಿವ್ಯ ಅಭಿಷೇಕ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರೇವತಿ ಸುವರ್ಣ, ಮಾಲಾಶ್ರೀ ಮಹೇಶ್, ಅನುಪಮಾ ಜಗದೀಶ್, ಸುಜಾತ ವಿಠಲ, ರತ್ನಾವತಿ, ಜಯಲಕ್ಷ್ಮಿ ಪ್ರಭಾಕರ, ಜಯಂತಿ ಶೇಖರ, ವಿಮಲ ಸಂಜೀವ, ಮಾಲತಿ ಸತೀಶ್, ಕುಸುಮ ಆಯ್ಕೆಯಾಗಿದ್ದಾರೆ.

ಶಿರ್ವ‌ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ

Posted On: 26-08-2023 10:51PM

ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ವತಿಯಿಂದ ಶುಕ್ರವಾರ ಗಾಂಧಿನಗರ ಕಲಾವೃಂದದ ವೇದಿಕೆಯಲ್ಲಿ 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನಗೊಂಡಿತು.

ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರು ವರಮಹಾಲಕ್ಷ್ಮೀ ಪೂಜೆಯನ್ನು ನೆರವೇರಿಸಿದರು

ಈ ನಿಮಿತ್ತ ಸಾಮೂಹಿಕ ಪ್ರಾರ್ಥನೆ, ಕಲಶ ಪ್ರತಿಷ್ಠೆ, ಚೂಡಿ ಪೂಜೆ, ಕುಂಕುಮಾರ್ಚನೆ, ಭಜನಾ ಕಾರ್ಯಕ್ರಮ, ಮಂಗಳಾರತಿ ಮಹಾಪೂಜೆ ತದನಂತರ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭ ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶಿರ್ವ : ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ

Posted On: 26-08-2023 08:39PM

ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 26ರಂದು ಶಿರ್ವದ ಮೋನಿಶ್ ಕಾಂಪ್ಲೆಕ್ಸ್ ನ ರಿಯೋನ ಹಾಲ್ ನಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಮಾತನಾಡಿ ಸಂಫವು 2022-23 ಸಾಲಿನಲ್ಲಿ ವ್ಯವಹಾರ ನಡೆಸಿ ರೂ.44,70,853.15 ಲಾಭ ಗಳಿಸಿ, ಸದಸ್ಯರಿಗೆ 10% ಲಾಭಾಂಶ ವಿತರಿಸಲು ಶಕ್ತವಾಗಿದೆ. O% ಬಡ್ಡಿದರದಲ್ಲಿ ಕೃಷಿಕರಿಗೆ ಸುಮಾರು ಮೂರು ಕೋ.ರೂ.ಗಳಿಗೂ ಮಿಕ್ಕಿಸಾಲ ವಿತರಣೆ ನಡೆಸಿದ್ದು, ಸಿಬಂದಿಗಳ ಸಹಕಾರದಿಂದ ಶೇ.90% ಸಾಲಗಳನ್ನು ವಸೂಲಾತಿ ಮಾಡುವ ಪ್ರಯತ್ನ ನಡೆಸಲಾಗಿದೆ,ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದೊಂದಿಗೆ ಕೃಷಿ ತರಬೇತಿ ಶಿಬಿರಗಳನ್ನು ಆಯೋಜಿಸಿ, ಸಂಘದ ಕಾರ್ಯವ್ಯಾಪ್ತಿಯಲ್ಲಿ ಕೃಷಿ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಂಡು ರೈತರ ಆದಾಯ ಹೆಚ್ಚಿಸಲು ಪ್ರಯತ್ನಿಸಲಾಗುತಿದೆ ಎಂದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸಂಘದ 2022-23 ನೇ ಸಾಲಿನ ಪರಿಶೋಧಿತ ಲೆಕ್ಕ ಪತ್ರಗಳ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷೆ ವಾರಿಜ ಪೂಜಾರ್ತಿ, ನಿರ್ದೇಶಕರಾದ ನಾರಾಯಣ ನಾಯ್ಕ್, ಕೃಷ್ಣ ವಿಜಯ ಪೂಜಾರಿ, ರಮೇಶ್ ಪ್ರಭು, ಕೆ ವೀರೇಂದ್ರ ಪಾಟ್ಕರ್, ಅಶೋಕ್ ರಾವ್, ಉಮೇಶ್ ಆಚಾರ್ಯ, ರೀಟಾ ಮತಾಯಸ್, ವಿಲಿಯಂ ಬ್ಯಾಪಿಸ್ಟ್ ಮಚಾದೋ, ಸಂಜೀವ ಕುಲಾಲ್, ಹರಿಣಾಕ್ಷ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಬಾಲಕೃಷ್ಣ ಭಟ್ ವೇದಿಕೆಯಲ್ಲಿದ್ದರು.

ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸ್ವಾಗತಿಸಿದರು. ಲೆಕ್ಕಿಗ ಹರೀಶ್ ಪೂಜಾರಿ ನಿರೂಪಿಸಿ, ಸಿಬ್ಬಂದಿ ಪ್ರದೀಪ್ ಪಾಟ್ಕರ್ ವಂದಿಸಿದರು.