Updated News From Kaup
ಕಾಪು : ಪಾದೂರು - ಪೋಷಣ್ ಅಭಿಯಾನ ಸಪ್ತಾಹ
Posted On: 09-09-2023 09:07PM
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಸಪ್ತಾಹ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾದೂರು ಮಹಿಳಾ ಮಂಡಲದ ಗೌರವ ಅಧ್ಯಕ್ಷರೂ, ಹಿರಿಯ ಸಮಾಜಸೇವಕರಾದ ಜಯಲಕ್ಷ್ಮಿ ಆಳ್ವರವರು ವಹಿಸಿದ್ದರು.
ಪಡುಬಿದ್ರಿ ಜೇಸಿಐ - ಜೇಸೀ ಸಪ್ತಾಹ ಶೋಧನ-2023 ; ಆರೋಗ್ಯವಂತ ಶಿಶು ಸ್ಪರ್ಧೆ
Posted On: 09-09-2023 05:17PM
ಪಡುಬಿದ್ರಿ : ಇಲ್ಲಿ ಪಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಜೇಸಿಐ ಪಡುಬಿದ್ರಿ ಹಮ್ಮಿಕೊಂಡ ಆರೋಗ್ಯವಂತ ಶಿಶು ಸ್ಪರ್ಧೆ ಹಾಗೂ ಜೇಸೀ ಸಪ್ತಾಹ ಶೋಧನ-2023ನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಉದ್ಯಮಿ, ಜೇಸಿಐ ಪೂರ್ವ ವಲಯಾಧ್ಯಕ್ಷ ಉದಯಕುಮಾರ್ ಶೆಟ್ಟಿ ಇನ್ನ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜಶ್ರೀ ಕಿಣಿ ಮಾತನಾಡಿ, ಸ್ಪರ್ಧೆಯು ಅಂದ ಚೆಂದ ನೋಡಿ ನಡೆಯುತ್ತಿಲ್ಲ. ಸರಕಾರದ ನಿಯಮಾವಳಿಯಂತೆ ಆರೋಗ್ಯವಂತ ಶಿಶು ಸ್ಪರ್ಧೆ ಆಯೋಜಿಸಲಾಗಿದ್ದು, ಆರೋಗ್ಯ ಕೇಂದ್ರ ವ್ಯಾಪ್ತಿಯ ಶಿಶುಗಳಿಗಾಗಿ ಸ್ಪರ್ಧೆ ನಡೆಸಲಾಗಿದೆ ಎಂದರು.
ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು - 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ
Posted On: 09-09-2023 11:20AM
ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು ಇವರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಕಳತ್ತೂರಿನ ಕುಲಶೇಖರ ಶೆಟ್ಟಿ ಅಡಿಟೋರಿಯಂನಲ್ಲಿ ಜರಗಿತು.
ಕಾಪು : ಇನ್ನಂಜೆಯಲ್ಲಿ ಮೊಸರು ಕುಡಿಕೆ ಕ್ರೀಡಾಕೂಟ -2023 ; ಮುದ್ದುಕೃಷ್ಣ ವೇಷ ಸ್ಪರ್ಧೆ
Posted On: 07-09-2023 11:22AM
ಕಾಪು : ತಾಲೂಕಿನ ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಚೆ ಒಕ್ಕೂಟ, ಬಿಲ್ಲವ ಸೇವಾ ಸಂಘ ಇನ್ನಂಜೆ, ಜೇ.ಸಿ.ಐ ಶಂಕರಪುರ ಜಾಸ್ಮಿನ್, ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ಮೊಸರು ಕುಡಿಕೆ ಕ್ರೀಡಾಕೂಟ-2023, ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.
ಪಡುಬಿದ್ರಿ : ಗಾಂಜಾ ಸೇವನೆ - ವ್ಯಕ್ತಿಯೋರ್ವ ವಶಕ್ಕೆ
Posted On: 07-09-2023 11:12AM
ಪಡುಬಿದ್ರಿ : ಇಲ್ಲಿನ ಠಾಣಾ ವ್ಯಾಪ್ತಿಯ ನಂದಿಕೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಶೆಯಲ್ಲಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪಡುಬಿದ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ : ಬಂಟರ ಸಂಘ - ನಿವೃತ್ತ ಶಿಕ್ಷಕರಿಗೆ ಸನ್ಮಾನ
Posted On: 07-09-2023 10:46AM
ಪಡುಬಿದ್ರಿ : ಬಂಟರ ಸಂಘ (ರಿ.) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ದಂಪತಿಗಳನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ, ನಿವೃತ್ತ ಶಿಕ್ಷಕ ನಾರಾಯಣಶೆಟ್ಟಿ ದಂಪತಿಗಳನ್ನು ಅವರ ಮನೆಗೆ ತೆರಳಿ ಗೌರವಿಸಲಾಯಿತು.
ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕ : ಸ್ಥಾಪನಾ ದಿನಾಚರಣೆ ; ನಾಟಿ ವೈದ್ಯೆಗೆ ಸನ್ಮಾನ
Posted On: 07-09-2023 09:56AM
ಕಾಪು : ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕದ ವತಿಯಿಂದ ವಿಶ್ವಹಿಂದೂಪರಿಷತ್ ಸ್ಥಾಪನಾ ದಿನಾಚರಣೆ ನಡೆಯಿತು.
ಇಂದು : ಬೆಳ್ಳಿಬೆಟ್ಟು - 34ನೇ ವರ್ಷದ ಮೊಸರು ಕುಡಿಕೆ ಉತ್ಸವ
Posted On: 07-09-2023 09:50AM
ಕಾಪು : ಇಲ್ಲಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಸಿರಿ ಕುಮಾರ ಭಜನಾ ಮಂಡಳಿ ಬೆಳ್ಳಿಬೆಟ್ಟು ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಅಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಇಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು ಕ್ಷೇತ್ರ ಸಮಿತಿ ಟೈಲರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಮಾನಂದ ಮೂಲ್ಯ ಆಯ್ಕೆ
Posted On: 07-09-2023 09:46AM
ಕಾಪು : ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ರಮಾನಂದ ಮೂಲ್ಯ ಆಯ್ಕೆಯಾಗಿರುತ್ತಾರೆ.
ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ - ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ
Posted On: 06-09-2023 08:43PM
ಪಡುಬಿದ್ರಿ : ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಹಾಗೂ ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ಕಂಚಿನಡ್ಕ ಇವರ ವತಿಯಿಂದ "ಶ್ರೀಕೃಷ್ಣ ಜನ್ಮಾಷ್ಟಮಿ" ಆಚರಣೆ ನಡೆಯಿತು.
