Updated News From Kaup
ಓಮನ್ ಬಿಲ್ಲವಾಸ್ : ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಸಂಪನ್ನ
Posted On: 28 Oct 2023, 03:22 PM
ಗಲ್ಫ್ ರಾಷ್ಟ್ರದ ರಾಜಧಾನಿ ಮಸ್ಕಟ್ ನಲ್ಲಿ ಓಮನ್ ಬಿಲ್ಲವಾಸ್ ಸಂಘಟನೆಯ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಬಹಳ ವಿಜೃಂಭಣೆಯಿಂದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಸಂಪನ್ನಗೊಂಡಿತು. ಪುರೋಹಿತರಾದ ಶ್ರೀ ಚರಣ್ ಶಾಂತಿ ಕಟಪಾಡಿ ಯವರ ನೇತೃತ್ವದಲ್ಲಿ ದೇವರ ವಿಸ್ತಾರವಾದ ಕಥೆ, ಭಕ್ತಿಯ ಪೂಜಾ ಕೈಂಕರ್ಯ, ಭಜನೆ, ಚೆಂಡೆ, ಮಹಿಳೆಯರಿಂದ ಕಳಸ ಪ್ರದಾನ ನೃತ್ಯ ಹಾಗೂ ಸೇರಿದ ಜನರ ಭಕ್ತಿ ಭಾವದೊಂದಿಗೆ ಕಾರ್ಯಕ್ರಮವು ಬಹಳ ಸುಸೂತ್ರವಾಗಿ ನೆರವೇರಿಸಲ್ಪಟ್ಟಿತು. ಈ ಸಂಧರ್ಭ ಓಮನ್ ಬಿಲ್ಲವಾಸ್ ಸಂಘಟನೆಯ ಅಧ್ಯಕ್ಷ ಸುಜಿತ್ ಅಂಚನ್, ಮಾಜಿ ಅಧ್ಯಕ್ಷ ಹಾಗೂ ಸ್ಥಾಪಕ ಸದಸ್ಯ ಎಸ್. ಕೆ. ಪೂಜಾರಿ, ಕಾರ್ಯಕಾರಿ ಸಮಿತಿ, ಸದಸ್ಯರು, ವಿವಿಧ ಸಂಘಟನೆಗಳ ಮುಖ್ಯಸ್ಥರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. B
ಉಡುಪಿ : ಎಬಿವಿಪಿ ವತಿಯಿಂದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ
Posted On: 28 Oct 2023, 02:47 PM
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು. ನಗರ ಕಾರ್ಯದರ್ಶಿ ಶ್ರೀವತ್ಸ ಅವರು ಮಾತನಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ವಿಶೇಷವಾಗಿ ಉಡುಪಿ ದಕ್ಷಿಣ ಕನ್ನಡ ಭಾಗದ ಮನೆಗಳಲ್ಲಿ ಬೀಡಿ ಕಟ್ಟಿ ಜೀವನ ನಡೆಸುವವರ ಬಡ ಮಕ್ಕಳಿಗೆ ಬರುವ ವಿದ್ಯಾರ್ಥಿ ವೇತನ ಬಾರದೆ ಇರುವುದು ಅವಶ್ಯಕ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆ ಆಗುತ್ತಿದೆ. ನಗರ ಕಾರ್ಯಕಾರಿಣಿ ಸದಸ್ಯರಾದ ಮಂಗಳಗೌರಿ ಅವರು ಮಾತನಾಡಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಹಾಗೂ ಇತರೆ ಇಲಾಖೆಯಡಿಯಲ್ಲಿ ಬರುವ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾರದೆ ಉಡುಪಿಯು ಸೇರಿದಂತೆ ರಾಜ್ಯಾದ್ಯಂತ ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ವಂಚಿರಾಗುತ್ತಿರುವುದು ಖಂಡನಿಯವೆಂದು ಹೇಳಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಮಾತನಾಡಿ ರಾಜ್ಯ ಸರ್ಕಾರ ತನ್ನ ಗ್ಯಾರಂಟೀ ಮೂಲಕ ನಿರುದ್ಯೋಗಿಗಳಿಗೆ ಬತ್ತೆ ನೀಡುವುದರ ಬದಲು ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಬರುವಂತಹ ವಿದ್ಯಾರ್ಥಿ ವೇತನವನ್ನು ನೀಡಿದರೆ ನಿರುದ್ಯೋಗದ ಸಮಸ್ಯೆ ಉಲ್ಬಣವಾಗುವ ಮಾತೇ ಇರುವುದಿಲ್ಲ. ಕೊನೆಯಲ್ಲಿ ಅವರು ಮಾತನಾಡಿ, ಒಂದು ವೇಳೆ ನಾಳೆ ಉಡುಪಿಗೆ ಬರಲಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಒಂದು ವಾರದೊಳಗಾಗಿ ಸಮಸ್ಯೆಗೆ ಪರಿಹಾರ ವದಗಿಸದೇ ಹೋದಲ್ಲಿ ಉಡುಪಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಈ ಸಂದರ್ಭ ಎಬಿವಿಪಿ ಪ್ರಮುಖರು ಉಪಸ್ಥಿತರಿದ್ದರು.
ಹೆಜಮಾಡಿ ಗಡಿಭಾಗದಲ್ಲಿ ಸಿ.ಎಂ.ಗೆ ಸ್ವಾಗತ
Posted On: 28 Oct 2023, 02:39 PM
ಹೆಜಮಾಡಿ : ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಶನಿವಾರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸ್ವಾಗತಿಸಲಾಯಿತು. ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು. ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ ಸಹಿತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿ ವರ್ಗ ಉಪಸ್ಥಿತರಿದ್ದರು.
ಕಾಪು : ಯುವ ನ್ಯಾಯವಾದಿ ನಾಗಾರ್ಜುನ ಕಾಪುರವರ ನೂತನ ಕಚೇರಿ ಉದ್ಘಾಟನೆ
Posted On: 26 Oct 2023, 07:32 PM
ಕಾಪು : ಇಲ್ಲಿನ ತೃಪ್ತಿ ಹೊಟೇಲ್ ನ ಜನಾರ್ಧನ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಯುವ ನ್ಯಾಯವಾದಿ ನಾಗಾರ್ಜುನ ಕಾಪು ತಮ್ಮ ನೂತನ ಕಚೇರಿಯನ್ನು ಆದಿತ್ಯವಾರದಂದು ಶುಭಾರಂಭಗೊಳಿಸಿದರು. ಕಚೇರಿಯ ಉದ್ಘಾಟನೆಯನ್ನು ಉಡುಪಿ ಅಂಬಲಪಾಡಿ ಮತ್ತು ಕಾಪು ಮೂರನೇ ಮಾರಿಗುಡಿ ದೇವಳದ ಪಾತ್ರಿಗಳಾದ ಗಿರೀಶ್ ಮತ್ತು ಕಾಪು ಪುರಸಭೆ ಸದಸ್ಯೆ ಮೋಹಿನಿ ಗುಜ್ಜಿ ಮನೆ, ಶೇಖರ್ ಕಲ್ಯಾ, ಕಿಶೋರ್ ಪೊಲಿಪು, ರಾಜು ಶೆಟ್ಟಿ ಮಂಡೇಡಿ, ಕೋಟೆ ಹಳೇ ಮಾರಿಯಮ್ಮ ದೇವಸ್ಥಾನ ಮೊಕ್ತೇಸರರಾದ ಜಯರಾಣ್ಯ, ಕಾಪು ಮೂರನೇ ಮಾರಿಯಮ್ಮ ದೇವಳದ ಉಚ್ಚಂಗಿ ಅರ್ಚಕರಾದ ಸದಾನಂದ ರಾಣ್ಯ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು. ಕಾರ್ಯಕ್ರಮಕ್ಕೆ ಪುತ್ತೂರಿನ ಎರಡನೇ ಜೆ.ಎಮ್ ಎಪ್.ಸಿ ನ್ಯಾಯಮೂರ್ತಿ ಯೋಗೆಂದ್ರ ಶೆಟ್ಟಿ, ಉಡುಪಿ ಬಾರ್ ಅಸೋಸಿಯೇಷನ್ ನೂತನ ಅಧಕ್ಷರಾದ ರೆನೊಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಆರ್, ಖಜಾಂಚಿ ಗಂಗಾಧರ ಎಚ್ ಎಮ್, ಹಿರಿಯ ವಕೀಲರಾದ ನಾಗರಾಜ್ ಬಿ, ಮಧ್ವಾಚಾರ್ಯ, ಅಖಿಲ್ ಬಿ ಹೆಗ್ಡೆ, ಆರೂರು ಸುಕೇಶ್ ಶೆಟ್ಟಿ, ಸಹನಾ ಕುಂದರ್ ಸೂಡ, ಅನಂತ ನಾಯ್ಕ, ಅಶೋಕ್ ಎಸ್ ಭಟ್, ಕಿರಣ್ ಎಸ್ ಬಿ, ಭರತ್ ಪೈ, ಜಯಚಂದ್ರ ಕುಂದಾಪುರ, ಸಂತೋಷ್ ಹೇರೂರು, ಶಿವಪ್ರಸಾದ್, ರಾಘವೇಂದ್ರ ಶುಭಹಾರೈಸಿದರು.
ಕಾಪು : ತಾಲೂಕಿನ 16 ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸಾ ಅಭಿಯಾನ
Posted On: 25 Oct 2023, 07:48 PM
ಕಾಪು : ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾಪು ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕಾಪು ಇವರುಗಳ ಜಂಟಿ ಆಶ್ರಯದಲ್ಲಿ ಗ್ರೀನ್ ಪುಟ್ ಪ್ರಿಂಟ್ ಸಂಸ್ಥೆ ಚಿಕ್ಕಮಗಳೂರು ಇವರ ನೇತ್ರತ್ವದಲ್ಲಿ ಕಾಪು ತಾಲೂಕಿನ ಎಲ್ಲಾ 16 ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸ್ಥಳೀಯ ಪಂಚಾಯತ್ ಗಳ ಅನುದಾನದಿಂದ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸಾ ಅಭಿಯಾನ ಹಮ್ಮಿಕೊಳ್ಳಲಾಗದೆ. ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರವಾಗಿ ಅವುಗಳ ಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವುದು ಮತ್ತು ಬೀದಿನಾಯಿಗಳಿಂದ ರೇಬಿಸ್ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಅವುಗಳಿಗೆ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮವೂ ಏಕಕಾಲದಲ್ಲಿ ನಡೆಯಲಿದೆ. ಈ ಅಭಿಯಾನ ಅಕ್ಟೋಬರ್ 25 ರಿಂದ ಪ್ರಾರಂಭವಾಗಿ ಒಂದು ತಿಂಗಳವರೆಗೆ ನಡೆಯಲಿದ್ದು ಸಾರ್ವಜನಿಕರು ಸಾಕುನಾಯಿಗಳನ್ನು ಬೀದಿಗೆ ಬಿಡಬಾರದಾಗಿ ವಿನಂತಿಸಲಾಗಿದೆ. ಹಾಗೆಯೇ ಗ್ರೀನ್ ಪುಟ್ ಪ್ರಿಂಟ್ ಸಂಸ್ಥೆಯ ಸಿಬ್ಬಂದಿಯವರು ಬೀದಿನಾಯಿಗಳನ್ನು ಹಿಡಿಯಲು ತಮ್ಮ ಗ್ರಾಮಗಳಿಗೆ ಬಂದಾಗ ಅವರಿಗೆ ಸಹಕರಿಸಬೇಕಾಗಿ ಕೋರಲಾಗಿದೆ. ಸದ್ರಿ ಸಂಸ್ಥೆಯವರು ಬೀದಿನಾಯಿಗಳನ್ನು ಹಿಡಿದು ತಂದು ಅವುಗಳಿಗೆ ಸಂತಾನಹರಣಶಸ್ತ್ರಚಿಕಿತ್ಸೆ ನಡೆಸಿ, ರೇಬಿಸ್ ಲಸಿಕೆ ನೀಡಿ, 3 ದಿನಗಳ ಕಾಲ ಅವುಗಳ ಅರೈಕೆ ಮಾಡಿ ನಂತರ ಯಾವ ಬೀದಿಯಲ್ಲಿ ಹಿಡಿದಿದ್ದಾರೊ ಅದೇ ಜಾಗದಲ್ಲಿ ಬಿಡಲಿದ್ದಾರೆ. ಈ ಅಭಿಯಾನದ ಯಶಸ್ಸಿಗೆ ಕಾಪು ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ಅಧ್ಯಕ್ಷರು, ಸರ್ವ ಸದಸ್ಯರುಗಳು, ಪಂ. ಅ. ಅಧಿಕಾರಿಗಳು / ಸಿಬ್ಬಂದಿ ವರ್ಗ, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಲಾಗಿದೆ ಎಂದು ತಾಲೂಕು ಪಶು ವೈದ್ಯಾಧಿಕಾರಿ ಡಾ.ಅರುಣ್ ಹೆಗ್ಡೆ ತಿಳಿಸಿದ್ದಾರೆ.
ಕಾರ್ಕಳ ಶಾಸಕ ಸುನೀಲ್ ಕುಮಾರ್ : ಕಾಪು ಮಾರಿಗುಡಿ ಭೇಟಿ - ಕಾಮಗಾರಿ ವೀಕ್ಷಣೆ
Posted On: 25 Oct 2023, 07:35 PM
ಕಾಪು : ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು. ನಂತರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಅವರು ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ, ಪ್ರಶಂಶಿಸಿ, ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆಯನ್ನು ನೀಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ದೇವಿಪಾತ್ರಿ ಗುರುಮೂರ್ತಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಜಗದೀಶ್ ಬಂಗೇರ, ಬಾಬು ಮಲ್ಲಾರ್, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ. ಶೆಟ್ಟಿ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.
ಉಚ್ಚಿಲ : ದಸರಾ ನಿರ್ವಿಘ್ನವಾಗಿ ನೆರವೇರಲು ಸಮುದ್ರ ರಾಜನಿಗೆ ವಿಶೇಷ ಪೂಜೆ
Posted On: 24 Oct 2023, 12:59 PM
ಉಚ್ಚಿಲ : ಶ್ರೀ ಕ್ಷೇತ್ರ ಉಚ್ಚಿಲದ ಆಶ್ರಯದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ 2023ರ ನವದುರ್ಗೆಯರ ಶೋಭಾಯಾತ್ರೆ ಹಾಗೂ ಜಲಸ್ತಂಭನದ ಪೂರ್ವಭಾವಿಯಾಗಿ ಇಂದು ಕಾರ್ಯಕ್ರಮವು ನಿರ್ವಿಘ್ನವಾಗಿ ನೇರವೇರುವಂತೆ ಪ್ರಾರ್ಥಿಸಿ ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ದೇವಳದ ಪ್ರಮುಖರು ಉಪಸ್ಥಿತರಿದ್ದರು.
ಶಿರ್ವ : ಚಂದ್ರನಗರದಲ್ಲಿ ಆರೋಗ್ಯ ಮಾಹಿತಿ ಶಿಬಿರ
Posted On: 23 Oct 2023, 01:04 PM
ಶಿರ್ವ : ರೋಟರಿ ಕ್ಲಬ್ ಶಿರ್ವ ಆಶ್ರಯದಲ್ಲಿ ಚಂದ್ರನಗರದ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಸಭಾಂಗಣದಲ್ಲಿ ಆರೋಗ್ಯ ಮಾಹಿತಿ ಶಿಬಿರವನ್ನು ಶಿರ್ವ ರೋಟರಿ ಕ್ಲಬ್ ಅಧ್ಯಕ್ಷರಾದ ಫಾರೂಕ್ ಚಂದ್ರನಗರ ಉದ್ಘಾಟಿಸಿದರು. ಸನ್ಮಾನ : ಪ್ರೊಫೆಸರ್ ಹಾಗೂ ವೈದ್ಯಾಧಿಕಾರಿ ವಿ.ಪಿ.ಎ.ಎಂ.ಸಿ ವಡ್ನಗರ್ ಅಹಮದಬಾದ್, ಡಾ. ಶಿಬ್ಗತ್ಉಲ್ಲಾ ಶರೀಫ್ ಆರ್ ರವರನ್ನು ಸನ್ಮಾನಿಸಲಾಯಿತು. ತದ ನಂತರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿವಿಲಿಯಮ್ ಮಚದೊ, ರಘುಪತಿ ಐತಾಳ್, ಫಿಲಿಫ್ ಕೇಸ್ತಾಲಿನೋ, ದಿವಾಕರ ಡಿ ಶೆಟ್ಟಿ, ಮೇಲ್ವಿನ್ ಡಿಸೋಜ, ಮೈಕಲ್ ಮತಾಯಸ್, ದಿವಾಕರ ಬಿ ಶೆಟ್ಟಿ ಕಳತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಮಟ್ಟಾರುವಿನಲ್ಲಿ ದುರ್ಗಾಷ್ಟಮಿ ಉತ್ಸವ ಕಾರ್ಯಕ್ರಮ
Posted On: 23 Oct 2023, 11:25 AM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದುರ್ಗಾಷ್ಟಮಿ ಉತ್ಸವ ಕಾರ್ಯಕ್ರಮ ಮಟ್ಟಾರು ಬಯಲು ರಂಗಮಂದಿರದಲ್ಲಿ ಜರಗಿತು. ಮಾತೃಶಕ್ತಿ ಉಡುಪಿ ಜಿಲ್ಲಾ ಪ್ರಮುಖ್ ಪೂರ್ಣಿಮಾ ಸುರೇಶ್ ದುರ್ಗಾಷ್ಟಮಿ ಉತ್ಸವದ ಸಂದೇಶ ನೀಡಿದರು. ಮಟ್ಟಾರು ಘಟಕ ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು. ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ, ಹಿಂದೂ ಜೂನಿಯರ್ ಕಾಲೇಜು ಉಪನ್ಯಾಸಕಿ ಸುಪ್ರೀತಾ ಶೆಟ್ಟಿ, ಉಪ ಆರೋಗ್ಯ ಕೇಂದ್ರದ ಪ್ರಾಥಮಿಕ ಸುರಕ್ಷಾಧಿಕಾರಿ ಗೀತಾ, ಮಾತೃಶಕ್ತಿ ಕಾಪು ಪ್ರಖಂಡ ಸಹಪ್ರಮುಖ್ ಉಷಾ ಪಾಟ್ಕರ್, ದುರ್ಗಾವಾಹಿನಿ ಮಟ್ಟಾರು ಸಂಚಾಲಕಿ ಕುಮಾರಿ ಶ್ವೇತಾ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು.ಶ್ವೇತಾ ರಾವ್ ಸ್ವಾಗತಿಸಿದರು. ಕು.ಶ್ರೀರಕ್ಷಾ ಆಚಾರ್ಯ ವಂದಿಸಿದರು. ಭಜನೆ, ದುರ್ಗಾಪೂಜೆ ಮತ್ತು ಪ್ರಸಾದ ವಿತರಣೆ ಜರಗಿತು.
ಕಾಪು : ದೇವಾಡಿಗರ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ
Posted On: 22 Oct 2023, 01:14 PM
ಕಾಪು : ದೇವಾಡಿಗರ ಸೇವಾ ಸಂಘ (ರಿ.) ಕಾಪು ಇದರ ನೂತನ ಕಟ್ಟಡದ ಗುದ್ದಲಿ ಪೂಜೆಯು ಭಾನುವಾರ ಜರಗಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ದೇವಾಡಿಗರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶುಭ ಹಾರೈಸಿ ರೂ.99,999 ನ್ನು ತನ್ನ ವೈಯುಕ್ತಿಕ ನೆಲೆಯಲ್ಲಿ ದೇಣಿಗೆ ನೀಡಿದರು. ಕಾಪು ದೇವಾಡಿಗರ ಸೇವಾ ಸಂಘದ ಅಧ್ಯಕ್ಷರಾದ ಗೋವರ್ಧನ್ ಸೇರಿಗಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಕಾಪು ದೇವಾಡಿಗರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಸಾವಿತ್ರಿ ಸುಧಾಕರ, ಪುರಸಭಾ ಸದಸ್ಯರಾದ ಹರಿಣಾಕ್ಷಿ, ಅರುಣ್ ಶೆಟ್ಟಿ, ವಿದ್ಯಾಲತಾ, ಲಕ್ಷ್ಮಿ ಜನಾರ್ದನ ದೇವಸ್ಥಾನ ಆಡಳಿತಾಧಿಕಾರಿಗಳಾದ ಅರುಣ್, ಕಾಪು ದೇವಾಡಿಗರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
