Updated News From Kaup

ಉಚ್ಚಿಲ ದಸರಾ - 2023 ; ಉಡುಪಿ ಜಿಲ್ಲಾಧಿಕಾರಿಯಿಂದ ಚಾಲನೆ

Thumbnail
Posted On: 15 Oct 2023, 12:22 PM

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಹುಲಿವೇಷ, ಸಾಂಸ್ಕೃತಿಕ ಮೆರುಗಿನ ಜೊತೆಗೆ ಭಕ್ತಿಭಾವದ ಸಂಭ್ರಮವನ್ನು ನವರಾತ್ರಿಯ ಸಂದರ್ಭ ಕಾಣಬಹುದಾಗಿದೆ. ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. ನಾಡಿಗೆ ಸುಖ ಸಮದ್ಧಿ ಜನರು ಸುಖ ಸಂತೋಷದಿಂದ ಇರಲಿ ಎಂದು ಶುಭಹಾರೈಸಿದರು. ನವದುರ್ಗೆಯರು ಮತ್ತು ಶ್ರೀ ಶಾರದಾ ಪ್ರತಿಷ್ಠಾಪನೆ ಯೊಂದಿಗೆ ಶಾರದೆಗೆ ಬೆಳ್ಳಿ ವೀಣೆ, ಬೆಳ್ಳಿ ಕಿರೀಟಧಾರಣೆಯು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಗೌರವಿಸಲಾಯಿತು. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ನವದುರ್ಗೆಯರಿಗೆ ಮಹಾಮಂಗಳಾರತಿ ನಡೆಯಿತು. ಇದೇ ಸಂದರ್ಭ ಅನ್ನಛತ್ರ, ನೂತನ ಅತಿಥಿಗೃಹ, ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಮೀನುಗಾರಿಕಾ ಪರಿಕರಗಳ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಪುಸ್ತಕ ಪ್ರದರ್ಶನವನ್ನು ಕ್ಷೇತ್ರದ ಗೌರವ ಸಲಹೆಗಾರರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಹಾಯಕ ಕಮೀಷನರ್ ರಶ್ಮಿ ಎಸ್. ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಾಪು ತಹಶೀಲ್ದಾರ್ ನಾಗರಾಜ ನಾಯ್ಕಡ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಕಿದಿಯೂರು ಹೋಟೆಲ್ ಪ್ರೈ.ಲಿ. ನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾರಾಣಿ, ನಾಲ್ಕು ಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಉಪಸ್ಥಿತರಿದ್ದರು. ಡಾ. ಜಿ. ಶಂಕರ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ ಅಮೀನ್‌ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

ಉಚ್ಚಿಲ ದಸರಾ - 2023 ; ಕ್ಷಣ ಗಣನೆ ; ವಿದ್ಯುದ್ದೀಪಾಲಂಕಾರದ ಉದ್ಘಾಟನೆ

Thumbnail
Posted On: 14 Oct 2023, 08:57 PM

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ದಲ್ಲಿ ದಸರಾದ ಪ್ರಯುಕ್ತ ಶನಿವಾರ ಸಂಜೆ ವಿದ್ಯುದ್ದೀಪಾಲಂಕಾರ ಪ್ರಾಯೋಜಕರಾದ MRG ಗ್ರೂಪ್ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಬಾರಿಯು ಉಚ್ಚಿಲ ದಸರಾವು ಅಕ್ಟೋಬರ್ 15 ರಿಂದ 24 ರವರೆಗೆ ನಡೆಯಲಿದೆ. ದೇವಸ್ಥಾನದ ಪಕ್ಕದ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮತ್ತು ವಿಗ್ರಹ ಉತ್ಸವಕ್ಕೆ ಅಕ್ಟೋಬರ್ 15 (ನಾಳೆ) ಚಾಲನೆ ದೊರಕಲಿದೆ. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಚಾಲನೆ ನೀಡಲಿದ್ದು ಬಳಿಕ ಮಹಾಲಕ್ಷ್ಮೀ ಅನ್ನಛತ್ರ ಮತ್ತು ಅತಿಥಿಗೃಹ ಲೋಕಾರ್ಪಣೆಗೊಳ್ಳಲಿದೆ. ಕೊನೆ ಕ್ಷಣದ ಸಿದ್ಧತೆಗಳು ಪೂರ್ಣಗೊಂಡಿದೆ. ದೇವಳದ ಸುತ್ತಮುತ್ತಲಿನ ಪ್ರದೇಶ, ಬೀದಿಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದು, ಭಕ್ತಾದಿಗಳು ಈ ವೈಭವವನ್ನು ತಮ್ಮ ಮೊಬೈಲ್ ಗಳಲ್ಲಿ ಕ್ಲಿಕ್ಕಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಸಂದರ್ಭ ದೇವಳದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ದ. ಕ. ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದೇವಳದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿ‌ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಿಳಾ ಘಟಕ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕು ಪಟ್ಣ ಮೊಗವೀರ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಉಪಾಧ್ಯಕ್ಷ ಸುಭಾಶ್ಚಂದ್ರ, ಕಾರ್ಯದರ್ಶಿ ಸುಧಾಕರ್ ಕುಂದರ್, ಅನಿಲ್ ಕುಮಾರ್, ಶಂಕರ್ ಸಾಲ್ಯಾನ್, ದಿನೇಶ್ ಮೂಳೂರು, ಗಂಗಾಧರ ಸುವರ್ಣ ಎರ್ಮಾಳು, ಸತೀಶ್ ಬಾರ್ಕೂರು, ರವೀಂದ್ರ ಶ್ರೀಯಾನ್, ಸತೀಶ್ ಅಮೀನ್ ಬಾರ್ಕೂರು, ದೇವಳದ ಮುಖ್ಯ ಪ್ರಬಂಧಕ ಸತೀಶ್ ಅಮೀನ್ ಮಟ್ಟು ಉಪಸ್ಥಿತರಿದ್ದರು.

ಪಡುಬಿದ್ರಿ : ನೂತನ ಗ್ರಾಮ ಒನ್ ಮತ್ತು ಸೈಬರ್ ಕೆಫೆ, ಬುಕ್ಸ್ ಮತ್ತು ಸ್ಟೇಶನರಿ ಕಚೇರಿ ಶುಭಾರಂಭ

Thumbnail
Posted On: 14 Oct 2023, 12:58 PM

ಪಡುಬಿದ್ರಿ : ಇಲ್ಲಿನ ಅದಿಧನ್ ಸಾಯಿ ಕೃಪಾ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿ ಪ್ರಾರಂಭವಾದ ಪಡುಬಿದ್ರಿ ಗ್ರಾಮ ಒನ್ (ನಾಗರಿಕ ಸೇವಾ ಕೇಂದ್ರ) ಮತ್ತು ಸೈಬರ್ ಕೆಫೆ, ಬುಕ್ಸ್ ಮತ್ತು ಸ್ಟೇಶನರಿ ಕಚೇರಿಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಿ ಶುಭ ಹಾರೈಸಿದರು. ಕೇಂದ್ರ ‌ಹಾಗು ರಾಜ್ಯ ಸರ್ಕಾರದ 750 ಕ್ಕೂ ಹೆಚ್ಚಿನ ಯೋಜನೆಗಳಿಗೆ ಅರ್ಜಿಯನ್ನು ಒಂದೇ ಸೂರಿನಲ್ಲಿ ಸಲ್ಲಿಸಬಹುದು ಹಾಗು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬುಕ್ಸ್ , ಸ್ಟೇಶನರಿ, ಮತ್ತು ಪ್ರೊಜೆಕ್ಟ್ ವಕ್೯್ಸ ,ಜೆರಾಕ್ಸ್ ಗಳನ್ನು ರಿಯಾಯತಿ ದರದಲ್ಲಿ ಪಡೆಯಬಹುದೆಂದು ಮಾಲಕರಾದ ರಮೀಜ್ ಹುಸೇನ್ ತಿಳಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ‌ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಪೂಜಾರಿ, ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್, ಮಾಜಿ.ತಾ.ಪಂ ಸದಸ್ಯರಾದ ನವೀನಚಂದ್ರ ಜೆ.ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ , ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೈ. ಸುಕುಮಾರ್, ಕೆ.ಪಿ.ಸಿ.ಸಿ ಕೊ-ಅರ್ಡೀನೇಟರ್ ಅಬ್ಬುಲ್ ಆಜೀಜ್ ಹೆಜಮಾಡಿ, ಪಡುಬಿದ್ರಿ ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ರಾಜ್ಯ ಜೆಡಿಎಸ್ ಕಾರ್ಯದರ್ಶಿ ಇಸ್ಮಾಯಿಲ್ ಪಲಿಮಾರ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಎಸ್ ಶಾಫಿ, ಜ್ಯೋತಿ ಮೆನನ್, .ಮಾಜಿ ಸದಸ್ಯ ಬುಡಾನ್ ಸಾಹೇಬ್, ಹಿರಿಯರಾದ ಕೆ.ಎಮ್ ಅಬ್ದುಲ್, ಪಿ ಎ ಹುಸೇನ್, ಸುಚರಿತ ಅಮೀನ್, ಮನ್ಸೂರ್ ಕಂಚಿನಡ್ಕ, ಪುಷ್ಪಲತಾ ಆಚಾರ್ಯ, ಅಬ್ದುಲ್ ರಜಾಕ್, ಹಸನ್ ಕನ್ನಂಗಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಸತತ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ; ಅಭಿನಂದನಾ ಸಮಾರಂಭ

Thumbnail
Posted On: 14 Oct 2023, 12:50 PM

ಕಾಪು : ಸತತ 3 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ‌ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭವು ಇಂದು ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ, ಸಿಬ್ಬಂದಿವರ್ಗವನ್ನು ಅಭಿನಂದಿಸಿದರು. 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದ್ದು, ಇದಕ್ಕೆ ಕಾರಣಿಕರ್ತರಾದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಆರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಉಡುಪಿ : ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ

Thumbnail
Posted On: 14 Oct 2023, 08:31 AM

ಉಡುಪಿ : ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಈ ಅವದಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಕಟಪಾಡಿ : ಅಕ್ಟೋಬರ್ 15 ರಿಂದ 24ರ ವರೆಗೆ ಉಚಿತ ಪ್ರಾಣ ಯೋಗ ಶಿಬಿರ

Thumbnail
Posted On: 14 Oct 2023, 07:50 AM

ಕಟಪಾಡಿ : ಪತಂಜಲಿ ಯೋಗ ಸಮಿತಿ ಉಡುಪಿ, ಕಟಪಾಡಿ ಕಕ್ಷೆ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅಕ್ಟೋಬರ್ 15 ರಿಂದ 24ರ ವರೆಗೆ 10 ದಿನಗಳ ಕಾಲ ಬೆಳಿಗ್ಗೆ 5.30ರಿಂದ 6.45 ರತನಕ ಉಚಿತ ಪ್ರಾಣ ಯೋಗ ಶಿಬಿರವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತಂಜಲಿ ಯೋಗ ಸಮಿತಿಯ ನುರಿತ ಹಿರಿಯ ಯೋಗ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಕಟಪಾಡಿ ಪತಂಜಲಿ ಯೋಗ ಸಮಿತಿಯ ಮುಖ್ಯ ಯೋಗ ಶಿಕ್ಷಕ ರಾಜೇಶ್ ಕಾಮತ್ ರವರು ಶಿಬಿರವನ್ನು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾಗೇಶ್ ಕಾಮತ್ (9886432197)ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಜಮಾಡಿ : ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿ - ತಪ್ಪಿದ ಅನಾಹುತ

Thumbnail
Posted On: 13 Oct 2023, 11:38 PM

ಹೆಜಮಾಡಿ : ದಾರಿಯಲ್ಲಿ ಏನೇ ಆದರು ನಮಗ್ಯಾಕೆ ಎನ್ನುವ ಈ ಕಾಲದಲ್ಲಿ ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿಯನ್ನು ನೋಡಿ‌ದ ಕೂಡಲೇ ಸಾಮಾಜಿಕ‌ ಕಾರ್ಯಕರ್ತನೋರ್ವ ಮೆಸ್ಕಾಂಗೆ ಮಾಹಿತಿ ನೀಡಿ‌, ತಕ್ಷಣ ಕಾರ್ಯಪ್ರವೃತ್ತನಾದ ಇಲಾಖೆ ಸಿಬ್ಬಂದಿ ಆಗಬಹುದಾದ ಅನಾಹುತ ತಪ್ಪಿಸಿದ ಘಟನೆ ಶುಕ್ರವಾರ ತಡರಾತ್ರಿ ಹೆಜಮಾಡಿಯಲ್ಲಿ ನಡೆದಿದೆ. ಗ್ರಾಮದ ಪರಪಟ್ಟ ಪರಿಸರದಲ್ಲಿ ವಿದ್ಯುತ್ ತಂತಿಯು ಕಡಿದು ರಸ್ತೆಯ ಮೇಲೆಯೇ ಬಿದ್ದಿರುವುದನ್ನು ಸಾಮಾಜಿಕ ಕಾರ್ಯಕರ್ತರಾದ ಚಂದ್ರಹಾಸ ನಡಿಕುದ್ರು ಇವರು ಗಮನಿಸಿ ತಕ್ಷಣ ಮೆಸ್ಕಾಂ ಇಲಾಖೆಯ ಸಿಬ್ಬಂದಿಯವರಾದ ಪ್ರವೀಣ್ ಇವರಿಗೆ ವಿಷಯವನ್ನು ತಿಳಿಸಿ ಅನಾಹುತವನ್ನು ತಪ್ಪಿಸಿದ್ದಲ್ಲದೇ ಆದಷ್ಟು ಶೀಘ್ರದಲ್ಲೇ ಸರಿಪಡಿಸಿದ್ದಾರೆ. ಚಂದ್ರಹಾಸ ಮತ್ತು ಪ್ರವೀಣ್ ಇವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಮೊದಲು ಹೆಜಮಾಡಿ ಗ್ರಾಮದಲ್ಲಿ ಇದೇ ರೀತಿ ವಿದ್ಯುತ್ ತಂತಿ ಕಡಿದು ಬಿದ್ದಾಗ ಅದಕ್ಕೆ ಎರಡು ಮಂದಿ ದುರ್ಮರಣಕ್ಕೆ ಬಲಿಯಾಗಿದ್ದನ್ನು ಸ್ಮರಿಸಬಹುದು. ಹೆಜಮಾಡಿ ಗ್ರಾಮದ ಹೆಚ್ಚಿನ ಕಡೆಗಳಲ್ಲಿ ತುಕ್ಕು ಹಿಡಿದಿರುವ ವಿದ್ಯುತ್ ತಂತಿಗಳನ್ನು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ವಿಶೇಷ ಗಮನಹರಿಸಿ ಆದಷ್ಟು ಶೀಘ್ರದಲ್ಲೇ ಸರಿಪಡಿಸಬೇಕಾಗಿದೆ ಎಂದು ಸಾರ್ವಜನಿಕರು‌ ಆಗ್ರಹಿಸಿದ್ದಾರೆ.

ಉಡುಪಿ : ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದೆಂದು ಮನವಿ

Thumbnail
Posted On: 13 Oct 2023, 09:06 PM

ಉಡುಪಿ : ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿ ದಿನೇಶ್ ಮೆಂಡನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ಬಜರಂಗದಳ ಸಹ ಸಂಚಾಲಕ ಗುರುರಾಜ್ ಸಂಗಮ್ ಹಾಗೂ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.

ಪಲಿಮಾರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Thumbnail
Posted On: 13 Oct 2023, 07:20 PM

ಪಲಿಮಾರು : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ತಂದೆ ತಾಯಿಯ ಪ್ರೀತಿ ಹಾಗೂ ತ್ಯಾಗವನ್ನು ಅರ್ಥ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಶಿರ್ವ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆ ಬೋಧಿಸಲಾಯಿತು. ವಲಯ ಮೇಲ್ವಿಚಾರಕರಾದ ಶ್ರುತಿ, ಸೇವಾ ಪ್ರತಿನಿಧಿಗಳು, ಉಪನ್ಯಾಸಕರಾದ ಜ್ಯೋತಿ, ಚೈತ್ರ, ನಿಶಾ, ಸ್ವಾತಿ, ಅಮೃತ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಪವಿತ್ರ ಸ್ವಾಗತಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಹಿರಿಯ ಸಹಶಿಕ್ಷಕರಾದ ಸುನಿತಾ ವಂದಿಸಿದರು.

ಅಕ್ಟೋಬರ್ 15 - 24 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

Thumbnail
Posted On: 13 Oct 2023, 06:30 PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.15ರಂದು ಭಾನುವಾರ ಬೆಳಿಗ್ಗೆ ಗಂಟೆ 09:09ಕ್ಕೆ ಸರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ನವಶಕ್ತಿ ವೈಭವ ವೇಷ ಭೂಷಣ/ ನೃತ್ಯರೂಪಕ ಸ್ಪರ್ಧೆಯೊಂದಿಗೆ ಮೊದಲ್ಗೊಂಡು ಅ. 24 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವವು ಜರಗಲಿದೆ. ಇದರೊಂದಿಗೆ ಅ. 17ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸಂಪನ್ನಗೊಳ್ಳಲಿದೆ. ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಅ.15ರಿಂದ ಮೊದಲ್ಗೊಂಡು ಅ. 24ರವರೆಗೆ ಪ್ರತೀ ದಿನ ಮಂಗಳ ವಾದ್ಯ, ಉಷಾಃ ಕಾಲ ಕಲ್ಪೋಕ್ತ ಪೂಜೆ, ಗಣಯಾಗ, ಶಕ್ತಿಯಾಗ, ಲಲಿತಾರ್ಚನೆ, ಸುವಾಸಿನಿ ಪೂಜೆ, ರಾತ್ರಿ ಪೂಜೆ ಮತ್ತು ಏಕಾಂತ ಸೇವೆ ನಡೆಯಲಿದೆ. ಹಾಗೂ ಭಜನೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಅ. 15ರಂದು ಪೂರ್ವಾಹ್ನ ಕವಾಟೋದ್ಘಾಟನೆ, ಅ. 16ರಂದು ಬೆಳಗ್ಗೆ 9.9ಕ್ಕೆ ಜೀರ್ಣೋದ್ಧಾರ ಸಮಿತಿಯ ಗ್ರಾಮ ಸಮಿತಿಯ ಮಹಿಳೆಯರ ಪಾಲ್ಗೊಳ್ಳುವಿಕೆಯೊಂದಿಗೆ ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅ. 17ರಂದು ಕದಿರು ಕಟ್ಟುವುದು, ಮಧ್ಯಾಹ್ನ 11.30ಕ್ಕೆ ಚಂಡಿಕಾಯಾಗ, ಪೂರ್ಣಾಹುತಿ, ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಶ್ರೀ ದೇವಿ ದರ್ಶನ, ಕವಾಟ ಪೂರಣ, ಮಧ್ಯಾಹ್ನ ದೇವಿ ದರ್ಶನ ನಡೆಯಲಿದೆ. ಅ. 24 ರಂದು ಸಮಷ್ಠಿ ಪೂಜೆ, ಮಂಗಳ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ಸಮಿತಿಯ ನೇತೃತ್ವದಲ್ಲಿ ಬೆಳಗ್ಗೆ ಗಂಟೆ 9.9 ರಿಂದ ಆಹ್ವಾನಿತ ತಂಡಗಳಿಗೆ ನವಶಕ್ತಿ ವೈಭವ ನೃತ್ಯ ಸ್ಪರ್ಧೆ, ಅ. 19ರಂದು ಸಂಜೆ 7 ಗಂಟೆಯಿಂದ ಆನಿದ ಮನದಾನಿ ತುಳು ನಾಟಕ, ಅ. 21ರಂದು ಸಂಜೆ 7 ಗಂಟೆಗೆ ನೃತ್ಯ ಕಾರ್ಯಕ್ರಮ, ಅ. 22ರಂದು ಸಂಜೆ 7 ಗಂಟೆಯಿಂದ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ತುಳುನಾಡ ಸಿರಿ ತುಳು ಯಕ್ಷಗಾನ ನಡೆಯಲಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.