Updated News From Kaup
ಕಾಪು : ಸವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ
Posted On: 21 Oct 2023, 07:46 PM
ಕಾಪು : ಸವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ಶಿವಮಾಲಾ ದಂಪತಿ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನಗೈದು ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. ಅವರನ್ನು ಹುಲಿಕುಣಿತ ಮತ್ತು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ದೇವಳದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಪ್ರಾರ್ಥಿಸಿ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ಕಾಪು ಶಾಸಕರು ಮತ್ತು ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ನಿರ್ಮಲ್ ಕುಮಾರ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಮನೋಹರ್ ಎಸ್ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಮೋಹನ್ ವಿ. ಶೆಟ್ಟಿ ಮುಂಬೈ, ಸಂದೀಪ್ ಶೆಟ್ಟಿ ಶಿರ್ವ, ಮುಂಬೈ, ಸಿ.ಎ ರವಿರಾಜ್ ಶೆಟ್ಟಿ, ಜಗದೀಶ್ ಶೆಟ್ಟಿ ನಂದಳಿಕೆ, ಮುಂಬೈ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಜಗದೀಶ್ ಬಂಗೇರ, ಬಾಬು ಮಲ್ಲಾರ್, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಜಿ. ಲೀಲಾಧರ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್, ಗೀತಾಂಜಲಿ ಎಮ್ ಸುವರ್ಣ, ವೀಣಾ ಶೆಟ್ಟಿ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆರ್ಥಿಕ ಸಮಿತಿಯ 9 ತಂಡಗಳ ಮುಖ್ಯ ಸಂಚಾಲಕರು, ಸಂಚಾಲಕರುಗಳು, ವಿವಿಧ ಸಮಿತಿಯ ಸಂಚಾಲಕರುಗಳು, ದೇವಳದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆ ಮಾಡುವುದು, ಮರುಬಳಕೆ, ಮರು ಉತ್ಪಾದನೆ ಬಗ್ಗೆ ಜಾಗೃತಿ ಅಭಿಯಾನ
Posted On: 20 Oct 2023, 02:38 PM
ಉಡುಪಿ : ಆಕಾಶ್ ಬೈಜೂಸ್ ನ ಜಂಕ್ ದಿ ಪ್ಲಾಸ್ಟಿಕ್ ಅಭಿಯಾನ ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆ ಮಾಡುವುದು, ಮರುಬಳಕೆ ಮತ್ತು ಮರು ಉತ್ಪಾದನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಉಡುಪಿಯಲ್ಲಿ ಜರಗಿತು. ವಿದ್ಯಾರ್ಥಿಗಳಿಗೆ ಪ್ರಕೃತಿಯ ಬಗ್ಗೆ ಪ್ರೀತಿಯನ್ನು ಬೆಳೆಸಲು ನೆರವಾಗುವ ವಿಚಾರದಲ್ಲಿ ಉಡುಪಿಯನ್ನು ಸ್ವಚ್ಛಗೊಳಿಸಲು ಹಾಗೂ ನಮ್ಮ ಅದ್ಭುತ ನಗರ ನಿರ್ವಹಣೆಗೆ ಕೊಡುಗೆಯನ್ನು ನೀಡುವ ಭಾಗವಾಗಿರಲು ನಾವು ಸಂತೋಷ ಪಡುತ್ತೇವೆ ಎಂದು ಸಂಸ್ಥೆಯ ಮುಖ್ಯಸ್ಥರು ಹೇಳಿದರು. ಮುಂಬರುವ ದಿನಗಳಲ್ಲಿ ದೇಶದ ಇತರ ಕರಾವಳಿ ನಗರಗಳಿಗೂ ಈ ಅಭಿಯಾನವನ್ನು ವಿಸ್ತರಣೆ ಮಾಡಲು ಆಕಾಶ್ ಬೈಜೂಸ್ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಣ್ಣೂರು, ಕೋಝಿಕೋಡ್, ಚೆನ್ನೈ, ವಿಶಾಖಪಟ್ಟಣ, ಮುಂಬೈ, ಮತ್ತು ಪಣಜಿಯ ಕಡಲ ಕಿನಾರೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಉಡುಪಿ ಮುನ್ಸಿಪಾಲ್ ಕಮಿಷನರ್ ರಾಯಪ್ಪ, ಆಕಾಶ್ ಬೈಜೂಸ್ ಸಂಸ್ಥೆಯ ಅನಿಲ್ ಕುಮಾರ, ಶ್ಯಾಮ್ ಪ್ರಸಾದ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಕ್ಟೊಬರ್ 21 : ಉಡುಪಿಯ ಬೊಬ್ಬರ್ಯಕಟ್ಟೆಯಲ್ಲಿ ಹೂವಿನ ಪೂಜೆ, ಕಲ್ಕುಡ ದೈವದ ದರ್ಶನ ಸೇವೆ
Posted On: 20 Oct 2023, 02:09 PM
ಉಡುಪಿ : ವುಡ್ ಲ್ಯಾಂಡ್ಸ್ ಹೋಟೆಲ್ ಹತ್ತಿರದ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ್ಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನ ಬೊಬ್ಬರ್ಯಕಟ್ಟೆಯಲ್ಲಿ ಅಕ್ಟೋಬರ್ 21, ಶನಿವಾರ ಹೂವಿನ ಪೂಜೆ, ಕಲ್ಕುಡ ದರ್ಶನ ಸೇವೆ ನಡೆಯಲಿದೆ. ಶನಿವಾರದಂದು ಸಂಜೆ 5:30ಕ್ಕೆ ಸೇವಾಕರ್ತರಾದ ಸುಧಾಕರ್ ಶೆಟ್ಟಿ ಬನ್ನಂಜೆ ವತಿಯಿಂದ ಹೂವಿನ ಪೂಜೆ ಹಾಗೂ ಕಲ್ಕುಡ ದೈವದ ದರ್ಶನ ಸೇವೆ ಜರಗಲಿರುವುದು. ಈ ಪುಣ್ಯದ ಕಾರ್ಯದಲ್ಲಿ ದೈವದ ಗಂಧ ಪ್ರಸಾದ ಪಡೆದು ದೈವದ ಕೃಪೆಗೆ ಪಾತ್ರರಾಗಬೇಕೆಂದು ಅನಂತೇಶ್ವರ ದೇವಸ್ಥಾನ ಆಡಳಿತ ಮಂಡಳಿ ಉಡುಪಿ ಹಾಗೂ ಬಬ್ಬರ್ಯ ಸೇವಾ ಸಮಿತಿಯವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ವಿಶ್ವಕರ್ಮ ಯುವ ಮಿಲನ್ ಸಂಘದ ಘಟಕಗಳ ಉದ್ಘಾಟನೆ
Posted On: 20 Oct 2023, 01:52 PM
ಉಡುಪಿ : ವಿಶ್ವಕರ್ಮ ಯುವ ಮಿಲನ್(ರಿ.)ಕರ್ನಾಟಕ ರಾಜ್ಯ, ಕೇಂದ್ರ ಕಚೇರಿ ಮಂಗಳೂರು, ಇದರ ರಾಜ್ಯಾಧ್ಯಕ್ಷರಾದ ವಿಕ್ರಮ್ ಐ. ಆಚಾರ್ಯರು ಸಂಘದ ವಿವಿಧ ಘಟಕಗಳನ್ನು ಉದ್ಘಾಟಿಸಿದರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ, ಶೀಲನೆರೆ ಹೋಬಳಿ, ಬುಕನಕೆರೆ ಹೋಬಳಿ, ಅಕ್ಕಿ ಹೆಬ್ಬಾಳು ಮತ್ತು ಕಸಬಾ ಹೊಬ್ಬಳ್ಳಿಯಲ್ಲಿ ಮಂಡ್ಯ ವಿಶ್ವಕರ್ಮ ಯುವ ಮಿಲನ್ ಸಂಘದ ಘಟಕಗಳ ಉದ್ಘಾಟನೆ ಮಾಡಲಾಯಿತು. ಯುವ ಸಂಘಟನೆಯು ಬೆಂಕಿಯಂತೆ ಇರಬೇಕು, ಸಮಾಜದ ರಕ್ಷಣೆ ಹಾಗೂ ಸಮಾಜದ ಒಗ್ಗಟ್ಟಿಗೆ ಯುವ ಶಕ್ತಿ ಮುಖ್ಯ ಎಂಬುದಾಗಿ ರಾಜ್ಯಾಧ್ಯಕ್ಷರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮೋಹನ್ ಆಚಾರ್ಯ, ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷರಾದ ವಿಜಯ್ ಕುಮಾರ್, ಪುರ ಗ್ರಾಮ ಘಟಕ ಅಧ್ಯಕ್ಷ ವಿಜಯ್ ಕುಮಾರ್, ಆಕಾಶ್ ಆಚಾರ್ಯ ಪಾಂಡೇಶ್ವರ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕಾಪು : ಗಾಲಿ ಕುರ್ಚಿಯ ಮೂಲಕ ಕೇರಳ - ಕೊಲ್ಲೂರು ದೇವಳ ಭೇಟಿ
Posted On: 20 Oct 2023, 01:44 PM
ಕಾಪು : ಜೀವನದಲ್ಲಿ ಭಯ,ಭಕ್ತಿ, ನಂಬಿಕೆಗಳು ಮನುಷ್ಯನನ್ನು ರೂಪಿಸಲು ಇರುವ ಮಾರ್ಗಗಳು. ನ್ಯೂನತೆಗಳಿದ್ದರೂ ದೇವರ ಮೇಲಿನ ಭಕ್ತಿ ವ್ಯಕ್ತಿಗೆ ಶಕ್ತಿ ನೀಡುವುದರಲ್ಲಿ ಎರಡು ಮಾತಿಲ್ಲ. ಅಂತೆಯೇ ಇಲ್ಲೋರ್ವ ಅಂಗವಿಕಲತೆ ಇದ್ದರೂ ದೇವರ ಮೇಲಿನ ಭಕ್ತಿಯಿಂದ ಗಾಲಿ ಕುರ್ಚಿಯ ಮೂಲಕ ದೇವಾಲಯ ಭೇಟಿ ನೀಡುತ್ತಿದ್ದಾರೆ. ಕೇರಳದ ಕಣ್ಣನ್ ಅಯ್ಯಪ್ಪ ಮಾಲಾಧಾರಿಯಾಗಿ ಕೇರಳದ ಶಬರಿಮಲೆಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನಕ್ಕೆ ತೆರಳಲಿದ್ದಾರೆ. ಕಾಪುವಿಗೆ ಆಗಮಿಸಿದ್ದ ಸಂದರ್ಭ ನಮ್ಮ ಕಾಪು ನ್ಯೂಸ್ ವೆಬ್ ಪೋರ್ಟಲ್ ನೊಂದಿಗೆ ಮಾತನಾಡಿದ ಅವರು ಈಗಾಗಲೇ 15 ದಿನಗಳನ್ನು ಗಾಲಿ ಕುರ್ಚಿಯ ಮೂಲಕ ಕ್ರಯಿಸಿದ್ದೇನೆ. 21 ದಿನದ ಒಳಗೆ ಯಾತ್ರೆ ಸಂಪೂರ್ಣಗೊಳಿಸಬೇಕೆಂದಿದ್ದೇನೆ. ಸಾರ್ವಜನಿಕರ ಸಹಕಾರ ಅಗತ್ಯ. ಯಾರಾದರೂ ದಾನಿಗಳು ಕಾಣಿಕೆ ನೀಡುವುದಿದ್ದರೆ ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದರು. ಒಟ್ಟಿನಲ್ಲಿ ದೇವರ ಮೇಲೆ ಭಕ್ತಿ ಇದ್ದಲ್ಲಿ ದೈಹಿಕ ನ್ಯೂನತೆಗಳು ನಗಣ್ಯ.
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಾರ್ವಜನಿಕರ ಮನಸೂರೆಗೊಂಡ ವೀಣಾವಾದನ
Posted On: 20 Oct 2023, 01:33 PM
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲದಲ್ಲಿ ಗುರುವಾರ ಸಂಜೆ ನವದುರ್ಗೆಯರ ಸಮ್ಮುಖದಲ್ಲಿ ವೀಣಾವಾದನ ಜರಗಿತು. 9 ಜನ ಪಕ್ಕ ವಾದ್ಯ ಸಹಿತ ಕಿರಿಯರಿಂದ ಹಿರಿಯರಾದಿಯಾಗಿ 151 ವೀಣಾವಾದಕರು ವೀಣಾವಾದನ ನಡೆಸಿಕೊಟ್ಟರು. ಸುಮಾರು ಒಂದು ಗಂಟೆಗಳ ಕಾಲ ನಡೆದ ವೀಣಾವಾದನ ಸಾರ್ವಜನಿಕರ ಮನಸೂರೆಗೊಂಡಿತು. ಸನ್ಮಾನ/ಬಿರುದು : ಶತವೀಣಾ ವಾದನದ ನೇತೃತ್ವ ವಹಿಸಿದ್ದ ವಿದುಷಿ ಪವನ ಬಿ. ಆಚಾರ್ ರನ್ನು ಶ್ರೀ ಕ್ಷೇತ್ರದ ವತಿಯಿಂದ ಸನ್ಮಾನಿಸಿ ವೀಣಾ ವಿಭೂಷಣೆ ಬಿರುದು ನೀಡಿ ಗೌರವಿಸಲಾಯಿತು. ಈ ಸಂದರ್ಭ ಕ್ಷೇತ್ರದ ಸಲಹೆಗಾರ ನಾಡೋಜ ಜಿ. ಶಂಕರ್ ಮಾತನಾಡಿ ಕಳೆದ ಬಾರಿ 121 ವೀಣಾವಾದನವಿತ್ತು. ಈ ಬಾರಿ 151 ವೀಣಾ ಮಂದಿಯ ವೀಣಾವಾದನವಿದ್ದು, ಮುಂದಿನ ದಸರಾದ ಸಂದರ್ಭ 201 ವೀಣಾವಾದನವನ್ನು ಆಯೋಜಿಸಲಾಗುವುದು ಎಂದರು. ಈ ಸಂದರ್ಭ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ದೇವಳದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವ್ಯವಸ್ಥಾಪಕ ಸತೀಶ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
ಪಡುಕುತ್ಯಾರು : ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ
Posted On: 19 Oct 2023, 04:24 PM
ಪಡುಕುತ್ಯಾರು : ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸನ್ ಕಾರ್ಡ್ ಅತಿ ಅಗತ್ಯ, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ ಮತ್ತು ನಿಖರತೆಯನ್ನು ಪರಿಶೀಲಿಸಲು ಇತ್ತೀಚೆಗಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಪ್ಟ್ಸ್ ಸರ್ವಿಸ್ ಸೆಂಟರ್ ಅಸಿಸ್ಟೆಂಟ್ ಡೈರೆಕ್ಟರ್ ವೀಣಾ ಅವರು ನುಡಿದರು. ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ನೇತೃತ್ವದಲ್ಲಿ ಇಲ್ಲಿನ ಶ್ರೀ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ ಪ್ರಾತ್ಯಕ್ಷಿಕೆ ಪರೀಕ್ಷೆಗೆ ಹಾಜರಾದ ಕುಶಲಕರ್ಮಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಆರ್ಟಿಸನ್ ಕಾರ್ಡಿನ ಅರ್ಜಿ ಸಲ್ಲಿಸುವಿಕೆ, ಅವುಗಳ ಉಪಯೋಗಗಳು ಇವುಗಳ ವಿವರವಾದ ಮಾಹಿತಿಯನ್ನು ಅವರು ವೇಳೆ ನೀಡಿದರು. ಕೇಂದ್ರ ಸರ್ಕಾರವು ಎಂಎಸ್ಎಂಇ ಇಲಾಖೆಯ ಮೂಲಕ ಪಿಎಂ ವಿಶ್ವಕರ್ಮಯೋಜನೆ ಹಾಗೂ ಟೆಕ್ಸ್ ಟೈಲ್ಸ್ ಇಲಾಖೆಯ ಮೂಲಕ ಕರಕುಶಲ ಅಭಿವೃದ್ಧಿಗಾಗಿ ಅಗತ್ಯ ಇರುವ ಆರ್ಟಿಸನ್ ಕಾರ್ಡ್ ಗಳನ್ನು ಕರಕುಶಲಕರ್ಮಿಗಳಿಗೆ ನೀಡುತ್ತಿದೆ. ಕೇಂದ್ರಸರ್ಕಾರದ ಯೋಜನೆಗಳನ್ನು ಅರ್ಹಜನರಿಗೆ ತಲುಪಿಸುವ ನಿಟ್ಟಿನಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ ಮತ್ತು ಐಎಂಎಸ್ ಫೌಂಡೇಶನ್ ವಿವಿಧ ಕಾರ್ಯಗಾರಗಳನ್ನು ನಡೆಸುತ್ತಿದೆ ಎಂದು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಲಘು ಯೋಗ ಭಾರತಿ ಮತ್ತು ಐಎಂಎಸ್ ಫೌಂಡೇಶನ್ ಪದಾಧಿಕಾರಿ, ಅಸೆಟ್ ಸಲಹಾ ಮಂಡಳಿಯ ರಾಜೇಶ್ ಚಿಂಚೆವಾಡಿ ಬೆಂಗಳೂರು ನುಡಿದರು. ಕರಕುಶಲ ಕರ್ಮಿಗಳು ಕ್ಲಸ್ಟರ್ ಮುಖಾಂತರ ಸರ್ಕಾರದ ಸವಲತ್ತುಗಳನ್ನು ಸುಲಭದಲ್ಲಿ ಪಡೆಯಬಹುದಾಗಿದೆ. ಯಂತ್ರೋಪಕರಣಗಳ ಸಹಾಯವಿಲ್ಲದೆ ಕೈಗಳಿಂದ ತಯಾರಿಸುವ ಕರಕುಶಲ ವಸ್ತುಗಳ ತಯಾರಕರು ಈ ವಿಭಾಗಕ್ಕೆ ಸೇರುತ್ತಾರೆ. ಇಲ್ಲಿ ನುರಿತ ಕೆಲಸಗಳಲ್ಲಿ ವಿಶೇಷ ಪ್ರಶಸ್ತಿಗಳನ್ನು ಗಳಿಸಿದವರಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಆರ್ಟಿಸನ್ ಕಾರ್ಡ್ ಹೊಂದಿದವರು ಕೇಂದ್ರ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಮೊದಲ ಪ್ರಾಶಸ್ತ್ಯ ಹೊಂದಿರುತ್ತಾರೆ. ವಿವಿಧ ಟೂಲ್ ಕಿಟ್ ಸಹಿತ ಉಪಕರಣಗಳು, ಸ್ಟೈ ಫಂಡ್, . ಅನುದಾನಗಳು, ಬ್ಯಾಂಕ್ ಸಾಲಗಳು (ರೂಪಾಯಿ 50,000 ಕ್ಕಿಂತ ಮೇಲ್ಪಟ್ಟು-20 ಶೇಕಡಾ ರಿಯಾಯಿತಿಗಳು,) ಆಯ್ದ ವಿಭಾಗಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತರಿಗೆ ಮಾಸಿಕ ಪಿಂಚಣಿ(5000/-, ಮೇಲ್ಪಟ್ಟು) ವಸ್ತು ಪ್ರದರ್ಶನಕ್ಕೆ ಇರುವ ಪ್ರಯಾಣ ಬತ್ಯೆ ವೆಚ್ಚಗಳು, ವಿವಿಧ ಕೌಶಲ್ಯ ಆಧಾರಿತ ತರಬೇತಿ ತರಗತಿಗಳು ಮುಂತಾದ ಅನೇಕ ಸವಲತ್ತುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಪುರಾತನ ಶೈಲಿಯ ಕರಕುಶಲ ವಸ್ತುಗಳ ನಿರ್ಮಾಣಕ್ಕೆ ಆದ್ಯತೆಯಿದೆ. ಚಿನ್ನ ಬೆಳ್ಳಿ, ಕಂಚು ಹಿತ್ತಾಳೆಗಳ ಎರಕ, ಕಬ್ಬಿಣ, ಕಾಷ್ಟ, ಶಿಲಾ ಶಿಲ್ಪ ಇವುಗಳ ಪಾರಂಪರಿಕ ಪುರಾತನ ಶೈಲಿಯ ಕಲೆಗಳು, ನಶಿಸಿ ಹೋಗುತ್ತಿರುವ ಪುರಾತನ ಕರಕುಶಲ ಕಲೆಗಳು ಇವುಗಳನ್ನು ಉಳಿಸುವ ಕೇಂದ್ರ ಸರಕಾರದ ಯೋಜನೆಗಳ ಸವಲತ್ತು ಗಳನ್ನ ಪಡೆಯಲು ಪ್ರಸ್ತುತ ಆರ್ಟಿಸನ್ ಕಾರ್ಡ್ ಉಪಯೋಗವಾಗಲಿದೆ ಎಂದು ಅವರು ವಿವರಣೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಅವರು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸವಲತ್ತುಗಳನ್ನು ಪಡೆಯಲು ಆಸಕ್ತಿ ವಹಿಸಿ ಆರ್ಟಿಸನ್ ಕಾರ್ಡ್ ಮೂಲಕ ಪ್ರಯೋಜನವನ್ನು ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು. ಕೇಂದ್ರ ರಾಜ್ಯ ಸರಕಾರಗಳ ಚಿಕ್ಕ ಸವಲತ್ತಾದರೂ ಅದನ್ನು ಪಡೆದು ಅಳವಡಿಸಿಕೊಂಡು ಕಾರ್ಯಗತಗೊಳಿಸಿದಲ್ಲಿ ದೊಡ್ಡ ರೀತಿಯ ಯೋಜನೆಗಳು ನಮಗೆ ದೊರೆಯಲು ಸಾಧ್ಯವಿದೆ. ಆ ಮೂಲಕ ನಮ್ಮ ಸಮಾಜದ ಅಭಿವೃದ್ಧಿ ಕೂಡ ಆಗಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು. 60 ಕರಕುಶಲಕರ್ಮಿಗಳ ವೃತ್ತಿ ಕೌಶಲ್ಯ ಪ್ರಾತ್ಯಕ್ಷಕ ಪರೀಕ್ಷೆ ನಡೆಯಿತು. ಕರಕುಶಲ ಇಲಾಖೆಯ ದೀಪಕ್, ಇಲಾಖೆಯ ಸಹ ಸಂಯೋಜಕ ಗಣೇಶ್ ಆಚಾರ್ಯ ಕೋಟ, ಆನೆಗುಂದಿ ಗುರು ಸೇವಾ ಪರಿಷತ್ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಅಸೆಟ್ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕೆ ಜೆ ಮಂಗಳೂರು, ಶಿಲ್ಪಿ ಗಣಪತಿ ಆಚಾರ್ಯ ಶಂಕರಪುರ, ಜನಾರ್ಧನ ಆಚಾರ್ಯ ಕನ್ಯಾನ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಸೂರ್ಯ ಕುಮಾರ್ ಹಳೆಯಂಗಡಿ, ಗೋವು ಪರ್ಯಾವರಣ್ ಟ್ರಸ್ಟ್ ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ ಮುಂತಾದವರು ಉಪಸ್ಥಿತರಿದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕ ದಿನೇಶ್ ಆಚಾರ್ಯ ಪಡುಬಿದ್ರಿ ವಂದಿಸಿದರು.
ಅಕ್ಟೋಬರ್ 21 : ಮೆನ್ಕಿನ ತುಡರ್ ವೀರಾಂಜನೇಯ ಭಕ್ತಿ ಗೀತೆ ಬಿಡುಗಡೆ
Posted On: 18 Oct 2023, 03:02 PM
ಕಾಪು : ಸಚೇಂದ್ರ ಅಂಬಾಗಿಲು ಸಾಹಿತ್ಯ, ಪರಿಕಲ್ಪನೆ, ನಿರ್ದೇಶನ, ಸಹ ನಿರ್ಮಾಣದಲ್ಲಿ ಮೆನ್ಕಿನ ತುಡರ್ ವೀರಾಂಜನೇಯ ಭಕ್ತಿ ಗೀತೆಯು ಅಕ್ಟೋಬರ್ 21, ಶನಿವಾರ ಬಿಡುಗಡೆಗೊಳ್ಳಲಿದೆ. ಏಕಕಾಲದಲ್ಲಿ 100ಕ್ಕೂ ಅಧಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಬಿಡುಗಡೆಗೊಳ್ಳಲಿದೆ. ನಾಗೇಂದ್ರ ಕುಮಾರ್ ನಿರ್ಮಾಣದಲ್ಲಿ, ಯುವ ಕಲಾವಿದೆ ದಿಶಾಲಿ, ಬಾಲ ಕಲಾವಿದರಾದ ರಿಧ ಮತ್ತು ಶಾಸ್ಯ ನಟಿಸಿದ್ದಾರೆ. ಅನುಷಾ ಶೇಟ್ ಗಾಯನ, ಕಾಸ್ಟ್ಯೂಮ್ ಮತ್ತು ಮೇಕಪ್ ಸಪ್ನ ಉಡುಪಿ, ಛಾಯಾಗ್ರಹಣದಲ್ಲಿ ಸಚಿನ್, ಗಗನ್, ಎಡಿಟಿಂಗ್ ಕಾರ್ಯದಲ್ಲಿ ಅಶ್ವತ್ ಪೂಜಾರಿ, ಸಹ ನಿರ್ದೇಶನ ಸುಜಿತ್ ಕೋಟ್ಯಾನ್, ರೆಕಾರ್ಡಿಂಗ್ ನಲ್ಲಿ ಬ್ರಾಹ್ಮರಿ ಸ್ಟುಡಿಯೋ ಹೆಬ್ರಿ ಕಾರ್ಯನಿರ್ವಹಿಸಿದ್ದಾರೆ.
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ
Posted On: 18 Oct 2023, 02:39 PM
ಉಡುಪಿ : ಜಿಲ್ಲೆಯ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ಕಸ ವಿಲೇವಾರಿ ಸ್ವಚ್ಛತೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಹಾಗೂ ಸಮರ್ಪಕವಾದ ಶುಲ್ಕ ವಸೂಲಾತಿ ಬಗ್ಗೆ ಜೊತೆಗೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬಂಟಕಲ್ಲು : ಇ-ಸ್ಟಾಂಪಿಂಗ್ ಸೇವೆ ಲೋಕಾರ್ಪಣೆ
Posted On: 17 Oct 2023, 05:27 PM
ಬಂಟಕಲ್ಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ (ಲಿ.) ಶಾಖೆಯಲ್ಲಿ ಮಂಗಳವಾರ ಇ-ಸ್ಟಾಂಪಿಂಗ್ ಸೇವೆ ಲೋಕಾರ್ಪಣೆಗೊಂಡಿತು. ಕರ್ನಾಟಕ ಬ್ಯಾಂಕ್ ಬಂಟಕಲ್ಲು ಶಾಖಾ ಪ್ರಬಂಧಕರಾದ ವಿಘ್ನೇಶ್ವರ ಉಡುಪ ಇವರು ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ಶಿರ್ವ ಹೊರತು ಪಡಿಸಿ ಈ ಭಾಗದಲ್ಲಿ ಇ-ಸ್ಟಾಂಪಿಂಗ್ ಸೇವೆ ಇಲ್ಲ. ಈ ಭಾಗದ ನಾಗರಿಕರಿಗೆ ಅತೀ ಅಗತ್ಯವಾಗಿ ಬೇಕಾಗಿರುವ ಈ ವ್ಯವಸ್ಥೆಯನ್ನು ಒದಗಿಸಿದ ಶ್ರೀ ದುರ್ಗಾಪರಮೇಶ್ವರೀ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಪದಾಧಿಕಾರಿಗಳನ್ನು ಅಭಿನಂದಿಸಿದರು. ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಸೊಸೈಟಿಯ ಅಧ್ಯಕ್ಷರಾದ ಕೊಡಂಗೆ ಅಶೋಕ ಕಾಮತ್ ಮಾತನಾಡಿ ನಮಗೆ ಲಾಭಾಂಶ ಮುಖ್ಯವಲ್ಲ. ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವಾ ಭಾವನೆಯಿಂದ ಇ ಸ್ಟಾಂಪಿಂಗ್ ವ್ಯವಸ್ಥೆ ಮಾಡಿದ್ದೇವೆ ಎಂದರು. ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷ ಎಳ್ಳಾರೆ ಪಾಂಡುರಂಗ ಕಾಮತ್, ನಿರ್ದೇಶಕರುಗಳಾದ ರಾಮಕೃಷ್ಣ ನಾಯಕ್, ಕಡ್ತಾಲ್ ಗಣಪತಿ ನಾಯಕ್, ಜಯಂತಿ ನಾಯಕ್, ಶಾಖಾ ಪ್ರಬಂಧಕ ಸುಧಾಕರ್ ನಾಯಕ್, ಸಲಹಾ ಸಮಿತಿಯ ಸದಸ್ಯರಾದ ಹರೀಶ್ ಪಾಟ್ಕರ್, ರಂಜಿತ್ ಕೆ.ಎಸ್, ಸಿಬ್ಬಂದಿಗಳಾದ ಅಭಿಲಾಷ್ ಕಾಮತ್, ಚೇತನ್ ನಾಯಕ್, ವಸಂತಿ ವಾಗ್ಲೆ, ನರೇಂದ್ರ ನವೆಲ್ಕರ್, ಗ್ರಾಹಕರು ಉಪಸ್ಥಿತರಿದ್ದರು. ನಿರ್ದೇಶಕರಾದ ಕೋಡುಗುಡ್ಡೆ ರವೀಂದ್ರ ಪಾಟ್ಕರ್ ನಿರೂಪಿಸಿ ಸ್ವಾಗತಿಸಿದರು. ಕಾರ್ಯನಿರ್ವಾಹಣಾಧಿಕಾರಿ ನಿತ್ಯಾನಂದ ನಾಯಕ್ ನರಸಿಂಗೆ ವಂದಿಸಿದರು.
