Updated News From Kaup
ಉಡುಪಿ ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆ
Posted On: 06-09-2023 07:02PM
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಳಕಾಡು ಸರಕಾರಿ ಪೌಢಶಾಲೆ ಶಾಲೆಯಲ್ಲಿ ಬುಧವಾರ "ಶ್ರೀಕೃಷ್ಣ ಜಯಂತಿ - 2023" ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಕಳ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು, ಗುರುತ್ವದೆಡೆಗೆ ಕರೆದೊಯ್ಯುವುದೇ ವಿದ್ಯೆ - ಪ್ರೊ.ಬಿ.ಪದ್ಮನಾಭಗೌಡ
Posted On: 06-09-2023 06:16PM
ಕಾರ್ಕಳ : ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ 'ಗುರುದೇವೋ ಭವ' ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾಪು : ತಾಯಿಯ ಸಂಸ್ಮರಣೆಗೆ ಪ್ರಥಮ ವರ್ಷ ಕಾಪುವಿನಲ್ಲಿ ಮೂರ್ತಿ ಪ್ರತಿಷ್ಠೆ ; ಮೂರನೇ ವರ್ಷ ಮುಂಬೈನಲ್ಲಿ ಬೃಹತ್ ವೈದ್ಯಕೀಯ ಶಿಬಿರ
Posted On: 06-09-2023 06:05PM
ಕಾಪು : ಮುಂಬೈ ಮಹಾನಗರದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿದ್ದು ಮಹಾನಗರ ಪಾಲಿಕೆಯ ಕಾರ್ಪೋರೇಟರ್ ಆಗಿ ಸೇವೆ ಸಲ್ಲಿಸಿದ್ದ ಗೀತಾ ಯಾದವ್ ಪೂಜಾರಿ ಅವರ ಮೂರನೇ ಪುಣ್ಯ ತಿಥಿಯ ಪ್ರಯುಕ್ತ ಮುಂಬಯಿ ಮಹಾನಗರದಲ್ಲಿ ಬೃಹತ್ ವೈದ್ಯಕೀಯ ಶಿಬಿರ ನಡೆಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾರ್ಕಳ : ವಾಲಿಬಾಲ್ ಪಂದ್ಯಾಟದಲ್ಲಿ ನಾನಿಲ್ತಾರ್ ಕುಲಾಲ ಸಂಘ ದ್ವಿತೀಯ
Posted On: 06-09-2023 05:59PM
ಕಾರ್ಕಳ : ತಾಲೂಕಿನ ಕಾರ್ಕಳ ಕುಲಾಲ ಸಂಘದ ಆಯೋಜನೆಯಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ನಾನಿಲ್ತಾರು ಕುಲಾಲ ಸಂಘ ದ್ವಿತೀಯ ಸ್ಥಾನ ಗಳಿಸಿದ್ದು, ನಾನಿಲ್ತಾರು ಕುಲಾಲ ಸಂಘ ಇದರ ಅಧ್ಯಕ್ಷರು ಕುಶ ಆರ್ ಮೂಲ್ಯ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಂಘಕ್ಕೆ 2022 - 23ನೇ ಸಾಲಿನ ಪ್ರಥಮ ಅತ್ಯುತ್ತಮ ಸಂಘ ಪ್ರಶಸ್ತಿ
Posted On: 05-09-2023 06:12PM
ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಂಘವು 2022 - 23ನೇ ಸಾಲಿನಲ್ಲಿ ಉಡುಪಿ ತಾಲೂಕಿಗೆ ಪ್ರಥಮ ಅತ್ಯುತ್ತಮ ಸಂಘವೆಂದು ಪ್ರಶಸ್ತಿ ಪಡೆದಿರುತ್ತದೆ.
ಕಾಪು ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಶಿಕ್ಷಕ ರಾಧಾಕೃಷ್ಣ ಪ್ರಭುರವರಿಗೆ ಸನ್ಮಾನ
Posted On: 05-09-2023 06:02PM
ಕಾಪು : ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿಯ ನಿವೃತ್ತ ಶಿಕ್ಷಕರು, ತಾಲೂಕು ಪ್ರಶಸ್ತಿ ವಿಜೇತರು, ಯೋಗ ಶಿಕ್ಷಕರಾದಂತಹ ರಾಧಾಕೃಷ್ಣ ಪ್ರಭು ಕಾಪು ಇವರನ್ನ ಮಾಜಿ ಜಿಲ್ಲಾ ಗವರ್ನರ್ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ನಮ್ಮೆಲ್ಲರ ಬದುಕಿಗೆ ಹೊಸ ಅಥ೯ ನೀಡಿದ ಗುರುವಿಗೆ ವಂದನೆ
Posted On: 05-09-2023 07:47AM
ಅಂದು ಹಿಂದಕ್ಕೆ ಗುರುವಿದ್ದ, ಮುಂದಕ್ಕೆ ಗುರಿಯಿತ್ತು; ಮುಂದೆ ನಡೆಯುತ್ತಿತ್ತು ಧೀರದಂಡು! ಇಂದೋ? ಹಿಂದಕ್ಕೆ ಗುರುವಿಲ್ಲ, ಮುಂದಕ್ಕೆ ಗುರಿಯಿಲ್ಲ;ಮುನ್ನುಗುತ್ತಿದೆ ಕುರಿಗಳ ಹಿಂಡು! ಇದು ರಾಷ್ಟ್ರಕವಿ ಕುವೆಂಪುರವರ ಮಾತುಗಳು. ಇದು ನೂರಕ್ಕೆ ನೂರರಷ್ಟು ಸತ್ಯ. ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ, ಗುರು ಬಹುಮುಖ್ಯ ಹಲವರ ಜೀವನಗಳಲ್ಲಿ ತಮ್ಮ ಗುರುಗಳು ಬೀರಿದ ಪ್ರಭಾವದಿಂದ ತಾವು ತಮ್ಮ ಜೀವನದ ದಿಕ್ಕನ್ನೇ ಬದಲಿಸಿ ಯಶಸ್ವಿಯಾದ ಹಲವಾರು ಉದಾಹರಣೆಗಳಿವೆ. ಪ್ರತಿಯೊಬ್ಬರ ಜೀವನದಲ್ಲಿ ಗುರಿ ಎಷ್ಟು ಮುಖ್ಯವೋ, ಅಷ್ಟೇ ಗುರುಗಳೂ ಮುಖ್ಯ ಏಕೆಂದರೆ, ಆ ಗುರಿ ಮುಟ್ಟಲು ಬದುಕಿಗೆ.ದಾರಿ ದೀಪವಾದ ಉತ್ತಮ ಗುರುಗಳು.
ಅನಾರೋಗ್ಯ ಪೀಡಿತ ಮಗುವಿಗೆ ಧನಸಹಾಯ : ಈ ಬಾರಿ ಸೀ ಪೋಕ್ ವೇಷದಲ್ಲಿ ಬರಲಿದ್ದಾರೆ ರವಿ ಕಟಪಾಡಿ
Posted On: 05-09-2023 07:27AM
ಉಡುಪಿ : ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕೃಷ್ಣ ಜನ್ಮಾಷ್ಟಮಿಯಂದು ಪ್ರತಿವರ್ಷ ವಿಶಿಷ್ಟ ವೇಷ ಧರಿಸಿ ಜನರನ್ನು ರಂಜಿಸುತ್ತಿದ್ದ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿಯೂ ಸಜ್ಜಾಗಿದ್ದಾರೆ.
ಸೌಜನ್ಯ ಪ್ರಕರಣ : ಮರು ತನಿಖೆಗೆ ಒಳಪಡಿಸುವಂತೆ ದ.ಕ, ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿಗೆ ಮನವಿ
Posted On: 05-09-2023 07:24AM
ಉಡುಪಿ : ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಹೆಜಮಾಡಿ : ಪತ್ರಕರ್ತ ಹರೀಶ್ ಹೆಜಮಾಡಿಗೆ ಹುಟ್ಟೂರ ಸನ್ಮಾನ
Posted On: 03-09-2023 06:42AM
ಹೆಜಮಾಡಿ : ಇಂದಿನ ಕಾಲದಲ್ಲಿ ದೇವಾಲಯಗಳೆಂದರೆ ಸರಕಾರಿ ಪ್ರಾಥಮಿಕ ಶಾಲೆಗಳು. ಇದೊಂದು ಪವಿತ್ರ ಕ್ಷೇತ್ರ. ಇಂತಹ ಶಾಲೆಯಲ್ಲಿ ಕಲಿತು ಇಲ್ಲಿಯೇ ಪತ್ರಕರ್ತ ಹರೀಶ್ ಹೆಜಮಾಡಿಯವರಿಗೆ ಊರವರು ಸನ್ಮಾನಗೈಯುತ್ತಿರುವುದು ಅಭಿನಂದನೀಯ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ಕಮಲ ದೇವಿ ಪ್ರಸಾದ ಅಸ್ರಣ್ಣ ಹೇಳಿದರು. ಅವರು ಹೆಜಮಾಡಿ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಹರೀಶ್ ಹೆಜಮಾಡಿ ಇವರ ಹುಟ್ಟೂರ ಸನ್ಮಾನ ಸಮಿತಿ ಹೆಜಮಾಡಿ ಇವರ ಸಹಯೋಗದಲ್ಲಿ ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪತ್ರಕರ್ತ ಹರೀಶ್ ಹೆಜಮಾಡಿ ಇವರ ಹುಟ್ಟೂರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಂಗಾರ್ ಜುಮ್ಮಾ ಮಸೀದಿಯ ಖತೀಬರಾದ ಜವಾಬ್ ಅಶ್ರಫ್ ಸಖಾಫಿ ಕಿನ್ಯ ಮಾತನಾಡಿ ಧರ್ಮ, ಅನಾಚಾರದ ಸುದ್ದಿಗಳಿಗೆ ಕಡಿವಾಣ ಹಾಕಬೇಕಾಗಿದೆ. ಸಮನ್ವಯ ಸಾಧಿಸುವ ಮೂಲಕ ಸಮಾಜದ ಹಿತಚಿಂತನೆಯ ಕಾರ್ಯ ಪತ್ರಿಕೆಗಳಿಂದ ಆಗಬೇಕಾಗಿದೆ ಎಂದರು. ಕಾರ್ನಾಡು ಮುಲ್ಕಿ, ಅಮಲೋದ್ಭವ ಮಾತಾ ಚರ್ಚ್ ನ ಧರ್ಮ ಗುರು ವಂ| ಫಾ| ಸಿಲ್ವೆಸ್ಟರ್ ಡಿ ಕೋಸ್ತ ಮಾತನಾಡಿ ಇಂದು ಊರ ಸಂಘ ಸಂಸ್ಥೆಗಳಿಂದ ತಮ್ಮ ಊರಿನ ವ್ಯಕ್ತಿ ಎಂಬ ಪ್ರೀತಿ, ಆತ್ಮೀಯಯೆಯಿಂದ ಪಡೆಯುವ ಸನ್ಮಾನ ಅತ್ಯಂತ ಮಹತ್ವದ್ದಾಗಿದೆ ಎಂದರು.
