Updated News From Kaup

ಇನ್ನಂಜೆ : ನಿಸರ್ಗ ಫ್ರೆಂಡ್ಸ್ ಪಾದೆಕೆರೆ - ಗೂಡುದೀಪ

Thumbnail
Posted On: 12 Nov 2023, 06:11 PM

ಇನ್ನಂಜೆ : ಎಲ್ಲೆಲ್ಲೂ ದೀಪದ ಹಬ್ಬ ದೀಪಾವಳಿಯ ಸಂಭ್ರಮ. ಅದರಲ್ಲೂ ಮನೆ, ಬೀದಿಗಳಲ್ಲಿ ಗೂಡುದೀಪಗಳನ್ನು ನೋಡುವುದೇ ಚಂದ. ಕಳೆದ 12 ವರ್ಷಗಳಿಂದ ಗೂಡುದೀಪವನ್ನು ತಯಾರಿಸಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದಾರೆ ನಿಸರ್ಗ ಫ್ರೆಂಡ್ಸ್ (ರಿ.)ಪಾದೆಕೆರೆ, ಇನ್ನಂಜೆ ತಂಡ. ಈ ಬಾರಿಯೂ 8×5 ಫೀಟ್ ಮಾದರಿಯ ಗೂಡುದೀಪ ತಯಾರಿಸಿದ್ದಾರೆ.

ಪಲಿಮಾರು ಹೊೖಗೆ ಫ್ರೆಂಡ್ಸ್ ವತಿಯಿಂದ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳ ವಿತರಣೆ

Thumbnail
Posted On: 12 Nov 2023, 06:01 PM

ಕಟಪಾಡಿ : ದೀಪಾವಳಿ ಹಬ್ಬದ ಪ್ರಯುಕ್ತ ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಇವರು ಕಟಪಾಡಿಯ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ , ಕಾರ್ಯದರ್ಶಿ ಸತೀಶ ಕುಮಾರ್, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ರಾಘವೇಂದ್ರ ಜೆ ಸುವರ್ಣ, ವಿಶು ಕುಮಾರ್, ರವಿ ದೇವಾಡಿಗ, ಶ್ರೀಜಿತ್, ಅಂಕಿತ್, ಅಭಿಷೇಕ್, ಸಿಂಚನ್ ಎಸ್ ಅಮೀನ್, ಆಶ್ರಮದ ಮೇಲ್ವಿಚಾರಕರಾದ ಪಿ. ಕುಮಾರ್ ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

ಪಡುಬಿದ್ರಿ ರೋಟರಿ ಕ್ಲಬ್ ‌: ವರ್ಣ ವಿಹಾರ-2023

Thumbnail
Posted On: 12 Nov 2023, 03:38 PM

ಪಡುಬಿದ್ರಿ : ಬಲ್ಲವನೇ ಬಲ್ಲ ಬೆಲ್ಲದ ರುಚಿಯ ಎನ್ನುವ ಹಾಗೆ ಚಿತ್ರ ಕಲೆಯ ಸವಿಯು ಸವಿದವನಿಗೆ ಗೊತ್ತು ಚಿತ್ರಕಲೆಯ ಬಗ್ಗೆ ತಿಳಿಯುವ ಮುನ್ನ ನಾವು ಕಲೆಯ ಬಗ್ಗೆ ಅರಿತು ಕೊಳ್ಳಲೇಬೇಕು. ಚಿತ್ರಕಲೆಯು ಮಗುವಿನ ಮಾನಸಿಕ ಬೆಳವಣಿಗೆಗೆ ಸ್ವಾಭಾವಿಕ ಸಾಧನ. ಪ್ರತಿಯೊಂದು ಮಗುವು‌ ಶ್ರೇಷ್ಠ ಕಲಾವಿದ. ಪ್ರತಿಶತ ಶೇ.80 ರಷ್ಟು ಮಕ್ಕಳು ತಾವು ಇಷ್ಟ ಪಡುವ‌ ಆಟಕ್ಕಿಂತಲು ಹೆಚ್ಚು ಸಮಯವನ್ನು ಚಿತ್ರಕಲೆಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಾರೆ. ಏಕಾಗ್ರತೆ ಹಾಗು ತಾಳ್ಮೆ ಇದ್ದರೆ ಎಷ್ಟೇ ಕಷ್ಟಕರವಾದ ಚಿತ್ರವನ್ನು ಬಿಡಿಸಬಹುದು" ಎಂದು ಖ್ಯಾತ ಚಿತ್ರ ಕಲಾವಿದ ಸೂರಾಜ್ ಮಂಗಳೂರು ನುಡಿದರು. ಅವರು ಪಡುಬಿದ್ರಿ ಸುಜಾತ ಆಡಿಟೋರಿಯಮ್ ನಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಉಜ್ವಲ್ ಡಿಸೈನ್ಸ್ ಮತ್ತು ಪ್ರಿಂಟಿಂಗ್ ಇದರ ವತಿಯಿಂದ ನಡೆದ ವರ್ಣ ವಿಹಾರ-2023 ಉಡುಪಿ ಜಿಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್, ಉಜ್ವಲ್ ಡಿಸೈನ್ಸ್ ಮತ್ತು ಪ್ರಿಂಟಿಂಗ್ ಮಾಲಕ ಅಬ್ದುಲ್ ಹಮೀದ್, ಸರಸ್ವತಿ ಮಂದಿರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಿ.ಎಸ್ ಅಚಾರ್ಯ, ರೋಟರಿ ಪೂರ್ವ ಅಧ್ಯಕ್ಷ ಗಣೇಶ್ ಅಚಾರ್ಯ, ಹೇಮಲತಾ ಸುವರ್ಣ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರ ವಿವರ : 1ರಿಂದ 4 ತರಗತಿ ವಿಭಾಗ - ಎಮ್ .ರಾಝಿಕ್ (ಪ್ರಥಮ), ಜಯಕೃಷ ಎಲ್ ಬಂಗೇರ (ದ್ವಿತೀಯ) 5 ರಿಂದ‌ 8 ನೇ ತರಗತಿ ವಿಭಾಗ - ಅನುಜ್ಞ (ಪ್ರಥಮ), ಅಮೀನಾ ಬಾನು (ದ್ವಿತೀಯ) 9 ರಿಂದ 12ನೇ ತರಗತಿ ವಿಭಾಗ - ಶುಭಾಶ್ರೀ (ಪ್ರಥಮ), ಸಮರ್ಥ ಜೋಶಿ (ದ್ವಿತೀಯ) ಸಾರ್ವಜನಿಕ ವಿಭಾಗ - ತಸ್ನೀನ್ ಅರಾ ಪಡುಬಿದ್ರಿ (ಪ್ರಥಮ), ಪ್ರತೀಕ್ ಶೆಟ್ಟಿ ಪಡುಬಿದ್ರಿ (ದ್ವಿತೀಯ) ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ‌ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ವಹಿಸಿದ್ದರು. ಮಾಜಿ ತಾ.ಪಂ ಸದಸ್ಯ ನವೀನಚಂದ್ರ ಜೆ ಶೆಟ್ಟಿ, ಪಡುಬಿದ್ರಿ ಗ್ರಾ.ಪಂ. ಉಪಾಧ್ಯಕ್ಷ ವೈ. ಸುಕುಮಾರ್, ಕನ್ನಡ ಚಲನಚಿತ್ರ ನಿರ್ಮಾಪಕ ಡಾ| ಸುರೇಶ್ ಕೋಟ್ಯಾನ್ ಚಿತ್ರಾಪು, ವಲಯ ಸೇನಾನಿ ರಿಯಾಜ್ ಮುದರಂಗಡಿ, ವಲಯ ಸಂಯೋಜಕ ರಮೀಜ್ ಹುಸೇನ್, ರೋಟರಿ ಪೂರ್ವ ಅಧ್ಯಕ್ಷ ಅಬ್ದುಲ್ ಹಮೀದ್, ಪಡುಬಿದ್ರಿ ಕೆನರಾ ಬ್ಯಾಂಕ್ ಪ್ರಬಂಧಕಿ ವಿಜಯ ಕಾಮತ್, ಚಲನಚಿತ್ರ ನಟಿ, ರೂಪದರ್ಶಿ ಕು.ತೃಪ್ತಿ, ಕಾರ್ಯಕ್ರಮ ನಿರ್ದೇಶಕ ರಾದ ಗಣೇಶ್ ಅಚಾರ್ಯ ಎರ್ಮಾಳ್, ತಸ್ನೀನ್ ಅರಾ, ಹೇಮಲತಾ ಸುವರ್ಣ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ‌ಸ್ವಾಗತಿಸಿದರು. ಬಿ.ಎಸ್. ಆಚಾರ್ಯ ನಿರೂಪಿಸಿದರು. ಕಾರ್ಯದರ್ಶಿ ಪವನ್ ಸಾಲ್ಯಾನ್ ವಂದಿಸಿದರು.

ಹೆಜಮಾಡಿ : ಕುಣಿತ ಭಜನಾ ತರಬೇತಿಗೆ ಚಾಲನೆ

Thumbnail
Posted On: 12 Nov 2023, 11:21 AM

ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದೆಬೆಟ್ಟುಶ್ರೀಧರ್ ಆಚಾರ್ಯ ಇವರ ನೇತೃತ್ವದಲ್ಲಿ ಕುಣಿತ ಭಜನಾ ತರಬೇತಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ದೇವಸ್ಥಾನದ ಅರ್ಚಕರು, ದಯಾನಂದ ಹೆಜಮಾಡಿ, ರಾಜಶೇಖರ್ ಹೆಜಮಾಡಿ, ಶ್ರೀನಿವಾಸ್ ಹೆಜಮಾಡಿ, ಮಹಿಳಾ ಬಳಗ ಮತ್ತು ಮಕ್ಕಳು ಉಪಸ್ಥಿತರಿದ್ದರು.

ಬಂಟಕಲ್ಲು : ಕೆ ಆರ್ ಪಾಟ್ಕರ್ ರಿಂದ ರಚಿಸಲ್ಪಟ್ಟ ಕನ್ನಡದ ಗೂಡುದೀಪ

Thumbnail
Posted On: 12 Nov 2023, 11:15 AM

ಬಂಟಕಲ್ಲು : ದೀಪಾವಳಿ ಸಂಭ್ರಮದಲ್ಲಿ ಗೂಡುದೀಪಕ್ಕೂ ಪಾಲಿದೆ. ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ತಯಾರಿಸಿದ ಗೂಡುದೀಪಗಳು ರಾರಾಜಿಸಿದರೆ ಇಂದು ಅಂಗಡಿಗಳಲ್ಲಿ ತಯಾರಿಸಲ್ಪಟ್ಟ ಗೂಡುದೀಪಗಳು ಮನೆಯ ಎದುರಿಗೆ ರಾರಾಜಿಸುತ್ತಿದೆ. ಆದರೆ ಇಲ್ಲೊಬ್ಬರು ಕನ್ನಡದ ಕಟ್ಟಾಳು, ಬಂಟಕಲ್ಲು ಗ್ರಾಮ ಪಂಚಾಯ್ ನ ಮಾಜಿ ಅಧ್ಯಕ್ಷ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಸಂಘಟನಾ ಕಾರ್ಯದರ್ಶಿ, ಇತ್ತೀಚೆಗೆ ನಡೆದ ೫ನೇ ಕಾಪು ತಾಲೂಕು ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ರೂಪಿಸಿದ ಸಮ್ಮೇಳನದ ಕಾರ್ಯಧ್ಯಕ್ಷರಾದ ಕೆ‌ ಆರ್ ಪಾಟ್ಕರ್ ತಮ್ಮ ಮನೆಯಲ್ಲಿ ಕನ್ನಡದ ಗೂಡುದೀಪ ತಯಾರಿಸಿದ್ದಾರೆ. ಇದು ನೋಡುಗರಿಗೂ ಖುಷಿ ತಂದಿದೆ.

ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ : ಡಾ. ಪ್ರತಿಭ ಆರ್.

Thumbnail
Posted On: 11 Nov 2023, 11:20 PM

ಕಾಪು : ಇಲ್ಲಿನ‌ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ಜ್ಯೋತಿ ಬೆಳಗಿಸಿ ವೀರವನಿತೆ ಓಬವ್ವನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ‌ ಸಂದರ್ಭ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮ ಹೆಣ್ಣುಮಕ್ಕಳು ಕೂಡಾ ಆಕೆಯಂತೆ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭ ಉಪ ತಹಶಿಲ್ದಾರ್ ಅಶೋಕ್ ಎನ್ ಕೋಟೆಕಾರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ - ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ

Thumbnail
Posted On: 11 Nov 2023, 11:02 PM

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ ಕಾಪು ಪಡು ಇಲ್ಲಿಯ ಶ್ರೀ ಬ್ರಹ್ಮರ ಮೂರ್ತಿಗೆ ಹಾಗೂ ಕೋಟಿ ಚೆನ್ನಯ್ಯರ ಸುರಿಯಕ್ಕೆ ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ ನವೆಂಬರ್ 9ರಂದು ಶ್ರೀ ಬ್ರಹ್ಮ ಬೈದೇರುಗಳ ದಿವ್ಯ ಸನ್ನಿಧಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಗನ್ನಾಥ ಪೂಜಾರಿ ಅರ್ಚಕರು ಗರಡಿ ಮನೆ, ಸೇವಾ ಯುವ ಸಮಿತಿ ಕಾಪು ಇದರ ಗೌರವಾಧ್ಯಕ್ಷರು , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಜರಿದ್ದರು.

ಕಾಪು‌ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದೀಪಾವಳಿ ಹಬ್ಬದ ಆಚರಣೆ

Thumbnail
Posted On: 11 Nov 2023, 10:26 PM

ಕಾಪು : ಮಾಧ್ಯಮ ಕ್ಷೇತ್ರ ಇಂದು‌ ಕ್ರಿಯಾಶೀಲವಾಗಿದೆ. ಸಮಾಜದ ಒಳಿತು ಕೆಡುಕುಗಳ ಬಗೆಗೆ ಬೆಳಕು ಚೆಲ್ಲುವ ಕಾರ್ಯ ಮಾಧ್ಯಮದ ಮೂಲಕ ಆಗಬೇಕಾಗಿದೆ. ಪತ್ರಕರ್ತರು ಅವರ ಕುಟುಂಬ ವರ್ಗದೊಂದಿಗೆ ದೀಪಾವಳಿ‌ ಆಚರಿಸುತ್ತಿರುವುದು ಖುಷಿಯ ವಿಷಯ. ದೀಪಾವಳಿಯು ನಮ್ಮಲ್ಲಿ ಸಂಭ್ರಮ ಉಂಟುಮಾಡಿ ಎಲ್ಲರಿಗೂ ಒಳಿತಾಗಲಿ‌ ಎಂದು ಕಾಪು ತಹಶೀಲ್ದಾರರಾದ ಡಾ. ಪ್ರತಿಭ ಆರ್ ಶುಭ ಹಾರೈಸಿದರು. ಅವರು‌ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಶನಿವಾರ ಸಂಜೆ ನಡೆದ ದೀಪಾವಳಿ ಹಬ್ಬದ ಆಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಪುಂಡಲೀಕ ಮರಾಠೆ ದೀಪಾವಳಿಯ ಮಹತ್ವ ವಿವರಿಸಿದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ‌ಅಗಲಿದ ಪತ್ರಕರ್ತರುಗಳಾದ ಶೇಖರ ಅಜೆಕಾರು, ಶಶಿಧರ್ ಹೆಮ್ಮಣ್ಣಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ‌ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಹೆಜಮಾಡಿ ವಹಿಸಿದ್ದರು. ಈ ಸಂದರ್ಭ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ‌ಸಂಘದ ಕಾರ್ಯದರ್ಶಿ ಸಂತೋಷ್, ಕೋಶಾಧಿಕಾರಿ ಹೇಮನಾಥ್ ಉಪಸ್ಥಿತರಿದ್ದರು. ಪತ್ರಕರ್ತ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಸ್ವಾಗತಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂತೋಷ್ ವಂದಿಸಿದರು.

ಮುಲ್ಕಿ : ಶಿವಾಯ ಫೌಂಡೇಶನ್ ಮುಂಬಯಿ ವತಿಯಿಂದ ಕುಟುಂಬವೊಂದಕ್ಕೆ ದೀಪಾವಳಿಗೆ ಹೊಸ ಬಟ್ಟೆ, ದಿನಸಿ ಹಸ್ತಾಂತರ

Thumbnail
Posted On: 11 Nov 2023, 09:49 PM

ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬಯಿ ವತಿಯಿಂದ ಕಾರ್ನಾಡು ಅಮೃತಾಮಯಿ ನಗರ ನಿವಾಸಿ ಗೀತಾ ಅವರ ಮನೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಯಿತು. ಕುಟುಂಬಕ್ಕೆ ದೀಪಾವಳಿ ಹಬ್ಬದ ಸಲುವಾಗಿ ಮಕ್ಕಳಿಗೆ ಹೊಸ ಬಟ್ಟೆ ಹಾಗೂ ದಿನಸಿ ಸಾಮಾನುಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ಗೌರವ ಸಲಹೆಗಾರರಾದ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಸದಸ್ಯರಾದ ರವಿ ಶೆಟ್ಟಿ ಶಾರದೆ, ಜಗನ್ನಾಥ್ ಶೆಟ್ಟಿ ರಮಣಿ ಐಸ್ ಕ್ರೀಮ್ ಪಡುಬಿದ್ರಿ, ಸುಧಾಕರ್ ಕೆ ಪಡುಬಿದ್ರಿ, ಧೀರಜ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಗ್ರಾಹಕರ ಸೇವೆಗಾಗಿ ಹೋಟೆಲ್ ಮಯೂರ - ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಇನ್ನಿತರ ಖಾದ್ಯಗಳು

Thumbnail
Posted On: 11 Nov 2023, 04:02 PM

ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಹಾಗೂ ಇನ್ನಿತರ ಖಾದ್ಯಗಳನ್ನು ಉಣ ಬಡಿಸುತ್ತಿದೆ ಕಾಪುವಿನ ಹೋಟೆಲ್ ಮಯೂರ. ಉತ್ತಮ ಗುಣಮಟ್ಟದ ಆಹಾರ ಮತ್ತು ರೂಮ್ಸ್ ಜೊತೆಗೆ ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಿಗೆ ಸಭಾಂಗಣ ಹಾಗೂ ಕ್ಯಾಟರಿಂಗ್ ವ್ಯವಸ್ಥೆಯನ್ನು ಕೂಡಾ ಒದಗಿಸುತ್ತಿದ್ದಾರೆ. ಕಾಪು ಮಯೂರ ಹೋಟೆಲ್ ನಿಂದ 3 ಕಿ.ಮೀ ವ್ಯಾಪ್ತಿಯವರೆಗೆ ಫ್ರೀ ಹೋಮ್ ಡೆಲಿವರಿ ವ್ಯವಸ್ಥೆಯೂ ಇದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : +91 72596 11190