Updated News From Kaup
ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಶ್ರೀ ರಾಯರ ಆರಾಧನಾ ಮಹೋತ್ಸವ ಮತ್ತು ಅಖಂಡ ಭಜನಾ ಸಂಕೀರ್ತನೆ
Posted On: 29-08-2023 08:30AM
ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 2 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ.
ಕಾಪು : ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿ - ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ
Posted On: 28-08-2023 10:56PM
ಕಾಪು : ತಾಲೂಕಿನ ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯಲ್ಲಿ ಪಾಂಗಾಳ ಮುರಳಿ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆಯು ನಡೆಯಿತು.
ಹೆಜಮಾಡಿ : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ - ಸರಕಾರದ ಉಚಿತ ಕೊಡುಗೆ ವಿತರಣೆ
Posted On: 28-08-2023 10:31PM
ಹೆಜಮಾಡಿ : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಇಂದು ಸರಕಾರದ ಉಚಿತ ಕೊಡುಗೆಯಲ್ಲಿ ಒಂದಾದ ಶೂ / ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು.
ಕಳತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ - ಹಲವು ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಕುತ್ಯಾರು ಆನೆಗುಂದಿ ಸೂರ್ಯಚೈತನ್ಯ ಶಾಲೆ
Posted On: 28-08-2023 10:20PM
ಕಳತ್ತೂರು : 2023-24 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು ಇಲ್ಲಿ ನಡೆಯಿತು.
ಶಿರ್ವ : ವಿಶ್ವಕರ್ಮ ಧ್ವಜವು ಸರ್ವರ ಒಮ್ಮತ ಅಭಿಪ್ರಾಯ ಪ್ರಕಾರ ಮೂಡಿಬರಲಿದೆ - ಆನೆಗುಂದಿಶ್ರೀ
Posted On: 28-08-2023 09:29PM
ಶಿರ್ವ : ವಿಶ್ವ ಬ್ರಾಹ್ಮಣ ಸಮಾಜದ ಐಕ್ಯತೆಯ ದ್ಯೋತಕವಾಗಿ ಸರ್ವರ ಒಮ್ಮತ ಅಭಿಪ್ರಾಯದ ಪ್ರಕಾರ ವಿಶ್ವಕರ್ಮ ಧ್ವಜವು ಮೂಡಿಬರಲಿದೆ. ಇದೀಗ ಆರಂಭಿಕ ಹಂತದ ಚಿಂತನಾ ಸಭೆಗಳನ್ನು ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು. ಅವರು ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಜರುಗಿದ ವಿಶ್ವಕರ್ಮ ಧ್ವಜದ ಎರಡನೇ ಚಿಂತನಾ ಸಭೆಯಲ್ಲಿ ಮಾತನಾಡುತ್ತಿದ್ದರು.
ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ
Posted On: 28-08-2023 09:21PM
ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕ, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ವಿದ್ಯಾರ್ಥಿವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ
Posted On: 27-08-2023 08:12PM
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಮತ್ತು ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಗುರಿಕಾರರಿಗೆ ಗೌರವಧನ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಭಾನುವಾರ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಜಿ. ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮೊಗವೀರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಸರಕಾರವನ್ನು ಒತ್ತಾಯಿಸುವ ಪ್ರಥಮ ಹಂತದ ಹೋರಾಟ ನಡೆಯುತ್ತಿದೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಕೋರಿ ಲೋಕಸಭಾ ಚುನಾವಣೆಗೆ ಮೊದಲು ಬೃಹತ್ ಮಟ್ಟದ ಹೋರಾಟ ನಡೆಸಲಾಗುವುದು ಎಂದರು. ರಾಜ್ಯದಲ್ಲಿರುವ ಫಿಶರೀಸ್ ಕಾಲೇಜಿನಲ್ಲಿ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗುತ್ತಿಲ್ಲದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತುಕತೆ ನಡೆಸಲಾಗಿದೆ ಎಂದರು.
ಶಿರ್ವ : ಬಂಟಕಲ್ಲು ಶ್ರೀದುರ್ಗಾ ಮಹಿಳಾ ಚಂಡೆ ಬಳಗ - ಶ್ರಾವಣ ಸಂಭ್ರಮ ಸಂಪನ್ನ
Posted On: 27-08-2023 07:42PM
ಶಿರ್ವ : ಶ್ರೀದುರ್ಗಾ ಮಹಿಳಾ ಚಂಡೆ ಬಳಗ ಬಂಟಕಲ್ಲು ಇದರ ವತಿಯಿಂದ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಸಭಾಂಗಣದಲ್ಲಿ ರವಿವಾರ ಜರುಗಿದ "ಶ್ರಾವಣ ಸಂಭ್ರಮ" ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಬೇಬಿ ಪ್ರಭು ಬೆಳಂಜಾಲೆ ಇವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಮ್ಮ ಹಿರಿಯರು ಆಚರಣೆ ಮಾಡಿಕೊಂಡು ಬರುತ್ತಿದ್ದ ಸತ್ಸಂಪ್ರದಾಯಗಳನ್ನು ಉಳಿಸಿ ನವಪೀಳಿಗೆಗೆ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಮಹಿಳಾ ಚಂಡೆ ಬಳಗದವರು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದರು.
33 ನೇ ವರ್ಷದ ಕಳತ್ತೂರು ಗಣೇಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 27-08-2023 12:46PM
ಕಾಪು : ಇಲ್ಲಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ ಕಳತ್ತೂರು ವತಿಯಿಂದ ಸೆಪ್ಟೆಂಬರ್ ತಿಂಗಳ 19 ರಂದು ನಡೆಯುವ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.
ಹಿರಿಯ ಸಂಶೋಧಕ ಬಾಬು ಶಿವಪೂಜಾರಿ ಪ್ರಧಾನ ಸಂಪಾದಕತ್ವದ 'ಬಿಲ್ಲವರ ಗುತ್ತು ಬರ್ಕೆಗಳು' ಸಂಶೋಧನಾ ಗ್ರಂಥ ಲೋಕಾರ್ಪಣೆ
Posted On: 27-08-2023 11:14AM
ಮಂಗಳೂರು : ಹಿರಿಯ ಸಂಶೋಧಕ ಬಾಬು ಶಿವಪೂಜಾರಿ ಪ್ರಧಾನ ಸಂಪಾದಕತ್ವದ 'ಬಿಲ್ಲವರ ಗುತ್ತು ಬರ್ಕೆಗಳು' ಸಂಶೋಧನಾ ಗ್ರಂಥವನ್ನು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕುದ್ರೋಳಿ ಕ್ಷೇತ್ರದಲ್ಲಿ ಲೋಕಾರ್ಪಣೆಗೊಳಿಸಿದರು.
