Updated News From Kaup
ಶಿರ್ವ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ
Posted On: 06 Nov 2023, 09:15 PM
ಶಿರ್ವ : ವಿಶ್ವಹಿಂದು ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ವಿಷ್ಣುಮೂರ್ತಿ ಘಟಕದ ಆಶ್ರಯದಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನಾ ಸಮಾರಂಭ ಶಿರ್ವ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರದಾನ ಅರ್ಚಕರಾದ ರಘುಪತಿ ಗುಂಡುಭಟ್ ಉದ್ಘಾಟನೆ ಮಾಡಿದರು. ವಿಷ್ಣುಮೂರ್ತಿದೇವಸ್ಥಾನದ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ ರತ್ನವರ್ಮ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಿಶ್ವಹಿಂದು ಪರಿಷದ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಕಾಪು ಪ್ರಖಂಡ ಕಾರ್ಯದರ್ಶಿ ರಾಜೇಂದ್ರ ಶೆಣೈ, ಕಾಪು ಪ್ರಖಂಡ ಮಾತೃಶಕ್ತಿ ಪ್ರಮುಖ್ ವಾಣಿ ಆಚಾರ್ಯ, ಕಾಪು ಪ್ರಖಂಡ ಧರ್ಮಚಾರಿ ಪ್ರಮುಖ್ ಪ್ರಸನ್ನ ಭಟ್, ಘಟಕದ ಅಧ್ಯಕ್ಷರಾದ ಜಯ ಪೂಜಾರಿ, ಘಟಕ ಮಾತೃ ಶಕ್ತಿ ಪ್ರಮುಖ್ ಚಂದ್ರಾವತಿ, ಕಾಪು ಪ್ರಖಂಡ ಭಜರಂಗದಳ ಸಹ ಸಂಯೋಜಕ ಆನಂದ್ ಶಿರ್ವ, ಪ್ರಖಂಡ ದುರ್ಗಾವಾಹಿನಿ ಸಂಯೋಜಕಿ ನಿಕ್ಷಿತಾ ಉಪಸ್ಥಿತರಿದ್ದರು.
ಕಾಪು : ಇನ್ನಂಜೆ ಬಿಲ್ಲವ ಸಂಘ - ಅಧ್ಯಕ್ಷರಾಗಿ ಜಗದೀಶ್ ಅಮೀನ್, ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಆಯ್ಕೆ
Posted On: 06 Nov 2023, 06:30 PM
ಕಾಪು : ಇನ್ನಂಜೆ ಬಿಲ್ಲವ ಸಂಘದ ಮಹಾಸಭೆ ನವೆಂಬರ್ 5 ರಂದು ಜರಗಿತು. ಸಂಘದ ನೂತನ ಅಧ್ಯಕ್ಷರನ್ನಾಗಿ ಜಗದೀಶ್ ಅಮೀನ್ ಮತ್ತು ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಮಜಲು, ಕಾರ್ಯದರ್ಶಿ ರಮಾನಂದ ಪೂಜಾರಿ ಕಲ್ಲುಗುಡ್ಡೆ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಉಚ್ಚಿಲ : ಯುವವಾಹಿನಿ ಪಡುಬಿದ್ರಿ ಘಟಕ - ಸರಸ್ವತಿ ಮಂದಿರ ಶಾಲೆಯಲ್ಲಿ ಮಕ್ಕಳ ಹಬ್ಬ
Posted On: 05 Nov 2023, 07:45 PM
ಉಚ್ಚಿಲ : ಶಾಲಾ ಹಂತದಲ್ಲಿ ಪಠ್ಯದ ಜೊತೆಗೆ ಪಠ್ಯ ಪೂರಕ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಪೂರಕವಾಗಿದೆ. ಜೀವನದಲ್ಲಿ ಮಾಧ್ಯಮ ಮುಖ್ಯವಾಗದು. ಕನ್ನಡ ಮಾಧ್ಯಮದಲ್ಲಿಯೂ ಕಲಿತವರು ಸಾಧನೆಯ ಹಂತ ತಲುಪಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಬರತ್ತಿರುವ ಪಡುಬಿದ್ರಿ ಯುವವಾಹಿನಿ ಘಟಕದ ಕಾರ್ಯ ಶ್ಲಾಘನೀಯ ಎಂದು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಹೆಜಮಾಡಿ ಹೇಳಿದರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ರವಿವಾರ ಜರಗಿದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಶಿಖರ್ ಮತ್ತು ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ನಾಯಕಿ ತಮೀಮಾ ಉದ್ಘಾಟಿಸಿದರು. ಈ ಸಂದರ್ಭ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಅಶ್ವಥ್ ಎಸ್ ವಹಿಸಿದ್ದರು. ಈ ಸಂದರ್ಭ ಪ್ರಾಥಮಿಕ ಶಾಲಾ ವಿಭಾಗದ ಸಂಚಾಲಕ ಮೋಹನ್ ದಾಸ್ ಶೆಟ್ಟಿ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ವೈ., ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆಶಾ, ಪ್ರಾಥಮಿಕ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕಲಾವತಿ, ಪಡುಬಿದ್ರಿ ಘಟಕದ ಕಲಾ ಮತ್ತು ಸಾಹಿತ್ಯ ನಿರ್ದೇಶಕರಾದ ಸಂತೋಷ್ ಕರ್ನಿರೆ, ಕಾರ್ಯದರ್ಶಿ ನಿಖಿಲ್ ಪೂಜಾರಿ ಪೂಜಾರಿ ಉಪಸ್ಥಿತರಿದ್ದರು. ಪಡುಬಿದ್ರಿ ಘಟಕದ ಕಲಾ ಮತ್ತು ಸಾಹಿತ್ಯ ನಿರ್ದೇಶಕರಾದ ಸಂತೋಷ್ ಕರ್ನಿರೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿಧಿತ್ ಮತ್ತು ಪವಿತ್ರ ನಿರೂಪಿಸಿದರು. ಕಾರ್ಯದರ್ಶಿ ನಿಖಿಲ್ ಪೂಜಾರಿ ಪೂಜಾರಿ ವಂದಿಸಿದರು.
ಹೆಜಮಾಡಿ : ಯುನೈಟೆಡ್ ಕನ್ನಂಗಾರ್ ಫುಟ್ಬಾಲ್ ಕ್ಲಬ್ - ಸಮಾಜ ಸೇವಕ ಫಾರೂಕ್ ಚಂದ್ರನಗರಗೆ ಸನ್ಮಾನ
Posted On: 05 Nov 2023, 05:11 PM
ಹೆಜಮಾಡಿ : ಇಲ್ಲಿನ ರಾಜೀವ ಗಾಂಧಿ ಕ್ರಿಡಾಂಗಣದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್ ಕ್ರೀಡಾ ವೇದಿಕೆಯಲ್ಲಿ ಯುನೈಟೆಡ್ ಕನ್ನಂಗಾರ್ ಫುಟ್ಬಾಲ್ ಕ್ಲಬ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಕ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಹಾಜಿ ಗುಲಾಮ್ ಮಹಮ್ಮದ್, ರಜಬ್ ಪರ್ಕಳ ಉದ್ಯಮಿ ಸೌದಿ ಅರೇಬಿಯಾ, ಸಂದೇಶ್ ಶೆಟ್ಟಿ ಉದ್ಯಮಿ ಮುಂಬೈ, ಆಸೀಫ್ ಕಾರ್ಕಳ, ಶೇಖರ್ ಹೆಜಮಾಡಿ, ಅಝೀಜ್ ಹೆಜಮಾಡಿ, ನಜಿರ್ ಕಾರ್ನಾಡ್, ಯುನೈಟೆಡ್ ಅಧ್ಯಕ್ಷ ಆಶಿಫ್, ಝಿಯಾನ್ ಹೆಜಮಾಡಿ, ಮೋಹನ್ ಸುವರ್ಣ, ಶರಣ್ ಕುಮಾರ್ ಮಟ್ಟು, ಶಿವರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಉದ್ಯಾವರ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನ
Posted On: 04 Nov 2023, 12:40 PM
ಉದ್ಯಾವರ : ಗುರ್ಮೆ ಫೌಂಡೇಶನ್, ಗುರ್ಮೆ ಕಳತ್ತೂರು, ಬಿಜೆಪಿ ಮಹಾಶಕ್ತಿ ಕೇಂದ್ರ, ಉದ್ಯಾವರ, ಶ್ರೀನಿವಾಸ ಆಸ್ಪತ್ರೆ ಮುಕ್ಕಾ, ಸುರತ್ಕಲ್, ಮಂಗಳೂರು ಇವರ ಆಶ್ರಯದಲ್ಲಿ ಶನಿವಾರ ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಆಯೋಜಿಸಲಾದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಶ್ರೀನಿವಾಸ ಆಸ್ಪತ್ರೆಯ ಶಶಿರಾಜ್ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸಚೀನ್ ಸುವರ್ಣ, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟಕಲ್ಲು : ೫ನೇ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
Posted On: 04 Nov 2023, 12:26 PM
ಬಂಟಕಲ್ಲು : ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೫ನೇ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮ್ಮೇಳನಾಧ್ಯಕ್ಷರಾದ ಕೆ ಎಸ್ ಶ್ರೀಧರ ಮೂರ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಜೊತೆಗೂಡಿ ಉದ್ಘಾಟಿಸಿದರು. ಸ್ಮರಣ ಸಂಚಿಕೆ/ಪುಸ್ತಕ ಬಿಡುಗಡೆ : ಶಿಕ್ಷಕ ಸತ್ಯಸಾಯಿ ಪ್ರಸಾದ್ ರ ಕೃತಿ 'ಸಾಯಿ ಸಂದೇಶ' ವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು, ಅನಂತ ಮೂಡಿತ್ತಾಯ ಸಂಪಾದಕತ್ವದ ಸ್ಮರಣ ಸಂಚಿಕೆ 'ಕಡಲು' ನ್ನು ಮಾಧವ ಕಾಮತ್ ಬಿಡುಗಡೆಗೊಳಿಸಿದರು. ಧ್ವಜ ಹಸ್ತಾಂತರ : ಕಾಪು ತಾಲ್ಲೂಕಿನ ೪ ನೇ ಸಮ್ಮೇಳನದ ನಿಕಟ ಪೂರ್ವ ಅಧ್ಯಕ್ಷರಾದ ಕ್ಯಾಥರೀನ್ ರೊಡ್ರಿಗಸ್ ಸಾಹಿತ್ಯ ಪರಿಷತ್ತಿನ ಧ್ವಜವನ್ನು ೫ನೇ ಸಮ್ಮೇಳನದ ಅಧ್ಯಕ್ಷರಾದ ಕೆ ಎಸ್ ಶ್ರೀಧರ ಮೂರ್ತಿಯವರಿಗೆ ಹಸ್ತಾಂತರಿಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಅತಿಥಿ ದೇವೋ ಭವ ಎಂಬ ಸಂಸ್ಕೃತಿ ನಮ್ಮದು. ಭಾರತ ಹಲವು ಸಂಸ್ಕೃತಿ ಮತ್ತು ಭಾಷೆಯನ್ನು ಹೊಂದಿರುವ ದೇಶ ಅದರಲ್ಲಿ ನಮ್ಮ ಕರ್ನಾಟಕ ವಿಶೇಷ ಎಂದು ಹೇಳಿದ ಅವರು ಕನ್ನಡ ನಾಡು ಮತ್ತು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದ್ದು ಎಂದರು. ಹಲ್ಮಿಡಿಯ ಕನ್ನಡ ಶತ ಶತಮಾನಗಳ ನಂತರ ಮುಂದುವರೆದಿದೆ. ಕನ್ನಡದ ಸೊಗಸನ್ನು ನಾವು ಅರಿಯಬೇಕಾಗಿದೆ. ಪಾಶ್ಚಿಮಾತ್ಯರ ಪ್ರಭಾವದಿಂದ ಸಾಹಿತ್ಯ ವೈವಿಧ್ಯಮಯವಾಯಿತು ಎಂದು ಸಮ್ಮೇಳನಾಧ್ಯಕ್ಷರಾದ ಕೆ ಎಸ್ ಶ್ರೀಧರ ಮೂರ್ತಿ ಹೇಳಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಂಟಕಲ್ಲು ಪುಂಡಲೀಕ ಮರಾಠೆ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾl ತಿರುಮಲೇಶ್ವರ ಭಟ್, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಸಮ್ಮೇಳನದ ಕಾರ್ಯದರ್ಶಿ ಎಸ್ ಎಸ್ ಪ್ರಸಾದ್, ದೇವಸ್ಥಾನ ಆಡಳಿತ ಮೊಕ್ತೇಸರರು ಮತ್ತು ಧರ್ಮಗುರುಗಳು ಉಪಸ್ಥಿತರಿದ್ದರು. ಸಮ್ಮೇಳನದ ಕಾರ್ಯಾಧ್ಯಕ್ಷರಾದ ಕೆ ಆರ್ ಪಾಟ್ಕರ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಪ್ರಸ್ತಾವನೆಗೈದರು. ಅನಂತ ಮೂಡಿತ್ತಾಯ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು. ಕಸಾಪ ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು.
ಪಡುಬಿದ್ರಿ : ಟ್ಯಾಂಕರ್ ಹರಿದು ಯುವಕ ಸಾವು
Posted On: 03 Nov 2023, 08:46 PM
ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ. ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಲ್ಲಿನ ಮಂಗಳೂರು ಕಡೆಗೆ ತೆರಳುವ ಬಸ್ಸು ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಖಾಸಗಿ ಟೂರಿಸ್ಟ್ ಬಸ್ಸು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದನು. ಇದೇ ವೇಳೆ ಟ್ಯಾಂಕರ್ ಆತನ ಮೇಲೆ ಹರಿದ ಪರಿಣಾಮ ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟನು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳಪರಿಶೀಲನೆ ನಡೆಸಿದ್ದಾರೆ.
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರಾವಳಿ ಸ್ಟಾರ್ಸ್ ನಡಿಪಟ್ಣ ವತಿಯಿಂದ ಧ್ವಜಾರೋಹಣ, ಸ್ವಚ್ಛತಾ ಕಾರ್ಯಕ್ರಮ
Posted On: 01 Nov 2023, 06:12 PM
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರಾವಳಿ ಸ್ಟಾರ್ಸ್ ನಡಿಪಟ್ಣ ಪಡುಬಿದ್ರಿ ಸಂಸ್ಥೆಯ ವತಿಯಿಂದ ಬುಧವಾರ ಧ್ವಜಾರೋಹಣ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಕರಣ್ ಗೇಮ್ ಝೋನ್ ಪಡುಬಿದ್ರಿ ಇದರ ಮಾಲೀಕರಾದ ಕಿರಣ ಪ್ರತಾಪ್ ಸಾಲಿಯಾನ್ ನೆರವೇರಿಸಿದರು. ಕರಾವಳಿ ಸ್ಟಾರ್ಸ್ ನಡಿಪಟ್ಣ ಪಡುಬಿದ್ರಿ ಸಂಸ್ಥೆಯ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಹದಗೆಟ್ಟಿದ್ದ ಪಡುಬಿದ್ರಿಯ ಬೀಚ್ ರಸ್ತೆಯ ದುರಸ್ತಿ ಕಾರ್ಯ ನಡೆಯಿತು. ಈ ಕಾರ್ಯವು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಆಶಿಕ್ ಅಮೀನ್, ಸಂಸ್ಥೆಯ ಸ್ಥಾಪಕರಾದ ಕಿರಣ್ ರಾಜ್ ಕರ್ಕೇರ, ಸಂತೋಷ್ ಸಾಲಿಯಾನ್, ಶಶಿಕಲಾ ಕಾಡಿಪಟ್ಣ, ಸಾಗರ್ ವಿದ್ಯಾ ಮಂದಿರ, ಗಣಪತಿ ಪ್ರೌಢಶಾಲೆ ವಿದ್ಯಾರ್ಥಿಗಳು, ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ಕ್ರೀಡೆಗಳು ವ್ಯಕ್ತಿಯನ್ನು ಆರೋಗ್ಯವಂತ, ಕ್ರಿಯಾಶೀಲನನ್ನಾಗಿ ಮಾಡಲು ಸಹಕಾರಿ - ಶರತ್ ಶೆಟ್ಟಿ
Posted On: 01 Nov 2023, 03:18 PM
ಪಡುಬಿದ್ರಿ : ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ. ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯ ವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯ ವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು ಅದ್ದರಿಂದ ಜೀವನದಲ್ಲಿ ಕ್ರೀಡೆಗಳು ಅವಶ್ಯಕ ಎಂದು ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಗೌರವ ಅಧ್ಯಕ್ಷ ಶರತ್ ಶೆಟ್ಟಿ ಹೇಳಿದರು. ಪಡುಬಿದ್ರಿ ಬೋರ್ಡ್ ಶಾಲಾ ಮ್ಯೆದಾನದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ , ಇನ್ನರ್ ವೀಲ್ ಕ್ಲಬ್ , ರೋಟರಿ ಸಮುದಾಯದಳ ಹಾಗು ರೋಟರಾಕ್ಟ್ ಕ್ಲಬ್ ವತಿಯಿಂದ ನಡೆದ ಕುಟುಂಬ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೋಟರಿ ವಲಯ ಸಹಾಯಕ ಗವರ್ನರ್ ಶೈಲೇಂದ್ರ ರಾವ್ ಮಾತನಾಡಿ ಪ್ರತಿಯೊಂದು ಆಟಕ್ಕೂ ವಿಶಿಷ್ಟವಾದ ಉದ್ದೇಶ ಹಾಗು ಮೌಲ್ಯವಿದೆ. ನಾವು ಆಡುವ ಪ್ರತಿಯೊಂದು ಕ್ರೀಡೆ ಮತ್ತು ಆಟವು ನಮಗೆ ಶಿಸ್ತನ್ನು ಕಲಿಸುತ್ತದೆ. ಕ್ರೀಡೆಗಳು ನಮಗೆ ಅಮೂಲ್ಯ ವಾದ ಪಾಠವನ್ನು ಕಲಿಸುತ್ತದೆ. ಕಷ್ಟಗಳ ಹೊರತಾಗಿಯೂ ನಾವು ಕ್ರೀಡಾಪಟುವಾಗಿ ಅನುಭವಿಸಬೇಕು. ಆದ್ದರಿಂದ ನಾವು ನಮ್ಮ ಜೀವನದಲ್ಲಿ ಆಟಗಳು ಮತ್ತು ಕ್ರೀಡೆಗಳ ಮೌಲ್ಯ ಮತ್ತು ಮಹತ್ವವನ್ನು ಗ್ರಹಿಸ ಬೇಕು ಎಂದರು. ಸನ್ಮಾನ : ರಾಜ್ಯ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡ ಕಬಡ್ಡಿ ಆಟಗಾರ್ತಿ ಗಣ್ಯ ಜಿ. ಸುವರ್ಣ ಹೆಜಮಾಡಿಯವರನ್ನು ಸನ್ಮಾನಿಸಲಾಯಿತು. ಪಡುಬಿದ್ರಿ ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದರು. ರೋಟರಿ ವಲಯ ಸಹಾಯಕ ಗವರ್ನರ್ ಶೈಲೇಂದ್ರ ರಾವ್ ಕೆ., ಇನ್ನರ್ ವೀಲ್ ಅಧ್ಯಕ್ಷೆ ನಮೃತಾ ಮಹೇಶ್, ಪೂರ್ವ ಸಹಾಯಕ ಗವರ್ನರ್ ಗಳಾದ ಮಾಧವ ಸುವರ್ಣ, ಗಣೇಶ್ ಅಚಾರ್ಯ ಉಚ್ಚಿಲ , ಕರ್ನಾಟಕ ಪಬ್ಲಿಕ್ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಕೃಷ್ಣ ಬಂಗೇರ, ಕಾಪು ಜೀವವಿಮಾ ನಿಗಮದ ನಿವೃತ ಅಭಿವೃದ್ಧಿ ಅಧಿಕಾರಿ ರಮೇಶ್ ಯು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಎರ್ಮಾಳ್, ವಲಯ ಸೇನಾನಿ ರಿಯಾಜ್ ಮುದರಂಗಡಿ, ವಲಯ ಸಂಯೋಜಕ ರಮೀಜ್ ಹುಸೇನ್, ವ್ಯೆದ್ಯಾಧಿಕಾರಿ ಪಯಶಸ್ವಿನಿ ಶೆಟ್ಟಿಗಾರ್, ಕ್ರೀಡಾಪಟು ಪ್ರಮೋದ್ ಸಾಲ್ಯಾನ್ ಎರ್ಮಾಳ್, ರೋಟರಿ ಸಮುದಾಯದಳ ಅಧ್ಯಕ್ಷ ರಚನ್ ಸಾಲ್ಯಾನ್, ಕಾರ್ಯದರ್ಶಿ ಪ್ರತೀಕ್ ಶೆಟ್ಟಿ ರೋಟರಾಕ್ಟ್ ಅಧ್ಯಕ್ಷೆ ತನಿಷಾ ಜಿ ಕುಕ್ಯಾನ್, ಕಾರ್ಯದರ್ಶಿ ಪ್ರತೀಕ್ ಅಚಾರ್ಯ, ರೋಟರಿ ಕಾರ್ಯದರ್ಶಿ ಪವನ್ ಸಾಲ್ಯಾನ್ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಶಟಲ್ ಬಾಡ್ಮಿಂಟನ್, ಕ್ರಿಕೆಟ್, ತ್ರೋಬಾಲ್, ಹಗ್ಗ-ಜಗ್ಗಾಟ , ಅಥ್ಲೆಟಿಕ್ಸ್ ವಿಭಾಗದಲ್ಲಿ ಶಾಟ್ ಪುಟ್ ,100 ಮೀ., 200 ಮೀ. ಓಟಗಳನ್ನು ವಿವಿಧ ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು. ದ್ಯೆಹಿಕ ಶಿಕ್ಷಕ ಮೋಹನ್ ಕರ್ಕೇರ, ಸುರೇಶ್ ಎರ್ಮಾಳ್, ಶ್ಯಾಮ್ ಸುಂದರ್ ಮತ್ತು ಮಹಮ್ಮದ್ ಗಫೂರ್ ತೀರ್ಪುಗಾರರಾಗಿ ಸಹಕರಿಸಿದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಬಿ.ಎಸ್ ಆಚಾರ್ಯ ನಿರೂಪಿಸಿದರು. ಕಾರ್ಯದರ್ಶಿ ಪವನ್ ಸಾಲ್ಯಾನ್ ವಂದಿಸಿದರು.
ಕಾಪು : ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
Posted On: 01 Nov 2023, 10:44 AM
ಕಾಪು : ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನವೆಂಬರ್ 1ರಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
