Updated News From Kaup
ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ

Posted On: 19-08-2023 10:19PM
ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶಶಿಕಲಾ ಹಾಗೂ ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ.
ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. 34 ಸದಸ್ಯ ಬಲದ ಪಡುಬಿದ್ರಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶಶಿಕಲಾ ಹಾಗೂ ಕಾಂಗ್ರೆಸ್ ಬೆಂಬಲಿತೆ ಸುನಂದ ಸಾಲ್ಯಾನ್ ಅವರು ಸ್ಪರ್ಧಿಸಿದ್ದರು. ಶಶಿಕಲಾ ಅವರು 23 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸುನಂದ ಸಾಲ್ಯಾನ್ 11 ಮತಗಳು ಪಡೆದಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಹೇಮಚಂದ್ರ ಹಾಗೂ ಕಾಂಗ್ರೆಸ್ ಬೆಂಬಲಿತ ಖಲಂದರ್ ಶಫಿ ಸ್ಪರ್ಧಿಸಿದ್ದರು. ಹೇಮಚಂದ್ರ 20 ಮತಗಳನ್ನು ಪಡೆದು ಆಯ್ಕೆಯಾಗಿದ್ದು, ಖಲಂದರ್ ಶಫಿ 14 ಮತಗಳನ್ನು ಪಡೆದರು.
ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ವರುಣ್ ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಕ್ಷರಿ ಕೆರಿಮಠ್ ಸಹಕರಿಸಿದ್ದರು.
ಇದೀಗ ಹೊಸ ಆಡಳಿತದೊಂದಿಗೆ ಕಾಪುವಿನ ಹೋಟೆಲ್ ಮಯೂರ

Posted On: 19-08-2023 07:42PM
ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಹಾಗೂ ಇನ್ನಿತರ ಖಾದ್ಯಗಳನ್ನು ಉಣ ಬಡಿಸುತ್ತಿರುವ ಕಾಪುವಿನ ಹೋಟೆಲ್ ಮಯೂರ ಇಂದಿನಿಂದ ಹೊಸ ಆಡಳಿತದೊಂದಿಗೆ ಮುನ್ನಡೆಯಲಿದೆ. ಸಂಜಿತ್ ಶೆಟ್ಟಿ ಕಲ್ಯಾಲು ಇವರು ಪಾಲುದಾರರಾಗಿ ಮತ್ತು ನಿರ್ವಾಹಕರಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ರೂಮ್ಸ್ ಜೊತೆಗೆ ಮದುವೆ ಹಾಗೂ ಇನ್ನಿತರ ಶುಭಸಮಾರಂಭಗಳಿಗೆ ಸಭಾಂಗಣ ಹಾಗೂ ಕ್ಯಾ ಟರಿಂಗ್ ವ್ಯವಸ್ಥೆಯನ್ನು ಕೂಡಾ ಒದಗಿಸಲಾಗುವುದು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : +91 87924 48087
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ - ಶಿರ್ವ ಶಾಖೆ ವತಿಯಿಂದ ಅಗತ್ಯ ವಸ್ತುಗಳ ವಿತರಣೆ

Posted On: 19-08-2023 06:17PM
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಂ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭ ಶಿರ್ವ ಆರೋಗ್ಯ ಮಾತಾ ಚಚ್೯ ಪ್ರಧಾನ ಧರ್ಮ ಗುರುಗಳು ವಂ| ಫಾ| ಲೆಸ್ಲಿ ಡಿಸೋಜಾ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೆಲ್ವಿನ್ ಅರನ್ನಾ, ಉದ್ಯಮಿ ಕೆ ಶ್ರೀಧರ ಕಾಮತ್, ಕಾನ್ವೆಂಟಿನ ಮೇಲ್ವಿಚಾರಕಿ ಲೀಮಾ, ಶಾಖಾ ವ್ಯವಸ್ಥಾಪಕಿ ಪ್ರಮೀಳಾ ಲೋಬೊ, ಕಾನ್ವೆಂಟಿನ ಧರ್ಮ ಭಗಿನಿಯರು ಹಾಗೂ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪು : ಹೆಚ್.ಕೆ.ಟೈಲರ್( ಕಾಂತರ ಮೂಲ್ಯ )ಪುಂಚಲಕಾಡು ವಿಧಿವಶ

Posted On: 19-08-2023 05:42PM
ಕಾಪು : ಕಳತ್ತೂರುವಿನ ಪುಂಚಲಕಾಡು ಪರಿಸರದಲ್ಲಿ ಎಚ್ ಕೆ ಟೈಲರ್ ಎಂದೇ ಹೆಸರುವಾಸಿಯಾಗಿದ್ದ ಕಾಂತರ ಮೂಲ್ಯ ಇಂದು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.
ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ.
ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಿವಕುಮಾರ್ ಮೆಂಡನ್, ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆ

Posted On: 18-08-2023 06:47PM
ಉಚ್ಚಿಲ : ಬಡಾ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಶಿವಕುಮಾರ್ ಮೆಂಡನ್ ಮತ್ತು ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆಯಾಗಿದ್ದಾರೆ. 21 ಸದಸ್ಯ ಬಲದ ಬಡಾ ಗ್ರಾ.ಪಂ. ನಲ್ಲಿ 11 ಬಿಜೆಪಿ, 6 ಕಾಂಗ್ರೆಸ್, 4 ಎಸ್.ಡಿ.ಪಿ.ಐ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತರಾಗಿ ಎ. ಶಿವ ಕುಮಾರ್ ಮೆಂಡನ್ ಮತ್ತು ಕಾಂಗ್ರೆಸ್ ಬೆಂಬಲಿತರಾದ ಮಹಮ್ಮದ್ ರಫೀಕ್ ದೀವ್ ಹಾಗೂ ಉಪಾಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತ ದೀಪಕ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಅಬ್ದುಲ್ ಮಜೀದ್ ಸ್ಪರ್ಧಿಸಿದ್ದರು.
ಚುನಾವಣೆ ನಡೆದು ಅಂತಿಮವಾಗಿ ಬಿಜೆಪಿ ಬೆಂಬಲಿತರಾದ ಶಿವಕುಮಾರ್ ಮೆಂಡನ್ ಅವರಿಗೆ 12 ಮತ್ತು ಉಪಾಧ್ಯಕ್ಷ ದೀಪಕ್ ಕುಮಾರ್ ಅವರು 11 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಒಂದು ಮತ ಅಸಿಂಧು ಆಗಿದ್ದು, ಮತ್ತೋರ್ವ ಸದಸ್ಯೆ ಮತದಾನ ನಡೆಸಲು ತಡವಾಗಿ ಆಗಮಿಸಿ, ಮತದಾನ ಪ್ರಕ್ರಿಯೆಯಿಂದ ವಂಚಿತರಾಗಿದ್ದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಿಧೀಶ್ ಹೊಳ್ಳ ಚುನಾವಣಾಧಿಕಾರಿಯಾಗಿದ್ದು, ಪಿಡಿಒ ಸತೀಶ್ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಗಂಗಾಧರ್ ಸುವರ್ಣ, ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಶಕುಂತಳ ಮೊದಲಾದವರು ಉಪಸ್ಥಿತರಿದ್ದರು.
ಕಾಪು : ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ

Posted On: 18-08-2023 06:34PM
ಕಾಪು : ಇಲ್ಲಿನ ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೋಟಗಾರಿಕೆ ಇಲಾಖೆ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ವಿಲಾಸಿನಿ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು. 13 ಸದಸ್ಯ ಬಲದ ಮಜೂರು ಗ್ರಾ.ಪಂ. ನಲ್ಲಿ 9 ಬಿಜೆಪಿ, 4 ಕಾಂಗ್ರೆಸ್ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಮಾಜಿ ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಗಂಗಾಧರ್ ಸುವರ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಸಂದೀಪ್ ರಾವ್, ನಿಕಟಪೂರ್ವ ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಉಪಾಧ್ಯಕ್ಷ ಮಧುಸೂದನ್ ಸಾಲಿಯನ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಆಗಸ್ಟ್ 19 : ಉಡುಪಿ ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭ

Posted On: 17-08-2023 09:53PM
ಉಡುಪಿ : ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭ ಆಗಸ್ಟ್ 19ರಂದು ಮಧ್ಯಾಹ್ನ 3ಕ್ಕೆ ಉಡುಪಿಯ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಜರಗಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನೇಲಿಯೊ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದಾರೆ. ಲಯನ್ಸ್ ಕ್ಲಬ್ನ ಪ್ರಮುಖರಾದ ರಾಮಕೃಷ್ಣ ಮೂರ್ತಿ, ಕೆ. ವಂಶಿಧರ್ ಬಾಬು, ಜಿ. ಶ್ರೀನಿವಾಸ್ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾಧಕರಿಗೆ ಸಮ್ಮಾನ, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಲಯನ್ಸ್ ಜಿಲ್ಲೆ 317ಸಿ ವ್ಯಾಪ್ತಿಯಲ್ಲಿ ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಕಂದಾಯ ಜಿಲ್ಲೆಗಳಲ್ಲಿ ಒಳಗೊಂಡು 3 ಸಾವಿರ ಸದಸ್ಯರು ಇದ್ದಾರೆ. ಉಡುಪಿ ಜಿಲ್ಲೆಯಲ್ಲಿ ‘ಲೀವ್ ಟೂ ಲೀಡ್’ ಎಂಬ ಘೋಷಣೆಯೊಂದಿಗೆ 'ಬೆಳಕು' ಜಿಲ್ಲಾ ಕಾರ್ಯಕ್ರಮದಡಿಯಲ್ಲಿ ಹಲವಾರು ಸೇವಾ ಚಟುವಟಿಕೆಗಳ ಯೋಜನೆ ರೂಪಿಸಲಾಗಿದೆ. ಜಿಲ್ಲೆಗೆ ಈಗಾಗಲೆ ತುರ್ತು ನೆರೆ ಪರಿಹಾರ ನಿಧಿಯನ್ನು ವಿತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಸೇವಾ ಮತ್ತು ಸಮಾಜಮುಖಿ ಚಟುವಟಿಕೆ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಲಯನ್ಸ್ ಸಂಪುಟ ಕಾರ್ಯದರ್ಶಿ ರವಿರಾಜ ನಾಯಕ್, ಖಜಾಂಚಿ ರೀಚರ್ಡ್ ಡಯಾಸ್, ಮಾರ್ಕೇಟಿಂಗ್ ಸಂವಹನ-ಮಾಹಿತಿ ಅಧಿಕಾರಿಗಳಾದ ಸಿದ್ಧರಾಜು, ಡಾ. ಜಗದೀಶ್ ಹೊಳ್ಳ, ಜಾರ್ಜ್ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇನ್ನಂಜೆ ಗ್ರಾಮ ಪಂಚಾಯತ್ : ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿ ಅವಿರೋಧ ಆಯ್ಕೆ

Posted On: 17-08-2023 05:35PM
ಕಾಪು : ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ 9 ಬಿಜೆಪಿ, 3 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ತೋಟಗಾರಿಕಾ ಇಲಾಖೆಯ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ಚಂದ್ರಕಲಾ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ರವರು ಅಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಉಫಾಧ್ಯಕ್ಷೆ ಸುರೇಖಾ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಇನ್ನಂಜೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಬೆಳಪು ಗ್ರಾಮ ಪಂಚಾಯತ್ : 10ನೇ ಬಾರಿಗೆ ಅಧ್ಯಕ್ಷರಾಗಿ ಡಾ|| ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

Posted On: 17-08-2023 05:31PM
ಬೆಳಪು : ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ|| ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಯುಸಿ ಶೇಖಬ್ಬ, ಗ್ರಾಮ ಪಂಚಾಯತ್ ಸದಸ್ಯರು, ಉಧ್ಯಮಿ ಹರೀಶ್ ನಾಯಕ್ ಕಾಪು, ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನನ್ ಚಂದ್ರ ಸುವರ್ಣ, ಶೇಖರ್ ಹೆಜಮಾಡಿ ಸಹಿತ ಗಣ್ಯರು ಶುಭ ಹಾರೈಸಿದರು.
ಶಂಕರಪುರ : ಸಣ್ಣ ವಯಸ್ಸಿನಲ್ಲಿ ಹೈನುಗಾರಿಕಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಇನ್ನಂಜೆಯ ಆದೀಶ್ ಆಚಾರ್ಯಗೆ ಸನ್ಮಾನ

Posted On: 17-08-2023 12:01PM
ಶಂಕರಪುರ : ರೋಟರಾಕ್ಟ್ ಕ್ಲಬ್ ಸುಭಾಸ್ ನಗರ ಮತ್ತು ರೋಟರಿ ಸಮುದಾಯ ದಳ ಇನ್ನಂಜೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 15ರಂದು ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅತ್ಯಂತ ಸಣ್ಣ ವಯಸಿನಲ್ಲಿ ಹೈನುಗಾರಿಕಾ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಾಧನೆಗೈಯುತ್ತಿರುವ ಇನ್ನಂಜೆಯ ಆದೀಶ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಮೋಹನ್ ದಾಸ್ ಶೆಟ್ಟಿ, ರೋಟರಾಕ್ಟ್ ಕ್ಲಬ್ ಸುಭಾಸ್ ನಗರದ ಸಭಾಪತಿ ಗ್ಲಾಡ್ಸನ್ ಕುಂದರ್, ರೋಟರಿ ಸಮುದಾಯ ದಳ ಇನ್ನಂಜೆ ಸಭಾಪತಿ ಮಾಲಿನಿ ಇನ್ನಂಜೆ, ರೋಟರಾಕ್ಟ್ ಕ್ಲಬ್ ಸುಭಾಸ್ ನಗರದ ಅಧ್ಯಕ್ಷ ಯಜ್ನೇಶ್ ಹೆಗ್ಡೆ,ರೋಟರಿ ಸಮುದಾಯ ದಳ ಇನ್ನಂಜೆಯ ಅಧ್ಯಕ್ಷ ರವಿಪ್ರಸಾದ್, ರೋಟರಾಕ್ಟ್ ಕ್ಲಬ್ ಸುಭಾಸ್ ನಗರದ ಜೊತೆ ಕಾರ್ಯದರ್ಶಿ ನೇಹಾ ಶೆಟ್ಟಿ ಉಪಸ್ಥಿತರಿದ್ದರು.