Updated News From Kaup
ಕಟಪಾಡಿ : ಮೂಡಬೆಟ್ಟು 5 ಮತ್ತು 6 ನೇ ವಾರ್ಡಿನ ನಾಗರಿಕರ ವತಿಯಿಂದ ಕಂಡೊಡ್ ಒಂಜಿ ದಿನ ಕಾರ್ಯಕ್ರಮ

Posted On: 30-07-2023 03:09PM
ಕಟಪಾಡಿ : ಇಲ್ಲಿನ ಮೂಡಬೆಟ್ಟು 5 ಮತ್ತು 6 ನೇ ವಾರ್ಡಿನ ನಾಗರಿಕರ ವತಿಯಿಂದ ಇಂದು ಮೂಡುಬೆಟ್ಟು ಅಂಗನವಾಡಿ ಹಿಂಬದಿ ಬಯಲು ಗದ್ದೆಯಲ್ಲಿ ಕಂಡೊಡ್ ಒಂಜಿ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಟಪಾಡಿ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಸವಿತಾ ಶೆಟ್ಟಿ, ಸುಜಲ ಪೂಜಾರಿ, ಅಶೋಕ್ ರಾವ್, ಹಿರಿಯರಾದ ಕಟಪಾಡಿ ಬೀಡು ಉದಯ ಹೆಗ್ಡೆ ಹಾಗೂ ಅಶ್ವಿನ್ ಬಲ್ಲಾಳ್, ಶಿವಧ್ವಜ್, ಮಹೇಶ್ ಶೆಟ್ಟಿ, ಲಕ್ಷ್ಮಣ್ ಪೂಜಾರಿ, ಮಹಾಬಲ್ ಪೂಜಾರಿ, ಸಂಪತ್ ಬಲ್ಲಾಳ್ , ನಿತಿನ್ ವಿ ಶೇರಿಗಾರ್, ಮಹೇಶ್ ಪೂಜಾರಿ ಮತ್ತು ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ ಕಾಪು ವಲಯ - 32ನೇ ವಾರ್ಷಿಕ ಮಹಾ ಸಭೆ

Posted On: 29-07-2023 08:54PM
ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 - 23ನೇ ಸಾಲಿನ 32ನೇ ವಾರ್ಷಿಕ ಮಹಾ ಸಭೆ ಜುಲೈ 29 ರಂದು ಕಾಪುವಿನ ಹೋಟೆಲ್ K1 ಸಭಾಭವನದಲ್ಲಿ ಜರಗಿತು.

ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು.
ಸಮ್ಮಾನ : ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳರನ್ನು ಸಮ್ಮಾನಿಸಲಾಯಿತು.
ಎಸ್ ಕೆ ಪಿ ಎ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಉಪಾಧ್ಯಕ್ಷ ಪದ್ಮಪ್ರಸಾದ್ ಜೈನ್, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ವಾಸುದೇವ ರಾವ್, ಎಸ್ ಕೆ ಪಿ ಎ ಕಾಪು ವಲಯದ ಗೌರವಾಧ್ಯಕ್ಷ ರವಿ ಕುಮಾರ್, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ್ ಐತಾಳ್, ಎಸ್ ಕೆ ಪಿ ಎ ಕಟ್ಟಡ ಸಮಿತಿ ಸದಸ್ಯ ಪ್ರವೀಣ್ ಕುರ್ಕಾಲು, ಎಸ್ ಕೆ ಪಿ ಎ ಕಾಪು ವಲಯದ ಪ್ರಧಾನ ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷರುಗಳಾದ ಸಚಿನ್ ಉಚ್ಚಿಲ, ರವಿರಾಜ್ ಶೆಟ್ಟಿ, ಕೋಶಾಧಿಕಾರಿ ರಾಘವೇಂದ್ರ ಭಟ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಭೇಟಿ

Posted On: 29-07-2023 02:33PM
ಉಡುಪಿ : ಜಿಲ್ಲಾಧಿಕಾರಿಯಾದ ಡಾ. ಕೆ. ವಿದ್ಯಾ ಕುಮಾರಿಯವರನ್ನು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಯವರ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯ ಕುಮಾರ್ ಪರ್ಕಳ, ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷರಾದ ಸಂಜಯ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಎಂ ಟಿ, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಇಕ್ಬಾಲ್ ಅತ್ರಾಡಿ, ನಾಯಕರುಗಳಾದ ಮೊಹಮ್ಮದ್ ಆಶ್ರಫ್, ರಂಗಕೋಟ್ಯಾನ್ ಉಪಸ್ಥಿತರಿದ್ದರು.
ಕಟಪಾಡಿ : ಹಲಸು ಮೇಳ - 2023 ಉದ್ಘಾಟನೆ

Posted On: 29-07-2023 02:03PM
ಕಟಪಾಡಿ : ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಜುಲೈ 29 ರಂದು ಎಸ್.ವಿ.ಎಸ್ ಹೈಸ್ಕೂಲ್, ಕಟಪಾಡಿ ಇಲ್ಲಿ ಆಯೋಜಿಸಿದ ಹಲಸು ಮೇಳ - 2023 ಇದರ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ತೋಟಗಾರಿಕಾ ಮತ್ತು ಕೃಷಿ ಇಲಾಖೆಯ ನಿರ್ದೇಶಕರಾದ ಹೇಮಂತ್, ನಿವೃತ್ತ ಕುಲಪತಿಗಳಾದ ಎಂ.ಕೆ ನಾಯಕ್, ಕಾಪು ಪೋಲಿಸ್ ಉಪ ನಿರೀಕ್ಷಕರಾದ ಶ್ರೀಶೈಲ, ಕಟಪಾಡಿ ಎಸ್.ವಿ.ಎಸ್ ವಿಧ್ಯಾವರ್ಧಕ ಸಂಚಾಲಕರಾದ ಸತ್ಯೇಂದ್ರ ಪೈ, ಕಟಪಾಡಿ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಪೈ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಆಚಾರ್ಯ, ಏಣಗುಡ್ಡೆ ಕಟಪಾಡಿ ಯುವಜನ ಸೇವಾ ಸಂಘದ ಅಧ್ಯಕ್ಷರಾದ ಪ್ರಮೋದ್ ಉಪಸ್ಥಿತರಿದ್ದರು.
ಪಡುಬಿದ್ರಿ : ಅದಾನಿ ಸ್ಥಾವರದಲ್ಲಿ ಕಾಮಗಾರಿ ವೇಳೆ ಅವಘಡದಲ್ಲಿ ಕಾರ್ಮಿಕ ಮೃತ್ಯು

Posted On: 29-07-2023 01:47PM
ಪಡುಬಿದ್ರಿ : ಎಲ್ಲೂರಿನ ಅದಾನಿ ಯುಪಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಎಫ್ಜಿಡಿ ಸ್ಥಾವರದ ಕಾಮಗಾರಿ ವೇಳೆ ಕಬ್ಬಿಣದ ದೊಡ್ಡ ಬೀಮ್ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದ ಘಟನೆ ಶುಕ್ರವಾರ ನಡೆದಿದೆ. ರಾಜಸ್ಥಾನ ಮೂಲದ ಮುಲಾರಾಮ್(21) ಮೃತಪಟ್ಟ ಕಾರ್ಮಿಕ ಘಟನೆಯಿಂದ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಅದಾನಿ ಸ್ಥಾವರದೊಳಗೆ ಎಫ್ಜಿಡಿ ಸ್ಥಾವರದ ಕಾಮಗಾರಿ ನಡೆಯುತ್ತಿದ್ದು, ಬಹುತೇಕ ಶೇ.75 ಕಾಮಗಾರಿ ಮುಕ್ತಾಯಗೊಳ್ಳುತ್ತಾ ಬಂದಿದೆ.ಅದಾನಿ ಸಂಸ್ಥೆಯು ಪವರ್ ಮೆಕ್ ಕಂಪನಿಗೆ ಈ ಕುರಿತಾದ ಗುತ್ತಿಗೆ ನೀಡಿದ್ದು, ಆ ಕಂಪನಿ ಕೇರಳದ ಸುನ್ನಿ ಮತ್ತು ವೆಲ್ ಟೆಕ್ ಎಂಬ ಸಂಸ್ಥೆಯನ್ನು ಪರ್ಯಾಯವಾಗಿ ಈ ಕಾರ್ಯಕ್ಕಾಗಿ ನೇಮಕ ಮಾಡಿತ್ತು.
ಆ ಕಂಪನಿಯ 5 ಮಂದಿ ಶುಕ್ರವಾರ ಮಧ್ಯಾಹ್ನದ ವೇಳೆ ಕ್ರೇನ್ ಮೂಲಕ ರೋಪ್ ಕಟ್ಟಿಕೊಂಡು ಸುರಕ್ಷತಾ ಕ್ರಮವಾಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭ ಕ್ರೇನ್ನ ರೋಪ್ ತುಂಡಾಗಿ ಕಟ್ಟಡದ ಬೀಮ್ ಒಂದು ನೆಲಕ್ಕುರುಳಿದೆ. ನಾಲ್ವರು ರೋಪ್ ಸಮೇತ ನೆಲಕ್ಕುರುಳಿದ್ದರು. ಅವರಲ್ಲಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಮುಲಾರಾಮ್ ಮೃತಪಟ್ಟಿದ್ದಾರೆ. ಇನ್ನು ಗಂಭೀರ ಗಾಯಗೊಂಡು ಮೂವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ : ಶ್ರೀ ಮಾರುತಿ

Posted On: 29-07-2023 01:31PM
ಕಾರ್ಕಳ : ರಸಾಯನ ಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ. ಇದರ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ಮಾತನಾಡಿ, ಉತ್ತಮ ಬೋಧನೆಯಲ್ಲಿ ಇಂತಹ ಕಾರ್ಯಗಾರವು ವಿಶೇಷ ಪಾತ್ರವನ್ನು ವಹಿಸುತ್ತದೆ, ವಿಷಯದ ಕುರಿತು ಆಳವಾದ ಅರಿವನ್ನು ತಿಳಿಯಲು ಇಂತಹ ಕಾರ್ಯಗಾರ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಆದರ್ಶ ಎಂ ಕೆ. ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಪಿ ವಸಂತ್ ಆಚಾರ್ ವಿನೂತನ, ಪ್ರಯೋಗಾತ್ಮಕ, ನಿರಂತರ ಬೋಧನೆಯು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆಯನ್ನು ಸೃಷ್ಟಿಸುತ್ತದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಯು ಎಲ್ ಭಟ್, ಮಂಜುನಾಥ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿಂದಿ ಉಪನ್ಯಾಸಕರಾದ ಸುಧಾಕರ ಐಡಿಯವರು ನಿರ್ವಹಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ

Posted On: 29-07-2023 01:21PM
ಕಾಪು : ಮಣಿಪುರ ರಾಜ್ಯದಲ್ಲಿ ಕಳೆದ ಸುಮಾರು 3 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರವನ್ನು ಖಂಡಿಸಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಸಭೆಯು ಜುಲೈ 29ರಂದು ಕಾಪು ಪೇಟೆಯಲ್ಲಿ ನಡೆಯಿತು.

ಪ್ರತಿಭಟನಾ ಮೆರವಣಿಗೆಯು ಕಾಪು ರಾಜೀವ್ ಭವನದಿಂದ ಕಾಪು ಪೇಟೆಯವರೆಗೆ ಸಾಗಿ, ಪೇಟೆಯಲ್ಲಿ ಸಭೆ ನಡೆಯಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಭೆಯನ್ನುದ್ದೇಶಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡಿ ಮಣಿಪುರದಲ್ಲಿ ಬುಡಕಟ್ಟು ಜನಾಂಗದ ಮೇಲೆ ಹಲ್ಲೆಮಾಡುತ್ತಿದೆ. ಮಣಿಪುರ ರಾಜ್ಯದ ಎಲ್ಲೆಡೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಾಂಗ್ರೆಸ್ ಇಡೀ ದೇಶದಲ್ಲೇ ಪ್ರತಿಭಟನೆ ಮಾಡುತ್ತಿದೆ. ಬೇಟಿ ಪಡಾವೋ ಬೇಟಿ ಬಚಾವೊ ಎನ್ನುವ ಬಿಜೆಪಿ ಸರ್ಕಾರ ಇಂದು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡುತ್ತಿದೆ. ಆದರೂ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಮಣಿಪುರದ ಮುಖ್ಯಮಂತ್ರಿ ಯನ್ನು ವಜಾಮಾಡಿ ರಾಷ್ಟ್ರಪತಿ ಆಡಳಿತ ತರಲಿ ಎಂದು ಒತ್ತಾಯ ಮಾಡುತ್ತೇವೆ ಎಂದರು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಎಂ ಎ ಗಫೂರ್, ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು, ನವೀನ್ ಚಂದ್ರ ಜೆ ಶೆಟ್ಟಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಶೇಖರ ಹೆಜ್ಮಾಡಿ, ಅಬ್ದುಲ್ ಅಜೀಜ್, ಹರೀಶ್ ನಾಯಕ್, ಸುನೀಲ್ ಬಂಗೇರ, ಶಿವಾಜಿ ಸುವರ್ಣ, ಶರ್ಫುದ್ದೀನ್ ಶೇಖ್, ಗಣೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ಮಣ್ : ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಸಿದ ಕ್ರಿಯಾಶೀಲಾ ಯುವಕನಿಗೆ ಗೌರವಾರ್ಪಣೆ.

Posted On: 29-07-2023 10:16AM
ಬೆಳ್ಮಣ್ : ಸುಮಾರು ವರ್ಷಗಳಿಂದ ತನ್ನ ಪರಿಸರದ ಹಡಿಲು ಬಿದ್ದ ಕೃಷಿ ಭೂಮಿಯನ್ನು ಪುನಶ್ಚೇತನ ಗೊಳಿಸಿ ಬೇಸಾಯ ಮಾಡಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ರಿಯಾಶೀಲ ಯುವಕ ಸುಬಾಸ್ ಕುಮಾರ್ ನಂದಳಿಕೆ ಇವರನ್ನು ಲಯನ್ಸ್ ಕ್ಲಬ್ಬಿನ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿಮಾಜಿ ಜಿಲ್ಲಾ ಲಯನ್ಸ್ ಗವರ್ನರ್ ಎನ್ ಎಂ ಹೆಗಡೆ ಮಾತನಾಡಿ ಯುವಕರು ಕೃಷಿಯಲ್ಲಿ ತೊಡಗಿಗೊಂಡಾಗ ಕೃಷಿಯಲ್ಲಿ ಪ್ರಗತಿ ಕಂಡು ಕೊಳ್ಳಲು ಸಾಧ್ಯ. ಸಂಘ ಸಂಸ್ಥೆಗಳು ಯುವಕೃಷಿಕರನ್ನು ಗೌರವಿಸಬೇಕು. ಇನ್ನು ಹೆಚ್ಚಿನ ಯುವಕರು ಕೃಷಿಯಲ್ಲಿ ತೊಡಗಿಸಿಕೊಂಡು ಕೃಷಿಯಲ್ಲಿ ಪ್ರಗತಿ ಕಂಡು ದೇಶದ ಅಭಿವೃದ್ಧಿಯಲ್ಲಿ ಕೈ ಜೋಡಿಸಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಮಣ್ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ವಿಶ್ವನಾಥ್ ಪಾಟ್ಕರ್ ವಹಿಸಿದ್ದು ನಿವೃತ್ತ ಪ್ರಾಂಶುಪಾಲರು ಮತ್ತು ಜೆ ಸಿ ಚಾರ್ಟೇಬಲ್ ಟ್ರಸ್ಟ್ ನ ಗೌರವಾಧ್ಯಕ್ಷರಾಗಿರುವ ಜಯಂತ್ ರಾವ್ ಪಿಲಾರ್, ಲಕ್ಷ್ಮಿ ಜನಾರ್ಧನ ದೇವಸ್ಥಾನದ ಆಡಳಿತ ಮುಖ್ಯಸ್ಥರು ಆಗಿರುವ ತುಕಾರಾಂ ಶೆಟ್ಟ, ರಾಮನಾಥ ಶೆಣೈ, ಸರೋಜಿನಿ ಶೆಟ್ಟಿ, ಸೆಂಚುರಿ ಕ್ಲಬ್ಬಿನ ಅಧ್ಯಕ್ಷರಾಗಿರುವ ಸುಜನ್ ಕ್ಯಾಸ್ಟಿಲಿನೋ ಮತ್ತು ಲಿಯೋ ಕ್ಲಬ್ಬಿನ ಅಲನ್ಸ್ ಕ್ಯಾಸ್ಟಿಲನೋ ಮತ್ತಿತರರು ಉಪಸ್ಥಿತರಿದ್ದರು.
ಅಳಿವಿನಂಚಿನಲ್ಲಿರುವ ಶ್ರೀ ತಾಳೆ ಗಿಡಗಳನ್ನು ಹೆಬ್ರಿ ಪರಿಸರದಲ್ಲಿ ನೆಡುವ ಅಭಿಯಾನಕ್ಕೆ ಚಾಲನೆ

Posted On: 29-07-2023 10:06AM
ಉಡುಪಿ : ವನದೇವತೆ ಸಾಲುಮರದ ತಿಮ್ಮಕ್ಕ ಇತ್ತೀಚೆಗೆ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಪ್ರೊ. ಕೃಷ್ಣಯ್ಯನವರು ಅವರಿಗೆ ನೀಡಿದ್ದ ವಿನಾಶದ ಅಂಚಿನಲ್ಲಿರುವ 112 'ಶ್ರೀತಾಳೆ' ಗಿಡಗಳನ್ನು - ಸಾಮಾಜಿಕ ಕಾರ್ಯಕರ್ತೆ ಡಾ. ಭಾರ್ಗವಿ ಐತಾಳರಿಗೆ ಉಡುಪಿ ಜಿಲ್ಲೆಯ ಹೆಬ್ರಿ ಸುತ್ತಮುತ್ತಲಿನ ಪರಿಸರದಲ್ಲಿ ನೆಡಲು ನಮ್ಮ ಮನೆ ನಮ್ಮ ಮರ ತಂಡದ ರವಿರಾಜ್ ಎಚ್ ಪಿ ಅವರು ಹಸ್ತಾಂತರಿಸಿದರು.
ಈ 112 ಗಿಡಗಳನ್ನು ಪ್ರೊ. ಕೃಷ್ಣಯ್ಯ ಅವರು ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ 112 ವರ್ಷ ತುಂಬಿರುವ ಗೌರವದ ಸಂಕೇತವಾಗಿ ಉಡುಪಿಯಲ್ಲಿ 'ನಮ್ಮ ಮನೆ ನಮ್ಮ ಮರ ತಂಡ'ದ ಮೂಲಕ ನೀಡಿದ್ದರು.
ವೃಕ್ಷಮಾತೆ ಈ ಗಿಡಗಳನ್ನು ತಮ್ಮ ಅಮೃತ ಹಸ್ತದಿಂದ ಮುಟ್ಟಿ ಉಡುಪಿ ಜಿಲ್ಲೆಯ ಪರಿಸರದಲ್ಲಿ ಬೆಳೆಸಲು ತಿಳಿಸಿದ್ದರು.
ಇದೇ ಸಂದರ್ಭದಲ್ಲಿ ಹೆಬ್ರಿ ರಾಘವೇಂದ್ರ ನರ್ಸಿಂಗ್ ಹೋಮ್ನ ಮುಖ್ಯಸ್ಥರಾದ ಡಾ. ರಾಮಚಂದ್ರ ಐತಾಳ್ , ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.
ಕಾಪು ಸರ್ಕಾರಿ ಪಾಲಿಟೆಕ್ನಿಕ್ : ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ

Posted On: 27-07-2023 08:02PM
ಕಾಪು : ಪ್ರಸಕ್ತ ಸಾಲಿನಲ್ಲಿ ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಾದ ಆಟೋಮೇಷನ್ ಅಂಡ್ ರೋಬೋಟಿಕ್ಸ್ ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870, 9740842743, 9902405533 ಹಾಗೂ 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.