Updated News From Kaup

ಅಂಗಾಗ ಕಸಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿ ಡಾ.ಸುರೇಶ ರಾವ್ ಗೆ ಹುಟ್ಟೂರ ಅಭಿನಂದನೆ

Posted On: 04-07-2025 06:09AM

ಕಾಪು : ಮಾನವ ದೇಹದ ಅಮೂಲ್ಯ ಅತ್ಯಗತ್ಯ "ಅಂಗಾಂಗಳ ಕಸಿ ಶಸ್ತ್ರಚಿಕಿತ್ಸೆ"ಯ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್ ಅವರಿಗೆ ಹುಟ್ಟೂರಿನಲ್ಲಿ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು. ಕೆಮುಂಡೇಲಿನ‌ ಶ್ರೀ ಪಾಂಡುರಂಗ ಭಜನಾ ಮಂಡಳಿ,ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆಹಾಗೂ ಹಳೆವಿದ್ಯಾರ್ಥಸಂಘ ಮತ್ತು ಕೆಮುಂಡೇಲು,ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು.

ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು : ಪಾಯಸ ಸೇವೆಗೆ ಚಾಲನೆ

Posted On: 04-07-2025 05:58AM

ಕಾಪು : ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು ಶಾಲೆಯಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶಂಕರಪುರ ವತಿಯಿಂದ ಶಾಲಾಮಕ್ಕಳಿಗೆ ಪಾಯಸ ಸೇವೆ ನೀಡಲಾಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೌಮ್ಯ ರೆಡ್ಡಿ ಭೇಟಿ

Posted On: 03-07-2025 08:34PM

ಪಡುಬಿದ್ರಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು.

ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಆಯ್ಕೆ

Posted On: 02-07-2025 09:48AM

ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಹೋಟೆಲ್ ಉದ್ಯಮಿ‌ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ.

ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಅವಿರೋಧ ಆಯ್ಕೆ

Posted On: 01-07-2025 06:10PM

ಕಾಪು : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ.

ಗಾನ ಕೋಗಿಲೆ -2025 : ದ.ಕ, ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

Posted On: 01-07-2025 11:50AM

ಪಡುಬಿದ್ರಿ : ಸಂಗೀತವು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಮಾನಸಿಕ ವಿಶ್ರಾಂತಿ, ಸೃಜನಶೀಲತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ಇದು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ಸಂಗೀತವು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಗ್ರಾಮೀಣ ಪ್ರದೇಶದ ಸಂಗೀತ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸುವ ಕಾರ್ಯವನ್ನು ಹಿನ್ನೆಲೆ ಗಾಯಕಿ ಸುಶ್ಮಿತಾ ಎರ್ಮಾಳ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ಮೂಲಕ ಬಹಳಷ್ಟು ಪ್ರತಿಭೆಗಳು ಹೂರಹೂಮ್ಮಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ‌.ಅಮೀನ್ ಹೇಳಿದರು. ಅವರು ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಸುಶ್ಮಿ ಮೆಲೋಡಿಯಸ್ ಎರ್ಮಾಳ್ ಸಂಸ್ಥೆಯ ವತಿಯಿಂದ ಹಿನ್ನೆಲೆ ಗಾಯಕಿ ಕು. ಸುಶ್ಮಿತಾ ಕೇಶವ್ ಎರ್ಮಾಳ್ ಸಾರಥ್ಯದಲ್ಲಿ ಜುಲೃೆ 27 ರಂದು ಪಡುಬಿದ್ರಿ ಸುಜಾತ ಆಡಿಟೋರಿಯಂ ನಲ್ಲಿ ನಡೆಯುವ ಗಾನ ಕೋಗಿಲೆ-2025 ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ‌‌

ಉಡುಪಿ ಜಿಲ್ಲಾ ಜೆಡಿಎಸ್ : ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

Posted On: 30-06-2025 07:34PM

ಉಡುಪಿ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

ಕಾಪು ಕ.ಸಾ.ಪ.ದಿಂದ ತಾಲೂಕಿನ ಪ.ಪೂ.ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ

Posted On: 30-06-2025 07:22PM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ಘಟಕದ ವತಿಯಿಂದ ಕಾಪು ಕಂದಾಯ ತಾಲೂಕು ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.12, ಶನಿವಾರ ಅಪರಾಹ್ನ ಗಂಟೆ 2 ಕ್ಕೆ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಭಾಷಣ ಸ್ಫರ್ಧೆ ಏರ್ಪಡಿಸಲಾಗಿದೆ.

ಪಡುಬಿದ್ರಿ :ಕಾಡಿಪಟ್ನ ಮೊಗವೀರ ಮಹಾಸಭಾ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಶೋಕ್ ಸಾಲ್ಯಾನ್ ಪುನರಾಯ್ಕೆ

Posted On: 29-06-2025 10:09PM

ಪಡುಬಿದ್ರಿ : ಇಲ್ಲಿನ ಕಾಡಿಪಟ್ನ ಮೊಗವೀರ ಮಹಾಸಭಾ ಆಡಳಿತ ಮಂಡಳಿಗೆ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : ವನಮಹೋತ್ಸವ ಆಚರಣೆ

Posted On: 28-06-2025 10:52PM

ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು ಇಲ್ಲಿ ಅಂತರಾಷ್ಟ್ರೀಯ ಸಹಕಾರಿ ವರ್ಷ - 2025 ನ್ನು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.