Updated News From Kaup
ಕಾಪು : ಪೊಲಿಪುವಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ
Posted On: 27-08-2023 10:34AM
ಕಾಪು : ಗುರ್ಮೆ ಫೌಂಡೇಶನ್ ಗುರ್ಮೆ, ಕಳತ್ತೂರು, ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಪೊಲಿಪು, ಮುಂಬೈ ಇವರ ಆಶ್ರಯದಲ್ಲಿ ಪೊಲಿಪು ಮೊಗವೀರ ಮಹಾಸಭಾ, ಪೊಲಿಪು, ಮುಂಬೈ ಪೊಲಿಪು ಹಳೆ ವಿದ್ಯಾರ್ಥಿ ಸಂಘ, ಪೊಲಿಪು, ಮುಂಬೈ, ಶ್ರೀ ಗಣೇಶೋತ್ಸವ ಸಮಿತಿ, ಪೊಲಿಪು ಇವರ ಸಹಭಾಗಿತ್ವದಲ್ಲಿ ಶ್ರೀನಿವಾಸ ವೈದ್ಯಕೀಯ ಕಾಲೇಜು ಮುಕ್ಕ, ಸುರತ್ಕಲ್, ಮಂಗಳೂರು ಇವರಿಂದ ಇಂದು ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಕಾಪು : ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸಂಘದ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ
Posted On: 27-08-2023 10:25AM
ಕಾಪು : ಬ್ರಹ್ಮಶ್ರೀ ನಾರಾಯಣಗುರು ಸಂಘ ಮೂಳೂರು ಇದರ ಮಹಿಳಾ ಮಂಡಲದ ನೂತನ ಅಧ್ಯಕ್ಷರನ್ನಾಗಿ ದೀಪಾ ಆರ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನ
Posted On: 26-08-2023 10:51PM
ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ವತಿಯಿಂದ ಶುಕ್ರವಾರ ಗಾಂಧಿನಗರ ಕಲಾವೃಂದದ ವೇದಿಕೆಯಲ್ಲಿ 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನಗೊಂಡಿತು.
ಶಿರ್ವ : ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ
Posted On: 26-08-2023 08:39PM
ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 26ರಂದು ಶಿರ್ವದ ಮೋನಿಶ್ ಕಾಂಪ್ಲೆಕ್ಸ್ ನ ರಿಯೋನ ಹಾಲ್ ನಲ್ಲಿ ನಡೆಯಿತು.
ಬಂಟಕಲ್ಲು : ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
Posted On: 26-08-2023 08:10PM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 10ನೇ ಪದವಿ ಪ್ರದಾನ ಸಮಾರಂಭವು ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ಉಡುಪಿ ಕಾಣಿಯೂರು ಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮಿಜಿಯವರು ತಮ್ಮ ಆಶೀರ್ವಚನದಲ್ಲಿ ಸದ್ಗುಣವಂತ ಪದವೀಧರರು ಸಮಾಜದ ನಿಜವಾದ ಆಸ್ತಿ. ಜೀವನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಾಳಿ ನೈತಿಕತೆ ಮತ್ತು ಉತ್ತಮ ಚಾರಿತ್ರ್ಯ ವನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.
ಸೆಪ್ಟೆಂಬರ್ 2 : ಬೆಳಪು ಸಹಕಾರಿ ಸಂಘದ ಅಮೃತ ಮಹೋತ್ಸವ ; ಸಹಕಾರಿ ಮಹಲ್ ಉದ್ಘಾಟನೆ
Posted On: 26-08-2023 05:38PM
ಉಚ್ಚಿಲ : ಬಡಾ, ಎಲ್ಲೂರು, ಬೆಳಪು ಗ್ರಾಮಸ್ಥರ ಆರ್ಥಿಕ ಸಬಲೀಕರಣದ ಉದ್ದೇಶ ಹೊಂದಿ 1948ರಲ್ಲಿ ಸ್ಥಾಪಿತವಾದ ಬೆಳಪು ವ್ಯವಸಾಯ ಸಹಕಾರಿ ಸಂಘವು ಈಗಾಗಲೇ 5 ಶಾಖೆಗಳನ್ನು ಹೊಂದಿದ್ದು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದೆ. ಈ ನಿಮಿತ್ತ ಸೆಪ್ಟೆಂಬರ್ 2, ಶನಿವಾರದಂದು ಬಡಾ ಗ್ರಾಮ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಲಿರುವ ಅಮೃತ ಮಹೋತ್ಸವ ಸಂಭ್ರಮಾಚರಣೆ, ನವೀಕೃತ ಶಾಖೆ ಹಾಗೂ ಸಹಕಾರಿ ಮಹಲ್ ಉದ್ಘಾಟನಾ ಸಮಾರಂಭ ಮತ್ತು ಸಹಕಾರಿ ರಂಗದ ಅಗ್ರಗಣ್ಯ ನಾಯಕ ಡಾ| ಎಂ.ಎನ್. ಆರ್ ರವರಿಗೆ ಸಹಕಾರಿ ಧ್ರುವ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅವರು ಬೆಳಪು ಪಣಿಯೂರು ಸಹಕಾರಿ ಸಂಘದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಪು : ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಳ ; ಸಾರ್ವಜನಿಕರಲ್ಲಿ ಆತಂಕ
Posted On: 26-08-2023 11:18AM
ಕಾಪು : ಇಲ್ಲಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳ್ಳಾರಿಯ ಹೊಸಪೇಟೆಯಿಂದ ಮಂಗಳೂರಿನ ಎಂಆರ್ಪಿಎಲ್ ಸಂಸ್ಥೆಗೆ ಸಾಗಿಸುತ್ತಿದ್ದ ನೈಟ್ರೋಜನ್ ಅನಿಲ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಾದ ಪರಿಣಾಮ ಅದರ ಚಾಲಕರು ನೈಟ್ರೋಜನ್ ಬಿಡುಗಡೆಗೊಳಿಸಿದ ಘಟನೆ ಶನಿವಾರ ಬೆಳಗ್ಗೆ ಘಟಿಸಿದೆ.
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” : ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ
Posted On: 26-08-2023 07:26AM
ಕಾರ್ಕಳ : ಇಲ್ಲಿನ ಹಿರ್ಗಾನ ಗ್ರಾಮದಲ್ಲಿರುವ ʼಬೆಂಗಾಲ್ʼ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ ಇಲ್ಲದೇ ಹೋದರೆ ಎಷ್ಟೇ ಹಣವಿದ್ದರೂ ಬದುಕಲು ಅಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಕೃಷಿಯನ್ನು ತುಚ್ಛವಾಗಿ ಕಾಣದೇ ಭೂಮಿತಾಯಿಯ ಸೇವೆ ಎಂದು ಭಾವಿಸುವಂತಾಗಿ, ಭಾರತವು ಎಲ್ಲಾ ಕ್ಷೇತ್ರದಲ್ಲಿ ನಾಯಕತ್ವ ವಹಿಸುವಂತಾಗಲಿ, ಹಾಳು ಬಿದ್ದಿರುವ ಕೃಷಿ ಜಮೀನು ಬೆಳೆ ಬೆಳೆಯುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುದರಂಗಡಿ ಅಂಗನವಾಡಿ ಎದುರು ಅಪಾಯಕಾರಿ ಸ್ಥಿತಿಯಲ್ಲಿ ಮರಗಳು ; ಅರಣ್ಯ ಇಲಾಖೆಯ ವಿಳಂಬ ನೀತಿ ; ಶೀಘ್ರ ತೆರವಿಗೆ ಆಗ್ರಹ
Posted On: 26-08-2023 07:02AM
ಕಾಪು : ತಾಲೂಕಿನ ಮದರಂಗಡಿ ಗ್ರಾಮ ಪಂಚಾಯಿತಿಯ ಸಾಂತೂರು ಗ್ರಾಮದ ಚರ್ಚ್ ಎದುರಿರುವ ಅಂಗನವಾಡಿಯ ಎದುರು ನಾಲ್ಕು ಬೃಹತ್ ಮರಗಳಿದ್ದು, ಮರ ತೆರವುಗೊಳಿಸಲು ಅರಣ್ಯ ಇಲಾಖೆ ವಿಳಂಬವಹಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಶಿರ್ವ ಶಾಖೆಯಿಂದ ವಿಶೇಷ ಶಾಲೆಗೆ ಅಗತ್ಯ ವಸ್ತುಗಳ ವಿತರಣೆ
Posted On: 25-08-2023 09:51PM
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಮಾನಸ ವಿಶೇಷ ಶಾಲೆ ಪಾಂಬೂರು ಇಲ್ಲಿನ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ನ್ಯಾಯವಾದಿ ಮೆಲ್ವಿನ್ ಡಿಸೋಜ, ಸಮಾಜ ಸೇವಕರಾದ ಹಸನ್ ಇಬ್ರಾಹಿಂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
