Updated News From Kaup

ಪಡುಕುತ್ಯಾರು : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ,ಕಟಪಾಡಿ - ಗುರು ಸೇವಾ ಪರಿಷತ್ತು ಪ್ರಮುಖರ ಸಭೆ

Thumbnail
Posted On: 10 Oct 2023, 07:07 AM

ಪಡುಕುತ್ಯಾರು : ಆನೆಗುಂದಿ ಗುರು ಸೇವಾ ಪರಿಷತ್ತಿನ ವಿವಿಧ ಪ್ರಾದೇಶಿಕ ಸಮಿತಿಗಳ ಮುಖ್ಯಸ್ಥರುಗಳ ಮತ್ತು ಪದಾಧಿಕಾರಿಗಳು ಸಭೆಯು ನಡೆಯಿತು. ಮಹಾಸಂಸ್ಥಾನದ ಕುಲಗುರು ಪರಂಪರೆ, ಆನೆಗುಂದಿ ಗುರುಸೇವಾ ಪರಿಷತ್ ಜವಾಬ್ದಾರಿ. ಕರ್ತವ್ಯಗಳು ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಆನೆಗುಂದಿ ಪ್ರತಿಷ್ಠಾನ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರ್ ವಿವರಣೆ ನೀಡಿದರು. ಆನೆಗುಂದಿ ಗುರು ಸೇವಾ ಪರಿಷತ್ ನ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಸಲಹೆ ನೀಡಿದರು. ಸಭೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಹಾಗೂ ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳ ಬಗ್ಗೆ ,ಹಾಗೂ ವಿಶ್ವಕರ್ಮ ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ನಿಟ್ಟೆ ಸುರೇಶ್ ಆಚಾರ್ಯ ಕಾರ್ಕಳ ಸವಿವರ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಮಹಾ ಸಂಸ್ಥಾನದ ಸಹ ಟ್ರಸ್ಟ್ ಗಳಾದ ಅಸೆಟ್ ಅಧ್ಯಕ್ಷ ಬಿ ಸೂರ್ಯಕುಮಾರ್ ಹಳೆಯಂಗಡಿ, ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು ಮತ್ತು ಸಮಿತಿಗಳಾದ ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಶ್ರೀಮದ್ ಜಗದ್ಗುರು ಆನೆಗೊಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪಂಚ ಸಿಂಹಾಸನ ವಿಕಾಸ ಸಮಿತಿ ಗಂಗಾವತಿ ಅಧ್ಯಕ್ಷ ದಿನೇಶ್ ಆಚಾರ್ಯ ಪಡುಬಿದ್ರಿ, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಕೋಟೆಕಾರು ಪ್ರಭಾಕರ ಆಚಾರ್ಯ ಮಧೂರು, ಜನಾರ್ದನ ಆಚಾರ್ಯ ಆರಿಕ್ಕಾಡಿ, ತ್ರಾಸಿ ಸುಧಾಕರ ಆಚಾರ್ಯ, ಜಯಕರ ಆಚಾರ್ಯ ಕರಂಬಳ್ಳಿ,ಗುರುರಾಜ್ ಕೆ ಜೆ ಆಚಾರ್ಯ, ರಾಘವೇಂದ್ರ ಆಚಾರ್ಯ ಉಡುಪಿ, ರತ್ನಾಕರ ಆಚಾರ್ಯ ಉದ್ಯಾವರ, ಗಣೇಶ್ ಆಚಾರ್ಯ ಕೋಟ, ವಾದಿರಾಜ ಆಚಾರ್ಯ ಮಂಗಳೂರು, ಕಾಟುಕುಕ್ಕೆ ವಾಸುದೇವ ಆಚಾರ್ಯ ಹರೀಶ್ ಆಚಾರ್ಯ ಹರೆಕಳ, ಜಗದೀಶ್ ಆಚಾರ್ಯ ತೊಕ್ಕೊಟ್ಟು, ಉಳ್ಳಾಲ ಮಂಜೇಶ್ವರ, ವಿಠಲ ಆಚಾರ್ಯ ಪಣಿಯೂರು,ಕಾಪು, ಸುಧಾಕರ ಆಚಾರ್ಯ ಕುಕ್ಕಿಕಟ್ಟೆ, ಯೋಗೀಶ್ ಆಚಾರ್ಯ ಕರಂಬಳ್ಳಿ, ದಯಾನಂದ ಆಚಾರ್ಯ ಉಡುಪಿ, ತೆಂಕನಿಡಿಯೂರು, ಪುರುಷೋತ್ತಮ ಆಚಾರ್ಯ ಪುತ್ತೂರು, ಪುರಂದರ ಆಚಾರ್ಯ ವಿಟ್ಲ, ಯುವರಾಜ ಆಚಾರ್ಯ ಬಂಟ್ವಾಳ, ಶೇಖರ ಆಚಾರ್ಯ ಮಂಗಳೂರು, ಸುಂದರ ಆಚಾರ್ಯ ಮರೋಳಿ, ನಿತಿನ್ ಆಚಾರ್ಯ ಮುಂಡ್ಕೂರು, ದೇವಪ್ಪ ಆಚಾರ್ಯ ಸುಳ್ಯ, ಉದಯ ಆಚಾರ್ಯ ಕಿನ್ನಿಗೋಳಿ, ದಿನೇಶ್ ಆಚಾರ್ಯ ಮಂಜೇಶ್ವರ, ಅಶೋಕ್ ಆಚಾರ್ಯ ಮಂಗಲ್ಪಾಡಿ, ಜನಾರ್ದನ ಆಚಾರ್ಯ ಬಜಕೂಡ್ಲು, ಯೋಗೀಶ್ ಆಚಾರ್ಯ ಕೊಯಂಬತ್ತೂರು, ವಸಂತ ಆಚಾರ್ಯ ಮಜೂರು ಉಪಸ್ಥಿತರಿದ್ದರು. ಶ್ರೀ ನಾಗಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಿತು. ಆನೆಗುಂದಿ ಪ್ರತಿಷ್ಠಾನ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ. ಬಿ ಆಚಾರ್ ಕಂಬಾರ್ ಸ್ವಾಗತಿಸಿದರು. ಲೋಲಾಕ್ಷ ಶರ್ಮ ಪಡುಕುತ್ಯಾರು ವಂದಿಸಿದರು.

ಪಡುಕುತ್ಯಾರು : ಆನೆಗುಂದಿ ಶ್ರೀ ಚಾತುರ್ಮಾಸ್ಯ ಕೃತಜ್ಞತಾ ಸಮರ್ಪಣಾ ಸಭೆ

Thumbnail
Posted On: 10 Oct 2023, 07:04 AM

ಪಡುಕುತ್ಯಾರು :ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ-2023 ಜುಲೈ 3ರಿಂದ ಸೆಪ್ಟಂಬರ್ 29 ತನಕ ಯಶಸ್ವಿಯಾಗಿ ಸಂಪನ್ನಗೊಂಡ ಬಗ್ಗೆ ಸೇವಾ ಕಾರ್ಯಕರ್ತರಿಗೆ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ನೇತೃತ್ವದಲ್ಲಿ ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆದ ಸಭೆಯಲ್ಲಿ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಸೇವಾ ಕಾರ್ಯಕರ್ತರಿಗೆ ಸಹಕರಿಸಿದ ಎಲ್ಲರಿಗೂ ಫಲ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮತ್ತು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ಚಾತುರ್ಮಾಸ್ಯದ ವರದಿಯನ್ನು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರ್ ಮಾಡಿದರು. ಚಾತುರ್ಮಾಸ್ಯದ ಆಯವ್ಯಯವನ್ನು ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ಮಂಡಿಸಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ ಉಡುಪಿ ಉಪಸ್ಥಿತರಿದ್ದರು.

ಅಕ್ಟೋಬರ್ 15 ರಿಂದ 24 : ಉಚ್ಚಿಲ ದಸರಾ - 2023

Thumbnail
Posted On: 09 Oct 2023, 06:51 PM

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಬಾರಿಯೂ ಉಚ್ಚಿಲ ದಸರಾವು ಅಕ್ಟೋಬರ್ 15 ರಿಂದ 24 ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ಹೇಳಿದರು. ಅವರು ಸೋಮವಾರ ಉಚ್ಚಿಲ ಮೊಗವೀರ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಕ್ಟೋಬರ್ 15ರಂದು ಶಾಲಿನಿ ಡಾ| ಜಿ.ಶಂಕರ್ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚಾಲನೆ ನೀಡುವರು. ಅಂದು ಮಹಾಲಕ್ಷ್ಮಿ ಅನ್ನಛತ್ರ ಕಟ್ಟಡ, ಅತಿಥಿಗೃಹ ಉದ್ಘಾಟನೆಯೂ ನಡೆಯಲಿದೆ. ಗಣ್ಯರ ಉಪಸ್ಥಿತಿಯಲ್ಲಿ ದೇವಿಗೆ ಭೂತಾಯಿ ಮೀನಿನ ಬಂಗಾರದ ಹಾರದ, ಬೆಳ್ಳಿ ಕಿರೀಟ, ಬೆಳ್ಳಿ ತಂಬೂರಿ ಸಮರ್ಪಣೆ ನಡೆಯಲಿದೆ. ಈ ಬಾರಿ ದಸರಾ ವಿಶೇಷ ಆಕರ್ಷಣೆಯಾಗಿ ಫಲಪುಷ್ಪ ಪ್ರದರ್ಶನ, ಪುಸ್ತಕ ಮೇಳ, ಮೀನುಗಾರಿಕೆ ಯೋಜನೆಗಳ ಮಾಹಿತಿ, ಮೀನುಗಾರಿಕಾ ಪರಿಕರಗಳ ಪ್ರದರ್ಶನ, ಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಶತವೀಣಾವಲ್ಲರಿ, ಧಾರ್ಮಿಕ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳು ನಡೆಯಲಿದೆ. ಶೋಭಾಯಾತ್ರೆಯು ದೇವಳದಿಂದ ಪ್ರಾರಂಭಗೊಂಡು ರಾಷ್ಟ್ರೀಯ ಹೆದ್ದಾರಿಯ ಮೂಲಕ ಎರ್ಮಾಳು ಜನಾರ್ಧನ ದೇವಳದವರೆಗೆ ಸಾಗಿ ಅಲ್ಲಿಂದ ಕೊಪ್ಪಲಂಗಡಿ ಮೂಲಕ ಕಾಪು ದೀಪಸ್ತಂಭದ ಬಳಿ ಸಮುದ್ರ ಕಿನಾರೆಯಲ್ಲಿ ನವದುರ್ಗೆ, ಶಾರದಾ ಮೂರ್ತಿಯ ಜಲಸ್ತಂಭನ ಮಾಡಲಾಗುವುದು. ಶೋಭಾಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿ ಅಂಬಾರಿ ಹೊತ್ತ ಕೃತಕ ಆನೆ, ಭಜನಾ ತಂಡಗಳು, ಹುಲಿವೇಷ, ವಿವಿಧ ವೇಷಭೂಷಣ ಇರಲಿದೆ. ಸಮುದ್ರ ಕಿನಾರೆಯ ಬಳಿ ಕಾಶಿಯ ಅರ್ಚಕರಿಂದ ಗಂಗಾರತಿ ಬೆಳಗುವ ಕಾರ್ಯವೂ ನಡೆಯಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ , ಜೀಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿ‌ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಿಳಾ ಘಟಕ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕು ಪಟ್ಣ ಅಧ್ಯಕ್ಷೆ ಸುಗುಣ ಕರ್ಕೇರ, ಉಪಾಧ್ಯಕ್ಷ ಸುಭಾಶ್ಚಂದ್ರ, ಕಾರ್ಯದರ್ಶಿ ಸುಧಾಕರ್ ಕುಂದರ್, ಅನಿಲ್ ಕುಮಾರ್, ಶಂಕರ್ ಸಾಲ್ಯಾನ್, ದಿನೇಶ್ ಮೂಳೂರು, ದಿನೇಶ್ ಎರ್ಮಾಳು, ಸತೀಶ್ ಬಾರ್ಕೂರು, ಮನೋಜ್ ಕಾಂಚನ್, ರವೀಂದ್ರ ಶ್ರೀಯಾನ್, ಸತೀಶ್ ಅಮೀನ್ ಬಾರ್ಕೂರು, ದೇವಳದ ಮುಖ್ಯ ಪ್ರಬಂಧಕ ಸತೀಶ್ ಅಮೀನ್ ಮಟ್ಟು ಉಪಸ್ಥಿತರಿದ್ದರು.

ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ ನಿಧನ

Thumbnail
Posted On: 09 Oct 2023, 03:02 PM

ಉಡುಪಿ : ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ (51) ಅವರು ಅಲ್ಪ ಕಾಲದ ಅಸೌಖ್ಯದಿಂದ ಅಕ್ಟೋಬರ್ 8 ರಂದು ನಿಧನರಾದರು. ಅಪಾರ ದೈವ ಭಕ್ತೆ, ಜನನುರಾಗಿಯಾಗಿದ್ದರು. ಇವರು ಕಟಪಾಡಿ ಕಾಮತ್ ಸ್ನಫ್ ವರ್ಕ್ಸ್ ಇದರ ಮಾಲಕರಾದ ಶ್ರೀಧರ್ ಕಾಮತ್ ಇವರ ಧರ್ಮಪತ್ನಿ ಇವರು ಪತಿ, ಮಗಳು ಅಳಿಯ ಹಾಗೂ ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ.

ಉಡುಪಿ : ತುಳು ಲಿಪಿ ನಾಮ ಫಲಕ ಅನಾವರಣ

Thumbnail
Posted On: 09 Oct 2023, 02:43 PM

ಉಡುಪಿ : ಜೈ ತುಲುನಾಡ್(ರಿ.) ಉಡುಪಿ ವಲಯದ ವತಿಯಿಂದ ಮಣಿಪಾಲದ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಲಾದ ತುಳುನಾಡಿನ ನೆಲದ ಭಾಷೆಯಾದ ತುಳು ಲಿಪಿಯ ನಾಮಫಲಕ ವನ್ನು ತುಳುಕೂಟ(ರಿ.) ಉಡುಪಿ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಇವರು ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ದಾಖಲೆ ಆಧಾರದ ಮೇಲೆ ಕಂದಾಯ ಅಧಿಕಾರಿ ನಮಗೆ ಮಾತೃ ಭಾಷೆ ತುಳು ಎಂದು ಸರ್ಟಿಫಿಕೆಟ್ ನೀಡಿದರೆ ಆ ಸರ್ಟಿಫಿಕೇಟ್ ಮೇಲೆ ನೀಟ್, ಸಿಇಟಿಯಲ್ಲಿ ತುಳು ಕೋಟಾದಲ್ಲಿ ರಿಸರ್ವೇಶನ್ ಲಭಿಸುತ್ತದೆ ಹಾಗಾಗಿ ಲಕ್ಷಾಂತರ ರೂಪಾಯಿ ಅನುದಾನ ನೀಡುವುದು ತಪ್ಪುತ್ತದೆ. ಹೆಚ್ಚಿನವರಿಗೆ ನಾನು ಇದರ ಮಾಹಿತಿ ನೀಡಿದ್ದೇನೆ. ಹೆಚ್ಚಿನ ನಮ್ಮ ಸ್ಥಳೀಯ ಮಕ್ಕಳಿಗೆ ಹಾಗೂ ಪೋಷಕರಿಗೆ ಇದರ ಮಾಹಿತಿ ಇಲ್ಲ. ಶಾಲಾ ದಾಖಲಾತಿಯ ಸಮಯದಲ್ಲಿ ಮಾತೃಭಾಷೆ ತುಳು ಎಂದು ನಮೂದಿಸಿದರೆ ಇದರ ಸದುಪಯೋಗ ಪಡೆಯಬಹುದು ಹಾಗೂ ಜೈ ತುಲುನಾಡು(ರಿ.) ಸಂಘಟನೆಯವರು ತುಳು ಭಾಷೆ ಸಂಸ್ಕೃತಿ ಉಳಿವಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿದೀರಿ ಇದಕ್ಕೆ ನಾನು ಆಭಾರಿಯಾಗಿದ್ದೇನೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ತಾರಾ ಉಮೇಶ್ ಆಚಾರ್ಯ, ತುಳುನಾಡ ಧ್ವನಿಯ ಸಂಪಾದಕರಾದ ಯಶೋಧಾ ಕೇಶವ್, ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ನಾಯ್ಕ್ , ಜೈ ತುಲುನಾಡ್(ರಿ.) ಇದರ ಉಪಾಧ್ಯಕ್ಷರಾದ ಉದಯ ಪೂಂಜಾ, ಕೋಶಾಧಿಕಾರಿ ಸಂತೋಷ್.ಎನ್.ಎಸ್ ಕಟಪಾಡಿ ಹಾಗೂ ಜೈ ತುಲುನಾಡು(ರಿ.) ಉಡುಪಿ ವಲಯದ ಸದಸ್ಯರಾದ ಸುಪ್ರೀತಾ ದೇವಾಡಿಗ, ಕಿನ್ನು ಒಡಿಪು, ರಾಜೇಶ್ ತುಳುವ, ಸುರೇಶ್ ಹಾವಂಜೆ, ಸಾಗರ್ ಭಂಡಾರಿ, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸಂಘದ ಸದಸ್ಯರಾದ ಸ್ವಾತಿಸುವರ್ಣ ಕೊಡವೂರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಕಾಪು : ಮಲ್ಲಾರು ಶಾಲೆಯ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Thumbnail
Posted On: 09 Oct 2023, 02:17 PM

ಕಾಪು : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ನಡೆದ ಇನ್‌ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಪು ತಾಲೂಕಿನ ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಬೇಬಿ ರಿಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ತಯಾರಿಸಿದ ಮನೆಯಲ್ಲಿ ಉಪಯೋಗಿ ಸಬಹುದಾದ “ದಹನಕಾರಕ' ಮಾದರಿಗೆ ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಅವಕಾಶ ದೊರಕಿದ್ದು ಅಕ್ಟೋಬರ್ 9ರಿಂದ 11ರವರೆಗೆ ದಿಲ್ಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಜೋಯ್ಸ ಎಂ. ಅಲ್ಫೋನ್ಸೋ ಮಾರ್ಗದರ್ಶಕ ನೋಡಲ್ ಶಿಕ್ಷಕಿಯಾಗಿ ಪಾಲ್ಗೊಳ್ಳಲಿದ್ದಾರೆ.

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಭೆ

Thumbnail
Posted On: 08 Oct 2023, 06:25 PM

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಇಂದು ಸಾರ್ವಜನಿಕ ಸಭೆಯು ಜರಗಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಕಾಶ್ ಶೆಟ್ಟಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ದೇವಳದ ಅನುವಂಶಿಕ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್, ಅರ್ಚಕರಾದ ಪದ್ಮನಾಭ ಭಟ್, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾವಡ, ಸಮಿತಿ ಸದಸ್ಯರಾದ ಶ್ರೀಧರ ಆಚಾರ್, ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಡುಬಿದ್ರಿ : ಸಾಂತೂರು ವ್ಯಕ್ತಿ ನಾಪತ್ತೆ

Thumbnail
Posted On: 08 Oct 2023, 12:34 PM

ಪಡುಬಿದ್ರಿ : ಇಲ್ಲಿನ ಸಾಂತೂರು ಗ್ರಾಮದ ನಿವಾಸಿ ಸುರೇಶ್ ಮೂಲ್ಯ ರವರು ಅಕ್ಟೋಬರ್ 5 ರಿಂದ ನಾಪತ್ತೆಯಾಗಿರುವರು,ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿದು ಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಲು ಕೊರಲಾಗಿದೆ.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಜನಪರ ಕಾರ್ಯ ಶ್ಲಾಘನೀಯ - ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು

Thumbnail
Posted On: 08 Oct 2023, 11:40 AM

ಪಡುಬಿದ್ರಿ : ಈ ಭಾಗದಲ್ಲಿ ಯಶಸ್ಸು ಕಂಡ ಸಹಕಾರಿ‌ ಸಂಸ್ಥೆ ಪಡುಬಿದ್ರಿ ಸೊಸೈಟಿಯು ಲಾಭದ ಉದ್ದೇಶ ಹೊಂದದೆ ಜನಪರ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಕಂಡಿದೆ. ಅದರಲ್ಲೂ ಗ್ರಾಮದ ಜನರ ಆರೋಗ್ಯದ ಬಗೆಯೂ ಕಾಳಜಿ ಹೊಂದಿದೆ. ಅದರಂತೆ ಗ್ರಾಮದ ಜನರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಭಾನುವಾರ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ), ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಹಾಗೂ ಶ್ರೀನಿವಾಸ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರದಲ್ಲಿ ವೈದ್ಯಕೀಯ ವಿಭಾಗ, ಚರ್ಮ, ಮಕ್ಕಳ ವಿಭಾಗ, ಕಿವಿಮೂಗು ಗಂಟಲು ವಿಭಾಗ, ಸ್ತ್ರೀರೋಗ ವಿಭಾಗ, ಎಲುಬು ಮತ್ತು ಕೀಲು ವಿಭಾಗ, ಹೃದಯ ರೋಗ, ಕಣ್ಣಿನ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪ್ರಯೋಜನ ಪಡೆದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ವಹಿಸಿದ್ದರು. ಈ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಕಿಣಿ, ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯಾಧಿಕಾರಿ ಶಶಿರಾಜ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ದೀಪಕ್ ಸಾಲ್ಯಾನ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ಸೊಸೈಟಿಯ ನಿರ್ದೇಶಕರು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಮಾಧವ ಆಚಾರ್ಯ ಪ್ರಾರ್ಥಿಸಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ಸೊಸೈಟಿಯ ನಿರ್ದೇಶಕಿ ಸುಚರಿತ ಎಲ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ ವಂದಿಸಿದರು.

ಕಾಪು : ಚಿರತೆ ಕಳೇಬರ ಪತ್ತೆ ; ದಹನ

Thumbnail
Posted On: 07 Oct 2023, 10:37 PM

ಕಾಪು : ಬೆಳೆ ಸಮೀಕ್ಷೆಗೆ ತೆರಳಿದ್ದ ತಂಡಕ್ಕೆ ಚಿರತೆಯೊಂದರ ಕಳೇಬರ ಸಿಕ್ಕಿದ ಘಟನೆ ಶುಕ್ರವಾರ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಕಲ್ಲುಗುಡ್ಡೆ - ಕುಂಜಾರ್ಗ ಬಳಿಯ ಕಾಡಿನಲ್ಲಿ ಸಂಭವಿಸಿದೆ. ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಅವಿನಾಶ್ ಮತ್ತು ಗ್ರಾಮ ಸಹಾಯಕ ಜೇಸುದಾಸ್ ಸೋನ್ಸ್ ಅವರು ಕುಂಜಾರ್ಗ ರಾಜೇಂದ್ರ ಮಾಸ್ಟ್ರಮನೆ ಬಳಿ ಚಿರತೆ ಕಳೇಬರವನ್ನು ಗಮನಿಸಿದ್ದು ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದರು. ಇನ್ನಂಜೆ ಗ್ರಾ. ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದು ಬಳಿಕ ಅರಣ್ಯ ಇಲಾಖೆ ಮತ್ತು ಪಶು ಇಲಾಖೆಗೆ ವಿಷಯ ತಿಳಿಸಿದ್ದರು. ಕುಂದಾಪುರ ಉಪವಿಭಾಗದ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಪಡುಬಿದ್ರಿ ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್‌ದಾಸ್ ಶೆಟ್ಟಿ, ಗುರುರಾಜ್ ಕೆ. ಹಾಗೂ ಕಾಪು ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಡಾ| ಅರುಣ್ ಹೆಗ್ಡೆ ಸ್ಥಳಕ್ಕೆ ಆಗಮಿಸಿ ಚಿರತೆಯ ಮೃತದೇಹ ಪರಿಶೀಲನೆ ನಡೆಸಿದರು. ಸುಮಾರು ಮೂರೂವರೆ ವರ್ಷ ಪ್ರಾಯದ ಗಂಡು ಚಿರತೆ ಯಾವುದೋ ಕಾರಣದಿಂದ ಬಾಯಿ ಗಾಯಕ್ಕೊಳಗಾಗಿ ಕೆಲವು ದಿನಗಳ ಕಾಲ ಆಹಾರ ಸೇವಿಸಲಾಗದೇ ಸಾವಿಗೀಡಾಗಿರುವ ಸಾಧ್ಯತೆಗಳಿವೆ ಎಂದು ಪರಿಶೀಲನೆ ನಡೆಸಿದ ಪಶು ವೈದ್ಯಾಧಿಕಾರಿ ಡಾ| ಅರುಣ್ ಹೆಗ್ಡೆ ತಿಳಿಸಿದ್ದಾರೆ. ಈ ಸಂದರ್ಭ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಸ್ಥಳೀಯರ ಸಹಕಾರದಿಂದ ಚಿರತೆ ಕಳೇಬರವನ್ನು ದಹಿಸಲಾಯಿತು.