Updated News From Kaup

ಆಗಸ್ಟ್ 27: ಪೆರ್ಡೂರು ಕುಲಾಲ ಸಂಘದಲ್ಲಿ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ, ಕುಂಭ ಕಲಾ ಸಂಭ್ರಮ

Posted On: 25-08-2023 09:32PM

ಪೆರ್ಡೂರು : ತಾಲೂಕಿನ ಪೆರ್ಡೂರು ಬುಕ್ಕಿಗುಡ್ಡೆಯ ಕುಲಾಲ ಸಮುದಾಯ ಭವನದಲ್ಲಿ ಆಗಸ್ಟ್ ತಿಂಗಳ 27 ರಂದು 15 ನೇ ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ, ಕುಂಭ ಕಲಾ ಸಂಭ್ರಮ -2023 ನಡೆಯಲಿದೆ.

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ

Posted On: 25-08-2023 04:36PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ದೇವಳದ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಸಂಪನ್ನಗೊಂಡಿತು.

ಚಂದಮಾಮನ ಬಳಿ ಭಾರತ - ಚಂದ್ರಯಾನ

Posted On: 25-08-2023 07:21AM

ಚಂದ್ರನ ದಕ್ಷಿಣ ದ್ರುವಕ್ಕೆ ಕಾಲಿಟ್ಟ ಜಗತ್ತಿನ ಏಕೈಕ ದೇಶ ನಮ್ಮ ಭಾರತ 'ಚಂದ್ರಯಾನ 3 ಅತ್ಯಂತ ಯಶಸ್ವಿಯಾಗಿದೆ. ಬಹು ನಿರೀಕ್ಷಿತ ವಿಕ್ರಂ ಲ್ಯಾoಡರ್ ಚಂದ್ರನ ನೆಲದಲ್ಲಿ ಲ್ಯಾಂಡ್ ಆಗುದ ರೊಂದಿಗೆ ಈ ಸಾಧನೆ ಮಾಡಿದೆ. 2008ರ ಪ್ರಥಮ ಚಂದ್ರಯಾನ ಮಿಶನ್ನಲ್ಲಿ ಭಾರತ ಸೋತರೂ ಚಂದ್ರನಲ್ಲಿ ನೀರಿದೆ ಎನ್ನುವುದನ್ನು ಪತ್ತೆ ಹಚ್ಚಿ ಅದನ್ನು ಜಗತ್ತಿಗೆ ಸಾರಿದೆ. ಅಲ್ಲಿಂದೀಚೆಗೆ ಭಾರತ ಸದ್ದಿಲ್ಲದೇ ಮಾತು ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಅಮೇರಿಕಾ ದೇಶವು ಭಾರತ ಇನ್ನು ಕಣ್ಣು ಬಿಡುವ ಮುಂಚೆಯೇ ಚಂದ್ರನ ಮೇಲೆ ಕಾಲಿಟ್ಟ ದೇಶವಾಗಿತ್ತು. ಐವತ್ತು ವರ್ಷಗಳ ನಂತರ ಭಾರತ ಅಮೇರಿಕಾ ದೇಶವನ್ನೂ ಹಿಂದಿಕ್ಕುವ ಪ್ರಮುಖ ಪ್ರತಿ ಸ್ಪರ್ಧಿಯಾಗಿ ಹೊರಹೊಮ್ಮಿದೆ.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 2022-23ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನ

Posted On: 25-08-2023 07:17AM

ಪಡುಬಿದ್ರಿ : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ಮಹಾಸಭೆಯಲ್ಲಿ, ಉಡುಪಿ ಜಿಲ್ಲೆಯಲ್ಲಿಯೇ 13 ವರ್ಷಗಳಿಂದ ಸತತವಾಗಿ 25% ಡಿವಿಡೆಂಡ್ ನೀಡುತ್ತಿರುವ ಏಕೈಕ ಸಂಸ್ಥೆಯಾಗಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.)ಗೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಗಳಿಸಿದ ಪ್ರಗತಿಯನ್ನು ಗುರುತಿಸಿ 2022-23ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಮಂಗಳೂರು ಕೊಡಿಯಾಲ್ ಬೈಲ್‌ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.

ಕಟಪಾಡಿ :ಶ್ರೀಮತ್ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ - ಧರ್ಮ ದಂಡ ಸಮರ್ಪಣೆ, ಧರ್ಮ ದಂಡ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮ

Posted On: 25-08-2023 07:14AM

ಕಟಪಾಡಿ : ನಾವು ನಡೆಸುವ ಧರ್ಮ ಕಾರ್ಯಗಳೇ ನಮ್ಮನ್ನು ರಕ್ಷಿಸುತ್ತವೆ ಮತ್ತು ಆಧರಿಸುತ್ತವೆ. ನಮ್ಮ ಮನಸ್ಥಿತಿ ನಡೆಯನ್ನು ನಿರ್ಧರಿಸುತ್ತದೆ. ಧರ್ಮ ಕಾರ್ಯ ನಡೆಸುವಾಗ ಪ್ರತಿಫಲಾಪೇಕ್ಷೆ ಬಯಸಬಾರದು ಎಂದು ಕಟಪಾಡಿ ಶ್ರೀಮತ್ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಆನೆಗುಂದಿ ಮೂಲಮಠದಲ್ಲಿ ಗುರುವಾರ ನಡೆದ ಧರ್ಮ ದಂಡ ಸಮರ್ಪಣೆ ಹಾಗೂ ಧರ್ಮ ದಂಡ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮ ದಂಡವನ್ನು ಸ್ವೀಕರಿಸಿ ಆಶೀರ್ವಚನ ನೀಡಿದರು. ಆಸೆ ಆಕಾಂಕ್ಷೆಗಳ ಲಾಲಸೆಯಿಲ್ಲದೇ ನಡೆಯಂತೆ ನುಡಿದು, ಅದರಂತೆ ಜೀವನ ನಡೆಸಿದಾಗ ನಮ್ಮ ಬದುಕು ಸಾರ್ಥಕವಾಗುತ್ತದೆ. ಶಿಷ್ಯ ವೃಂದವನ್ನು ಧರ್ಮದ ಹಾದಿಯಲ್ಲಿ ನಡೆಯುವಂತೆ ಆಶೀರ್ವದಿಸಲು ಮತ್ತು ಪರಂಪರೆಯನ್ನು ರಕ್ಷಣೆ ಮಾಡುವ ಪ್ರತೀಕವಾಗಿ ಧರ್ಮ ದಂಡ ಬಳಕೆಯಾಗಲಿದೆ ಎಂದರು.

ವರಮಹಾಲಕ್ಷ್ಮಿ ವ್ರತ : ’ಸಂಪತ್ತಿನ ರಾಣಿಯ ಆರಾಧನೆ’

Posted On: 25-08-2023 07:08AM

"ಲಕ್ಷಯತಿ ಪಶ್ಯತಿ ಭಕ್ತಜನಾನ್ ಇತಿ ಲಕ್ಷ್ಮೀ" ಇದು ’ಲಕ್ಷ್ಮೀ’ ಶಬ್ದದ ವ್ಯುತ್ಪತ್ತಿ. ಉಪಾಸಕರನ್ನು ಕೃಪಾಕಟಾಕ್ಷದಿಂದ ವೀಕ್ಷಿಸುವವಳೇ ’ಲಕ್ಷ್ಮೀ’. ಶ್ರೀ ಎಂಬುದು ’ಲಕ್ಷ್ಮೀ’ಯ ನಾಮಾಂತರ. ಪ್ರಭೆ, ಶೋಭೆ, ಕೀರ್ತಿ, ಕಾಂತಿ, ವಿಭೂತಿ, ಮತಿ, ವರ್ಚಸ್, ತೇಜಸ್, ಸೌಂದರ್ಯ, ವೃದ್ಧಿ, ಸಿದ್ಧಿ, ಸೌಭಾಗ್ಯ, ಕಮಲ, ಬಿಲ್ವವೃಕ್ಷ ಮುಂತಾದುವು ’ಶ್ರೀ’ ಶಬ್ದಕ್ಕಿರುವ ಹಲವು ಅರ್ಥಗಳು. ಸಂಪತ್ತು ಎಂಬುದು ಸಾಮಾನ್ಯ ಅರ್ಥವಾದರೂ ’ಐಶ್ವರ್ಯವೆಂಬುದು ಪ್ರಧಾನವಾದ ಅರ್ಥ ಅಥವಾ ಸಾಮಾನ್ಯ ಒಪ್ಪಿಗೆ - ತಿಳಿವಳಿಕೆ. "ಈಶ್ಚರಸ್ಯ ಭಾವಃ ಐಶ್ವರ್ಯಂ". ಪರಮಾತ್ಮನ ಅನುಗ್ರಹಕಾರಕವಾದ ಗುಣ ವಿಶೇಷವೇ ’ಶ್ರೀ’. ’ಲಕ್ಷ್ಮೀ’ ಸಮುದ್ರ ಮಥನದಲ್ಲಿ ಹುಟ್ಟಿದಳು. ನಾರಾಯಣನನ್ನು ವರಿಸಿ ತಾನು ’ಮಹಾಲಕ್ಷ್ಮೀ’ಯಾದಳು. ನಾರಾಯಣನು ’ಲಕ್ಷ್ಮೀನಾರಾಯಣ’ನಾದ, ಶ್ರೀಮನ್ನಾರಾಯಣನಾದ. ಸ್ಥಿತಿಕರ್ತನಾದ-ಪಾಲನಾಧಿಕಾರಿಯಾಗಿದ್ದ ನಾರಾಯಣನು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀಗೆ ವಲ್ಲಭನಾಗಿ ಸೌಭಾಗ್ಯವಂತನಾದ, ಭಕ್ತರ ಇಷ್ಟಾರ್ಥ ಅನುಗ್ರಹಿಸಲು ಸರ್ವಶಕ್ತನಾದ. ಶ್ರೀಮನ್ನಾರಾಯಣನಿಂದ ’ಲಕ್ಷ್ಮೀ’ ಬಹುಮಾನ್ಯಳಾದಳು.

ಉದ್ಯಾವರ : ಕಳುವುಗೈದ ಲಕ್ಷಾಂತರ ಮೌಲ್ಯದ ಸೊತ್ತು ಸಹಿತ ಕಳ್ಳನ ಬಂಧನ

Posted On: 24-08-2023 12:10PM

ಉದ್ಯಾವರ : ಇಲ್ಲಿನ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಪು : ಚಂದ್ರಯಾನ - 3 ಯಶಸ್ಸಿಗೆ ನವಗ್ರಹ ಯಾಗ, ಪುರಸ್ಸರ ಚಂದ್ರಶಾಂತಿ

Posted On: 23-08-2023 07:55PM

ಕಾಪು : ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ - 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ಬುಧವಾರ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು.

ಕಾಪು : ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ

Posted On: 23-08-2023 07:22PM

ಕಾಪು : ತಾಲೂಕಿನ ಶಿರ್ವ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.

ಮುದರಂಗಡಿ ಗ್ರಾಮಪಂಚಾಯತ್ ಅಧ್ಯಕ್ಷರಾಗಿ ನಮಿತಾ, ಉಪಾಧ್ಯಕ್ಷರಾಗಿ ಮೋಹಿನಿ ಸಿ ಹೆಗ್ಡೆ ಅವಿರೋಧ ಆಯ್ಕೆ

Posted On: 23-08-2023 07:14PM

ಮದರಂಗಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗಾಗಿ ಬುಧವಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.