Updated News From Kaup

ಪಡುಬಿದ್ರಿ : ಬಂಟರ ಸಂಘದಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ; ವಿದ್ಯಾರ್ಥಿ ವೇತನ ವಿತರಣೆ

Thumbnail
Posted On: 01 Oct 2023, 08:41 PM

ಪಡುಬಿದ್ರಿ : ಇಲ್ಲಿನ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ "ಸಿರಿಮುಡಿ ದತ್ತಿನಿಧಿ" ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ರವಿವಾರ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ ಶೆಟ್ಟಿ ಸಭಾಭವನದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜರಗಿತು. ಕಾರ್ಯಕ್ರಮವನ್ನು ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ ಆಳ್ವ ಉದ್ಘಾಟಿಸಿದರು. ಹೇರಂಬ ಇಂಡಸ್ಟ್ರೀಸ್ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಕ್ರೆಡಿಟ್ ಕೋ ಆಪರೇಟಿವ್ ಗೆ ಚಾಲನೆ ನೀಡಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಶಕ್ತರಿಗೆ ನೆರವು ವಿತರಿಸಿದರು. ಮುಂಬಯಿಯ ಉದ್ಯಮಿ ಎಲ್ಲೂರಿನ ಪ್ರವೀಣ ಭೋಜ ಶೆಟ್ಟಿಯವರಿಂದ ಬಂಟಾಶ್ರಯಕ್ಕೆ ಚಾಲನೆ ನೀಡಲಾಯಿತು. ಕೆ.ಎಮ್.ಇಂಡಸ್ಟ್ರೀಸ್ ಮಾಲಕರಾದ ಕೆ.ಎಂ ಶೆಟ್ಟಿ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಬಂಟರ ಸಂಘ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಸೇರಿದಂತೆ ಸಾಧಕರನ್ನು ಸಮಾಜದ ವತಿಯಿಂದ ಅಭಿನಂದಿಸಲಾಯಿತು. ಪ್ರವೀಣ್ ಭೋಜ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎರ್ಮಾಳು ಚಂದ್ರಹಾಸ ಶೆಟ್ಟಿ, ಮುಂಬೈ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ. ಸುರೇಂದ್ರ ಶೆಟ್ಟಿ, ಸಿರಿಮುಡಿ ದತ್ತಿ ನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗದ ‌ಅಧ್ಯಕ್ಷೆ ಜ್ಯೋತಿ ‌ಶೆಟ್ಟಿ ಎರ್ಮಾಳು, ಯುವ ವಿಭಾಗದ ಅಧ್ಯಕ್ಷ ನವೀನ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ಜಯ ಶೆಟ್ಟಿ ಪದ್ರ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚಿನಲ್ಲಿ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮ

Thumbnail
Posted On: 30 Sep 2023, 08:57 PM

ಪಡುಬಿದ್ರಿ : ನಮ್ಮ ನಮ್ಮ ಮನೆಯಿಂದಲೇ ಸ್ವಚ್ಛ ತೆ ಬಗ್ಗೆ ಅರಿವು ಮೂಡಿಸುವ ಮೂಲಕ ಪ್ರತಿ ಮನೆಯೂ ,ಪರಿಸರವೂ ಸ್ವಚ್ಛ ಇಡುವುದು ನಮ್ಮ ಆದ್ಯ ಕರ್ತವ್ಯ ಎಂದು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಹೇಳಿದರು. ಅವರು ಜಿಲ್ಲಾಡಳಿತ ಉಡುಪಿ ಜಿಲ್ಲೆ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ, ಬ್ಲೂ ಫ್ಲಾಗ್ ಬೀಚ್ ಪಡುಬಿದ್ರಿ ಇದರ ವತಿಯಿಂದ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚಿನಲ್ಲಿ ಶನಿವಾರ ನಡೆದ "ಸ್ವಚ್ಛತಾ ಪಕ್ವಾಡ" ಸ್ವಚ್ಛತಾ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ನಮ್ಮ ದೇಶ ವಿಶ್ವಗುರು ಆಗುವ ಸಂದರ್ಭ ಕಾಣುತ್ತೇವೆ. ಸ್ವಚ್ಚತಾ ಕಾರ್ಯಕ್ರಮಗಳನ್ನು ಮಾಡಿ ಇತರರಿಗೆ ಮಾದರಿಯಾಗಬೇಕು. ಈ ಮೂಲಕ ದೇಶಕ್ಕೆ ನಮ್ಮ ಸೇವೆ ನೀಡಬೇಕು ಎಂದು ಕರೆಯಿತ್ತರು. ಕಾರ್ಯಕ್ರಮದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ಅಜಯ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್‌ ಸಿ.ಯು., ಪಡುಬಿದ್ರಿ ಪೋಲೀಸ್ ಠಾಣಾ ಅಪರಾಧ ವಿಭಾಗ ಉಪನಿರೀಕ್ಷಕ ಸುದರ್ಶನ್ ದೊಡ್ಮನೆ, ಅಶೋಕ್ ಸಾಲ್ಯಾನ್ ಉಪಸ್ಥಿತರಿದ್ದರು.

ಶಿರ್ವ : ನಾಪತ್ತೆ ಪ್ರಕರಣ - ಶಂಕರಪುರ ಬಿಳಿಯಾರು ನಿವಾಸಿ ಇಂದು ಪತ್ತೆ

Thumbnail
Posted On: 29 Sep 2023, 08:45 PM

ಕಾಪು : ತಾಲೂಕಿನ ಶಂಕರಪುರ ಬಿಳಿಯಾರು ನಿವಾಸಿ ಸುಮತಿ ಮೂಲ್ಯ ಗುರುವಾರ ನಾಪತ್ತೆಯಾಗಿರುವರು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಪ್ರಸಾರವಾಗಿದ್ದು, ಈ ಬಗ್ಗೆ ಅವರ ಪರಿಚಿತರು, ಕುಟುಂಬ ವರ್ಗ ಹುಡುಕಾಡಿದಾಗ ಸುಮತಿಯವರು ಅವರ ಮನೆಯ ಬಳಿ ಆರೋಗ್ಯವಾಗಿ ಸಿಕ್ಕಿರುತ್ತಾರೆ. ನಿನ್ನೆಯಿಂದ ಇಂದಿನವರಿಗೂ ನಮ್ಮ ಕುಟುಂಬದ ಜೊತೆಗೆ ಸಹಕರಿಸಿದ ಶಿರ್ವ ಆರಕ್ಷಕ ಠಾಣೆ ಹಾಗೂ ಮಿತ್ರರಿಗೂ ಸುಮತಿ ಮೂಲ್ಯ ಕುಟುಂಬದವರು ಧನ್ಯವಾದ ತಿಳಿಸಿರುವರು.

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆ ಸಾಧ್ಯತೆ

Thumbnail
Posted On: 29 Sep 2023, 08:31 PM

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು ಅಕ್ಟೋಬರ್ 1 ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ ವರೆಗೆ ಬಿರುಗಾಳಿ ಬೀಸಬಹುದು ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ. ಸಾರ್ವಜನಿಕರು ನದಿ/ನೀರಿರುವ ಪ್ರದೇಶ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ ಮರಗಳ ಹತ್ತಿರ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ

ಅಕ್ಟೋಬರ್ 1 : ಪಡುಬಿದ್ರಿ ಬಂಟರ ಸಂಘದಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ; ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Thumbnail
Posted On: 28 Sep 2023, 12:41 PM

ಪಡುಬಿದ್ರಿ : ಹಲವಾರು ಸಮಾಜಮುಖಿ ಸೇವೆಗಳನ್ನು ಮಾಡಿರುವ ಪಡುಬಿದ್ರಿ ಬಂಟರ ಸಂಘದಿಂದ ಬಂಟ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು ರೂ. 20 ಲಕ್ಷ ಸಹಾಯಧನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 1, ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು. ಅವರು ಪಡುಬಿದ್ರಿ ಬಂಟರ ಸಂಘದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುಮಾರು 350 ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆಯ ಜೊತೆಗೆ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ಸಮಾಜದ ವೃದ್ಧರಿಗೆ ಆಶ್ರಯವಾಗಬೇಕೆಂಬ ದೃಷ್ಟಿಯಿಂದ ಸುಮಾರು 6 ಎಕರೆ ಜಾಗದಲ್ಲಿ ಬಂಟಾಶ್ರಯ, ಕುಟುಂಬ ಸೇವಾಶ್ರಮ ವೃದ್ಧಾಶ್ರಮ ನಿರ್ಮಿಸುವ ಯೋಜನೆಗೆ ಚಾಲನೆ ಮತ್ತು ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎಲ್ಲಾ ಸಮಾಜದವರಿಗೂ ಅನುಕೂಲವಾಗುವಂತೆ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಚಾಲನೆ ನೀಡಲಾಗುವುದು ಎಂದರು. ಕಾರ್ಯಕ್ರಮವನ್ನು ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ ಆಳ್ವ ಉದ್ಘಾಟಿಸಲಿದ್ದು, ಹೇರಂಬ ಇಂಡಸ್ಟ್ರೀಸ್ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಕ್ರೆಡಿಟ್ ಕೋ ಆಪರೇಟಿವ್ ಗೆ ಚಾಲನೆ, ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಶಕ್ತರಿಗೆ ನೆರವು ವಿತರಣೆ, ಮುಂಬಯಿಯ ಉದ್ಯಮಿ ಎಲ್ಲೂರಿನ ಪ್ರವೀಣ ಭೋಜ ಶೆಟ್ಟಿಯವರಿಂದ ಬಂಟಾಶ್ರಯಕ್ಕೆ ಚಾಲನೆ, ಕೆ.ಎಮ್.ಇಂಡಸ್ಟ್ರೀಸ್ ಮಾಲಕರಾದ ಕೆ.ಎಂ ಶೆಟ್ಟಿಯವರಿಂದ ವಿಧ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಶಾಸಕರಾದ ಗುರ್ಮೆ ಸುರೇಶ ಶೆಟ್ಟಿಯವರಿಗೆ ಸಮಾಜದ ವತಿಯಿಂದ ಅಭಿನಂದನೆ ನಡೆಯಲಿದ್ದು, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿಯವರು ವಿವಿಧ ಗಣ್ಯರನ್ನು ಗೌರವಿಸಲಿದ್ದಾರೆ. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಮುಂಬೈ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ. ಸುರೇಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು. ಈ ಸಂದರ್ಭ ಸಿರಿಮುಡಿ ದತ್ತಿ ನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ವಿಭಾಗದ ನವೀನ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಜಯ ಶೆಟ್ಟಿ ಪದ್ರ ಉಪಸ್ಥಿತರಿದ್ದರು.

ಉಡುಪಿ : ಲಯನ್ಸ್, ಲಿಯೋ ಕ್ಲಬ್ ಮಲ್ಪೆ - ವಿಶ್ವ ಓಜೋನ್ ದಿನಾಚರಣೆ ; ಸಾಧಕರಿಗೆ ಅಭಿನಂದನೆ

Thumbnail
Posted On: 25 Sep 2023, 09:59 PM

ಉಡುಪಿ : ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ ವತಿಯಿಂದ ವಿಶ್ವ ಓಜೋನ್ ದಿನಾಚರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ರವಿವಾರ ಮಲ್ಪೆ ಗೋಪಾಲ್ ಸಿ ಬಂಗೇರ ಇವರ ಮನೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಹರಿನಾಥ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪೂರ್ವ ಗವರ್ನರುಗಳಾದ ಶಿವರಾಂ ಶೆಟ್ಟಿ ತಲ್ಲೂರು, ಶ್ರೀಧರ್ ಶೇಣವ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಹರಿನಾಥ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪೂರ್ವ ಗವರ್ನರುಗಳಾದ ಶಿವರಾಂ ಶೆಟ್ಟಿ ತಲ್ಲೂರು, ಶ್ರೀಧರ್ ಶೇಣವ ಭಾಗವಹಿಸಿ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಶಿಕ್ಷಕರಾದ ಗೋವಿಂದರಾಯ ನಾಯ್ಕ ದಂಪತಿಗಳನ್ನು ಮತ್ತು ಇಂಜಿನಿಯರ್ ರಂಜನ್ ಕೆ ಯವರನ್ನು ಗೌರವಿಸಲಾಯಿತು. ಆತಿಥ್ಯ ವಹಿಸಿದ ಗೋಪಾಲ್ ಸಿ ಬಂಗೇರ ಮತ್ತು ವಿಜಯ ಯುವ ಬಂಗೇರ ಅವರನ್ನು ಗುರುತಿಸಲಾಯಿತು.

ಕಾಪು : ರಾಜೇಶ್ ಕುಲಾಲ್ ಗೆ ಆರ್ಥಿಕ ನೆರವು : ಕಾಪು ಕುಲಾಲ ಯುವ ವೇದಿಕೆ , ಕಾಪು ಕುಲಾಲ ಸಂಘದಿಂದ ಸಹಾಯಹಸ್ತ

Thumbnail
Posted On: 25 Sep 2023, 09:51 PM

ಕಾಪು : ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆ‌ಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳ ಬೆಂಬಲದಿಂದ ಒಟ್ಟುಗೂಡಿದ ರೂ.75,000 ಸಹಾಯಧನವನ್ನು ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ, ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸತೀಶ್ ಕುಲಾಲ್ ಕಡಿಯಾಳಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ, ನಿವೃತ್ತ ಸೈನಿಕ ಬಾಲಕೃಷ್ಣ ಭಂಡಾರಿ, ಬೊಗ್ಗು ಮೂಲ್ಯ ಬೇಲಾಡಿ, ಶಂಕರ ಮೂಲ್ಯ ಬೇಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಸುಮಂತ್ ಕುಲಾಲ್ ಪಾದೂರು, ರವೀಂದ್ರ ಕುಲಾಲ್ ಪಣಿಯೂರು, ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ, ಮಹೇಶ್ ಕುಲಾಲ್ ಬೇಲಾಡಿ, ಸತೀಶ್ ಕುಲಾಲ್ ಉಳಿಯಾರು, ಜಿಲ್ಲಾ ಕುಲಾಲ ಸಂಘಟನೆಗಳು, ದಾನಿಗಳು ಉಪಸ್ಥಿತರಿದ್ದರು. ನೆರವು ನೀಡುವವರು ರಾಜೇಶ್ ಕುಲಾಲ್ ಅವರ ಪತ್ನಿ ವಿನೋದ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು. ಬ್ಯಾಂಕ್ ಖಾತೆ ಮಾಹಿತಿ ಹೀಗಿದೆ: Contact Number::9008559310 Google pay number 9008559310 Bank detail CANARA BANK Mudharangadi. NAME: Vinoda A/c number: 110106025209 IFSC: CNRB0000638.

ಪೆರಂಪಳ್ಳಿಯ ಶರೀನಾರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ

Thumbnail
Posted On: 25 Sep 2023, 04:52 PM

ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ 'ಮಿಸ್ಟರ್ & ಮಿಸ್ ಟೀನ್ ಕರ್ನಾಟಕ' ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ ದೊರಕಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ ಶರೀನಾರವರಿಗೆ ಪ್ರತಿಷ್ಠಿತ ಟೈಟಲ್ ಪ್ರಶಸ್ತಿ ದೊರಕಿದ್ದು, ಫ್ಯಾಶನ್ ಮಾಡೆಲಿಂಗ್ ನ ಪ್ರಥಮ ಹೆಜ್ಜೆಯಲ್ಲಿಯೇ ಯಶಸ್ವಿಯ ಮೈಲುಗಲ್ಲು ಇಟ್ಟಿದ್ದಾರೆ. ಪೆರಂಪಳ್ಳಿಯ ಸುನಿಲ್ ಮತ್ತು ಅನಿತಾ ಮತಾಯಸ್ ದಂಪತಿಗಳ ಮಗಳಾಗಿರುವ ಶರೀನಾ ಮತಾಯಸ್ ಪ್ರತಿಭಾವಂತೆಯಾಗಿದ್ದು, ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪೆರಂಪಳ್ಳಿಯ ಫಾತಿಮಾ ಮಾತೆ ದೇವಾಲಯದ ಐಸಿವೈಎಂ ಯುವ ಸಂಘಟನೆಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಪಡುಬಿದ್ರಿ : ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Thumbnail
Posted On: 25 Sep 2023, 04:34 PM

ಪಡುಬಿದ್ರಿ : ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೋಮವಾರ ಪಡುಬಿದ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ ಅವರ ನಿವಾಸದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ನಡೆಯಿತು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಗಣ್ಯರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಧೀರಜ್ ಮತ್ತಿತರರು ಉಪಸ್ಥಿತರಿದ್ದರು.

ಪಡುಕುತ್ಯಾರು : ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ

Thumbnail
Posted On: 24 Sep 2023, 06:40 PM

ಪಡುಕುತ್ಯಾರು : ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಸಮಾಜದಲ್ಲಿ ಶಕ್ತಿ ಸಂಸ್ಕಾರವನ್ನು ಕೊಡುವ ಮೂಲಕ ಸಮಾಜವನ್ನು ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಆ ಕಾರಣದಿಂದಾಗಿ ನಮ್ಮ ಮಠ ಮಂದಿರಗಳು, ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ಗುರುಗಳು, ನಮ್ಮ ಸಂಸ್ಕಾರದ ಕಾರಣದಿಂದ ಉನ್ನತಿಯನ್ನು ಸಾಸುತ್ತಿರುವ ನಮ್ಮ ದೇಶಕ್ಕೆ ಪ್ರಾಪಂಚಿಕವಾಗಿ ಗೌರವ ಸಲ್ಲುತ್ತಿದೆ. ಹಾಗಾಗಿ ಮಕ್ಕಳಲ್ಲೂ ಧಾರ್ಮಿಕ ಶ್ರದ್ಧೆ, ಸಂಸ್ಕಾರ, ಸಂಸ್ಕೃತಿಯನ್ನು ತುಂಬುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಭದ್ರ ಧಾರ್ಮಿಕ ತಳಹದಿಯನ್ನು ಹಾಕಿ ಕೊಡೋಣ ಎಂದು ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಹೇಳಿದರು. ಅವರು ಭಾನುವಾರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ವೀಕ್ಷಣೆ ನಡೆಸಿ ಬಳಿಕ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆಯನ್ನು ಪಡೆದು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಯಡಿ ಮೊದಲ ಬಾರಿ ವಿಶ್ವ ನಿರ್ಮಾಣ ಕರ್ತೃ ವಿಶ್ವಕರ್ಮರ ಹೆಸರು ಪ್ರಥಮ ಬಾರಿಗೆ ಜೋಡಣೆಯಾಗಿದೆ. ಮೊದಲ ಹಂತದಲ್ಲಿ 13,000 ಕೋಟಿ ರೂ. ಕಾರ್ಯಕ್ರಮ ಇದಾಗಿದೆ. ವಂಶವಾಹಿನಿಯಾಗಿ ಕರಗತವಾಗಿರುವ ಕುಲಕಸುಬಿನಲ್ಲಿ ಶ್ರಮ ಕಡಿಮೆ ಮಾಡಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಸೂಕ್ತ ತರಬೇತಿ ಪಡೆದು ಸೂಕ್ಷ್ಮ ಆಕರ್ಷಣೀಯ ಕೆಲಸಗಳ ಮೂಲಕ ವಿದೇಶಿಗರ ಬೇಡಿಕೆಯ ಮಟ್ಟದ ಉತ್ಪನ್ನಗಳು ಲಾಭದಾಯಕವಾಗಲಿದೆ. ವೇದಾಧ್ಯಯನದ ಮೂಲಕ ಸಂಸ್ಕಾರವನ್ನು ಕೊಡುವ ವಿಶ್ವಬ್ರಾಹ್ಮಣ ಸಮಾಜದ ಜೊತೆ ನಾವಿದ್ದೇವೆ. ಧ್ವನಿ ಇಲ್ಲದ ಸಮಾಜಕ್ಕೆ ಧ್ವನಿ ನೀಡುವ ಕೆಲಸ ನಮ್ಮ ಸರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಮತ್ತಷ್ಟು ಅಭಿವೃದ್ಧಿ ಯೋಜನೆಗಳ ಸಾಕಾರಕ್ಕೆ ನಿಮ್ಮೆಲ್ಲರ ಆಶೀರ್ವಾದ ಮತ್ತೆ ನಮಗಿರಲಿ ಎಂದರು. ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇಶದ ಸಂಸ್ಕಾರಕ್ಕೆ ವಿಶ್ವ ತಲೆ ಬಾಗುತ್ತಿದೆ. ಸಂಸ್ಕಾರದ ಸ್ಪರ್ಶದಿಂದ, ಆಧ್ಯಾತ್ಮದ ಚಿಂತನೆಯಿಂದ ದೇಹವೇ ದೇವಾಲಯವಾಗುತ್ತದೆ. ಧರ್ಮಪರ ಚಿಂತನೆಯನ್ನು ಮಾಡುವ ವಿಶ್ವಬ್ರಾಹ್ಮಣ ಸಮಾಜದ ಗುರುಗಳಾದ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಸಮಸ್ತ ಹಿಂದೂ ಧರ್ಮ ಒಪ್ಪಿಕೊಂಡಿದೆ, ಅಪ್ಪಿಕೊಂಡಿದೆ ಎಂದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ, ಧಾರ್ಮಿಕ ಶಕ್ತಿಯೇ ನಮ್ಮ ಅಭಿವೃದ್ಧಿ ಏಳಿಗೆಯ ಮೂಲ ಮಂತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ, ಸಮಾಜಕ್ಕಾಗಿ ನಡೆಸಿದ ಚಾಕಚಕ್ಯತೆ, ಕಾರ್ಯದಕ್ಷತೆ, ದೂರದೃಷ್ಟಿತ್ವದ ಯೋಜನೆಗಳ ಬಗ್ಗೆ ಹೆಮ್ಮೆ ಇದೆ. ಹಲವು ಸಂತರ ತಪಸ್ಸಿನ ಫಲದಿಂದ ಮನಸ್ಸಿಗೆ ಕಾವಿಯನ್ನು ತೊಟ್ಟಂತಹ ಪ್ರಧಾನ ಮಂತ್ರಿ ನಮ್ಮ ದೇಶಕ್ಕೆ ಒದಗಿದ್ದಾರೆ. ಆರಾಧ್ಯಮೂರ್ತಿ ವಿಶ್ವಕರ್ಮ ದೇವರ ಹೆಸರಿನ ವಿಶ್ವಕರ್ಮ ಯೋಜನೆಯನ್ನು ಅನಾವರಣಗೊಳಿಸಿದ್ದಾರೆ. ಕುಸುರಿ ಕೆಲಸದ ವೈಶಿಷ್ಟ್ಯತೆಯೊಂದಿಗೆ ಪರಂಪರೆಯನ್ನು ಉಳಿಸುವ ಪ್ರಧಾನಿಯವರ ಈ ಯೋಜನೆಯಡಿ ವಿಶ್ವಬ್ರಾಹ್ಮಣರ ಪಂಚಕಸುಬುಗಳಿಗೆ ಒಳಮೀಸಲಾತಿ ನೀಡಬೇಕಿದೆ. ಶೂನ್ಯ ಬಡ್ಡಿದರದ ಸಾಲ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದ್ದು, ಪರಂಪರೆಯ ಶಿಲ್ಪವನ್ನು ವಿದೇಶಿಗರ ಬೇಡಿಕೆಗೆ ಅನುಗುಣವಾಗಿ ಸಿದ್ಧಪಡಿಸಲು ಅಸಾಧ್ಯವಾಗಿದ್ದು, ಆಧುನಿಕ ಶಿಲ್ಪಗಳ ಮೂಲಕ ವಿದೇಶೀಗರ ಆಕರ್ಷಣೀಯ ಉತ್ಪನ್ನಗಳ ಸಿದ್ಧಪಡಿಸಲು ಯೋಜನೆಯನ್ನು ಬಳಸಿಕೊಳ್ಳಲು ಸಾಧ್ಯವಿದೆ. ಭಾರತದ ಪ್ರವಾಸೋದ್ಯಮ ಇಲಾಖೆಗೆ ಬರುವ ವಿದೇಶೀ ಆದಾಯದ ಶೇ.90 ಪಾಲು ವಿಶ್ವ ಬ್ರಾಹ್ಮಣರ ಶಿಲ್ಪಿಗಳ ಕೊಡುಗೆಯಿಂದ ಸಾಧ್ಯವಾಗಿದೆ ಎಂದರು. ಮಹಾಸಂಸ್ಥಾನದ ವತಿಯಿಂದ ಹಾಗೂ ಮಾತೃಮಂಡಳಿ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು. ಆನೆಗುಂದಿ ಪ್ರತಿಷ್ಠಾನ ಮತ್ತು ಚಾತುರ್ಮಾಸ್ಯ ನಿರ್ವಹಣಾ ಸಮಿತಿ ಅಧ್ಯಕ್ಷರಾದ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗೀತಾಂಜಲಿ ಎಂ.ಸುವರ್ಣ, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಎಸ್. ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಯು. ಶೆಟ್ಟಿ, ಕುತ್ಯಾರು ಗ್ರಾ.ಪಂ. ಅಧ್ಯಕ್ಷರಾದ ಜನಾರ್ದನ ಆಚಾರ್ಯ, ಮಾಜಿ ಅಧ್ಯಕ್ಷೆ ಲತಾ ಎಸ್. ಆಚಾರ್ಯ, ಕೃಷಿ ಅಧಿಕಾರಿ ಮೋಹನ್ರಾಜ್, ಪ್ರತಿಷ್ಠಾನದ ಕೋಶಾಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷರಾದ ಬಿ. ಸೂರ್ಯಕುಮಾರ್ ಹಳೆಯಂಗಡಿ, ಮಾತೃ ಮಂಡಳಿ ಅಧ್ಯಕ್ಷರಾದ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಆನೆಗುಂದಿ ಮೂಲ ಮಠದ ಅಧ್ಯಕ್ಷ ದಿನೇಶ್ ಆಚಾರ್ಯ ಪಡುಬಿದ್ರಿ, ಗುರುಸೇವಾ ಪರಿಷತ್ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಗೋವು ಟ್ರಸ್ಟ್ನ ದಿನೇಶ್ ಆಚಾರ್ಯ ಕಿನ್ನಿಗೋಳಿ , ವಿವೇಕ ಆಚಾರ್ಯ ಮಂಚಕಲ್, ಜಯಕರ ಆಚಾರ್ಯ ಕರಂಬಳ್ಳಿ, ರತ್ನಾಕರ ಆಚಾರ್ಯ ಉದ್ಯಾವರ, ಮಾತೃಮಂಡಳಿಯ ರಮಾ ನವೀನ್ ಕಾರ್ಕಳ, ಕವಿತಾ ಹರೀಶ್ ಕಾರ್ಕಳ, ದೀಪಾ ಸುರೇಶ್ ಕಟಪಾಡಿ, ಗೀತಾ ಚಂದ್ರ ಕಾರ್ಕಳ, ಗುರುರಾಜ್ ಕೆ.ಜೆ., ರಾಘವೇಂದ್ರ ಆಚಾರ್ಯ ಉಡುಪಿ, ಹರೀಶ್ ಆಚಾರ್ಯ ಕಾರ್ಕಳ, ಹರೀಶ್ ಆಚಾರ್ಯ ಹರೇಕಳ, ಜಗದೀಶ್ ಆಚಾರ್ಯ ತೊಕ್ಕೊಟ್ಟು, ಯೋಗೀಶ್ ಆಚಾರ್ಯ ಮುಡಿಪು, ಉಳ್ಳಾಲ ಮಂಜೇಶ್ವರ ಪೇಟೆ ಕೂಡುವಳಿಕೆಯವರು, ಗುರುಸೇವಾ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಶ್ರೀ ನಾಗಧರ್ಮೇಂದ್ರ ಸರಸ್ವತಿ ವೇದ ಸಂಜೀವಿನಿ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಿತು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.