Updated News From Kaup
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ಸಮಾಲೋಚನಾ ಸಭೆ
Posted On: 05 Oct 2023, 09:46 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಶಾಸಕರು, ಉದ್ಯಮಿಗಳು, ಗಣ್ಯರ ಸಮಾಲೋಚನಾ ಸಭೆಯು ಅಕ್ಟೋಬರ್ 3 ರಂದು ಮಾರಿಗುಡಿಯ ನವದುರ್ಗಾ ಮಂಟಪದಲ್ಲಿ ನಡೆಯಿತು. ಗಣ್ಯ ಮಹಿಳೆಯರಾದ ನಿರುಪಮಾ ಪ್ರಸಾದ್, ಸ್ವಪ್ನ ಸುರೇಶ್, ವಿಜಯ ಗೋಪಾಲ ಬಂಗೇರ, ಕವಿತ ಹರೀಶ್, ಬೇಬಿ ಕುಂದರ್, ಅಮೃತಾ ಕೃಷ್ಣ ಮೂರ್ತಿ, ಸ್ವರೂಪ ಶೆಟ್ಟಿ, ಮೀನಾ ಅಡ್ಯಂತಾಯ, ರೂಪಾ ಶೋಧನ್ ಶೆಟ್ಟಿ ಸಮಾಲೋಚನಾ ಸಭೆಯನ್ನು ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಉದ್ಘಾಟಿಸಿದರು. ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಅವರ ನೇತೃತ್ವದಲ್ಲಿ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ದರ್ಶನ ಸೇವೆಯಲ್ಲಿ ಅಭಯ ಪ್ರಸಾದ ನೀಡಲಾಯಿತು. ನಂತರ ಸಂಪೂರ್ಣ ಇಳಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಹೊಸ ಮಾರಿಗುಡಿ, ಉಚ್ಚಂಗಿ ಗುಡಿ ಸಹಿತವಾಗಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮುಂದಿನ 1200 ವರ್ಷಗಳವರೆಗೆ ಬಾಳಿಕೆ ಬರುವಂತಹ ಇಳಕಲ್ ಶಿಲೆಯನ್ನು ಬಳಸಿಕೊಂಡು ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಜೀರ್ಣೋದ್ಧಾರಕ್ಕೆ ಎಲ್ಲೆಡೆ ಉತ್ತಮ ಸ್ಪಂದನೆ ದೊರಕುತ್ತಿದೆ. ಪ್ರಪಂಚದ 18 ದೇಶಗಳಲ್ಲಿ ಸಮಿತಿ ರಚಿಸಲಾಗಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಮಿತಿ ರಚಿಸಲು ಒತ್ತು ನೀಡಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು. ಜಿಲ್ಲೆಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ, ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಗಣ್ಯರಾದ ಜೆರ್ರಿ ವಿನ್ಸೆಂಟ್ ಡಯಾಸ್, ಬಿ.ಎನ್. ಶಂಕರ ಪೂಜಾರಿ, ಜಯ ಸಿ. ಕೋಟ್ಯಾನ್, ಗೋಪಾಲ್ ಬಂಗೇರ, ರಮೇಶ್ ಕಾಂಚನ್, ಜನಾರ್ದನ ತೋನ್ಸೆ, ಅಶೋಕ್ ಶೆಟ್ಟಿ, ಪಿ. ಕಿಶನ್ ಹೆಗ್ಡೆ, ಅಜಯ್ ಪಿ. ಶೆಟ್ಟಿ, ವಿ.ಜಿ. ಶೆಟ್ಟಿ, ಮೋಹನಚಂದ್ರ ನಂಬಿಯಾರ್, ನವೀನ್ ಅಡ್ಯಂತಾಯ, ದಿವಾಕರ್ ಸನಿಲ್, ಶೋಧನ್ ಕುಮಾರ್ ಶೆಟ್ಟಿ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ವಾಗ್ಧಾನ ನೀಡಿದರು. ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಟಿ, ನಾಗೇಶ್ ಹೆಗ್ಡೆ, ಸಾಧು ಸಾಲ್ಯಾನ್, ಆನಂದ್ ಕುಂದರ್, ಮಟ್ಟಾರು ರತ್ನಾಕರ್ ಹೆಗ್ಡೆ, ಜಯಕರ್ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೊನ್ಸೆ, ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ಹೆಬ್ರಿ, ಕಿರಣ್ ಕುಮಾರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸುಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ, ಸುರೇಶ್ ಶೆಟ್ಟಿ ಉಡುಪಿ, ಉದಯ ಶೆಟ್ಟಿ ಇನ್ನ, ಶ್ರೀಪತಿ ಭಟ್, ಸುಧಿರ್ ಶೆಟ್ಟಿ, ಕೀರ್ತಿ ಅಂಬಲಪಾಡಿ, ರಾಮದಾಸ್ ಶೆಟ್ಟಿಗಾರ್, ಸುರೇಂದ್ರ ಪಣಿಯೂರು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ರೇಷ್ಮಾ ಯು. ಶೆಟ್ಟಿ, ವಿವಿಧ ಸಮುದಾಯ ಮತ್ತು ರಾಜಕೀಯ ಪಕ್ಷಗಳ ಮುಖಂಡರು, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಮನೋಹರ ಶೆಟ್ಟಿ, ಮಾಧವ ಆರ್. ಪಾಲನ್, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಜಿ. ಲೀಲಾಧರ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ, ರಮೇಶ್ ಶೆಟ್ಟಿ ಕಾಪು ಕೊಲ್ಯ, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ್ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಆರ್ಥಿಕ ಸಮಿತಿಯ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು. ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ - ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನಾ ಸಭೆ
Posted On: 05 Oct 2023, 09:30 PM
ಕಾಪು : ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ಬ್ರಹ್ಮಾವರ ಇದರ ಹಳೆ ಸಾಮಾಗ್ರಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುವುದರ ಮೂಲಕ ಅವ್ಯವಹಾರ ನಡೆಸಿ ಕಾರ್ಖಾನೆಯ ಸದಸ್ಯರಿಗೆ ಮತ್ತು ರೈತರಿಗೆ ವಂಚಿಸಿರುವ ಆಡಳಿತ ಮಂಡಳಿಯ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಎಲ್ಲಾ ಬ್ಲಾಕ್ ಸಮಿತಿಗಳ ಸಹಭಾಗಿತ್ವದಲ್ಲಿ ಅಕ್ಟೋಬರ್ 9, ಸೋಮವಾರ ಬೆಳಿಗ್ಗೆ 10 ಗಂಟೆಗೆ, ಬ್ರಹ್ಮಾವರ - ಸಕ್ಕರೆ ಕಾರ್ಖಾನೆಯ ಎದುರು ಬೃಹತ್ ಪ್ರತಿಭಟನಾ ಸಭೆ ಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಕಾಪು ಕಾಂಗ್ರೆಸ್ ಪಕ್ಷದ ಉಭಯ ಬ್ಲಾಕ್ ಸಮಿತಿಗಳ ಅಧ್ಯಕ್ಷರುಗಳು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಬೆಳಪು : ಈಜಲು ತೆರಳಿದ್ದ ಬಾಲಕ ಸಾವು ; ಮೂವರ ರಕ್ಷಣೆ
Posted On: 05 Oct 2023, 08:28 PM
ಬೆಳಪು : ಇಲ್ಲಿನ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ಘಟಿಸಿದೆ. ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ ವಿಶ್ವಾಸ್ (11) ಎಂದು ಗುರುತಿಸಲಾಗಿದೆ. ಈತ ಇನ್ನಂಜೆ ಶಾಲೆಯ ವಿದ್ಯಾರ್ಥಿ. ವಿಶ್ವಾಸ್ ನಾಲ್ವರೊಂದಿಗೆ ಔದ್ಯೋಗಿಕ ನಗರದಲ್ಲಿ ನೀರು ತುಂಬಿದ್ದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದರು. ತೀವ್ರ ಅಸ್ವಸ್ಥಗೊಂಡ ವಿಶ್ವಾಸ್ ನನ್ನು ಸ್ಥಳೀಯರಾದ ಜಹೀರ್ ಅಹ್ಮದ್ ಬೆಳಪು, ಉಚ್ಚಿಲದ ಜಲಾಲ್, ಹಂಝ, ಮೋಹಿಯುದ್ದೀನ್, ಶಾಹಿದ್ ರವರು ತುರ್ತಾಗಿ ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾನೆ. ಮೃತ ಶರೀರವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು : ಕಳತ್ತೂರು ಫ್ರೆಂಡ್ಸ್ ವತಿಯಿಂದ ವೀಲ್ ಚೇರ್, ಔಷಧಿ ವೆಚ್ಚ ಹಸ್ತಾಂತರ
Posted On: 04 Oct 2023, 07:54 PM
ಕಾಪು : ಕಳತ್ತೂರು ಫ್ರೆಂಡ್ಸ್ ವತಿಯಿಂದ ಸಮಾಜ ಸೇವಾರ್ಥ ನಡೆದ ಪ್ರಥಮ ವರ್ಷದ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದಲ್ಲಿ ಅನಾರೋಗ್ಯ ಪೀಡಿತರಾದ ಅದಮಾರಿನ ರಾಜೇಶ್ ಕುಲಾಲ್ ಅವರಿಗೆ ವೀಲ್ ಚೇರ್ ಮತ್ತು ಅವರ ಒಂದು ತಿಂಗಳ ಔಷಧಿಯ ವೆಚ್ಚವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಕಳತ್ತೂರು ಫ್ರೆಂಡ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.
ಕಾಪು : ಅಲೆವೂರು ಪ್ರಗತಿ ನಗರಕ್ಕೆ ಕಾಪು ಶಾಸಕರ ಭೇಟಿ ; ಅಹವಾಲು ಸ್ವೀಕಾರ
Posted On: 04 Oct 2023, 07:46 PM
ಕಾಪು : ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿ ನಗರಕ್ಕೆ ಬುಧವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಜನರ ಕುಂದು ಕೊರತೆಯನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ರಸ್ತೆ ನಿರ್ಮಾಣ ಹಾಗೂ ನಿವೇಶನ, ಹಕ್ಕುಪತ್ರ ಸಮಸ್ಯೆ ಬಗ್ಗೆ ಸ್ಥಳೀಯರು ಶಾಸಕರಿಗೆ ಅಹವಾಲು ನೀಡಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾದ ಶೇಖರ ಆಚಾರ್ಯ, ಅವಿನಾಶ್ ಶೆಟ್ಟಿಗಾರ್, ಆಶೀಶ್, ಅಕ್ಷಯ ಎಂಟರ್ಪ್ರೈಸಸ್ ಅರವಿಂದ ನಾಯಕ್, ಬೂತ್ ಅಧ್ಯಕ್ಷರಾದ ಮಂಜು ಉಪಸ್ಥಿತರಿದ್ದರು.
ಬೋಳ ಕುಲಾಲ ಸಂಘ ಹಾಗೂ ನಾನಿಲ್ತಾರು ಕುಲಾಲ ಸಂಘದಿಂದ ವೈದ್ಯಕೀಯ ನೆರವು
Posted On: 04 Oct 2023, 07:39 PM
ಕಾರ್ಕಳ : ಇಲ್ಲಿನ ಭಾರತಿ ಕುಲಾಲ್ ಇವರಿಗೆ ಬೋಳ ಕುಲಾಲ ಸಂಘದ ವತಿಯಿಂದ ಸಂಗ್ರಹಗೊಂಡ ರೂ. 27 ಸಾವಿರ ಹಾಗೂ ನಾನಿಲ್ತಾರ್ ಕುಲಾಲ ಸಂಘದ ವತಿಯಿಂದ ರೂ. 3 ಸಾವಿರದ ಚೆಕ್ ನ್ನು ಭಾರತಿ ಅವರ ವೈದ್ಯಕೀಯ ಚಿಕಿತ್ಸೆಗೆ ನೀಡಲಾಯಿತು. ಹಸ್ತಾಂತರ ಸಂದರ್ಭದಲ್ಲಿ ಕುಲಾಲ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ : ಗ್ರಾಮೀಣ ಅಂಚೆ ನೌಕರರ ಮುಷ್ಕರ
Posted On: 04 Oct 2023, 07:36 PM
ಉಡುಪಿ : ಗ್ರಾಮೀಣ ಅಂಚೆ ನೌಕರರ ಕೆಂದ್ರ ಜಂಟಿ ಕ್ರಿಯಾ ಸಮಿತಿ ಕರೆಯಂತೆ ನಡೆದ ರಾಷ್ಟ್ರವ್ಯಾಪಿ ಮುಷ್ಕರದ ಅಂಗವಾಗಿ ಉಡುಪಿಯಲ್ಲಿ ಇಂದು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರಿಂದ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಒಂದು ದಿನದ ಸಾಂಕೇತಿಕ ಮುಷ್ಕರ ಉಡುಪಿ ಪ್ರದಾನ ಅಂಚೆ ಕಚೇರಿಯ ಎದುರು ನಡೆಯಿತು.ಈ ಮುಷ್ಕರದಲ್ಲಿ ಉಡುಪಿ ಅಂಚೆ ವಿಭಾಗದ ವಿವಿಧ ಅಂಚೆ ಕಚೇರಿಗಳಿಂದ ಆಗಮಿಸಿದ ಗ್ರಾಮೀಣ ಅಂಚೆ ನೌಕರರು ಮುಷ್ಕರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ರಾಷ್ಟ ವ್ಯಾಪಿ ನಡೆದ ಈ ಮುಷ್ಕರಕ್ಕೆ ರಾಷ್ಟ್ರೀಯ ಅಂಚೆ ನೌಕರರ ಸಂಘದ ಗ್ರೂಪ್ ಸಿ, ಪೋಸ್ಟ್ ಮ್ಯಾನ್ -ಎಂಟಿಎಸ್ ಸಂಘಗಳು ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಂಡಿತು.ಇದೇ ಸಂದರ್ಭದಲ್ಲಿ ಮುಷ್ಕರದ ಬೇಡಿಕೆಗಳ ಮನವಿಯನ್ನು ಮಾನ್ಯ ಉಡುಪಿ ಅಂಚೆ ಅಧೀಕ್ಷಕರಿಗೆ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಅಂಚೆ ಅಧೀಕ್ಷಕರು ಶುಭ ಕೋರಿದರು. ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ಪ್ರಮುಖ ನಾಯಕರುಗಳಾದ ಸುರೇಶ್.ಕೆ., ಪುಷ್ಪ ರಾಜ್, ಸುಭಾಸ್ ತಿಂಗಳಾಯ,ಎನ್.ಎ.ನೇಜಾರ್, ಗಿಲ್ಬರ್ಟ್ ಲೊಬೊ, ಗುರುಪ್ರಸಾದ್, ಪ್ರಶಾಂತ್ ಇವರುಗಳ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಉಡುಪಿ ವಿಭಾಗೀಯ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ಕೇರಾಡಿ ಇವರ ನೇತೃತ್ವದಲ್ಲಿ ಮುಷ್ಕರ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಕಳತ್ತೂರು ಬಿ.ದಿವಾಕರ ಶೆಟ್ಟಿ, ಆನಂದ ಮರಕಾಲ ಮಂದಾರ್ತಿ, ಬಿ.ಸುರೇಶ ಸೇರಿಗಾರ್ ಬ್ರಹ್ಮಾವರ, ಶಂಕರ ಶೆಟ್ಟಿ ಹೆಸ್ಕುತ್ತೂರು, ಕಿಟ್ಟುಕುಮಾರ್ ಅವ್ರಾಲ್, ಅಶೋಕ ಕುಲಾಲ್ ಹೆಜಮಾಡಿ, ಪಿ.ಸುಬ್ರಾಯ ಪೈ ಪಡು ಎರ್ಮಾಳ್, ಪ್ರದೀಪ್ ಶೆಟ್ಟಿ ಕೆಮುಂಡೇಲ್,ನಿತ್ಯಾನಂದ ರಾವ್ ಸೈಬ್ರಕಟ್ಟೆ, ಸುರೇಶ್ ಪೈ ಕೆಂಜೂರು, ಬಿ ಪಾಂಡು ಚಾಂತಾರು, ಭಾಸ್ಕರ ಕಾಮತ್ ವಂಡಾರು, ಬಾಬಣ್ಣಪೂಜಾರಿ ವಂಡಾರು, ಕೇಶವ ಶೆಟ್ಟಿಗಾರ್ ಮಂದಾರ್ತಿ, ಕೇಶವ ಆಚಾರಿ ಹನೆಹಳ್ಳಿ,ಎನ್, ಭಾಸ್ಕರ ಕುಂಜಿಬೆಟ್ಟು, ಸುಹಾಸಿನಿ ಕೋಡಿಬೆಂಗ್ರೆ, ಸಲೋಚನ ಹನೆಹಳ್ಳಿ, ಜಯ ಚಾಂತಾರು, ರಕ್ಷಿತ ಹೇರೂರು ಮತ್ತಿತರು ಉಪಸ್ಥಿತರಿದ್ದರು.
ಕಾಪು : ರಸ್ತೆ ಬದಿ ಪೈಪ್ ಲೈನ್ ಅಳವಡಿಕೆ - ಬಸ್ಸು ಬಾರದೆ ಸಂಕಷ್ಟ
Posted On: 04 Oct 2023, 07:29 PM
ಕಾಪು : ಇಲ್ಲಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಕಳತ್ತೂರು ಭಾಗದಲ್ಲಿ ಬಸ್ಸಿನ ಮೂಲಕ ಕಾಪು, ಉಡುಪಿ ಇನ್ನಿತರ ಕಡೆಗೆ ಉದ್ಯೋಗ ನಿಮಿತ್ತ ತೆರಳುವವರು ಕಳೆದ 3 ದಿನದಿಂದ ಬಸ್ಸಿನಲ್ಲಿ ಹೋಗಲು ಬೆಳಪು ಕಡೆಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಸಂಬಂಧ ಪಟ್ಟ ಇಲಾಖೆಯವರು ಬೇಗನೆ ತಮ್ಮ ಕೆಲಸ ಮುಗಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಲಿಮಾರು ಸರ್ಕಾರಿ ಪದವಿ ಪೂರ್ವ ಕಾಲೇಜು - ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
Posted On: 04 Oct 2023, 06:50 PM
ಪಲಿಮಾರು : ಮಾದಕ ದ್ರವ್ಯಗಳನ್ನು ಸೇವಿಸುವವರಿಗಲ್ಲ, ವ್ಯಾಪಾರಿಗಳಿಗೆ ಮಾತ್ರ ಲಾಭವಾಗಿದೆ ಎಂಬುದಾಗಿ ಪಡುಬಿದ್ರಿ ಆರಕ್ಷಕ ಠಾಣೆಯ ಉಪ ಠಾಣಾಧಿಕಾರಿ ಸುರೇಶ್ ಅವರು ಅಭಿಪ್ರಾಯಪಟ್ಟರು. ಸರ್ಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ವಿಧ್ಯಾರ್ಥಿಗಳಿಗೋಸ್ಕರ ನಡೆದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಾದಕ ದ್ರವ್ಯಗಳ ವಿವಿಧ ನಮೂನೆಗಳು, ಅವುಗಳ ಸೇವನೆಯಿಂದ ಆಗುವ ವೈಯಕ್ತಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳು,ಅವುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಇರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಿದರು. ಮತ್ತೋರ್ವ ಸಹಾಯಕ ಠಾಣಾಧಿಕಾರಿ ದಿವಾಕರ್ ಮಾತನಾಡಿ ಯುವಜನರಲ್ಲಿ ಇಂದು ಮಾದಕ ದ್ರವ್ಯಗಳ ಸೇವನೆ ಹೆಚ್ಚಾಗುತ್ತಿದೆ. ಪೋಷಕರು, ತಮ್ಮ ಮಕ್ಕಳು ಕಲಿತು ಒಳ್ಳೆಯ ಭವಿಷ್ಯವನ್ನು ರೂಪಿಸಬೇಕು ಎಂದು ಕೇಳಿದ್ದನ್ನೆಲ್ಲಾ ಒದಗಿಸಲು ಪ್ರಯತ್ನ ಪಡುತ್ತಾರೆ. ಆದರೆ ಮಕ್ಕಳು ಪೋಷಕರ ಗಮನಕ್ಕೆ ಬಾರದ ಹಾಗೆ ದಾರಿ ತಪ್ಪುತ್ತಿದ್ದಾರೆ. ವಿಧ್ಯಾರ್ಥಿ ಜೀವನದಲ್ಲಿ ಸಮಯದ ಸದುಪಯೋಗ ಮಾಡಿಕೊಂಡು, ಈ ಭಾಗದವರು ಸರ್ಕಾರಿ ಸೇವೆಗಳಿಗೆ ಸೇರಲು ಹೆಚ್ಚಿನ ಆಸಕ್ತಿ ತೋರಿಸಬಹುದು ಎಂಬುದಾಗಿ ಕರೆಕೊಟ್ಟರು. ಸಹಶಿಕ್ಷಕ ಪ್ರಸನ್ನ, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಜ್ಯೋತಿ ವಂದಿಸಿದರು.
ಕಾಪು : ಉದ್ದ ಜಿಗಿತದಲ್ಲಿ ರಾಷ್ಟಮಟ್ಟಕ್ಕೆ ಆಯ್ಕೆಯಾದ ಸುಶಾನ್ ಸುವರ್ಣರನ್ನು ಅಭಿನಂದಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Posted On: 02 Oct 2023, 07:07 PM
ಕಾಪು : ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉದ್ದ ಜಿಗಿತದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಕಾಪು ವಿಧಾನಸಭಾ ಕ್ಷೇತ್ರದ ಬೆಳ್ಳಂಪಳ್ಳಿ ನಿವಾಸಿ ಸುಶಾನ್ ಸುವರ್ಣ ಅವರನ್ನು ಮಹಾಲಕ್ಷ್ಮಿ ಭಜನಾ ಮಂಡಳಿಯಲ್ಲಿ ಅಕ್ಟೋಬರ್ 2 ರಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳ್ಳಂಪಳ್ಳಿ ಮೋಗವೀರ ಗ್ರಾಮಸಭಾ ಅಧ್ಯಕ್ಷರಾದ ಸುಧಾಕರ್ ಕಾಂಚನ್, ಮಹಾಲಕ್ಷ್ಮಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕಾಂಚನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ, ಬೆಳ್ಳಂಪಳ್ಳಿ ಮೋಗವೀರ ಗ್ರಾಮಸಭಾ ಮಾಜಿ ಅಧ್ಯಕ್ಷರಾದ ಬಾಲು ಕೋಟ್ಯಾನ್, ಸುಶಾನ್ ಅವರ ಕುಟುಂಬದವರಾದ ಮುದ್ದು ಕೋಟ್ಯಾನ್, ಆನಂದಿ ಸುವರ್ಣ ಹಾಗೂ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
