Updated News From Kaup
ಸಂತ ಆಗ್ನೇಸ್ ಕಾಲೇಜಿನಲ್ಲಿ ಕೊಂಕಣಿ ಮಾನ್ಯತಾ ದಿನ ಆಚರಣೆ
Posted On: 20-08-2023 05:21PM
ಮಂಗಳೂರು : ಸಂತ ಆಗ್ನೇಸ್ ಕಾಲೇಜಿನಲ್ಲಿ 'ಕೊಂಕಣಿ ಮಾನ್ಯತಾ ದಿನ' ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕ್ಣೊಂ ಕೊಂಕಣಿ ಪತ್ರದ ಸಂಪಾದಕರಾದ ವಂ. ಫಾ. ರೂಪೇಶ್ ಮಾಡ್ತಾ, ಕೊಂಕಣಿ ಭಾಷೆಯನ್ನು ಪ್ರೀತಿಸಿ ಮನೆ ಮನಗಳಲ್ಲಿ ಮಾತನಾಡಲು ಕರೆ ನೀಡಿದರು.
ಸಹಾಯಕ್ಕೆ ಜಾತಿ, ಧರ್ಮವಿಲ್ಲ : ಐವನ್ ಡಿಸೋಜ
Posted On: 20-08-2023 05:16PM
ಮುದರಂಗಡಿ : ಜನರ ಕಷ್ಟ ಅರಿತು ಅದನ್ನು ಪರಿಹರಿಸುವ ಗುಣ ಎಲ್ಲರಿಗೂ ಬರುವುದಿಲ್ಲ. ಧರ್ಮ, ಜಾತಿ ಮುಖ್ಯವಲ್ಲ ಸಹಾಯದ ನಿರೀಕ್ಷೆಯಲ್ಲಿರುವ ಜನರಿಗೆ ಉಪಕಾರ ಮಾಡಿದಾಗ ಮಾತ್ರ ದೇವರು ಮೆಚ್ಚುವನು ಎಂದು ಮಾಜಿ ವಿಧಾನಪರಿಷತ್ ಸದಸ್ಯರು, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ ಹೇಳಿದರು. ಅವರು ತಮ್ಮ ಹೆತ್ತವರಾದ ದಿವಂಗತ ಸಿಂಪ್ರಿಯನ್ ಮತ್ತು ಲಿಲ್ಲಿ ಡಿಸೋಜ ದಂಪತಿಗಳ ಸ್ಮರಣಾರ್ಥವಾಗಿ ಸಹೋದರ ಮೈಕಲ್ ರಮೇಶ್ ಡಿಸೋಜರಿಂದ ಸುಮಾರು 6 ಲಕ್ಷ ವೆಚ್ಚದಲ್ಲಿ ನಿರ್ಮಿಸಲ್ಪಟ್ಟ ಮನೆಯನ್ನು ಭಾನುವಾರ ಬೆಳಿಗ್ಗೆ ವಿದ್ಯಾನಗರ ಅಂಗನವಾಡಿ ರಸ್ತೆಯ ಸುರೇಖ ಆಚಾರ್ಯ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಸ್ ಕೆ ಪಿ ಎ ಕಾಪು ವಲಯ : ವಿಶ್ವ ಛಾಯಾಗ್ರಹಣ ದಿನಾಚರಣೆ ; ಕುಟುಂಬ ಸಮ್ಮಿಲನ ಕಾರ್ಯಕ್ರಮ
Posted On: 20-08-2023 08:52AM
ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಶನಿವಾರ ಕಾಪು ಹೋಟೆಲ್ K1 ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಕೆ ಪಿ ಎ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಾಪು ವಲಯದ ಫೋಟೋಗ್ರಾಫಸ್೯ಗಳ ಸಂಘಟಿತ ಪ್ರಯತ್ನದಿಂದ ಒಳ್ಳೆಯ ಕಾರ್ಯಕ್ರಮಗಳು ಮೂಡಿ ಬರುತ್ತಿದೆ. ಮುಂದೆಯೂ ಇಂತಹ ಕಾರ್ಯಕ್ರಮಗಳು ನಡೆಯಲಿ ಎಂದು ಶುಭಹಾರೈಸಿದರು.
ಭಾರಿ ಪ್ರಶಂಸೆಗೆ ಪಾತ್ರವಾದ ರೆಟ್ರೋ ಮಾದರಿಯ ರಿತ್ಯಾ ಬೊಟಾನ್ ಕೊಂಕಣಿ ಆಲ್ಬಂ ಹಾಡು
Posted On: 19-08-2023 10:29PM
ಕಾಪು : ಡಿ.ಎಲ್ ಪ್ರೊಡಕ್ಷನ್ ನಿರ್ಮಾಣದ ರಿತ್ಯಾ ಬೊಟಾನ್ ಎಂಬ ಕೊಂಕಣಿ ಆಲ್ಬಂ ಹಾಡು ಈಗಾಗಲೇ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡು ಭಾರಿ ಪ್ರಶಂಸೆಗೆ ಪಾತ್ರವಾಗಿದೆ. ಅವಿತ್ ಲೋಬೋ ನಿರ್ಮಾಣದಲ್ಲಿ ಮೂಡಿ ಬಂದಂತಹ ಈ ಆಲ್ಬಂ ಹಾಡು ಡಿಜೆ ಮರ್ವಿನ್ ಇವರು ನಿರ್ದೇಶಿಸಿದ್ದಾರೆ.
ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ
Posted On: 19-08-2023 10:19PM
ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶಶಿಕಲಾ ಹಾಗೂ ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ.
ಇದೀಗ ಹೊಸ ಆಡಳಿತದೊಂದಿಗೆ ಕಾಪುವಿನ ಹೋಟೆಲ್ ಮಯೂರ
Posted On: 19-08-2023 07:42PM
ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಲಾಡ್ಜಿಂಗ್ ಜೊತೆಗೆ ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಹಾಗೂ ಇನ್ನಿತರ ಖಾದ್ಯಗಳನ್ನು ಉಣ ಬಡಿಸುತ್ತಿರುವ ಕಾಪುವಿನ ಹೋಟೆಲ್ ಮಯೂರ ಇಂದಿನಿಂದ ಹೊಸ ಆಡಳಿತದೊಂದಿಗೆ ಮುನ್ನಡೆಯಲಿದೆ. ಸಂಜಿತ್ ಶೆಟ್ಟಿ ಕಲ್ಯಾಲು ಇವರು ಪಾಲುದಾರರಾಗಿ ಮತ್ತು ನಿರ್ವಾಹಕರಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ರೂಮ್ಸ್ ಜೊತೆಗೆ ಮದುವೆ ಹಾಗೂ ಇನ್ನಿತರ ಶುಭಸಮಾರಂಭಗಳಿಗೆ ಸಭಾಂಗಣ ಹಾಗೂ ಕ್ಯಾ ಟರಿಂಗ್ ವ್ಯವಸ್ಥೆಯನ್ನು ಕೂಡಾ ಒದಗಿಸಲಾಗುವುದು ಎಂದು ತಿಳಿಸಿದರು.
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ - ಶಿರ್ವ ಶಾಖೆ ವತಿಯಿಂದ ಅಗತ್ಯ ವಸ್ತುಗಳ ವಿತರಣೆ
Posted On: 19-08-2023 06:17PM
ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಂ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.
ಕಾಪು : ಹೆಚ್.ಕೆ.ಟೈಲರ್( ಕಾಂತರ ಮೂಲ್ಯ )ಪುಂಚಲಕಾಡು ವಿಧಿವಶ
Posted On: 19-08-2023 05:42PM
ಕಾಪು : ಕಳತ್ತೂರುವಿನ ಪುಂಚಲಕಾಡು ಪರಿಸರದಲ್ಲಿ ಎಚ್ ಕೆ ಟೈಲರ್ ಎಂದೇ ಹೆಸರುವಾಸಿಯಾಗಿದ್ದ ಕಾಂತರ ಮೂಲ್ಯ ಇಂದು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.
ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಿವಕುಮಾರ್ ಮೆಂಡನ್, ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆ
Posted On: 18-08-2023 06:47PM
ಉಚ್ಚಿಲ : ಬಡಾ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಶಿವಕುಮಾರ್ ಮೆಂಡನ್ ಮತ್ತು ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆಯಾಗಿದ್ದಾರೆ. 21 ಸದಸ್ಯ ಬಲದ ಬಡಾ ಗ್ರಾ.ಪಂ. ನಲ್ಲಿ 11 ಬಿಜೆಪಿ, 6 ಕಾಂಗ್ರೆಸ್, 4 ಎಸ್.ಡಿ.ಪಿ.ಐ ಸದಸ್ಯರಿದ್ದಾರೆ.
ಕಾಪು : ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ
Posted On: 18-08-2023 06:34PM
ಕಾಪು : ಇಲ್ಲಿನ ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
