Updated News From Kaup

ಆಗಸ್ಟ್ 19 : ಉಡುಪಿ ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭ

Posted On: 17-08-2023 09:53PM

ಉಡುಪಿ : ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭ ಆಗಸ್ಟ್ 19ರಂದು ಮಧ್ಯಾಹ್ನ 3ಕ್ಕೆ ಉಡುಪಿಯ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಜರಗಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನೇಲಿಯೊ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನಂಜೆ ಗ್ರಾಮ ಪಂಚಾಯತ್ : ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿ ಅವಿರೋಧ ಆಯ್ಕೆ

Posted On: 17-08-2023 05:35PM

ಕಾಪು : ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ 9 ಬಿಜೆಪಿ, 3 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ.

ಬೆಳಪು ಗ್ರಾಮ ಪಂಚಾಯತ್ : 10ನೇ ಬಾರಿಗೆ ಅಧ್ಯಕ್ಷರಾಗಿ ಡಾ|| ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

Posted On: 17-08-2023 05:31PM

ಬೆಳಪು : ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ|| ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.

ಶಂಕರಪುರ : ಸಣ್ಣ ವಯಸ್ಸಿನಲ್ಲಿ ಹೈನುಗಾರಿಕಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಇನ್ನಂಜೆಯ ಆದೀಶ್ ಆಚಾರ್ಯಗೆ ಸನ್ಮಾನ

Posted On: 17-08-2023 12:01PM

ಶಂಕರಪುರ : ರೋಟರಾಕ್ಟ್ ಕ್ಲಬ್ ಸುಭಾಸ್ ನಗರ ಮತ್ತು ರೋಟರಿ ಸಮುದಾಯ ದಳ ಇನ್ನಂಜೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 15ರಂದು ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅತ್ಯಂತ ಸಣ್ಣ ವಯಸಿನಲ್ಲಿ ಹೈನುಗಾರಿಕಾ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಾಧನೆಗೈಯುತ್ತಿರುವ ಇನ್ನಂಜೆಯ ಆದೀಶ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು.

ಆಗಸ್ಟ್ 26 : ಮೀರಾರೋಡಿನಲ್ಲಿ ಸೌಜನ್ಯ ಪ್ರಕರಣದ ವಿರುದ್ಧ ಪ್ರತಿಭಟನೆಯ ಪೂರ್ವಬಾವಿ ಸಭೆ

Posted On: 16-08-2023 11:15PM

ಮುಂಬಯಿ : ಧರ್ಮವು ಅಧರ್ಮದ ದಾರಿಯಲ್ಲಿ ನಡೆದಾಗ ಭಗವಂತನು ಯಾವುದೇ ರೂಪದಲ್ಲಿ ಬಂದು ರಕ್ಷಣೆ ನೀಡುತ್ತಾನೆ ಎಂಬ ದೃಢ ನಂಬಿಕೆಯಿಂದ ಹನ್ನೆರಡು ವರ್ಷಗಳ ಹಿಂದೆ ಅಮಾನುಷವಾಗಿ ಕೊಲೆಯಾದ ಧರ್ಮಸ್ಥಳ ಪರಿಸರದ ಬಾಲೆ ಸೌಜನ್ಯಳ ನಿಜವಾದ ಕೊಲೆಗಾರ ಯಾರು ಎಂದು ತಿಳಿಯುವರೇ ಹೋರಾಟ ಆರಂಭವಾಗಿದೆ.ಈ ಹೋರಾಟದಲ್ಲಿ ನ್ಯಾಯ ಸಿಗಲೇಬೇಕೆಂದು ಪ್ರೋತ್ಸಾಹಿಸಿ ಮಹಾರಾಷ್ಟ್ರದ ಮಣ್ಣಿನಲ್ಲಿ ನೆಲೆಸಿದ ಸಮಾನ ಮನಸ್ಕರಾದ ನಾವು ಮುಂಬಯಿಯಲ್ಲೂ ಬೃಹತ್ ಪ್ರತಿಭಟನೆ ನಡೆಸುವ ಉದ್ದೇಶದಿಂದ ಪೂರ್ವಬಾವಿ ಸಭೆಯಲ್ಲಿ ಒಟ್ಟುಗೂಡಿದ್ದೇವೆ. ನಮ್ಮ ನಡೆ ಕೇವಲ ನ್ಯಾಯದ ಕಡೆ. ಹಿಂದೆ ಸಂತೋಷ್ ರಾವ್ ಎಂಬ ಸಜ್ಜನ ಯುವಕನನ್ನು ಆರೋಪಿಯ ಸ್ಥಾನದಲ್ಲಿಟ್ಟು ಇದೀಗ ನ್ಯಾಯಾಲಯವು ಅವರನ್ನು ನಿರಾಪರಾಧಿ ಎಂದು ತೀರ್ಪು ನೀಡಿದೆ. ಹಾಗಾಗಿ ನಿಜವಾದ ಆರೋಪಿ ಅಲ್ಲದೆ ಸಂತೋಷ್ ರಾವ್ ಹಾಗೂ ಅವರ ಕುಟುಂಬಕ್ಕೆ ಕಳಂಕ ತಂದವರು ಯಾರು ಎಂಬ ಗೊಂದಲವು ಈ ಪ್ರತಿಭಟನೆಗೆ ಕಾರಣವಾಗಿದೆ. ಇದಕ್ಕಾಗಿ ಎಸ್ ಐಟಿ ಮುಖೇನ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ ಮರು ತನಿಖೆ ನಡೆಸಬೇಕೆಂದು ಸರಕಾರಕ್ಕೆ ಮನವಿ ಮಾಡಬೇಕು. ನಾವು ಯಾರದ್ದೇ ಚಾರಿತ್ರ್ಯ ಹರಣ ಮಾಡದೆ ನ್ಯಾಯಕ್ಕಾಗಿ ಪ್ರತಿಭಟಿಸುವ ಎಂದು ಕನ್ನಡ ಜಾನಪದ ಪರಿಷತ್ ಮಹಾರಾಷ್ಟ್ರದ ಅದ್ಯಕ್ಷ , ಸಮಾಜ ಸೇವಕ ಸುರೇಶ್ ಶೆಟ್ಟಿ ಯೆಯ್ಯಾಡಿ ಹೇಳಿದರು. ಅವರು ಆಗಸ್ಟ್ 14ರಂದು ಮೀರಾರೋಡ್ ಶೀತಲ್ ನಗರದ ಸಾಯಿ ಸಾಫಲ್ಯ ವಸತಿ ಸಂಕೀರ್ಣದ ವಠಾರದಲ್ಲಿ ಸಭೆಯನ್ನು ಆಯೋಜಿಸಿ ಮಾತನಾಡಿದರು.

ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿ ಸುಧಾಮತಿರವರಿಗೆ ಬೀಳ್ಕೊಡುಗೆ

Posted On: 16-08-2023 06:53PM

ಶಿರ್ವ : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ 15 ವರ್ಷಗಳಿಂದ ಆರೋಗ್ಯ ಸುರಕ್ಷಾ ಅಧಿಕಾರಿಯಾಗಿ ಸೇವೆ ನೀಡಿದ ಸುಧಾಮತಿಯವರು ಸ್ವಯಂ ನಿವೃತ್ತಿ ಹೊಂದಿದ ಪ್ರಯುಕ್ತ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿವರ್ಗದ ವತಿಯಿಂದ ಬೀಳ್ಕೊಡುಗೆ ನಡೆಯಿತು.

ಪಡುಬಿದ್ರಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

Posted On: 16-08-2023 06:13PM

ಪಡುಬಿದ್ರಿ : ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ‌ ಬುಧವಾರ ಭೇಟಿ ನೀಡಿದರು.

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಆಷಾಢ ಸಂಭ್ರಮ ಕಾರ್ಯಕ್ರಮ

Posted On: 16-08-2023 08:18AM

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ) ಶಿರ್ವ ಮತ್ತು ಮಹಿಳಾ ಬಳಗದ ಆಷಾಢ ಸಂಭ್ರಮ ಕಾರ್ಯಕ್ರಮ ಹೋಟೆಲ್ ಮಂದಾರ ಸಭಾಂಗಣದಲ್ಲಿ ಜರುಗಿತು. ಶಿರ್ವ ನ್ಯೂ ಭಾರ್ಗವಿ ಜುವೆಲರ್ಸ್ನ ಮಾಲಕರಾದ ಸೌಮ್ಯ ಗಣೇಶ ಆಚಾರ್ಯ ದೀಪ‌ ಬೆಳಗಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾಪು : ಫ್ರೆಂಡ್ಸ್ ಗ್ರೂಪ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Posted On: 15-08-2023 11:06PM

ಕಾಪು : ಫ್ರೆಂಡ್ಸ್ ಗ್ರೂಪ್ ವತಿಯಿಂದ ಕುಶಲಶೇಖರ ಆಡಿಟೋರಿಯಂನಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಕಳ : ಹಿರಿಯರ ತ್ಯಾಗ ಬಲಿದಾನವನ್ನು ಸಾರ್ಥಕ ಪಡಿಸೋಣ - ಎಮ್ ಕೆ ವಿಜಯಕುಮಾರ್

Posted On: 15-08-2023 07:37PM

ಕಾರ್ಕಳ : ನಮ್ಮ ದೇಶಕ್ಕೆ ಹಿರಿಯರ ನಿಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನಂತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತನ್ಯಾಯವಾದಿ ಎಂ ಕೆ ವಿಜಯಕುಮಾರ್ ಕರೆ ನೀಡಿದರು. ಅವರು ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ ಪುಣ್ಯ. ಈ ದೇಶದ ಪ್ರಜೆಗಳಾಗಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳೋಣ ಎಂದು ಆಶಿಸಿದರು.