Updated News From Kaup
ಮಟ್ಟಾರು : ಹರ್ ಘರ್ ತಿರಂಗಾ ಅಭಿಯಾನ
Posted On: 13-08-2023 05:59PM
ಮಟ್ಟಾರು : ಇಲ್ಲಿನ ಅಂಚೆ ಕಚೇರಿ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನವು ನಡೆಯಿತು.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
Posted On: 13-08-2023 05:50PM
ಪಲಿಮಾರು : ಇಲ್ಲಿನ ಹೊೖಗೆ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ
Posted On: 13-08-2023 05:26PM
ಕಾಪು : ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಜರಗಿತು.
ಪಡುಬಿದ್ರಿ ರೋಟರಿ ಕ್ಲಬ್ : ಆಟಿದ ಗಮ್ಮತ್ತ್
Posted On: 13-08-2023 05:11PM
ಪಡುಬಿದ್ರಿ : ತುಳುವ ಜನರು ಹೆಣ್ಣು, ಹೊನ್ನು, ಮಣ್ಣು ಮಾಯೆ ಎನ್ನುವವರಲ್ಲ. ಹೆಣ್ಣು ಸತ್ಯ, ಮಣ್ಣು ಸತ್ಯ ಎನ್ನುವವರು ತುಳುನಾಡಿನವರು. ಇಲ್ಲಿಯ ಆಹಾರಪದ್ಧತಿ, ಕೆಲಸ ಕಾರ್ಯಗಳು, ಕಣ್ಣೀರಿನ ಕತೆಗಳು ನಮಗೆ ಇಂದು ಮಾದರಿಯಾಗಬೇಕಿದೆ. ತುಳುವರ ಆಟಿ ಮತ್ತು ಮಾಯಿ ತಿಂಗಳು ತುಳುವರಿಗೆ ಕೃಷಿ ಬದುಕು ಕಟ್ಟಿಕೊಡುವ ತಿಂಗಳಾಗಿದೆ ಎಂದು ಮೂಡಬಿದ್ರಿಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು. ಅವರು ರೋಟರಿ ಕ್ಲಬ್, ಇನ್ನರ್ವೀಲ್ ಕ್ಲಬ್, ರೋಟರಿ ಸಮುದಾಯದಳ, ರೋಟರ್ಯಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಸುಜಾತಾ ಆಡಿಟೋರಿಯಂನಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉಚ್ಚಿಲ ರೋಟರಿ ಕ್ಲಬ್ : 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ
Posted On: 13-08-2023 03:25PM
ಉಚ್ಚಿಲ : ಇಲ್ಲಿನ ರೋಟರಿ ಕ್ಲಬ್ ನ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಉಚ್ಚಿಲದ ರಾಧ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಉಡುಪಿ ಜಿಲ್ಲೆಯಾದ್ಯಂತ ಪಡಿತರ ಕಾರ್ಡು ತಿದ್ದುಪಡಿ, ಸ್ವೀಕೃತವಾಗದ ಗೃಹಲಕ್ಷ್ಮಿ ಅರ್ಜಿ, ತಾಂತ್ರಿಕ ಸಮಸ್ಯೆ ಸರಿಪಡಿಸಿ : ಕಾಪು ಜಯರಾಮ ಆಚಾರ್ಯ
Posted On: 13-08-2023 12:11PM
ಉಡುಪಿ : ಜಿಲ್ಲೆಯಾದ್ಯಂತ ತಿಂಗಳ ಹಿಂದೆ ಪಡಿತರ ಕಾರ್ಡ್ ತಿದ್ದುಪಡಿ ಮಾಡಿಸಿಕೊಂಡವರು, ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ತಾಂತ್ರಿಕ ಸಮಸ್ಯೆ ಎದುರಾಗಿದೆ ಇದನ್ನು ಸರಿಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಾಪು ಜಯರಾಮ ಆಚಾರ್ಯ ಆಗ್ರಹಿಸಿದ್ದಾರೆ.
ಪಡುಬಿದ್ರಿ : ಅಖಂಡ ಭಾರತ ಸಂಕಲ್ಪ ದಿನ - ಪಂಜಿನ ಮೆರವಣಿಗೆ ಸಂಪನ್ನ
Posted On: 13-08-2023 11:55AM
ಪಡುಬಿದ್ರಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪಡುಬಿದ್ರಿ ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜರಗಿದ ಪಂಜಿನ ಮೆರವಣಿಗೆಗೆ ಶನಿವಾರ ಪಡುಬಿದ್ರಿ ಬೀಡು ಬಳಿಯ ಕಣ್ಣಂಗಾರು ಬ್ರಹ್ಮ ಬೈದರ್ಕಳ ಗರಡಿಯ ಮುಂಭಾಗ ಚಾಲನೆ ನೀಡಲಾಯಿತು.
ಕಾಪು ವೃತ್ತ ಮಟ್ಟದ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಸಮಾರೋಪ
Posted On: 12-08-2023 06:12PM
ಕಾಪು : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರಕಾರಿ ಸಂಯುಕ್ತ ಪ್ರೌಢ ಶಾಲೆ (ಪ್ರಾಥಮಿಕ ವಿಭಾಗ) , ಬೆಳಪು ಇವರ ಆಶ್ರಯದಲ್ಲಿ ಶನಿವಾರ ಕಾಪು ವೃತ್ತ ಮಟ್ಟದ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟವು ಜರಗಿತು.
ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ಆಷಾಢ ಮಾಸದ ಆಚರಣೆ
Posted On: 12-08-2023 05:12PM
ಕಾಪು : ಶ್ರೀ ದುರ್ಗಾ ಮಹಿಳಾ ಮಂಡಳಿ ಪಡುಕುತ್ಯಾರು ಮತ್ತು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ ಆಷಾಢ ಮಾಸದ ಆಚರಣೆಯು ಶ್ರೀ ದುರ್ಗಾ ದೇವಿ ಮಂದಿರದಲ್ಲಿ ಆಗಸ್ಟ್ 6ರಂದು ಜರಗಿತು.
ಬೆಳಪು ವ್ಯವಸಾಯ ಸಹಕಾರಿ ಸಂಘ : ವಜ್ರ ಮಹೋತ್ಸವ ಸಂಭ್ರಮಾಚರಣೆ, ನವೀಕೃತ ಶಾಖೆ, ಸಹಕಾರಿ ಮಹಲ್ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 12-08-2023 04:54PM
ಬೆಳಪು : ಇಲ್ಲಿನ ವ್ಯವಸಾಯ ಸಹಕಾರಿ ಸಂಘ ಪಣಿಯೂರು ಸ್ವತಂತ್ರವಾಗಿ ಕಾರ್ಯಾಚರಣೆ ಮಾಡುತ್ತಿರುವ ಸಹಕಾರಿ ಸಂಘವಾಗಿದೆ. ಬಡಾ, ಎಲ್ಲೂರು, ಬೆಳಪು ಗ್ರಾಮಸ್ಥರ ಆರ್ಥಿಕ ಸಬಲೀಕರಣದ ಉದ್ಧೇಶ ಹೊಂದಿ ಸ್ಥಾಪಿತವಾದ ಸಂಸ್ಥೆ ಇದಾಗಿದೆ. ಸಹಕಾರಿ ಸಂಘವು 4,350 ಸದಸ್ಯರನ್ನು ಹೊಂದಿದ್ದು, 50 ಕೋಟಿ ಠೇವಣಾತಿ ಹೊಂದಿ, 48 ಕೋಟಿ ರೂಪಾಯಿ ಸಾಲವನ್ನು ನೀಡಿದೆ. ಎ ಶ್ರೇಣಿಯ ಬ್ಯಾಂಕಿಂಗ್ ಮಾನ್ಯತೆ ಹೊಂದಿದ ಸಹಕಾರಿ ಸಂಘವಾಗಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘ ಪಣಿಯೂರು ಇದರ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಪಣಿಯೂರು ಸಹಕಾರಿ ಸಂಘದ ಸಭಾಂಗಣದಲ್ಲಿ ಮಾಹಿತಿ ನೀಡಿದರು.
