Updated News From Kaup

ಕಾಪು : ಶಾಸಕರ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ  ಜಯಂತಿ ಆಚರಣೆ

Thumbnail
Posted On: 31 Aug 2023, 05:08 PM

ಕಾಪು: ತಾಲ್ಲೂಕು ಆಡಳಿತ ಸೌಧದಲ್ಲಿರುವ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ ನಡೆಯಿತು. ಶಾಸಕರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಂದೇ ಮತವನ್ನು ಸಾರಿದ ದಾರ್ಶನಿಕರು. ಅವರ ತತ್ವ ಸಿದ್ದಾಂತ ಅನುಕರಣೀಯ, ಆದರ್ಶಯುತವಾಗಿದೆ ಎಂದರು. ಜಿಲ್ಲಾ ಬಿಜೆಪಿ ಮಹಿಳಾ ಘಟಕಾಧ್ಯಕ್ಷೆ ವೀಣಾ  ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕಾಪು : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Thumbnail
Posted On: 30 Aug 2023, 06:00 PM

ಕಾಪು : ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕಾಪು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆ ಕಾಪು ಇವರ ಸಹಯೋಗದಲ್ಲಿ ಬುಧವಾರ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಕಾಪು ತಹಸೀಲ್ದಾರ್ ನಾಗರಾಜ ವಿ ನಾಯ್ಕಡ ಚಾಲನೆ ನೀಡಿದರು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವು ತನ್ನ 100 ದಿನದ ಕಡಿಮೆ ಕಾಲಾವಧಿಯಲ್ಲಿ ಮೂರು ಭರವಸೆಯನ್ನು ಈಡೇರಿಸಿದೆ. ಕೆಲವೇ ಸಮಯದಲ್ಲಿ ಇನ್ನೂ ಎರಡು ಭರವಸೆಯನ್ನು ಪೂರ್ಣಗೊಳಿಸಲಿದೆ ಎಂದರು. ಈ ಸಂದರ್ಭ ಪುರಸಭಾ ಸದಸ್ಯರಾದ ಹರಿಣಾಕ್ಷಿ, ವಿದ್ಯಾಲತಾ, ಉಮೇಶ್ ಕರ್ಕೆರ, ಮೋಹಿನಿ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ವಿಜಯ, ಯೋಜನಾಧಿಕಾರಿ ವೀಣಾ ವಿವೇಕಾನಂದ, ಪುರಸಭಾ ಮುಖ್ಯ ಅಧಿಕಾರಿ ಸಂತೋಷ್ ಎಸ್ ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಬೆಂಗಳೂರಿನ ಸಂಜಯ್ ಪಿತಾಂಬರರಿಂದ ಸೈಕಲ್‌ ಸಂಚಾರ - ಶಂಕರಪುರ ಟು ಮಹಾರಾಷ್ಟ್ರ ; ಶ್ರೀ ಸಾಯಿನಾಥರ ಮಂದಿರ ಭೇಟಿ

Thumbnail
Posted On: 30 Aug 2023, 05:34 PM

ಕಾಪು : ಬೆಂಗಳೂರಿನ ಸಂಜಯ್ ಪಿತಾಂಬರ ದೇಸಾಯಿಯವರು ಕಾಪು ತಾಲೂಕಿನ ಶಂಕರಪುರ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಿಂದ ಹೊರಟು ಭಾರತದಾದ್ಯಂತ 25,000 ಕಿ.ಲೋ ಮೀಟರ್ ಸೈಕಲ್‌ನಲ್ಲಿ ಸಂಚಾರಿಸಿ 6000ಕ್ಕೂ ಹೆಚ್ಚು ಶ್ರೀ ಸಾಯಿನಾಥರ ಮಂದಿರಕ್ಕೆ ಭೇಟಿ ನೀಡಿ ಶ್ರೀ ಸಾಯಿನಾಥಾರ ತತ್ವ ಪ್ರಚಾರದ ಜೊತೆಗೆ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪ ವಿಶ್ವಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆಯ ಮಹತ್ವವನ್ನು ಜನರಿಗೆ ತಿಳಿಯಪಡಿಸುತ್ತಾ ಸಂಚರಿಸುವ ಬಗೆಗೆ ಇಂದು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಸಾಯಿ ಮಂದಿರ ಟ್ರಸ್ಟ್ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಮಾಹಿತಿ ನೀಡಿದರು. ಆಗೋಸ್ಟ್ 31ರ ಗುರುವಾರ ಬೆಳಿಗ್ಗೆ 8:20ಕ್ಕೆ ಉಡುಪಿ ಜಿಲ್ಲೆಯ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಆರ್ಶೀವಾದ ಪಡೆದು ಯಾತ್ರೆ ಪ್ರಾರಂಭವಾಗಿ ಮಹಾರಾಷ್ಟ್ರದ ಶಿರಡಿಯಲ್ಲಿ ಯಾತ್ರೆ ಕೊನೆಗೊಳ್ಳಲಿದೆ ಎಂದರು. ಸಂಚಾರದ ಉದ್ದ ಅಗಲಕ್ಕೂ ನನ್ನ ಧ್ಯೇಯ “ಸಾಮಾನ್ಯ ಮನುಷ್ಯ ತನ್ನ ಜೀವನಕ್ಕಾಗಿ ಹೋರಾಡುತ್ತಾನೆ” ಎಂಬುದಾಗಿ ಇರುತ್ತದೆ ಎಂದು ಸಂಜಯ್ ಪಿತಾಂಬರ ದೇಸಾಯಿ ಹೇಳಿದರು. ಈ‌ ಸಂದರ್ಭ ಸಂಜಯ್ ಪಿತಾಂಬರ ದೇಸಾಯಿ, ಸುಧಾಕರ ಶೆಟ್ಟಿ, ಸತೀಶ್, ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

ಕುತ್ಯಾರು : ಸೂರ್ಯ ಚೈತನ್ಯ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ನೇಮಕ

Thumbnail
Posted On: 30 Aug 2023, 04:25 PM

ಕುತ್ಯಾರು : ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಪಡುಕುತ್ಯಾರು ಉಡುಪಿ ಇವರ ಮಾರ್ಗದರ್ಶನದಲ್ಲಿ ಎಸೆಟ್ ಆಧೀನದಲ್ಲಿರುವ ಕಾಪು ತಾಲೂಕಿನ ಕುತ್ಯಾರು ಶ್ರೀ ಸೂರ್ಯ ಚೈತನ್ಯ ಆಂಗ್ಲ ಮಾಧ್ಯಮ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದಿವಾಕರ ಆಚಾರ್ಯ ಗೇರುಕಟ್ಟೆ ಇವರನ್ನು ನೇಮಿಸಲಾಗಿದೆ. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸುಮಾರು 40 ವರ್ಷಗಳ ಶೈಕ್ಷಣಿಕ ಸೇವಾ ಅನುಭವವನ್ನು ಹೊಂದಿರುತ್ತಾರೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಯಲ್. ಕೆ .ಜಿ ಯಿಂದ 10ನೇ ತರಗತಿವರೆಗೆ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಂಸ್ಕೃತ ,ಯೋಗ, ಕರಾಟೆ, ಯಕ್ಷಗಾನ ,ಭಜನೆ ಕುಣಿತ ಮೊದಲಾದ ವಿಷಯಗಳಲ್ಲಿ ತರಬೇತಿಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತಿದ್ದು ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲಿ ಐದನೇ ಸ್ಥಾನವನ್ನು ಪಡೆದಿರುತ್ತದೆ.

ಕಾರ್ಕಳ : ಕುಲಾಲ ಸಂಘ ಇರ್ವತ್ತೂರು ವತಿಯಿಂದ ಗ್ರಾಮ ಪಂಚಾಯತ್ ಗೆ ಪೋಡಿಯಂ ಹಸ್ತಾಂತರ

Thumbnail
Posted On: 30 Aug 2023, 12:33 PM

ಕಾರ್ಕಳ : ಇಲ್ಲಿನ ಇರ್ವತ್ತೂರು ಕುಲಾಲ ಸಂಘ (ರಿ.) ವತಿಯಿಂದ ಇರ್ವತ್ತೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನಕ್ಕೆ ಪೋಡಿಯಂನ್ನು ಸಂಘದ ಅಧ್ಯಕ್ಷರಾದ ಸುರೇಶ್ ಬಂಗೇರ ಪಾಲಾಜೆ ಮುಂದಾಳತ್ವದಲ್ಲಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭರತ್ ಕುಮಾರ್ ಜೈನ್,ಉಪಾಧ್ಯಕ್ಷೆ ದೀಪಾ ಶ್ರೀನಾಥ್,‌ ಪಂಚಾಯತ್ ಪಿ.ಡಿ.ಓ ಆನಂದ ವಾರ್ತಿ, ಪಂಚಾಯತ್ ಸದಸ್ಯೆ ಅನಿತಾ ನಾಗೇಶ್ ಕುಲಾಲ್, ನಿಕಟಪೂರ್ವ ತಾಲೂಕು‌ ಪಂಚಾಯತ್ ಸದಸ್ಯೆ ಪ್ರಮೀಳಾ ಕುಲಾಲ್ ಉಪಸ್ಥಿತರಿದ್ದರು.

ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಶ್ರೀ ರಾಯರ ಆರಾಧನಾ ಮಹೋತ್ಸವ ಮತ್ತು ಅಖಂಡ ಭಜನಾ ಸಂಕೀರ್ತನೆ

Thumbnail
Posted On: 29 Aug 2023, 08:30 AM

ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 2 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಆಗಸ್ಟ್ 31, ಗುರುವಾರ ಪೂರ್ವಾರಾಧನೆ, ಸೆಪ್ಟೆಂಬರ್ 01, ಶುಕ್ರವಾರ ಮಧ್ಯಾರಾಧನೆ, ಸೆಪ್ಟೆಂಬರ್ 02, ಶನಿವಾರ ಉತ್ತರಾಧನೆ (ಬೆಳಿಗ್ಗೆ ಗಂಟೆ 6ರಿಂದ ಸಂಜೆ 7ರ ತನಕ) ಶ್ರೀ ಗುರುರಾಘವೇಂದ್ರ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ರಾಯರ ಆರಾಧನಾ ಮಹೋತ್ಸವ ಮತ್ತು ಅಖಂಡ ಭಜನಾ ಸಂಕೀರ್ತನೆ - ಮಹಾ ಪ್ರಸಾದ ಅದೇ ದಿನ ಮಧ್ಯಾಹ್ನ ಗಂಟೆ 1 ರಿಂದ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು : ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿ - ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Thumbnail
Posted On: 28 Aug 2023, 10:56 PM

ಕಾಪು : ತಾಲೂಕಿನ ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯಲ್ಲಿ ಪಾಂಗಾಳ ಮುರಳಿ‌ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಈ ಸಂದರ್ಭ ಗ್ರಾಮದ ಎಸ್ ಎಸ್ ಎಲ್ ಸಿ‌ ಮತ್ತು ಪಿಯುಸಿ‌ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮಂಡೇಡಿ ದೇರೆಕ್ಯಾರ್ ಮನೆ ದಿವಂಗತ ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಮಗ ದಯಾನಂದ ವಿ‌ ಶೆಟ್ಟಿ ಪ್ರೋತ್ಸಾಹ ಧನ ಹಾಗೂ ಶಶಿಧರ ಕೆ ಶೆಟ್ಟಿ ಕುಂಜಿರಬೆಟ್ಟು ನೀಡಲ್ಪಟ್ಟ ಶಾಲು ಮತ್ತು ಸ್ಮರಣಿಕೆಯನ್ನು ಮುಂಬೈ ಉದ್ಯಮಿ‌ ರತ್ನಾಕರ ಶೆಟ್ಟಿ ಮಂಡೇಡಿ ಸಾದುಮನೆ ಮಕ್ಕಳಿಗೆ ‌ನೀಡಿ‌ ಗೌರವಿಸಿದರು‌. ಈ ಸಂದರ್ಭ ರತ್ನಾಕರ ಶೆಟ್ಟಿ ಹಾವಂಜೆ, ಬಾಲಕೃಷ್ಣ ಶೆಟ್ಟಿ ಪೊಲ್ಯ, ಮುಕ್ಕಾಲಿ ರಮಾನಂದ ಶೆಟ್ಟಿ, ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಕೆ ಶೆಟ್ಟಿ, ಕಾರ್ಯದರ್ಶಿ ಕೃಷ್ಣ ವಿ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಎಸ್ ಶೆಟ್ಟಿ, ಮಂಡಳಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆಜಮಾಡಿ : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ - ಸರಕಾರದ ಉಚಿತ ಕೊಡುಗೆ ವಿತರಣೆ

Thumbnail
Posted On: 28 Aug 2023, 10:31 PM

ಹೆಜಮಾಡಿ‌ : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಇಂದು ಸರಕಾರದ ಉಚಿತ ಕೊಡುಗೆಯಲ್ಲಿ ಒಂದಾದ ಶೂ / ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು. ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸತೀಶ್ ನಾಯಕ್ ಹಾಗೂ ಸದಸ್ಯರುಗಳು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ದಾನಿಗಳಾದ ಮುಂಬೈ ಹಳೆ ವಿದ್ಯಾರ್ಥಿ ಟ್ರಸ್ಟ್ ನ ಸದಸ್ಯರಾದ ಶೇಷಗಿರಿರಾವ್, ಅನಿಲ್ ಕುಂದರ್, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಳತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ - ಹಲವು ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಕುತ್ಯಾರು ಆನೆಗುಂದಿ ಸೂರ್ಯಚೈತನ್ಯ ಶಾಲೆ

Thumbnail
Posted On: 28 Aug 2023, 10:20 PM

ಕಳತ್ತೂರು : 2023-24 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು ಇಲ್ಲಿ ನಡೆಯಿತು. ಆನೆಗುಂದಿ ಸೂರ್ಯಚೈತನ್ಯ ಶಾಲೆ ಕುತ್ಯಾರು ಶಾಲೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಬಹುಮಾನ, ದ್ವಿತೀಯ, ತೃತೀಯ ಬಹುಮಾನ ಪಡೆದರು. ಆಶುಭಾಷಣ ಸ್ಪರ್ಧೆ ರಜತ್ (ಪ್ರಥಮ), ಸಂಸ್ಕೃತ ಭಾಷಣ ಮೌನೇಶ್ (ಪ್ರಥಮ), ರಂಗೋಲಿ ವಂಶಿಕ (ಪ್ರಥಮ), ಧಾರ್ಮಿಕ ಪಠಣ ಬೋಧಯನ(ಪ್ರಥಮ), ಇಂಗ್ಲೀಷ್ ಕಂಠಪಾಠ ಪ್ರಾಪ್ತಿ (ಪ್ರಥಮ), ಕತೆ ಹೇಳುವುದು ಧನ್ವಿ (ಪ್ರಥಮ), ಚಿತ್ರಕಲೆ ಅದಿತಿ ಆಚಾರ್ಯ (ಪ್ರಥಮ), ಸಂಸ್ಕೃತ ಭಾಷಣ ಸೋಹನ್ (ಪ್ರಥಮ) ಬಹುಮಾನ ಪಡೆದಿರುತ್ತಾರೆ. ದ್ವಿತೀಯ ಬಹುಮಾನ 11 ವಿದ್ಯಾರ್ಥಿಗಳು ಪಡೆದಿರುತ್ತಾರೆ. ತೃತೀಯ ಬಹುಮಾನ 8 ವಿದ್ಯಾರ್ಥಿಗಳು ಪಡೆದಿರುತ್ತಾರೆ.

ಶಿರ್ವ : ವಿಶ್ವಕರ್ಮ ಧ್ವಜವು ಸರ್ವರ ಒಮ್ಮತ ಅಭಿಪ್ರಾಯ ಪ್ರಕಾರ ಮೂಡಿಬರಲಿದೆ - ಆನೆಗುಂದಿಶ್ರೀ

Thumbnail
Posted On: 28 Aug 2023, 09:29 PM

ಶಿರ್ವ : ವಿಶ್ವ ಬ್ರಾಹ್ಮಣ ಸಮಾಜದ ಐಕ್ಯತೆಯ ದ್ಯೋತಕವಾಗಿ ಸರ್ವರ ಒಮ್ಮತ ಅಭಿಪ್ರಾಯದ ಪ್ರಕಾರ ವಿಶ್ವಕರ್ಮ ಧ್ವಜವು ಮೂಡಿಬರಲಿದೆ. ಇದೀಗ ಆರಂಭಿಕ ಹಂತದ ಚಿಂತನಾ ಸಭೆಗಳನ್ನು ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು. ಅವರು ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಜರುಗಿದ ವಿಶ್ವಕರ್ಮ ಧ್ವಜದ ಎರಡನೇ ಚಿಂತನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಧ್ವಜದ ವಿಷಯದಲ್ಲಿ ಬಣ್ಣ, ಪ್ರಮಾಣ, ಆಕಾರ, ಲಾಂಛನ, ವಿನ್ಯಾಸದ ಬಗ್ಗೆ ಸಮಾಜದ ಎಲ್ಲಾ ಸಂಘಟನೆಗಳ ಅಭಿಪ್ರಾಯ ಪಡೆಯಲಾಗುವುದು. ಇದಕ್ಕಾಗಿ ಸಮಾಜದ ದೇವಸ್ಥಾನಗಳಲ್ಲಿ, ಆನೆಗುಂದಿ ಗುರು ಸೇವಾ ಪರಿಷತ್ ನ ವಿಧಾನ ಸಭಾ ಕೇಂದ್ರಗಳಲ್ಲಿ ಸೇರಿದಂತೆ ಸಮಾಜದ ಸಂಘ ಸಂಸ್ಥೆಗಳಿರುವ ಪ್ರದೇಶಗಳಲ್ಲಿ ವಿವಿಧ ಹಂತಗಳಲ್ಲಿ ಚಿಂತನಾ ಸಭೆಗಳನ್ನು ನಡೆಸಲಾಗುವುದು. ಎರಡನೇ ಚಿಂತನಾ ಸಭೆಯಲ್ಲಿ ಬೆಂಗಳೂರಿನ ವೇದ ಆಗಮ ಸಂಸ್ಕೃತ ಮಹಾಪಾಠ ಶಾಲೆಯ ಸಂಸ್ಕೃತ ಶಿಕ್ಷಕರಾದ ಕೆ ರಾಘವೇಂದ್ರ ಸ್ತಪತಿ ಬೆಂಗಳೂರು ಇವರು ವಿಶ್ವಕರ್ಮ ಧ್ವಜದ ಬಗ್ಗೆ ಪುರಾಣ ಹಿನ್ನೆಲೆ ಮತ್ತು ವಿವಿಧ ಮಾದರಿಯ ಧ್ವಜಗಳೊಂದಿಗೆ ತಮ್ಮ ಅಭಿಪ್ರಾಯ ಮಂಡಿಸಿದರು. ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ಇಲಾಖೆಯ ವಿಶ್ರಾಂತ ಹೆಚ್ಚುವರಿ ಕಾರ್ಯದರ್ಶಿ ಬಿ. ಬಿ ಪತ್ತಾರ ಬೆಂಗಳೂರು, ಆನೆಗುಂದಿ ಮಠದ ಅಧ್ಯಕ್ಷ ಹರಿಶ್ಚಂದ್ರ ಎನ್ ಆಚಾರ್ಯ ಬೆಂಗಳೂರು, ದಕ್ಷಿಣ ಕನ್ನಡ ವಿಶ್ವ ಬ್ರಾಹ್ಮಣ ಸಂಘ ಬೆಂಗಳೂರು ಅಧ್ಯಕ್ಷ ತುಕಾರಾಮ್ ಆಚಾರ್ಯ ಬೆಂಗಳೂರು, ಗುರು ಸೇವಾ ಪರಿಷತ್ ಬೆಂಗಳೂರು ಸಮಿತಿ ಅಧ್ಯಕ್ಷ ಎಂ.ಜಿ ನಾಗೇಶ್ ಆಚಾರ್ಯ ಬೆಂಗಳೂರು, ಕನಕಪುರ ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಶಿವರಾಮ ಆಚಾರ್ಯ ಕನಕಪುರ. ರವಿ ಆಚಾರ್ಯ ಬೆಂಗಳೂರು, ಪಾಂಗಾಳ ಜನಾರ್ಧನ ಆಚಾರ್ಯ ಬೆಂಗಳೂರು, ಅರುಣೋದಯ ಆಚಾರ್ಯ ಬೆಂಗಳೂರು, ಮಹಾಬಲೇಶ್ವರ ಆಚಾರ್ಯ ಬೆಂಗಳೂರು, ಗಿರೀಶ ಆಚಾರ್ಯ ಏಳಂದೂರು, ಪ್ರತಾಪ್ ಆಚಾರ್ಯ ಬೆಂಗಳೂರು, ಮಂಜುನಾಥ ಆಚಾರ್ಯ ರಾಮನಗರ ಬೆಂಗಳೂರು, ಸೋಹನ್ ಆದಿತ್ಯ ಆಚಾರ್ಯ ಬೆಂಗಳೂರು, ಮನೋಹರ ಕೆ ಗುಡೂರು, ಆರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಜನಾರ್ದನ ಆಚಾರ್ಯ ಆರಿಕ್ಕಾಡಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಪುರುಷೋತ್ತಮ ಆಚಾರ್ಯ ಪುತ್ತೂರು,ಕೋಟ ಗಣೇಶ ಆಚಾರ್ಯ, ರೂಪೇಶ್ ಆಚಾರ್ಯ ಶಿರ್ವ, ಪೆರ್ಣೆ ಮಧುಸೂದನ ಆಚಾರ್ಯ ಕಾಸರಗೋಡು, ಗಣೇಶ್ ಆಚಾರ್ಯ ಕೆಮ್ಮಣ್ಣು, ವಿಘ್ನೇಶ್ ಕುಮಾರ್ ಕಾಸರಗೋಡು ಅಭಿಪ್ರಾಯ ಮಂಡಿಸಿದರು. ಧ್ವಜ ಸಮಿತಿಯ ಸಂಚಾಲಕರಾದ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು ಪ್ರಾಸ್ತಾವಿಕ ಮಾತುಗಳಾಡಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು